Updated News From Kaup

ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆ : ಉಡುಪಿ ಜಿಲ್ಲಾ ಮಟ್ಟದ ವಿದ್ಯಾ ಕಾಸ್ಟ್ಯುಮ್ ಗಾಲ ಛದ್ಮವೇಷ ಸ್ಪರ್ಧೆ

Thumbnail
Posted On: 20 Dec 2025, 07:26 PM

ಕಾಪು : ಶಿಕ್ಷಣವು ವಾಣಿಜ್ಯೀಕರಣವಾಗುತ್ತಿರುವ ಸಂದರ್ಭದಲ್ಲಿ  ಮಕ್ಕಳ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಗಮನವಹಿಸಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಶ್ರಮವಹಿಸಬೇಕಾಗಿದೆ. ರ‍್ಯಾಂಕ್ ಮಾನದಂಡವಲ್ಲ. ಶಿಕ್ಷಣದೊಂದಿಗೆ ವರ್ತನೆ, ಶಿಸ್ತು ಮುಖ್ಯ ಎಂದು ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು ಹೇಳಿದರು.

ಅವರು ವಿದ್ಯಾನಿಕೇತನ್ ಪಬ್ಲಿಕ್ ಶಾಲೆ ಕಾಪು  ಇಲ್ಲಿ 33ನೇ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ವಿದ್ಯಾ ಕಾಸ್ಟ್ಯುಮ್ ಗಾಲ ಛದ್ಮವೇಷ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ವೈದ್ಯರಾದ ಡಾ. ಅನುಪ್ ಪೂಜಾರಿ ಕಟಪಾಡಿ, ಶಾಲಾ ಹಳೆ ವಿದ್ಯಾರ್ಥಿನಿ ಡಾ.ಸಲ್ವ ಮಾತನಾಡಿದರು. 

ಶಾಲಾ ಸಂಚಾಲಕ ಕೆ.ಪಿ.ಆಚಾರ್ಯ, ಸಹ ಮ್ಯಾನೇಜಿಂಗ್ ಟ್ರಸ್ಟ್ ಶ್ವೇತಾ ಆಚಾರ್ಯ, ಸ್ಪರ್ಧೆಯ ತೀರ್ಪುಗಾರರಾದ ಮನೋಜ್ ಗಣೇಶಪುರ, ಅನ್ವಿತಾ ಕುಲಾಲ್, ಉಪ ಪ್ರಾಂಶುಪಾಲೆ ನಿಶ್ಮಿತ ಸನಿಲ್, ಕ್ಯಾಂಪಸ್ ಮ್ಯಾನೇಜರ್ ರಾಜೇಶ್ ವೈ, ಕಾರ್ಯಕ್ರಮ ಸಂಯೋಜಕರಾದ ಆಶಿತಾ, ಶೋಭ, ಶಾಲಾ ವಿದ್ಯಾರ್ಥಿ ನಾಯಕರುಗಳಾದ ಕೀರ್ತನ್ ಎಂ.ಕೋಟ್ಯಾನ್, ಚೈತ್ರ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕ ಸಾಕ್ಷತ್ ಯು.ಕೆ.,  ಪ್ರಸ್ತಾವಿಸಿದರು. ವಿದ್ಯಾರ್ಥಿನಿಯರಾದ ತನಿಷ್ಕ ಸ್ವಾಗತಿಸಿ, ನಿಧಿ ವಂದಿಸಿದರು. ವಿದ್ಯಾರ್ಥಿನಿ ಫಾತಿಮ ಝೈನಬ್ ಕಾರ್ಯಕ್ರಮ ನಿರೂಪಿಸಿದರು.

