Updated News From Kaup
COSIDICI 11ನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪುರಸ್ಕೃತರಾದ ಕಾಪು ಹರೀಶ್ ನಾಯಕ್
Posted On: 06-12-2025 07:01PM
ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಅಂಡ್ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಗೋಲ್ಡನ್ ಲೆಗೆಸಿ ಆಫ್ ಎಕ್ಸಲೆನ್ಸ್ (COSIDICI) ವತಿಯಿಂದ ಪ್ರತಿ ವರ್ಷ ಪ್ರದಾನವಾಗುವ ಹನ್ನೊಂದನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ಕಾಪುವಿನ ಯುವ ಉದ್ಯಮಿ ಕಾಪು ಹರೀಶ್ ಕಮಲಾಕ್ಷ ನಾಯಕ್ ಅವರಿಗೆ ಪ್ರದಾನಿಸಲಾಯಿತು.
ಕಾಪು : ಇನ್ನಂಜೆ ಮಹಿಳಾ ಮಂಡಳಿಯ ಪದಗ್ರಹಣ
Posted On: 23-11-2025 04:46PM
ಕಾಪು : ಇನ್ನಂಜೆ ಮಹಿಳಾ ಮಂಡಳಿ (ರಿ.) ಇನ್ನಂಜೆ ಇದರ ಪದಗ್ರಹಣ ಸಮಾರಂಭವು ಇನ್ನಂಜೆ ಎಸ್. ವಿ. ಎಸ್. ಶಾಲೆಯ ದಾಸ ಭವನ ಇಲ್ಲಿ ಜರಗಿತು.
ಕಾಪು : ಯುವ ಉದ್ಯಮಿ ಹರೀಶ್ ಕಮಲಾಕ್ಷ ನಾಯಕ್ ರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ
Posted On: 22-11-2025 04:19PM
ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್ಮೆಂಟ್ ಕಾರ್ಪೋರೇಶನ್ಸ್ ಆಫ್ ಇಂಡಿಯಾ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ 11 ನೇ ರಾಷ್ಟ್ರೀಯ 'ಅತ್ಯುತ್ತಮ ಉದ್ಯಮಿ' ಪ್ರಶಸ್ತಿಗೆ ಕಾಪುವಿನ ಯುವ ಉದ್ಯಮಿ ಹರೀಶ್ ಕಮಲಾಕ್ಷ ನಾಯಕ್ ಆಯ್ಕೆಯಾಗಿದ್ದಾರೆ.
ಪಡುಕುತ್ಯಾರು : ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಆರನೇ ವಾರ್ಷಿಕ ಮಹಾಸಭೆ
Posted On: 20-11-2025 07:11PM
ಕಾಪು : ಪಡುಕುತ್ಯಾರು, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಆರನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ನಾಗೇಶ ಆರ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ದುರ್ಗಾ ಮಂದಿರದಲ್ಲಿ ಜರಗಿತು.
ಕಳತ್ತೂರು ಶ್ರೀ ಬ್ರಹ್ಮಬೈದೆರುಗಳ ಗರಡಿಯ ಜೀರ್ಣೋದ್ದಾರಕ್ಕೆ ಧನ ಸಹಾಯ
Posted On: 16-11-2025 08:17PM
ಕಾಪು : ಕಳತ್ತೂರು ಟೈಗರ್ಸ್ ಕಳತ್ತೂರು ಇವರ ವತಿಯಿಂದ ಕಳತ್ತೂರು ಬ್ರಹ್ಮ ಬೈದೇರುಗಳ ಗರಡಿಯ ಸಮಗ್ರ ಜೀರ್ಣೋದ್ದಾರಕ್ಕೆ ಸುಮಾರು 2 ಲಕ್ಷ ರೂಪಾಯಿಯ ಧನ ಸಹಾಯ ಗರಡಿ ಪ್ರಮುಖರ ಸಮ್ಮುಖದಲ್ಲಿ ನೀಡಲಾಯಿತು.
