Updated News From Kaup

ರಂಗ ಸಂಸಾರ ಪಣಿಯೂರು : ತುಳು ಜಾನಪದ ಕಥಾಹಂದರದ ಎರಡು ನಾಟಕಗಳ ಮುಹೂರ್ತ

Posted On: 16-06-2024 04:11PM

ಕುಂಜೂರು : ರಂಗ ಸಂಸಾರ ಪಣಿಯೂರು ತಂಡದ ಈ ವರ್ಷದ ಎರಡು ವಿಭಿನ್ನ ತುಳು ಜಾನಪದ ನಾಟಕಗಳಾದ ಮೈಮೆದ ಬಾಲೆಲು ಕೋಟಿ ಚೆನ್ನಯೆರ್ ಮತ್ತು ಮಾಯಕಾರೆ ಬಬ್ಬುನ ಮಾಯದ ನಡಕೆ ರವಿವಾರ ಕುಂಜೂರು ದುರ್ಗಾ ದೇವಿ ದೇವಳದಲ್ಲಿ ಮುಹೂರ್ತಗೊಂಡಿತು. ಬಳಿಕ ಕುಂಜೂರು ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶಿಕ್ಷಕ ಸುದರ್ಶನ್ ರವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಲಾವಿದರ ಕಷ್ಟ, ಕಲಾವಿದರಾಗಿ ಬೆಳೆಯುವ ಹುಮ್ಮಸ್ಸು, ಕಲಾವಿದನಾಗಿ ರೂಪುಗೊಂಡ ಬಳಿಕ ಇರುವುದಿಲ್ಲ. ಪೌರಾಣಿಕ ನಾಟಕಗಳು ನಿತ್ಯ ಸತ್ಯ. ನಿರೀಕ್ಷೆಗಿಂತ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.

ಪಡುಬಿದ್ರಿ : ಕೆಳಗಿನ ಪೇಟೆ ಕೋಳಿ ಅಂಗಡಿಯಲ್ಲಿ ಕಳ್ಳತನ

Posted On: 16-06-2024 12:00PM

ಪಡುಬಿದ್ರಿ : ಇಲ್ಲಿನ ಕೆಳಗಿನಪೇಟೆಯ ರಾ.ಹೆ 66ರ ಪಕ್ಕದಲ್ಲಿರುವ ಕೋಳಿ ಅಂಗಡಿಯೊಂದಕ್ಕೆ ಕಳ್ಳನೊಬ್ಬ ಒಳ ನುಸುಳಿ ಸಾವಿರಾರು ರೂಪಾಯಿ ಕಳ್ಳತನ ಮಾಡಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ : ವಿಶ್ವ ತಂಬಾಕು ವಿರೋಧಿ ದಿನಾಚರಣೆ

Posted On: 15-06-2024 03:27PM

ಹೆಜಮಾಡಿ : ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಹೆಜಮಾಡಿ ಇಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜರಗಿದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಕಾಪು ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ದಯಾನಂದ ಹೆಜಮಾಡಿ ಉದ್ಘಾಟಿಸಿದರು. ಈ ಸಂದರ್ಭ ಅವರು ಉತ್ತಮ ಸಂಸ್ಕಾರ ಬೆಳೆಸಿ ಹೆತ್ತವರನ್ನು ಗೌರವಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠ : ಬಿಲ್ವ ಪತ್ರ ಗಿಡ ನೆಡುವ ಅಭಿಯಾನಕ್ಕೆ ಕ್ಷೇತ್ರದಲ್ಲಿ ಚಾಲನೆ

Posted On: 15-06-2024 03:22PM

ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠ ಇದರ ಮುಖ್ಯಸ್ಥರಾದ ಶ್ರೀ ಸಾಯಿ ಈಶ್ವರ ಗುರೂಜಿಯವರ ಸಂಕಲ್ಪದಂತೆ 108 ದಿನಗಳಲ್ಲಿ 108 ದೇವಾಲಯಗಳಿಗೆ ಭೇಟಿ ನೀಡಿ ಬಿಲ್ವ ಪತ್ರ ಗಿಡ ನೆಡುವ ಅಭಿಯಾನಕ್ಕೆ ಜೂ.14 ರಂದು ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.

