Updated News From Kaup
ಮಾ.27 (ಇಂದು) ಕಾಪುವಿನಲ್ಲಿ ರಕ್ತದಾನ ಶಿಬಿರ
Posted On: 27 Mar 2026, 08:59 AM
ಕಾಪು : ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಕೆಎಯುಪಿ ಉಡುಪಿ ಜಿಲ್ಲೆ, ಆಂತರಿಕ ಗುಣಮಟ್ಟ ಭರವಸೆ ಕೋಶ ಯೂತ್ ರೆಡ್ ಕ್ರಾಸ್, ಎನ್ಎಸ್ಎಸ್, ರೋವರ್ಸ್ -ರೇಂಜರ್ಸ್ ಘಟಕ, ಹಳೆಯ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿ ಕಲ್ಯಾಣ ಸಮಿತಿ
ಸಹಯೋಗದೊಂದಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ರಕ್ತ ಬ್ಯಾಂಕ್ ಘಟಕ, ಜಿಲ್ಲಾ ಆಸ್ಪತ್ರೆ ಉಡುಪಿ, ಶ್ರೀ ದೇವಿ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಲಬ್ ಕಾಪು, ಜೆಸಿಐ ಕಾಪು ಆಯೋಜನೆಯಲ್ಲಿ ರಕ್ತದಾನ ಶಿಬಿರದ
ಉದ್ಘಾಟನಾ ಕಾರ್ಯಕ್ರಮವು ಮಾ.27 ರಂದು ಬೆಳಿಗ್ಗೆ 09:30 ರಿಂದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜರಗಲಿದೆ
ಕಾರ್ಯಕ್ರಮವನ್ನು ಪ್ರೊ. ಗೋಪಾಲಕೃಷ್ಣ ಎಂ. ಗಾಂವ್ಕರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಉಡುಪಿ ಇದರ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ರಕ್ತನಿಧಿ ಘಟಕ, ಜಿಲ್ಲಾ ಆಸ್ಪತ್ರೆ ಉಡುಪಿ ಮುಖ್ಯಸ್ಥೆ ಡಾ. ವೀಣಾ, ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್, ಕಾಪು ಇದರ ಅಧ್ಯಕ್ಷರಾದ ಪ್ರಭಾಕರ ಅಮೀನ್, ಕಾಪು ಜೆಸಿಐ ಅಧ್ಯಕ್ಷರಾದ ವಿಕ್ಕಿ ಪೂಜಾರಿ ಮಡುಂಬು ಭಾಗವಹಿಸಲಿದ್ದಾರೆ.
IQAC ಸಂಯೋಜಕಿ ಡಾ. ರೋಶನಿ ಯಶವಂತ, YRC ಸಂಯೋಜಕ ಡಾ.ರಾಘವ ನಾಯ್ಕ, ವಿದ್ಯಾರ್ಥಿಗಳ ಕಲ್ಯಾಣ ಅಧಿಕಾರಿ ದೀಪಿಕಾ ಸುವರ್ಣ, ಎನ್.ಎಸ್.ಎಸ್ ಸಂಯೋಜಕಿ ಮಂಜುಳಾ ಎಚ್ ಎಸ್, ರೋವರ್ಸ್ - ರೇಂಜರ್ ಘಟಕ ಸಂಯೋಜಕಿ ಸವಿತಾ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ
Posted On: 27 Mar 2026, 08:44 AM
ಕಾಪು : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ಹೀಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಬೊಳ್ಜೆ, ಉಪಾಧ್ಯಕ್ಷರಾಗಿ ಸುಧಾಕರ್ ಕೋಟ್ಯಾನ್ ಬೊಳ್ಜೆ, ಕೋಶಾಧಿಕಾರಿ ಜಯಕುಮಾರ್, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕೆ. ಪೂಜಾರಿ, ಸಚಿನ್ ಎಂ ಸಾಲ್ಯಾನ್ ಬೊಳ್ಜೆ, ಗುರಿಕಾರರಾಗಿ ವಿಠಲ ಕೆ. ಕೋಟ್ಯಾನ್, ವೇಣುಗೋಪಾಲ್ ಉದಿಯಾವರ್, ವಿಠಲ ಅಂಚನ್, ದಿವಾಕರ ಪೂಜಾರಿ, ಅಶೋಕ ಆರ್. ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ಪ್ರತಿನಿಧಿ ಮಂಡಳಿಯಿಂದ ಸುಂದರ ಎಸ್ ಕೋಟ್ಯಾನ್, ದಿನೇಶ್ ಎಂ ಸಾಲ್ಯಾನ್, ರಮೇಶ್ ಟಿ ಕೋಟ್ಯಾನ್, ಪ್ರಕಾಶ್ ಟಿ ಕೋಟ್ಯಾನ್, ರವೀಂದ್ರ ಕೋಟ್ಯಾನ್, ದಿವಾಕರ ಬೊಳ್ಜೆ, ಲೋಕನಾಥ ಬೊಳ್ಜೆ, ಶ್ರೀಧರ ಮಾಬಿಯಾನ್, ಸುಧಾಕರ ಕೋಟ್ಯಾನ್, ಸಂತೋಷ್ ಡಿ ಸುವರ್ಣ, ಕಿಶೋರ್ ವಿ ಸಾಲ್ಯಾನ್, ಕಿಶೋರ್ ಟಿ ಬಂಗೇರ, ಚಂದ್ರಶೇಖರ ಎಂ ಬಂಗೇರ, ಸುರೇಶ್ ಕೆ ಪೂಜಾರಿ, ಸಚಿನ್ ಎಂ ಸಾಲ್ಯಾನ್, ಉದಯ ಮಾಬಿಯಾನ, ಸೆಲ್ಯೂತ್ ಕುಮಾರ್, ಜಯಕುಮಾರ್, ನಿತಿನ್ ಕುಮಾರ್ ಪರಾರಿತೋಟ, ರಾಜು ಪೂಜಾರಿ, ನಿತಿನ್ ಜೆ ಸಾಲ್ಯಾನ್, ಸಾಯಿನಾಥ ಬೊಳ್ಜೆ, ದಿನೇಶ್ ಬೊಳ್ಜೆ, ರವಿಕುಮಾರ್, ಪ್ರಕಾಶ್ ಕುಮಾರ್ ಚುನಾಯಿತರಾಗಿದ್ದಾರೆ.
ಕಾಪು ಪಡು ಸರಕಾರಿ ಹಿ.ಪ್ರಾ.ಶಾಲೆಗೆ ಡಿಜಿಟಲ್ ಕಲಿಕಾ ಉಪಕರಣಗಳ ದೇಣಿಗೆ
Posted On: 27 Mar 2026, 08:41 AM
ಕಾಪು : ರೋಬೋಸಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯು ತನ್ನ ಸಿ.ಎಸ್.ಆರ್. ಯೋಜನೆಯಡಿ ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿಜಿಟಲ್ ಕಲಿಕಾ ಉಪಕರಣ ಹಾಗೂ ಪ್ರೊಜೆಕ್ಟರ್ ಮತ್ತು ಲ್ಯಾಪ್ಟಾಪ್ ಅನ್ನು ದೇಣಿಗೆಯಾಗಿ ನೀಡಿತು.
ರೋಬೋಸಾಫ್ಟ್ ಸಂಸ್ಥೆಯ ಸಿ.ಎಸ್.ಆರ್. ಅಧಿಕಾರಿ ಚಕ್ರಿ ಹೆಗ್ಡೆ ಮಾತನಾಡಿ, ಈ ಆಧುನಿಕ ಉಪಕರಣಗಳು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಸಂವಾದಾತ್ಮಕ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ.
ದೃಶ್ಯ ಮಾಧ್ಯಮದ ಮೂಲಕ ಪಾಠಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಮತ್ತು ವಿದ್ಯಾರ್ಥಿಗಳನ್ನು ಡಿಜಿಟಲ್ ಯುಗಕ್ಕೆ ಸಜ್ಜುಗೊಳಿಸಲು ಈ ಕ್ರಮ ಪೂರಕವಾಗಿದೆ ಎಂದರು.
ಕೊಡುಗೆಯನ್ನು ಸ್ವೀಕರಿಸಿದ, ಹಳೆ ವಿದ್ಯಾರ್ಥಿ ಮತ್ತು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮಾತನಾಡಿ, ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಇಂತಹ ಕಾರ್ಪೋರೆಟ್ ಸಂಸ್ಥೆಗಳ ಬೆಂಬಲ ಅತ್ಯಗತ್ಯವಾಗಿದ್ದು ಡಿಜಿಟಲ್ ಉಪಕರಣಗಳ ಕೊಡುಗೆ ನೀಡಿದ ರೋಬೋಸಾಫ್ಟ್ ಸಂಸ್ಥೆಯ ಆಡಳಿತ ಮಂಡಳಿಯನ್ನು ಅಭಿನಂದಿಸಿ, ಕೃತಜ್ಞತೆ ಸಲ್ಲಿಸಿದರು.
