Updated News From Kaup
ಮೂಡಬೆಟ್ಟು : ಉಸಿರಿಗಾಗಿ ಹಸಿರು ಕಾರ್ಯಕ್ರಮ
Posted On: 07 Jul 2024, 07:39 PM
ಕಟಪಾಡಿ : ಉಸಿರಿಗಾಗಿ ಹಸಿರು ಸಂಘಟನೆ ಆಯೋಜಿಸುವ "ಉಸಿರಿಗಾಗಿ ಹಸಿರು" ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರವಿವಾರ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ, ಸುಜಲ ಪೂಜಾರಿ, ಪವಿತ್ರ ಶೆಟ್ಟಿ, ಕವಿತಾ ಸುವರ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಕ್ತಿ ಕೇಂದ್ರ ಪ್ರಮುಖ್ ನಿತಿನ್ ವಿ ಶೇರಿಗಾರ್, ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಡಾ. ನಾನಾಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನ ಸದಸ್ಯರಾದ ಸಂತೋಷ್ ಎಮ್ ಶೆಟ್ಟಿಗಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಬ್ರಹ್ಮಾವರ : ಆಸರೆ ರುಡ್ ಸೆಟ್ ನೇತೃತ್ವದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ
Posted On: 07 Jul 2024, 07:32 PM
ಬ್ರಹ್ಮಾವರ : ಇಲ್ಲಿನ ಆಸರೆ ರುಡ್ ಸೆಟ್ ಸಂಘಟನೆಯ ನೇತೃತ್ವದಲ್ಲಿ ರುಡ್ ಸೆಟ್ ಆವರಣದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. ಪರಿಸರದ ಬಗೆಗಿನ ಜಾಗೃತಿ ಹಾಗೂ ಪರಿಸರ ಸಂರಕ್ಷಣೆ ಪ್ರತಿ ವ್ಯಕ್ತಿಯ ಜವಾಬ್ದಾರಿ ಎನ್ನುವ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂಧರ್ಭದಲ್ಲಿ ಆಸರೆ ಅಧ್ಯಕ್ಷರಾದ ಹರಿಣಿ ರಾವ್, ಕೋಶಾದಿಕಾರಿ ವೆಂಕಟೇಶ ನಾಯ್ಕ್, ಗೌರವ ಸಲಹೆಗಾರರಾದ ರಾಜೇಂದ್ರ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಮಹೇಶ್ ಕುಮಾರ್ ಮಲ್ಪೆ, ಕಾರ್ಯದರ್ಶಿ ಸೂರಜ್ ಹಾವಂಜೆ, ಉಪಾಧ್ಯಕ್ಷರಾದ ಕುಶ ಕುಮಾರ್, ಸದಸ್ಯರಾದ ರಾಜಲಕ್ಷ್ಮಿ, ಕಾರ್ಯಕಾರಿ ಸಮಿತಿ ಸದಸ್ಯರು , ಉಪಸ್ಥಿತಿಯಿದ್ದರು. ರುಡ್ ಸೆಟ್ ಸಿಬ್ಬಂದಿ ಪ್ರಥ್ವಿರಾಜ್, ರುಡ್ ಸೆಟ್ ವಿಧ್ಯಾರ್ಥಿಗಳು ಸಹಕರಿಸಿದರು.