ಪಾಂಗಳ ತುಂಗರಬೈಲು : ನಾಳೆ ಆರ್ ಸಿ ಸಿ ಇನ್ನಂಜೆಯಿಂದ 2ನೇ ಮನೆ ಹಸ್ತಾಂತರ

Thumbnail
Posted On: 20 Dec 2025, 12:10 PM

ಪಾಂಗಾಳ: ತುಂಗರಬೈಲಿನಲ್ಲಿ ಟರ್ಪಾಲಿನ ಮನೆಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಇನ್ನಂಜೆ ರೋಟರಿ ಸಮುದಾಯದಳ

ಕಾಪು, ಡಿ. 19 : ಟರ್ಪಾಲಿನ ಮನೆಯಲ್ಲಿ ವಾಸಿಸುತ್ತಿದ್ದ ಬಡಕುಟುಂಬವೊಂದಕ್ಕೆ ದಾನಿಗಳ ನೆರವಿನೊಂದಿಗೆ ವಾಸಕ್ಕೆ ಯೋಗ್ಯವಾದ ಮನೆಯನ್ನು ನಿರ್ಮಿಸಿಕೊಡುವ ಮೂಲಕ ಇನ್ನಂಜೆ ರೋಟರಿ ಸಮುದಾಯದಳದ ಸದಸ್ಯರು ಮಾದರಿಯಾಗಿದ್ದಾರೆ.

ಪಾಂಗಾಳ ತುಂಗರಬೈಲು ನಿವಾಸಿಗಳಾದ ಲಕ್ಷ್ಮಣ ಮತ್ತು ಕುಶಲ ದಂಪತಿಯು ತಮ್ಮಿಬ್ಬರು ಮಕ್ಕಳೊಂದಿಗೆ ಅದೆಷ್ಟೋ ವರ್ಷಗಳಿಂದ ಟರ್ಪಾಲಿನ ಮನೆಯಲ್ಲಿ ಅಸಹಾಯಕ ರೀತಿಯಲ್ಲಿ ಬದುಕುತ್ತಿದ್ದರು. ಟರ್ಪಾಲು ಮನೆಯಲ್ಲಿ ವಾಸಿಸುತ್ತಿದ್ದ ಕುಟುಂಬವು ಹಲವು ಗಾಳಿ-ಮಳೆಗೆ ಮೈಯ್ಯೊಡ್ಡಿ ದಿನ ಕಳೆಯುತ್ತಿತ್ತು. 

ಅಸಹನೀಯ ಪರಿಸ್ಥಿತಿಯ ನಡುವೆ ದಿನ ಕಳೆಯುತ್ತಿದ್ದ ಕುಟುಂಬದ ಯಜಮಾನಿ ಕುಶಲ ಅವರು ಮೂರು ವರ್ಷದ ಹಿಂದೆ ಮೃತಪಟ್ಟಿದ್ದು ಮನೆಯಲ್ಲಿದ್ದವರು ಬೀದಿಗೆ ಬೀಳುವ ಸ್ಥಿತಿ ಎದುರಾಗಿತ್ತು. ಮನೆಯ ಅಸಹನೀಯ ಸ್ಥಿತಿಯಿಂದಾಗಿ ಪ್ರಾಯಕ್ಕೆ ಬಂದ ಮಗಳು ತಾಯಿ ಅಜ್ಜಿ ಮನೆಯಲ್ಲಿ ಆಶ್ರಯ ಪಡೆಯುವಂತಾಗಿತ್ತು.

ಈ ವಿಚಾರವನ್ನು ತಮ್ಮ ಪರಿಚಿತರ ಮೂಲಕವಾಗಿ ತಿಳಿದುಕೊಂಡ ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಅವರು ತಮ್ಮ ರೋಟರಿ ಸಮುದಾಯ ದಳದ ಸದಸ್ಯರೊಂದಿಗೆ ಚರ್ಚಿಸಿ ಕುಶಲ ಅವರ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವ ಸಂಕಲ್ಪ ಸ್ವೀಕರಿಸಿದ್ದರು. 

