Updated News From Kaup
ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗ ಶಿರ್ವ - ಏಕಾದಶ ವರ್ಷದ ವಾರ್ಷಿಕೋತ್ಸವ

Posted On: 29-02-2024 10:29AM
ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗ ಶಿರ್ವ ಇದರ ಏಕಾದಶ ವರ್ಷದ ವಾರ್ಷಿಕೋತ್ಸವ ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಉಚ್ಚಿಲ ಸರಸ್ವತಿ ಮಂದಿರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ ಮತ್ತು ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯ ವಿ. ಆಚಾರ್ಯ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಿರ್ವ ಆರಕ್ಷಕ ಠಾಣೆಯ ಉಪ ನಿರೀಕ್ಷಕರಾದ ಶ್ರೀಧರ ಕೆ. ಜಿ., ಹಿರಿಯ ಭಜನಾ ತರಬೇತುದಾರರಾದ ಗಂಗಾಧರ ಆಚಾರ್ಯ ಕುತ್ಯಾರು, ನಾಟಕ ಕಲಾವಿದರಾದ ಪಡುಕುತ್ಯಾರು ಶಶಿರಾಜ್ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಮೂರು ಜನ ಅಶಕ್ತರಿಗೆ ಧನ ಸಹಾಯ ನೀಡಲಾಯಿತು ಮತ್ತು 27 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಯುವ ಸಂಗಮದ ಅಧ್ಯಕ್ಷ ಉಮೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಬಳಗದ ಅಧ್ಯಕ್ಷೆ ಸಹನಾ ಗಣೇಶ್ ಆಚಾರ್ಯ, ಕಾರ್ಯದರ್ಶಿ ಮಂಜುಳಾ ಉಮೇಶ್ ಆಚಾರ್ಯ, ಗೌರವಾಧ್ಯಕ್ಷ ಸುರೇಶ ಆಚಾರ್ಯ, ಸ್ಥಾಪಕರಾದ ಕಾಪು ಶ್ರೀಕಾಂತ ಆಚಾರ್ಯ, ಗಣೇಶ್ ಆಚಾರ್ಯ, ಸದಾಶಿವ ಆಚಾರ್ಯ ಉಪಸ್ಥಿತರಿದ್ದರು.
ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿ, ಕಾರ್ಯದರ್ಶಿ ಮಾದವ ಆಚಾರ್ಯ ಪ್ರಾಸ್ತಾವನೆಗೈದರು. ಪುರೋಹಿತ್ ರವಿ ಆಚಾರ್ಯ ವಿಶ್ವಕರ್ಮ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಕೋಶಾಧಿಕಾರಿ ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಶರ್ಮಿಳ ಸದಾಶಿವ ಆಚಾರ್ಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರ್ದೇಶಿಸಿದ್ದರು.
ಪತಂಜಲಿ ಕಟಪಾಡಿ ಕಕ್ಷೆಯ ವತಿಯಿಂದ ಮನೋಹರ್ ಕಾಮತ್ ಮುಂಬೈ ಇವರಿಗೆ ಸನ್ಮಾನ

Posted On: 29-02-2024 10:23AM
ಕಟಪಾಡಿ : ಮೂಲದ ಪ್ರಸ್ತುತ ಮುಂಬೈ ಯಲ್ಲಿ ನೆಲೆಸಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮನೋಹರ್ ಕಾಮತ್ ಇವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ 30 ವರ್ಷಗಳಿಂದ ಯೋಗ ಸಾಧನೆಯನ್ನು ಮಾಡುತ್ತಿದ್ದು, ಇವರ ಯೋಗ ಶ್ರದ್ಧೆ, ಜೀವನೋತ್ಸಾಹ ಹಾಗೂ ಶ್ವಾನ ಪ್ರಿಯತೆಯನ್ನು ಮನಗಂಡು ಕಟಪಾಡಿ ಪತಂಜಲಿ ಯೋಗ ಕಕ್ಷೆಯ ವತಿಯಿಂದ ಸನ್ಮಾನಿಸಲಾಯಿತು.
ಪಾಂಗಾಳ : ಹಾಳಾಗಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಚಾಲಕ ಮೃತ್ಯು

Posted On: 28-02-2024 09:53PM
ಪಾಂಗಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ
ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ನಾಗೇಶ್ ಮೃತ ದುರ್ದೈವಿ. ಇವರು ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಕಾರು ಹಾಗು ಲಾರಿಯನ್ನು ತೆರವುಗೊಳಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡ - ಉದ್ಘಾಟನೆ

Posted On: 28-02-2024 08:22PM
ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 55.65 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡದ ಉದ್ಘಾಟನೆಯನ್ನು ಫೆ.28ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಅಂಚೆ ಇಲಾಖೆ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುತ್ತಾ ಬಂದಿದೆ. ಪಡುಬಿದ್ರಿ ಉಪ ಅಂಚೆ ಕಚೇರಿ ಜನಸಾಮಾನ್ಯರ ಕಚೇರಿಯಾಗಲಿ ಎಂದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ದಕ್ಷಿಣ ಕರ್ನಾಟಕ ವಲಯ ಅಂಚೆ ಸೇವೆಗಳ ಟಿ.ಎಸ್ ಅಶ್ವತ್ಥನಾರಾಯಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮುಲ್ಕಿ : ಶಿವಾಯ ಫೌಂಡೇಶನ್ ಮುಂಬೈ ವತಿಯಿಂದ ದಿನಸಿ ಸಾಮಾಗ್ರಿ, ವಿಧವಾ ವೇತನದ ಚೆಕ್ ಹಸ್ತಾಂತರ

Posted On: 28-02-2024 07:42PM
ಮುಲ್ಕಿ : ಶಿವಾಯ ಫೌಂಡೇಶನ್ (ರಿ.) ಮುಂಬೈ ಸಂಸ್ಥೆಯ ವತಿಯಿಂದ ಫೆ.28ರಂದು ಮುಲ್ಕಿ ಕಾರ್ನಾಡು ಅಮೃತಮಯಿ ನಗರ ನಿವಾಸಿ ಗೀತಾ ರವರ ಕುಟುಂಬಕ್ಕೆ 4ನೇ ತಿಂಗಳಿನ ದಿನಬಳಕೆಯ ದಿನಸಿ ಸಾಮಾಗ್ರಿ ಹಾಗೂ ವಿಧವಾ ವೇತನದ ಚೆಕ್ ನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಶಿವಾಯ ಫೌಂಡೇಶನ್ ಸಂಸ್ಥೆಯ ಸದಸ್ಯರಾದ ರವಿ ಶೆಟ್ಟಿ ಶಾರದೆ, ಪಡುಬಿದ್ರಿ ರಮಣಿ ಐಸ್ ಕ್ರೀಮ್ ಪಾರ್ಲರ್ ಮಾಲಿಕರಾದ ಜಗನ್ನಾಥ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ನವೀನ್, ಸದಸ್ಯರಾದ ಮಹೇಶ್ ದೇವಾಡಿಗ ಹಳೆಯಂಗಡಿ, ಸಂಸ್ಥೆಯ ಹಿತೈಷಿ ಸುಧಾಕರ್ ಕೆ ಪಡುಬಿದ್ರಿ ಉಪಸ್ಥಿತರಿದ್ದರು.
ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿಗೆ “Incridea - 24” ರನ್ನರ್ ಆಫ್ ಟ್ರೋಫಿ
Posted On: 28-02-2024 07:04PM
ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್ಲುವಿನ ಒಟ್ಟು 60 ವಿದ್ಯಾರ್ಥಿಗಳು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ(ಎಮ್.ಎ.ಎಮ್.ಐ.ಟಿ)ದಲ್ಲಿ ದಿನಾಂಕ 22 ರಿಂದ 24 ಫೆಬ್ರವರಿ 2024 ರಂದು ನಡೆದ "Incridea-24" ರಲ್ಲಿ ಭಾಗವಹಿಸಿ ರನ್ನರ್ ಆಫ್ ಟ್ರೋಫಿ ಹಾಗೂ ರೂ. 20,000 ನಗದು ಬಹುಮಾನವನ್ನು ಪಡೆದಿರುತ್ತಾರೆ.
"Incridea-24" ಇದರ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಾದ ಕೋಡ್ 45, ವೆಬೆಡ್, ಮೂವಿಡಿಯಾ- ಫೋಟೋಗ್ರಫಿ ಮತ್ತು ಲೈನ್ ಫಾಲೋವರ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದರೆ, ಶೆರ್ಲಾಕ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಮೆಮೆ ವಾರ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನಗಳಿಸಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಪತ್ಯೇತರ ಚಟುವಟಿಕೆಯ ಸಂಯೋಜಕರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.
