Updated News From Kaup
ರಸ್ಸೆಲ್ ಮಾರ್ಟಿಸ್ CA ಪರೀಕ್ಷೆಯಲ್ಲಿ ಉತ್ತೀರ್ಣ
Posted On: 12 Jul 2024, 03:21 PM
ಕಾಪು : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಅಂತಿಮ CA ಪರೀಕ್ಷೆಯಲ್ಲಿ ರಸ್ಸೆಲ್ ಮಾರ್ಟಿಸ್ ಉತ್ತೀರ್ಣರಾಗಿರುತ್ತಾರೆ. ಇವರು ಮುಂಬೈ ವಿಶ್ವವಿದ್ಯಾಲಯದಿಂದ ಅಕೌಂಟಿಂಗ್ ಮತ್ತು ಫೈನಾನ್ಸ್ ವಿಭಾಗದಲ್ಲಿ ಪದವಿ ಪಡೆದಿರುತ್ತಾರೆ. ಇವರು ಕಾಪು ತಾಲ್ಲೂಕಿನ ಕಟಪಾಡಿಯ ಅಚ್ಚಡದ ರೊನಾಲ್ಡ್ ಮಾರ್ಟಿಸ್ ಹಾಗೂ ಹಾರಿಯೆಟ್ ಮಾರ್ಟಿಸ್ ರವರ ಸುಪುತ್ರ.
ಕಾಪು ಮಾರಿಯಮ್ಮನ ದರುಶನ ಪಡೆದ ಕೇಂದ್ರ ಸರಕಾರದ ಅಧಿಕಾರಿಗಳು
Posted On: 12 Jul 2024, 03:09 PM
ಕಾಪು : ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಾದ ಹಿರಿಯ ಲೆಕ್ಕಾಧಿಕಾರಿ ರಾಜೇಶ್ ಕುಮಾರ್, ಆಡಿಟ್ ಕನ್ಸಲ್ಟೆಂಟ್ ಆರ್ . ಕೆ . ಖುರನ ಇವರು ಶುಕ್ರವಾರ ಬೆಳಿಗ್ಗೆ ಕಾಪು ಮಾರಿಯಮ್ಮನ ದರುಶನ ಪಡೆದರು. ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ನಂತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾಮಗಾರಿಯನ್ನು ವೀಕ್ಷಿಸಿದ ಅಧಿಕಾರಿಗಳು ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಶಾಂತ್ ರಾವ್, ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಕಾಪು, ಸಹಾಯಕ ನಿರ್ದೇಶಕರು ಬ್ರಹ್ಮಾವರ, ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಉಡುಪಿ ಜಿಲ್ಲಾ ನರೇಗಾ ಸಿಬ್ಬಂದಿ, ಆರ್ಥಿಕ ಸಮಿತಿಯ ಸಿದ್ಧಿ ಧಾತ್ರಿ ತಂಡದ ಸಂಚಾಲಕ ಶ್ರೀಧರ ಕಾಂಚನ್ ಮತ್ತು ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.
ಬಾಳೆಬೈಲು ಹಿರಿಯ ಪ್ರಾಥಮಿಕ ಶಾಲಾ ವಿವೇಕ ಕೊಠಡಿ ಉದ್ಘಾಟನೆ
Posted On: 12 Jul 2024, 03:04 PM
ಕಾಪು : 13.90 ಲಕ್ಷ ರೂಪಾಯಿ ಅನುದಾನದ ಬಾಳೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿಯನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಸಚಿನ್ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸುಮತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಪ್ರಕಾಶ್, ಬ್ರಹ್ಮಾವರ ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ದೂಪದಕಟ್ಟೆ ಸಿ.ಆರ್.ಪಿ ಶಾಂತಾ, ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಸೆರ್ವೇಗಾರ್, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಹಾಗೂ ಗುತ್ತಿಗೆದಾರರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.
ಎರ್ಮಾಳಿನ ವರ್ಚಸ್ ಶೆಟ್ಟಿ CA ಪರೀಕ್ಷೆಯಲ್ಲಿ ಉತ್ತೀರ್ಣ
Posted On: 12 Jul 2024, 10:44 AM
ಕಾಪು : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ಎರ್ಮಾಳಿನ ವರ್ಚಸ್ ಶೆಟ್ಟಿಯವರು ಉತ್ತೀರ್ಣರಾಗಿರುತ್ತಾರೆ. ಇವರು ಕಾಪು ತಾಲ್ಲೂಕಿನ ಎರ್ಮಾಳು ಬಡಾ ಗ್ರಾಮದ "ಕುಮುದ" ನಿಲಯದ ನಿವಾಸಿ ಯಾಗಿದ್ದು, ಪ್ರಸ್ತುತ ಬೆಳಗಾಂನಲ್ಲಿವಾಸ್ತವ್ಯವಿರುವ ದಿ.ಹಿಮಕರ ಶೆಟ್ಟಿ ಹಾಗೂ ಪೂರ್ಣಿಮ ಶೆಟ್ಟಿಯವರ ಸುಪುತ್ರ.
