Updated News From Kaup

ಸಾಂತೂರಿನಲ್ಲಿ ಅಕ್ರಮ ಗ್ಯಾಸ್ ಫಿಲ್ಲಿಂಗ್ : ಇಬ್ಬರು ಪೋಲಿಸ್ ವಶ

Thumbnail
Posted On: 23 Jun 2024, 02:25 PM

ಸಾಂತೂರು : ಅನಾಹುತಕ್ಕೆ ಎಡೆಮಾಡುವ ರೀತಿಯಲ್ಲಿ ತುಂಬಿದ ಸಿಲಿಂಡರ್‌ಗಳಿಂದ ಗ್ಯಾಸನ್ನು ಖಾಲಿ ಸಿಲಿಂಡರ್‌ಗಳಿಗೆ ತುಂಬಿಸಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಗೋದಾಮಿಗೆ ದಾಳಿ ಮಾಡಿ ಪಡುಬಿದ್ರಿ ಪೋಲಿಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಕಾಪು ತಾಲೂಕಿನ ಸಾಂತೂರಿನಲ್ಲಿ ನಡೆದಿದೆ. ಅಕ್ರಮವಾಗಿ ಸಿಲಿಂಡರ್ ಗಳಿಗೆ ಅನಿಲ ತುಂಬಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು, ತಹಶಿಲ್ದಾರರ ನಿರ್ದೇಶನದಂತೆ ಆಹಾರ ನಿರೀಕ್ಷಕರ ಜೊತೆಗೂಡಿ ಸಾಂತೂರಿನ ಸಮನ್ಯು ಗ್ಯಾಸ್ ಏಜೆನ್ಸಿ ಗೋದಾಮಿಗೆ ದಾಳಿ ಮಾಡಿ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ರಾಜಸ್ಥಾನ ಮೂಲದ ಸುರೇಂದ್ರ ಕುಮಾರ್ (25) ಹಾಗೂ ಸುಖ್ ದೇವ್(23) ಎಂದು ಗುರುತಿಸಲಾಗಿದೆ. ಉಳಿದಂತೆ ರಾಜಸ್ಥಾನದ ದೇವರಾಮ್ ಹಾಗೂ ಗ್ಯಾಸ್ ಏಜೆನ್ಸಿ ಮಾಲಕಿಯನ್ನು ಇನ್ನಷ್ಟೆ ವಶಕ್ಕೆ ಪಡೆಯ ಬೇಕಾಗಿದೆ. ಅಂದಾಜು ರೂ.55 ಸಾವಿರ ಮೌಲ್ಯದ 15 ಸಿಲಿಂಡರ್ ಗಳು, ಗ್ಯಾಸ್‌ ರಿಫಿಲ್ಲಿಂಗ್‌ ಮಾಡಲು ಬಳಸುವ ಪರಿಕರ, ಲೇಬಲ್‌ಗಳು, ರೂ.15,460 ನಗದು, ಮೊಬೈಲ್‌ಫೋನ್‌ಗಳನ್ನು ವಶಪಡಿಸಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ ಕುತ್ಯಾರು : ಯೋಗ ದಿನಾಚರಣೆ

Thumbnail
Posted On: 22 Jun 2024, 07:42 AM

ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ಜೂ.21ರಂದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪತಂಜಲಿ ಯೋಗ ಸಮಿತಿ ಇದರ ಸಕ್ರಿಯ ಸದಸ್ಯರಾಗಿರುವ ಶ್ರೀಪತಿ ಕಾಮತ್ ಹಾಗೂ ಗಣೇಶ್ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ವಿವಿಧ ಯೋಗಾಸನಗಳನ್ನು ತಿಳಿಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಗಳನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಶಾಲಾ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ ಹಾಗೂ ಶಾಲಾ ಪ್ರಾಂಶುಪಾಲರಾದ ಸಂಗೀತಾ, ಶಿಕ್ಷಕ‌ ವೃಂದ ಉಪಸ್ಥಿತರಿದ್ದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು : ಮುಖ್ಯ ಶಿಕ್ಷಕಿ ರಜನಿ ಕೆ ಇವರಿಗೆ ಬೀಳ್ಕೊಡುಗೆ

