Updated News From Kaup

ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಎಚ್ ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬ ಆಚರಣೆ

Thumbnail
Posted On: 16 Dec 2025, 07:00 PM

ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸರಕಾರದ ಬೃಹತ್ ಮತ್ತು  ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿಯವರ 66ನೇ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು."

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸರಕಾರದ ಬೃಹತ್ ಮತ್ತು  ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿಯವರ  66ನೇ ಹುಟ್ಟುಹಬ್ಬವನ್ನು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ ಯೋಗೀಶ್ ವಿ. ಶೆಟ್ಟಿ ನೇತೃತ್ವದಲ್ಲಿ ಉಡುಪಿಯ ಆಶಾ ನಿಲಯ ವಿಕಲಚೇತನ ಮಕ್ಕಳ ಶಾಲೆಯಲ್ಲಿ ಕೇಕ್ ಕತ್ತರಿಸಿ,ಮಕ್ಕಳಿಗೆ ಮತ್ತು ಸಿಬ್ಬಂಧಿಗಳಿಗೆ ಉಟೋಪಚಾರ ನೀಡಿ ಅರ್ಥಪೂರ್ಣವಾಗಿ  ಹುಟ್ಟುಹಬ್ಬವನ್ನು ಆಚರಿಸಲಾಯಿತು, ಆಶಾ ನಿಲಯದ ಸಿಬ್ಬಂಧಿ ವರ್ಗದವರು ಸಹಕರಿಸಿದರು.

ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿಯವರು ಮಾತನಾಡುತ್ತಾ  ಕುಮಾರಣ್ಣನವರು ಕೇಂದ್ರ ಸಚಿವರಾಗಿ, 2 ಸಲ  ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ  ಕೊಟ್ಟಂತಹ ಕೊಡುಗೆ,ಕೇಂದ್ರ ಸಚಿವರಾಗಿ ದೇಶಕ್ಕೆ ಮಾಡಿರುವ ಸೇವೆ ಹಾಗೂ  ವಿಶೇಷ ಮಕ್ಕಳು, ವಿಕಲಚೇತನರೆಂದರೆ ಕರುಣೆ ತೋರಿಸುವ  ತಾಯಿ ಹೃದಯದ ಕುಮಾರಣ್ಣನವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂತೋಷವಾಗುತ್ತದೆ, ಅವರಿಗೆ ಅರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಭಗವಂತನು ಕರುಣಿಸಲಿ,  ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲಿ ಮುಂದಿನ ದಿನಗಳಲ್ಲಿ  ಕರ್ನಾಟಕದ  ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸಲಿ ಎಂದು ಜಿಲ್ಲಾ ಜನತೆಯ ಪರವಾಗಿ ಶುಭವನ್ನು ಹಾರೈಸುತ್ತೇವೆ ಎಂದು ಹೇಳಿದರು.

 ಈ ಸಂದರ್ಭದಲ್ಲಿ ವಾಸುದೇವ ರಾವ್, ಜಯಕುಮಾರ್  ಪರ್ಕಳ, ಜಯರಾಮ ಆಚಾರ್ಯ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಸುಧಾಕರ್ ಶೆಟ್ಟಿ, ಉದಯ್ ಹೆಗ್ಡೆ,ಗಂಗಾಧರ ಬಿರ್ತಿ, ದಕ್ಷಿತ್ ಶೆಟ್ಟಿ, ಉಮೇಶ್ ಕರ್ಕೇರ, ಶಾಲಿನಿ ಆರ್ ಶೆಟ್ಟಿ ಕೆಂಚನೂರು, ದೇವರಾಜ್ ತೊಟ್ಟಮ್, ರಮೇಶ್ ಕುಂದಾಪುರ, ಕಿಶೋರ್ ಬಳ್ಳಾಲ್, ರಾಮರಾವ್ ಉಡುಪಿ, ಕೀರ್ತಿರಾಜ್, ಅಶ್ರಫ್ ಪಡುಬಿದ್ರಿ, ವಿಶಾಲಾಕ್ಷಿ ಶೆಟ್ಟಿ, ವಸಂತಿ, ರಂಗ  ಆರ್ ಕೋಟ್ಯಾನ್ ಮತ್ತು ಕಾರ್ಯಕರ್ತರು  ಉಪಸ್ಥಿತರಿದ್ದರು.

