Updated News From Kaup

ಪಡುಬಿದ್ರಿಯಲ್ಲಿ 133 ನೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Posted On: 14-04-2024 08:09PM

ಪಡುಬಿದ್ರಿ : ಈ ದೇಶದ ಸಮಸ್ತ ಮಹಿಳೆಯರಿಗೆ ಆಸ್ತಿ ಹಕ್ಕು, ಉದ್ಯೋಗ, ಹೆರಿಗೆ ಭತ್ಯೆ, ಸಮಾನ ವೇತನ ಅನೇಕ ಸಂವಿಧಾನ ಬದ್ದ ಹಕ್ಕುಗಳನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕಾರಣರಾದವರು ಡಾ. ಬಿ.ಆರ್ ಅಂಬೇಡ್ಕರ್, ಹಾಗು ಸಮಸ್ತ ದೇಶವಾಸಿಗಳಿಗೆ ದುಂಡು ಮೇಜಿನ ಪರಿಷತ್ ನಲ್ಲಿ ವಾದ ಮಾಡುವ ಮೂಲಕ ಮತದಾನದ ಹಕ್ಕನ್ನು ನೀಡಿರುತ್ತಾರೆ. ರಿಸರ್ವ್ ಬ್ಯಾಂಕ್ ಅನ್ನು ಸ್ಥಾಪಿಸುವುದರ ಮೂಲಕ ದೇಶದ ಆರ್ಥಿಕತೆಗೆ ಭಾಷ್ಯ ಬರೆದವರು ಡಾ. ಬಿ.ಆರ್ ಅಂಬೇಡ್ಕರ್ ರವರು. ದೇಶದ ಸಮಸ್ತ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವುದು ಮಾತ್ರವಲ್ಲ ಈ ದೇಶದಲ್ಲಿ ಜಾರಿಯಾಲ್ಲಿರುವ ಕಾಯ್ದೆಗಳನ್ನು ರೂಪಿಸಿ, ಸಮ ಸಮಾಜದ ಬದುಕಿಗೆ ಸಂವಿಧಾನ ಬದ್ಧವಾಗಿ ಒತ್ತು ಕೊಟ್ಟವರು ಡಾ.ಬಿ.ಆರ್ ಅಂಬೇಡ್ಕರ್. ವಿಶ್ವಶ್ರೇಷ್ಠ ಭಾರತದ ಸಂವಿಧಾನವನ್ನು ಉಳಿಸಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಹಾಗು ಅಂಬೇಡ್ಕರ್ ರವರಿಗೆ ನೀಡುವ ವಿಶೇಷ ಗೌರವವೆಂದು ಚಿಂತಕ, ಹೋರಾಟಗಾರ ಶೇಖರ್ ಹೆಜ್ಮಾಡಿ ಹೇಳಿದರು. ಅವರು ಪಡುಬಿದ್ರಿ ಬೋರ್ಡ್ ಶಾಲೆಯಲ್ಲಿ ದ.ಸಂ.ಸ. ಅಂಬೇಡ್ಕರ್ ‌ವಾದ ಪಡುಬಿದ್ರಿ ಗ್ರಾಮ ಶಾಖೆ ಹಾಗು ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ 133 ನೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪಡುಬಿದ್ರಿ : ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆ

Posted On: 14-04-2024 01:44PM

ಪಡುಬಿದ್ರಿ : ನಡ್ಸಾಲು ಗ್ರಾಮದ ಸಾಮಾಜಿಕ ಕಾರ್ಯಕರ್ತ ಸುಧಾಕರ್ ಕೆ ಪಡುಬಿದ್ರಿ ಇವರ ನಿವಾಸದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತಿ ಆಚರಿಸಲಾಯಿತು.

ಕಾಪು : ತಹಶಿಲ್ದಾರರ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ

Posted On: 14-04-2024 11:39AM

ಕಾಪು : ಸಂವಿಧಾನ ಶಿಲ್ಪಿ, ನೊಂದವರ ದನಿ, ಸಮಾನತಾವಾದಿ, ಶೋಷಿತರ ಆಶಾಕಿರಣ ಡಾ ಅಂಬೇಡ್ಕರ್ ರವರು ಸಾರ್ವಕಾಲಿಕ ಆದರ್ಶ ಮತ್ತು ಚಿಂತನೆಗಳನ್ನು ಹೊಂದಿದ್ದರು. ಅವರ ಚಿಂತನೆಗಳು ಭಾರತದ ಭವ್ಯ ಭವಿಷ್ಯದ ರೂವಾರಿ ಈ ಮಹಾಪುರುಷ. ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್. ಪ್ರತಿ ವರ್ಷ ಏಪ್ರಿಲ್ 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅಪಾರ ಎಂದು ಕಾಪು ತಾಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್. ಹೇಳಿದರು.