ಕಾಪು : ಪೈಪ್ ಲೈನ್ ಅವಾಂತರ - ಕುಸಿಯುವ ಹಂತದಲ್ಲಿ ಸಾರ್ವಜನಿಕ ಬಾವಿ, ಟ್ರಾನ್ಸ್ಫಾರ್ಮರ್

Posted On: 14-06-2024 05:28PM

ಕಾಪು : ಇಲ್ಲಿನ ಕೊಪ್ಪಲಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ದರ್ಕಾಸು ಮನೆ ಬಳಿ ಪೈಪ್ ಲೈನ್ ಉದ್ದೇಶಕೋಸ್ಕರ ಗುಂಡಿ ತೆಗೆದಿದ್ದು ಇದರಿಂದ ಸಾರ್ವಜನಿಕ ಬಾವಿ ಜೊತೆಗೆ ಟ್ರಾನ್ಸ್‌ಫಾರ್ಮರ್ ಕೂಡ ಕುಸಿಯುವ ಹಂತದಲ್ಲಿದೆ.

ಉಡುಪಿ : ಸಂಸದ ಕೋಟಾರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಪೈಪೋಟಿ ಶುರು ; ಗೀತಾಂಜಲಿ ಸುವರ್ಣ ಹೆಸರು ಮುಂಚೂಣಿಯಲ್ಲಿ

Posted On: 14-06-2024 07:28AM

ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗುತ್ತಿದ್ದಂತೆ ಅವರಿಂದ ತೆರವಾದ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ತಿನ ಸದಸ್ಯ ಸ್ಥಾನಕ್ಕೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು ಒಂದೆಡೆ ಜಾತಿ ಲೆಕ್ಕಾಚಾರ ಮತ್ತೊಂದೆಡೆ ಪಕ್ಷದ ಹಿರಿತನ ಜೊತೆಗೆ ತೆರೆಮರೆಯ ಕಸರತ್ತು ನಡೆಯುತ್ತಿದೆ.

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Posted On: 14-06-2024 07:26AM

ಕಾಪು : ಇಲ್ಲಿ ನೆಲೆ ನಿಂತಿರುವ ಶ್ರೀ ಮಾರಿಯಮ್ಮ ದೇವಿಯು ಅತ್ಯಂತ ಪ್ರಸಿದ್ಧಿಯನ್ನು ಹೊಂದಿದ್ದು ಜಗತ್ತಿನಾದ್ಯಂತ ನೆಲೆಸಿರುವ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದ್ದಾಳೆ. ಇದೀಗ ಕಾಪು ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದೆ. ನೂತನ ದೇಗುಲದಲ್ಲಿ 2025 ರ ಮಾರ್ಚ್ 2 ರಂದು ಅಮ್ಮನ ದಿವ್ಯ ಗದ್ದುಗೆಯು ಪ್ರತಿಷ್ಠಾಪನೆಗೊಳ್ಳಲಿದ್ದು, ತದನಂತರ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದೆ. ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಪೀಠ ಸ್ವರ್ಣಮಯವಾಗಬೇಕೆಂಬ ಆಶಯದಿಂದ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯನ್ನು ರಚಿಸಲಾಗಿದೆ ಎಂದು ಅಭಿವೃದ್ಧಿ ಸಮಿತಿ ‌ಅಧ್ಯಕ್ಷ ವಾಸುದೇವ ಶೆಟ್ಟಿ ಹೇಳಿದರು. ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಳದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳ ಜೊತೆಗೂಡಿ ಸ್ವರ್ಣ ಗದ್ದುಗೆ ಸಮರ್ಪಣಾ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.

ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕೇಂದ್ರಗಳ ಭೇಟಿ

Posted On: 13-06-2024 06:47AM

ಕಾರ್ಕಳ : ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು.

ಪಲಿಮಾರು: ವಿದ್ಯುತ್ ಲೈನ್ ಯೋಜನೆ - ಇನ್ನದಲ್ಲಿ ಬೃಹತ್ ಪ್ರತಿಭಟನೆ ; ತಾತ್ಕಾಲಿಕ ಸ್ಥಗಿತಕ್ಕೆ ಆದೇಶ

Posted On: 13-06-2024 06:44AM

ಪಲಿಮಾರು : ಇನ್ನ ಗ್ರಾಮ ಪಂಚಾಯಿತಿ ಬಳಿ ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿ ಮತ್ತು ಸುತ್ತಮುತ್ತಲಿನ ಯೋಜನಾ ಸಂತ್ರಸ್ಥರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರೈತ ಪರ ಸಂಘ, ಸಂಸ್ಥೆಗಳು ಬುಧವಾರ ಬೃಹತ್ ಪ್ರತಿಭಟನಾ ಸಭೆ ನಡೆಸಿದರು.

ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳ ಸಭೆ

Posted On: 12-06-2024 06:12PM

ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು.