Updated News From Kaup

ಶಿರ್ವ ರೋಟರಿಯಿಂದ ಕಳತ್ತೂರು ಪಿ ಕೆ ಎಸ್ ಪ್ರೌಢ ಶಾಲೆಯ ಶಿಕ್ಷಕರಿಗೆ ಗೌರವಾರ್ಪಣೆ

Thumbnail
Posted On: 12 Jul 2024, 08:00 PM

ಕಾಪು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದ ಹಿನ್ನೆಲೆಯಲ್ಲಿ ಕಳತ್ತೂರು ಪಿ ಕೆ ಎಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮತ್ತು ಅಧ್ಯಾಪಕ ವೃಂದದವರಿಗೆ ಶಿರ್ವ ರೋಟರಿ ಕ್ಲಬ್ ವತಿಯಿಂದ ಗೌರವಾರ್ಪಣೆಯು ಶುಕ್ರವಾರ ನಡೆಯಿತು.

ಪಡುಬಿದ್ರಿ : ಎಸ್ ಬಿ ವಿ ಪಿ ಹಿರಿಯ ಪ್ರಾಥಮಿಕ ಶಾಲೆ, ಗಣಪತಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Thumbnail
Posted On: 12 Jul 2024, 07:56 PM

ಪಡುಬಿದ್ರಿ : ಪರಿಸರದ ಶುದ್ಧತೆ ಮತ್ತು ಉತ್ತಮ ಆರೋಗ್ಯದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮವು ಪಡುಬಿದ್ರಿ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನಡೆಯಿತು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಿನಯಾ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಡೆಂಗ್ಯೂ , ಮಲೇರಿಯಾ , ಚಿಕನ್ ಗುನ್ಯಾ , ಇಲಿ ಜ್ವರ ಮೊದಲಾದ ರೋಗಗಳು ಮಳೆಗಾಲದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ. ಮನೆಯ ಸುತ್ತ ಮುತ್ತ ಸೊಳ್ಳೆಗಳು ಉತ್ಪತ್ತಿಯಾಗದಂತೆ, ಮಳೆಯ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ರೋಗದ ಲಕ್ಷಣಗಳು ಕಂಡು ಬಂದರೆ, ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು. ಪ್ರೌಢಶಾಲೆಯ ಅಧ್ಯಾಪಕರಾದ ಡಾ. ರಾಘವೇಂದ್ರ ರಾವ್ ಅವರು ಮಾತನಾಡಿ ಉತ್ತಮ ಆರೋಗ್ಯಕ್ಕಾಗಿ ಎಲ್ಲ ಬಗೆಯ ಆರೋಗ್ಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕುಟುಂಬದ ಸದಸ್ಯರಿಗೂ, ಪರಿಸರದ ಜನರಿಗೂ ಈ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಅಶೋಕ ಕೆ., ಆಶಾ ಕಾರ್ಯಕರ್ತೆ ರಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಶಿಲ್ಪಾ ಕೆ.ಆರ್. ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲೆಯ ಶಿಕ್ಷಕಿ ಕುಮಾರಿ ಪ್ರತೀಕ್ಷಾ ವಂದಿಸಿದರು. ಉಭಯ ಸಂಸ್ಥೆಗಳ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜುಲೈ 14 : ಹೆಜಮಾಡಿಯಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Thumbnail
Posted On: 12 Jul 2024, 03:31 PM

ಹೆಜಮಾಡಿ : ದ್ವಿತೀಯ ಬಾರಿಗೆ ಕರ್ನಾಟಕ ಸರಕಾರದ ವಿಧಾನಪರಿಷತ್ ಸದಸ್ಯರಾಗಿ ಅಯ್ಕೆಯಾದ ಐವನ್ ಡಿಸೋಜರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಜುಲೈ 14, ಆದಿತ್ಯವಾರ ಸಂಜೆ 4 ಗಂಟೆಗೆ ಹೆಜಮಾಡಿ ನಾರಾಯಣಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಜಮಾಡಿ ಹಾಗು ಆಸುಪಾಸಿನ ಗ್ರಾಮಗಳ ಸಾರ್ವಜನಿಕರು ಹಾಗು ಸಂಘ ಸಂಸ್ಥೆಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಪು ವಿಧಾನ ಸಭಾ ಕ್ಷೇತ್ರ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಇನ್ನಿತರರು ಭಾಗವಹಿಸಲಿದ್ದಾರೆಂದು ಸಾರ್ವಜನಿಕ ಅಭಿನಂದನಾ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಸ್ಸೆಲ್ ಮಾರ್ಟಿಸ್ CA ಪರೀಕ್ಷೆಯಲ್ಲಿ ಉತ್ತೀರ್ಣ