ಮಾಚ್೯ 2 : ಸಾಂತೂರು ದೊಡ್ಡಮಠ ಕುಟುಂಬಸ್ಥರ ಮೂಲ ನಾಗಬನದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ, ದೈವದ ನೇಮೋತ್ಸವ

Posted On: 28-02-2024 11:48AM
ಕುತ್ಯಾರು : ಸಾಂತೂರು ದೊಡ್ಡಮಠ ಕುಟುಂಬಸ್ಥರ ಮೂಲ ನಾಗಬನದಲ್ಲಿ ಮಾಚ್೯ 02, ಶನಿವಾರ ಶ್ರೀ ಸೋದೆ ವಾದಿರಾಜ ಮಠದ ಯತಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಏಕ ಪವಿತ್ರ ನಾಗಮಂಡಲೋತ್ಸವ ಮತ್ತು ದೈವದ ನೇಮೋತ್ಸವವು ಜರಗಲಿದೆ.
ಸಾಂತೂರು ವೇ|ಮೂ| ಶ್ರೀ ರಘುಪತಿ ಜೋಯಿಸರ ನೇತೃತ್ವದಲ್ಲಿ ಹಾಗೂ ಕಲ್ಲಂಗಳ ವೇ। ಮೂ| ಶ್ರೀ ಬಿ. ಎನ್ ರಾಮಚಂದ್ರ ಕುಂಜಿತ್ತಾಯ ಇವರ ಸಹಕಾರದೊಂದಿಗೆ ಮತ್ತು ಕೃಷ್ಣಪ್ರಸಾದ ವೈದ್ಯ, ಬಾಲಕೃಷ್ಣ ವೈದ್ಯ, ನಟರಾಜ ವೈದ್ಯ ಮತ್ತು ಬಳಗದ ಸಹಯೋಗದೊಂದಿಗೆ ನೆರವೇರಲಿದೆ.
ಮಾಚ್೯ 2 ರಂದು ಬೆಳಿಗ್ಗೆ 7:30ರಿಂದ ಪುಣ್ಯಾಹವಾಚನೆ, ಮಧ್ಯಾಹ್ನ 12 :30ಕ್ಕೆ ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಸಂಜೆ 5 ಗಂಟೆಗೆ ನಾಗಬನದಲ್ಲಿ ಹಾಲಿಟ್ಟು ಸೇವೆ, ನಾಗಮಂಟಪದಲ್ಲಿ ಕಲ್ಪೋಕ್ತ ಪೂಜೆ, ಸಂಜೆ 6 ಗಂಟೆಗೆ ನಾಗಮಂಡಲ ಸೇವೆ, ರಾತ್ರಿ 8 ಗಂಟೆಗೆ ಪ್ರಸಾದ ವಿತರಣೆ, 8:30 ರಿಂದ ಮಹಾ ಅನ್ನಸಂತರ್ಪಣೆ, ರಾತ್ರಿ 9ಗಂಟೆಗೆ ಪಂಜುರ್ಲಿ ನೇಮೋತ್ಸವ ಜರಗಲಿದೆ ಎಂದು ಸಾಂತೂರು ದೊಡ್ಡಮಠ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಜೆಸಿಐ ಉಡುಪಿ ಇಂದ್ರಾಳಿ ಘಟಕ - ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ

Posted On: 27-02-2024 02:50PM
ಉಡುಪಿ : ಜೆಸಿಐ ವಲಯ 15ರ ಜೆಸಿಐ ಉಡುಪಿ ಇಂದ್ರಾಳಿ ಘಟಕದ ವತಿಯಿಂದ ನಿಟ್ಟೂರು ಪ್ರಾಥಮಿಕ ಶಾಲಾ ಸಭಾಂಗಣ ಉಡುಪಿಯಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ ಜರಗಿತು.