ಕಾಪು : ಮನೆ ಮತದಾನ ಪ್ರಕ್ರಿಯೆ ಪ್ರಾರಂಭ - ತಮ್ಮ ಹಕ್ಕು ಚಲಾಯಿಸಿದ ಹಿರಿಯ ನಾಗರಿಕರು

Posted On: 13-04-2024 03:09PM

ಕಾಪು : ಏಪ್ರಿಲ್ 13 ರಿಂದ 18 ರವರೆಗೆ ಮನೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಆ ಪ್ರಯುಕ್ತ ಕಾಪು ತಾಲೂಕಿನ ಕಲ್ಯ ಗ್ರಾಮಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಕಾಪು ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು.

ಮಹಾಮಾಯ ಫೌಂಡೇಷನ್ : ಪಿಯು ಮಕ್ಕಳಿಗೆ ಆನ್ ಲೈನ್, ಆಫ್ ಲೈನ್ ತರಗತಿಗಳು, ವಿದ್ಯಾರ್ಥಿ ವೇತನ

Posted On: 12-04-2024 05:03PM

ಮಣಿಪಾಲ್ ಫೌಂಡೇಶನ್ ನ ಆರ್ಥಿಕ ಸಹಯೋಗದೊಂದಿಗೆ ಶ್ರೀ ಕಾರ್ಕಳ ರುಕ್ಮ ರಂಗನಾಥ ಪೈ ಮೆಮೋರಿಯಲ್ ಮಹಾಮಾಯ ಫೌಂಡೇಶನ್ ಕಾರ್ಯಯೋಜನೆಯಲ್ಲಿ ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಮತ್ತು ದ.ಕ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಆನ್ಲೈನ್ ಮತ್ತು ಆಫ್ ಲೈನ್ ವಿಭಾಗದ ತರಗತಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ

Posted On: 11-04-2024 12:59PM

ಉದ್ಯಾವರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉದ್ಯಾವರದಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಮೂವರು ಕಾಂಗ್ರೆಸ್ ಸೇರ್ಪಡೆಗೊoಡರು.

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು - ಶೇ. 100 ಫಲಿತಾಂಶದೊಂದಿಗೆ 9 ರ‍್ಯಾಂಕ್ ಗಳು

Posted On: 10-04-2024 03:38PM

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಫಲಿತಾಂಶ ವನ್ನು ನೀಡುತ್ತಾ ಬಂದಿರುವ ಕ್ರಿಯೇಟಿವ್ ಸಂಸ್ಥೆ ರಾಜ್ಯಮಟ್ಟದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 9 ರ‍್ಯಾಂಕ್ ಗಳನ್ನು ಪಡೆಯುವ ಮೂಲಕ ಇಲ್ಲಿನ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದ.ಕ. ಪ್ರಥಮ ; ಉಡುಪಿ ದ್ವಿತೀಯ ಸ್ಥಾನ

Posted On: 10-04-2024 11:13AM

ಉಡುಪಿ : ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂದು ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ - 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

ಗುಣಮಟ್ಟದ ಶಿಕ್ಷಣಕ್ಕೆ ಅತ್ಯುತ್ತಮ ಆಯ್ಕೆ - ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು

Posted On: 10-04-2024 10:37AM

ಉಡುಪಿ : ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶವನ್ನು ನೀಡುತ್ತಾ ಬಂದಿರುವ ಕ್ರಿಯೇಟಿವ್ ಕಾಲೇಜು ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರ‍್ಯಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಬಂದಿದೆ.

ಕರಾವಳಿಯಾದ್ಯಂತ ಸಂಭ್ರಮದ ಈದುಲ್ ಫಿತರ್ ಆಚರಣೆ

Posted On: 10-04-2024 10:03AM

ಕಾಪು : ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ಪ್ರದೇಶಗಳಾದ ದ.ಕ. ಉ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಈದುಲ್ ಫಿತರ್ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಸ್ಲಿಮರು ಒಂದು ತಿಂಗಳ ಪವಿತ್ರ ಉಪವಾಸ ವ್ರತವನ್ನು ಮುಕ್ತಾಯಗೊಳಿಸಲಿದ್ದಾರೆ.