Thumbnail
Posted On: 12 Jul 2024, 03:21 PM

ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಅಂತಿಮ CA ಪರೀಕ್ಷೆಯಲ್ಲಿ ರಸ್ಸೆಲ್ ಮಾರ್ಟಿಸ್ ಉತ್ತೀರ್ಣರಾಗಿರುತ್ತಾರೆ. ಇವರು ಮುಂಬೈ ವಿಶ್ವವಿದ್ಯಾಲಯದಿಂದ ಅಕೌಂಟಿಂಗ್ ಮತ್ತು ಫೈನಾನ್ಸ್ ವಿಭಾಗದಲ್ಲಿ ಪದವಿ ಪಡೆದಿರುತ್ತಾರೆ. ಇವರು ಕಾಪು ತಾಲ್ಲೂಕಿನ ಕಟಪಾಡಿಯ ಅಚ್ಚಡದ ರೊನಾಲ್ಡ್ ಮಾರ್ಟಿಸ್ ಹಾಗೂ ಹಾರಿಯೆಟ್ ಮಾರ್ಟಿಸ್ ರವರ ಸುಪುತ್ರ.

ಕಾಪು ಮಾರಿಯಮ್ಮನ ದರುಶನ ಪಡೆದ ಕೇಂದ್ರ ಸರಕಾರದ ಅಧಿಕಾರಿಗಳು

Thumbnail
Posted On: 12 Jul 2024, 03:09 PM

ಕಾಪು : ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಾದ ಹಿರಿಯ ಲೆಕ್ಕಾಧಿಕಾರಿ ರಾಜೇಶ್ ಕುಮಾರ್, ಆಡಿಟ್ ಕನ್ಸಲ್ಟೆಂಟ್ ಆರ್ . ಕೆ . ಖುರನ ಇವರು ಶುಕ್ರವಾರ ಬೆಳಿಗ್ಗೆ ಕಾಪು ಮಾರಿಯಮ್ಮನ ದರುಶನ ಪಡೆದರು. ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ನಂತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾಮಗಾರಿಯನ್ನು ವೀಕ್ಷಿಸಿದ ಅಧಿಕಾರಿಗಳು ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಶಾಂತ್ ರಾವ್, ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಕಾಪು, ಸಹಾಯಕ ನಿರ್ದೇಶಕರು ಬ್ರಹ್ಮಾವರ, ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಉಡುಪಿ ಜಿಲ್ಲಾ ನರೇಗಾ ಸಿಬ್ಬಂದಿ, ಆರ್ಥಿಕ ಸಮಿತಿಯ ಸಿದ್ಧಿ ಧಾತ್ರಿ ತಂಡದ ಸಂಚಾಲಕ ಶ್ರೀಧರ ಕಾಂಚನ್ ಮತ್ತು ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.

ಬಾಳೆಬೈಲು ಹಿರಿಯ ಪ್ರಾಥಮಿಕ ಶಾಲಾ ವಿವೇಕ ಕೊಠಡಿ ಉದ್ಘಾಟನೆ

Thumbnail
Posted On: 12 Jul 2024, 03:04 PM

ಕಾಪು : 13.90 ಲಕ್ಷ ರೂಪಾಯಿ ಅನುದಾನದ ಬಾಳೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿಯನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಸಚಿನ್ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸುಮತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಪ್ರಕಾಶ್, ಬ್ರಹ್ಮಾವರ ವಲಯದ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ದೂಪದಕಟ್ಟೆ ಸಿ.ಆರ್.ಪಿ ಶಾಂತಾ, ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಸೆರ್ವೇಗಾರ್, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಹಾಗೂ ಗುತ್ತಿಗೆದಾರರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.

ಎರ್ಮಾಳಿನ ವರ್ಚಸ್ ಶೆಟ್ಟಿ CA ಪರೀಕ್ಷೆಯಲ್ಲಿ ಉತ್ತೀರ್ಣ

Thumbnail
Posted On: 12 Jul 2024, 10:44 AM

ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ಎರ್ಮಾಳಿನ ವರ್ಚಸ್ ಶೆಟ್ಟಿಯವರು ಉತ್ತೀರ್ಣರಾಗಿರುತ್ತಾರೆ. ಇವರು ಕಾಪು ತಾಲ್ಲೂಕಿನ ಎರ್ಮಾಳು ಬಡಾ ಗ್ರಾಮದ "ಕುಮುದ" ನಿಲಯದ ನಿವಾಸಿ ಯಾಗಿದ್ದು, ಪ್ರಸ್ತುತ ಬೆಳಗಾಂನಲ್ಲಿವಾಸ್ತವ್ಯವಿರುವ ದಿ.ಹಿಮಕರ ಶೆಟ್ಟಿ ಹಾಗೂ ಪೂರ್ಣಿಮ ಶೆಟ್ಟಿಯವರ ಸುಪುತ್ರ.

