Updated News From Kaup
ನಂದಿಕೂರು : ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಮಹಿಳೆ ಮೃತ್ಯು
Posted On: 26-04-2024 08:50PM
ನಂದಿಕೂರು : ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಂದಿಕೂರು ಮುದರಂಗಡಿ ಕ್ರಾಸ್ ಬಳಿ ನಡೆದಿದೆ.
ಕಾಪು : ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ವಾಡ್೯ನಲ್ಲಿ ಬಿರುಸಿನ ಮತದಾನ
Posted On: 26-04-2024 05:35PM
ಕಾಪು : ಊರಿನ ಸಮಸ್ಯೆಗಳು ಪರಿಹಾರ ಕಾಣದೆ ಮತದಾನ ಬಹಿಷ್ಕಾರಕ್ಕೆ ನಿರ್ಣಯಿಸಿದ್ದ ಕಟ್ಟಿಂಗೇರಿ ನಿವಾಸಿಗಳು ಕೊನೆಗೆ ರಾಜಕೀಯ ನಾಯಕರ ಭರವಸೆಯಿಂದ ಮತದಾನ ಬಹಿಷ್ಕಾರ ಹಿಂಪಡೆದಿದ್ದು ಇಂದು ವಾರ್ಡ್ 1 ಬೂತ್ ನಂಬರ್ 104 ರಲ್ಲಿ ಮತದಾನ ಮಾಡಿದರು.
ಉದ್ಯಾವರ : ಹಿರಿಯ ದಂಪತಿಗಳಿಂದ ಮತದಾನ
Posted On: 26-04-2024 03:29PM
ಉದ್ಯಾವರ : ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತ್ಯಂತ ಹಿರಿಯ ದಂಪತಿ ಪಾಸ್ಕಲ್ ಡಿಸೋಜಾ (98 ವರ್ಷ) ಮತ್ತು ಕ್ರಿಸ್ತಿನ್ ಡಿಸೋಜಾ (93 ವರ್ಷ) ತನ್ನ ಪುತ್ರ ಮತ್ತು ಸೊಸೆಯೊಂದಿಗೆ ಮೇಲ್ಪೇಟೆ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತವನ್ನು ಚಲಾಯಿಸಿದರು.
ಉಡುಪಿ -ಚಿಕ್ಕಮಗಳೂರು, ದ.ಕ ಕಾಂಗ್ರೆಸ್, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಿಂದ ಮತದಾನ
Posted On: 26-04-2024 03:23PM
ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪೂಜಾರಿಯವರು ಕುಂದಾಪುರದಲ್ಲಿ ಮತ ಚಲಾಯಿಸಿದ ಬಳಿಕ ಸೆಲ್ಫಿ ಪಾಯಿಂಟಿನಲ್ಲಿ ಫೋಟೋವನ್ನು ತೆಗೆಸಿಕೊಂಡರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮನೆ ಸಮೀಪದ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 97ರಲ್ಲಿ ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆಯೊಂದಿಗೆ ಆಗಮಿಸಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.
ಎಪ್ರಿಲ್ 27 : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 'ಶ್ರೀರಾಮ ವೈಭವ' - ನೃತ್ಯರೂಪಕ
Posted On: 26-04-2024 03:08PM
ಕಾಪು : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 25ರಿಂದ ಮೊದಲ್ಗೊಂಡು ಮೇ 9ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಈ ನಿಮಿತ್ತ ಎಪ್ರಿಲ್ 27, ಶನಿವಾರ ಶ್ರೀಮತಿ ಸ್ವಾತಿ ಕೃಷ್ಣಾನಂದ ಭಟ್, ಯಸ್ಯ ನಾಟ್ಯಾಲಯ, ಮುದರಂಗಡಿ ಇವರಿಂದ ಸಂಜೆ ಗಂಟೆ 6:30ರಿಂದ 'ಶ್ರೀರಾಮ ವೈಭವ' - ನೃತ್ಯರೂಪಕ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಎ.26 - 27 : ಶ್ರೀ ಧೂಮಾವತಿ ದೈವಸ್ಥಾನ ಮಲಂಗೋಲಿ ಕಳತ್ತೂರು - ವಿವಿಧ ಧಾರ್ಮಿಕ ಕಾರ್ಯಕ್ರಮಗಳು
Posted On: 26-04-2024 02:56PM
ಕಾಪು : ತಾಲೂಕಿನ ಕಳತ್ತೂರು ಮಲಂಗೋಳಿ ಶ್ರೀ ಧೂಮವತಿ ದೈವಸ್ಥಾನದಲ್ಲಿ ನವೀಕೃತ ಗರ್ಭಗೃಹ ಸಮರ್ಪಣೆ, ಪುನಃ ಪ್ರತಿಷ್ಠೆ - ದೈವ ಸಂದರ್ಶನ, ಅನ್ನ ಸಂತರ್ಪಣೆಯು ನಡೆಯಲಿದೆ ಎಂದು ದೈವಸ್ಥಾನದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.