Thumbnail
Posted On: 22 Jun 2024, 07:39 AM

ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇಲ್ಲಿಯ ಮುಖ್ಯೋಪಾಧ್ಯಾಯಿನಿ ರಜನಿ ಕೆ ಇವರ ಬೀಳ್ಕೊಡುಗೆ ಸಮಾರಂಭವು ಜೂನ್ 13 ರಂದು ಬೆಳಪು ಶಾಲೆಯಲ್ಲಿ ನೆರವೇರಿತು. ಬೀಳ್ಕೊಡುಗೆ ಸಮಾರಂಭದ ನೇತೃತ್ವವನ್ನು ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಎರ್ಮಾಳ್ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಸುಧೀರ್, ಮುಸ್ತಾಕ್ ಸಾಹೇಬ್, ಬಾಲಕೃಷ್ಣ ಆಚಾರ್ಯ, ಸುರೇಂದ್ರ ಪಣಿಯೂರ್, ಚಂದ್ರಹಾಸ್, ಮಹೇಶ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ ವೃಂದ , ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸೌಮ್ಯಶ್ರೀ ಸ್ವಾಗತಿಸಿದರು. ಅನಸೂಯ ಹಾಗೂ ಲಿಡಿಯ ಮರಿಯಾ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಜಯಲಕ್ಷ್ಮಿ ನಿರೂಪಿಸಿದರು. ಕುಮಾರಿ ಶರ್ಮಿಳಾ ವಂದಿಸಿದರು.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ

Thumbnail
Posted On: 22 Jun 2024, 07:27 AM

ಕಾಪು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023 -24ನೇ ಸಾಲಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಈ ಕಾಲೇಜು ಉತ್ತಮವಾಗಿ ಬೆಳೆದು ಬರಲು ಹಲವು ಶಿಕ್ಷಣ ಪ್ರೇಮಿಗಳ ಕೊಡುಗೆ ಇದೆ. ವಿದ್ಯಾರ್ಥಿಗಳು ಈ ಶೈಕ್ಷಣಿಕ ಸಂಸ್ಥೆಯ ಮೂಲಕ ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಹಲವಾರು ಕೊಡುಗೈ ದಾನಿಗಳ ಮೂಲಕ ಈ ಸಂಸ್ಥೆ ಇನ್ನೂ ಹೆಚ್ಚು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸಿದರು. ಕಾಪು ದಂಡ ತೀರ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಮನೋಭಾವದಲ್ಲಿ ಬಹಳಷ್ಟು ಬದಲಾವಣೆಯಾಗುತ್ತಿದ್ದು, ವಿದ್ಯಾರ್ಥಿಗಳು ಹೆಚ್ಚು ಹೊತ್ತು ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದು ಅವರ ಜೀವನದ ದಿಕ್ಕನ್ನು ಬದಲಾಯಿಸಿ ಕಷ್ಟಕ್ಕೆ ಎಡೆ ಮಾಡಿಕೊಡುತ್ತಿದೆ. ವಿದ್ಯಾರ್ಥಿಗಳು ಪೋಷಕರು, ಗುರುಗಳು, ಹಿರಿಯರ, ಮಾರ್ಗದರ್ಶನದಲ್ಲಿ ನಡೆದು ಗುರು ಹಿರಿಯರಿಗೆ ವಿಧೇಯರಾಗಿ ತಮ್ಮ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದರು. ಸರಕಾರಿ ಪದವಿ ಪೂರ್ವ ಕಾಲೇಜು ಪೊಲಿಪುವಿನ ಉಪನ್ಯಾಸಕ ಸುಧಾಕರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸನ್ಮಾನ‌/ ಗೌರವ : ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿತ ಕರ್ಕೇರ ಮತ್ತು ಇತಿಹಾಸ ವಿಭಾಗದ ಡಾ. ಮೆಹೆಬೂಬ್ ಸಾಬ್ ಡಿಪಿ ಅವರನ್ನು ಈ ಶೈಕ್ಷಣಿಕ ಸಾಲಿನಲ್ಲಿ ಪಿಎಚ್ಡಿ ಪದವಿ ಪಡೆದುದಕ್ಕಾಗಿ ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಯಮುನಪ್ಪ ಭಾರತೀಯ ಸೈನ್ಯಕ್ಕೆ ಆಯ್ಕೆಯಾಗಿರುವುದರಿಂದ ಗುರುತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್ ವಹಿಸಿದ್ದರು. ಪೋಷಕ -ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಜಾತ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ದೀಪಿಕಾ ಸುವರ್ಣ, ಸಾಂಸ್ಕೃತಿಕ ಸಂಘದ ಸಂಚಾಲಕ್ಕೆ ಡಾ. ನಾಯನ ಎಲ್ ಎಂ, ಐಕ್ಯೂಎಸ್ ಸಿ ಘಟಕದ ಸಂಚಾಲಕಿ ಡಾ. ರೋಷನೀ ಯಶ್ವಂತ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸವಿತಾ ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿ ಸಮಿತಿಯ ಅಧ್ಯಕ್ಷರಾದ ಕುಮಾರಿ ಕವಿತಾ ಸ್ವಾಗತಿಸಿದರು. ಕುಮಾರಿ ಶರಣ್ಯ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಸುಶ್ಮಿತಾ ವಂದಿಸಿದರು.

