Updated News From Kaup

ಕಟಪಾಡಿ : ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ಇಷ್ಟಾರ್ಥ ನೆರವೇರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ

Posted On: 20-05-2024 03:51PM

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸಂಕಲ್ಪದಲ್ಲಿ 2018 ರಂದು ಸ್ಥಾಪನೆಯಾದ ಪ್ರಾಣಿ-ಪಕ್ಷಿ ಮೋಕ್ಷಕಟ್ಟೆ ಬಳಿಕ ಈ ಕಟ್ಟೆಯಲ್ಲಿ ಕಾಲಭೈರವ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಗಿದೆ.

ಉಡುಪಿ : ಜನತಾದಳ ಪಕ್ಷ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆ

Posted On: 20-05-2024 01:29PM

ಉಡುಪಿ : ಜನತಾದಳ ಜಾತ್ಯಾತೀತ ಪಕ್ಷ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್. ಡಿ.ದೇವೇಗೌಡರ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.

ಕಟಪಾಡಿ : ಕೋಟೆ ನಾಗರಿಕ ಸೇವಾ ಸಮಿತಿ ವತಿಯಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ; ಸನ್ಮಾನ

Posted On: 19-05-2024 03:49PM

ಕಟಪಾಡಿ : ಸಾಧಿಸುವ ಮನಸ್ಸುಗಳಿಗೆ ಹುಟ್ಟೂರ ಸನ್ಮಾನ ಅತಿ ಮುಖ್ಯವಾಗಿರೋದು. ನಮ್ಮೂರಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ನಾವು ಗುರುತಿಸಿರುವುದು ಹೆಮ್ಮೆಯ ಸಂಗತಿ ಇದು ವಿದ್ಯಾರ್ಥಿಗಳಿಗೆ ಇನ್ನೊಂದಷ್ಟು ಸ್ಪೂರ್ತಿಯ ಜೊತೆಗೆ ಜವಾಬ್ದಾರಿಯನ್ನು ನೀಡುತ್ತದೆ ಎಂದು ಕಟಪಾಡಿಯ ಸೃಷ್ಟಿ ಫೌಂಡೇಶನ್ ಅಧ್ಯಕ್ಷರಾದ ಪ್ರಕಾಶ್ ಸುವರ್ಣ ಕಟಪಾಡಿ ಹೇಳಿದರು. ಅವರು ಕೋಟೆ ನಾಗರಿಕ ಸೇವಾ ಸಮಿತಿ ವತಿಯಿಂದ ಕೋಟೆ ಸೌಜನ್ಯ ನಿಲಯದಲ್ಲಿ ಭಾನುವಾರ ನಡೆದ ಅತ್ಯಧಿಕ ಅಂಕ ಗಳಿಸಿದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ - ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಮೇ 19 - 20 : ಪರಿಚಯ ಪ್ರತಿಷ್ಠಾನ ಪಾಂಬೂರು - ಬಹುಮುಖಿ 2024 ಸಾಂಸ್ಕೃತಿಕ ಉತ್ಸವ

Posted On: 19-05-2024 10:35AM

ಕಾಪು : ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವ ಪಾಂಬೂರಿನ ಪರಿಚಯ ಪ್ರತಿಷ್ಠಾನವು ಬಹುಮುಖಿ 2024 ಸಾಂಸ್ಕೃತಿಕ ಉತ್ಸವವನ್ನು ಇದೇ ಮೇ 19 ಮತ್ತು ಮೇ 20ರಂದು ಪಾಂಬೂರು ರಂಗಪರಿಚಯದಲ್ಲಿ ಆಯೋಜಿಸಿದೆ.

ಕರಾವಳಿ ಸೊಗಡಿನ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಒಲವು ತೋರಬೇಕಿದೆ : ಬಿ.ಜಯಕರ್ ಶೆಟ್ಟಿ ಇಂದ್ರಾಳಿ

Posted On: 19-05-2024 10:19AM

ಉಡುಪಿ : ಸಿನೆಮಾಗಳಲ್ಲಿ ಕರಾವಳಿಯ ಕಲಾವಿದರು, ತಂತ್ರಜ್ಞರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ಮಾಡುತ್ತಿದ್ದು, ನಮ್ಮ ಕರಾವಳಿಯ ಸೊಗಡನ್ನು ಪ್ರತಿಬಿಂಬಿಸುವ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಒಲವು ತೋರಬೇಕಿದೆ ಎಂದು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಅಮ್ಚೆ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣಗೊಳ್ಳುತ್ತಿರುವ ಪ್ರೊಡಕ್ಷನ್ ನಂ.1 ಮಕ್ಕಳ ಕನ್ನಡ ಚಲನಚಿತ್ರದ ಕಲಾವಿದರ ಆಯ್ಕೆ ಶಿಬಿರವನ್ನು ಜಗನ್ನಾಥ ಸಭಾ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಟೋಲ್ ನಲ್ಲಿ ಸ್ಥಳೀಯ ವಾಹನಗಳಿಗೆ ನೀಡಿದ ವಿನಾಯಿತಿ ರದ್ದು ಪಡಿಸಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ : ಶೇಖರ್ ಹೆಜ್ಮಾಡಿ

