Updated News From Kaup
ಪಡುಬಿದ್ರಿ : ಸಾಗರ್ ವಿದ್ಯಾ ಮಂದಿರ ಶಾಲೆಯ ಬೆಳ್ಳಿಹಬ್ಬ ಸ್ಮಾರಕ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ
Posted On: 15 Jul 2024, 06:19 AM
ಪಡುಬಿದ್ರಿ : ವಿದ್ಯಾ ದಾನದ ಮಹತ್ವಾಕಾಂಕ್ಷೆಯ ಮೂಲಕ ಮೊಗವೀರ ಸಮಾಜದ ಹಿರಿಯರು ಹುಟ್ಟು ಹಾಕಿದ ಶಾಲೆಯು ಇಂದು ಸಾಗರ್ ವಿದ್ಯಾಮಂದಿರ ಶಾಲೆಯಾಗಿ ಸಮಾಜದ ಮೊತ್ತಮೊದಲ ಆಂಗ್ಲ ಮಾಧ್ಯಮ ಶಾಲೆಯಾಗಿ ರೂಪು ಪಡೆದು ಬೆಳೆಯುತ್ತಿದೆ. ಈ ಶಾಲೆಯನ್ನು ಮತ್ತಷ್ಟು ಉನ್ನತಿಗೆ ಒಯ್ಯುವುದು ನಮ್ಮೆಲ್ಲರ ಬಯಕೆಯಾಗಿದೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರೂ ಆಗಿರುವ ನಾಡೋಜಾ ಡಾ| ಜಿ. ಶಂಕರ್ ಹೇಳಿದರು. ಅವರು ಭಾನುವಾರ ಪಡುಬಿದ್ರಿಯ ಸಾಗರ್ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲಾ ಬೆಳಿಹಬ್ಬ ಸ್ಮಾರಕ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪಡುಬಿದ್ರಿ ಬೀಡು ರತ್ನಾಕರ ರಾಜ ಅರಸು ಕಿನ್ಯಕ್ಕ ಬಲ್ಲಾಳ್ ಮಾತನಾಡಿದರು. ಮೂರನೇ ಬಾರಿಗೆ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಯ ಸಿ. ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಉಚ್ಚಿಲದ ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಗುತ್ತಿಗೆದಾರ ಪವನ್ ಆನಂದ್ ಎರ್ಮಾಳು, ಅರುಣಾ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಅನಂತೇಶ್ ವಿ. ಪ್ರಭು, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ, ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಶಾಂತಾ ಎಲೆಕ್ಟ್ರಿಕಲ್ಸ್ ಆಡಳಿತ ನಿರ್ದೇಶಕ ಶ್ರೀಪತಿ ಭಟ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಅರುಣ್ ಶೆಟ್ಟಿ, ಬೆಳ್ಳಿಹಬ್ಬ ಕಟ್ಟಡ ಸಮಿತಿಯ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ, ಗ್ರಾಮಸಭೆಯ ಅಧ್ಯಕ್ಷರಾದ ಅಶೋಕ ಸಾಲ್ಯಾನ್, ಗಂಗಾಧರ ಕರ್ಕೇರ, ಪವಿತ್ರಾ ಗಿರೀಶ್, ಮಲ್ಲಿಕಾ ದಿನಕರ್, ನಾರಾಯಣ ಕರ್ಕೇರ, ಹರಿಪ್ರಸಾದ್ ಎಚ್. ಮತ್ತಿತರರು ವೇದಿಕೆಯಲ್ಲಿದ್ದರು. ಕಾಡಿಪಟ್ಣ ನಡಿಪಟ್ಣ ವಿದ್ಯಾಪ್ರಚಾರಕ ಸಂಘದ ಅಧ್ಯಕ್ಷ, ಶಾಲಾ ಸಂಚಾಲಕ ಸುಕುಮಾರ್ ಶ್ರೀಯಾನ್ ಸ್ವಾಗತಿಸಿದರು. ವಿನುತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮ್ಶಶ್ರೀ ರಾವ್ ವಂದಿಸಿದರು. ವೇ.ಮೂ.ರಾಮಕೃಷ್ಣ ಆಚಾರ್ಯ, ನಂದಕುಮಾರ್ ಆಚಾರ್ಯ ಅವರು ಶಿಲಾನ್ಯಾಸ ಕಾರ್ಯಕ್ರಮದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.
