Updated News From Kaup
ಕಾಪು : ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ
Posted On: 02 Jul 2024, 04:42 PM
ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೊಲಿಪು ಇದರ ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಇದರ ಪ್ರಾರಂಭೋತ್ಸವ ಕಾರ್ಯಕ್ರಮ ಮಂಗಳವಾರ ಜರಗಿತು. ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭಾ ಸದಸ್ಯ, ಆಂಗ್ಲ ಮಾಧ್ಯಮ ವಿಭಾಗದ ಕಾರ್ಯದರ್ಶಿಯಾದ ಕಿರಣ್ ಆಳ್ವ, ಕಾಪು ಪುರಸಭಾ ಸದಸ್ಯೆ ರಾಧಿಕಾ ಸುವರ್ಣ, ಆಂಗ್ಲ ಮಾಧ್ಯಮ ಸಮಿತಿ ಅಧ್ಯಕ್ಷರಾದ ಪ್ರವೀಣ್ ಡಿ ಕುಂದರ್, ಕಾಪು ಬಿಲ್ಲವ ಸಹಕಾರಿ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ, ಪೊಲಿಪು ಮೋಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಪೊಲಿಪು ಹಳೆ ವಿದ್ಯಾರ್ಥಿ ಸಂಘ ಹಾಗೂ ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಕುಂದರ್, ಪೊಲಿಪು ಮೋಗವೀರ ಮಹಿಳಾ ಮಂಡಳಿ ಉಪಾಧ್ಯಕ್ಷರಾದ ಸುನಿತಾ ಚಂದ್ರಶೇಖರ್, ಪೊಲಿಪು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಧನಂಜಯ್ ಸಾಲ್ಯಾನ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಶಾಲಾ ಮುಖ್ಯೋಪಾಧ್ಯಾಯರಾದ ಗಾಯತ್ರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರ್ವ ಸದಸ್ಯರು, ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಶಂಕರಪುರ : ಪತ್ರಿಕಾ ದಿನಾಚರಣೆ ; ಪತ್ರಕರ್ತರಿಗೆ ಗೌರವಾರ್ಪಣೆ
Posted On: 01 Jul 2024, 07:57 PM
ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರದಲ್ಲಿ ಸೋಮವಾರ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಶ್ರೀ ಸಾಯಿಈಶ್ವರ್ ಗುರೂಜಿಯವರಿಂದ ಪತ್ರಕರ್ತರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಉಚ್ಚಿಲ ,ಕೋಶಾಧಿಕಾರಿಯಾದ ಉಮೇಶ್ ಮಾರ್ಪಳ್ಳಿ , ಕಾರ್ಯದರ್ಶಿಯಾದ ಪ್ರಮೋದ್ ಸುವರ್ಣ ,ಸದಸ್ಯರಾದ ಪ್ರಭಾಕರ ಆಚಾರ್ಯ, ವಿಜಯ ಆಚಾರ್ಯ ಉಚ್ಚಿಲ ಮತ್ತು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ , ಕಾರ್ಯದರ್ಶಿ ಸಂತೋಷ್ ಕಾಪು, ಸದಸ್ಯರಾದ ರಾಕೇಶ್ ಕುಂಜೂರು, ಪುರುಷೋತ್ತಮ್ ಸಾಲ್ಯಾನ್, ಸಚಿನ್ ಉಚ್ಚಿಲ, ಪ್ರಕಾಶ್ ಸುವರ್ಣ, ವಿಕ್ಕಿ ಪೂಜಾರಿ ಕಾಪು, ದೀಪಕ್ ಬೀರ, ಲವ ಸುವರ್ಣ ಇವರನ್ನು ಗೌರವಿಸಲಾಯಿತು. ರಾಘವೇಂದ್ರ ಪ್ರಭು ಕರ್ವಾಲು, ಗೀತಾಂಜಲಿ.ಎಮ್.ಸುವರ್ಣ, ವೀಣಾ .ಎಸ್.ಶೆಟ್ಟಿ , ರಾಜೇಶ್ ಜೋಗಿ, ಸತೀಶ್ ದೇವಾಡಿಗ, ವಿಘ್ನೇಶ್ ನೀಲಾವರ, ನಿಲೇಶ್, ಪ್ರದೀಪ್ ಪೂಜಾರಿ, ಶಶಾಂಕ್, ರಿತೇಶ್ ಉಪಸ್ಥಿತರಿದ್ದರು. ಎನ್ .ಆರ್. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ವಿಕಲಚೇತನರೊಂದಿಗೆ ಸಂವಹನ, ಶಾಲಾ ಸಂಸತ್ತು ರಚನಾ ಕಾರ್ಯಕ್ರಮ
Posted On: 01 Jul 2024, 06:39 PM
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ವಿಕಲಚೇತನರೊಂದಿಗೆ ಸಂವಹನ ಕಾರ್ಯಕ್ರಮ ಮತ್ತು ಶಾಲಾ ಸಂಸತ್ತು ರಚನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ವಿಕಲಚೇತನರಾದ ಗಣೇಶ್ ಪಂಜಿಮಾರ್ ಮಾತನಾಡಿ “ಸಾಧಿಸುವ ಛಲವೊಂದಿದ್ದರೆ ಬದುಕಿನಲ್ಲಿ ಎದುರಾಗುವ ಸಮಸ್ಯೆಗಳೂ ಮೆಟ್ಟಿಲುಗಳಾಗುತ್ತದೆ. ದೇಹದಲ್ಲಿ ಬಲವಿಲ್ಲದಿದ್ದರೇನಂತೆ? ಅಂತರಂಗದಲ್ಲಿ ಅಡಗಿರುವ ಆತ್ಮಸ್ಥೈರ್ಯ ನಾನು ಅಶಕ್ತನಲ್ಲ ಎಂದು ಸಾರಿ ಹೇಳುತ್ತದೆ. ಸಾಧನೆಗೆ ದೈಹಿಕ ನ್ಯೂನತೆ ಎಂದೂ ಅಡ್ಡಿ ಮಾಡುವುದಿಲ್ಲ ಎಂದು ಹೇಳಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಶಾಲಾ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ, ಶಾಲಾ ಪ್ರಾಂಶುಪಾಲರಾದ ಸಂಗೀತಾ, ಶಿಕ್ಷಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.
