Updated News From Kaup
ಹೆಜಮಾಡಿ : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗಳಿಸುವುದು ಖಚಿತ - ವಿನಯಕುಮಾರ್ ಸೊರಕೆ

Posted On: 29-03-2024 07:42PM
ಹೆಜಮಾಡಿ : ಕರ್ನಾಟಕದಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಅಚಲ ವಿಶ್ವಾಸ ಇಟ್ಟುಕೊಂಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗಳಿಸುವುದು ಖಚಿತ ಎಂದು ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಅವರು ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಅಗಮಿಸಿದ ಸಂದರ್ಭ ಗುರುವಾರ ರಾತ್ರಿ ಹೆಜಮಾಡಿ ಗಡಿಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ ಸಂದರ್ಭ ಮಾಧ್ಯಮದ ಜತೆ ಮಾತನಾಡಿದರು.

ಕಳೆದ ಬಾರಿ ಬಿಜೆಪಿ 25 ಸ್ಥಾನ ಗೆದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಲಿಲ್ಲ. ನಮ್ಮ ತೆರಿಗೆ ಪಾಲನ್ನು ತರಲು ಸಾಧ್ಯವಾಗಲಿಲ್ಲ. ಹಾಗಾಗಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಲಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಖಚಿತವಾಗಿ ಗೆಲ್ಲಲಿದೆ ಎಂದರು. ಕೇಂದ್ರ ಸರಕಾರದ ದುರಾಡಳಿತದಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ರಾಜ್ಯ ಸರಕಾರದ ಸುದೃಢ ಅಡಳಿತಕ್ಕೆ ಜನತೆ ಮೆಚ್ಚುಗೆ ಸೂಚಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಪಡೆಯುವುದು ಶತಸಿದ್ಧ ಎಂದವರು ಹೇಳಿದರು.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏಪ್ರಿಲ್ 6ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಈ ಸಂದರ್ಭ ಪಕ್ಷದ ಬೃಹತ್ ಸಮಾವೇಶ ಅನಾವರಣಗೊಳ್ಳಲಿದೆ ಎಂದವರು ಹೇಳಿದರು.
ಪಕ್ಷದ ಪ್ರಮುಖರಾದ ಅಶೋಕ್ ಕುಮಾರ್ ಕೊಡವೂರು, ದಿನೇಶ್ ಮಳವಳ್ಳಿ, ದೀಪಕ್ ಕೋಟ್ಯಾನ್, ಗೀತಾ ವಾಗ್ಲೆ, ನವೀನ್ಚಂದ್ರ ಸುವರ್ಣ, ಸಂತೋಷ್ ಕುಲಾಲ್, ಹರೀಶ್ ಕಿಣಿ, ದಿವಾಕರ ಶೆಟ್ಟಿ ಕಾಪು, ಶಾಂತಲತಾ ಶೆಟ್ಟಿ, ರಮೀಝ್ ಹುಸೈನ್, ಸುನಿಲ್ ಬಂಗೇರ, ನಾಗೇಶ್ ಉದ್ಯಾವರ, ಎಮ್.ಎ.ಗಫೂರ್, ವೈ. ಸುಧೀರ್ ಕುಮರ್, ನವೀನ್ಚಂದ್ರ ಜೆ. ಶೆಟ್ಟಿ, ಜಿತೇಂದ್ರ ಫುರ್ಟಾಡೊ, ವಿಶ್ವಾಸ್ ವಿ. ಅಮೀನ್, ವೈ.ಸುಕುಮಾರ್, ಸುಧೀರ್ ಕರ್ಕೇರ, ದೀಪಕ್ ಎರ್ಮಾಳ್, ಅಮೀರ್, ಚರಣ್ ವಿಠಲ್, ರಮೇಶ್ ಕಾಂಚನ್, ಯು.ಸಿ.ಶೇಖಬ್ಬ, ದಿನೇಶ್ ಪಲಿಮಾರು, ಕರುಣಾಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಬಂಟಕಲ್ಲು : ಆಟೊ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ - ಸತತ 4ನೇ ಬಾರಿಗೆ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಆಯ್ಕೆ