ಅದಮಾರು ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಪಾದೆಬೆಟ್ಟು ಆಯ್ಕೆ
Posted On: 14 Jul 2024, 08:13 PM
ಕಾಪು : ತಾಲೂಕಿನ ಅದಮಾರು ರಿಕ್ಷಾ ಚಾಲಕರ ಹಾಗೂ ಮಾಲಕರ ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಪಾದೆಬೆಟ್ಟು ಆಯ್ಕೆಯಾಗಿರುತ್ತಾರೆ. ಕುಲಾಲ ಸಂಘ (ರಿ.) ಕಾಪು ವಲಯ ಹಾಗೂ ಕುಲಾಲ ಯುವ ವೇದಿಕೆ ಕಾಪು ಇವರಿಗೆ ಅಭಿನಂದನೆ ಸಲ್ಲಿಸಿದೆ.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಭೇಟಿ
Posted On: 14 Jul 2024, 07:54 PM
ಮುಲ್ಕಿ : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಳ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಬಳಿಕ ರಾಹುಲ್ ಅವರು ಮುಲ್ಕಿ ಸೀಮೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನಕ್ಕೆ ಹಾಗೂ ಕಕ್ವಗುತ್ತು ಮೂಲ ನಾಗನ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭ ಬಪ್ಪನಾಡು ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕೆ ಎಲ್ ರಾಹುಲ್ ಪತ್ನಿ ಬಾಲಿವುಡ್ ನಟಿ ಅತಿಯಾ ಶೆಟ್ಟಿ, ನಟ ಅಹನ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಅಶ್ವಿನ್ ಆಳ್ವ ಕುಬೆವೂರು ಮತ್ತಿತರರು ಉಪಸ್ಥಿತರಿದ್ದರು.
ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ - ಶ್ರೀ ಕ್ಷೇತ್ರ ಪೆಲತ್ತೂರು ಭೇಟಿ
Posted On: 14 Jul 2024, 05:44 PM
ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠ ದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ 108 ದಿನಗಳಲ್ಲಿ 108 ಕ್ಷೇತ್ರ ಪ್ರದಕ್ಷಿಣೆ 31 ದಿನದ ಸಂದಶ೯ನ ಶ್ರೀ ಕ್ಷೇತ್ರ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಜೂನ್ 14 ಆದಿತ್ಯವಾರ ದಂದು ನಡೆಯಿತು. ಈ ಸಂದಭ೯ದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀವ೯ಚನ ನೀಡಿ, ಹಿಂದೂ ಧಮ೯ದ ರಕ್ಷಣೆಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಾಗಿದೆ. ಮತಾಂತರ ಮುಂತಾದ ವ್ಯಾಧಿ ನಮ್ಮ ಸಮಾಜದಿಂದ ದೂರವಾಗಬೇಕು. ಗಡಿಯಲ್ಲಿ ದೇಶ ರಕ್ಷಣೆ ಮಾಡುವ ಯೋಧರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಈ ಕಾಯ೯ ನಡೆಯುತ್ತಿರುವುದಾಗಿ ಹೇಳಿದರು. ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರ ರಮೇಶ್ ನಾಯಕ್ ರವರು ಗುರೂಜಿಯವರನ್ನು ಗೌರವಿಸಿದರು. ಕಾಯ೯ಕ್ರಮದಲ್ಲಿ ಗುರೂಜಿಯವರು ಬಿಲ್ವಪತ್ರ ಗಿಡ ಮತ್ತು ಮನವಿ ಪತ್ರವನ್ನು ಆಡಳಿತ ಮಂಡಳಿಯ ಸದಸ್ಯರಿಗೆ ನೀಡಿದರು. ನೀರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪ್ರಭು, ಪುರೋಹಿತ ರಮೇಶ್ ಭಟ್, ಪೆಲತ್ತೂರು ಫ್ರೆಂಡ್ಸ್ ಕ್ಲಬ್ ಸದಸ್ಯರು, ಜಿ.ಪಂ ಮಾಜಿ ಸದಸ್ಯೆ ಗೀತಾಂಜಲಿ ಸುವಣ೯, ಸತೀಶ್ ದೇವಾಡಿಗ, ರಾಘವೇಂದ್ರ ಪ್ರಭು ಕವಾ೯ಲು, ನಿಲೇಶ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ : ನಿಟ್ಟೂರಿನ ದುಗ್ಗಣ್ಣಬೆಟ್ಟು ಮಾರ್ಗದಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆ
Posted On: 14 Jul 2024, 05:37 PM