ಕಾಪು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಮತದಾನ
Posted On: 26-04-2024 02:38PM
ಕಾಪು : ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪೈಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯಲ್ಲಿ ಕಳತ್ತೂರು ವಾರ್ಡಿನ ಮತಗಟ್ಟೆ ಸಂಖ್ಯೆ 157 ರಲ್ಲಿ ಮತದಾನ ಮಾಡಿದರು.
ಎ.25 - ಮೇ9 : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
Posted On: 26-04-2024 11:10AM
ಕಾಪು : ತಾಲೂಕಿನ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನದೊಂದಿಗೆ ಎಪ್ರಿಲ್ 25ರಿಂದ ಮೊದಲ್ಗೊಂಡು ಮೇ 9ರವರೆಗೆ ಮಹಾಗಣಪತಿ ದೇವರ ನೂತನ ಶಿಲಾಮಯ ಗರ್ಭಗೃಹ ಸಮರ್ಪಣೆ – ಬಿಂಬ ಪುನಃಪ್ರತಿಷ್ಠೆ, 500 ಕಲಶ ಸಹಿತ ಬ್ರಹ್ಮಕಲಶಾಭಿಷೇಕ, ಸಹಸ್ತ್ರ ನಾಲಿಕೇರ ಮಹಾಗಣಪತಿ ಯಾಗ, ಸಹಸ್ತ್ರಕಲಶ ಸಹಿತ ಬ್ರಹ್ಮಕಲಶಾಭಿಷೇಕ, ಏಕಪವಿತ್ರ ಶ್ರೀ ನಾಗಬ್ರಹ್ಮಮಂಡಲೋತ್ಸವ, ಮನ್ಮಹಾರಥೋತ್ಸವ, ಮಹಾಅನ್ನಸಂತರ್ಪಣೆಯು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಕಾಪು : ಮತದಾನ ಪ್ರಕ್ರಿಯೆ ಆರಂಭ
Posted On: 26-04-2024 10:21AM
ಕಾಪು : ವಿಧಾನ ಸಭಾ ಕ್ಷೇತ್ರದಲ್ಲಿ 209 ಬೂತ್ ಗಳಲ್ಲಿ ಮತದಾನ ಪ್ರಕ್ರಿಯೆ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ಜನರು ಬಿಸಿಲ ಬೇಗೆ, ಮದುವೆ ಇನ್ನಿತರ ಕಾರ್ಯಕ್ರಮದ ನಿಮಿತ್ತ ಬೇಗನೆ ಮತಗಟ್ಟೆಗೆ ತೆರಳಿ ಮತ ಚಲಾಯಿಸುವುದು ಕಂಡು ಬಂದಿದೆ. ಕಾಪು ವಿಧಾನ ಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಗಳಿಗಾಗಿ 1715 ಮಂದಿ ಅಧಿಕಾರಿಗಳು ಮತ್ತು ಸಿಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಕಾಪು : ಚುನಾವಣೆಗೆ ಪೂರ್ವಭಾವಿಯಾಗಿ ಪೊಲೀಸ್ ಪಥಸಂಚಲನ
Posted On: 23-04-2024 04:35PM
ಕಾಪು : ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದೆ ಶಾಂತಿ,ಸೌಹಾರ್ದತೆಯಿಂದ ಚುನಾವಣೆ ನಡೆಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಕಾಪುವಿನ ಪೊಲಿಪು ಮಸೀದಿಯಿಂದ K1 ಹೋಟೆಲ್ ವರೆಗೆ ಮಂಗಳವಾರ ಪಥಸಂಚಲನ ನಡೆಯಿತು.
