Updated News From Kaup

ಕಾಪುವಿನಲ್ಲಿ ನಮ್ಮ ಕಾಪು "ಧ್ಯಾನ್ ಟ್ಯೂಷನ್ ಸೆಂಟರ್" ಶುಭಾರಂಭ

Thumbnail
Posted On: 03 Jun 2024, 07:54 PM

ಕಾಪು : ಇಲ್ಲಿನ ಆಸುಪಾಸಿನ ವಿದ್ಯಾರ್ಥಿಗಳಿಗೆ ಸುಲಲಿತ ಕಲಿಕೆಗಾಗಿ ನಮ್ಮ ಕಾಪು "ಧ್ಯಾನ್ ಟ್ಯೂಷನ್ ಸೆಂಟರ್" ತರಗತಿಗಳು ಜೂನ್ 3 ರಿಂದ ಆರಂಭವಾಗಿದೆ. ಕಾಪುವಿನ ಹೃದಯ ಭಾಗದಲ್ಲಿ ಮುಖ್ಯ ರಸ್ತೆಯ ನಾರಾಯಣಗುರು ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ನಮ್ಮ ಕಾಪು "ಧ್ಯಾನ್ ಟ್ಯೂಷನ್ ಸೆಂಟರ್" ತರಗತಿಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9844323955 93265 83640

ಕೆ.ಸಿ.ಇ.ಟಿ ಫಲಿತಾಂಶ : 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು

Thumbnail
Posted On: 03 Jun 2024, 07:29 PM

ಕಾರ್ಕಳ : ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ‍್ಯಾಂಕ್‌, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 33 ನೇ ರ‍್ಯಾಂಕ್‌, ಪಶು ವೈದ್ಯಕೀಯ ವಿಭಾಗದಲ್ಲಿ 33ನೇ ರ‍್ಯಾಂಕ್‌, B-ಫಾರ್ಮ್ ಮತ್ತು D-ಫಾರ್ಮ್ ವಿಭಾಗಗಳಲ್ಲಿ 49 ನೇ ರ‍್ಯಾಂಕ್‌ ಗಳಿಸಿದ್ದಾರೆ. ವಿದ್ಯಾರ್ಥಿ ಶರತ್ ಹೆಚ್. ಪಿ. ಪಶು ವೈದ್ಯಕೀಯ ವಿಭಾಗದಲ್ಲಿ 26 ನೇ ರ‍್ಯಾಂಕ್‌, ಕೃಷಿ ವಿಜ್ಞಾನ ವಿಭಾಗದಲ್ಲಿ 37 ನೇ ರ‍್ಯಾಂಕ್‌ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ. ಕಾರ್ತಿಕ್ ಎ. ಎಸ್. ಕೃಷಿ ವಿಜ್ಞಾನ ವಿಭಾಗದಲ್ಲಿ 62ನೇ ರ‍್ಯಾಂಕ್‌, ಅಭಿನವ್ ಹೆಚ್. ಬಿ. ಪಶು ವೈದ್ಯಕೀಯ ವಿಭಾಗದಲ್ಲಿ 74 ನೇ ರ‍್ಯಾಂಕ್‌ ಪಡೆದಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ122 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ 122 ಮತ್ತು 210 ವಿದ್ಯಾರ್ಥಿಗಳು 2000 ರೊಳಗೆ ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ. ಕಾಲೇಜು ಪ್ರಾರಂಭದಿಂದಲೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಕಡಾ ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

ಕಾಪು ತಾಲೂಕಿನಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಶೇ.76.26 ಮತ್ತು ಶಿಕ್ಷಕರ ಕ್ಷೇತ್ರ ಶೇ.83.21 ಮತದಾನ

Thumbnail
Posted On: 03 Jun 2024, 07:20 PM

ಕಾಪು : ತಾಲೂಕಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾನ ಇಂದು ಕಾಪು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 1208 ಮಂದಿ ಮತದಾನ ಮಾಡಿದ್ದು ಇದರಲ್ಲಿ ಪುರುಷರು (531), ಮಹಿಳೆಯರು (677) ಮತ ಚಲಾಯಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಶೇ.76.26 ಮತದಾನವಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 233 ಮಂದಿ ಮತ ಚಲಾಯಿಸಿದ್ದು. ಪುರುಷರು (531), ಮಹಿಳೆಯರು (677) ಮತದಾನಗೈದಿರುತ್ತಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.83.21 ಮತದಾನವಾಗಿದೆ.