ಕಾಪು : ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ
Posted On: 01 Jul 2024, 06:21 PM
ಕಾಪು : ಉಡುಪಿ - ಮಂಗಳೂರು, ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್ ಅವರು ಜೂನ್ 30ರ ಭಾನುವಾರ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು. ನಂತರ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದ ಅವರು ಇಳಕಲ್ಲಿನಿಂದ ನಿರ್ಮಾಣವಾಗುತ್ತಿರುವ ದಕ್ಷಿಣ ಭಾರತದ ಮೊಟ್ಟಮೊದಲ ಬೃಹತ್ ದೇಗುಲ ಇದಾಗಿದೆ, ಕರ್ನಾಟಕ ರಾಜ್ಯದಲ್ಲೆ ಅತ್ಯದ್ಭುತವಾದಂತಹ ವಾಸ್ತುಶಿಲ್ಪ ಶೈಲಿಯನ್ನೊಳಗೊಂಡು ದೇವಸ್ಥಾನದ ನಿರ್ಮಾಣ ಮಾಡುತ್ತಿದ್ದೀರಿ. ಇನ್ನೂ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುವ ಅಭಿವೃದ್ಧಿ ಸಮಿತಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ದೇವಳದ ಮಾಜಿ ಅಧ್ಯಕ್ಷ,ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಸಂಚಾಲಕ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ ಆಚಾರ್ಯ, ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರಿ, ಕಾತ್ಯಾಯಿನಿ ತಂಡದ ಸಂಚಾಲಕಿ ವನಿತಾ ಶೆಟ್ಟಿ, ಕಾಪು ಪೊಲೀಸ್ ಉಪನಿರೀಕ್ಷಕರಾದ ಪುರುಷೋತ್ತಮ್ ಮತ್ತು ಕಾಪು ಪೊಲೀಸ್ ವೃತ್ತ ಕಚೇರಿ ಹೆಡ್ ಕಾನ್ಸ್ಟೇಬಲ್ ಪ್ರವೀಣ್ ಉಪಸ್ಥಿತರಿದ್ದರು.
ಉಚ್ಚಿಲ : ಮಳೆಗಾಲದ ಮೀನುಗಾರಿಕೆಯ “ದಾರಾ”ಗೆ ಚಾಲನೆ
Posted On: 01 Jul 2024, 06:16 PM
ಉಚ್ಚಿಲ : ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ನಡೆಸುವ ಮೋಗವೀರರು ಮೀನುಗಾರಿಕೆಗಾಗಿ ಬಳಸುವ ಬಲೆಗಳನ್ನು ಜೋಡಿಸುವ ಕಾರ್ಯ "ದಾರ" ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪ್ರಾಂಗಣದಲ್ಲಿ ಭಾನುವಾರ ನಡೆಯಿತು. ವರ್ಷಂಪ್ರತಿಯಂತೆ ಉಡುಪಿ ಜಿಲ್ಲೆಯ ಉಚ್ಚಿಲ ಕೇಂದ್ರವಾಗಿಟ್ಟುಕೊಂಡು ಉಚ್ಚಿಲ- ಎರ್ಮಾಳು ವಲಯದ ನಾಡದೋಣಿ ಮೀನುಗಾರರು ಭಾನುವಾರ ಸಾಂಪ್ರ್ರದಾಯಿಕ ನಾಡದೋಣಿ ಮೀನುಗಾರಿಕೆಗಾಗಿ "ದಾರ" ಮುಹೂರ್ತ ನಡೆಸಿದ್ದಾರೆ. ಕಳೆದ ವರ್ಷದ ನಾಡದೋಣಿ ಮೀನುಗಾರಿಕೆ ಋತು ಕೊನೆಗೊಂಡ ಬಳಿಕ ಮೀನುಗಾರಿಕೆಗೆ ಬಳಸಿದ ಮಾಟುಬಲೆಯನ್ನು ಬಿಡಿ ಬಿಡಿಯಾಗಿಸಿ ಸಂಗ್ರಹಿಸಿಡುತ್ತಾರೆ. ಹರಿದ ಬಲೆಗಳನ್ನು ಸರಿಪಡಿಸುವ ಉದ್ದೇಶದಿಂದ ಮೀನುಗಾರ ಪ್ರತಿನಿಧಿಗಳಿಗೆ ಹಂಚುತ್ತಾರೆ. ಅವರೆಲ್ಲರೂ ಅದನ್ನು ಡಿಸೆಂಬರ್ 15 ರೊಳಗೆ ಫಂಡಿನ ಮುಖ್ಯಸ್ಥರಿಗೆ ತಲುಪಿಸಬೇಕು. ಆಯಕಟ್ಟಿನ ಜಾಗದಲ್ಲಿ ಬಿಡಿಬಿಡಿಯಾಗಿ ಜೋಡಿಸಿಟ್ಟ ಬಲೆಗಳನ್ನು ಮಳೆಗಾಲ ಆರಂಭಗೊಂಡ ಬಳಿಕ ಸಾಮೂಹಿಕವಾಗಿ ನಿಗದಿ ಪಡಿಸಿದ ದಿನದಂದು ಎಲ್ಲರೂ ಒಗ್ಗಾಟ್ಟಾಗಿ ಪೋಣಿಸುವ ಕೈಂಕರ್ಯವೇ “ದಾರ”. ಮಳೆಗಾಲ ಆರಂಭಗೊಂಡ ತಕ್ಷಣ ಸಮುದ್ರ ಪ್ರಕ್ಷಭ್ದ ಗೊಳ್ಳುತ್ತದೆ. ಮಧ್ಯೆ ಕೆಲವು ದಿನ ಶಾಂತವಾಗುವ ಸಂದರ್ಭ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದೆ. ಈ ಅವಕಾಶಕ್ಕಾಗಿ ಕಾದು ಕುಳಿತಿರುವ ನಾಡದೋಣಿ ಮೀನುಗಾರರು ಮೀನುಗಾರಿಕೆಗೆ ಆರಂಭಿಕವಾಗಿ "ದಾರ" ನಡೆಸುತ್ತಾರೆ. ಎಲ್ಲಾ ಫಂಡಿನಿಂದ ತಲಾ 5 ಮಂದಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಪುರೋಹಿತರ ಬಳಿ ದಾರ ಪ್ರಕ್ರಿಯೆಗಾಗಿ ಶುಭಮೂಹೂರ್ತ ಯಾಚಿಸುತ್ತಾರೆ. ಪುರೋಹಿತರು ನೀಡಿದ ಶುಭ ಮುಹೂರ್ತದಂದು ಪ್ರತಿಯೊಂದು ಫಂಡಿನವರು ಒಗ್ಗಟ್ಟಾಗಿ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿ ಬಲೆಗಳನ್ನು ಜೋಡಿಸುವ ಮೂಲಕ ದಾರ ಪ್ರಕ್ರಿಯೆಗೆ ಚಾಲನೆ ನೀಡುತ್ತಾರೆ. ದಾರ ಮುಗಿದ ಬಳಿಕ ಜೋಡಿಸಿದ ಬಲೆಗಳನ್ನು ದೋಣಿಗಳಲ್ಲಿ ತುಂಬಿಸಿ ಮತ್ತೊಂದು ಶುಭ ಮುಹೂರ್ತದಲ್ಲಿ ಬಲೆಯನ್ನು ನೀರಿಗೆ ಹಾಕುವ ಸಂಪ್ರಾದಾಯವಿದೆ. ಆ ಬಳಿಕ ಸಮುದ್ರ ಶಾಂತಗೊಂಡು ಮೀನುಗಾರಿಕಾ ಪ್ರಕ್ರಿಯೆ ಆರಂಭಗೊಂಡ ತಕ್ಷಣ ಎಲ್ಲರೂ ಒಗ್ಗಟ್ಟಾಗಿ ಗ್ರಾಮದ ಎಲ್ಲಾ ದೈವ, ದೇವಸ್ಥಾನ, ಮಂದಿರಗಳಿಗೆ ಸಾಮೂಹಿಕ ಪ್ರಾರ್ಥನೆ ನಡೆಸಿ ಉತ್ತಮ ಮತ್ಸ್ಯ ಸಂಪತ್ತು ಹಾಗೂ ಮೀನುಗಾರಿಕೆ ಸಂದರ್ಭ ಯಾವುದೇ ಅವಘಡ ನಡೆಯದಿರಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಬಳಿಕ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯುತ್ತಾರೆ. ಮಳೆಗಾಲದ ಅವಧಿಯಲ್ಲಿ ಯಾವುದೇ ಯಾಂತ್ರಿಕ ದೋಣಿಗಳು ಕಡಲಿಗಿಳಿಯದು. ಹಾಗಾಗಿ ಆ ಸಂದರ್ಭ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ. ಈ ದಿನಗಳಲ್ಲಿ ಶೇ.75ರಷ್ಟು ದಿನ ಸಮುದ್ರ ಪ್ರಕ್ಷುಭ್ದ ವಾಗಿರುತ್ತದೆ. ಸಿಗುವ ಅತ್ಯಲ್ಪ 15 ರಿಂದ 20 ದಿನಗಳ ಅವಧಿಯಲ್ಲಿ ಮಾತ್ರ ಮೀನುಗಾರಿಕೆಗೆ ಅವಕಾಶ. ಆ ಸಂದರ್ಭ ನಾಡದೋಣಿಯಲ್ಲಿ ಬಹುದೂರ ಚಲಿಸುವಂತೆಯೂ ಇಲ್ಲ. ಇರುವ ಅಲ್ಪ ಪರಿಮಿತಿಯೊಳಗೆ ಮೀನುಗಾರಿಕೆ ನಡೆಸಬೇಕು. ಈ ಅವಧಿಯಲ್ಲಿ ಬೆಳೆಬಾಳುವ ಸಿಗಡಿ ದೊರೆತರೆ ಮಾತ್ರ ಬಂಪರ್ ಲಾಟರಿ ಸಿಕ್ಕಿದಂತೆ. ಉಳಿದಂತೆ ದೊರಕುವ ಬಂಗುಡೆ, ಬೂತಾಯಿ, ಇನ್ನಿತರ ಸಣ್ಣಪುಟ್ಟ ಮೀನುಗಳು ಹೇರಳ ದೊರಕಿದರೂ ಪ್ರಯೋಜನವಿಲ್ಲ. ಕೇವಲ ಸಿಗಡಿ ಬೇಟೆಗಾಗಿ ಮೀನುಗಾರರು ಆಶಾ ಭಾವದೊಂದಿಗೆ ಕಡಲಗಿಳಿಯುತ್ತಾರೆ. ಆದರೆ ಲಾಟರಿಯಂತೆ ಎಲ್ಲರೂ ಅದೃಷ್ಟನಂತರಾಗಿರುವುದಿಲ್ಲ. 1,000 ದೋಣಿಗಳ ಪೈಕಿ 100ಕ್ಕೆ ದೊರೆತರೆ ಹೆಚ್ಚು. ಆದ್ದರಿಂದಲೇ ಮಳೆಗಾಲದ ಮೀನುಗಾರಿಕೆಯನ್ನು ಲಾಟರಿಗೆ ಹೋಲಿಸುತ್ತಾರೆ. ಈ ವೇಳೆ ಉಚ್ಚಿಲ ಕೈ ರಂಪಣಿ ಫಂಡಿನ ಮೀನುಗಾರರಲ್ಲೋರ್ವರು ಮಾತನಾಡಿ, ಬೆಲೆ ಏರಿಕೆ, ಬಂದರು ಸೌಲಭ್ಯ ಇಲ್ಲದಿರುವುದು, ಬೃಹತ್ ಕೈಗಾರಿಕೆಗಳಿಂದ ಕಲುಷಿತ ನೀರು ಸಮುದ್ರಕ್ಕೆ ಬಿಡುತ್ತಿರುವುದು ಹಾಗೂ ಮೀನು ಸಂತತಿ ನಾಶವಾಗಿರುವುದು, ನಾಡದೋಣಿ ಮೀನುಗಾರಿಕೆಗೆ ಇತ್ತೀಚಿನ ವರ್ಷಗಳಲ್ಲಿ ಭಾರೀ ನಷ್ಟವನ್ನುಂಟು ಮಾಡುತ್ತಿವೆ. ಬೃಹತ್ ಉದ್ದಿಮೆಗಳಿಂದ ತೀರ ಮೀನುಗಾರಿಕೆಗೆ ತೀರಾ ಸಮಸ್ಯೆ ಉಂಟಾಗಿದ್ದು, ಮೊಟ್ಟೆ ಇಡಲು ಬರುತ್ತಿರುವ ಮೀನುಗಳಿಗೆ ತೀವ್ರ ಸಮಸ್ಯೆ ಎದುರಾಗಿದೆ. ಇಲ್ಲಿ ಮೀನುಗಾರಿಕೆಗೆ ಯೋಗ್ಯ ಸ್ಥಳ ಇಲ್ಲವಾದ್ದರಿಂದ ಪ್ರತಿದಿನ ಟೆಂಪೋ ಮೂಲಕ ಮಲ್ಪೆ ಅಥವಾ ಮಂಗಳೂರು ಬಂದರಿಗೆ ಹೋಗಿ ಮೀನುಗಾರಿಕೆ ನಡೆಸಬೇಕಾಗಿದೆ. ಹಾಗಾಗಿ ದಿನ ನಿತ್ಯ ಫಂಡ್ ಒಂದಕ್ಕೆ ಸಾವಿರಾರು ರುಪಾಯಿ ಖರ್ಚು ಸಂಭವಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಬೆಲೆಯೇರಿಕೆಯಿಂದ ಖರ್ಚು ವೆಚ್ಚ ಜಾಸ್ತಿಯಾಗುತ್ತಿದ್ದು ಸಾಕಷ್ಟು ಸಂಪಾದನೆ ಆಗುತ್ತಿಲ್ಲ. ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಉಳಿಯ ಬೇಕಾದರೆ, ಜತೆಗೆ ಬಡ ಮೀನುಗಾರರು ಬದುಕು ಹಸನಾಗಬೇಕಾದರೆ, ಸರಕಾರ ನಮ್ಮ ಕಷ್ಟಗಳಿಗೆ ಸೂಕ್ತವಾಗಿ ಸ್ಪಂದಿಸ ಬೇಕು ಎನ್ನುತ್ತಾರೆ ಮೀನುಗಾರರು. ಕ್ಯರಂಪಣಿ ಫಂಡಿನ ಮುಖ್ಯಸ್ಥ ಮೋಹನ ಗುರಿಕಾರ ಮಾತನಾಡಿ, ಉಚ್ಚಿಲದಲ್ಲಿ ಹಿಂದೆ 10ಕ್ಕಿಂತ ಹೆಚ್ಚು ಜೋಡಿಗಳಿತ್ತು. ಈಗ ಕೇವಲ ಮೂರಕ್ಕೆ ಇಳಿದಿದೆ. ಮೀನಿನ ಸಂತತಿ ನಾಶ, ಲಾಭಕ್ಕಿಂತ ನಷ್ಟವೇ ಹೆಚ್ಚು, ಯುವ ಪೀಳಿಗೆ ಮೀನುಗಾರಿಕೆಯಲ್ಲಿ ದೂರ ಸರಿಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಳೆಗಾಲದ ಮೀನುಗಾರಿಕೆ ನಿಲ್ಲುವ ಸಂಭವವೇ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಕಾಪು : ರಾಷ್ಟ್ರಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಟೂರ್ನಿ - ಶರಣ್ ರಾವ್ ಗೆ ನಾರಾಯಣ ಗುರು ಟ್ರೋಫಿ
Posted On: 01 Jul 2024, 06:25 AM