ಶಿರ್ವ ಸಂತ ಮೇರಿ ಪ.ಪೂ ಕಾಲೇಜು ಹಳೆ ವಿದ್ಯಾರ್ಥಿ ಸಂಘ : 2.50 ಲಕ್ಷ ವಿದ್ಯಾರ್ಥಿವೇತನ ವಿತರಣೆ
Posted On: 07 Jul 2024, 06:37 PM
ಶಿರ್ವ : ಸುವರ್ಣ ವರ್ಷದ ಸಂಭ್ರಮದಲ್ಲಿರುವ ಶಿರ್ವ ಸಂತ ಮೇರಿ ಪ.ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತರಾಗಿರುವ ಪ್ರಸ್ತುತ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಈ ಸಂಸ್ಥೆಯಲ್ಲಿ ಕಲಿತು ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2 ಲಕ್ಷ 50 ಸಾವಿರ ರೂ. ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಸಂತಮೇರಿ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಧರ್ಮಗುರುಗಳಾದ ರೇ.ಫಾ ಡಾ ಲೆಸ್ಲಿ ಡಿ'ಸೋಜ ರವರು ವಿದ್ಯಾರ್ಥಿವೇತನ ವಿತರಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ವಿದ್ಯಾರ್ಥಿ ವೇತನವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿ ಶುಭಹಾರೈಸಿದರು. ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಪರವಾಗಿ ನಿತಿನ್ ವಾಗ್ಲೆ, ಆಶ್ಲೇಶ್ ಪ್ರಭು ಮಾತನಾಡಿದರು. ಕಾಲೇಜು ಪ್ರಾಂಶುಪಾಲರಾದ ಜಯಶಂಕರ್ ರವರು ಸಂಘದ ಕಾರ್ಯಚಟುವಟಿಕೆ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಿರ್ವ ಚರ್ಚ್ ನ ಪಾಲನ ಮಂಡಳಿಯ ಮೆಲ್ವಿನ್ ಅರಾನ್ನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ನೊರ್ಬಾಟ್ ಮಾಚದೊರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತ ಕೋರಿದರು. ಸಂಘದ ಕೋಶಾಧಿಕಾರಿ ಡಾ. ಗುರುರಾಜ್ ರವರು ವಿದ್ಯಾರ್ಥಿವೇತನ ಪಡೆದವರ ವಿವರ ವಾಚಿಸಿದರು. ಕಾರ್ಯದರ್ಶಿ ಮೋಹನ್ ನೊರೊನ್ಹಾ ವಂದಿಸಿದರು. ಸಂಘದ ಕಾರ್ಯಕಾರಿ ಸಮಿತಿಯ ಕೆ ಆರ್ ಪಾಟ್ಕರ್ ರವರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಹೆತ್ತವರು ಉಪಸ್ಥಿತರಿದ್ದರು.
ಪಡುಬಿದ್ರಿ : ರೋಟರಿ ಕ್ಲಬ್ ಪದಗ್ರಹಣ
Posted On: 07 Jul 2024, 06:07 PM
ಪಡುಬಿದ್ರಿ : ನಾಯಕತ್ವ ಎನ್ನುವುದು ಪದವಿಯಲ್ಲ ಅದು ಸವಾಲಿನ ಪ್ರಕ್ರಿಯೆಯಾಗಿದೆ. ಸಮಾನತೆ, ಶಿಸ್ತಿನ ಮೂಲಕ ಸರ್ವರನ್ನು ಸೇರಿಸಿಕೊಂಡು ಕಾರ್ಯಪ್ರವೃತ್ತರಾದಾಗ ಯಾವುದೇ ಸಂಸ್ಥೆ ಯಶಸ್ಸನ್ನು ಸಾಧಿಸಲು ಸಾಧ್ಯ. ಒಂದು ಕಾಲದಲ್ಲಿ ಮಹಿಳೆಯರಿಗೆ ಅವಕಾಶವಿಲ್ಲದ ರೋಟರಿ ಸಂಸ್ಥೆಯಲ್ಲಿ ನಂತರದ ದಿನಗಳಲ್ಲಿ ಮಹಿಳೆಯರ ಕೊಡುಗೆಗಳಿಂದ ರೋಟರಿ ಸಂಸ್ಥೆ ಶ್ರೀಮಂತವಾಯಿತು ಎಂದರೆ ತಪ್ಪಾಗಲಾರದು ಎಂದು ವಲಯ-9ರ ನಿಕಟಪೂರ್ವ ಸಹಾಯಕ ಗವರ್ನರ್ ರೋ.