Posted On: 18-05-2024 09:58PM

ಹೆಜಮಾಡಿ : ಹೆಜಮಾಡಿ, ಸಾಸ್ತಾನ ಹಾಗು ತೊಕ್ಕೊಟ್ಟು ಟೋಲ್ ಪ್ಲಾಜಾಗಳನ್ನು ಹೊಸ ಕಂಪನಿಯು ಟೋಲ್ ಸಂಗ್ರಹಕ್ಕೆ ಗುತ್ತಿಗೆ ಪಡೆದಿದ್ದು, ಈ ಹಿಂದೆ 2016 ರಿಂದ ನಿರಂತರವಾಗಿ ಹೋರಾಟ ಮಾಡುವುದರ ಮೂಲಕ ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿಯನ್ನು ಪಡೆದಿರುತ್ತೇವೆ. ಸದ್ಯ ಟೋಲ್ ಪ್ಲಾಜಾದ‌ ಅಧಿಕಾರಿಗಳು ಸ್ಥಳೀಯ ವಾಹನಗಳು ಟೋಲ್ ನಲ್ಲಿ ಸಂಚಾರಿಸಿದಾಗ ಅವರ ಪಾಸ್ಟ್ ಟಾಗ್ ನಿಂದ ಹಣ ಕಡಿತಗೊಳಿಸುವ ಪ್ರಕ್ರಿಯೆ ಬಗ್ಗೆ ಸ್ಥಳೀಯ ವಾಹನ ಮಾಲೀಕರಿಂದ ದೂರುಗಳು ಬಂದಿರುತ್ತದೆ. ಸ್ಥಳೀಯರಿಗೆ ನೀಡಿದ ಟೋಲ್ ವಿನಾಯಿತಿಯನ್ನು ಸಂಪೂರ್ಣ ಕಿತ್ತು ಹಾಕುವ ಹುನ್ನಾರವಿದು.

ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

Posted On: 16-05-2024 09:13PM

ಕಾರ್ಕಳ : Institute of Company Secretary of India ರವರು ಮೇ 4, 2024 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,ಎ.ಎಸ್. ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, ಶ್ರೀ ಹರಿ ಹಾಗೂ ಸುವಿಕ್ಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

Posted On: 16-05-2024 09:12PM

ಕಾರ್ಕಳ : Institute of Company Secretary of India ರವರು ಮೇ 4, 2024 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,ಎ.ಎಸ್. ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, ಶ್ರೀ ಹರಿ ಹಾಗೂ ಸುವಿಕ್ಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ನೈರುತ್ಯ ಪದವೀಧರರ ಕ್ಷೇತ್ರ : ರಘುಪತಿ ಭಟ್ ನಾಮಪತ್ರ ಸಲ್ಲಿಕೆ

Posted On: 16-05-2024 08:54PM

ಉಡುಪಿ : ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅವರು ನಾಮಪತ್ರ ಸಲ್ಲಿಸಿದರು.

ಮೇ 18 : ಶ್ರೀ ಪಲಿಮಾರು ಮೂಲ ಮಠದಲ್ಲಿ ವಿಹಿತಮ್ ಕಾರ್ಯಕ್ರಮ

Posted On: 16-05-2024 09:54AM

ಪಲಿಮಾರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 ರಿಂದ 40 ರ ವಯೋಮಿತಿಯ ತ್ರಿಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮತ್ತು ಪೇಜಾವರ ಶ್ರೀಗಳ ಅಭಿನಂದನ ಸಮಾರಂಭವು ಮೇ 18, ಶನಿವಾರ ಪಲಿಮಾರು ಮೂಲ ಮಠದಲ್ಲಿ ನಡೆಯಲಿದೆ ಎಂದು ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹೇಳಿದರು. ಅವರು ಬುಧವಾರ ಪಲಿಮಾರು ಮೂಲ ಮಠದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ವಿಹಿತಮ್ ಸಮಾವೇಶವು ಹಿಂದೂ ಸಮಾಜದ ಭಾಗವಾದ ಬ್ರಾಹ್ಮಣ ಸಮಾಜದಲ್ಲಿಯ ಯುವಕರನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅತಿಥಿಗಳಾಗಿದ್ದು, ವಿಚಾರಗೋಷ್ಠಿಗಳ ಮೂಲಕ ಚಿಂತನ ಮಂಥನ ನಡೆಯಲಿದೆ ಎಂದರು.