ಹೆದ್ದಾರಿಯಲ್ಲಿ ಬಸ್ ಹಿಂಬದಿಗೆ ಕಾರು ಢಿಕ್ಕಿ ; ಮಹಿಳೆಗೆ ಗಾಯ

Thumbnail
Posted On: 21 Jun 2024, 08:55 PM

ಪಡುಬಿದ್ರಿ : ಪ್ರಯಾಣಿಕರನ್ನು ಹತ್ತಿಸಲು ನಿಲ್ಲಿಸಿದ್ದ ಸರ್ವಿಸ್ ಬಸ್ ಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಸರ್ವಿಸ್ ಬಸ್ ಪ್ರಯಾಣಿಕರನ್ನು ಹತ್ತಿಸಲು ಹೆದ್ದಾರಿಯಲ್ಲಿ ಹಠಾತ್ತ್ ನಿಲ್ಲಿಸಿದ್ದರಿಂದ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರು ಬಸ್ ನ ಹಿಂಬದಿಗೆ ಗುದ್ದಿದೆ. ಘಟನೆಯಲ್ಲಿ ‌ಕಾರಿನಲ್ಲಿ ಚಾಲಕನ ಪಕ್ಕದಲ್ಲಿದ್ದ ಮಹಿಳೆ ಮಂಗಳೂರು ನಿವಾಸಿ ಪುಷ್ಪಲತಾ ಆಚಾರ್ಯರಿಗೆ ಮುಖ, ಕೈ, ಕಾಲುಗಳಿಗೆ ಗಾಯವಾಗಿದ್ದು ತಕ್ಷಣ ಪಡುಬಿದ್ರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದಂತೆ ಮಹಿಳೆಯರು ಕಾರಲ್ಲಿ ಇದ್ದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಸರ್ವಿಸ್ ರಸ್ತೆಗೆ ಇಳಿಯದ ಕೆಲವು ಬಸ್ಸುಗಳು : ಅಗಲ ಕಿರಿದಾದ ರಾಷ್ಟ್ರೀಯ ಹೆದ್ದಾರಿ, ಸರ್ವಿಸ್ ರಸ್ತೆಗಳಿಂದಾಗಿ ಜನರಿಗೆ ತೊಂದರೆಯಾಗಿದೆ. ಉಡುಪಿ ಕಡೆಗೆ ಸಾಗುವ ಬಸ್ ಗಳ ತಂಗುದಾಣ ಸರ್ವಿಸ್ ರಸ್ತೆಯಲ್ಲಿದ್ದರೂ ಕೆಲವೊಂದು ಬಸ್ ಗಳು ಸರ್ವಿಸ್ ರಸ್ತೆಗೆ ಬಾರದೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಲ್ಲುತ್ತಿದೆ. ಬಸ್ ಬಂದ ತಕ್ಷಣ ಸರ್ವಿಸ್ ರಸ್ತೆಯಲ್ಲಿ ಬರುವ ವಾಹನ ಗಮನಿಸದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲುವ ಬಸ್ ಗಳೆಡೆ ಸಾಗುವ ಭರದಲ್ಲಿ ಸರ್ವಿಸ್ ರಸ್ತೆಯಲ್ಲಿ ಸಾಗುವ ವಾಹನ ಸವಾರರಿಗೂ ಇದು ಸವಾಲಾಗಿದೆ. ಇದು ಅಪಘಾತಗಳಿಗೆ ಎಡೆ ಮಾಡಿದಂತಿದೆ. ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಾಪು : ಈ ದಿನ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ರವರ ನೇತೃತ್ವದಲ್ಲಿ

