Updated News From Kaup
ಉಡುಪಿ : ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ - 200ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರ
Posted On: 10-04-2024 09:32AM
ಉಡುಪಿ : ಖ್ಯಾತ ರಕ್ತದಾನ ಸಂಸ್ಥೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಇದರ ಸಹಕಾರದಲ್ಲಿ ರಕ್ತ ಕೇಂದ್ರ ಕೆಎಂಸಿ ಮಣಿಪಾಲದಲ್ಲಿ ನಡೆದ 200ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉಡುಪಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಎಚ್ ಅಶೋಕ್ ಉದ್ಘಾಟಿಸಿದರು. ನಂತರದಲ್ಲಿ ಮಾತನಾಡಿದ ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಕೇವಲ 4 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 200ನೇ ರಕ್ತದಾನ ಶಿಬಿರ ಆಯೋಜಿಸಿ ಉಡುಪಿ ಜಿಲ್ಲೆಯ ಹಿರಿಮೆ ಹೆಚ್ಚಿಸಿದೆ. ಪ್ರತಿ ವರ್ಷವು ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್, ಮೇ ತಿಂಗಳಲ್ಲಿ ಕೃತಕ ರಕ್ತದ ಕೊರತೆ ತಲೆದೋರುತ್ತಿದ್ದು, ಇದರ ಶಾಶ್ವತ ಪರಿಹಾರಕ್ಕೆ ಏಪ್ರಿಲ್, ಮೇ ತಿಂಗಳಲ್ಲಿ ಕಾಲೇಜ್ ಗಳಲ್ಲಿ ಹೆಚ್ಚು ಹೆಚ್ಚು ರಕ್ತದಾನ ಶಿಬಿರ ನಡೆಯುವಂತೆ ಪ್ರೇರೇಪಿಸಿದರೆ ಈ ಕೃತಕ ರಕ್ತದ ಅಭಾವದಿಂದ ಹೊರಬರಲು ಸಾಧ್ಯ ಎಂದರು.
ಕಾಪು ಹೊಸ ಮಾರಿಗುಡಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಆಯ್ಕೆ
Posted On: 10-04-2024 09:23AM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬೆಂಗಳೂರಿನ ಎಂ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನ ಘೋಷಣೆ
Posted On: 09-04-2024 05:21PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಕಾರದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ವಿದ್ವಾನ್ ಕೆ.ಜಿ. ರಾಘವೇಂದ್ರ ತಂತ್ರಿವರ್ಯರು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸುವ ಮೂಲಕ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಿದರು. ಅಮ್ಮನ ಭವ್ಯ ಗರ್ಭಗುಡಿಯ ದಿವ್ಯ ಸಾನಿಧ್ಯದಲ್ಲಿ ಕೋಣಗಳಿಂದ ಉಳುಮೆ ಮಾಡುವ ಮೂಲಕ ನವ ಧಾನ್ಯಗಳ ಬಿತ್ತನೆ ಮಾಡಲಾಯಿತು. ಗಣ್ಯರು, ದಾನಿಗಳು, ಭಕ್ತರ ಸಮ್ಮುಖದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರ, ಭೋಜನ ಶಾಲೆ ಹಾಗೂ ಸುಸಜ್ಜಿತ ಶೌಚಾಲಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಶಂಕು ಸ್ಥಾಪನೆ ಮಾಡಲಾಯಿತು.
