Updated News From Kaup
ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ ಗುರೂಜಿ108 ದಿನಗಳಲ್ಲಿ 108 ಕ್ಷೇತ್ರ ಪ್ರದಕ್ಷಣೆ : ಬಂಟಕಲ್ಲು ಕ್ಷೇತ್ರ ಭೇಟಿ
Posted On: 30 Jun 2024, 12:59 PM
ಕಟಪಾಡಿ : ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ ಗುರೂಜಿ ಅವರ 108 ದಿನಗಳಲ್ಲಿ 108 ಕ್ಷೇತ್ರ ಪ್ರದಕ್ಷಣೆ ಅಂಗವಾಗಿ 17 ದಿನದ ಪ್ರದಕ್ಷಿಣೆ ಜೂನ್ 30ರಂದು ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಧಮ೯ದಶಿ೯ ಶಶಿಧರ ವಾಗ್ಲೆ, ಗುರೂಜಿಯವರನ್ನು ಬರಮಾಡಿಕೊಂಡರು. ಈ ಸಂದಭ೯ದಲ್ಲಿ ದೇವಳದಲ್ಲಿ ನಡೆದ ಶ್ರೀ ರಾಮ ತಾರಕ ಯಜ್ಞ ಕಾರ್ಯಕ್ರಮವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದಭ೯ದಲ್ಲಿ ದೇವಸ್ಥಾನದ ಪುರೋಹಿತರಾದ ಸಂದೇಶ ಭಟ್, ವೆಂಕಟೇಶ್ ಭಟ್, ಶಿವಾನಂದ ಭಟ್, ರಾಘವೇಂದ್ರ ಪ್ರಭು, ಕವಾ೯ಲು, ಶಿಲ್ಪಾ ಮಹೇಶ್, ಸತೀಶ್ ದೇವಾಡಿಗ, ನಿಲೇಶ್, ಪ್ರದೀಪ್ ಪೂಜಾರಿ, ಶಶಾಂಕ್ ಬಂಗೇರ, ನಿಮಿಶ್ ಜತ್ತನ್ ಮುಂತಾದವರು ಉಪಸ್ಥಿತರಿದ್ದರು.
ಕಾಪು : ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ನಿವೃತ್ತಿ ಬೀಳ್ಕೊಡುಗೆ
Posted On: 29 Jun 2024, 06:44 PM
ಕಾಪು : ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಹೊರ್ತಿ ಅಮಗೊಂಡ ಇವರ ನಿವೃತ್ತಿ ಬೀಳ್ಕೊಡುಗೆ ಶನಿವಾರ ಜರಗಿತು. ಈ ಸಂದರ್ಭ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕಿಶೋರ್ ಕುಮಾರ್ ಗುರ್ಮೆ, ಪಿ.ಕೆ.ಎಸ್ ಪ್ರೌಢ ಶಾಲೆಯ ಶಿಕ್ಷಕರಾದ ಚಂದ್ರಕಾಂತ್ ಮಾಣಿ ನಾಯ್ಕ್, ಹಳೆ ವಿದ್ಯಾರ್ಥಿಗಳಾದ ಯೋಗೀಶ್ ಆಚಾರ್ಯ, ವಿನೇಶ್ವರಿ, ಗಣೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರೋಹಿತ್, ಸಿಆರ್ ಪಿ ಸರಿತಾ ಹಾಗೂ ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.
ಕಟಪಾಡಿ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಅಮೃತ ಮಹೋತ್ಸವ ಉದ್ಘಾಟನೆ
Posted On: 29 Jun 2024, 06:37 PM
ಕಟಪಾಡಿ : ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಕಟಪಾಡಿ ಇದರ "ಅಮೃತ ಮಹೋತ್ಸವ" ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಜನರೇಟರ್ ಹಸ್ತಾಂತರ : ಕೆನರಾ ಬ್ಯಾಂಕ್ ಕಟಪಾಡಿ ಶಾಖೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಜನರೇಟರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ. ಸತ್ಯೇಂದ್ರ ಪೈ, ಕಟಪಾಡಿ ಕೆನರಾ ಬ್ಯಾಂಕ್ ಪ್ರಬಂಧಕರಾದ ಸುಶ್ಮಿತಾ ಪಿ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ವಸಂತ್ ಮಾಧವ್ ಭಟ್, ರವೀಂದ್ರನಾಥ ಶೆಟ್ಟಿ, ಎ. ಲಕ್ಮೀ ಬಾಯಿ ಹಾಗೂ ಉಪಾಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು.
