Updated News From Kaup
ಹೆಚ್ಚು ಕೆಲಸ ಶಿಸ್ತು ಬದ್ಧ ಜೀವನ ನಾಯಕನ ಗುಣವಾಗಬೇಕು : ಸಂದೀಪ್ ಕುಮಾರ್ ಮಂಜ
Posted On: 02-05-2024 02:13PM
ಉಡುಪಿ : ನಾಯಕತ್ವ ಎಂಬುದು ಜವಾಬ್ದಾರಿಯಾಗಿದೆ ಇದು ಅಧಿಕಾರ ಎಂದು ತಿಳಿಯದೆ, ಹೆಚ್ಚು ಕೆಲಸ ಶಿಸ್ತು ಬದ್ಧ ಜೀವನ ನಾಯಕನ ಗುಣವಾಗಬೇಕು ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ , ಪೂವ೯ ರಾಷ್ಟ್ರೀಯ ಉಪಾಧ್ಯಕ್ಷ ಸಂದೀಪ್ ಕುಮಾರ್ ಮಂಜ ಹೇಳಿದರು. ಅವರು ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಸಿ.ಎಸ್.ಐ ಬಾಲಕರ ವಸತಿ ನಿಲಯದಲ್ಲಿ ನಡೆದ ಕುಟುಂಬೋತ್ಸವ ಮತ್ತು ಲೀಡರ್ಶಿಪ್ ತರಬೇತಿ ಕಾಯ೯ಕ್ರಮದಲ್ಲಿ ಮಾತನಾಡಿದರು. ನಾಯಕತ್ವದ ಗುಣಗಳನ್ನು ನಾವೆಲ್ಲರೂ ರೂಢಿಸಬೇಕೆಂದರು.
ಮೇ 5 : ದುಬೈನಲ್ಲಿ ನ್ಯೂ ಸ್ಟಾರ್ ಮಂಗಳೂರು ಮಹಿಳಾ ಥ್ರೋಬಾಲ್ ತಂಡದ ಜರ್ಸಿ ಅನಾವರಣ
Posted On: 02-05-2024 01:40PM
ದುಬೈ ಸ್ಪೋರ್ಟ್ಸ್ ಕೌನ್ಸಿಲ್ನಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿರುವ ದುಬೈನ ಯಶಸ್ವಿ ತಂಡದಲ್ಲಿ ಒಂದಾಗಿರುವ ನ್ಯೂ ಸ್ಟಾರ್ ಮಂಗಳೂರು ತಂಡ ಕಬಡ್ಡಿ ಕ್ರೀಡೆಯಲ್ಲಿ ಮಾತ್ರವಲ್ಲದೆ ಇದೀಗ ಮಹಿಳೆಯರ ಥ್ರೋಬಾಲ್ ತಂಡವನ್ನು ಪ್ರಾರಂಭಿಸುತ್ತಿದ್ದು ಇದರ ಜರ್ಸಿಯನ್ನು ಮೇ 5 ರಂದು ಬೆಳಿಗ್ಗೆ 10 ಗಂಟೆಗೆ ಅನಾವರಣಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 2,3,4 : ಡಿಕೆಎಸ್ಸಿ, ಮರ್ಕಝ್ ಮೂಳೂರು ಇದರ ಸನದು ದಾನ ಸಮ್ಮೇಳನ
Posted On: 01-05-2024 04:35PM
ಕಾಪು : ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಇದರ ಅಧೀನ ಸಂಸ್ಥೆಯಾದ ಮರ್ಕಝ್ ತ ಅ್ ಲೀಮಿಲ್ ಇಹ್ಸಾನಿನ ಭಾಗವಾದ ಅಲ್ ಇಹ್ಸಾನ್ ದ ಅವಾ ಕಾಲೇಜಿನಲ್ಲಿ ಧಾರ್ಮಿಕ, ಲೌಕಿಕ ಪದವಿ ಪೂರೈಸಿದ ಯುವ ವಿದ್ವಾಂಸರ ಘಟಿಕೋತ್ಸವ ಮಹಾಸಮ್ಮೇಳನವು ಮೂಳೂರು ಮರ್ಕಝ್ ಕ್ಯಾಂಪಸ್ಸಿನಲ್ಲಿ ಮೇ. 2,3 ಹಾಗೂ 4 ನಡೆಯಲಿದೆ ಎಂದು ಆಲ್ ಇಹ್ಸಾನ್ ಎಜುಕೇಶನ್ ಸೆಂಟರ್, ಮೂಳೂರು ಇದರ ಮ್ಯಾನೇಜರ್ ಅಲ್ ಹಾಜಿ ಮುಸ್ತಫಾ ಸ ಅದಿ ಹೇಳಿದರು. ಅವರು ಬುಧವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಳ : ಗೋನಿವಾಸದೊಂದಿಗೆ ದೇವಳದ ಶುದ್ಧಿ; ಒಂಬತ್ತು ಗೋವುಗಳು ಸಾನಿಧ್ಯದಲ್ಲಿ ವಾಸ್ತವ್ಯ
Posted On: 30-04-2024 06:27PM
ಕಾಪು : ಇಳಕಲ್ಲಿನ ಶಿಲೆಯ ಕಲಾಕುಸುರಿಯಿಂದ ಅತ್ಯದ್ಭುತವಾಗಿ ಮೂಡಿ ಬರುತ್ತಿರುವ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಏಪ್ರಿಲ್ 9 ರಂದು ಬ್ರಹ್ಮಕಳಶೋತ್ಸವಕ್ಕೆ ಚಾಲನೆಯನ್ನು ನೀಡಿ, ಬೀಜ ವಪನ ಅಂದರೆ ನವಧಾನ್ಯಗಳನ್ನು ಬಿತ್ತಲಾಗಿದ್ದು ಅದರ ಅಂಗವಾಗಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಮಂಗಳವಾರದಂದು ಗೋ ನಿವಾಸ ಕಾರ್ಯವು ನಡೆಯಿತು.
