Updated News From Kaup

ಕೊರಗಜ್ಜನ ಅಭಯ - ಕೈ ಸೇರಿದ ಕಳವಾದ ದ್ವಿಚಕ್ರ ವಾಹನ ; ಭಕ್ತನಿಂದ ನಿತ್ಯವೂ ಸ್ವಚ್ಛತೆಯ ಕಾಯಕದ ಪ್ರಮಾಣ

Posted On: 12-06-2024 04:55PM

ಉಡುಪಿ : ಇಲ್ಲಿಯ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಕೆಲಸಕಿದ್ದ ಪ್ರವೀಣ್ ಸೇರಿಗಾರ್ ರ ದ್ವಿಚಕ್ರ ವಾಹನ ಕಳವಾಗಿ ಮಾನಸಿಕವಾಗಿ ಕುಗ್ಗಿದಾಗ ಹೋಟೆಲ್ ಪಕ್ಕದ ಅಂಗಡಿಯಾತ ನೀಡಿದ ಸಲಹೆಯಂತೆ ಹತ್ತಿರದ ಕೊರಗಜ್ಜ ಸನ್ನಿಧಿಗೆ ಭೇಟಿಯಿತ್ತು ಹರಕೆ ಹೇಳಿಕೊಂಡಾದ ಬಳಿಕ 15 ದಿವಸದಲ್ಲಿ ಕಳಕೊಂಡ ವಾಹನ ಗೋವಾದಲ್ಲಿ ಪತ್ತೆಯಾದ ಬಗ್ಗೆ ಪೋಲೀಸರು ಮಾಹಿತಿ ನೀಡುತ್ತಾರೆ. ಇದರಿಂದ ಸಂತಸಗೊಂಡ ಆ ವ್ಯಕ್ತಿ ನನಗೆ ದೈವ ಕೈ ಬಿಡ್ಲಿಲ್ಲ ಎಂಬ ಖುಷಿಯಿಂದ ದೈವಸ್ಥಾನಕ್ಕೆ ಭೇಟಿ ಕೊಟ್ಟು ಹೇಳಿದ ಹರಕೆಯನ್ನು ಒಪ್ಪಿಸುತ್ತಾರೆ. ಮುಂದೆ ದಿನನಿತ್ಯ ದೈವಸ್ಥಾನಕ್ಕೆ ಸಂಜೆ 5ಗಂಟೆಗೆ ಬಂದು ದೈವ ಸನ್ನಿಧಿಯ ಸ್ವಚ್ಛತೆಯನ್ನು ಮಾಡುತ್ತಾರೆ. ಇದರಿಂದ ನೆಮ್ಮದಿ ಕೂಡ ಸಿಗುತ್ತದೆ ಎನ್ನುತ್ತಾರೆ.

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Posted On: 12-06-2024 04:49PM

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಾಲ ಕಾರ್ಮಿಕ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಉಡುಪಿಯಲ್ಲಿ ಅಭಿನಂದನೆ

Posted On: 11-06-2024 09:13PM

ಉಡುಪಿ : 2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಇವರನ್ನು ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರು ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಿದರು. ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್ ಮಿನೇಜಸ್, ಐವನ್ ಡಿಸೋಜರವರು ಸಮಾಜ ಮತ್ತು ಪಕ್ಷಕ್ಕೆ ನೀಡಿದ ಸೇವೆಗೆ ಸಿಕ್ಕ ಪ್ರತಿಫಲ. ಸರ್ಕಾರ ನಮ್ಮ ಕ್ರೈಸ್ತ ಸಮಾಜಕ್ಕೆ ನೀಡಿದ ಕೊಡುಗೆ. ಐವನ್ ಡಿಸೋಜ ಇವರ ಸೇವೆಯು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಲಿ ಎಂದು ಶುಭ ಹಾರೈಸಿದರು.

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Posted On: 11-06-2024 11:57AM

ಕಾಪು : ಕರಾವಳಿಯ ಬಹುತೇಕ ದೈವಜ್ಞರು, ಜ್ಯೋತಿಷಿಗಳಿಗೆ ಗುರುಗಳಾಗಿ ಪ್ರಸಿದ್ಧರಾಗಿರುವ ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ ಅವರು ರವಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇಗುಲದ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು.

ಕಾಪು : ಮಳೆ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳಲು ವಿವಿಧ ಇಲಾಖೆಗಳಿಗೆ ಶಾಸಕರಿಂದ ಸೂಚನೆ

Posted On: 11-06-2024 11:53AM

ಕಾಪು : ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶಗೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ಗಾಳಿ ಮಳೆ ಜೋರಿರುವ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿರುತ್ತದೆ. ಈ ನಿಟ್ಟಿನಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ವಿವಿಧ ಇಲಾಖೆಗಳಿಗೆ ಮುಂಜಾಗ್ರತ ಕ್ರಮ ಕೈಗೊಳ್ಳಲು ಪತ್ರದ ಮೂಲಕ ಸೂಚಿಸಿದ್ದಾರೆ.