ಹೆಜಮಾಡಿ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗ - ವಿದ್ಯಾರ್ಥಿವೇತನ ವಿತರಣೆ ; ವಿವಿಧ ಸಂಘಗಳ ಉದ್ಘಾಟನೆ

Thumbnail
Posted On: 12 Jul 2024, 10:16 AM

ಹೆಜಮಾಡಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಜಮಾಡಿ ಇಲ್ಲಿ ಜುಲೈ 11ರಂದು ಮಣಿಪಾಲ ಟೆಕ್ನಾಲಜಿ ಸಂಸ್ಥೆಯ ವತಿಯಿಂದ ರೊನಾಲ್ಡ್ ಡಿಸೋಜಾ ಎಚ್ಆರ್ ಮ್ಯಾನೇಜರ್ ಇವರು 2023 -24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶದ ದಾಖಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿದರು. ಈ ಸಂದರ್ಭ ಅವರು ಮಾತನಾಡಿ, ಪ್ರತಿ ವರ್ಷವೂ ಸಂಸ್ಥೆಯು ನೂರು ಶೇಕಡ ಫಲಿತಾಂಶ ದಾಖಲಿಸುವಂತಾಗಲಿ ಎಂದು ಹಾರೈಸಿದರು. ಪ್ರಸ್ತುತ 10ನೇ ತರಗತಿ ವಿದ್ಯಾರ್ಥಿಗಳನ್ನು ಉತ್ತಮ ಫಲಿತಾಂಶ ದಾಖಲಿಸುವಂತೆ ಪ್ರೋತ್ಸಾಹಿಸಿದರು. ಶಾಲೆಯ ವಿವಿಧ ಸಂಘಗಳನ್ನು ಉದ್ಘಾಟನೆ ಮಾಡಿದರು. ಸಂಸ್ಥೆಯ ಹಿರಿಯ ಶಿಕ್ಷಕಿ ಸಂಪಾವತಿ ಮಾತಮಾಡಿ, ಮಣಿಪಾಲ ಟೆಕ್ನಾಲಜಿ ಸಂಸ್ಥೆ ಈ 3 ವರ್ಷಗಳಿಂದ ಸಂಸ್ಥೆಗೆ ನೀಡಿದ ಇನ್ಸಿನರೇಟರ್, ಕಂಪ್ಯೂಟರ್, ಪ್ರಿಂಟರ್, ಪ್ರೊಜೆಕ್ಟರ್ , ವಾಟರ್ ಪ್ಯೂರಿಫೈಯರ್ ಈ ಮೊದಲಾದ ಕೊಡುಗೆಗಳನ್ನು ಸ್ವರಿಸುತ್ತಾ ಮಣಿಪಾಲ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಸಂಸತ್ ನ ಉಸ್ತುವಾರಿ ಶಿಕ್ಷಕಿ ಅನಿತಾ ವಿವಿಧ ಸಂಘಗಳ ಕಾರ್ಯವನ್ನು ತಿಳಿಸಿದರು. ಹಿರಿಯ ಶಿಕ್ಷಕಿ ಸಂಪಾವತಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಶಿಕ್ಷಕರಾದ ದೀಪಾ ಉಡುಪ ಕಾರ್ಯಕ್ರಮ ನಿರೂಪಿಸಿದರು. ಸರೋಜಾ ಆಚಾರಿ ವಂದಿಸಿದರು. SDMC ಸದಸ್ಯರು, ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಪು : ಇನ್ನಂಜೆಯ ವರ್ಷಿಣಿ ಪಿ ಆರ್ CA ಪರೀಕ್ಷೆಯಲ್ಲಿ ಉತ್ತೀರ್ಣ

Thumbnail
Posted On: 11 Jul 2024, 11:13 PM

ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ವರ್ಷಿಣಿ ಪಿ ಆರ್ ಉತ್ತೀರ್ಣರಾಗಿರುತ್ತಾರೆ. ಇವರು ಕಾಪು ತಾಲೂಕಿನ ಇನ್ನಂಜೆಯ ನಿವಾಸಿಯಾಗಿದ್ದ ಪ್ರಸ್ತುತ ಬೆಂಗಳೂರಿನಲ್ಲಿ ‌ವಾಸ್ತವ್ಯವಿರುವ ರವಿ ಪಿ., ಜಯಲಕ್ಷ್ಮಿ ಆರ್ ರವರ ಸುಪುತ್ರಿ.

ಕಾಪು : ಅನುಷಾ ಕರ್ಕೇರ CA ಪರೀಕ್ಷೆಯಲ್ಲಿ ಉತ್ತೀರ್ಣ

Thumbnail
Posted On: 11 Jul 2024, 09:19 PM

ಕಾಪು : ಮುಂಬೈನ ಭಾಂಡುಪ್ ನಿವಾಸಿಗಳಾಗಿರುವ ಅಚ್ಚುತ ಕರ್ಕೇರ ಮತ್ತು ಯಶೋಧಾ ಕರ್ಕೇರ ದಂಪತಿಗಳ ಪುತ್ರಿ ಅನುಷಾ ಕರ್ಕೇರ ಇವರು ICAI (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ) ಇಲ್ಲಿನ CA ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಇನ್ನಂಜೆಯ ಮಡುಂಬು ಬಂಗೇರ ಕುಟುಂಬಸ್ಥರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.