ಮಳೆ ಮುಂಜಾಗ್ರತಾ ಕ್ರಮ : ನಾಳೆ (ಜೂ.28) ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
Posted On: 27 Jun 2024, 07:28 PM
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.28) ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ರಜೆ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ ರಜೆ ಸಾರಲಾಗಿದೆ.
ಕಾರ್ಕಳ : ಮುಂಡ್ಕೂರುವಿನಲ್ಲಿ ಬೆಂಕಿಗಾಹುತಿಯಾದ ಮನೆ
Posted On: 27 Jun 2024, 05:51 PM
ಕಾರ್ಕಳ : ಇಲ್ಲಿನ ಮುಂಡ್ಕೂರು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅನಾಹುತದಿಂದ ಮನೆ ಹಾಗೂ ಮನೆಯಲ್ಲಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ. ಮುಂಡ್ಕೂರು ಗ್ರಾಮದ ಹಳೆ ಮನೆ ಪುರುಷೋತ್ತಮ ಶೆಟ್ಟಿಯವರ ಮನೆ ಇದಾಗಿದ್ದು ಬೆಲೆಬಾಳುವ ವಸ್ತುಗಳ ಸಹಿತ ಇನ್ನಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಅಂದಾಜು 5 ಲಕ್ಷಕ್ಕೂ ಅಧಿಕ ಮೊತ್ತದ ನಷ್ಟ ಉಂಟಾಗಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಜನಪ್ರತಿನಿಧಿಗಳು, ಪಂಚಾಯತ್ ಮಟ್ಟದ ಅಧಿಕಾರಿಗಳಾಗಲಿ ಇಷ್ಟರವರೆಗೆ ಭೇಟಿ ನೀಡಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರಮುಖರಾದ ಸಂತೋಷ್ ನಮ್ಮ ಕಾಪು ನ್ಯೂಸ್ ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.
ಕಾಪು ತಾಲೂಕಿನಲ್ಲಿ ಮಳೆಯಿಂದಾಗಿ ಮನೆಗಳಿಗೆ ಹಾನಿ
Posted On: 27 Jun 2024, 04:17 PM
ಕಾಪು : ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು ಕಾಪು ತಾಲೂಕಿನ ಕೆಲವೆಡೆ ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಕಾಪು ತಾಲೂಕಿನ ತೆಂಕಗ್ರಾಮದ ಭಾಸ್ಕರ್ ಅವರ ವಾಸ್ತವ್ಯದ ಮನೆಗೆ ಹಾನಿ ಸಂಭವಿಸಿದೆ. ಶಿರ್ವದ ಲಕ್ಷ್ಮಣ ಆಚಾರಿಯವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ನಂದಿಕೂರು ಗ್ರಾಮದ ಸಂತೋಷ್ ಪೂಜಾರಿಯವರ ಮನೆಗೂ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಳೆ ಹಿನ್ನಲೆ; ಉಡುಪಿ ಜಿಲ್ಲೆಯಲ್ಲಿ (ಜೂ. 27) ಶಾಲೆಗಳಿಗೆ ರಜೆ ಇಲ್ಲ – ಡಾ. ವಿದ್ಯಾ ಕುಮಾರಿ
Posted On: 26 Jun 2024, 08:20 PM
ಉಡುಪಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದು ಉಡುಪಿ ಜಿಲ್ಲೆಯಲ್ಲಿ ಮಳೆ ಕಡಿಮೆ ಇರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ. ಮಳೆ ಪ್ರಮಾಣ ಹೆಚ್ಚಾದರೆ ಮುಂದಿನ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸುವ ಸಾಧ್ಯತೆ ಇದೆ. ಆದರೆ ಸದ್ಯಕ್ಕೆ ಉಡುಪಿ ಜಿಲ್ಲೆಗೆ ರಜೆಯಿರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಜೇಸಿಐ ಉಡುಪಿ ಸಿಟಿ : ವೈಯಕ್ತಿಕ ಸ್ಪಚ್ಚತೆ ಕಾರ್ಯಕ್ರಮ