ಕಾಪು : ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಸಂಸ್ಥೆಯ ಉಡುಪಿ ಮತ್ತು ಕಾಪು ಘಟಕ, ಕಾಪು ಹಳೆ ಮಾರಿಯಮ್ಮ ಸಭಾಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಟೂರ್ನಿಯಲ್ಲಿ ಮಂಗಳೂರಿನ ಶರಣ್ ರಾವ್ ಟೂರ್ನಿಯಲ್ಲಿ ಒಂಬತ್ತು ಸುತ್ತುಗಳಲ್ಲಿ 8.5 ಪಾಯಿಂಟ್ ಕಲೆ ಹಾಕಿ ₹ 25 ಸಾವಿರ ನಗದು ಮತ್ತು ನಾರಾಯಣ ಗುರು ಟ್ರೋಫಿ ತಮ್ಮದಾಗಿಸಿಕೊಂಡರು. ಶನಿವಾರ ಆರು ಸುತ್ತುಗಳಲ್ಲಿ 5.5 ಪಾಯಿಂಟ್ ಗಳಿಸಿದ್ದ ಎರಡನೇ ಶ್ರೇಯಾಂಕಿತ ಶರಣ್ ಭಾನುವಾರದ ಎಲ್ಲ ಸುತ್ತುಗಳಲ್ಲೂ ಜಯಶಾಲಿಯಾದರು. ಅಗ್ರಶ್ರೇಯಾಂಕಿತ, ಕೇರಳದ ನಿತಿನ್ ಬಾಬು ಮತ್ತು ತಮಿಳುನಾಡಿನ ಆಕಾಶ್ ಜಿ ವಿರುದ್ಧ ಕ್ರಮವಾಗಿ 8 ಮತ್ತು 9ನೇ ಸುತ್ತುಗಳಲ್ಲಿ ಗೆದ್ದರು. ಐದನೇ ಸುತ್ತಿನಿಂದ 8ನೇ ಸುತ್ತಿನ ವರೆಗೆ ಆಕಾಶ್ ಅಗ್ರಸ್ಥಾನ ಉಳಿಸಿಕೊಂಡಿದ್ದರು. ಆಕಾಶ್ ಜಿ, ಮಂಗಳೂರಿನ ಲಕ್ಷಿತ್ ಸಾಲ್ಯಾನ್ ಮತ್ತು ತಮಿಳುನಾಡಿನ ಎಸ್.ಎ ಕಣ್ಣನ್ ತಲಾ 8 ಪಾಯಿಂಟ್ ಗಳಿಸಿದರು. ಉತ್ತಮ ಟೈಬ್ರೇಕರ್ ಆಧಾರದಲ್ಲಿ ಆಕಾಶ್ ದ್ವಿತೀಯ, ಲಕ್ಷಿತ್ ತೃತೀಯ ಮತ್ತು ಕಣ್ಣನ್ ನಾಲ್ಕನೇ ಸ್ಥಾನ ಗಳಿಸಿದರು. 7.5 ಪಾಯಿಂಟ್ಗಳೊಂದಿಗೆ ನಿತಿನ್ ಬಾಬು ಐದನೇ ಸ್ಥಾನಕ್ಕೆ ಸಮಾಧಾನಪಟ್ಟುಕೊಂಡರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ರಾಮಕೃಷ್ಣ ಜೆ, ಕರ್ನಾಟಕದ ಆರುಷ್ ಭಟ್ ಮತ್ತು ಶಾನ್ ಡಿಯೋನ್ ಸಿಕ್ಕೇರ ಕೂಡ 7.5 ಪಾಯಿಂಟ್ ಗಳಿಸಿದರು. ಮಂಗಳೂರಿನ ಶರಣ್ ರಾವ್ಗೆ ತಮಿಳುನಾಡಿನ ಆಕಾಶ್ ವಿರುದ್ಧ ಜಯ. ತಮಿಳುನಾಡಿನ ಎಸ್.ಎ ಕಣ್ಣನ್ಗೆ ಕರ್ನಾಟಕದ ದ್ರಿಕ್ಷು ಕೆ ವಸಂತ್ ಎದುರು, ಮಂಗಳೂರಿನ ಲಕ್ಷಿತ್ ಸಾಲ್ಯಾನ್ಗೆ ಗೋವಾದ ಜೋಶುವಾ ಮಾರ್ಕ್ ಟೆಲಿಸ್ ವಿರುದ್ಧ, ಕೇರಳದಲ್ಲಿ ನಿತಿನ್ ಬಾಬುಗೆ ಕರ್ನಾಟಕದ ಪಂಕಜ್ ಭಟ್ ವಿರುದ್ಧ, ಕಾರ್ತಿಕ್ ಸಾಯ್ಗೆ ಕರ್ನಾಟಕದ ಲೀಲಾಜಯ ಕೃಷ್ಣ ವಿರುದ್ಧ ಹಾಗೂ ಕರ್ನಾಟಕದ ಪ್ರಶಾಂತ್ ನಾಯಕ್ಗೆ ತಮಿಳುನಾಡಿನ ದೀಪಕ್ ಲಕ್ಷಣ ಎದುರು ಜಯ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ರಾಮಕೃಷ್ಣ ಜೆ ಮತ್ತು ಮಂಗಳೂರಿನ ಶಾನ್ ಡಿಯೋನ್ ಸಿಕ್ವೆರಾ, ಕರ್ನಾಟಕದ ಆರುಷ್ ಭಟ್ ಮತ್ತು ಗೋವಾದ ಋಷಿಕೇಶ್ ಪರಬ್, ಕರ್ನಾಟಕದ ನಿಹಾಲ್ ಎನ್.ಶೆಟ್ಟಿ ಮತ್ತು ಮಹಾರಾಷ್ಟ್ರದ ಸಾಹು ವಿಕ್ರಮಾದಿತ್ಯ, ಕರ್ನಾಟಕದ ಚಿನ್ಮಯ ಎಸ್ ಭಟ್ ಮತ್ತು ಗೋವಾದ ಚೈತನ್ಯ ಗಾಂವ್ಕರ್ ನಡುವಿನ ಪಂದ್ಯ ಡ್ರಾ ಆಗಿದೆ.