Thumbnail
Posted On: 21 Jun 2024, 05:08 PM

ಕಾಪು : ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಹಶಿಲ್ದಾರ್ ಪ್ರತಿಭಾ ಆರ್ ರವರ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ‌ ಮಾತನಾಡಿದ ತಹಶಿಲ್ದಾರ್ ಪ್ರತಿಭಾ ಆರ್, ಯೋಗದಿಂದ ದೈಹಿಕ ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯ ಉತ್ತಮಗೊಳ್ಳುತ್ತದೆ. ಆದ್ದರಿಂದ ಎಲ್ಲರೂ ಯೋಗ ಅನ್ನು ದಿನ ನಿತ್ಯದ ಚಟುವಟಿಕೆಯ ಭಾಗವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಯೋಗ ಗುರುಗಳಾದ ರವಿ ಬಂಗೇರ ಮತ್ತು ಶೈಲಜಾ ಇವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ತಾಲ್ಲೂಕು ಆಡಳಿತದ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಪು : ದಂಡತೀರ್ಥ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ

Thumbnail
Posted On: 21 Jun 2024, 04:22 PM

ಕಾಪು : ಇಲ್ಲಿನ ದಂಡತೀರ್ಥ ಶಿಕ್ಷಣ ಸಂಸ್ಥೆಯಲ್ಲಿ ಎನ್.ಸಿ.ಸಿ, ಸ್ಕೌಟ್ಸ್-ಗೈಡ್ಸ್, ಎನ್.ಎಸ್.ಎಸ್., ಕಬ್-ಬುಲ್-ಬುಲ್ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೇಸಿ ವಲಯ 15ರ ಪೂರ್ವ ಉಪಾಧ್ಯಕ್ಷ, ಯೋಗಶಿಕ್ಷಕ ಮಕರಂದ ಇವರು ಯೋಗದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ನೀಲಾನಂದ ನಾಯ್ಕ ಇವರು ಸಭಾಧ್ಯಕ್ಷತೆ ವಹಿಸಿ, ಯೋಗದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಗೇಬ್ರಿಯಲ್ ಮಸ್ಕರೇನಸ್, ಕಾರ್ಯಕ್ರಮದ ನಿರ್ದೇಶಕಿ ಶೋಭಾ ವಿವಿಧ ಯುನಿಟ್‌ಗಳ ಮಾರ್ಗದರ್ಶಕರಾದ, ತೇಜಸ್ವಿನಿ, ವೀಣಾ ನಾಯಕ್, ಉದಯಕುಮಾರ್, ಹೇಮಲತಾ, ಪ್ರಭಾಕರ ಶೆಟ್ಟಿ, ಸುರಥ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ, ರಿತಿಕಾ ಶೆಟ್ಟಿ, ಸಾನ್ವಿ ಶೆಟ್ಟಿ, ಗೌರಿ ನಾಯಕ್, ಆಯಿಷಾ ಮಿಸ್ಬಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾಪು : 92 ಹೇರೂರಿನಲ್ಲಿ ವಿವಿಧ ಸಂಘ -ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Thumbnail
Posted On: 21 Jun 2024, 04:05 PM