ಇನ್ನಂಜೆ ರೋಟರಿ ಸಮುದಾಯದಳದ ಪ್ರತಿನಿಧಿಗಳಾದ ವಜ್ರೇಶ್ ಆಚಾರ್ಯ, ಪ್ರಶಾಂತ್ ಶೆಟ್ಟಿ ದಿವೇಶ್ ಶೆಟ್ಟಿ,ಪ್ರಶಾಂತ್ ಆಚಾರ್ಯ, ರವಿ ಪ್ರಸಾದ್, ಗಣೇಶ್ ಆಚಾರ್ಯ, ಮತ್ತು ಸದಸ್ಯರೊಡನೆ  ಗ್ರಾ.ಪಂ. ಅಧ್ಯಕ್ಷೆ ಮತ್ತು ಸಮುದಾಯದಳದ ಸಭಾಪತಿ ಮಾಲಿನಿ ಶೆಟ್ಟಿ ಅವರು ದಾನಿಗಳ ನೆರವಿನೊಂದಿಗೆ ಸುಮಾರು 7 ಲಕ್ಷ ರೂ. ವೆಚ್ಚದ ಮನೆಯನ್ನು ನಿರ್ಮಿಸಿಕೊಟ್ಟಿದ್ದು ನಾಳೆ ಡಿ. 21ರಂದು ಕುಶಲ ನಿವಾಸ ಹಸ್ತಾಂತರಗೊಳ್ಳಲಿದೆ.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ರೋಟರಿ ಸಹಾಯಕ ಗವರ್ನರ್ ವಿಘ್ನೇಶ್ ಶೆಣೈ, ಸಭಾಪತಿ ಅಲನ್ ವಿನಯ್ ಲೂಯಿಸ್, ಮಾಲಿನಿ ಶೆಟ್ಟಿ, ನಾಗರಾಜ್ ಶೆಟ್ಟಿ, ಗುರುಪ್ರಸಾದ್ ಕಾಮತ್, ಪ್ಯಾಟ್ರಿಕ್ ಡಿ ಸೋಜ, ನವೀನ್ ಅಮೀನ್ ಮೊದಲಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 

ಈ ಬಗ್ಗೆ ನಮ್ಮ ಕಾಪು ಮಾಧ್ಯಮದವರೊಂದಿಗೆ ಮಾತನಾಡಿದ ರೋಟರಿ ಸಮುದಾಯದಳದ ಸಭಾಪತಿ ಮಾಲಿನಿ ಇನ್ನಂಜೆ ಅವರು ಇದು ನಮಗೆ ದೇವರು ಕೊಟ್ಟಿರುವ ಸೌಭಾಗ್ಯವಾಗಿದೆ. ರೋಟರಿ ಸಮುದಾಯದಳದ ಮೂಲಕ ಎರಡನೇ ಮನೆ ನಿರ್ಮಿಸಿಕೊಡುತ್ತಿದ್ದು ನಾಲ್ಕನೇ ಶಾಶ್ವತ ಯೋಜನೆ ಇದಾಗಿದೆ. ನಮ್ಮ ಈ ಕಾರ್ಯಕ್ಕೆ ದಾನಿಗಳು, ಸ್ಥಳೀಯರು, ಉದ್ಯಮಿಗಳು ಉತ್ತಮ ರೀತಿಯ ಸಹಕಾರ ನೀಡಿದ್ದು ಅಸಹಾಯಕ ರೀತಿಯಲ್ಲಿ ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ಬದುಕು ಕಟ್ಟಿಕೊಳ್ಳಲು ನೆರವಾದ ಸಾರ್ಥಕ್ಯದ ಭಾವನೆ ಮೂಡುತ್ತಿದೆ ಎಂದರು.