ಕಾಪು : ಮಾರಕಾಯುಧದೊಂದಿಗೆ ಸಂಚರಿಸುತ್ತಿದ್ದ ಆರು ಮಂದಿ ಪೊಲೀಸ್ ವಶಕ್ಕೆ

Thumbnail
Posted On: 02 Jun 2024, 11:43 AM

ಕಾಪು : ಕಾರಿನಲ್ಲಿ ಮಾರಕಾಯುಧಗಳೊಂದಿಗೆ ಸಂಚರಿಸುತ್ತಿದ್ದ ಆರು ಮಂದಿಯನ್ನು ಕಾಪು ಪೊಲೀಸರು ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್, ವಾಮಂಜೂರು ನೀರುಮಾರ್ಗದ ವರುಣ್, ಸುರತ್ಕಲ್ ನ ಕಾರ್ತಿಕ್ ಶೆಟ್ಟಿ, ಕಾಟಿಪಳ್ಳದ ಅಭಿಷೇಕ್, ಫರಂಗಿಪೇಟೆಯ ಶ್ರೀಕಾಂತ್ ಶ್ರೀಪತಿ ವಶಕ್ಕೆ ಪಡೆದ ಆರೋಪಿಗಳು. ಇವರಿಂದ ಕಾರು, ಮಾರಕಾಯುಧಗಳು ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉದ್ಯಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದ ಆರೋಪಿಗಳ ಬಗ್ಗೆ ಅನುಮಾನಗೊಂಡ ಕಾಪು ಪೊಲೀಸ್ ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಕಾರನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಆರೋಪಿಗಳು ಕಾರನ್ನು ನಿಲ್ಲಿಸದೆ ಕಾಪು ಕಡೆ ಪರಾರಿ ಯಾದರು. ಬಳಿಕ ಈ ಬಗ್ಗೆ ಕಾಪು ಠಾಣೆಗೆ ಮಾಹಿತಿ ನೀಡಿದ ಜಯಶ್ರೀ ಮಾನೆ, ಆರೋಪಿಗಳ ವಾಹನವನ್ನು ಬೆನ್ನಟ್ಟಿ ಕೊಂಡು ಬಂದರೆನ್ನಲಾಗಿದೆ. ಅದೇ ರೀತಿ ಅತ್ತ ಅಲಟ್೯ ಆದ ಕಾಪು ಠಾಣೆಯ ಎಸ್ ಐ ಅಬ್ದುಲ್ ಖಾದರ್ ಇನ್ನೊಂದು ವಾಹನದಲ್ಲಿ ಆರೋಪಿಗಳ ವಾಹನವನ್ನು ಬೆನ್ನಟ್ಟಿಕೊಂಡು ಬಂದರು. ಕಾಪುವಿನ ಕೋತಲ್ ಕಟ್ಟೆ ಬಳಿ ಆರೋಪಿಗಳ ವಾಹನವನ್ನು ತಡೆದು ಅದರಲ್ಲಿದ್ದ ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡರು ಎಂದು ತಿಳಿದುಬಂದಿದೆ. ವಾಹನವನ್ನು ತಪಾಸಣೆ ಮಾಡಿದಾಗ ಅದರೊಳಗೆ ಮಾರಕಾಯುಧಗಳು ಹಾಗೂ ಇತರ ವಸ್ತುಗಳು ಕಂಡು ಬಂದಿದ್ದು ಆರೋಪಿಗಳು ಯಾವ ಕೃತ್ಯಕ್ಕೆ ಸಂಚುರೂಪಿಸಿದ್ದಾರೆ ಎಂಬುದು ತನಿಖೆಯಿಂದ ಹೊರ ಬರಬೇಕಾಗಿದೆ.

ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ : ನವೀಕರಣ ಯೋಜನೆಗಳ ಹಸ್ತಾಂತರ

Thumbnail
Posted On: 02 Jun 2024, 11:14 AM

ಕಾಪು : ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ಇವರ ಸಹಯೋಗದೊಂದಿಗೆ ಕರಂದಾಡಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಸುಮಾರು 4.50 ಲಕ್ಷ ರೂ. ವೆಚ್ಚದ ನವೀಕರಣ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿ, ಹಸ್ತಾಂತರಿಸಲಾಯಿತು. ಕರಂದಾಡಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ, ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್, ಬಿಗ್ ಬಾಸ್ ವಿನ್ನರ್ ಮತ್ತು ಚಲನಚಿತ್ರ ನಟ ರೂಪೇಶ್ ಶೆಟ್ಟಿ ಶುಭಾಂಶಸನೆಗೈದರು. ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ತಂಡದ ಸದಸ್ಯ ಗುರುಪ್ರಸಾದ್ ಶೆಟ್ಟಿ ಬೈಲೂರು ತಮ್ಮ ತಂಡವು ಕಳೆದ ಏಳು ವರ್ಷಗಳಲ್ಲಿ ನಡೆಸಿದ ಕಾರ್ಯಕ್ರಮಗಳು, ಸಾರ್ವಜನಿಕ ಸಹಕಾರದ ಕುರಿತಾಗಿ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಲಯನ್ಸ್ ರೀಜನಲ್ ಚಯರ್‌ಮೆನ್ ವರುಣ್ ಶೆಟ್ಟಿ, ಅಧ್ಯಕ್ಷ ಉದಯ್ ಶೆಟ್ಟಿ, ಕಾರ್ಯದರ್ಶಿ ಲುತ್ಪುಲ್ಲಾ ಸಾಹೇಬ್ ನೇತೃತ್ವದಲ್ಲಿ ಕಾಪು ಲಯನ್ಸ್ ಕ್ಲಬ್ ವತಿಯಿಂದ ಶಾಲೆಗೆ ಬೆಂಚ್ ಮತ್ತು ಡೆಸ್ಕ್‌ಗಳಿಗಾಗಿ ೫೦ ಸಾವಿರ ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಪದ್ಮನಾಭ ಶ್ಯಾನುಭಾಗ್, ಮಜೂರು ಗ್ರಾ.ಪಂ. ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಪುಸ್ತಕದ ದಾನಿ ಮಿಥುನ್ ರೈ, ಶಾಲಾ ಹಳೆ ವಿದ್ಯಾರ್ಥಿ ರಾಮದಾಸ್ ತಂತ್ರಿ, ಕಲ್ಪವೃಕ್ಷ ಕನ್ನಡ ಶಾಲೆ ತಂಡದ ಅಧ್ಯಕ್ಷ ಶ್ರೀಧರ ಶೆಟ್ಟಿಗಾರ್ ಕರಂದಾಡಿ, ಆಡಳಿತ ಸಮಿತಿ ಸದಸ್ಯರಾದ ಶಶಿಶೇಖರ ಭಟ್, ನಾಗಭೂಷಣ್ ರಾವ್, ಮುಖ್ಯೋಪಾಧ್ಯಾಯ ಆರ್.ಎಸ್. ಕಲ್ಲೂರ, ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ, ರಂಗ ನಟರಾದ ಪ್ರಸನ್ನ ಶೆಟ್ಟಿ ಬೈಲೂರು, ಶರತ್ ಉಚ್ಚಿಲ, ಸಂದೀಪ್ ಶೆಟ್ಟಿ, ಮರ್ವಿನ್ ಶಿರ್ವ ಉಪಸ್ಥಿತರಿದ್ದರು. ಕರಂದಾಡಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ ಪ್ರಸ್ತಾವನೆಗೈದರು. ಶಿಕ್ಷಕಿಯರಾದ ಹರಿಣಾಕ್ಷಿ ಸ್ವಾಗತಿಸಿದರು. ಸತ್ಯವತಿ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.ಅನಿತಾ ಹೆಗ್ಡೆ ವಂದಿಸಿದರು.