ಕಾಪು : ಹೇರೂರು ಫ್ರೆಂಡ್ಸ್ ಕ್ಲಬ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ 92 ಹೇರೂರು ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವು ಭಜನಾ ಮಂಡಳಿಯ ವಠಾರದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಅರಣ್ಯಾಧಿಕಾರಿ ಚರಣ್ ಜೋಗಿ ಭಾಗವಹಿಸಿ ವನಮಹೋತ್ಸವದ ಬಗ್ಗೆ ಅರಿವು ಮೂಡಿಸಿದರು. ಕೃಷಿ ಕಾಯಕ ಮಾಡುತ್ತಿರುವ ಜೇಸಿಂತ ಸಿಕ್ವೇರಾ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮೂರು ಸಂಸ್ಥೆಗಳ ಅಧ್ಯಕ್ಷರುಗಳು, ಸ್ಥಳೀಯ ಪಂಚಾಯತ್ ಸದಸ್ಯರಾದ ವಿಜಯ್ ಧೀರಜ್, ಗ್ರಾಮಸ್ಥರು ಉಪಸ್ಥಿತರಿದ್ದರು. ದೀಕ್ಷಾ, ಅಶ್ಮಿತಾ ಪ್ರಾರ್ಥಿಸಿದರು. ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ಸ್ವಾಗತಿಸಿದರು. ಜೋಗಿ ಕಾರ್ಯಕ್ರಮ ನಿರೂಪಿಸಿದರು. ಸುಮಿತ್ ಶೆಟ್ಟಿ ವಂದಿಸಿದರು. ಈ ಸಂದರ್ಭ ಗ್ರಾಮಸ್ಥರಿಗೆ ಗಿಡಗಳನ್ನು ವಿತರಿಸಲಾಯಿತು.

ಇಂದು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ - ಹವಾಮಾನ ಇಲಾಖೆ

Thumbnail
Posted On: 20 Jun 2024, 11:58 AM

ಉಡುಪಿ : ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೂನ್ 20 ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜೂನ್‌ 21ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ವಿಜಯನಗರ ಜಿಲ್ಲೆಗಳು ಮತ್ತು ಉತ್ತರ ಅಂತರಿಕ ಕರ್ನಾಟಕದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ. ಜೂನ್ 25ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕಾಪು : ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಶಿಬಿರ

Thumbnail
Posted On: 20 Jun 2024, 11:47 AM

ಕಾಪು : ಇಲ್ಲಿನ ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾ‌ರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಕಾರ್ಯಕ್ರಮ ಇಂದು ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಸಾರ್ವಜನಿಕರಿಗಾಗಿ ಸರಕಾರ ಅನೇಕ ವಿಮಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿಯ ಕೊರತೆ ಇದೆ. ಪ್ರತಿ ಗ್ರಾಮಗಳಲ್ಲಿ ಇಂತಹ ಶಿಬಿರಗಳನ್ನು ಹಮ್ಮಿಕೊಂಡಾಗ ಇದರಿಂದ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ ಅವರು ಅಂಚೆ ಇಲಾಖೆ ಜಾರಿಗೆ ತಂದಿರುವ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮಾಡಿಸಿ ಸಾರ್ವಜನಿಕರು ಇರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ್ ಭಟ್, ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಕಾರ್ಯದರ್ಶಿಗಳಾದ ಪ್ರಸಾದ್ ಭಂಡಾರಿ, ಇಂಡಿಯನ್ ಪೋಸ್ಟ್ ಬ್ಯಾಂಕ್ ಅಧಿಕಾರಿಗಳಾದ ಸ್ಮಿತಾ, ದಯಾನಂದ ಉಪಸ್ಥಿತರಿದ್ದರು.