ಡಾ . ಪ್ರೀತಿ ಮೋಹನ್ ಹೇಳಿದರು. ಅವರು ಶನಿವಾರ ಪಡುಬಿದ್ರಿಯ ಸುಜಾತ ಅಡಿಟೋರಿಯಂನಲ್ಲಿ ಜರಗಿದ ಪಡುಬಿದ್ರಿ ರೋಟರಿ ಸಂಸ್ಥೆಯ 2024 -25ನೇ ಸಾಲಿನ ಪದಗ್ರಹಣ ಅಧಿಕಾರಿಯಾಗಿ ಪದಗ್ರಹಣ ನೆರವೇರಿಸಿ ಮಾತನಾಡಿದರು. ನೂತನ ಅಧ್ಯಕ್ಷರಾಗಿ ತಸ್ನೀನ್ ಅರಾ ಹಾಗೂ ಕಾರ್ಯದರ್ಶಿಯಾಗಿ ಹೇಮಲತಾ ಸುವರ್ಣ ಆಯ್ಕೆಗೊಂಡರು. ವೇದಿಕೆಯಲ್ಲಿ ಸಹಾಯಕ ಗವರ್ನರ್ ಅನಿಲ್ ಡೇಸಾ, ಮಾಜಿ ಸಹಾಯಕ ಗವರ್ನರ್ ಪಿ ಎಚ್ ಎಫ್ ಶೈಲೇಂದ್ರ ರಾವ್ ಕೆ., ಝೋನಲ್ ಲೆಫ್ಟಿನೆಂಟ್ ಮೆಲ್ವಿನ್ ಡಿಸೋಜ, ಮಾಜಿ ಝೋನಲ್ ಲೆಫ್ಟಿನೆಂಟ್ ರಿಯಾಝ್ ಮುದರಂಗಡಿ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ, ಕಾರ್ಯದರ್ಶಿ ಪವನ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬಾಬುರಾಯ ಆಚಾರ್ಯ ನಿರೂಪಿಸಿದರು.
ವೈದ್ಯಕೀಯ ಪ್ರತಿನಿಧಿ ಸಂಘ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ : 22 ನೇ ವಷ೯ದ ವೈದ್ಯರ ದಿನಾಚರಣೆ
Posted On: 07 Jul 2024, 05:50 PM
ಉಡುಪಿ : ಸಮಾಜದಲ್ಲಿ ಅತ್ಯಂತ ಗೌರವದಿಂದ ನಾವೆಲ್ಲರೂ ನೋಡುವ ವ್ಯಕ್ತಿಗಳೆಂದರೆ ವೈದ್ಯರು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪುರಭವನದಲ್ಲಿ ಉಡುಪಿ ಜಿಲ್ಲಾ ವೈದ್ಯಕೀಯ ಪ್ರತಿನಿಧಿಗಳ ಸಂಘ (ಕೆ.ಎಸ್.ಎಂ, ಎಸ್.ಆರ್.ಎ) ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ವತಿಯಿಂದ ನಡೆದ 22 ನೇ ವಷ೯ದ ವೈದ್ಯರ ದಿನಾಚರಣೆ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರನ್ನು ನಾವು ದೇವರ ಸಮಾನರಂತೆ ಕಾಣುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ವೈದ್ಯರುಗಳ ಮೇಲೆ ನಡೆಯುತ್ತಿರುವ ಹಲ್ಲೆ, ದೌಜ೯ನ್ಯಗಳು ಖಂಡನೀಯ ಎಂದರು. ಮುಖ್ಯ ಅತಿಥಿಯಾಗಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ| ರಾಜಲಕ್ಮೀ ಮಾತನಾಡಿ, ವೈದ್ಯರು ತಮ್ಮ ಕುಟುಂಬಕ್ಕೆ ಸರಿಯಾದ ಸಮಯ ನೀಡದಿದ್ದರೂ ರೋಗಿಗಳನ್ನು ತನ್ನ ಕುಟುಂಬವೆಂದು ತಿಳಿದು ಉತ್ತಮವಾದ ಸೇವೆಯನ್ನು ಸಲ್ಲಿಸುತ್ತಾರೆ ಎಂದು ಹೇಳಿದರು. ಉಡುಪಿ ಜಿಲ್ಲಾ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ರಮೇಶ್ ನಾಯಕ್ ಮಾತನಾಡಿ, ಸಮಾಜದಲ್ಲಿ ವೈದ್ಯರು ನಮಗೆಲ್ಲ ದೇವರ ಸಮಾನ ಹೀಗಾಗಿ ವೈದ್ಯರು ನಮ್ಮ ಜೀವನದ ಅವಿಭಾಜ್ಯ ಅಂಗ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಸುಂದರ್ ಪೂಜಾರಿ ಮೂಡುಕುಕ್ಕುಡೆ ವಹಿಸಿದ್ದರು. ವೈದ್ಯಕೀಯ ಪ್ರತಿನಿಧಿ ಸಂಘದ ಅಧ್ಯಕ್ಷ ಸತೀಶ ಹೆಗ್ಡೆ, ಜಯಂಟ್ಸ್ ಯೂನಿಟ್ ಡೈರೆಕ್ಟರ್ ವಿವೇಕಾನಂದ ಕಾಮತ್ ಮುಂತಾದವರಿದ್ದರು. ಗೌರವಾರ್ಪಣೆ : ಸಮಾಜದಲ್ಲಿ ಸಾಧನೆ ಮಾಡಿದ ಹಿರಿಯ ವೈದ್ಯರುಗಳಾದ ಡಾ| ನವೀನ್ ಸಾಲಿನ್ಸ್ ಕೆಎಂಸಿ ಮಣಿಪಾಲ, ಡಾ| ಛಾಯಲತಾ, ಡಾl ಎಂ ಎನ್ ಅಡಿಗ, ಡಾ| ನಾಗಭೂಷಣ್ ಉಡುಪ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಈ ಸಂದಭ೯ದಲ್ಲಿ ಇತ್ತೀಚೆಗೆ ನಿಧನರಾದ ಹಿರಿಯ ವೈದ್ಯ ಡಾI ಎಂ.ರಾಜಾರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಯoಟ್ಸ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು ಪ್ರಸ್ತಾವನೆಗೈದರು. ಶ್ರೀಕಾಂತ ಪೂಜಾರಿ, ರಾಘವೇಂದ್ರ ಪ್ರಭು ಕವಾ೯ಲು, ಸುಬ್ರಮಣ್ಯ ಆಚಾಯ೯ ಪರಿಚಯಿಸಿದರು. ಮಿಲ್ಟನ್ ಒಲಿವೇರಾ ವರದಿ ವಾಚಿಸಿದರು. ರಾಘವೇಂದ್ರ ಶೆಟ್ಟಿ ನಿರೂಪಿಸಿದರು.ವೈದ್ಯಕೀಯ ಪ್ರತಿನಿಧಿ ಸಂಘದ ಕಾಯ೯ದಶಿ೯ ಪ್ರಸನ್ನ ಕಾರಂತ್ ವಂದಿಸಿದರು. ಡೊನಾಲ್ಡ್ ರವರಿಂದ ಸಂಗೀತ ಕಾಯ೯ಕ್ರಮ ನಡೆಯಿತು.
ಪಡುಬಿದ್ರಿ : ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ವತಿಯಿಂದ ಪ್ರಕಾಶಾಭಿನಂದನೆ ಕಾರ್ಯಕ್ರಮ
Posted On: 07 Jul 2024, 05:23 PM
ಪಡುಬಿದ್ರಿ : ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಪಡುಬಿದ್ರಿ ವತಿಯಿಂದ "ಪ್ರಕಾಶಾಭಿನಂದನೆ" ಕಾರ್ಯಕ್ರಮ ರವಿವಾರ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ನಾವಡ, ಉಪಾಧ್ಯಕ್ಷರಾದ ರವೀಂದ್ರನಾಥ ಜಿ ಹೆಗ್ಡೆ, ಅರ್ಚಕರಾದ ಪದ್ಮನಾಭ ಭಟ್, ಗುರುರಾಜ್ ಭಟ್, ವನದುರ್ಗ ಟ್ರಸ್ಟ್ ಅಧ್ಯಕ್ಷರಾದ ಪದ್ಮನಾಭ ಕೋರ್ನಯ, ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಅಶೋಕ್ ಕೋಟೆಕಾರ್, ಮುಕ್ತೇಸರರಾದ ಭವಾನಿ ಶಂಕರ್ ಹೆಗ್ಡೆ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಸ್ವರ್ಣ ಗದ್ದುಗೆ ಸಮಿತಿಯ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪಡುಬಿದ್ರಿ : ಭಾರತೀಯ ಅಂಚೆ ಇಲಾಖೆ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ
Posted On: 07 Jul 2024, 05:01 PM