ಅಪಾಯಕಾರಿ ರಸ್ತೆ ವೇಗ ನಿಯಂತ್ರಕ ಅಳವಡಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತಕ್ಕೆ ಕಾಪು ಜಯರಾಮ ಆಚಾರ್ಯ ಅಗ್ರಹ

Thumbnail
Posted On: 16 Dec 2025, 06:45 PM

ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು, ಮುಂಭಾಗದಲ್ಲಿರುವ NH:66 ಅಂಡರ್‌ಪಾಸ್‌ನಲ್ಲಿರುವ ಡೈವರ್ಶನ್ ನಲ್ಲಿ ಹೆಚ್ಚಿನ ವಾಹನಗಳು ಅತಿಯಾದ ವೇಗದಲ್ಲಿ ಚಲಿಸುತ್ತಿದ್ದು ಇದನ್ನು ಮನವಿ ಪತ್ರದ ಮೂಲಕ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಸಹಿತವಾಗಿ ಉಡುಪಿ ಜಿಲ್ಲಾಧಿಕಾರಿ, ಕಾಪು ತಹಶೀಲ್ದಾರ್ ಮತ್ತು ಕಾಪು ಪುರಸಭಾ ಮುಖ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ.

 ಉಡುಪಿ - ಮಂಗಳೂರಿಗೆ ಸರ್ವಿಸ್ ರಸ್ತೆಗಳಲ್ಲಿ ಎಕ್ಸ್‌ಪ್ರೆಸ್ ಬಸ್‌ಗಳು, ಇತರೆ ವಾಹನಗಳು ಯಾವಾಗಲು ಚಲಿಸುತ್ತಿದ್ದು ಇವುಗಳು ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. (ಈ ಪ್ರದೇಶಗಳಲ್ಲಿ ಹಲವು ಅಪಘಾತಗಳು ಸಂಭವಿಸಿವೆ) 

ಸಾರ್ವಜನಿಕರ ಸುರಕ್ಷತೆಯನ್ನು ಸುಧಾರಿಸಲು, ಸರ್ವಿಸ್ ರಸ್ತೆಗಳ ಎರಡೂ ಬದಿಗಳಲ್ಲಿ ಗುರುತಿಸಲಾದ 4 ಸ್ಥಳಗಳಲ್ಲಿ ಸೂಕ್ತವಾದ ಸಣ್ಣ ಸ್ಪೀಡ್ ಬ್ರೇಕರ್ ಗಳನ್ನು ಅಳವಡಿಸಲು ಹಾಗೂ ಚಾಲಕರು ಮತ್ತು ಸಾರ್ವಜನಿಕರು ಅಂಡರ್‌ಪಾಸ್ ಸಮೀಪಿಸುವಾಗ ಸಂಚಾರ ವೇಗವನ್ನು ನಿಯಂತ್ರಿಸಲು ಅಂಡರ್ಪಾಸ್ ಬದಿ, ಟ್ರಾಫಿಕ್ ಸಿಗ್ನಲ್ ಗಳನ್ನು ಹಾಕುವರೇ ವಿನಂತಿಸುತ್ತೇನೆ. 