ಹೆಜಮಾಡಿ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗ - ವಿದ್ಯಾರ್ಥಿವೇತನ ವಿತರಣೆ ; ವಿವಿಧ ಸಂಘಗಳ ಉದ್ಘಾಟನೆ
Posted On: 12 Jul 2024, 10:16 AM
ಹೆಜಮಾಡಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಇಲ್ಲಿ ಜುಲೈ 11ರಂದು ಮಣಿಪಾಲ ಟೆಕ್ನಾಲಜಿ ಸಂಸ್ಥೆಯ ವತಿಯಿಂದ ರೊನಾಲ್ಡ್ ಡಿಸೋಜಾ ಎಚ್ಆರ್ ಮ್ಯಾನೇಜರ್ ಇವರು 2023 -24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶದ ದಾಖಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿದರು. ಈ ಸಂದರ್ಭ ಅವರು ಮಾತನಾಡಿ, ಪ್ರತಿ ವರ್ಷವೂ ಸಂಸ್ಥೆಯು ನೂರು ಶೇಕಡ ಫಲಿತಾಂಶ ದಾಖಲಿಸುವಂತಾಗಲಿ ಎಂದು ಹಾರೈಸಿದರು. ಪ್ರಸ್ತುತ 10ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತಮ ಫಲಿತಾಂಶ ದಾಖಲಿಸುವಂತೆ ಪ್ರೋತ್ಸಾಹಿಸಿದರು. ಶಾಲೆಯ ವಿವಿಧ ಸಂಘಗಳನ್ನು ಉದ್ಘಾಟನೆ ಮಾಡಿದರು. ಸಂಸ್ಥೆಯ ಹಿರಿಯ ಶಿಕ್ಷಕಿ ಸಂಪಾವತಿ ಮಾತಮಾಡಿ, ಮಣಿಪಾಲ ಟೆಕ್ನಾಲಜಿ ಸಂಸ್ಥೆ ಈ 3 ವರ್ಷಗಳಿಂದ ಸಂಸ್ಥೆಗೆ ನೀಡಿದ ಇನ್ಸಿನರೇಟರ್, ಕಂಪ್ಯೂಟರ್, ಪ್ರಿಂಟರ್, ಪ್ರೊಜೆಕ್ಟರ್ , ವಾಟರ್ ಪ್ಯೂರಿಫೈಯರ್ ಈ ಮೊದಲಾದ ಕೊಡುಗೆಗಳನ್ನು ಸ್ವರಿಸುತ್ತಾ ಮಣಿಪಾಲ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಸಂಸತ್ ನ ಉಸ್ತುವಾರಿ ಶಿಕ್ಷಕಿ ಅನಿತಾ ವಿವಿಧ ಸಂಘಗಳ ಕಾರ್ಯವನ್ನು ತಿಳಿಸಿದರು. ಹಿರಿಯ ಶಿಕ್ಷಕಿ ಸಂಪಾವತಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಶಿಕ್ಷಕರಾದ ದೀಪಾ ಉಡುಪ ಕಾರ್ಯಕ್ರಮ ನಿರೂಪಿಸಿದರು. ಸರೋಜಾ ಆಚಾರಿ ವಂದಿಸಿದರು. SDMC ಸದಸ್ಯರು, ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಪು : ಇನ್ನಂಜೆಯ ವರ್ಷಿಣಿ ಪಿ ಆರ್ CA ಪರೀಕ್ಷೆಯಲ್ಲಿ ಉತ್ತೀರ್ಣ
Posted On: 11 Jul 2024, 11:13 PM
ಕಾಪು : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ವರ್ಷಿಣಿ ಪಿ ಆರ್ ಉತ್ತೀರ್ಣರಾಗಿರುತ್ತಾರೆ. ಇವರು ಕಾಪು ತಾಲೂಕಿನ ಇನ್ನಂಜೆಯ ನಿವಾಸಿಯಾಗಿದ್ದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ರವಿ ಪಿ., ಜಯಲಕ್ಷ್ಮಿ ಆರ್ ರವರ ಸುಪುತ್ರಿ.
