Updated News From Kaup

ಬೆಳಪು ಸ್ಪೋರ್ಟ್ಸ್ ಕ್ಲಬ್ : 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Posted On: 23-04-2024 10:58AM

ಬೆಳಪು : ಇಲ್ಲಿನ ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆ ವರ್ಷದ ಸಂಭ್ರಮದ ಅಂಗವಾಗಿ 2024ನೇ ಸಾಲಿನ ಸಾಮಾಜಿಕ ಕಾರ್ಯ ಚಟುವಟಿಕೆಯ ಬಾಗವಾಗಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕಳತ್ತೂರು ಪಿ. ಕೆ. ಎಸ್. ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀ. ಗಂಗನಯಕ್ ಅವರು ಉದ್ಘಾಟಿಸಿದರು.

ಎಬಿವಿಪಿಯಿಂದ ನೇಹಾ ಹೀರೆಮಠ ಕೊಲೆ ಖಂಡಿಸಿ ಪಂಜಿನ ಮೆರವಣಿಗೆ

Posted On: 20-04-2024 09:04PM

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ ಖಂಡಿಸಿ ಕಾರ್ಕಳದ ಸರ್ವಜ್ಞ ವೃತ್ತದಿಂದ ಬಂಡೀಮಠದ ವರೆಗೆ ಪಂಜಿನ ಮೆರವಣಿಗೆ ನಡೆಸಿ ಆರೋಪಿಯ ಪ್ರತಿಕೃತಿಯನ್ನು ದಹಿಸಿ ಪ್ರತಿಭಟಿಸಲಾಯಿತು.

ಶಿಬರೂರು : ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

Posted On: 20-04-2024 06:02PM

ಶಿಬರೂರು : ಇಲ್ಲಿನ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು.

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ

Posted On: 18-04-2024 11:12AM

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಏಪ್ರಿಲ್ 28ರವರೆಗೆ ಹಮ್ಮಿಕೊಳ್ಳಲಾಗಿರುವ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಭರತ ಭೂಮಿಯ ಶ್ರದ್ದಾ ಪ್ರತೀಕ ನಮ್ಮ ಶ್ರೀರಾಮ

Posted On: 17-04-2024 03:44PM

ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದೆ.

ಏ. 22- 30 : ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ಜಾತ್ರಾ ಮಹೋತ್ಸವ

Posted On: 16-04-2024 06:17PM

ಶಿಬರೂರು : ಇಲ್ಲಿನ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏಪ್ರಿಲ್ 22ರಿಂದ 30ರವರೆಗೆ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪುದ್ಯುಮ್ನ ರಾವ್, ಕೈಯ್ಯೂರಗುತ್ತು ಹೇಳಿದರು. ಅವರು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಮಂಗಳವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಏಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ.

ಏಪ್ರಿಲ್ 17 : ಚುನಾವಣಾ ಕರ್ತವ್ಯನಿರತರಿಗೆ ಎರಡನೇ ಹಂತದ ತರಬೇತಿ ಕಾರ್ಯಗಾರ

Posted On: 16-04-2024 09:41AM

ಕಾಪು : ಲೋಕಸಭಾ ಚುನಾವಣೆಯ ಮತದಾನ ದಿನದಂದು ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಏಪ್ರಿಲ್ 17ರಂದು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಎರಡನೇ ಹಂತದ ತರಬೇತಿ ಕಾರ್ಯಗಾರ ಏರ್ಪಡಿಸಲಾಗಿದೆ.

ಕಾಪು : ದೆಂದೂರು ಕೊಲ್ಲು ಕೆ. ಶೆಡ್ತಿ ನೆನಪಿನ ಪಾಡ್ದನ ಪ್ರಶಸ್ತಿ ಪ್ರದಾನ - ಪ್ರಶಸ್ತಿ ಪುರಸ್ಕೃತರಾದ ಗೋಪಿ ಪಾನರ ಮೂಡುಬೆಟ್ಟು ಕಟಪಾಡಿ