ಡಿ.23 : ಮಡುಂಬು ಕುಂದ‌ರ್ ಕುಟುಂಬಸ್ಥರ ದೈವಗಳ ಹರಕೆಯ ನೇಮೋತ್ಸವ

Thumbnail
Posted On: 19 Dec 2025, 07:08 PM

ಕಾಪು : ಮಡುಂಬು ಕುಂದ‌ರ್ ಕುಟುಂಬಸ್ಥರು ಆರಾಧಿಸಿಕೊಂಡು ಬಂದಿರುವ ಶ್ರೀ ಧರ್ಮ ಜಾರಂದಾಯ ಬಂಟ ಮತ್ತು ಶ್ರೀ ವರ್ತೆ ಪಂಜುರ್ಲಿ ದೈವಗಳ ಹರಕೆಯ ನೇಮೋತ್ಸವವು ಡಿ.23, ಮಂಗಳವಾರ ಜರಗಲಿದೆ.

ಆ ಪ್ರಯುಕ್ತ ಸಂಜೆ 5.30ಕ್ಕೆ ಭಂಡಾರ ಇಳಿದು, ರಾತ್ರಿ ಗಂಟೆ 7.30ಕ್ಕೆ ಅನ್ನಸಂತರ್ಪಣೆ ಹಾಗೂ ರಾತ್ರಿ ಗಂಟೆ 9 ಕ್ಕೆ ದೈವಗಳ ನೇಮೋತ್ಸವವು ನಡೆಯಲಿರುವುದು. 

ಸರ್ವರು ಸಕುಟುಂಬಿಕರಾಗಿ ಆಗಮಿಸಿ, ಸಿರಿ-ಮುಡಿ ಗಂಧ-ಪ್ರಸಾದ ಸ್ವೀಕರಿಸಿ, ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಮತಿ ಶ್ಯಾಮಲ ಕುಂದರ್ ಮತ್ತು ಮಕ್ಕಳು ಹಾಗೂ ಮೊಮ್ಮಕ್ಕಳು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ

Thumbnail
Posted On: 18 Dec 2025, 06:29 PM

ಕಾಪು : ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುರುಡಾಯಿ ಕೆರೆ ಅಭಿವೃದ್ದಿ ಸಮಿತಿ  ಸಹಭಾಗಿತ್ವದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುಡಾಯಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಹತ್ವಾಕಾಂಕ್ಷೆಯ ಯೋಜನೆ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮ ನೆರವೇರಿತು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಆನಂದ ಸುವರ್ಣರವರು ಕೆರೆ ನಾಮಫಲಕ ಅನಾವರಣವನ್ನು  ನೆರವೇರಿಸಿದರು.

ಕಾಪು ತಾಲೂಕು ದಂಡಾಧಿಕಾರಿ, ತಹಶೀಲ್ದಾರ್ ಅನಂತ ಶಂಕರ್ ಹಾಗೂ ಊರಿನ ಗಣ್ಯರು ಕೆರೆಗೆ ಬಾಗಿನ ಅರ್ಪಿಸಿದರು.  

  ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ” ಯೋಜನೆಯಿಂದ ಗ್ರಾಮಗಳ ಕೆರೆ ಅಭಿವೃದ್ಧಿ ಆಗುತ್ತಿದೆ.  ಕೆರೆ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಾಬ್ದಾರಿ. ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ, ಪಕ್ಷಿ ಮತ್ತು ಮನುಷ್ಯರಿಗೆ ಅನುಕೂಲವಾಗುತ್ತಿದೆ.  ಮುಂದಿನ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪದ್ಮ ವಿಭೂಷಣ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ಕೆರೆ ಸಂರಕ್ಷಣೆಯ ಮೂಲಕ ರಾಜ್ಯದಲ್ಲಿ ಈಗಾಗಲೇ 1000 ಕೆರೆಗಳ ಕಾಮಗಾರಿ ಮಾಡಿ, ಪುನಶೇತ್ವನ ಗೊಳಿಸಲಾಗಿದೆ. ಇದು ರಾಜ್ಯದಲ್ಲಿ ಕೆರೆಗಳ ಸಂರಕ್ಷಣೆಗೆ ಆದ್ಯತೆ  ಪೂರ್ಣಗೊಂಡಿರುತ್ತವೆ. ರೈತ ಬಾಂಧವರು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.  