ವೃತ್ತಿಯಲ್ಲಿ ಔಷಧಿ ಕಂಪೆನಿಯಲ್ಲಿ ಏರಿಯಾ ಮೆನೇಜರ್ ಆಗಿರುವ, ಪ್ರವೃತ್ತಿಯಲ್ಲಿ 'ಸಮಾಜ ಸೇವಕರು, ರಕ್ತದಾನ ವಿಭಾಗದಲ್ಲಿ ಈವರೆಗೆ 70 ಬಾರಿ ರಕ್ತದಾನ ಮಾಡಿದ್ದು, 5 ಶಿಬಿರಗಳನ್ನು ಆಯೋಜನೆ ಮಾಡಿ ಇದಕ್ಕಾಗಿ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ರಾಜ್ಯ ಪ್ರಶಸ್ತಿ ಪಡೆದಿರುವ ಜೆಸಿಯಲ್ಲಿ Past Zvp ವಲಯ ತರಬೇತಿದಾರರಾಗಿ ಸುಮಾರು 500 ಕ್ಕೂ ತರಬೇತಿ ನೀಡಿರುವ ಜೆಸಿ ರಾಘವೇಂದ್ರ ಪ್ರಭು, ಕವಾ೯ಲುರವರಿಗೆ "ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್" ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ಡಾ ಚಿತ್ರಾ ವಿಜಯ್ ನೆಗಳೂರ್, ವಲಯ ಉಪಾಧ್ಯಕ್ಷರಾದ JFD ಜೆಸಿ ವಿಗ್ನೇಶ್ ಪ್ರಸಾದ, IPP JFM ರಿಟಾ ಪಿರೇರಾ, ಲೇಡಿ ಜೆಸಿ ಸಂಯೋಜಕಿ ಜೆಸಿ ವಂದನಾ ಕೃಷ್ಣ, ಜಂಟಿ ಕಾರ್ಯದರ್ಶಿ ಜೆಸಿ ಹರಿಪ್ರಸಾದ್, JJC ರಕ್ಷಿತಾ ಸ್ಥಾಪಕ ಅಧ್ಯಕ್ಷರಾದ ಜೆಸಿ ಶರ್ಲಿ ಮನೋಜ್, ಪೂರ್ವ ಅಧ್ಯಕ್ಷರುಗಳಾದ ಜೆಸಿ ಅಶೋಕ್ ಪೂಜಾರಿ, ಪದಾಧಿಕಾರಿಗಳಾದ ಜೆಸಿ ವಿಜಯ್ ನೆಗಳೂರ್, ಜೆಸಿ ರಾಧಾಕೃಷ್ಣ, ಜೆಸಿ ಮಮತಾ, ಜೆಸಿ ಪದ್ಮಸಿನಿ, ಜೆಸಿ ಡಾ. ಮುರಳೀಧರ ರಾವ್ ಉಪಸ್ಥಿತರಿದ್ದರು.
ಮಸ್ಕತ್ : ‘ಬಿರುವ ಜವನೆರ್ ‘ ಸಂಘಟನೆ - ‘ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ’ ಯಕ್ಷಗಾನ ತಾಳಮದ್ದಳೆ

Posted On: 26-02-2024 05:57PM
ಮಸ್ಕತ್ : ‘ಬಿರುವ ಜವನೆರ್ ‘ ಸಂಘಟನೆ ಯು ಮಸ್ಕತ್ ನ ದಾರಸೈಟ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪೂಜಾ ಸಹಿತ ‘ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ’ ಕಥೆಯನ್ನು ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರಸ್ತುತಿಗೊಳಿಸಲಿದೆ.
ಹೊರರಾಷ್ಟ್ರದಲ್ಲಿ ಮೊದಲ ಬಾರಿ ಶನೀಶ್ವರ ಯಕ್ಷಗಾನ ಪ್ರದರ್ಶನ ಮಾಡಿದ ಕೀರ್ತಿ ಪಡೆದ ತಂಡದಿಂದ ಸತ್ಯನಾರಾಯಣ ಪೂಜಾ ಸಹಿತ ತಾಳಮದ್ದಳೆ ಸಂಪನ್ನಗೊಳ್ಳಲಿದೆ. ಮಾ.1ರಂದು ಶುಕ್ರವಾರ ಪೂರ್ವಾಹ್ನ 8.30 ರಿಂದ ಅಪರಾಹ್ನ 1.30 ರ ತನಕ ಶನೀಶ್ವರ ಪೂಜೆ ಖ್ಯಾತಿಯ ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ, ಮಂಗಳೂರು ತಂಡವು ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಇವರ ಸಂಯೋಜನೆ ಯಲ್ಲಿ ಪ್ರದರ್ಶನ ನೀಡಲಿದೆ.