Posted On: 15-04-2024 07:05PM

ಕಾಪು : ತುಳುವರು ತುಳುನಾಡ ಮಣ್ಣನ್ನು ನಂಬಿ ಬದುಕಿದವರು. ದೈವವನ್ನು ಆಹ್ವಾಹನೆ ಮಾಡಿಕೊಂಡು ನಮ್ಮ ಆಚರಣೆ, ನಂಬಿಕೆಯನ್ನು ಗಟ್ಟಿಗೊಳಿಸುವ ಪ್ರಯತ್ನವನ್ನು ಪಾಡ್ದನದ ಮೂಲಕ ಮಾಡಿಕೊಂಡವರು. ಪಾಡ್ದನ ಎಂದರೆ ಜನರಿಂದ ಜನರು ಪಾಡಿಕೊಂಡು ಬಂದ ಜಾನಪದ ಕಲೆ. ಇದು ಜೀವನ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಸಾಹಿತಿ ದಯಾಮಣಿ ಎಸ್. ಶೆಟ್ಟಿ ಎಕ್ಕಾರು ತಿಳಿಸಿದ್ದಾರೆ. ಅವರು ದೆಂದೂರು ಕೊಲ್ಲು ಕೃಷ್ಣ ಶೆಟ್ಟಿ ಫೌಂಡೇಶನ್ ಮತ್ತು ಉಡುಪಿ ಜೈಂಟ್ ಗ್ರೂಪ್‌ ವತಿಯಿಂದ ಕಾಪುವಿನ ಕೆ.ಒನ್ ಹೊಟೇಲಿನಲ್ಲಿ ಸೋಮವಾರ ನಡೆದ ಹಿರಿಯ ಪಾಡ್ದನಗಾರ್ತಿ ಗೋಪಿ ಪಾನರ ಮೂಡುಬೆಟ್ಟು ಕಟಪಾಡಿ ಇವರಿಗೆ ಪಡಿ ಅಕ್ಕಿ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸುವರ್ಣ ಕಟಪಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 800 ವರ್ಷಗಳ ಹಿಂದಿನ ಜನಪದ ತುಳು ಪಾಡ್ದನವನ್ನು ಇಂದಿಗೂ ಜನಜನಿತವಾಗಿ ಇಟ್ಟುಕೊಂಡವರು ದೈವ ನರ್ತಕರು. ಇಂದಿನ ಪೌರಾಣಿಕ, ಜಾನಪದ ನಾಟಕಗಳಿಗೆ, ಸಿನೆಮಾ ಕಥೆಗಳಿಗೂ ತುಳು ಪಾಡ್ದನ ಮೂಲವಾಗಿದೆ. ತಂತ್ರಜ್ಞಾನ ಮುಂದುವರೆದರೂ ಪಾಡ್ದನಗಳ ದಾಖಲೀಕರಣವಾಗದಿದ್ದರೆ ಮಂದಿನ ತಲೆಮಾರು ಮರೆತು ಹೋಗಬಹುದು ಎಂದರು.

ಏಪ್ರಿಲ್ 18 : ಎಲ್ಲೂರು ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದ ಮನ್ಮಾಹಾರಥೋತ್ಸವ

Posted On: 15-04-2024 03:42PM

ಕಾಪು : ಎಲ್ಲೂರು ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 20 ರವರೆಗೆ ವಾರ್ಷಿಕ ನಡಾವಳಿ ಕಾರ್ಯಕ್ರಮಗಳು ಜರುಗುತ್ತಿದ್ದು, ಏಪ್ರಿಲ್ 18 ರಂದು ಶ್ರೀ ಮನ್ಮಾಹಾರಥೋತ್ಸವ ಹಾಗೂ ಮಹಾ ಅನ್ನಸಂತರ್ಪಣೆಯು ನಡೆಯಲಿದೆ.

ಏಪ್ರಿಲ್ 15 (ನಾಳೆ) : ದೆಂದೂರು ಕೊಲ್ಲು ಕೆ. ಶೆಡ್ತಿ ನೆನಪಿನ ಪಾಡ್ದನ ಪ್ರಶಸ್ತಿ ಪ್ರದಾನ ಸಮಾರಂಭ

Posted On: 14-04-2024 10:31PM

ಕಾಪು : ದೆಂದೂರು ಕೊಲ್ಲು ಕೃಷ್ಣ ಶೆಟ್ಟಿ ಫೌಂಡೇಶನ್ ಮತ್ತು ಉಡುಪಿ ಜೈಂಟ್ ಗ್ರೂಪ್‌ ವತಿಯಿಂದ ದೆಂದೂರು ಕೊಲ್ಲು ಕೆ. ಶೆಡ್ತಿ ನೆನಪಿನ ಪಾಡ್ಡನ ಪ್ರಶಸ್ತಿ ಪ್ರದಾನ ಸಮಾರಂಭ ಏ.15ರಂದು ಬೆಳಗ್ಗೆ 10:30 ಗಂಟೆಗೆ ಕಾಪು ಕೆ.ಒನ್ ಹೊಟೇಲಿನಲ್ಲಿ ನಡೆಯಲಿದೆ.