ಪಡುಬಿದ್ರಿ : ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಮತ್ತು ಅರಣ್ಯ ಇಲಾಖೆ ಉಡುಪಿ ವಲಯ ಇವರ ಸಹಯೋಗದಲ್ಲಿ "ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದ ಪ್ರಯುಕ್ತ ಪಡುಬಿದ್ರಿ ನೂತನ ಅಂಚೆ ಕಚೇರಿಯ ಆವರಣದಲ್ಲಿ ವನಮಹೋತ್ಸವ ಆಚರಿಸಲಾಯಿತು. ಅಂಚೆ ಅಧೀಕ್ಷಕ ರಮೆಶ್ ಪ್ರಭು ವನಮಹೋತ್ಸವಕ್ಕೆ ಚಾಲನೆ ನೀಡಿ, ಎಲ್ಲರೂ ಗಿಡ ನೆಟ್ಟು ತಾಯಿಯಂತೆ ಸಂರಕ್ಷಿಸಬೇಕು ಎಂದು ಕರೆ ಕೊಟ್ಟರು. ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ಮಾತನಾಡಿ, ಅಂಚೆ ಇಲಾಖೆಯು ಜನರ ಹಣ ಉಳಿಸಿ ಜನರಿಗೆ ಕಾಸಿನ ಭಾಗ್ಯ ಕೊಟ್ಟರೆ, ಅರಣ್ಯ ಇಲಾಖೆಯು ಕಾಡು ಉಳಿಸಿ ಜನರಿಗೆ ಆರೋಗ್ಯ ಭಾಗ್ಯ ನೀಡುತ್ತದೆ ಎಂದರು. ಅರಣ್ಯ ಇಲಾಖೆಯ ಡಿಎಫ್ಒ ಜೀವನ್ ದಾಸ್ ಶೆಟ್ಟಿ ಮಾತನಾಡಿ, ಮರಗಳನ್ನು ಕಡಿದು, ಕಾಂಕ್ರೀಟಿಕರಣದಿಂದಾಗಿ ನೀರು ಇಂಗದೆ ಪ್ರವಾಹ ಭೀತಿ ಸೃಷ್ಟಿಸುತ್ತಿದೆ. ಗಿಡ ನೆಟ್ಟಾಗ ಪೃಕೃತಿ ಸಮತೋಲದಿಂದಿರುತ್ತದೆ ಎಂದರು. ಪಡುಬಿದ್ರಿ ಅಂಚೆ ಪಾಲಕ ಗಣೇಶ್ ಭಟ್ ಸ್ವಾಗತಿಸಿದರು. ಅಂಚೆ ಸಹಾಯಕ ವಂದಿಸಿದರು. ಅಂಚೆ ಸಹಾಯಕ ರಾಮಕೃಷ್ಣ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಗಿಡಗಳನ್ನು ಶಾಲಾ ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ವಿತರಿಸಲಾಯಿತು.
ಇನ್ನಂಜೆ : ಪಾಂಗಾಳ ಗ್ರಾಮದ ಬೀಡುವಿನ ಗದ್ದೆಯ ಕೃತಕ ನೆರೆ - ಖಾಸಗಿ ಜಮೀನಿನ ತಡೆಗೋಡೆ ತೆರವು
Posted On: 06 Jul 2024, 10:35 PM
ಇನ್ನಂಜೆ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ಗ್ರಾಮದ ಬೀಡುವಿನ ಗದ್ದೆಯ ಕೃತಕ ನೆರೆಯ ತೊಂದರೆಗೆ ತಾತ್ಕಾಲಿಕ ಮುಕ್ತಿ ಸಿಕ್ಕಿದೆ. ಉಡುಪಿ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಖಾಸಗಿ ಜಮೀನಿನಲ್ಲಿ ಹಾಕಿದ ತಡೆಗೋಡೆಯನ್ನು ತಾತ್ಕಾಲಿಕವಾಗಿ ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಆರ್ ಇವರು ಸ್ಥಳಕ್ಕೆ ಬಂದು ತೆರವುಗೊಳಿಸಿದರು. ಮುಂದಿನ ದಿನದಲ್ಲಿ ಖಾಸಗಿ ಜಮೀನಿನವರ ಜೊತೆಗೆ ಇನ್ನಂಜೆ ಗ್ರಾಮ ಪಂಚಾಯತ್ ನಲ್ಲಿ ನ್ಯಾಯಂಗ ಸಮಿತಿ ಸಭೆಯನ್ನು ತಹಸೀಲ್ದಾರ್ ಮತ್ತು ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೊತೆಗೆ ಸಭೆ ನಡೆಸಿ ಇದಕ್ಕೆ ಶಾಶ್ವತ ಪರಿಹಾರ ಮಾಡಲಾಗುವುದು ಎಂದು ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಇನ್ನಂಜೆ ತಿಳಿಸಿದರು. ಈ ಸಂದರ್ಭ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿ ಸಿಲ್ವಾ, ಕಾಪು ಠಾಣಾಧಿಕಾರಿ ಖಾದರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಕಾರ್ಯದರ್ಶಿ ಚಂದ್ರಶೇಖರ್, ಕಂದಾಯಾಧಿಕಾರಿ ಶಬೀರ್, ಗ್ರಾಮ ಲೆಕ್ಕಿಗ ಅವಿನಾಶ್, ಇನ್ನಂಜೆ ಪಂಚಾಯತ್ ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಸದಸ್ಯರುಗಳಾದ ಸೋನು ಪಾಂಗಾಳ, ರಾಜೇಶ್ ಆಚಾರ್ಯ, ದಿವೇಶ್ ಶೆಟ್ಟಿ, ಸುರೇಶ್ ಶೆಟ್ಟಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಮಾಜಿ ಸದಸ್ಯರಾದ ನಾಗೇಶ್ ಭಂಡಾರಿ, ಮಹೇಂದ್ರ ಶೆಟ್ಟಿ ಪಾಂಗಾಳ ಉಪಸ್ಥಿತರಿದ್ದರು. ತಡೆಗೋಡೆ ತೆರವಿಗೆ ದಿನಕರ್ ಪಾಂಗಾಳ, ಲೋಕೇಶ್ ಸಹಕರಿಸಿದರು.
ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ
Posted On: 06 Jul 2024, 05:43 PM
ಕಾಪು : ರಕ್ಷಕ-ಶಿಕ್ಷಕ ಸಂಘವು ವಿದ್ಯಾಸಂಸ್ಥೆಯ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಹೆತ್ತವರಾದ ತಾವು ಮಕ್ಕಳಲ್ಲಿ ಶಿಸ್ತನ್ನು ಬೆಳೆಸುವಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದೀರಿ. ಪಾಠದ ಜೊತೆಗೆ ಇತರ ವಿಷಯಗಳ ಕಲಿಕೆಗೆ ಪ್ರೋತ್ಸಾಹಿಸುತ್ತಿದ್ದೀರಿ. ಮುಂದಿನ ದಿನಗಳಲ್ಲಿ ಇಂತಹ ಸಹಕಾರವನ್ನು ನೀಡಿ ಎಂದು ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿ ಹೇಳಿದರು. ಅವರು ಶನಿವಾರ ಶಾಲಾ ಸಭಾಂಗಣದಲ್ಲಿ ಜರಗಿದ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಗೇಬ್ರಿಯಲ್ ಮಸ್ಕರೇನ್ಹಸ್ ಹೆತ್ತವರನ್ನು ಉದ್ದೇಶಿಸಿ ಮಾತನಾಡಿದರು. ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿದ್ಯಾಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ಶಿವಣ್ಣ ಬಾಯಾರ್ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆಮಾಡಿದರು. ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘಕ್ಕೆ ಆಯ್ಕೆಯಾದ ಪ್ರೌಢ ಮತ್ತು ಕಾಲೇಜು ವಿಭಾಗದ ಅಧ್ಯಕ್ಷೆ ಮಂಜುಳ ಶೆಟ್ಟಿ ಮತ್ತು ಪ್ರಾಥಮಿಕ ವಿಭಾಗದ ಅಧ್ಯಕ್ಷೆ ಸ್ವಾತಿ, ಆಡಳಿತಾಧಿಕಾರಿಯಾದ ಆಲ್ಬನ್ ರೊಡ್ರಿಗಸ್ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ನೀಲಾನಂದ್ ನಾಯ್ಕ್ ಸ್ವಾಗತಿಸಿ, ಫಲಿತಾಂಶ ವಿಶ್ಲೇಷಣೆ ಹಾಗೂ ವರದಿಯನ್ನು ವಾಚಿಸಿದರು. ಸಂಘದ ಲೆಕ್ಕಪತ್ರವನ್ನು ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್ ಮಂಡಿಸಿದರು. ಉಪನ್ಯಾಸಕಿ ಸುಷ್ಮಾ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಉದಯಕುಮಾರ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಭಾಕರ ಶೆಟ್ಟಿ ವಂದಿಸಿದರು.