  ತಾಲೂಕು ದಂಡಾಧಿಕಾರಿ ಅನಂತ ಶಂಕರ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಊರಿನ ಕೆರೆ, ಸಮುದಾಯ ಭವನ, ಹಿಂದೂ ರುದ್ರಭೂಮಿ, ಶಿಷ್ಯ ವೇತನ ಮಹತ್ತರ ಕೆಲಸ ಮಾಡುತ್ತಿದೆ. ಮುಂದೆಯೂ ನಿರಂತರವಾಗಿ ಸಮಾಜ ಸೇವೆ ಮುಂದುವರಿಯಲಿ ಎಂದು ಶ್ಲಾಘಿಸಿದರು.

ಬೆಳ್ಳೆ ಕುರುಡಾಯಿ ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಬೆಳ್ಳೆ ಪಂಚಾಯತ್ ಅಧ್ಯಕ್ಷರಾದ ದಿವ್ಯ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ ವಾಗ್ಲೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಇನ್ನಾ ಉದಯ ಕುಮಾರ್ ಶೆಟ್ಟಿ, ಸುಜಾತ ಸುವರ್ಣ, ಗೀತಾ ವಾಗ್ಲೆ, ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ರಾಜ್ಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಕೇಂದ್ರ ಒಕ್ಕೂಟ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸ್ಯಾಮ್ಸನ್, ಶೌರ್ಯವಿಪತ್ತು ನಿರ್ವಹಣಾ ಸದಸ್ಯರು, ಸಂಘದ ಸದಸ್ಯರು, ಗ್ರಾಮದ ಗಣ್ಯರು, ಮಾದ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕೆರೆ ಅಭಿವೃದ್ದಿ ಸಮಿತಿ ಸದಸ್ಯರನ್ನು ಪ್ರಾದೇಶಿಕ ನಿರ್ದೇಶಕರು ಗೌರವಾರ್ಪಣೆ ಮಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಮತಾ ಶೆಟ್ಟಿ ಪ್ರಸ್ತಾವನೆಗೈದು, ಸ್ವಾಗತಿಸಿದರು. 
ಶಿರ್ವ ವಲಯ ಮೇಲ್ವಿಚಾರಕರಾದ ಗೀತಾ  ನಿರೂಪಿಸಿದರು. ದೇವೇಂದ್ರ ವಂದಿಸಿದರು.

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ : 41ನೇ ವಾರ್ಷಿಕೋತ್ಸವ ಸಂಪನ್ನ

Thumbnail
Posted On: 18 Dec 2025, 06:22 PM

ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ (ರಿ.) ಇದರ 41ನೇ ವಾರ್ಷಿಕೋತ್ಸವ ಸಮಾರಂಭವು ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ಬಳಿ ನಡೆಯಿತು.

ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಲಭ್ಯ ಸದವಕಾಶವನ್ನು ಬಳಸಿಕೊಂಡು ಸಂಘಟಿತರಾಗಿ ಸಮಾಜಕ್ಕೆ ಆತ್ಮ ಸ್ಥೈರ್ಯ ನೀಡುವಂತಹ ಸಾಧನೆಯ ಮೂಲಕ ಜಿಲ್ಲಾ ರಾಜ್ಯೋತ್ಸವಕ್ಕೆ ಪಾತ್ರರಾಗಿದ್ದು, ಸುವರ್ಣ ಸಂಭ್ರಮದಲ್ಲಿ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿ ಎಂದರು.ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ಅಡಳಿತ ಮೊಕ್ತೇಸರರಾದ ಎರ್ಮಾಳು ಬೀಡು ಅಶೋಕ ರಾಜರು ಮಾತನಾಡಿ, ಊರಿಗೆ ಸ್ತ್ರೀಯರೇ ನಿಧಿಯಾಗಿರುವ ಮಹಿಳಾ ಮಂಡಳಿ ಶ್ರೀನಿಧಿ ಮಹಿಳಾ ಮಂಡಳಿಯಾಗಿದ್ದು, ಮತ್ತಷ್ಟು ಸಾಧನೆಗಳ ಮೂಲಕ ಆದ್ದೂರಿಯಾಗಿ ಸುವರ್ಣ ಸಂಭ್ರಮವನ್ನು ಆಚರಿಸುವಂತಾಗಲಿ ಎಂದರು.ಸಮಾರಂಭದಲ್ಲಿ ಸಾಧಕಿಯರಾದ ಆಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪ್ರಶಾಂತ್ ಪೂಜಾರಿ, ಗಿನ್ನೆಸ್ ದಾಖಲೆಯ ಸಾಧಕಿ ವಿದುಷಿ ದೀಕ್ಷಾ ರಾಹುಲ್ ಆವರನ್ನು ಸನ್ಮಾನಿಸಲಾಯಿತು. ಗೃಹ  ನಿರ್ಮಾಣಕ್ಕೆ ಮತ್ತು ಅನಾಥಾಶ್ರಮಗಳಿಗೆ ಸುಮಾರು 1.25 ಲಕ್ಷ ರೂ.ಗೂ ಅಧಿಕ ಮೊತ್ತದ ಧನ ಸಹಾಯ, ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪರಿಸರದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.ಜಿ.ಪಂ. ಮಾಜಿ ಉಪಾಧ್ಯಕ್ಷೆ/ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಮುಂಬೈ ಕಸ್ಟಮ್ಸ್ ನಿವೃತ್ತ ಅಸಿಸ್ಟೆಂಟ್ ಕಮೀಷನರ್ ಎರ್ಮಾಳು ರೋಹಿತ್ ಹೆಗ್ಡೆ, ಪುಣೆ ಹೋಟೆಲ್ ಉದ್ಯಮಿ ಸೀತಾರಾಮ ಎಲ್ ಶೆಟ್ಟಿ ಪುಚ್ಚೊಟ್ಟುಬೀಡು, ಪುಣೆ ಉದ್ಯಮಿ ನಾರಾಯಣ ಶೆಟ್ಟಿ ನೈಮಾಡಿ, ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳು ಮಣಿಪಾಲ ಇದರ ಸಹಾಯಕ ಪ್ರಾಧ್ಯಾಪಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ, ನಿವೃತ್ತ ಉಪಾನ್ಯಾಸಕ ವೈ. ರಾಮಕೃಷ್ಣ ರಾವ್ ಎರ್ಮಾಳು, ಪಡುಬಿದ್ರಿ ನವಶಕ್ತಿ ಮಹಿಳಾ ಮಂಡಳಿ ಆಧ್ಯಕ್ಷೆ ಭಾರತಿ ಜಿ. ಶೆಟ್ಟಿ, ಬಹುಮಾನ ವಿತರಕರಾದ ನಿವೃತ್ತ ಮುಖ್ಯೋಪಾಧ್ಯಾಯಿನಿ ಲಲಿತ ಪ್ರಭಾಕರ್ ರಾವ್ ವೇದಿಕೆಯಲ್ಲಿದ್ದರು.

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ ಆಧ್ಯಕ್ಷೆ ರೇಖಾ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಅಮಣಿ ಕುಂದರ್ ವರದಿ ವಾಚಿಸಿದರು. ಉಪಾಧ್ಯಕ್ಷೆ ವಾಣಿಶ್ರೀ ಗಣೇಶ್, ಕಲಾವತಿ ದಯಾನಂದ್ ಸನ್ಮಾನಿತರನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಅಮೃತಕಲಾ ಶೆಟ್ಟಿ ಪ್ರತಿಭಾ ಪುರಸ್ಕೃತರನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಅಮೃತಕಲಾ ಶೆಟ್ಟಿ ಪ್ರತಿಭಾ ಪುರಸ್ಕೃತರನ್ನು ಪರಿಚಯಿಸಿದರು. ಕೋಶಾಧಿಕಾರಿ ವಿಮಲ ಕೆ. ಸಾಲ್ಯಾನ್ ವಂದಿಸಿದರು. ಮಾಜಿ ಅಧ್ಯಕ್ಷರಾದ ಜ್ಯೋತಿ ಶೆಟ್ಟಿ ನಿರೂಪಿಸಿದರು.ಬಳಿಕ ನೃತ್ಯ ವೈವಿಧ್ಯ, ಕಾಪು ರಂಗತರಂಗ ತಂಡದ ಶೋಬಾಜಿ ತುಳು ನಾಟಕ ಪ್ರದರ್ಶನಗೊಂಡಿತು