ಪಡುಬಿದ್ರಿ : ಹಾನ್೯ - ಓವರ್ ಟೇಕ್ ಗಲಾಟೆ ; ಬಸ್ - ಕಾರು ಚಾಲಕರಿಂದ ದೂರು-ಪ್ರತಿದೂರು ದಾಖಲು
Posted On: 29-04-2024 11:43PM
ಪಡುಬಿದ್ರಿ : ಹಾನ್೯ ಹಾಕಿದ ಕಾರಣಕ್ಕೆ ಮಂಗಳೂರು ಕಡೆಗೆ ಸಾಗುತ್ತಿದ್ದ ವೇಗದೂತ ಬಸ್ ಚಾಲಕನಿಗೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ಕಾರು ಚಾಲಕನೋರ್ವ ಚೂರಿಯಿಂದ ಮುಖಕ್ಕೆ ಗೀರಿ ಬೆದರಿಕೆಯೊಡ್ಡಿದ್ದಾನೆ ಎಂದು ಬಸ್ ಚಾಲಕ ದೂರನ್ನಿತ್ತರೆ, ಓವರ್ಟೇಕ್ ಮಾಡಿ ಕಾರಿಗೆ ಢಿಕ್ಕಿ ಹೊಡೆಯಲು ಪ್ರಯತ್ನಿಸಿ ಪ್ರಶ್ನಿಸಿದರೆ ಚಾಲಕ, ನಿರ್ವಾಹಕರು ಬೆದರಿಕೆಯೊಡ್ಡಿದ್ದಾರೆ ಎಂದು ಕಾರು ಚಾಲಕ ಪ್ರತಿ ದೂರನ್ನಿತ್ತ ಘಟನೆ ಪಡುಬಿದ್ರಿಯಲ್ಲಿ ಜರಗಿದೆ.
ಏ. 30 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಗೋ ಪೂಜೆ ; ಗೋನಿವಾಸ
Posted On: 29-04-2024 07:18PM
ಕಾಪು : ಮಾರಿಯಮ್ಮನ ಕ್ಷೇತ್ರದಲ್ಲಿ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿದ್ದು ಆ ಪ್ರಯುಕ್ತ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಏಪ್ರಿಲ್ 9ಕ್ಕೆ ಸಾನಿಧ್ಯ, ವೃದ್ಧಿಗಾಗಿ ಭೂಕರ್ಷನ ಖನನ, ಹರಣ, ದಾಹ, ಪೂರಣ ಮತ್ತು ನವಧಾನ್ಯಗಳಿಂದ ಬೀಜ ವಪನ ಮಾಡಿರುತ್ತೇವೆ, ಈಗಾಗಲೇ ಬೀಜಗಳು ಮೊಳಕೆಯೊಡೆದಿವೆ. ಗರ್ಭಗುಡಿಯಲ್ಲಿ ಮೊಳಕೆಯೋಡೆದ ನವಧಾನ್ಯಗಳನ್ನು ಗೋವುಗಳು ಮೇಯುವ ಕಾರ್ಯಕ್ರಮ ಏಪ್ರಿಲ್ 30 ರಂದು ಬೆಳಿಗ್ಗೆ ಗಂಟೆ 10 ಕ್ಕೆ ಸರಿಯಾಗಿ ನಡೆಯಲಿದೆ.