ನಮ್ಮ ಆರೋಗ್ಯ ರಕ್ಷಕರಿಗೆ ನಮೋ ನಮ:
Posted On: 01 Jul 2024, 06:21 AM
ನಮಗೆಲ್ಲಾ ಅನಾರೋಗ್ಯ ಉಂಟಾದಾಗ ನಮಗೆ ನೆನಪಾಗುವವರು ವೈದ್ಯರು ರಾತ್ರಿ ಹಗಲೆನ್ನದೆ ರೋಗಿಗಳ ಆರೋಗ್ಯವನ್ನು ಕಾಪಾಡುವ ಮಹತ್ತರ ಕಾಯ೯ ವೈದ್ಯರು ಮಾಡುತ್ತಿದ್ದಾರೆ. ಹೀಗಾಗಿ ವೈದ್ಯೋ ನಾರಾಯಣ ಹರಿ: ಎಂಬ ಮಾತು ಬಂದಿದೆ. ತಮ್ಮ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗದಿದ್ದರೂ ರೋಗಿಗಳ ಆರೋಗ್ಯ ರಕ್ಷಣೆಯಲ್ಲಿ ನಿರಂತರ ಕಾಯ೯ ಮಾಡುತ್ತಿರುವುದು ಅಭಿನಂದನೀಯ. ಈ ಜುಲೈ 1 ವೈದ್ಯರಿಗೆ ಕೃತಜ್ಞತೆ ಸಲ್ಲಿಸುವುದಕ್ಕೆ ಮೀಸಲಾದರೆ ಅದೇ ಈ ದಿನದ ಸಾರ್ಥಕತೆಯಾಗಲಿದೆ. ಭಾರತದಲ್ಲಿ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಅದಕ್ಕೊಂದು ಕಾರಣವೂ ಇದೆ. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ. ಬಿದಾನ್ ಚಂದ್ರ ರಾಯ್ ಅವರ ನೆನಪಲ್ಲಿ ಜುಲೈ 1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. ಅವರೊಬ್ಬ ಅಸಾಧಾರಣ ವೈದ್ಯರಾಗಿದ್ದವರು. ಅವರ ಗಣನೀಯ ಸೇವೆಯನ್ನು ಪರಿಗಣಿಸಿ 1961ರ ಫೆಬ್ರವರಿ 4ರಂದು ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿತ್ತು. ಕುತೂಹಲಕರ ವಿಚಾರವೆಂದರೆ ಅವರು ಜನಿಸಿದ್ದು 1882, ಜುಲೈ 1, ತೀರಿಕೊಂಡಿದ್ದು 1962 ಜುಲೈ 1. ಅವರು ಜನಿಸಿದ ದಿನ ಮತ್ತು ತೀರಿಕೊಂಡ ದಿನ ಒಂದೇ ಆಗಿದೆ. ಒಬ್ಬ ಮಾದರಿ ವೈದ್ಯರಾಗಿ ತಮ್ಮ ಬದುಕು ಸವೆಸಿದ ಅವರ ನೆನಪಿನಲ್ಲೇ ರಾಷ್ಟ್ರೀಯ ವೈದ್ಯರ ದಿನ ಆಚರಿಸಬೇಕು ಎಂದು ನಿರ್ಧರಿಸಿದ ಭಾರತ ಸರ್ಕಾರ 1991ರಲ್ಲಿ ಜುಲೈ 1ನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲು ಕರೆಕೊಟ್ಟಿತು. ರಾಯ್ ಅವರು ಅಪ್ರತಿಮ ವೈದ್ಯರಾಗಿದ್ದರು. ತಮ್ಮ ದೂರದೃಷ್ಟಿ ನಿಲುವುಗಳಿಂದ ವೈದ್ಯಲೋಕಕ್ಕೆ ಅಪರೂಪವಾದ ಕೊಡುಗೆ ಕೊಟ್ಟವರು. ಮೇಲು ಕೀಳು ನೋಡದೆ, ಭೇದಭಾವ ಮಾಡದೆ ಎಲ್ಲರನ್ನೂ ಒಂದೇ ರೀತಿ ನೋಡಿದ ಜನಮೆಚ್ಚಿದ ವೈದ್ಯರಾಗಿದ್ದ ರಾಯ್, ಹೊಸತನದ ಆಲೋಚನೆಗಳನ್ನು ಹೊಂದಿದ್ದರು. 1905ರಲ್ಲಿ ಅವರು ಕೋಲ್ಕತ್ತಾ ವಿವಿಯಲ್ಲಿ ಓದುತ್ತಿರುವಾಗ ಬಂಗಾಳ ವಿಭಜನೆಯಾಯಿತು. ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದ ರಾಯ್ ಅವರು ಕೆಲ ಕಾಲ ಮಹಾತ್ಮ ಗಾಂಧೀಜಿಯ ವೈದ್ಯರೂ ಆಗಿದ್ದರು ಎನ್ನುವುದು ವಿಶೇಷ. ಅವರು ವೈದ್ಯರಾಗಿದ್ದೂ ಅಲ್ಲದೆ ಆಡಳಿತದಲ್ಲೂ ಮುಂದೆ ನಿಂತು ಕೆಲಸ ಮಾಡಿದ್ದು, ಅಚ್ಚರಿ ತರುವಂತಹದ್ದು. ಅನೇಕ ದೊಡ್ಡ ಆಸ್ಪತ್ರೆಗಳು ಅವರ ಕಾಲದಲ್ಲಿ ಸ್ಥಾಪನೆಯಾಗಿದೆ. ಸುಮಾರು 14 ವರ್ಷಗಳ ಕಾಲ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಅವರು ಆ ಸಮಯದಲ್ಲೂ ರೋಗಿಗಳ ಶುಶ್ರೂಷೆ ಮಾಡುತ್ತಿದ್ದರು. ಆ ಕಾರಣಕ್ಕೆ ಜನರ ಒಲವು ಗಳಿಸಿದ್ದರು. ಒತ್ತಡದ ಸೇವೆ : ರೋಗಿಗಳಿಗೆ ಅನುಗುಣವಾಗಿ ವೈದ್ಯರಿಲ್ಲ. ಇದರಿಂದಾಗಿ ಅನೇಕ ಬಾರಿ ಊಟ–ತಿಂಡಿ ಇಲ್ಲದೆಯೇ ಕೆಲಸ ಮಾಡಬೇಕಾಗತ್ತದೆ. ಚಿಕಿತ್ಸೆ ಸ್ವಲ್ಪ ತಡವಾದರೂ ರೋಗಿಯ ಕಡೆಯವರು ಹಲ್ಲೆಗೆ ಮುಂದಾಗುತ್ತಾರೆ. ಗ್ರಾಮೀಣ ಪ್ರದೇಶದ ವೈದ್ಯರು ಹೆಚ್ಚಾಗಿ ಇಂಥ ಹಲ್ಲೆ ಅನುಭವಿಸಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ. ವೈದ್ಯರ ರಕ್ಷಣೆಗೆ ಕಾನೂನು ಬಲ : ಕೋವಿಡ್ ಸಂದರ್ಭದಲ್ಲಿ ವೈದ್ಯರ ಮೇಲೆ ಹಲ್ಲೆಯ ಪ್ರಕರಣಗಳು ಹೆಚ್ಚಾದಾಗ, ಐಎಂಎ ಒತ್ತಾಯದ ಮೇರೆಗೆ ಕೇಂದ್ರವು ಅವರ ರಕ್ಷಣೆಗೆ ವಿಶೇಷ ಕಾನೂನು ರೂಪಿಸಿತು. 