ಕಳೆದ ಮೂರು ದಶಕಗಳಿಂದ ತಾಳಮದ್ದಳೆ ಕಾರ್ಯಕ್ರಮಗಳನ್ನು ದೇಶ ವಿದೇಶಗಳಲ್ಲಿ ನೀಡಿರುವ ತುಳುನಾಡಿನ ಈ ಖ್ಯಾತ ತಂಡವು ಕರ್ನಾಟಕ, ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾಗೂ ದುಬೈ, ಅಬುದಾಬಿ, ಮಸ್ಕತ್ ರಾಷ್ಟ್ರಗಳಲ್ಲಿ ಪೂಜಾ ಸಹಿತ ಶನೀಶ್ವರ ತಾಳಮದ್ದಳೆ ನಡೆಸಿ ಜನಪ್ರಿಯತೆ ಗಳಿಸಿವೆ. ಈ ಪೂರ್ವದಲ್ಲಿ ‘ಬಿರುವ ಜವನೆರ್’ ಇದೇ ತಂಡದಿಂದ ಎರಡು ಬಾರಿ ಶನಿಪೂಜೆಯನ್ನು ಮಸ್ಕತ್ ನಲ್ಲಿ ಆಯೋಜಿಸಿ ಯಶಸ್ವಿಯಾಗಿದ್ದಾರೆ. ಈ ಸಂಘಟನೆಯು ಧಾರ್ಮಿಕ ಮತ್ತು ಸಮಾಜ ಸೇವಾ ಚಟುವಟಿಕೆಯನ್ನು ಕಳೆದ ಒಂದು ದಶಕದಿಂದ ನಡೆಸುತ್ತಿದೆ.
ಹಿಮ್ಮೇಳದಲ್ಲಿ ಡಾ. ಪ್ರಖ್ಯಾತ್ ಶೆಟ್ಟಿ, ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ, ದಯಾನಂದ ಕೋಡಿಕಲ್ ಹಾಗೂ ಅರ್ಥಧಾರಿಗಳಾಗಿ ಕದ್ರಿ ನವನೀತ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ ಮೊಯ್ಲೊಟ್ಟು, ಸದಾಶಿವ ಆಳ್ವ ತಲಪಾಡಿ, ಶಶಿಕಾಂತ್ ಶೆಟ್ಟಿ ಕಾರ್ಲ, ಪ್ರಸನ್ನ ಶೆಟ್ಟಿ ಅತ್ತೂರ್ ಗುತ್ತು, ಮನೋಹರ ಕುಂದರ್ ಎರ್ಮಾಳ್, ಪ್ರಜ್ವಲ್ ಶೆಟ್ಟಿ ಗುರುವಾಯನಕೆರೆ, ನಿತಿನ್ ಹುಣಸೆಕಟ್ಟೆ ಭಾಗವಹಿಸಲಿದ್ದಾರೆ. ರವಿ ಭಟ್ ಪಡುಬಿದ್ರಿ ಅವರು ಪೂಜಾ ವ್ಯವಸ್ಥೆಯಲ್ಲಿ ಸಹಕರಿಸಲಿದ್ದಾರೆ. ಪೂಜೆಯ ನಂತರ ಪ್ರಸಾದ ಭೋಜನ ಹಾಗೂ ಸಂಜೆ 5.30 ರ ತನಕ ಕಲ್ಲಡ್ಕ ವಿಠ್ಠಲ ನಾಯ್ಕ್ ಅವರ ತಂಡ ದಿಂದ ‘ಗೀತಾ ಸಾಹಿತ್ಯ ಸಂಭ್ರಮ’ ಜರಗಲಿದೆ. ಮಸ್ಕತ್ ನಲ್ಲಿ ನೆಲೆಸಿರುವ ಎಲ್ಲಾ ಸಮುದಾಯದ ಭಕ್ತ ಭಾಂದವರು ಆಗಮಿಸಿ ಸಹಕರಿಸಬೇಕೆಂದು ಬಿರುವ ಜವನೆರ್ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡುಬೆಳ್ಳೆ: ಶಿಕ್ಷಣತಜ್ಞ ಆರ್.ಎಸ್. ಬೆಳ್ಳೆ ಸಂಸ್ಮರಣೆ

Posted On: 26-02-2024 05:37PM
ಪಡುಬೆಳ್ಳೆ : ಸಮಾಜಮುಖಿ ವ್ಯಕ್ತಿತ್ವವನ್ನು ರೂಢಿಸಿಕೊಂಡಾಗ ಮಾತ್ರ ಅಭಿವೃದ್ಧಿ ಹಾಗೂ ಯಶಸ್ಸು ಸಂಪೂರ್ಣ ಸಾಧ್ಯವಾಗುತ್ತದೆ ಎಂಬುದಕ್ಕೆ ಶಿಕ್ಷಣ ತಜ್ಞ ಮತ್ತು ಸಮಾಜಸೇವಕ ಆರ್.ಎಸ್. ಬೆಳ್ಳೆ ಅವರ ಬದುಕೇ ಉದಾಹರಣೆಯಾಗಿದೆ ಎಂದು ಕಟ್ಟಿಂಗೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ದೇವದಾಸ್ ಹೆಬ್ಬಾರ್ ಹೇಳಿದರು. ಅವರು ಪಡುಬೆಳ್ಳೆ ಪಾಂಬೂರಿನಲ್ಲಿ ಫೆ. 25ರಂದು ಜರಗಿದ ಆರ್.ಎಸ್. ಬೆಳ್ಳೆ ಸಂಸ್ಮರಣೆಯ ಹೊನಲು ಬೆಳಕಿನ ಮಿತ್ರಗೋಷ್ಠಿಯಲ್ಲಿ ಮಾತನಾಡಿದರು.