ರೋಬೋಸಾಫ್ಟ್ ಉದ್ಯೋಗಿ ಮತ್ತು ಹಳೆ ವಿದ್ಯಾರ್ಥಿ ಲಾಲಾಜಿ ಪುತ್ರನ್, ನರೇಶ್ ಕುಂದರ್, ಕಾರ್ತಿಕ್ ಕೋಟ್ಯಾನ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿ, ಶ್ರೀಲತಾ ವಂದಿಸಿದರು.
ಕಾಪು : ಯುವಸೇನೆ ಮಡುಂಬು ಇದರ 2026 - 27 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಿತೇಶ್ ಸಾಲ್ಯಾನ್ ಮಡುಂಬು ಆಯ್ಕೆ
Posted On: 24 Mar 2026, 06:53 AM
ಕಾಪು : ಯುವಸೇನೆ ಮಡುಂಬು ಇದರ 2026-2027 ನೇ ಸಾಲಿನ ನೂತನ ಅಧ್ಯಕ್ಷರಾಗಿ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಮತ್ತು ಜೆಸಿಐ ಕಾಪು ಘಟಕದ ಸದಸ್ಯರಾದ ಜೆಸಿ ನಿತೇಶ್ ಸಾಲ್ಯಾನ್ ಮಡುಂಬು ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಪೂಜಾರಿ ಕಲ್ಯಾಲು, ಕೋಶಾಧಿಕಾರಿಯಾಗಿ ಸಚಿನ್ ಸಾಲ್ಯಾನ್ ಮಡುಂಬು ಮತ್ತು ಜೊತೆ ಕೋಶಾಧಿಕಾರಿಯಾಗಿ ಪೃಥ್ವಿರಾಜ್ ಶೆಟ್ಟಿ ಮಡುಂಬು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.
ವಾಯ್ಸ್ ಆಫ್ ಪಡುಬಿದ್ರಿ - 2026 ಕರೋಕೆ ಗಾಯನ ಸ್ಪರ್ಧೆಯ ಕರಪತ್ರ ಬಿಡುಗಡೆ
Posted On: 24 Mar 2026, 06:48 AM
ಪಡುಬಿದ್ರಿ : ಸಂಗೀತವು ವಿಶ್ವವ್ಯಾಪಿ ಭಾಷೆ, ಸಂಗೀತ ಪ್ರತಿಭೆ ಎಂದರೆ ಕೇವಲ ಹಾಡುವುದಲ್ಲ, ಅದು ಶಬ್ದಗಳ ಸೂಕ್ಷ್ಮತೆಯನ್ನು ಗ್ರಹಿಸುವ ರಾಗ- ಲಯಗಳನ್ನು ಸರಿಯಾಗಿ ಆಳವಡಿಸಿ ಕೊಳ್ಳುವ ಜನ್ಮಜಾತ ಕೌಶಲ್ಯವಾಗಿದೆ. ಇದು ಕೆಲವರಿಗೆ ಹುಟ್ಟಿನಿಂದಲೇ ಬಂದರೆ ಇನ್ನು ಕೆಲವರಲ್ಲಿ ತೀವ್ರ ಆಸಕ್ತಿಯಿಂದ ಬೆಳೆಯುತ್ತಿದೆ. ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ ಎಂದು ಓಂಕಾರ ಕಾಸ್ಟ್ಯೂಮ್ಸ್ ಮತ್ತು ಕಲಾ ಸಂಗಮದ ಆಡಳಿತ ನಿರ್ದೇಶಕಿ ಗೀತಾ ಅರುಣ್ ಹೇಳಿದರು.
ಅವರು ಪಡುಬಿದ್ರಿ ಬಂಟರ ಭವನದಲ್ಲಿ ಜರಗಲಿರುವ ಮೂರು ದಿನಗಳ ಬೃಹತ್ ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳದ ಅಂಗವಾಗಿ ಮಾರ್ಚ್ 29 ರಂದು ಪಡುಬಿದ್ರಿ ಬಂಟರ ಭವನದಲ್ಲಿ ನಡೆಯುವ ವಾಯ್ಸ್ ಆಫ್ ಪಡುಬಿದ್ರಿ -2026 ಕರೋಕೆ ಗಾಯನ ಸ್ಪರ್ಧೆಯ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತುಳುನಾಡ ಕಲಾವಿದರು ಸಂಸ್ಥೆಯ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿಯ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ, ಸಾಹಿತಿ, ಚಿತ್ರಕಲಾವಿದ ಸುರೇಶ್ ಪಡುಬಿದ್ರಿ, ರಿದಮ್ ಸಂಗೀತ ಕಲಾವಿದ ದಿನೇಶ್ ಪಡುಬಿದ್ರಿ ಉಪಸ್ಥಿತರಿದ್ದರು.
