Updated News From Kaup

ನೈಋತ್ಯ ಶಿಕ್ಷಕರ ಕ್ಷೇತ್ರ - ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

Posted On: 15-05-2024 10:37PM

ಮಂಗಳೂರು : ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಬುಧವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಶಿರ್ವ : ನಾಲ್ಕು ವಿದ್ಯಾರ್ಥಿಗಳು ನಾಪತ್ತೆ

Posted On: 15-05-2024 01:34PM

ಶಿರ್ವ : ಇಲ್ಲಿನ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಮಂಗಳವಾರ ನಡೆದಿದೆ.

ಉಡುಪಿ : ಮತಗಟ್ಟೆಗಳಲ್ಲಿ ಮಾಧ್ಯಮದವರಿಗಾದ ತೊಂದರೆ ಕುರಿತು ಎಸ್ಪಿಗೆ ಮನವಿ

Posted On: 14-05-2024 04:01PM

ಉಡುಪಿ : ಲೋಕ ಸಭಾ ಚುನಾವಣೆಯ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗಾದ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಅರುಣ್ ಕೆ. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಮನವಿ ಸಲ್ಲಿಸಲಾಯಿತು.

ಕಾಪು : ನಿಖಿತಾ ಕುಲಾಲ್ ಸ್ಮರಣಾರ್ಥ ಉಚಿತ ನೋಟ್ ಬುಕ್ ವಿತರಣೆ

Posted On: 14-05-2024 02:49PM

ಕಾಪು : ನಿಖಿತಾ ಕುಲಾಲ್ ನೆನಪಿನಲ್ಲಿ ಅವರ ಮನೆಯವರು ಕೊಡಮಾಡುವ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮೇ 12 ರಂದು ಕುತ್ಯಾರು ರಾಮೋಟ್ಟು ಬನತೋಡಿಯಲ್ಲಿ ನಡೆಯಿತು.

ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸುವುದೇ ನಿಜವಾದ ಶಿಕ್ಷಣ -ಕೆ.ಕೆ. ಪೇಜಾವರ

Posted On: 13-05-2024 06:44PM

ಮಂಗಳೂರು : ಶಿಕ್ಷಣವು ಯಾವತ್ತಿಗೂ ಮೌಲ್ಯಾಧಾರಿತ ಶಿಕ್ಷಣ ಆಗಿರಬೇಕು.ಇಂದಿನ ಸಮಾಜವು ಮನುಷ್ಯ ಪ್ರೀತಿಯನ್ನು ಮರೆತಿದೆ ಮಾನವೀಯ ಮೌಲ್ಯಗಳ ಕೊರತೆಯು ಆಧುನಿಕ ಸಮಾಜದಲ್ಲಿ ಎದ್ದು ಕಾಣುತ್ತಿದೆ. ಮಕ್ಕಳು ಹಲವು ಸನ್ನಿವೇಶಗಳಲ್ಲಿ ತಪ್ಪಿತಸ್ಥರಂತೆ ಕಂಡರೂ ಅದು ಮಕ್ಕಳ ತಪ್ಪಾಗಿರದೆ ಹೆತ್ತವರೇ ಅದಕ್ಕೆ ಹೊಣೆಯಾಗಿರುತ್ತಾರೆ. ಈ ಸಮಾಜವು ಅಸ್ವಸ್ಥಗೊಂಡ ಪರಿಣಾಮ ಪ್ರೀತಿಯ ಕುಸುಮಗಳಂತಿರುವ ಮಕ್ಕಳು ಕೂಡ ಬದಲಾಗುತ್ತಾರೆ. ಹಾಗಾಗಿ ಮರೆತ ಮಾನವೀಯ ಗುಣಗಳನ್ನು ಮರು ನೆನಪಿಸುವುದು ಈಗಿನ ಶಿಕ್ಷಣದ ಪ್ರಮುಖ ಕೆಲಸವಾಗಬೇಕು. ಮಾನವೀಯ ಮೌಲ್ಯಗಳನ್ನು ಬೆಳೆಸುವುದೇ ನಿಜವಾದ ಶಿಕ್ಷಣ ಎಂದು ಹಿರಿಯ ಜನಪದ ವಿದ್ವಾಂಸರೂ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ.ಕೆ ಪೇಜಾವರರವರು ಹೇಳಿದರು. ಅವರು ಚಿಣ್ಣರ ಚಾವಡಿ ಮಂಗಳೂರು ಮತ್ತು ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಜೆಪ್ಪು ಸಂತ ಜೆರೋಸಾ ಶಾಲೆಯಲ್ಲಿ 5 ದಿನಗಳ ಕಾಲ ನಡೆಯಲಿರುವ ಚಿಣ್ಣರ ಕಲರವ-2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.

ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Posted On: 13-05-2024 05:59PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 11ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಶನಿವಾರ ಕಾಲೇಜಿನಲ್ಲಿ ಜರಗಿತು.

ಕಾಪು : ಸನಾತನ ಧರ್ಮವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ - ಹಿರಿಯ ನಟ ದೊಡ್ಡಣ್ಣ

Posted On: 13-05-2024 05:35PM

ಕಾಪು : ಇಲ್ಲಿನ ಲಕ್ಷ್ಮಿಜನಾರ್ಧನ ದೇವಸ್ಥಾನಕ್ಕೆ ಸೋಮವಾರ ಹಿರಿಯ ನಟ ದೊಡ್ಡಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಜನಾರ್ಧನ್ ಭಟ್ ದೇವಸ್ಥಾನದ ವತಿಯಿಂದ ಗೌರವಿಸಿದರು.

ಪಡುಬಿದ್ರಿ : ಮಂಗಳೂರು ಹರ್ ಕ್ಯುಲರ್ಸ್ ತಂಡಕ್ಕೆ ಇನ್ನರ್ ವೀಲ್ ಟ್ರೋಫಿ -2024

Posted On: 13-05-2024 04:40PM

ಪಡುಬಿದ್ರಿ : ಇಲ್ಲಿನ ಇನ್ನರ್ ವೀಲ್ ಕ್ಲಬ್ ವತಿಯಿಂದ ಅಂತಾರಾಷ್ಟ್ರೀಯ ಇನ್ನರ್ ವೀಲ್ ಕ್ಲಬ್ ನ ಶತಮಾನೋತ್ಸವದ ಅಂಗವಾಗಿ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ ನಡೆದ ಇನ್ನರ್ ವೀಲ್ ಕ್ಲಬ್ ನ ಇನ್ನರ್ ವೀಲ್ ಟ್ರೋಫಿ -2024 ಪಂದ್ಯಕೂಟವನ್ನು ಇನ್ನರ್ ವೀಲ್ ಜಿಲ್ಲಾ ಕಾರ್ಯದರ್ಶಿ ರಜನಿ ಭಟ್ ಉದ್ಘಾಟಿಸಿದರು. ಈ ಸಂದರ್ಭ ಪಡುಬಿದ್ರಿ ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ , ಹಿರಿಯ ತ್ರೋಬಾಲ್, ಬಾಡ್ಮಿಂಟನ್ ಆಟಗಾರ್ತಿ ಮಮತಾ ರವಿಕಿರಣ್, ‌ಅಂತಾರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ ಮಮತಾ ನವೀನ್, ಕಾರ್ಯದರ್ಶಿ ಮನೋರಮಾ ಸುವರ್ಣ ಉಪಸ್ಥಿತರಿದ್ದರು.

ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ : ನೂತನ ಮನೆ ಹಸ್ತಾಂತರ

Posted On: 13-05-2024 11:04AM

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ಬಿದ್ಕಲ್ ಕಟ್ಟೆಯಲ್ಲಿ ಕಳೆದ 8 ವಷ೯ ಗಳಿಂದ ಮನೆಯಿಲ್ಲದೆ ಸಣ್ಣ ಜೋಪಡಿಯಲ್ಲಿ ವಾಸವಾಗಿದ್ದ ರಾಮ ಮತ್ತು ಮಗಳಾದ ಸುಮತಿಯವರಿಗೆ ಫೌಂಡೇಶನ್ ವತಿಯಿಂದ ನಿಮಿ೯ಸಲಾದ ರಾಮ ನಿಲಯ ನೂತನ ಮನೆಯ ಉದ್ಘಾಟನೆ ಮೇ.12 ರಂದು ನಡೆಯಿತು.

ವಿಶ್ವ ತಾಯಂದಿರ ದಿನ : ಕಾಪು ಶ್ರೀ ಮಾರಿಯಮ್ಮನ ಸ್ವರ್ಣ ಗದ್ದುಗೆಯ ಕಚೇರಿ ಉದ್ಘಾಟನೆ

Posted On: 12-05-2024 03:01PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿಯನ್ನು ನವ ದೀಪಗಳನ್ನು ಬೆಳಗಿಸುವ ಮೂಲಕ ಆದಿತ್ಯವಾರ ಉದ್ಘಾಟಿಸಲಾಯಿತು.