Updated News From Kaup

ಡಿ 12 : ಕಾಪುವಿನಲ್ಲಿ ಸಮಾಜರತ್ನ ದಿ.ಕೆ. ಲೀಲಾಧರ ಶೆಟ್ಟಿ ಮತ್ತು ದಿ. ವಸುಂಧರಾ ಎಲ್ ಶೆಟ್ಟಿ ಪುಣ್ಯಸ್ಮರಣೆ

Thumbnail
Posted On: 16 Nov 2025, 08:12 PM

ಕಾಪು : ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಹಾಗೂ ಸರ್ವ ಧರ್ಮದ ಬಂಧುಗಳ ಸಹಕಾರದೊಂದಿಗೆ ಸಮಾಜ ರತ್ನ ಕೆ. ದಿ. ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ದಿ. ವಸುಂದರಾ ಶೆಟ್ಟಿ ಅವರ ದ್ವಿತೀಯ ವರ್ಷದ ಸಂಸ್ಮರಣೆಯೊಂದಿಗೆ ಡಿ. 12 ರಂದು ಮಜೂರು ಸರ್ಕಲ್ ಬಳಿಯ ಲೀಲಾಧರ ಶೆಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ನಂತರ ಕಾಪು ಶ್ರೀ ವೀರಭದ್ರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಅವರ ಹೆಸರಿನಲ್ಲಿ ಪೂಜೆ, ನಂತರ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ, ಗಣ್ಯರ ಉಪಸ್ಥಿತಿಯಲ್ಲಿ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ 2024-2025 ಸಾಲಿನಲ್ಲಿ (ಅನುದಾನಿತ ಶಾಲೆ )ಹೆಚ್ಚು ಅಂಕ ಗಳಿಸಿದ 10 ವಿದ್ಯಾರ್ಥಿಗಳಿಗೆ ನಗದಿನೊಂದಿಗೆ ಸನ್ಮಾನ, ಹಾಗೂ 3 ಮಂದಿ ಮಾಜಿ ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಸಮಾಜ ರತ್ನ ಕೆ. ಲೀಲಾಧರ ಶೆಟ್ಟಿ ಅಭಿಮಾನಿ ಬಳಗ ಕಾಪು ಇವರ ಪ್ರಕಟಣೆಯು ತಿಳಿಸಿದೆ.

ಕುಲಾಲ ಸಂಘ ಮೂಡುಬಿದಿರೆ ವತಿಯಿಂದ ತುರ್ತು ಆರೋಗ್ಯ ನಿಧಿ ಹಸ್ತಾಂತರ

Thumbnail
Posted On: 09 Nov 2025, 07:31 PM

ಮೂಡುಬಿದಿರೆ : ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡುಬಿದಿರೆ ಪಡುಮಾರ್ನಾಡ್ ಶ್ಯಾಮ ಅಂಚನ್ ಅವರ ಪುತ್ರ ಸಾತ್ವಿಕ್ ಕುಲಾಲ್ ನ ಚಿಕಿತ್ಸಾ ವೆಚ್ಚಕ್ಕಾಗಿ ಕುಲಾಲ ಸಂಘ (ರಿ) ಮೂಡುಬಿದಿರೆ ವತಿಯಿಂದ ತುರ್ತು ಆರೋಗ್ಯ ನಿಧಿ ಯೋಜನೆಯಡಿ ದಾನಿಗಳಿಂದ ಸಂಗ್ರಹಿಸಿದ ರೂ 21,000 ಮೊತ್ತವನ್ನು ಫಲಾನುಭಾವಿಯ ಮನೆಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ಕುಲಾಲ್ ಏರಿಮಾರು, ಕಾರ್ಯದರ್ಶಿ ವಿಶ್ವನಾಥ್ ಕುಲಾಲ್, ಮಹಿಳಾ ಘಟಕದ ಕಾರ್ಯದರ್ಶಿ ಮಮತಾ ಕುಲಾಲ್, ಸದಸ್ಯರುಗಳಾದ ವೆಂಕಟೇಶ್ ಬಂಗೇರ, ವಿಜಯ್ ಕುಮಾರ್, ಸೀತರಾಮ ಕುಲಾಲ್, ಸಂಪಾ ಸದಾಶಿವ ಮೂಲ್ಯ ಉಪಸ್ಥಿತರಿದ್ದರು. ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿ ಧನ ಸಹಾಯವಿತ್ತ ಮಹಾದಾನಿಗಳಿಗೆ ಕುಲಾಲ ಸಂಘ (ರಿ) ಮೂಡುಬಿದಿರೆ ವತಿಯಿಂದ ಕೃತಜ್ಞತೆ ಸಲ್ಲಿಸಿದ್ದಾರೆ.