Posted On: 28-03-2024 06:54PM
ಬಂಟಕಲ್ಲು : ಆಟೊ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ಲು ಇದರ ಅಧ್ಯಕ್ಷರಾಗಿ ಸತತ 4ನೇ ಬಾರಿಗೆ ಮಂಜುನಾಥ ಪೂಜಾರಿಯವರು ಆಯ್ಕೆಯಾಗಿದ್ದಾರೆ.
ಗೌರವ ಅಧ್ಯಕ್ಷರಾಗಿ ಮಾಧವ ಕಾಮತ್, ಉಪಾಧ್ಯಕ್ಷರಾಗಿ ಸತೀಶ್ ಬಂಟಕಲ್, ಕಾರ್ಯದರ್ಶಿಯಾಗಿ ಡೆನಿಸ್ ಡಿಸೋಜ, ಜೊತೆ ಕಾರ್ಯದರ್ಶಿಯಾಗಿ ದಿವಾಕರ್ ಶೆಟ್ಟಿ, ಕೋಶಾಧಿಕಾರಿಯಾಗಿ ಸುಧಾಕರ್ ಕೋಟ್ಯಾನ್ ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಉಮೇಶ್ ಪಾಲಮೆ, ರಾಘವೇಂದ್ರ, ಸುರೇಶ್ ಕಲ್ಲು ಗುಡ್ಡೆ, ಮುದ್ದು ಕುಲಾಲ್, ರಮೇಶ್ ಅರಸಿ ಕಟ್ಟೆ, ರವಿ ಕುಲಾಲ್, ಭಾಸ್ಕರ, ಸಂದೇಶ್, ವಿಠ್ಠಲ ಮೂಲ್ಯ, ಕೇಶವ ಕುಲಾಲ್ ಆಯ್ಕೆಯಾಗಿರುತ್ತಾರೆ.
ಮಣಿಪಾಲ : ಮತದಾರ ಜಾಗೃತಿ ಕಾರ್ಯಕ್ರಮ

Posted On: 26-03-2024 10:01AM
ಮಣಿಪಾಲ : ಇಲ್ಲಿನ ಡಾ| ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜು, ಮಣಿಪಾಲ ಜೆಸಿಐ ಉಡುಪಿ ಸಿಟಿ ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಮತದಾರ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎಂಐಟಿ ಮಣಿಪಾಲದ ಉಪನ್ಯಾಸಕರದ ಡಾ| ಬಾಲಕೃಷ್ಣ ಮದ್ದೋಡಿ ಭಾಗವಹಿಸಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿ ಅಧ್ಯಕ್ಷರಾದ ಡಾ. ಹರಿಣಾಕ್ಷಿ ಕರ್ಕೇರ ವಹಿಸಿದ್ದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್ ಕಾಂತರಾಜ್, ಎಂಐಟಿ ಉಪನ್ಯಾಸಕರಾದ ಡಾ.ನಾರಾಯಣ ಶೆಣೈ, ವಲಯ ತರಬೇತಿದಾರ ರಾಘವೇಂದ್ರ ಪ್ರಭು ಕರ್ವಾಲು ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.
ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ ಸಮಾರಂಭ

Posted On: 24-03-2024 07:57PM
ಕಾಪು : ಮಂಡಲ ಬಿಜೆಪಿ ಇದರ ಯುವ ಮೋರ್ಚಾದ ಪದಗ್ರಹಣ ಸಮಾರಂಭ ರವಿವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಮಾತನಾಡಿ ಈ ದೇಶದ ಮುಂದಿನ ಭವಿಷ್ಯ ಯುವ ಸಮುದಾಯದ ಮೇಲಿದೆ. ಯುವ ಸಮುದಾಯ ಈ ದೇಶದ ಮುಂದಿನ ಶಕ್ತಿ ಎಂದು ಹೇಳಿದ ಅವರು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು "ಒನ್ ಬೂತ್ ಟೆನ್ ಯೂತ್" ಎಂಬಂತೆ ತಳ ಮಟ್ಟದಿಂದ ಸಂಘಟನಾ ಪ್ರರ್ವವನ್ನು ಆರಂಭಿಸಿ ಈ ಬಾರಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ದಾಖಲೆಗಳ ಮತಗಳ ಅಂತರದಲ್ಲಿ ಗೆಲ್ಲಿಸಲು ನಾವೆಲ್ಲರೂ ಕಟಿಬದ್ಧರಾಗೋಣ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಸಚಿನ್, ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಶೆಟ್ಟಿ ಮಟ್ಟಾರು ಹಾಗೂ ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು
ಕಾಪು : ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯ ವೃದ್ಧಿ, ಉತ್ತಮ ಆಯುಷ್ಯಕ್ಕಾಗಿ ವಿಶೇಷ ಪೂಜೆ

Posted On: 24-03-2024 07:46PM
ಕಾಪು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು ಅವರ ಆರೋಗ್ಯ ವೃದ್ಧಿ ಹಾಗೂ ಉತ್ತಮ ಆಯುಷ್ಯಕ್ಕಾಗಿ ಕಾಪು ಮಹತೋಭಾರ ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿದಾನದಲ್ಲಿ ದೇವರಿಗೆ ವಿಶೇಷ ಪೂಜೆಯು ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಜರಗಿತು. ಈ ಸಂದರ್ಭ ಬಿಜೆಪಿ ಮುಖಂಡರೂ ಭಾಗಿಯಾಗಿದ್ದರು.