2020ರ ಎಪ್ರಿಲ್ನಲ್ಲಿ ಆ ಕುರಿತ ಸುಗ್ರೀವಾಜ್ಞೆಯೊಂದನ್ನು ಹೊರಡಿಸಿತು. ಸುಮಾರು 123 ವರ್ಷಗಳಷ್ಟು ಹಳೆಯದಾದ (1897ರ) ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ಮಾಡಿ, ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ಅಲ್ಲಿ ಅವಕಾಶ ನೀಡಲಾಯಿತು. ಹೊಸ ಕಾನೂನಿನ ಪ್ರಕಾರ ಈಗ ವೈದ್ಯರ ಮೇಲಿನ ಹಲ್ಲೆಯು ಜಾಮೀನುರಹಿತ ಅಪರಾಧ ಎನಿಸಿದೆ. ದೂರು ದಾಖಲಾಗಿ 30 ದಿನದೊಳಗೆ ತನಿಖೆ ನಡೆಸಬೇಕಾಗುತ್ತದೆ. ಅಪರಾಧಿಗೆ ಕನಿಷ್ಠ 3 ತಿಂಗಳು ಮತ್ತು ಗರಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ಕನಿಷ್ಠ ರೂ. 50,000ದಿಂದ ಗರಿಷ್ಠ ರೂ. 2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಇದೆ. ವೈದ್ಯರಿಗೆ ಗಂಭೀರ ಸ್ವರೂಪದ ಗಾಯಗಳಾದರೆ ಅಪರಾಧಿಗೆ ಗರಿಷ್ಠ 7 ವರ್ಷ ಜೈಲು ಮತ್ತು ₹ 5ಲಕ್ಷದವರೆಗೆ ದಂಡ ವಿಧಿಸಲೂ ಅವಕಾಶ ಇದೆ. ಆಸ್ತಿಗೆ ಹಾನಿ ಉಂಟುಮಾಡಿದರೆ, ಅದರ ಮಾರುಕಟ್ಟೆ ಮೌಲ್ಯದ ಎರಡರಷ್ಟು ದಂಡ ವಿಧಿಸಲೂ ಅವಕಾಶ ಕಲ್ಪಿಸಲಾಗಿದೆ. ಈ ಕಾಯ್ದೆಗೆ 2020ರ ಸೆಪ್ಟೆಂಬರ್ನಲ್ಲಿ ರಾಜ್ಯಸಭೆಯೂ ಅನುಮೋದನೆ ನೀಡಿದೆ. ಈ ಕಾನೂನು ಇದ್ದರೂ ನಮ್ಮ ಸಮಾಜ ವೈದ್ಯರನ್ನು ನೋಡುವ ದೃಷ್ಟಿಕೋನ ಬದಲಾಗಬೇಕಾಗಿದೆ. ರೋಗಿಯು ಅನಾರೋಗ್ಯದಿಂದ ಆರೋಗ್ಯ ಹೊಂದಿದರೆ ವೈದ್ಯರಿಗೆ ಧನ್ಯವಾದ ಹೇಳದಿದ್ದರೂ, ಆ ರೋಗಿ ನಿಧನ ಹೊಂದಿದರೆ ವೈದ್ಯರ ನಿಲ೯ಕ್ಷದಿಂದ ಸಾವು ಎಂಬ ಹಣೆಪಟ್ಟಿ ಕಟ್ಟಿ ವೈದ್ಯರು ತಮ್ಮ ರಕ್ಷಣೆಗೆ ಪೋಲಿಸರ ಮೊರೆ ಹೋಗಬೇಕಾದ ಕಾಲ ಬಂದಿದೆ. ಇದು ಸರಿಯಲ್ಲ. ವೈದ್ಯರು ಕೂಡ ಮನುಷ್ಯರೇ ಅವರಿಗೂ ಭಾವನೆಗಳು, ಕುಟುಂಬ, ವೈಯುಕ್ತಿಕ ಬದುಕು ಇದೆ ಎಂಬುದನ್ನು ಅಥ೯ ಮಾಡಬೇಕಾಗಿದೆ. ಒಟ್ಟಾಗಿ ನಮ್ಮ ಸಮಾಜದ ಆರೋಗ್ಯದ ರಕ್ಷಕರಾಗಿರುವ ಎಲ್ಲಾ ವೈದ್ಯರಿಗೂ ಮನದಾಳದ ಕೃತಜ್ಞತೆಗಳು. ರಾಘವೇಂದ್ರ ಪ್ರಭು, ಕವಾ೯ಲು - ಸಂ.ಕಾಯ೯ದಶಿ೯ ಕ .ಸಾ.ಪ ಉಡುಪಿ
ರೋಟರಿ ಕ್ಲಬ್ ಶಂಕರಪುರದ ನೂತನ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಅಧಿಕಾರ ಸ್ವೀಕಾರ
Posted On: 30 Jun 2024, 11:10 PM