ಕಾಪು : ಅನುಷಾ ಕರ್ಕೇರ CA ಪರೀಕ್ಷೆಯಲ್ಲಿ ಉತ್ತೀರ್ಣ
Posted On: 11 Jul 2024, 09:19 PM
ಕಾಪು : ಮುಂಬೈನ ಭಾಂಡುಪ್ ನಿವಾಸಿಗಳಾಗಿರುವ ಅಚ್ಚುತ ಕರ್ಕೇರ ಮತ್ತು ಯಶೋಧಾ ಕರ್ಕೇರ ದಂಪತಿಗಳ ಪುತ್ರಿ ಅನುಷಾ ಕರ್ಕೇರ ಇವರು ICAI (ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ) ಇಲ್ಲಿನ CA ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಇನ್ನಂಜೆಯ ಮಡುಂಬು ಬಂಗೇರ ಕುಟುಂಬಸ್ಥರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಕಾಪು : ಸರಕಾರಿ ಪದವಿಪೂರ್ವ ಕಾಲೇಜು, ಪೊಲಿಪು - ವನಮಹೋತ್ಸವ ಕಾರ್ಯಕ್ರಮ
Posted On: 11 Jul 2024, 07:02 AM
ಕಾಪು : ಸರಕಾರಿ ಪದವಿಪೂರ್ವ ಕಾಲೇಜು, ಪೊಲಿಪು, ಕಾಪು ಇದರ ಸಸ್ಯಶ್ಯಾಮಲ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಗಿಡ ನೆಟ್ಟು, ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಜುಲೈ 10ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಪಡುಬಿದ್ರಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಜೀವನದಾಸ ಶೆಟ್ಟಿಯವರು ಗಿಡ ನೆಟ್ಟು ಮಾಹಿತಿ ನೀಡುವುದರ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶಿವಲಿಂಗಪ್ಪ, ಹಿರಿಯ ಉಪನ್ಯಾಸಕ ಸುಧಾಕರ್ ಎಂ. ಏ, ಗಸ್ತು ಅರಣ್ಯ ಪಾಲಕ ಮಂಜುನಾಥ ಹಾಗೂ ಉಪನ್ಯಾಸಕರು , ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪವರ್ ಲಿಫ್ಟರ್ ಗಳಿಗೆ ಸ್ವಾಗತ
Posted On: 10 Jul 2024, 07:10 PM
ಮಂಗಳೂರು : ದಕ್ಷಿಣ ಆಫ್ರಿಕಾದ ಪೊಚೆಫ್ಸ್ಟ್ರೂಮ್ನಲ್ಲಿ ನಡೆದ ಏಷ್ಯಾ-ಪೆಸಿಫಿಕ್-ಆಫ್ರಿಕನ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಅಕ್ಷತಾ ಪೂಜಾರಿ ಬೋಳ ಮತ್ತು 105 ಕೆಜಿ ವಿಭಾಗದಲ್ಲಿ ಎರಡು ಚಿನ್ನ ಗೆದ್ದು ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದ ವಿಜಯ್ ಕಾಂಚನ್ ರನ್ನು ಬಜಪೆ ಅಂತರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಅಕ್ಷತಾ ಪೂಜಾರಿ ಬೋಳಾ ಅವರು ಪವರ್ಲಿಫ್ಟಿಂಗ್ನಲ್ಲಿ ಗಮನಾರ್ಹ ದಾಖಲೆಯನ್ನು ಹೊಂದಿದ್ದು, ಹಲವಾರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಅವರು ಏಷ್ಯನ್ ಮಟ್ಟ, ಕಾಮನ್ವೆಲ್ತ್ ಗೇಮ್ಸ್ ಮತ್ತು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಜಯಗಳಿಸಿದ್ದಾರೆ. ಆಕೆಯ ಅತ್ಯುತ್ತಮ ಸಾಧನೆಗಳು ಆಕೆಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಯನ್ನು ತಂದುಕೊಟ್ಟಿವೆ. ವಿಜಯ್ ಕಾಂಚನ್ ಮಂಗಳೂರಿನಲ್ಲಿ ಬಾಲಾಂಜನೇಯ, ರಾಮಾಂಜನೇಯ, ಪವರ್ ಜೋನ್, ಬ್ಲ್ಯಾಕ್ ರಾಕ್ ಮತ್ತು ಮೈ ಫಿಟ್ನೆಸ್ ಜಿಮ್ ಸೇರಿದಂತೆ ಅನೇಕ ಜಿಮ್ಗಳಲ್ಲಿ ತರಬೇತಿ ನೀಡುವುದಲ್ಲದೆ, ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಉದ್ಯೋಗಿಯಾಗಿದ್ದಾರೆ. ಈ ಸಂದರ್ಭ ಗೀತಾಂಜಲಿ ಸುವರ್ಣ, ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಷನ್ ತರಬೇತುದಾರ ದಿನೇಶ್ ಕರ್ಕೇರ, ಪವರ್ ಲಿಫ್ಟರ್ ಸತೀಶ್ ಕುಮಾರ್ ಕುದ್ರೋಳಿ, ಸದಾನಂದ ಅಮೀನ್, ಲಕ್ಷ್ಮಣ್, ಮಂಜುನಾಥ್ ಹೊಸಬೆಟ್ಟು, ರಘು ಬೈಕಂಪಾಡಿ, ಕಾರ್ತಿಕ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.