ನ. 23 ರಂದು ಮಂಗಳೂರಿನ ಮಂಗಳಾದೇವಿಯಲ್ಲಿ ಭವ್ಯ ಕುಲಾಲ ಭವನ ಉದ್ಘಾಟನೆ

Thumbnail
Posted On: 09 Nov 2025, 06:56 AM

ಮಂಗಳೂರು : ಕುಲಾಲ ಸಂಘ ಮುಂಬಯಿ (ರಿ.) ಇದರ ಬಹು ಕೋಟಿ ವೆಚ್ಚದ ನೂತನ ಕುಲಾಲ ಭವನ ಮಂಗಳೂರಿನಲ್ಲಿ ನವೆಂಬರ್ 23ರಂದು ಮಂಗಳಾದೇವಿ ದೇವಸ್ಥಾನ ಬಳಿ ಅದ್ದೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ನ.21 ರಂದು ಸಂಜೆ 6ರಿಂದ ವಾಸ್ತು ಪೂಜೆ, ಬಲಿ ಪೂಜೆ ಹಾಗೂ ಸುದರ್ಶನ ಹೋಮ ನ. 22ರಂದು ಬೆಳಿಗ್ಗೆ 9ರಿಂದ ಗಣಹೋಮ, 11.30ರಿಂದ ಸತ್ಯನಾರಾಯಣ ಪೂಜೆ , ನವೆಂಬರ್ 23ರಂದು ಬೆಳಿಗ್ಗೆ 8.30ರಿಂದ ಮಂಗಳಾದೇವಿ ದೇವಸ್ಥಾನದಿಂದ ಶೋಭಾಯಾತ್ರೆ ಹೊರಟು ಒಡಿಯೂರು ಶ್ರೀ ಹಾಗೂ ಮಾಣಿಲ ಶ್ರೀಗಳ ಶುಭಾಶೀರ್ವಾದದೊಂದಿಗೆ 9.30ಕ್ಕೆ ಕುಲಾಲ ಭವನದ ಉದ್ಘಾಟನೆಯಾಗಲಿದೆ. ಇದರೊಂದಿಗೆ ಶ್ರೀಮತಿ ಸುಮಿತ್ರ ರಾಜು ಸಾಲ್ಯಾನ್ ಆಡಿಟೋರಿಯಂ, ಶ್ರೀಮತಿ ಯಶೋದಾ ಬಾಬು ಸಾಲ್ಯಾನ್ ಬಂಟ್ವಾಳ ವೇದಿಕೆ, ಶ್ರೀಮತಿ ಸರಸ್ವತಿ ವಿಶ್ವನಾಥ ಬಂಗೇರ ಕುಳಾಯಿ (ಬಾಲ್ಕನಿ), ಶ್ರೀಮತಿ ನಮೃತಾ ಜಗದೀಶ್ ಬಂಜನ್ ಬ್ಯಾಂಕ್ವೆಟ್ ಹಾಲ್ ಶ್ರೀಮತಿ ಸಾವಿತ್ರಿ ಪಿ.ಕೆ.ಸಾಲ್ಯಾನ್ ವೇದಿಕೆ ಹಾಗೂ ಶ್ರೀಮತಿ ವಸಂತಿ ಸದಾಶಿವ ಬಂಜನ್ ಪುಣೆ ಆಡಳಿತ ಕಚೇರಿ ಹಾಗೂ ಡಾ. ಸುರೇಖಾ ಆರ್ ಕುಲಾಲ್ ಮುಂಬಯಿ ಆಡಳಿತ ಕಚೇರಿ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 1.30ರಿಂದ 2.30ರವರೆಗೆ ಮನೋರಂಜನಾ ಕಾರ್ಯಕ್ರಮ, ಸಂಜೆ 3ರಿಂದ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿವಿಧ ಕ್ಷೇತ್ರದ ಗಣ್ಯರು, ದೇಶ ವಿದೇಶದ ಕುಲಾಲ ಸಮುದಾಯದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಕಾಪುವಿನ ಮಹಾಬಲ ಮಾಲ್ ನಲ್ಲಿ ಅಂಗಡಿ ಕೋಣೆ ಮಾರಾಟ/ ಬಾಡಿಗೆಗೆ ಲಭ್ಯ

Thumbnail
Posted On: 08 Nov 2025, 10:04 AM

ಕಾಪು : ಇಲ್ಲಿನ ಹೃದಯ ಭಾಗದಲ್ಲಿರುವ ಮಹಾಬಲ ಮಾಲ್ ನ ಮೊದಲ ಮಹಡಿಯಲ್ಲಿ 825 Sq Ft ಅಂಗಡಿ ಕೋಣೆ ಮಾರಾಟಕ್ಕಿದೆ ಅಥವಾ ಬಾಡಿಗೆಗೆ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ : 9900250666 9481269415