ಈ ವ್ಯವಸ್ಥೆಯಿಂದ ವಾಹನಗಳು ನಿಧಾನವಾಗಿ ಜನನಿಬಿಡ ಸಂಚಾರ ಪ್ರದೇಶದಲ್ಲಿ ನಿಯಂತ್ರಿತ ವೇಗದೊಂದಿಗೆ ಅಪಘಾತಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

 ಅಂತೆಯೇ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬೆಳ್ಳಿ ರಥದಲ್ಲಿ ಶ್ರೀ ದೇವಿಯ ಮೆರವಣಿಗೆ ತಿಂಗಳಿಗೆ ಎರಡು ಬಾರಿ ಅಂಡರ್ ಪಾಸ್ ಮೂಲಕ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ತೆರಳುವುದನ್ನು ದಯವಿಟ್ಟು ಗಮನಿಸಬೇಕು.

ಟ್ರಾಫಿಕ್ ಸ್ಪೀಡ್ ಬ್ರೇಕರ್ ವ್ಯವಸ್ಥೆಯಾದರೆ ಈ ಮಾರ್ಗವನ್ನು ಬಳಸುವ ಎಲ್ಲಾ ಪ್ರಯಾಣಿಕರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುತ್ತದೆ. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕ್ರಮ ಕೈಗೊಳ್ಳಬೇಕು ಎಂದು ಕಾಪು ಜಯರಾಮ ಆಚಾರ್ಯ ಅಗ್ರಹಿಸಿದ್ದಾರೆ.

ಅಕ್ಷತಾ ಪೂಜಾರಿಗೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ.

Thumbnail
Posted On: 15 Dec 2025, 10:46 AM

ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ ಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿ, ದಾಂಧಲೆ ನಡೆಸಿರುವುದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡಿಸಿದೆ.

ಜಿಲ್ಲಾಧ್ಯಕ್ಷ ಪ್ರವೀಣ್ ಪೂಜಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ, ಕೊಡವೂರಿನಲ್ಲಿ ಆರೋಪಿಯ ಮನೆ ಇದ್ದರೂ,ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ,ಕೇವಲ ಪುರುಷ ಪೋಲಿಸರು ನುಗ್ಗಿ,ಅಕ್ಷತಾ ಪೂಜಾರಿ ಎಂಬ ಮುಗ್ದ ಯುವತಿಯನ್ನು ಹಲ್ಲೆ ನಡೆಸಿದ್ದಾರೆ.ನಂತರ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರಿಗೆ ಹೇಳಿಕೆಯನ್ನು ಕೊಟ್ಟಾಗ ಠಾಣಾಧಿಕಾರಿ ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿದ್ದಾರೆ.

ಹಲ್ಲೆಯಿಂದ ಗಂಭೀರ ನೋವುಂಟಾಗಿ ಆಕೆಯೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನ್ಯಾಯಕ್ಕೊಳಗಾದ ಕುಟುಂಬದ ಜೊತೆಗೆ ಬಿಲ್ಲವ ವೇದಿಕೆ ನಿಂತಿದ್ದು,ಮಹಿಳಾ ಪೋಲಿಸರಿಲ್ಲದೇ ಅಕ್ರಮವಾಗಿ ಮನೆಗೆ ನುಗ್ಗಿ,ಯುವತಿಗೆ ಹಲ್ಲೆ ನಡೆಸಿದ ಪೋಲಿಸರನ್ನು ಬಂಧಿಸಬೇಕು.ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಲಿದ್ದು, ಪ್ರತಿಭಟನೆಯನ್ನು ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿ ಸಭೆ

Thumbnail
Posted On: 14 Dec 2025, 01:27 AM

ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಬಾವಿ ಸಭೆ ಡಿಸೆಂಬರ್ 13ರ ಶನಿವಾರ ನ ಡೆಯಿತು, 3 ದಿನಗಳ ಕಾಲ ಕಾಪು ಸಮುದ್ರ ಕಿನಾರೆಯಲ್ಲಿ ನಡೆಯುವ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಆಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ನಡೆಯಲ್ಲಿದ್ದು ಖ್ಯಾತ ಗಾಯಕ ರಘು ದೀಕ್ಷಿತ್, ಕುನಾಲ್ ಗಾಂಜಾವಾಲ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜ ಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿ ತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. 

ಇಂದು ಡಿ 14.ಹೆಬ್ರಿ ಕುಲಾಲ ಸಂಘದ ಕುಲಾಲ ಕ್ರೀಡೋತ್ಸವ - 2025

Thumbnail
Posted On: 14 Dec 2025, 01:15 AM

ಹೆಬ್ರಿ :  ಕುಲಾಲ ಸಂಘ (ರಿ.) ಹೆಬ್ರಿ ತಾಲೂಕು ಇವರ ಆಶ್ರಯದಲ್ಲಿ ಹೆಬ್ರಿ ಕುಲಾಲ ಸಮಾಜ ಭಾಂದವರಿಗೆ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 14ರ ಭಾನುವಾರ 
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಬ್ರಿ  ಇಲ್ಲಿ ಜರಗಲಿದೆ.ಕುಲಾಲ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಹೆಬ್ರಿ ಕುಲಾಲ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

 

ದಿ| ಕೆ. ಲೀಲಾಧರ ಶೆಟ್ಟಿ ಪುಣ್ಯಸ್ಮರಣೆ, ರಕ್ತದಾನ ಶಿಬಿರ, ಯೋಧರು, ವಿದ್ಯಾರ್ಥಿಗಳಿಗೆ ಸನ್ಮಾನ

Thumbnail
Posted On: 13 Dec 2025, 08:14 PM


ಕಾಪು:12/12/2025 ಸಮಾಜ ರತ್ನ ದಿ| ಕೆ ಲೀಲಾಧರ ಶೆಟ್ಟಿ ಹಾಗೂ ದಿ| ವಸುಂದರಾ ಶೆಟ್ಟಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಮಾಜ ಸೇವಕ ಸೂರಿ ಶೆಟ್ಟಿ ಮುಂದಾಳತ್ವದಲ್ಲಿ ಸರ್ವ ಧರ್ಮದ ಅಭಿಮಾನಿಗಳಿಂದ ಕಾಪು ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ  ಅಥಿತಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ರಕ್ತದಾನ ಶಿಬಿರ,, ಯೋಧರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾಪುವಿನ ಪಡುವಣ ಕಡಲ ತೀರದಲ್ಲಿ ಕಡಲ ಪರ್ಬದ ಸಂಭ್ರಮ - ಡಿಸೆಂಬರ್ 26,27,28

Thumbnail
Posted On: 12 Dec 2025, 08:01 PM

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ  ಅಟಲ್ ಜನ್ಮ ಶತಾಬ್ದಿ ಪ್ರಯುಕ್ತ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಕಡಲ ಕಿನಾರೆಯಲ್ಲಿ ಡಿಸೆಂಬರ್ 26,27,28 ರಂದು ಬೀಚ್ ಉತ್ಸವ, ಆಹಾರ ಮೇಳ,  ಕ್ರೀಡೋತ್ಸವ, ಸಾಂಸ್ಕೃತಿಕ  ಉತ್ಸವಗಳು ಬಹಳ ಅದ್ದೂರಿಯಾಗಿ ನಡೆಯಲಿದ್ಫು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಕಾಪು ಮಂಡಲ ಬಿಜೆಪಿ ಅಧ್ಯಕ್ಷ  ಜಿತೇಂದ್ರ ಶೆಟ್ಟಿ ಉದ್ಯಾವರ  ನಮ್ಮ ಕಾಪು  ನ್ಯೂಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮೂಡುಬಿದ್ರಿ ನಿತ್ಯಾನಂದ ಶೆಟ್ಟಿ ಸಹಾಯಕ್ಕಾಗಿ ಮನವಿ

Thumbnail
Posted On: 11 Dec 2025, 08:56 PM

ಮೂಡುಬಿದ್ರಿ: ನಿತ್ಯಾನಂದ ಶೆಟ್ಟಿ ಇವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಗಂಟಲ್ ಕಟ್ಟೆಯ ನಿವಾಸಿ ತಾರೀಕು 30 11 2025 ರಂದು ವಾಹನ ಅಪಘಾತಕ್ಕೆ ಒಳಪಟ್ಟಿದ್ದು ಸೊಂಟದ ಮೂಳೆ ಮತ್ತು ಕಾಲುಗಳಿಗೆ ತೀವ್ರ ಏಟಾಗಿರುತ್ತದೆ.