ಪಡುಬಿದ್ರಿ ಬಿಲ್ಲವ ಸಂಘ, ಮಹಿಳಾ ಮಂಡಳಿ, ಕಲ್ಪತರು ಸ್ವಸಹಾಯ ಸಂಘದಿಂದ ವಿಶ್ವ ಮಹಿಳಾ ದಿನಾಚರಣೆ
Posted On: 21 Mar 2026, 05:35 PM
ಪಡುಬಿದ್ರಿ : ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ನಾರಾಯಣ ಗುರು ಮಹಿಳಾ ಮಂಡಳಿ, ಕಲ್ಪತರು ಸ್ವಸಹಾಯ ಸಂಘದ ಸದಸ್ಯರು ಗುರುವಾರ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿದರು.
ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ವಾಸಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ, ಊಟೋಪಚಾರಕ್ಕಾಗಿ ರೂ. 10,000 ಧನ ಸಹಾಯ ನೀಡಲಾಯಿತು.
ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ರವರು ವ್ಯವಸ್ಥಿತವಾಗಿ ವೃದ್ಧರನ್ನು ಪಾಲನೆ ಪೋಷಣೆ ಮಾಡುತ್ತಿರುವ ಆಶ್ರಮದ ಸಂಚಾಲಕರಿಗೆ ಅಭಿನಂದನೆ ತಿಳಿಸಿದರು.
ಕಲ್ಯಾಣಿ ರವಿ ಅಂಚನ್ ರವರು ಆಶ್ರಮದ ಬಗ್ಗೆ ಮಾತನಾಡಿದರು.
ಈ ಸಂದರ್ಭ ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತಾ ಹರೀಶ್, ಕಾರ್ಯದರ್ಶಿ ನೀತಾ ಗುರುರಾಜ್ ಉಪಸ್ಥಿತರಿದ್ದರು.
ಉಪಸ್ಥಿತರಿದ್ದ ಎಲ್ಲಾ ಸದಸ್ಯರು ಆಶ್ರಮ ವಾಸಿಗಳೊಂದಿಗೆ ಕಾಲಕಳೆದು, ಅವರ ಪ್ರೀತಿ, ಆಶೀರ್ವಾದ ಪಡೆದರು.
ಮಾ. 28 : ಬೊಲ್ಲೆಟ್ಟು ಆದಿ ಅಲಡೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ
Posted On: 21 Mar 2026, 05:29 PM
ಕಾಪು : ಇತಿಹಾಸ ಪ್ರಸಿದ್ದ ಬೊಲ್ಲೆಟ್ಟು ಆದಿ ಅಲಡೆ ಜೀರ್ಣೋದ್ಧಾರ ಸಮಿತಿಯ ಅಶ್ರಯದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಮಾರ್ಚ್ 28 ರ ಬೆಳಿಗ್ಗೆ 8.30 ಕ್ಕೆ ಬೊಲ್ಲೆಟ್ಟು ಆಲಡೆಯಲ್ಲಿ ನಡೆಯಲಿದೆ.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಶಿಲಾನ್ಯಾಸ ಹಾಗೂ ಆಶೀರ್ವಚನ ನೀಡಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅಭ್ಯಾಗತರಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಕ್ಷೇತ್ರದ ಶಾಸಕ ಸುನಿಲ್ ಕುಮಾರ್, ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಹಾರಾಷ್ಟ್ರದ ಮಾಜಿ ಸಂಸದ ಗೋಪಾಲ್ ಎಂ. ಶೆಟ್ಟಿ, ಕುತ್ಯಾರು ಆರಮನೆ ಜಿನೇಶ್ ಬಲ್ಲಾಳ್, ಜಾನಪದ ಸಂಶೋಧಕ ಕೆ.ಎಲ್. ಕುಂಡಂತ್ತಾಯ, ಎಲ್ಲೂರು ಗುತ್ತು ವೈ. ಪ್ರಭಾಕರ್ ಶೆಟ್ಟಿ ಹಾಗೂ ವೈ. ಪ್ರಪುಲ್ಲ ಶೆಟ್ಟಿ, ನ್ಯಾಯವಾದಿ ಪ್ರದೀಪ್ ಕುಮಾರ್, ಅದಾನಿ ಗ್ರೂಪ್ ಸಿ. ಇ. ಒ. ಕಿಶೋರ್ ಆಳ್ವ ಭಾಗವಹಿಸಲಿದ್ದಾರೆ.