ನಂತರ ಉಡುಪಿ ಶ್ರೀ ಕೃಷ್ಣ ದೇವರಿಗೆ ಮತ್ತು ಶ್ರೀ ಅನಂತೇಶ್ವರ ದೇವರಿಗೆ ಹಾಗೂ ಶ್ರೀ ಮುಖ್ಯಪ್ರಾಣದೇವರಿಗೆ ವಿಶೇಷ ಪೂಜೆ ನೆರವೇರಿಸಿ, ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಲಾಯಿತು.
ನಂತರ ಪರ್ಯಾಯ ಪುತ್ತಿಗೆ ಸ್ವಾಮಿಗಳಾದ ಶ್ರೀ ಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದಂಗಳವರನ್ನು ಯೋಗೀಶ್ ವಿ. ಶೆಟ್ಟಿ ಮತ್ತು ನಿಯೋಗ ಭೇಟಿಯಾಗಿ ಎಚ್. ಡಿ. ಕುಮಾರಸ್ವಾಮಿಯವರ ಆರೋಗ್ಯ ವೃದ್ದಿಗೆ ಆಶೀರ್ವಾದವನ್ನು ಪಡೆಯಲಾಯಿತು. ಶ್ರೀಗಳು ಕೃಷ್ಣದೇವರು ಮುಖ್ಯ ಪ್ರಾಣದೇವರಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿದರು.
ಈ ಸಂದರ್ಭ ಉಡುಪಿ ಜಿಲ್ಲಾ ಜೆಡಿಎಸ್ ಕಾರ್ಯಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪುರಸಭಾ ಸದಸ್ಯ ಉಮೇಶ್ ಕರ್ಕೇರ, ಕಾಪು ಪುರಸಭಾ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಪ್ರವೀಣ್ ಕುಮಾರ್ ಗುರ್ಮೆ, ನವೀನ್ ಎಸ್ ಕೆ,ಉದಯ ಆರ್. ಶೆಟ್ಟಿ, ದೇವರಾಜ್ ತೊಟ್ಟಮ್, ವೆಂಕಟೇಶ್ ಎಂ ಟಿ, ಕೀರ್ತಿರಾಜ್, ಆಶ್ರಫ್ ಪಡುಬಿದ್ರೆ, ಸರ್ಫ್ರಾಜ್, ಪ್ರವೀಣ್, ಪ್ರಶಾಂತ್ ಭಂಡಾರಿ, ಸುರೇಂದ್ರ, ವಿಶಾಲಾಕ್ಷಿ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸುರೇಶ್ ಪುತ್ರನ್ ಮತ್ತು ಪಕ್ಷದ ಕಾರ್ಯಕರ್ತರು ಈ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು.
ಕಾರ್ಕಳ : ಅರುಣ್ ಕುಮಾರ್ ನಿಟ್ಟೆ, ಅನುಷ್ ಅರುಣ್ ಕೆ., ಆಯುಷ್ ಅರುಣ್ ಕೆ. ಯವರಿಗೆ ಕರಾಟೆಯಲ್ಲಿ ಬ್ಲಾಕ್ ಬೆಲ್ಟ್

Posted On: 24-03-2024 07:42PM
ಕಾರ್ಕಳ : ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ (ರಿ.) ಸ್ವಾಮಿ ಸ್ಟ್ರೆಂಥ್ ಟ್ರೈನಿಂಗ್ ಸೆಂಟರ್ ಮೂಡುಬಿದ್ರಿ SHORIN-RYU KARATE ASSOCIATION (R.) ಇದರ ಆಶ್ರಯದಲ್ಲಿ ಶೊರೀನ್ ರಿಯೂ ಕರಾಟೆಯಲ್ಲಿ ನಿಟ್ಟೆಯ ಅರುಣ್ ಕುಮಾರ್ ರವರು 'ಸದನ್' ಥರ್ಡ್ ಡಿಗ್ರಿ ಬ್ಲಾಕ್ ಬೆಲ್ಟ್ ('SADAN' THIRD DIGREE BLACK BELT) ಹಾಗೂ ಅವರ ಅವಳಿ ಪುತ್ರರಾದ ಅನುಷ್ ಅರುಣ್ ಕೆ. ಹಾಗೂ ಆಯುಷ್ ಅರುಣ್ ಕೆ. 'ಶೋಧನ್' ಫರ್ಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ (SHODHAN FIRST DEGREE BLACK BELT) ಪಡೆದುಕೊಂಡಿದ್ದಾರೆ.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ - ಧ್ವಜಾರೋಹಣ