ನಂದಿಕೂರು ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಪರಿಸರ ಮಾಲಿನ್ಯ, ಆರೋಗ್ಯ ಸಮಸ್ಯೆ : ಪ್ರತಿಭಟನೆಗೆ ನಿರ್ಧಾರ
Posted On: 06 Jul 2024, 06:35 AM
ಪಡುಬಿದ್ರಿ : ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಂದಿಕೂರು ವಿಶೇಷ ಆರ್ಥಿಕ ವಲಯ ಬಳಿ ಸ್ಥಾಪನೆಯಾಗಿರುವ ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಹೊರಸೂಸುವ ದುರ್ವಾಸನೆಯಿಂದ ಪರಿಸರ ಮಾಲಿನ್ಯ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರು ತ್ತಿರುವ ಹಿನ್ನೆಲೆಯಲ್ಲಿ ಜುಲೈ 30ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು. ಪ್ರತಿಭಟನೆಗೂ ಮೊದಲು ಪಲಿಮಾರು ಗ್ರಾಮ ಪಂಚಾಯಿತಿಗೆ ವಿಶೇಷ ಗ್ರಾಮಸಭೆ ಕರೆದು ಕಂಪೆನಿ ವಿರುದ್ಧ ನಿರ್ಣಯ ಕೈಗೊಳ್ಳುವ ಬಗ್ಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಅದರೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತಿಯಾದ ಪಲಿಮಾರು, ಪಡುಬಿದ್ರಿ, ಎಲ್ಲೂರು, ಇನ್ನಾ, ಹೆಜಮಾಡಿ ಗ್ರಾಮ ಪಂಚಾಯಿತಿಯಲ್ಲೂ ವಿಶೇಷ ಗ್ರಾಮಸಭೆ ಕರೆದು ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ಕಂಪೆನಿ ಎದುರು ಪ್ರತಿಭಟನೆ ನಡೆಸಲು ನಿರ್ಣಯಿಸಲಾಯಿತು. ಕಾನೂನು ಹೋರಾಟದ ಬಗ್ಗೆ ಊರಿನ ಹಿರಿಯರು, ಅನುಭವಿಗಳು, ವಕೀಲರನ್ನು ಒಳಗೊಂಡಂತೆ ಸಮಿತಿ ರಚಿಸುವುದು ಮತ್ತು ಸರಕಾರದ ಮತ್ತು ಇಲಾಖಾ ಅಧಿಕಾರಿಗಳ ವಿರುದ್ಧ ಒತ್ತಡ ಹೇರುವ ಬಗ್ಗೆಯೂ ತೀರ್ಮಾನಿಸಲಾಯಿತು. ಈ ಸಂದರ್ಭ ದಿನೇಶ್ ಪಲಿಮಾರ್, ನಂದಿಕೂರು ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧ್ವರಾಯ ಭಟ್, ಪ್ರೇಮಾನಂದ ಕಲ್ಮಾಡಿ, ನವೀನ್ ಚಂದ್ರಶೆಟ್ಟಿ, ನವೀನ್ ಚಂದ್ರ ಸುವರ್ಣ, ಗಾಯತ್ರಿ ಪ್ರಭು, ಸಂದೀಪ್ ಪಲಿಮಾರ್, ಲಕ್ಷ್ಮಣ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸುಧೀರ್ ಕರ್ಕೇರ, ನಾಗೇಶ್ ರಾವ್, ಜಿತೇಂದ್ರ ಶೆಟ್ಟಿ, ಮಧುಕರ ಸುವರ್ಣ, ಶಶಿಕಾಂತ್ ಪಡುಬಿದ್ರಿ, ಶ್ರೀನಿವಾಸ ಶರ್ಮ, ರವೀಂದ್ರ ಪ್ರಭು, ಸತೀಶ್ ಗುಡ್ಡೆಚ್ಚಿ, ಚಂದ್ರಹಾಸ್ ಶೆಟ್ಟಿ, ಅಮರನಾಥ್ ಶೆಟ್ಟಿ, ದೀಪಕ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