Posted On: 26 Jun 2024, 07:18 PM
ಉಡುಪಿ : ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಕಡಿಯಾಳಿ ಕಮಲಾಬಾಯಿ ಪ್ರೌಢ ಶಾಲೆಯಲ್ಲಿ ವಿದ್ಯಾಥಿ೯ನಿಯರಿಗೆ ವೈಯಕ್ತಿಕ ಸ್ಪಚ್ಚತೆ ಬಗ್ಗೆ ಕಾಯ೯ಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ| ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಮತ್ತು ಆಪ್ತ ಸಮಾಲೋಚಕಿ ಸೌಜನ್ಯ ಶೆಟ್ಟಿ ಆಗಮಿಸಿ ತರಬೇತಿ ನೀಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಉಡುಪಿ ಸಿಟಿ ಮಹಿಳಾ ಸಂಯೋಜಕಿ ನಯನ ಉದಯ್ ನಾಯ್ಕ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ಸುದಶ೯ನ ನಾಯಕ್, ಜೇಸಿ ಅಧ್ಯಕ್ಷೆ ಡಾ| ಹರಿಣಾಕ್ಷಿ ಕಕೇ೯ರ , ಜೇಜೆಸಿ ವೈಷ್ಣವಿ ಭಟ್ ಮುಂತಾದವರಿದ್ದರು.
ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ
Posted On: 26 Jun 2024, 07:13 PM
ಅದಮಾರು : ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ರವರು, "ಮಾದಕ ವಸ್ತು ಸೇವನೆ ವಿದ್ಯಾರ್ಥಿಗಳ ಬಾಳನ್ನೇ ಹಾಳು ಮಾಡುತ್ತದೆ. ಕೆಲವೊಮ್ಮೆ ಮಾದಕ ವಸ್ತುಗಳ ಮಾರಾಟಗಾರರು ಮಕ್ಕಳ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ದಯವಿಟ್ಟು ಮಾದಕ ವಸ್ತುಗಳಿಗೆ ಬಲಿಯಾಗಬೇಡಿ. ಹಾಗೆಯೇ ತಂಬಾಕು ಉತ್ಪನ್ನ ಗಳನ್ನು ಕೂಡಾ ಸೇವಿಸಬೇಡಿ. ನಿಮ್ಮ ಆರೋಗ್ಯ ಉತ್ತಮವಾಗಿದ್ದರೆ, ಮುಂದೆ ಏನನ್ನು ಬೇಕಾದರೂ ಸಾಧಿಸಬಹುದು" ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರಾದ ದೇವಿ ಪ್ರಸಾದ್ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಪ್ರತಿನಿಧಿಗಳಾದ ಪ್ರೊಫೆಸರ್ ನಿತ್ಯಾನಂದರವರು ಮಾತನಾಡಿ "ವಿದ್ಯಾರ್ಥಿ ಜೀವನದಲ್ಲಿ ನೀವು ಸರಿಯಾಗಿದ್ದರೆ ಜೀವನದ ಕೊನೆತನಕ ಸರಿಯಾಗಿರುತ್ತೀರಿ. ಯಾವುದೇ ಕಾರಣಕ್ಕೂ ದುಷ್ಚಟಗಳಿಗೆ ಬಲಿಯಾಗಬೇಡಿ. ಸ್ನೇಹದ ಹೆಸರಿನಲ್ಲಿ ಮೋಸ ಮಾಡುವವರಿದ್ದಾರೆ. ಅಂತವರಿಂದ ಆದಷ್ಟು ದೂರವಿರಿ" ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಜೀವ್ ನಾಯಕ್ ರವರು, ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಹೆಚ್ಚು ಗಮನ ಕೊಡಬೇಕು ಎಂದರು. ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಕಾಂತ್ ರಾವ್ ರವರು ಉಪಸ್ಥಿತರಿದ್ದರು. ಕು. ಸಿರಿ ಮಹಿದಾಸ್ ಸ್ವಾಗತಿಸಿದರು. ಕು.ಫಾತಿಮಾ ಸಹನ ಧನ್ಯವಾದವಿತ್ತಳು. ಕು. ನಿತೀಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದಳು.
ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ
Posted On: 25 Jun 2024, 07:35 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಸ?ಸ್ವರ್ಣ ಗದ್ದುಗೆ ಸಮರ್ಪಣೆಯ ಸಂಕಲ್ಪಕ್ಕೆ ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಣಾ ಸಮಾರಂಭ ಮಂಗಳವಾರ ಜರಗಿತು. ಮುಂಬೈ ಹೇರಂಭ ಸಂಸ್ಥೆಯ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ದೇವಿಯ ಆರಾಧಕರಿಗೆ ಸುವರ್ಣಾವಕಾಶ ಒದಗಿ ಬಂದಿದ್ದು, ಕಾಪುವಿನ ಮಾರಿಯಮ್ಮ ದೇವಿಯನ್ನು ಸುವರ್ಣ ಗದ್ದುಗೆಯಲ್ಲಿ ನೋಡುವಲ್ಲಿ ಎಲ್ಲರಿಗೂ ಕೈ ಜೋಡಿಸುವ ಭಾಗ್ಯ. ತಂದೆ ತಾಯಿ ಕೊಟ್ಟ ಸಂಸ್ಕಾರ, ಸತತ ಪರಿಶ್ರಮ, ಧರ್ಮ ಕಾರ್ಯದ ಮೂಲಕ ದೈವೀ ಶಕ್ತಿಯು ಜಾಗೃತಗೊಳ್ಳಲಿದೆ. ಆ ನಿಟ್ಟಿನಲ್ಲಿ ಇತಿಹಾಸ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ಶ್ರದ್ಧಾ ಭಕ್ತಿಯಿಂದ ಕೈ ಜೋಡಿಸುವ ಮೂಲಕ ಕರಾವಳಿಯ ಶ್ರೇಷ್ಠ ಶ್ರದ್ಧಾ ಕೇಂದ್ರವಾಗಿ ಮೂಡಿ ಬರಲಿ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಅಮ್ಮನ ನುಡಿಯಂತೆ ಸ್ವರ್ಣ ಗದ್ದುಗೆ ಸಮರ್ಪಣೆಗೆ ಮುಂದಾಗಿದ್ದು, ಶ್ರೀ ಕ್ಷೇತ್ರಕ್ಕೆ ಶಕ್ತಿ, ಚೈತನ್ಯವನ್ನು ತುಂಬುವಲ್ಲಿ ಸ್ವರ್ಣ ಗದ್ದುಗೆ ನಿರ್ಮಾಣದ ಸಂದರ್ಭ ಇಲ್ಲಿ ಬರುವ ಬಂಗಾರದ ಮಳೆಯು ಎಲ್ಲರ ಬದುಕಿಗೂ ಸ್ವರ್ಣ ಯುಗವಾಗಲಿ. ಈ ಪುಣ್ಯ ಅವಕಾಶವನ್ನು ಭಕ್ತರೆಲ್ಲರೂ ಸದುಪಯೋಗಪಡಿಸಿಕೊಂಡು ಸನ್ನಿಧಾನದಲ್ಲಿ ಸ್ವರ್ಣ ಸಮರ್ಪಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಿದರು. ವಿ.ಕೆ. ಗ್ರೂಪ್ ಆಫ್ ಕಂಪೆನಿ ಮುಂಬಯಿಯ ಆಡಳಿತ ನಿರ್ದೇಶಕ ಕೆ.ಎಮ್. ಶೆಟ್ಟಿ ಅವರು ಸ್ವರ್ಣ ಗದ್ದುಗೆ ಮಾದರಿಯನ್ನು ಅನಾವರಣ ಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಎಂಆರ್ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕ ಡಾ|ಕೆ. ಪ್ರಕಾಶ್ ಶೆಟ್ಟಿ, ಆಶಾ ಪ್ರಕಾಶ್ ಶೆಟ್ಟಿ ದಂಪತಿಯನ್ನು ಸಮ್ಮಾನಿಸಿ ಗೌರವಿಸಲಾಯಿತು. ಸುಮಾರು ೩.೮೨ ಕೋಟಿ ರೂ. ವೆಚ್ಚದ ಅದಾನಿ ನಿರ್ಮಲ್ ಸೆಂಟರ್ ಕಟ್ಟಡವನ್ನು ನಿರ್ಮಿಸಿ ಕೊಡುವಂತೆ ಅದಾನಿ ಸಮೂಹದ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಅವರಲ್ಲಿ ಮನವಿಯನ್ನು ಸಲ್ಲಿಸಲಾಯಿತು. ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮುಂಬಯಿ ತುಂಗಾ ಗ್ರೂಪ್ ಆಫ್ ಹೋಟೆಲ್ನ ಆಡಳಿತ ನಿರ್ದೇಶಕ ಸುಧಾಕರ್ ಹೆಗ್ಡೆ, ಮುಂಬಯಿ ಈಸ್ಟ್ವೆಲ್ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರಭಾಕರ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ತಾಲೂಕು ತಹಶೀಲ್ದಾರ್ ಪ್ರತಿಭಾ ಆರ್. ಈ ಪುಣ್ಯ ಕಾರ್ಯದಲ್ಲಿ ಭಕ್ತರೆಲ್ಲರೂ ಕೈ ಜೋಡಿಸುವಂತೆ ವಿನಂತಿಸಿದರು. ಈ ಸಂದರ್ಭ ಮುಂಬಯಿ ಉಚ್ಚ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕೋಟ್ಯಾನ್, ಮುಂಬಯಿ ಉದ್ಯಮಿ ಮಾನವ್ ಶಂಕರ್ ಜೋಶಿ, ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಸುವರ್ಣ, ಹೊಸಮಾರಿಗುಡಿ ಜೀರ್ಣೋದ್ಧಾರ ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಮಾರಿಗುಡಿಯ ಆಡಳಿತ ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಪ್ರಮುಖರಾದ ಚಂದ್ರಹಾಸ ಶೆಟ್ಟಿ ಪೂನಾ, ಕೃಷ್ಣ ಶೆಟ್ಟಿ, ಶಿವಾನಂದ ಶೆಟ್ಟಿ, ಸಂತೋಷ್ ಶೆಟ್ಟಿ ಪೂನಾ, ದಿವಾಕರ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಸನ್ನ ಆಚಾರ್ಯ ಕಾಪು, ಕಾರ್ಯದರ್ಶಿ ರವಿ ಭಟ್ ಮಂದಾರ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಮುಖರಾದ ಯೋಗೀಶ್ ಶೆಟ್ಟಿ ಬಾಲಾಜಿ, ಜಯರಾಮ ಆಚಾರ್ಯ, ಸಂದೀಪ್, ಮಾಧವ ಆರ್ ಪಾಲನ್, ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶ್ರೀ ಹೊಸಮಾರಿಗುಡಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸಿಬಂದಿ ವರ್ಗ ಉಪಸ್ಥಿತರಿದ್ದರು. ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪ್ರಧಾನ ಕಾರ್ಯಾಧ್ಯಕ್ಷ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ಕದ್ರಿ ನವನೀತ್ ಶೆಟ್ಟಿ ಸಮ್ಮಾನಿತರ ಅಭಿನಂದನಾ ನುಡಿಗಳನ್ನಾಡಿದರು. ಸಮಾಜ ಸೇವಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ ಕೊತ್ವಾಲಗುತ್ತು ವಂದಿಸಿದರು. ಈ ಸಂದರ್ಭ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಉಪಸ್ಥಿತಿಯಲ್ಲಿ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆ, ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಂಕಲ್ಪ, ಮಹಾ ಮಂಗಳಾರತಿ, ಭಕ್ತಾಧಿಗಳಿಗೆ ಸ್ವರ್ಣ ಸಮರ್ಪಣೆಗೆ ಅವಕಾಶ, ಪ್ರಸಾದ ಭೋಜನ ನಡೆಯಿತು.