ಕಟಪಾಡಿ : ಧರ್ಮ, ರಾಷ್ಟ್ರ ಯೋಧರ ರಕ್ಷಣೆಗಾಗಿ ಶ್ರೀ ಸಾಯಿ ಈಶ್ವರ್ ಗುರೂಜಿ 108 ದಿನ 108 ದೇವಸ್ಥಾನ ಪ್ರದಕ್ಷಿಣೆ

Posted On: 11-06-2024 11:50AM

ಕಟಪಾಡಿ : ಶ್ರೀ ಸಾಯಿ ಮುಖ್ಯ ಪ್ರಾಣದೇವಸ್ಥಾನ ಶ್ರೀ ದ್ವಾರಕಾಮಯಿ ಮಠದ ಪೀಠಾಧೀಶರು ಮತ್ತು ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿಈಶ್ವರ್ ಗುರೂಜಿಯವರು ಧರ್ಮ, ರಾಷ್ಟ್ರ ಯೋಧರ ರಕ್ಷಣೆಗಾಗಿ ಜೂನ್ 14 ರಿಂದ ಸಪ್ಟೆಂಬರ್‌ 29 ರವರೆಗೆ 108 ದಿನ 108 ದೇವಸ್ಥಾನ ಪ್ರದಕ್ಷಿಣೆ ಕೈಗೊಂಡಿದ್ದಾರೆ.

ಕಾರ್ಕಳ : ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಐದು ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್‌ನಲ್ಲಿ ಅರ್ಹತೆ

Posted On: 09-06-2024 07:00PM

ಕಾರ್ಕಳ : ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ, ಕೆ ಧ್ರುವ ಬಂಡಾರ್ಕರ್,ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಸುಜಿತ್ ಡಿ ಕೆ 3648, ಅರ್ಜುನ್ ಇ ನಾಯಕ್ 3298, ಕೆ ಧ್ರುವ ಬಂಡಾರ್ಕರ್ 4260ನೇ ಕೆಟಗರಿ ರ‍್ಯಾಂಕ್‌ ಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ.

ಕಾಪು : ಶ್ರೀ ದೇವಿ ಫ್ರೆಂಡ್ಸ್ ಮಲ್ಲಾರು ರಾಣ್ಯಕೇರಿ ಕಾಪು - ದಿ. ಕಾಪು ಲೀಲಾಧರ ಶೆಟ್ಟಿ ಸ್ಮರಣಾರ್ಥ ರಾಣೆಯಾರ್ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ

Posted On: 09-06-2024 06:54PM

ಕಾಪು : ಶ್ರೀ ದೇವಿ ಫ್ರೆಂಡ್ಸ್ ಮಲ್ಲಾರು ರಾಣ್ಯಕೇರಿ ಕಾಪು ಇದರ ನೇತೃತ್ವದಲ್ಲಿ ದಿ. ಕಾಪು ಲೀಲಾಧರ ಶೆಟ್ಟಿ ಇವರ ಸ್ಮರಣಾರ್ಥ ರಾಣೆಯಾರ್ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕೋಟೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ಜರಗಿತು.

ಪಡುಬಿದ್ರಿ : ಆಸ್ಪೆನ್‌ ಇನ್ಫ್ರಾ ಪಡುಬಿದ್ರಿ ಪ್ರೈ.ಲಿ. - ಸಿಎಸ್ಆರ್ ನಿಧಿಯಿಂದ 20 ಲಕ್ಷ ರೂ. ಮೊತ್ತದ ವಿವಿಧ ಸವಲತ್ತುಗಳ ವಿತರಣೆ

Posted On: 09-06-2024 12:10PM

ಪಡುಬಿದ್ರಿ : ಆಸ್ಪೆನ್‌ ಇನ್ಫ್ರಾ ಪಡುಬಿದ್ರಿ ಪ್ರೈ.ಲಿ. ಸಂಸ್ಥೆ ವತಿಯಿಂದ ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದಲ್ಲಿ ಶನಿವಾರ ಪಡುಬಿದ್ರಿ ಬಂಟರ ಭವನದಲ್ಲಿ ಜರಗಿದ 2023-24ನೇ ಸಾಲಿನ ಸಿಎಸ್‌ಆರ್ ಯೋಜನೆಯ ವಿವಿಧ ಸವಲತ್ತುಗಳ ಹಸ್ತಾಂತರ ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಆಸ್ಪೆನ್ ಇನ್ಫ್ರಾ ಕಂಪೆನಿಯು ಬಂದ ಲಾಭಾಂಶದ ಪಾಲನ್ನು ಸಮಾಜಕ್ಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಇಂತಹ ಸಮಾಜಮುಖಿ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕು ಎಂದು ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಪಡುಬಿದ್ರಿ : ಎಸ್.ಬಿ.ವಿ.ಪಿ. ಹಿ.ಪ್ರಾ. ಶಾಲೆ ಹಾಗೂ ಗಣಪತಿ ಪ್ರೌಢ ಶಾಲೆ - ಶೈಕ್ಷಣಿಕ ಬಾಂಡ್, ಇಂಗ್ಲಿಷ್ ಸ್ಪೀಕಿಂಗ್ ತರಗತಿ

Posted On: 09-06-2024 11:37AM

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಅದಮಾರು ಮಠ ಶಿಕ್ಷಣ ಮಂಡಳಿಯ ಆಡಳಿತಕ್ಕೆ ಒಳಪಟ್ಟ 104 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ ಎಸ್.ಬಿ.ವಿ.ಪಿ. ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗಣಪತಿ ಪ್ರೌಢ ಶಾಲೆಯಲ್ಲಿ 2024-2025 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ಮತ್ತು ಎಂಟನೇ ತರಗತಿಗೆ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬಾಂಡ್ ನೀಡಲು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ, ಶಾಲಾ ಹಳೆ ವಿದ್ಯಾರ್ಥಿ ಮುಂಬಯಿ ಉದ್ಯಮಿ ಪೃಥ್ವಿರಾಜ್ ಹೆಗ್ಡೆ ನಿರ್ಧರಿಸಿದ್ದಾರೆ.