ಸದ್ಯ ಇವರು ಮಂಗಳೂರಿನ ಎಜೆ ಆಸ್ಪತ್ರೆಯ ಸರಕಾರಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಸ್ಪತ್ರೆಯವರು ತಕ್ಷಣ ಆಪರೇಷನ್ ನಡೆಸಬೇಕೆಂದು ತಿಳಿಸಿರುತ್ತಾರೆ.

ಚಿಕಿತ್ಸಾ ವೆಚ್ಚ ಸುಮಾರು 10 ಲಕ್ಷ ಅಂದಾಜಿಸಿದ್ದು. ಇವರದ್ದು ಬಡ ಕುಟುಂಬ ಆಗಿರುವ ಕಾರಣ ಆಸ್ಪತ್ರೆ ವೆಚ್ಚ ಭರಿಸಲು ಕಷ್ಟವಾಗುತ್ತಿದೆ. ಆದುದರಿಂದ ನಿತ್ಯಾನಂದ ಶೆಟ್ಟಿ ಅವರ ಕುಟುಂಬಸ್ಥರು ತಮ್ಮಲ್ಲಿ ಹಣದ ಸಹಾಯಕ್ಕಾಗಿ ಕೋರಿಕೊಳ್ಳುತ್ತಿದ್ದಾರೆ.

ಎಬಿವಿಪಿ ಉಡುಪಿ ನಗರ ಉಡುಪಿ ನಗರ ವತಿಯಿಂದ ಪ್ರಬಂಧ ಸ್ಪರ್ಧೆ ; ರಸಪ್ರಶ್ನೆ ವಿಜೇತರಿಗೆ ಬಹುಮಾನ ವಿತರಣೆ

Thumbnail
Posted On: 08 Dec 2025, 06:44 PM

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದಂದು ಗೌರವ ನಮನಕ್ಕೆ ಸಾಮರಸ್ಯ ದಿವಸ ಪ್ರಯುಕ್ತ ಸಂವಿಧಾನ ರಚನೆಗೆ ಅಂಬೇಡ್ಕರ್ ನೀಡಿದ ಕೊಡುಗೆಯ ವಿಷಯದ ಬಗ್ಗೆ ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ ಉಡುಪಿಯ ಸಾಧ್ವಿ ಮಾಧ್ವಿ ಪಾಠಶಾಲೆಯಲ್ಲಿ ನಡೆಯಿತು. 

ನಗರದ ಹಲವು ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದರು. 

ಈ ಸಂಧರ್ಭದಲ್ಲಿ ಡಾ. ಶಿವಾನಂದ ನಾಯಕ್,ಉಡುಪಿ ಜಿಲ್ಲಾ ಪ್ರಮುಖರಾದ ರಾಜಶಂಕರ್, ನಗರ ಸಂಘಟನಾ ಕಾರ್ಯದರ್ಶಿ ರೋಹಿತ್,ನಗರ ಕಾರ್ಯದರ್ಶಿ ಮನೀಶ್ ಉಪಸ್ಥಿತರಿದ್ದರು.

 ಶುಕ್ರವಾರ ಡಾ.ಜಿ. ಶಂಕರ್ ಪದವಿ ಕಾಲೇಜಿನಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತರು ಕುಮಾರಿ ಅನನ್ಯ, ದ್ವಿತೀಯ ಸ್ಥಾನ ಕುಮಾರಿ ದೀಪ್ತಿ ಪಡೆದುಕೊಂಡಿರುತ್ತಾರೆ. ಬಹಮಾನವನ್ನು ಡಾ. ಶಿವಾನಂದ ನಾಯಕ್ ವಿತರಿಸಿರುತ್ತಾರೆ.