ಹೆಜಮಾಡಿಯಲ್ಲಿ ನ.15 ರಂದು ಜರಗಲಿರುವ ಕಾಪು ತಾ| 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Thumbnail
Posted On: 02 Nov 2025, 11:33 AM

ಪಡುಬಿದ್ರಿ : ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ ನ.15ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಹಿರಿಯ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಸರ್ವಾಧ್ಯಕ್ಷತೆಯಲ್ಲಿ ಜರಗಲಿರುವ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಯು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜರಗಿತು. ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಆಚಾರ್ಯರವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಉಡುಪಿ ಜಿಲ್ಲಾ ಕ.ಸಾ.ಪ. ವತಿಯಿಂದ ಸಮ್ಮೇಳನದ ಕಾರ್ಯಾಧ್ಯಕ್ಷರಾದ ದಯಾನಂದ ಹೆಜಮಾಡಿ ಮತ್ತು ದೇವಳದ ಅರ್ಚಕರನ್ನು ಗೌರವಿಸಲಾಯಿತು. ಈ ಸಂದರ್ಭ ಹೆಜಮಾಡಿ ಗ್ರಾ.ಪಂ.ಅಧ್ಯಕ್ಷರಾದ ರೇಷ್ಮಾ ಎ.ಮೆಂಡನ್, ಕಾಪು ತಾಲ್ಲೂಕು ಕ.ಸಾ.ಪ. ಅಧ್ಯಕ್ಷರಾದ ಬಿ.ಪುಂಡಲೀಕ ಮರಾಠೆ, ಉಡುಪಿ ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಸಮ್ಮೇಳನದ ಕಾರ್ಯಾಧ್ಯಕ್ಷರಾದ ದಯಾನಂದ ಹೆಜಮಾಡಿ, ಉಪಾಧ್ಯಕ್ಷರುಗಳಾದ ಸಂಜೀವ ಟಿ., ಹರೀಶ್ ಕುಮಾರ್ ಹೆಜಮಾಡಿ, ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ, ಜೊತೆ ಕಾರ್ಯದರ್ಶಿ ಪವಿತ್ರ ಗಿರೀಶ್, ಕಾಪು ಕ.ಸಾ.ಪ. ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್, ಕಾಪು ಕ.ಸಾ.ಪ. ಸಮಿತಿಯ ವಿದ್ಯಾ ಅಮ್ಮಣ್ಣಾಯ, ಮಧುಕರ್ ಎಸ್ ಯು ಕಲ್ಯ, ದೇವದಾಸ್ ಪಾಟ್ಕರ್, ದೀಪಕ್ ಬೀರ, ಸಮ್ಮೇಳನದ ಸಮಿತಿಯ ಭರತ್ ಕಾಂಚನ್, ಸನಾ ಇಬ್ರಾಹಿಂ, ದೀಪಕ್ ಕೋಟ್ಯಾನ್, ಚಂದ್ರಹಾಸ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆ : ಕನ್ನಡ ರಾಜ್ಯೋತ್ಸವ ಆಚರಣೆ

Thumbnail
Posted On: 01 Nov 2025, 06:45 PM

ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ ಇವರು ಧ್ವಜಾರೋಹಣ ನೆರವೇರಿಸಿ, ಕನ್ನಡದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತ ವಾಗಿರದೆ ಬದುಕಿನ ಎಲ್ಲ ಸಮಯಗಳಲ್ಲಿ ಒಂದಾಗಿ ಆಯೋಜಿಸುವಂತಾಗಬೇಕು ಎಂಬ ಸಂದೇಶ ನೀಡಿದರು. ಸಮಾರಂಭದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನ್ಹಸ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕೃಪಾ ಅಮ್ಮನ್ನ, ಶಿಕ್ಷಕ ಪ್ರಭಾಕರ್ ಶೆಟ್ಟಿ, ಶಿಕ್ಷಕ - ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಪು ಮಾರಿಯಮ್ಮ ದರುಶನ ಪಡೆದ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ

Thumbnail
Posted On: 01 Nov 2025, 06:41 PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್. ಪಾಲನ್ ಹಾಗೂ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಉಪಸ್ಥಿತರಿದ್ದರು.