ಮೇ 5 : ಉಡುಪಿಯಲ್ಲಿ ಮಕ್ಕಳ ಚಿತ್ರದ ಆಡಿಷನ್
Posted On: 28-04-2024 09:31AM
ಉಡುಪಿ : ಈ ಹಿಂದೆ ಆರ್.ಎಸ್.ಬಿ ಭಾಷಿತ ಕೊಂಕಣಿ ಸಿನೇಮಾ ‘ಅಮ್ಚೆ ಸಂಸಾರ್’ ನಿರ್ಮಿಸಿದ ತಂಡ ‘ಅಮ್ಚೆ ಕ್ರಿಯೇಷನ್ಸ್’ ಬ್ಯಾನೆರ್ ಅಡಿಯಲ್ಲಿ 2ನೇ ಸಿನೇಮಾ ತಯಾರಿಸಲು ಸಜ್ಜಾಗುತ್ತಿದೆ. ಈ ಚಿತ್ರವು ಮಕ್ಕಳ ಚಿತ್ರವಾಗಿದ್ದು ಈ ಚಿತ್ರಕ್ಕೆ ಆಡಿಷನ್ ಅನ್ನು ಇದೇ ಬರುವ ಮೇ 5ರಂದು ಬಡಗಬೆಟ್ಟು ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ., ಲಿ ಉಡುಪಿ ಇದರ ಜಗನ್ನಾಥ ಸಭಾಂಗಣದಲ್ಲಿ ಬೆಳಗ್ಗೆ 10 ಘಂಟೆಯಿಂದ ನಡೆಯಲಿದೆ.
ಎ.30 - ಮೇ.5 : ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಗದ್ದಿಗೆಬೆಟ್ಟು ಕೈಪುಂಜಾಲು - ನೂತನ ಶಿಲಾಮಯ ಗರ್ಭಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಕುಂಭಾಭಿಷೇಕ, ನೇಮೋತ್ಸವ
Posted On: 27-04-2024 03:20PM
ಕಾಪು : ತಾಲೂಕಿನ ಕೈಪುಂಜಾಲು ಉಳಿಯಾರಗೋಳಿ ಗ್ರಾಮದ ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಗದ್ದಿಗೆಬೆಟ್ಟು ಇಲ್ಲಿ ಎ.30 - ಮೇ.5ರವರೆಗೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಅರ್ಚಕರಾದ ಮಡುಂಬು ಶ್ರೀ ನಾರಾಯಣ ತಂತ್ರಿ ಇವರ ನೇತೃತ್ವದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಕುಂಭಾಭಿಷೇಕ ಮತ್ತು ನೇಮೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಗಳು ಜರಗಲಿವೆ ಎಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಾವಗುತ್ತು ಕಿರಣ್ ಆಳ್ವ ಹೇಳಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ : ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ್ಯಾಂಕ್
Posted On: 27-04-2024 01:36PM
ಕಾರ್ಕಳ : ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು ಉತ್ತರಕನ್ನಡದ ಹೊನ್ನಾವರದ ಜಗದೀಶ್ ರಾವ್ ಬಿ ಎಸ್ ಮತ್ತು ವಿನುತಾ ಭಟ್ ದಂಪತಿಗಳ ಸುಪುತ್ರಿ.
ಪಡುಬಿದ್ರಿ : ಕಾರಿಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲಿ ನಿಂತ ಲಾರಿ ; ಸಂಚಾರ ತೊಡಕು
Posted On: 27-04-2024 01:28PM
ಪಡುಬಿದ್ರಿ : ಇಲ್ಲಿನ ಪಡುಬಿದ್ರಿ ಕಾರ್ಕಳ ಜಂಕ್ಷನ್ ನಲ್ಲಿ ಕಾರಿಗೆ ಡಿಕ್ಕಿ ಹೊಡೆದು ಡಿವೈಡರ್ ಏರಿ ನಿಂತ ಸರಕು ಸಾಗಾಣಿಕೆ ಲಾರಿ.ಸಂಚಾರ ತೊಡಕು. ಪಡುಬಿದ್ರಿ : ಉಡುಪಿಯಿಂದ ಮಂಗಳೂರು ಕಡೆಗೆ ಸರಕು ಹೇರಿಕೊಂಡು ಸಂಚರಿಸುತ್ತಿದ್ದ ಲಾರಿಯೊಂದು ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಕಾರ್ಕಳ ಕಡೆಯಿಂದ ಬಂದ ಕಾರಿಗೆ ಡಿಕ್ಕಿ ಹೊಡೆದು ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ನಿಂತ ಘಟನೆ ಸಂಭವಿಸಿದೆ.