ಉಡುಪಿ : ಒಳಚರಂಡಿ ವ್ಯವಸ್ಥೆ ಇದ್ದರೂ ಅದನ್ನು ಸಮಪರ್ಕವಾಗಿ ನಿರ್ವಹಿಸದ ಕಾರಣ ವಾಸನೆಯಿಂದ ಕುಳಿತುಕೊಳ್ಳಲಾಗದ ಸ್ಥಿತಿ ಉಡುಪಿಯ ನಿಟ್ಟೂರಿನ ದುಗ್ಗಣ್ಣ ಬೆಟ್ಟು ಮಾರ್ಗದ ಸ್ಥಳೀಯರಿಗೆ ಉಂಟಾಗಿದೆ. ಒಳಚರಂಡಿಯ ನೀರು ನಿರಂತರವಾಗಿ ಹರಿಯುತ್ತಿದ್ದು ಇದು ವಾಸನೆಯ ಜೊತೆಗೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹತ್ತಿರದ ಬಾವಿಯ ನೀರು ಹಾಳಾಗುವ ಸಾಧ್ಯತೆಗಳಿವೆ. ಇಲ್ಲಿಯ ರಸ್ತೆ ಕೂಡಾ ಸರಿಯಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವಾರು ಬಾರಿ ಮನವಿ ನೀಡಿದರೂ ಈ ವರೆಗೆ ಯಾವುದೇ ಅಧಿಕಾರಿ ವರ್ಗ ನೋಡಲು ಬಂದಿಲ್ಲ. ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆಗೂ ಮನವಿ ನೀಡಲಾಗಿದೆ ಎನ್ನುತ್ತಾರೆ ಸ್ಥಳೀಯರು.
ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ
Posted On: 13 Jul 2024, 06:27 PM
ಪಡುಬಿದ್ರಿ : ತೆಂಕ ಎರ್ಮಾಳು ಅಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಭರತ್ ಶೆಟ್ಟಿಗಾರ್ ಮರು ಆಯ್ಕೆಯಾಗಿದ್ದಾರೆ. ತೆಂಕ ಎರ್ಮಾಳು ಅಳ್ವೆಕೋಡಿ ಬಬ್ಬುಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸುಮಾರು ಮೂವತ್ತೈದು ಮಂದಿ ಸದಸ್ಯರನ್ನು ಹೊಂದಿರುವ ಈ ಸಂಸ್ಥೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿ ಜನಾನುರಾಗಿಯಾಗಿದೆ. ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕೋಶಾಧಿಕಾರಿಯಾಗಿ ಲಿಯಾಕತ್ ಆಲಿ ಹಾಗೂ ಜತೆ ಕಾರ್ಯದರ್ಶಿಯಾಗಿ ನದೀಮ್ ಎರ್ಮಾಳ್ ಮರು ಆಯ್ಕೆಯಾಗಿದ್ದಾರೆ.
ಪಡುಬಿದ್ರಿ : ಮಗಳ ಖಾಸಗಿ ವಿಡಿಯೋ ಹರಿಬಿಟ್ಟ ತಂದೆ ಪತ್ನಿಯಿಂದ ದೂರು ದಾಖಲು
Posted On: 13 Jul 2024, 06:20 PM
ಪಡುಬಿದ್ರಿ : ಸ್ವಂತ ಮಗಳ ಖಾಸಗಿ ವೀಡಿಯೋಗಳನ್ನು ತಂದೆಯೋರ್ವ ವಾಟ್ಸಾಪ್ ಗ್ರೂಪ್ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ಆರೋಪಿಸಿ ಆತನ ಪತ್ನಿ ಪತಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಆರೋಪಿ ಸಮಾಜ ಸೇವಕ ಆಸೀಫ್ ಆಪತ್ಭಾಂದವನ ಮಗಳು ತೀರ್ಥಹಳ್ಳಿಯ ತೌಸಿಫ್ ಎಂಬ ಸಂಬಂಧಿ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇದು ಇಷ್ಟವಾಗದ ಆರೋಪಿ ತೌಸಿಫ್ ನನ್ನು ಮನೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದ. ಅವರು ತೌಸಿಫ್ ಮತ್ತು ಅವರ ಮಗಳ ಫೋನ್ ಅನ್ನು ಕಸಿದುಕೊಂಡಿದ್ದು ಅದರ ಎಲ್ಲಾ ವೀಡಿಯೊಗಳನ್ನು ಆತನ ಮೊಬೈಲ್ಗೆ ವರ್ಗಾಯಿಸಿ ಸಾಮಾಜಿಕಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದಕ್ಕೆ ಪತ್ನಿ ಆಕ್ಷೇಪ ವ್ಯಕ್ತಪಡಿಸಿದಾಗ ಆರೋಪಿ ಆಕೆಯ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಪತ್ನಿ ಉಡುಪಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಆಸೀಫ್ ಆಪತ್ಭಾಂದವ ಮಗಳು ಫಿನೈಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆಕೆಯನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿರ್ವ ರೋಟರಿಯಿಂದ ಕಳತ್ತೂರು ಪಿ ಕೆ ಎಸ್ ಪ್ರೌಢ ಶಾಲೆಯ ಶಿಕ್ಷಕರಿಗೆ ಗೌರವಾರ್ಪಣೆ
Posted On: 12 Jul 2024, 08:00 PM
ಕಾಪು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ ಹಿನ್ನೆಲೆಯಲ್ಲಿ ಕಳತ್ತೂರು ಪಿ ಕೆ ಎಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮತ್ತು ಅಧ್ಯಾಪಕ ವೃಂದದವರಿಗೆ ಶಿರ್ವ ರೋಟರಿ ಕ್ಲಬ್ ವತಿಯಿಂದ ಗೌರವಾರ್ಪಣೆಯು ಶುಕ್ರವಾರ ನಡೆಯಿತು.