ಡಿ 12 : ಕಾಪುವಿನಲ್ಲಿ ಸಮಾಜರತ್ನ ದಿ.ಕೆ. ಲೀಲಾಧರ ಶೆಟ್ಟಿ ಮತ್ತು ದಿ. ವಸುಂಧರಾ ಎಲ್ ಶೆಟ್ಟಿ ಪುಣ್ಯಸ್ಮರಣೆ
Posted On: 16-11-2025 08:12PM
ಕಾಪು : ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಸರ್ವ ಧರ್ಮದ ಬಂಧುಗಳ ಸಹಕಾರದೊಂದಿಗೆ ಸಮಾಜ ರತ್ನ ಕೆ. ದಿ. ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ದಿ. ವಸುಂದರಾ ಶೆಟ್ಟಿ ಅವರ ದ್ವಿತೀಯ ವರ್ಷದ ಸಂಸ್ಮರಣೆಯೊಂದಿಗೆ ಡಿ. 12 ರಂದು ಮಜೂರು ಸರ್ಕಲ್ ಬಳಿಯ ಲೀಲಾಧರ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ನಂತರ ಕಾಪು ಶ್ರೀ ವೀರಭದ್ರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಅವರ ಹೆಸರಿನಲ್ಲಿ ಪೂಜೆ, ನಂತರ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ, ಗಣ್ಯರ ಉಪಸ್ಥಿತಿಯಲ್ಲಿ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ 2024-2025 ಸಾಲಿನಲ್ಲಿ (ಅನುದಾನಿತ ಶಾಲೆ )ಹೆಚ್ಚು ಅಂಕ ಗಳಿಸಿದ 10 ವಿದ್ಯಾರ್ಥಿಗಳಿಗೆ ನಗದಿನೊಂದಿಗೆ ಸನ್ಮಾನ, ಹಾಗೂ 3 ಮಂದಿ ಮಾಜಿ ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಸಮಾಜ ರತ್ನ ಕೆ. ಲೀಲಾಧರ ಶೆಟ್ಟಿ ಅಭಿಮಾನಿ ಬಳಗ ಕಾಪು ಇವರ ಪ್ರಕಟಣೆಯು ತಿಳಿಸಿದೆ.
ಕುಲಾಲ ಸಂಘ ಮೂಡುಬಿದಿರೆ ವತಿಯಿಂದ ತುರ್ತು ಆರೋಗ್ಯ ನಿಧಿ ಹಸ್ತಾಂತರ
Posted On: 09-11-2025 07:31PM
ಮೂಡುಬಿದಿರೆ : ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡುಬಿದಿರೆ ಪಡುಮಾರ್ನಾಡ್ ಶ್ಯಾಮ ಅಂಚನ್ ಅವರ ಪುತ್ರ ಸಾತ್ವಿಕ್ ಕುಲಾಲ್ ನ ಚಿಕಿತ್ಸಾ ವೆಚ್ಚಕ್ಕಾಗಿ ಕುಲಾಲ ಸಂಘ (ರಿ) ಮೂಡುಬಿದಿರೆ ವತಿಯಿಂದ ತುರ್ತು ಆರೋಗ್ಯ ನಿಧಿ ಯೋಜನೆಯಡಿ ದಾನಿಗಳಿಂದ ಸಂಗ್ರಹಿಸಿದ ರೂ 21,000 ಮೊತ್ತವನ್ನು ಫಲಾನುಭಾವಿಯ ಮನೆಯಲ್ಲಿ ಹಸ್ತಾಂತರಿಸಲಾಯಿತು.
ನ. 23 ರಂದು ಮಂಗಳೂರಿನ ಮಂಗಳಾದೇವಿಯಲ್ಲಿ ಭವ್ಯ ಕುಲಾಲ ಭವನ ಉದ್ಘಾಟನೆ
Posted On: 09-11-2025 06:56AM
ಮಂಗಳೂರು : ಕುಲಾಲ ಸಂಘ ಮುಂಬಯಿ (ರಿ.) ಇದರ ಬಹು ಕೋಟಿ ವೆಚ್ಚದ ನೂತನ ಕುಲಾಲ ಭವನ ಮಂಗಳೂರಿನಲ್ಲಿ ನವೆಂಬರ್ 23ರಂದು ಮಂಗಳಾದೇವಿ ದೇವಸ್ಥಾನ ಬಳಿ ಅದ್ದೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ.
ಕಾಪುವಿನ ಮಹಾಬಲ ಮಾಲ್ ನಲ್ಲಿ ಅಂಗಡಿ ಕೋಣೆ ಮಾರಾಟ/ ಬಾಡಿಗೆಗೆ ಲಭ್ಯ
Posted On: 08-11-2025 10:04AM
ಕಾಪು : ಇಲ್ಲಿನ ಹೃದಯ ಭಾಗದಲ್ಲಿರುವ ಮಹಾಬಲ ಮಾಲ್ ನ ಮೊದಲ ಮಹಡಿಯಲ್ಲಿ 825 Sq Ft ಅಂಗಡಿ ಕೋಣೆ ಮಾರಾಟಕ್ಕಿದೆ ಅಥವಾ ಬಾಡಿಗೆಗೆ ಲಭ್ಯವಿದೆ.
ಹೆಜಮಾಡಿಯಲ್ಲಿ ನ.15 ರಂದು ಜರಗಲಿರುವ ಕಾಪು ತಾ| 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 02-11-2025 11:33AM
ಪಡುಬಿದ್ರಿ : ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ ನ.15ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಹಿರಿಯ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಸರ್ವಾಧ್ಯಕ್ಷತೆಯಲ್ಲಿ ಜರಗಲಿರುವ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಯು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜರಗಿತು.