37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ
Posted On: 10 Jul 2024, 06:05 PM
ಉಚ್ಚಿಲ : 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಅರ್ಚಕರಾಗಿ ವೇ.ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ, ಗೌರವ ಅಧ್ಯಕ್ಷರಾಗಿ ರೋಹಿತ್ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷರಾಗಿ ಕೆ. ವಿಶ್ವನಾಥ, ಕೆ. ವಾಸುದೇವ ರಾವ್, ದಿನೇಶ್ ಎರ್ಮಾಳು , ಕರುಣಾಕರ ಕೋಟ್ಯಾನ್, ಕೃಷ್ಣ ಕುಮಾರ್ ಪೊಲ್ಯ, ಕಾರ್ಯದರ್ಶಿ ಸಚಿನ್ ಶೆಟ್ಟಿ ಪೊಲ್ಯ, ಜೊತೆ ಕಾರ್ಯದರ್ಶಿ ವಿನೋದ್ ಸುವರ್ಣ, ಕೋಶಾಧಿಕಾರಿ ವೇ.ಮೂ.ವಿಷ್ಣುಮೂರ್ತಿ ಉಪಾಧ್ಯಾಯ ಆಯ್ಕೆಗೊಂಡಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಪತಿ ಭಟ್, ದ್ಯುಮಣಿ ಆರ್. ಭಟ್, ಮನೋಜ್ ಶೆಟ್ಟಿ ಪೊಲ್ಯ, ಮಹೇಶ್ ಉಚ್ಚಿಲ, ಅಶೋಕ್ ಆರ್. ಕರ್ಕೇರ, ಅಶೋಕ್ ಆಚಾರ್ಯ, ವೇದವ್ಯಾಸ ಬಂಗೇರ, ನಾಗೇಶ್ ಆಚಾರ್ಯ, ಜಗಜೀವನ್ ಎನ್.ಚೌಟ, ವಿಜಯ ಆಚಾರ್ಯ ಉಚ್ಚಿಲ, ಸುನಿಲ್ ಶೆಟ್ಟಿ, ಅಕ್ಷಯ್ ದೇಜಾಡಿ, ಸುರೇಶ್ ಕುಮಾರ್ ಕೆ., ಗುರುರಾಜ್ ಉಚ್ಚಿಲ, ಮುಖೇಶ್ ಉಚ್ಚಿಲ, ಸಂದೀಪ್ ಆರ್. ಉಚ್ಚಿಲ, ಮಹೇಶ್ ಶೆಟ್ಟಿ ಪೊಲ್ಯ, ಪ್ರಸಾದ್ ಎರ್ಮಾಳು, ಸುಧೀರ್ ವಿ. ರಾವ್. ರವಿಕಿರಣ್ ಉಚ್ಚಿಲ, ಮಾಧವ ಆಚಾರ್ಯ ಉಚ್ಚಿಲ, ರಾಜೇಶ್ ಎರ್ಮಾಳು , ಕರುಣಾಕರ ಮೊಯಿಲಿ, ಲೋಕೇಶ್ ಕೇಬಲ್, ಅಕ್ಷಯ್ ಉಚ್ಚಿಲ, ಪ್ರಮೋದ್ ಆಚಾರ್ಯ, ಮನೋಹರ ಕುಮಾರ್, ಲಕ್ಷ್ಮಣ ಬಂಗೇರ, ಅಶೋಕ್ ಶೆಣೈ, ಕರ್ಕೇರ, ಗಣೇಶ್ ಕರ್ಕೇರ, ವಿಶು ಉಚ್ಚಿಲ, ಸುದರ್ಶನ ಮೊಯಿಲಿ, ಅನಿಲ್ ಉಚ್ಚಿಲ, ರಾಜೇಶ್ ಶೆಟ್ಟಿ ಎರ್ಮಾಳು, ಆಯುಷ್ ಪೂಜಾರಿ, ಅಶಿತ್ ಪೊಲ್ಯ, ಸಂತೋಷ್ ಆಚಾರ್ಯ, ಕಿರಣ್, ಸುದರ್ಶನ್ ರಾವ್, ಮನ್ವೀತ್, ಹರ್ಷಿತ್ ಆಚಾರ್ಯ, ಸೃಜನ್ ಪೂಜಾರಿ, ಹರ್ಶಿತ್ ಪೂಜಾರಿ, ಸಂಪತ್ ಪೊಲ್ಯ, ಪ್ರಥಮ್ ಉಚ್ಚಿಲ, ಸಾಗರ್ ಪೊಲ್ಯ ಆಯ್ಕೆಗೊಂಡಿರುತ್ತಾರೆ.