    

ಡಿ. 20 - 21 : ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ವಿವಿಧ ಕಾರ್ಯಕ್ರಮಗಳು

Thumbnail
Posted On: 18 Dec 2025, 05:45 PM

ಕಾಪು : ಇಲ್ಲಿನ ವಿದ್ಯಾನಿಕೇತನ ಸಮೂಹ ಸಂಸ್ಥೆಯಲ್ಲಿ  ಡಿಸೆಂಬರ್ 20 ರಂದು ವಿದ್ಯಾ ಕಾಸ್ಟ್ಯೂಮ್ ಗಾಲ 2025 (ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮ, ಹಾಗೂ ಡಿಸೆಂಬರ್ 21 ರಂದು ವಿದ್ಯೋತ್ಸವ - 2025 (ವಾರ್ಷಿಕೋತ್ಸವ) ಜರಗಲಿದೆ. 

ಎರಡು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.

 ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ನಮ್ಮ ಕಾಪು ನ್ಯೂಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಡಿ. 21 : ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ

Thumbnail
Posted On: 18 Dec 2025, 05:33 PM

ಉಡುಪಿ : ಉಡುಪಿ ಜಿಲ್ಲೆಯ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯಲ್ಲಿ ಡಿಸೆಂಬರ್ 21ರಂದು ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಿದೆ. ಈ ಪರೀಕ್ಷೆಯ ಮೂಲಕ ರೂ. 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವುದು.

   ಈ ವಿದ್ಯಾರ್ಥಿವೇತನ ಪರೀಕ್ಷೆ ರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ಇ ಹಾಗೂ ಐಬಿ ಸೇರಿದಂತೆ ಎಲ್ಲಾ ಪಠ್ಯಕ್ರಮಗಳ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ವಿವಿಧ ತರಗತಿಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾದ ಪರೀಕ್ಷೆಯಲ್ಲಿನ ಸಾಧನೆಯ ಆಧಾರದ ಮೇಲೆ ಶುಲ್ಕದಲ್ಲಿ ರಿಯಾಯಿತಿಯನ್ನು ಪಡೆಯಬಹುದು.

   ಶಾಲಾ ಆಡಳಿತದ ಪ್ರಕಾರ, ಈ ಉಪಕ್ರಮವು ಶೈಕ್ಷಣಿಕ ಶ್ರೇಷ್ಠತೆಯನ್ನು ಉತ್ತೇಜಿಸುವುದು ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ.

   ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಆಸನಗಳು ಸೀಮಿತವಾಗಿರುವುದರಿಂದ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ವಿದ್ಯಾರ್ಥಿವೇತನ ಪರೀಕ್ಷೆಯು ಉಡುಪಿಯ ಕೆದಿಯೂರು ಹೋಟೆಲ್ನ ಶೇಷಶಯನ ಸಭಾಭವಮದಲ್ಲಿ ನಡೆಯಲಿದೆ.

ಅರ್ಹತೆ ಮತ್ತು ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆಡಳಿತವನ್ನು ಸಂಪರ್ಕಿಸಬಹುದು.
    