ಪಡುಬಿದ್ರಿ : ಎಸ್ ಬಿ ವಿ ಪಿ ಹಿರಿಯ ಪ್ರಾಥಮಿಕ ಶಾಲೆ, ಗಣಪತಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
Posted On: 12 Jul 2024, 07:56 PM
ಪಡುಬಿದ್ರಿ : ಪರಿಸರದ ಶುದ್ಧತೆ ಮತ್ತು ಉತ್ತಮ ಆರೋಗ್ಯದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮವು ಪಡುಬಿದ್ರಿ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನಡೆಯಿತು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಿನಯಾ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಡೆಂಗ್ಯೂ , ಮಲೇರಿಯಾ , ಚಿಕನ್ ಗುನ್ಯಾ , ಇಲಿ ಜ್ವರ ಮೊದಲಾದ ರೋಗಗಳು ಮಳೆಗಾಲದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ. ಮನೆಯ ಸುತ್ತ ಮುತ್ತ ಸೊಳ್ಳೆಗಳು ಉತ್ಪತ್ತಿಯಾಗದಂತೆ, ಮಳೆಯ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ರೋಗದ ಲಕ್ಷಣಗಳು ಕಂಡು ಬಂದರೆ, ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು. ಪ್ರೌಢಶಾಲೆಯ ಅಧ್ಯಾಪಕರಾದ ಡಾ. ರಾಘವೇಂದ್ರ ರಾವ್ ಅವರು ಮಾತನಾಡಿ ಉತ್ತಮ ಆರೋಗ್ಯಕ್ಕಾಗಿ ಎಲ್ಲ ಬಗೆಯ ಆರೋಗ್ಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕುಟುಂಬದ ಸದಸ್ಯರಿಗೂ, ಪರಿಸರದ ಜನರಿಗೂ ಈ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಅಶೋಕ ಕೆ., ಆಶಾ ಕಾರ್ಯಕರ್ತೆ ರಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಶಿಲ್ಪಾ ಕೆ.ಆರ್. ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲೆಯ ಶಿಕ್ಷಕಿ ಕುಮಾರಿ ಪ್ರತೀಕ್ಷಾ ವಂದಿಸಿದರು. ಉಭಯ ಸಂಸ್ಥೆಗಳ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜುಲೈ 14 : ಹೆಜಮಾಡಿಯಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
Posted On: 12 Jul 2024, 03:31 PM
ಹೆಜಮಾಡಿ : ದ್ವಿತೀಯ ಬಾರಿಗೆ ಕರ್ನಾಟಕ ಸರಕಾರದ ವಿಧಾನಪರಿಷತ್ ಸದಸ್ಯರಾಗಿ ಅಯ್ಕೆಯಾದ ಐವನ್ ಡಿಸೋಜರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಜುಲೈ 14, ಆದಿತ್ಯವಾರ ಸಂಜೆ 4 ಗಂಟೆಗೆ ಹೆಜಮಾಡಿ ನಾರಾಯಣಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಜಮಾಡಿ ಹಾಗು ಆಸುಪಾಸಿನ ಗ್ರಾಮಗಳ ಸಾರ್ವಜನಿಕರು ಹಾಗು ಸಂಘ ಸಂಸ್ಥೆಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಪು ವಿಧಾನ ಸಭಾ ಕ್ಷೇತ್ರ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಇನ್ನಿತರರು ಭಾಗವಹಿಸಲಿದ್ದಾರೆಂದು ಸಾರ್ವಜನಿಕ ಅಭಿನಂದನಾ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