COSIDICI 11ನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪುರಸ್ಕೃತರಾದ ಕಾಪು ಹರೀಶ್ ನಾಯಕ್‌

Thumbnail
Posted On: 06 Dec 2025, 07:01 PM

ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಅಂಡ್ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಗೋಲ್ಡನ್ ಲೆಗೆಸಿ ಆಫ್ ಎಕ್ಸಲೆನ್ಸ್ (COSIDICI) ವತಿಯಿಂದ ಪ್ರತಿ ವರ್ಷ ಪ್ರದಾನವಾಗುವ ಹನ್ನೊಂದನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ಕಾಪುವಿನ ಯುವ ಉದ್ಯಮಿ ಕಾಪು ಹರೀಶ್ ಕಮಲಾಕ್ಷ ನಾಯಕ್ ಅವರಿಗೆ ಪ್ರದಾನಿಸಲಾಯಿತು.   ಈ ಪ್ರಶಸ್ತಿಯನ್ನು ಆಂಧ್ರಪ್ರದೇಶ ಸರ್ಕಾರದ MSME–SERP (NRI) ಎಂಪವರ್‌ಮೆಂಟ್ ಅಂಡ್ ರಿಲೇಶನ್ಸ್ ಸಚಿವ ಕೊಂಡಪ್ಪಳ್ಳಿ ಶ್ರೀನಿವಾಸ್ ಮತ್ತು ಇಂಡಸ್ಟ್ರೀಸ್, ಕಾಮರ್ಸ್ ಹಾಗೂ ಫುಡ್ ಪ್ರೊಸೆಸಿಂಗ್ ಸಚಿವ ಟಿ. ಜಿ. ಭಾರತ್ ದೆಹಲಿ COSIDICI ಸಂಜೀವ ಶರ್ಮಾರವರು ವಿಶಾಖಪಟ್ಟಣ MRDA ಚಿಲ್ಡ್ರನ್ ಅರೇನಾ ಸಭಾಂಗಣದಲ್ಲಿ ಪ್ರಧಾನಿಸಿದರು. ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಐದು ಮಂದಿ ಉದ್ಯಮಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕಾಪು ಹರೀಶ್ ನಾಯಕ್ ಅವರ ಸಾಧನೆಯನ್ನು ಸಚಿವರು ಅಭಿನಂದಿಸಿ, ಮುಂದೆ ಉದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರಗಳನ್ನು ತಲುಪಿ ಹೆಚ್ಚಿನ ರಾಷ್ಟ್ರ ಮಟ್ಟದ ಗೌರವಗಳನ್ನು ಗಳಿಸುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ COSIDICI ಅಧ್ಯಕ್ಷ ಡಾ. ಯುವರಾಜ್ IAS, ಕರ್ನಾಟಕ ರಾಜ್ಯ ಹಣಕಾಸು ಮಹಾಮಂಡಳಿಯ ಆಡಳಿತ ನಿರ್ದೇಶಕ ಡಾ. ಎಂ.ಟಿ. ರೇಜು IAS, ಕೆಎಸ್‌ಎಫ್‌ಸಿ ಜಿಎಮ್ ಮಂಜುನಾಥ್, ಆಂಧ್ರ ಪೆಟ್ರೋ ಕೆಮಿಕಲ್ ನ ಪಾರ್ಥ ಸಾರಥಿ ಹಾಗೂ ಅನುಪೂರ್ವಿ ಸಮೂಹ ಸಂಸ್ಥೆಯ ಪ್ರವರ್ತಕಿ ಮತ್ತು ಪೂರ್ವಿ ವೆಂಚರ್ಸ್‌ನ ಮಾಲಕಿ ಪೂರ್ವಿ ನಾಯಕ್ ಕಾಪು ಉಪಸ್ಥಿತರಿದ್ದರು.