ಮುಂಡ್ಕೂರು ಮುಲ್ಲಡ್ಕ : ಡಿಸೆಂಬರ್ 21 ರಂದು ಕುಲಾಲ ಕ್ರೀಡಾಕೂಟ

Thumbnail
Posted On: 18 Dec 2025, 04:57 PM

ಕಾರ್ಕಳ ತಾಲೂಕಿನ ಕುಲಾಲ ಸಂಘ (ರಿ.) ನಾನಿಲ್ತಾರ್ ಮುಲ್ಲಡ್ಕ ಮೂಂಡ್ಕೂರು ಇದರ ವತಿಯಿಂದ ಯುವ ವೇದಿಕೆ ಆಶ್ರಯದಲ್ಲಿ ಡಿಸೆಂಬರ್ 21ರ ಆದಿತ್ಯವಾರ "ಕುಲಾಲ ಕ್ರೀಡಾಕೂಟ - 2025" ನಡೆಯಲಿದೆ.
 ವಾಲಿಬಾಲ್, ಹಗ್ಗಜಗ್ಗಾಟ, ತ್ರೋಬಾಲ್ ಪಂದ್ಯಾಟ ಹಾಗೂ ಇನ್ನಿತರ ಮನರಂಜನೆ ಕ್ರೀಡಾಕೂಟ ದಿವಂಗತ. ಗಿರಿಜಾ ಸುಂದರ ಮೂಲ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು  ಸಂಘದ ಅಧ್ಯಕ್ಷ ಜಯರಾಮ ಕುಲಾಲ್ ನಮ್ಮ ಕಾಪು ನ್ಯೂಸ್ ನ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಡಿಸೆಂಬರ್ 20: ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ

Thumbnail
Posted On: 17 Dec 2025, 08:48 PM

ಕಾಪು: ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರು ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಈ ತಿಂಗಳ 20 ಶನಿವಾರ 2.30ಕ್ಕೆ ನಡೆಯಲಿದೆ.

ತಮ್ಮ ಆಗಮನದ ನಿರೀಕ್ಷೆ ಯಲ್ಲಿ, ಅಧ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು.
ವಿದ್ಯಾವರ್ಧಕ ಸಂಘ(ರಿ) ಕಳತ್ತೂರು.
ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ.

ಮುಖ್ಯ ಶಿಕ್ಷಕರು ಅಧ್ಯಾಪಕರು,ಅಧ್ಯಾಪಕತೇರ ವೃಂದ ಹಾಗೂ ಶಾಲಾ ನಾಯಕ..

ಜನವರಿ 11. ಕುಲಾಲ ಸಂಘ (ರಿ) ಬುಕ್ಕಿಗುಡ್ಡೆ ಪೆರ್ಡೂರು ಅಶ್ರಯದಲ್ಲಿ 3 ನೇ ವರ್ಷದ ಕುಲಾಲ ಟ್ರೋಫಿ 2026

Thumbnail
Posted On: 16 Dec 2025, 09:51 PM

ಪೆರ್ಡೂರು: ಕುಲಾಲ ಸಂಘ (ರಿ ) ಬುಕ್ಕಿಗುಡ್ಡೆ ಪೆರ್ಡೂರು, ಕುಲಾಲ ಸೇವಾದಳ ಇವರ ಆಶ್ರಯದಲ್ಲಿ ಜನವರಿ 11 ರಂದು ಪೆರ್ಡೂರು ಪ್ರೌಢ ಶಾಲಾ ಮೈದಾನದಲ್ಲಿ ಕುಲಾಲ ಸಮಾಜ ಬಾಂಧವರಿಗಾಗಿ ಜಿಲ್ಲಾ ಮಟ್ಟದ 90 ಗಜಗಳ ಸೀಮಿತ ಓವರ್ ಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಪೆರ್ಡೂರು ಕುಲಾಲ ಸಂಘ ಪ್ರಕಟಣೆಯಲ್ಕಿ ತಿಳಿಸಿದೆ.

9844616085, 9902205793, 9844552875.