ಪಡುಬಿದ್ರಿ : ಬಂಜೆತನ ನಿವಾರಣೆ ಸಾಧ್ಯ - ಡಾ. ಪಯಸ್ವಿನಿ ಶೆಟ್ಟಿಗಾರ್
Posted On: 08-04-2024 02:58PM
ಪಡುಬಿದ್ರಿ : ಆಧುನಿಕ ಯುಗದಲ್ಲಿ ಪ್ರತಿಯೊಂದಕ್ಕೂ ಚಿಕಿತ್ಸೆ ಇರುವ ಕಾರಣ ಬಂಜೆತನವನ್ನು ಕೂಡಾ ನಿವಾರಣೆ ಮಾಡಬಹುದು. ಇಂದಿನ ಜೀವನ ಶೈಲಿ ಹಾಗು ಆಹಾರ ಪದ್ದತಿಯೇ ಬಂಜೆತನಕ್ಕೆ ಮುಖ್ಯ ಕಾರಣ. ಬಂಜೆತನದಿಂದ ಮಾನಸಿಕ ಒತ್ತಡಕ್ಕೆ ಒಳಾಗಾಗುವವರ ಸಂಖ್ಯೆ ಜಾಸ್ತಿ ಆಗುತ್ತಿದೆ ಎಂದು ವ್ಯೆದಾಧಿಕಾರಿ ಡಾ. ಪಯಸ್ವಿನಿ ಶೆಟ್ಟಿಗಾರ್ ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ, ರೋಟರಾಕ್ಟ್ ಕ್ಲಬ್ ಮತ್ತು ನೋವಾ ಐ ವಿ.ಎಫ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ನಡೆದ ಬಂಜೆತನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಏಪ್ರಿಲ್ 7 (ನಾಳೆ) : ಪಡುಬಿದ್ರಿಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ
Posted On: 06-04-2024 05:21PM
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಇನ್ನರ್ ವ್ಹೀಲ್ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ ಮತ್ತು ರೋಟರಾಕ್ಟ್ ಕ್ಲಬ್ ಪಡುಬಿದ್ರಿ ಸಂಯುಕ್ತ ಆಶ್ರಯದಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ ಓಂಕಾರ ಕಲಾ ಸಂಗಮ ಪಡುಬಿದ್ರಿ ಇಲ್ಲಿ ಏಪ್ರಿಲ್ 7, ಆದಿತ್ಯವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಜರಗಲಿದೆ ಎಂದು ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಪಿಸಿಸಿ ಪ್ರಚಾರ ಸಮಿತಿ ಪದಗ್ರಹಣ ; ನೂತನ ರಾಜ್ಯಾಧ್ಯಕ್ಷರಾಗಿ ವಿನಯ ಕುಮಾರ್ ಸೊರಕೆ
Posted On: 06-04-2024 05:17PM
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಕೊಂಡ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಘಾಟನೆ ಕಾರ್ಯಕ್ರಮ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆಯಿತು.
ಕುತ್ಯಾರು ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯ ಬೇಸಿಗೆ ಶಿಬಿರದಲ್ಲಿ ಗಮನಸೆಳೆದ ತಾಳಮದ್ದಳೆ - ಗುರುದಕ್ಷಿಣೆ
Posted On: 06-04-2024 12:50PM
ಕುತ್ಯಾರು : ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗುರುದಕ್ಷಿಣೆ ತಾಳಮದ್ದಳೆ ಜರಗಿತು.
ಏಪ್ರಿಲ್ 9 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ
Posted On: 05-04-2024 10:00PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾಮಗಾರಿಗಳು ಬಹಳಷ್ಟು ಭರದಿಂದ ಸಾಗುತ್ತಿದ್ದು 2024ರ ಏಪ್ರಿಲ್, ಮೇ ತಿಂಗಳಿನಲ್ಲಿಯೇ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಎಂದು ನಿಶ್ಚಯಿಸಿದ್ದು, ಆ ಪ್ರಯುಕ್ತ ಎಪ್ರಿಲ್ 9ರ ಮಂಗಳವಾರದಂದು ಬೆಳಿಗ್ಗೆ ಗಂಟೆ 8.30 ಕ್ಕೆ ಸರಿಯಾಗಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ ಪ್ರಾರ್ಥಿಸುವ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡುವುದೆಂದು ತೀರ್ಮಾನಿಸಲಾಗಿದೆ ಎಂದು ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿಯವರು ಹೇಳಿದರು. ಅವರು ದೇವಳದ ಕಛೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ - ಬೇಸಿಗೆ ಶಿಬಿರ ಸಮಾರೋಪ
Posted On: 05-04-2024 06:37PM
ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಇಲ್ಲಿ ಏಪ್ರಿಲ್ 5ರಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು.
ಕಾಪು : ಜೆಡಿಎಸ್ ಪಕ್ಷದ ದಕ್ಷಿಣ ವಿಭಾಗದ ಅಧ್ಯಕ್ಷರಾಗಿ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂ ಆಯ್ಕೆ
Posted On: 05-04-2024 01:53PM
ಕಾಪು : ಜನತಾದಳ(ಜಾತ್ಯಾತೀತ)ಪಕ್ಷದ ಕಾಪು ವಿಧಾನಸಭಾ ಕ್ಷೇತ್ರ ಸಮಿತಿಯ ದಕ್ಷಿಣ ವಿಭಾಗದ ಅಧ್ಯಕ್ಷರಾಗಿ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂ ಆಯ್ಕೆಯಾಗಿರುತ್ತಾರೆ.