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ತಂಬಾಕು ಮುಕ್ತ ದಿನಾಚರಣೆ

Thumbnail
Posted On: 31 May 2024, 05:28 PM

ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಸೈಟ್ಸ್-ಗೈಡ್ಸ್ ಎನ್.ಸಿ.ಸಿ.ವಿದ್ಯಾರ್ಥಿಗಳ ನೇತೃತ್ವದಲ್ಲಿ ತಂಬಾಕು ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಎಂ.ನೀಲಾನಂದ ನಾಯ್ಕ ಇವರು ತಂಬಾಕು ಪದಾರ್ಥಗಳನ್ನು ಉರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಗೇಬ್ರಿಯಲ್ ಮಸ್ಕರೇನಸ್ ಇವರು ತಂಬಾಕು ಪದಾರ್ಥದ ಸೇವನೆಯು ಜನರ ದೇಹವನ್ನು ದಹಿಸುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ತಂಬಾಕಿನಂತಹ ಅಮಲು ಪದಾರ್ಥಗಳಿಂದ ದೂರವಿದ್ದು ತನ್ನ ಪರಿಸರವನ್ನು ಕೂಡಾ ಆರೋಗ್ಯದಾಯಕವಾಗಿರಲು ಪ್ರಯತ್ನಿಸಬೇಕು ಎಂಬ ಕಿವಿಮಾತನ್ನು ಹೇಳಿದರು. ಕಾರ್ಯಕ್ರಮದಲ್ಲಿ ಸೈಟ್ಸ್-ಗೈಡ್ಸ್ ಶಿಕ್ಷಕಿಯರಾದ ವೀಣಾ ನಾಯಕ್, ವಾಣಿ, ಹಾಗೂ ಶಿಕ್ಷಣ ಸಂಯೋಜಕರಾದ ಶಿವಣ್ಣ ಬಾಯಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಶ್ರೀನಿಕೇತ್ ಬಾಯಾರ್ ಸ್ವಾಗತಿಸಿದರು. ಮನ್ವಿತಾ ಕಾರ್ಯಕ್ರಮ ನಿರೂಪಿಸಿದರು. ಆನಂದ್ ಸಿಂಗ್ ವಂದಿಸಿದರು.

ಉಚ್ಚಿಲ : ಸರಸ್ವತಿ ಮಂದಿರ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ; ರಾಜ್ಯಕ್ಕೆ  5ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ

Thumbnail
Posted On: 31 May 2024, 05:21 PM

ಉಚ್ಚಿಲ : ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇದರ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಉದ್ಘಾಟನೆ ಶುಕ್ರವಾರ ಶಾಲಾ ಕಲಾ ವೇದಿಕೆಯಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಸನ್ಮಾನ : ಎಸ್‌ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ  5ನೇ ರ‍್ಯಾಂಕ್, ಉಡುಪಿ ಜಿಲ್ಲಾ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ ಪಡೆದ ಶಾಲಾ ವಿದ್ಯಾರ್ಥಿ ಸಮರ್ಥ್‌ ಆರ್‌ ಜೋಷಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಶಿಲ್ಪಾ ಗಂಗಾಧರ ಸುವರ್ಣ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ವೈ, ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಆಶಾ ದಿನೇಶ್‌ ಸುವರ್ಣ, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಕಲಾವತಿ ಆಚಾರ್ಯ, ಸಹ ಶಿಕ್ಷಕರು, ಗ್ರಾಪಂ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮೀ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್‌ ಕುಲಾಲ್‌ ವಂದಿಸಿದರು.

SSLC ಪರೀಕ್ಷೆ : ಪಣಿಯೂರು ಪೆಜತ್ತಕಟ್ಟೆ ಸಾಕ್ಷಿ ದೇವಾಡಿಗ ಶಾಲೆಗೆ ದ್ವಿತೀಯ ಸ್ಥಾನಿ‌

Thumbnail
Posted On: 30 May 2024, 09:08 PM

ಕಾಪು : ಇಲ್ಲಿನ ಅದಮಾರು ಪೂರ್ಣ ಪ್ರಜ್ಞ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಸಾಕ್ಷಿ ದೇವಾಡಿಗ 91% ಅಂಕ ಪಡೆದು ಶಾಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವರು. ಇವರು ಪಣಿಯೂರು ಆಟೋ ಚಾಲಕರ ಹಾಗೂ ಮಾಲಕರ ಸಂಘದ ಅಧ್ಯಕ್ಷರು ದಯಾನಂದ ದೇವಾಡಿಗ ಹಾಗೂ ವಿನೋದ ದೇವಾಡಿಗ ಅವರ ಸುಪುತ್ರಿ.