ಕನ್ನಡ ಚಿತ್ರರಂಗದ ನಿರ್ದೇಶಕಿ, ನಟಿ ರೂಪ ಐಯ್ಯರ್ ಕಾಪು ಹೊಸ ಮಾರಿಗುಡಿ ಭೇಟಿ ; ನವದುರ್ಗಾ ಲೇಖನ ಯಜ್ಞ ಸಂಕಲ್ಪ

Thumbnail
Posted On: 01 Nov 2025, 04:26 PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರ ಸಮಕ್ಷಮದಲ್ಲಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಪರವಾಗಿ ಗೌರವಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ದೇವಳದ ಪ್ರಥಮ ಮತ್ತು ದ್ವಿತೀಯ ಹಂತದ ಕಾಮಗಾರಿಯನ್ನು ವೀಕ್ಷಿಸಿ ನಂತರ, ನವದುರ್ಗಾ ಲೇಖನ ಮಂಟಪಕ್ಕೆ ಆಗಮಿಸಿ, ಲೇಖನ ಬರೆಯುವ ಸಂಕಲ್ಪ ಮಾಡಿ, ಒಂದು ದಿನದ ಲೇಖನವನ್ನು "ಲೇಖನ ಯಜ್ಞದ ಪುಣ್ಯಭೂಮಿ" ಯಲ್ಲಿ ಬರೆದರು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಮಾರಿಯಮ್ಮ ದೇವಿಯ ದರುಶನ ಮಾಡೋಕೆ ಸಿಕ್ಕಿರೋದು ನನ್ನ ಸೌಭಾಗ್ಯ, ದೇವಿಯ ಒಂಬತ್ತು ಹೆಸರುಗಳನ್ನು ಬರೆಯುವ ಸೇವೆಯಲ್ಲಿ ನನ್ನಂತೆ ನೀವೆಲ್ಲರೂ ಭಾಗಿಯಾಗಿ, ನಾವೇಲ್ಲೆ ಇದ್ದರೂ ನಮ್ಮನ್ನು ಸೆಳೆಯುವ ಶಕ್ತಿ ಈ ದೇವಿಗಿದೆ, ದೇವಿಯ ಪ್ರೇರಣೆಯಂತೇ ನಾನಿಲ್ಲಿಗೆ ಬಂದು ಸೇವೆ ಸಲ್ಲಿಸಿ, ಪ್ರಾರ್ಥಿಸಿಕೊಂಡಿದ್ದೇನೆ, ಎಲ್ಲರಿಗೂ ಅವಳ ಅನುಗ್ರಹ ಇರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಮತ್ತು ಆರ್ಥಿಕ ಸಮಿತಿ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ.ಶೆಟ್ಟಿ ಹಾಗೂ ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.

ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಪುಸ್ತಕ ಮಳಿಗೆ, ವಸ್ತುಪ್ರದರ್ಶನಕ್ಕೆ ಅವಕಾಶ

Thumbnail
Posted On: 31 Oct 2025, 11:16 PM

ಪಡುಬಿದ್ರಿ : ಖ್ಯಾತ ಕಥೆಗಾರ, ಹಿರಿಯ ಸಾಹಿತಿ ಮತ್ತು ಸಾಮಾಜಿಕ ಕಾರ್ಯಕರ್ತರಾದ ಫಕೀರ್ ಮುಹಮ್ಮದ್ ಕಟ್ಪಾಡಿಯವರ ಸರ್ವಾಧ್ಯಕ್ಷತೆಯಲ್ಲಿ ನ. 15ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾ ಭವನದಲ್ಲಿ ಜರಗಲಿರುವ ಕಾಪು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭ ಪುಸ್ತಕ ಮಳಿಗೆ, ಚಿತ್ರಕಲಾ ಪ್ರದರ್ಶನ, ವಸ್ತು ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕಾಪು ತಾಲ್ಲೂಕು ವ್ಯಾಪ್ತಿಯ ಲೇಖಕರು 2025ನೇ ಸಾಲಿನಲ್ಲಿ ರಚಿಸಿದ ಪುಸ್ತಕಗಳನ್ನು ಬಿಡುಗಡೆ ಮಾಡುವ ಬಗ್ಗೆಯೂ ಅವಕಾಶ ಇದೆ. ಹೆಚ್ಚಿನ ಮಾಹಿತಿಗೆ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ [9620382173] ಅವರನ್ನು ಸಂಪರ್ಕಿಸಬಹುದು.

ಡಿಸೆಂಬರ್ ನಲ್ಲಿ ಕಾಪು ಬೀಚ್ ಉತ್ಸವ : ಪೂರ್ವಭಾವಿ ಸಭೆ

Thumbnail
Posted On: 30 Oct 2025, 07:33 PM

ಕಾಪು : ಇಲ್ಲಿನ ಮಂಡಲ ಬಿಜೆಪಿ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಸಲುವಾಗಿ "ಅಟಲೋತ್ಸವ - ಕಾಪು ಬೀಚ್ ಉತ್ಸವ" ಡಿಸೆಂಬರ್ 26-27-28 ರಂದು ಕಾಪು ಬೀಚ್‌ನಲ್ಲಿ ನಡೆಯಲ್ಲಿದೆ. ಇದರ ಪೂರ್ವಭಾವಿ ಸಭೆಯು ಗುರುವಾರ ಕಾಪು ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಹಾಗೂ ರಾಜ್ಯ ಮತ್ತು ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು, ಪುರಸಭೆಯ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.