ಕಟಪಾಡಿ : ಶಂಕರಪುರ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕಾಪು ಪರಿಸರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಇವರು ಇನ್ನಂಜೆ ಯುವತಿ ಮಂಡಲ ಇದರ ಪೂರ್ವ ಅಧ್ಯಕ್ಷರಾಗಿ, ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇನ್ನಂಜೆ ಒಕ್ಕೂಟದ ಮಾಜಿ ಅಧ್ಯಕ್ಷರಾಗಿ, ಕಾಪು ಬಂಟರ ಸಂಘ ಇದರ ಸದಸ್ಯರಾಗಿ, ರೋಟರಾಕ್ಟ್ ಸಮ್ಮೇಳನದಲ್ಲಿ Rotaract Queen ಆಗಿ ಮೂಡಿ ಬಂದ ಇವರು 2018- 19 8 Rotaract District 3182 ಮಹಿಳಾ ಜಿಲ್ಲಾ ಪ್ರತಿನಿಧಿಯಾಗಿ (DRR) ಸುಮಾರು 42 ಕ್ಲಬ್ ಗಳನ್ನು ಮಾಡಿ ಯಶಸ್ವಿ ಪರಿಚಯ ಕಾನ್ಸರೆನ್ಸ್ ಮಾಡಿದ ಹೆಗ್ಗಳಿಕೆ ಇವರದ್ದು. 2015 ರಲ್ಲಿ ರಾಜಕೀಯ ಜೀವನಕ್ಕೆ ಕಾಲಿಟ್ಟ ಇವರು ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರಾಗಿ, 5 ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಪ್ರಸ್ತುತ ಇನ್ನಂಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪದಗ್ರಹಣ ಸಮಾರಂಭದಲ್ಲಿ ಗಣ್ಯರು, ಶಂಕರಪುರ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ
Posted On: 30 Jun 2024, 08:11 PM
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರಿ ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಯೋ ಸಹಜ ಕಾರಣದಿಂದಾಗಿ ಸುಮಾರು 95 ವರ್ಷ ವಯಸ್ಸಿನ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಳೆ ವಿದ್ಯಾರ್ಥಿ ಸಂಘದಿಂದ ಕೆಸರು ಗದ್ದೆ ಕ್ರೀಡಾಕೂಟ
Posted On: 30 Jun 2024, 07:57 PM
ಉಚ್ಚಿಲ : ಇಲ್ಲಿನ ಸರಸ್ವತಿ ಮಂದಿರ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಕೆಸರುಗದ್ದೆ ಕ್ರೀಡಾಕೂಟವನ್ನು ಭಾನುವಾರ ಉಚ್ಚಿಲ ಬದ್ದಿಂಜೆ ಮಠದ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು. ಕ್ರೀಡಾಕೂಟವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದ್ಯುಮಣಿ ಆರ್ ಭಟ್ ಮತ್ತು ಗಣ್ಯರು ದೀಪ ಪ್ರಜ್ವಲಿಸಿ, ಕೆಸರು ಗದ್ದೆಗೆ ಹಾಲು, ಸಿಯಾಳ ನೀರು ಹಾಗೂ ದೇವರ ಪ್ರಸಾದವನ್ನು ಹಾಕುವ ಮೂಲಕ ಚಾಲನೆ ನೀಡಿದರು. ಉಚ್ಚಿಲ ಸರಸ್ವತಿ ಮಂದಿರ ಕನ್ನಡ ಶಾಲೆ ಹಾಗೂ ಸ್ಥಳೀಯ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಮುಕ್ತ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಧ್ಯುಮಣಿ ಭಟ್, ಪ್ರಾಥಮಿಕ ಶಾಲಾ ಸಂಚಾಲಕ ಮೋಹನದಾಸ ಶೆಟ್ಟಿ, ಗೌರವಾಧ್ಯಕ್ಷರುಗಳಾದ ಬಾಲಕೃಷ್ಣ ಪೂಜಾರಿ ಉಚ್ಚಿಲ, ಧೀರಜ್ ಹುಸೈನ್, ಲಕ್ಷ್ಮೀ ಟೀಚರ್, ಸರಸ್ವತಿ ಮಂದಿರ ಪ್ರೌಡ ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ, ಮಾಜಿ ತಾಪಂ ಉಪಾಧ್ಯಕ್ಷ ಯುಸಿ ಶೇಕಬ್ಬ, ಲಕ್ಷ್ಮೀಶ ಭಟ್, ಸಂಘಟನಾ ಕಾರ್ಯದರ್ಶಿ ಕಾಂತಿ ಆಚಾರ್ಯ, ಕಾರ್ಯದರ್ಶಿ ಸತೀಶ್ ಕುಲಾಲ್, ಕೋಶಾಧಿಕಾರಿ ಅನಿತ್ ಸಾಲ್ಯಾನ್ ಮತ್ತಿತರು ವೇದಿಕೆಯಲ್ಲಿದ್ದರು. ಉಚ್ಚಿಲ ಸರಸ್ವತಿ ಮಂದಿರ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಕುಲಾಲ್ ಮತ್ತು ವಿದ್ಯಾಪ್ರಭೋಧಿನಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ ಕ್ರೀಡೆಯಲ್ಲಿ ಸಹಕರಿಸಿದರು. ಚಂದ್ರ ಶೇಖರ ಶೆಟ್ಟಿ ಪೊಲ್ಯ ಸ್ವಾಗತಿಸಿ, ನಿರೂಪಿಸಿದರು. ಸತೀಶ್ ಕುಲಾಲ್ ವಂದಿಸಿದರು.