ಕಾಪು : ಬೊಳ್ಳೆಟ್ಟು ಅಲಡೆಯ ಪ್ರಧಾನ ಅರ್ಚಕ ಬಾಲಕೃಷ್ಣ ಭಟ್ ನಿಧನ

Thumbnail
Posted On: 30 May 2024, 05:02 PM

ಕಾಪು : ಎಲ್ಲೂರು ಗ್ರಾಮದ ಬೆಳ್ಳಿಬೆಟ್ಟು ನಿವಾಸಿ ಬಾಲಕೃಷ್ಣ ಭಟ್(76) ಮೇ 29 ರಂದು ಅವರ ಸ್ವಗ್ರಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಬೊಳ್ಳೆಟ್ಟು ಅಲಡೆಯ ಪ್ರಧಾನ ಅರ್ಚಕರಾಗಿದ್ದ ಇವರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮೇಳದ ಗಣಪತಿ ದೇವರ ಅರ್ಚಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ವೇದವರ್ಧನ ಸ್ವಾಮೀಜಿ

Thumbnail
Posted On: 29 May 2024, 05:06 PM

ಕಾಪು : ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶ್ರೀ ಶಿರೂರು ಮಠದ ಮಠಾಧೀಶರಾದ ಶ್ರೀ ವೇದವರ್ಧನ ಸ್ವಾಮೀಜಿ ಮತ್ತು ಆಪ್ತರಾದ ಶ್ರೀಶ ಭಟ್ ಅವರು ಮೇ 29ರಂದು ಜಿರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಕಾಪುವಿನ ಅಮ್ಮನ ದರುಶನವನ್ನು ಪಡೆದು ಶ್ರೀದೇವಿಗೆ ದೀಪ ಬೆಳಗಿ ನವದುರ್ಗಾ ಮಂಟಪದಲ್ಲಿ ಆಶೀರ್ವಚನ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಜಿರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ಭಕ್ತರು ಬರೇ ಭಾರತ ದೇಶದಲ್ಲಿ ಮಾತ್ರ ಅಲ್ಲ, ಪ್ರಪಂಚಾದ್ಯಂತ ನೆಲೆಸಿದ್ದಾರೆ. ದೇವರ ಸೇವೆ ಮಾಡಲು ಇದೊಂದು ಅವಕಾಶ. ಇಲ್ಲಿಗೆ ಬಂದು ಕಣ್ತುಂಬಿಕೊಳ್ಳಬೇಕು, ನಿರ್ಮಾಣ ಕಾರ್ಯಕ್ಕೆ ಸಹಕರಿಸಬೇಕು, ಎಲ್ಲರಿಗೂ ಇದು ನಮ್ಮ ದೇವಸ್ಥಾನ ಎಂಬ ಭಾವನೆ ಬರಬೇಕು. ಪರಮಾತ್ಮನ ಅನುಗ್ರಹವಿರಲಿ ಎಂದರು. ದೇವಳದ ಪ್ರಧಾನ ಅರ್ಚಕರಾದ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ, ಜಿರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಗೌರವಾಧ್ಯಕ್ಷ ಅನಿಲ್ ಬಲ್ಲಾಳ್ ಕಾಪು ಬೀಡು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾದವ ಆರ್ ಪಾಲನ್, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗೌರವ ಸಲಹೆಗಾರ ನಿರ್ಮಲ್ ಕುಮಾರ್ ಹೆಗ್ಡೆ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಡಾ. ಸೀತಾರಾಮ್ ಭಟ್, ಕಛೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ಶ್ರೀಧರ್ ಕಾಂಚನ್, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರುಗಳಾದ ಗೀತಾಂಜಲಿ ಸುವರ್ಣ, ಶಿಲ್ಪಾ. ಜಿ. ಸುವರ್ಣ, ಶೈಲಪುತ್ರಿ ತಂಡದ ಸಂಚಾಲಕರುಗಳಾದ ರವಿ ಭಟ್ ಮಂದಾರ, ಲಕ್ಷ್ಮೀಶ ತಂತ್ರಿ, ರಾಧಾರಮಣ ಶಾಸ್ತ್ರಿ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.