Posted On: 24-03-2024 07:39PM
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಭಾನುವಾರ ಬೆಳಿಗ್ಗೆ ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು.
ಬೆಳಗ್ಗೆ 5 ರಿಂದ ಪೂಜೆ, ನವಗ್ರಹ ಹೋಮ, ಸಾಮೂಹಿಕ ಪ್ರಾರ್ಥನೆ, ಸಂಕಲ್ಪ ಬಲಿ, ಬೆಳಗ್ಗೆ ಧ್ವಜಾರೋಹಣ, ಪುಣ್ಯಾಹ, ಅಗ್ನಿ ಜನನ, ಪ್ರಧಾನ ಯಾಗ, ನವಕ ಪ್ರಧಾನ ಕಲಶಾಭಿಷೇಕ, ಮಧ್ಯಾಹ್ನ 12ರಿಂದ ಅಲಂಕಾರ ಪೂಜೆ, ಮಹಾಪೂಜೆ ನಡೆಯಿತು. ಸಂಜೆ 7ರಿಂದ ಆರಾಧನಾ ಪೂಜೆ, ಆರಾಧನಾ ಬಲಿ, ರಜತ ಪಾಲಕಿ ಉತ್ಸವ, ವಿಮಾನೋತ್ಸವ, ರಾತ್ರಿ 8ಕ್ಕೆ ರಾತ್ರಿ ಪೂಜೆ, ನಿತ್ಯ ಬಲಿ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 11.30ಕ್ಕೆ ಮಹಾರಂಗ ಪೂಜೆ, ಭೂತ ಬಲಿ, ಆಯನೋತ್ಸವ, ಏಕಾಂತ ಸೇವೆ ನಡೆಯಲಿದೆ.
ಈ ಸಂದರ್ಭ ಮೊಗವೀರ ಮುಂದಾಳು ಡಾ. ಜಿ ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲಿಯಾನ್, ಉಪಾಧ್ಯಕ್ಷ ಸುಭಾಷ್ ಚಂದ್ರ ಕಾಂಚನ್, ಕಾರ್ಯದರ್ಶಿ ಸುಧಾಕರ್ ಕುಂದರ್, ಕಾಪು ನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಮನೋಜ್ ಕಾಂಚನ್, ಆನಂದ ಸಿ ಕುಂದರ್, ಗಂಗಾಧರ ಸುವರ್ಣ ಎರ್ಮಾಳು, ದಿನೇಶ್ ಎರ್ಮಾಳು, ಮೊಗವೀರ ಮಹಾಜನ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಉಷಾರಾಣಿ ಬೋಳೂರು, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಶ್ರೀಮತಿ ಸುಗುಣ ಸುಕುಮಾರ್, ದೇವಸ್ಥಾನದ ವ್ಯವಸ್ಥಾಪಕ ಸತೀಶ್ ಅಮೀನ್, ಸಮಿತಿಯ ಸದಸ್ಯರು, ಮೊಗವೀರ ಮಹಾಜನ ಸಂಘದ ಸದಸ್ಯರು, ಸಹಿತ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿದರು.
ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ - 'ಚೆಂಡು'ಗೆ ಚಾಲನೆ

Posted On: 22-03-2024 05:05PM
ಪಡುಬಿದ್ರಿ : ಇತಿಹಾಸ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾಚ್೯ 22ರಂದು ಚೆಂಡುಗೆ ಚಾಲನೆ ನೀಡಲಾಯಿತು.

ದೇವಳದ ತಂತ್ರಿವರ್ಯರ ಪ್ರಾರ್ಥನೆಯೊಂದಿಗೆ ಚೆಂಡಿನ ಸೇವಾಕರ್ತರಾದ ಶರತ್ ಪೂಜಾರಿಯವರು ಬಗ್ಗೆಡಿ ಗುತ್ತಿನಾರ್ ಮತ್ತು ನಡ್ಸಾಲು ಗುತ್ತಿನಾರುಗಳಿಗೆ ಹಸ್ತಾಂತರಿಸಿ ಅವರು ಚೆಂಡನ್ನು ದೇವಳದ ಮುಂಭಾಗದ ವಠಾರಕ್ಕೆ ಎಸೆಯುವ ಮೂಲಕ ಚಾಲನೆ ನೀಡಲಾಯಿತು.