ಆರ್.ಎಸ್. ಬೆಳ್ಳೆ ಅವರು ಶಿಕ್ಷಣ ಇಲಾಖೆಯಲ್ಲಿ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯಾಗಿದ್ದರು. ನಿವೃತ್ತಿ ಬಳಿಕ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರದ್ದು ತ್ಯಾಗಪೂರ್ಣ ಬದುಕಾಗಿದ್ದು, ತನ್ನ ಶಕ್ತಿಗೂ ಮೀರಿ ಜನರಿಗೆ ನೆರವು ನೀಡುತ್ತಿದ್ದರು ಎಂದು ಅವರು ನೆನಪಿಸಿಕೊಂಡರು. ಕವಿ, ಸಾಹಿತಿ ರಿಚ್ಚಾರ್ಡ್ ದಾಂತಿ ಪಾಂಬೂರು ಅವರು ಸಂಸ್ಮರಣಾ ಭಾಷಣ ಮಾಡಿದರು. ಉಡುಪಿಯ ಹಿರಿಯ ನ್ಯಾಯವಾದಿ ಜಯಶಂಕರ ಕುತ್ಪಾಡಿ ಅವರಿಗೆ ಆರ್.ಎಸ್. ಬೆಳ್ಳೆ ಸ್ಮರಣಾರ್ಥ ಮೊದಲ ವರ್ಷದ ಪುರಸ್ಕಾರವನ್ನು ಪ್ರದಾನಿಸಲಾಯಿತು.
ನಿವೃತ್ತ ಮುಖ್ಯೋಪಾಧ್ಯಾಯ ವಾಸು ಆಚಾರ್, ಪಡುಬೆಳ್ಳೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ದೇವಾಡಿಗ, ಕಸಾಪ ಕಾಪು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ, ಬೆಳ್ಳೆ ಪರಿಚಯ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಕಾಶ್ ನೊರೋನ್ನಾ ಪಾಂಬೂರು, ಸ್ಯಾಮ್ಸನ್ ನೊರೋನ್ನಾ ದಿಂದೊಟ್ಟು, ಮುರಳೀಧರ ಆರ್. ಸಾಮಗ ಬೆಳ್ಳೆ ಮಾತನಾಡಿದರು. ಬೆಳ್ಳೆ ಗ್ರಾಪಂ ಮಾಜಿ ಅಧ್ಯಕ್ಷ ಸುಧಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದು, ಅವರ ಅವಧಿಗೆ ಗ್ರಾಮ ಪಂಚಾಯಿತಿಯು ಗಾಂಧಿ ಗ್ರಾಮ ಪುರಸ್ಕಾರ ಪಡೆದುದಕ್ಕಾಗಿ ಅವರನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಯಿತು.
ಕಾಪು ತಾಪಂ ಮಾಜಿ ಸದಸ್ಯೆ ಸುಜಾತಾ ಎಸ್. ಸುವರ್ಣ, ನಿವೃತ್ತ ಕಚೇರಿ ಸಿಬಂದಿ ಕ್ರಿಸ್ತಿನ್ ಫೆರ್ನಾಂಡಿಸ್, ನಿವೃತ್ತ ಹಿರಿಯ ಶುಶ್ರೂಶಕಿ ಉಷಾ ಮರಾಠೆ, ಪತ್ರಕರ್ತ ಶ್ರೀರಾಮ ದಿವಾಣ, ಪೆಲ್ವಿನ್ ಫ್ರಾನ್ಸಿಸ್ ಕ್ವಾಡ್ರಸ್, ಅರುಣ್ ನೊರೋನ್ನಾ, ಪೀಟರ್ ಮಿನೇಜಸ್ ಉಪಸ್ಥಿತರಿದ್ದರು. ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ನಿರೂಪಿಸಿದರು.