ಬೊಲ್ಲೆಟ್ಟು ಆದಿ ಅಲಡೆ ವ್ಯವಸ್ಥಾಪನಾ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಸದಸ್ಯರು, ತಂತ್ರಿಗಳಾದ ಸಜೆ ಹರೀಶ್ ಜೋಯಿಸ, ಪ್ರಧಾನ ಅರ್ಚಕ ಗಣೇಶ್ ಜಿ. ಭಟ್ ಹಾಗೂ ಪವಿತ್ರಪಾಣಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.24 - 25 : ಕಾಪುವಿನಲ್ಲಿ ಪ್ರಸಿದ್ಧ ಸುಗ್ಗಿ ಮಾರಿಪೂಜೆ
Posted On: 21 Mar 2026, 05:25 PM
ಕಾಪು : ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ ಇದೇ ಬರುವ ಮಾರ್ಚ್ 24ರ ಮಂಗಳವಾರ ಮತ್ತು 25 ರ ಬುಧವಾರ ನಡೆಯಲಿದೆ.
ದೇವಳಕ್ಕೆ ಬರುವ ಭಕ್ತಾದಿಗಳಿಗೆ ದೇವಿಯ ದರುಶನಕ್ಕೆ ಸರತಿ ಸಾಲಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಹಣ್ಣುಕಾಯಿ, ಕುರಿ - ಕೋಳಿ ಹರಕೆ ಸಮರ್ಪಣೆಗೆ ವ್ಯವಸ್ಥೆ ಮತ್ತು ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಕಾರ್ಯನಿರ್ವಹಣಾಧಿಕಾರಿ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಮಾತೃ ವೈಭವ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ರಮೀಝ್ ಹುಸೈನ್
Posted On: 13 Mar 2026, 06:35 AM
ಪಡುಬಿದ್ರಿ : ಇಲ್ಲಿನ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ.
ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ಅವರು ರಮೀಝ್ ರವರನ್ನು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಮೀಝ್ ಹುಸೈನ್ ಅವರು ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರೂ ಆಗಿದ್ದಾರೆ.
ರಮೀಝ್ ಹುಸೈನ್ ಅವರು ಈ ಮೊದಲು ಎನ್ ಎಸ್ ಯು ಐ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಪು ಕ್ಷೇತ್ರದಲ್ಲಿ ಉತ್ತಮ ಪಕ್ಷ ಸಂಘಟನೆ ನಡೆಸಿದ ಅನುಭವ ಹೊಂದಿದ್ದಾರೆ. ವಿವಿಧ ರಾಜ್ಯಗಳಲ್ಲಿ ಚುನಾವಣಾ ವೀಕ್ಷಕರಾಗಿ ಅನುಭವ ಹೊಂದಿದ್ದಾರೆ. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿರುವ ಅವರು ಯುವಕರ ನೆಚ್ಚಿನ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಚಲನಚಿತ್ರ ನಟಿ ಶಾನ್ವಿ ಶ್ರೀವಸ್ತವ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ
Posted On: 12 Mar 2026, 07:08 PM
ಕಾಪು : ಕನ್ನಡ ಮತ್ತು ತೆಲುಗು ಚಿತ್ರರಂಗದ ನಟಿ ಶಾನ್ವಿ ಶ್ರೀವಸ್ತವ ಅವರು ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿಕೊಟ್ಟು ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಅಮ್ಮನ ಸ್ವರ್ಣ ಗದ್ದುಗೆಯನ್ನು ಮತ್ತು ದೇವಳದ ಕೆತ್ತನೆಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರೀಕರಣ ಸಂದರ್ಭ ಇಲ್ಲಿಗೆ ಬರುವ ಅವಕಾಶ ಸಿಕ್ಕಿತು. ಇನ್ನೊಮ್ಮೆ ಬಿಡುವು ಮಾಡಿಕೊಂಡು ಬರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