ಪಾದೆಬೆಟ್ಟುವಿನ ಮಾಗಂದಡಿ ಯುವಕರು ಮತ್ತು ನಡ್ಸಾಲು ಗ್ರಾಮದ ಯುವಕರು ರಥೋತ್ಸವದ ಮರುದಿನ ಚೆಂಡಾಟ ಆಡುವ ಪ್ರತೀತಿ ಇತ್ತು. ಪ್ರತಿ ವರ್ಷದಂತೆ ಈ ಬಾರಿಯೂ ಊರಿನ ಹಿರಿಯರು, ಕಿರಿಯರು ಚೆಂಡು ಆಡುವ ಮೂಲಕ ಸಂಭ್ರಮಿಸಿದರು.

ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರರಾಜ ಅರಸು ಕಿನ್ಯಕ್ಕ ಬಲ್ಲಾಳ್ ಮತ್ತು ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ, ಬಗ್ಗೆಡಿ ಗುತ್ತಿನಾರ್ ಶೇಖರ ಶೆಟ್ಟಿ, ನಡ್ಸಾಲು ಗುತ್ತಿನಾರ್ ಶ್ರೀನಾಥ ಹೆಗ್ಗಡೆ, ಅನಿಲ್ ಶೆಟ್ಟಿ, ದೇವಾಲಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕೋಟೆಕಾರ್, ಭಕ್ತರು ಉಪಸ್ಥಿತರಿದ್ದರು.
ಮಾಚ್೯ 26-27 : ಕಾಪು ಸುಗ್ಗಿ ಮಾರಿಪೂಜೆ

Posted On: 21-03-2024 03:39PM
ಕಾಪು : ಶ್ರೀಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಏಕಕಾಲದಲ್ಲಿ ಜರಗುವ ಇತಿಹಾಸ ಪ್ರಸಿದ್ದ ಕಾಲಾವಧಿ ಸುಗ್ಗಿ ಮಾರಿಪೂಜೆಯು ಮಾಚ್೯ 26 ಮತ್ತು 27ರಂದು ಜರಗಲಿದೆ.
2 ದಿನಗಳ ಕಾಲ ನಡೆಯುವ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ವಿವಿಧ ಕಡೆಗಳಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಹರಕೆ, ಸೇವೆಗಳನ್ನು ಸಲ್ಲಿಸುತ್ತಾರೆ.
ಮಾಚ್೯ 26ರಂದು ರಾತ್ರಿ ಹಳೇ ಮಾರಿಗುಡಿಗೆ ವೆಂಕಟರಮಣ ದೇವಸ್ಥಾನದಿಂದ ಹಾಗೂ ಹೊಸ ಮಾರಿಗುಡಿ ಮತ್ತು 3ಮೂರನೇ ಮಾರಿಗುಡಿಗೆ ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಬಿಂಬ ಮತ್ತು ಚಿನ್ನಾಭರಣಗಳನ್ನು ಮೆರವಣಿಗೆ ಮೂಲಕ ತಂದು ಗದ್ದೆಗೆಯೇರಿಸಿ ಮಾರಿಪೂಜೆಯ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಮಾಚ್೯ 27ರಂದು ಸಂಜೆ ದರ್ಶನ ಸೇವೆ ನಡೆದು ಬಳಿಕ ಮಾರಿಯಮ್ಮ ದೇವಿಯ ಬಿಂಬ ವಿಸರ್ಜಿಸಲಾಗುತ್ತದೆ.
ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ - ರಥಾರೋಹಣ ಸಂಪನ್ನ

Posted On: 21-03-2024 03:31PM
ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಇಂದು ಮಧ್ಯಾಹ್ನ ರಥಾರೋಹಣ ಜರಗಿತು.

ರಥಾರೋಹಣದ ಬಳಿಕ ಮಹಾ ಅನ್ನ ಸಂತರ್ಪಣೆ ನೆರವೇರಿತು.
ಈ ಸಂದರ್ಭ ದೇವಳದ ಅನುವಂಶಿಕ ಮೊಕ್ತೇಸರರುಗಳು, ದೇವಳದ ಆಡಳಿತಾಧಿಕಾರಿ, ದೇವಳದ ತಂತ್ರಿವರ್ಯರು, ಅರ್ಚಕರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.