Updated News From Kaup

ಬಿ ಸಿ ರೋಡ್ ಬಂಟಕಲ್ : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ಮಾಸಿಕ ಸಭೆ, ಪದಗ್ರಹಣ

Thumbnail
Posted On: 15 Apr 2026, 10:51 PM

ಶಿರ್ವ : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿ ಸಿ ರೋಡ್ ಬಂಟಕಲ್ ಇದರ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಎ.14ರಂದು ರೋಟರಿ ಕ್ಲಬ್ ಶಿರ್ವ ಬಿ ಸಿ ರೋಡ್ ಸಭಾಂಗಣದಲ್ಲಿ ಜರಗಿತು.

ಗೌರವಾಧ್ಯಕ್ಷರಾದ ಕೆ.ಆರ್. ಪಾಟ್ಕರ್ ರವರಿಂದ ಅಧಿಕಾರ ಹಸ್ತಾಂತರಿಸಿದರು.

ಅಧ್ಯಕ್ಷರಾಗಿ ತಿಯೋದೋರ್ ಮಥಾಯಸ್, 
ಉಪಾಧ್ಯಕ್ಷರಾಗಿ ದಿನೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸುರೇಶ್ ಸಾಲಿಯಾನ್, 
ಕೋಶಾಧಿಕಾರಿಯಾಗಿ ಅಶೋಕ್ ಸುವರ್ಣ ಆಯ್ಕೆಯಾದರು.

ಶ್ರೀತೇಶ್ ಕುಲಾಲ್ ಪ್ರಾರ್ಥಿಸಿ, ನವೀನ್ ಆಚಾರ್ಯ ವಾರ್ಷಿಕ ವರದಿ ವಾಚಿಸಿ, ಡೆನಿಸ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಎ.17,18,19 : ಟೀಮ್ ಮೊಗವೀರ್ಸ್ ಮಲ್ಪೆ : ಮಾಧವ ಮಂಗಳ ಟ್ರೋಫಿ - 2026

Thumbnail
Posted On: 15 Apr 2026, 10:38 PM

ಉಡುಪಿ : ಟೀಮ್ ಮೊಗವೀರ್ಸ್ ಮಲ್ಪೆ ವತಿಯಿಂದ ಮಾಧವ ಮಂಗಳ ಟ್ರೋಫಿ -  2026 ಎಪ್ರಿಲ್ 17, 18 ಮತ್ತು 19ರಂದು ಗಾಂಧಿ ಶತಾಬ್ಧಿ ಶಾಲಾ ಮೈದಾನ, ವಡಭಾಂಡೇಶ್ವರ, ಮಲ್ಪೆ ಇಲ್ಲಿ ಜರಗಲಿದೆ.

ಪ್ರಥಮ ಬಹುಮಾನ ರೂ. 2,55,555 ಹಾಗೂ ದ್ವಿತೀಯ ಬಹುಮಾನ ರೂ. 1,25,555 ಇರಲಿದೆ. ಪ್ರವೇಶ ಶುಲ್ಕ ರೂ.20,000 ಇದೆ ಎಂದು ಸಂಸ್ಥೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಪ್ರಶಾಂತ್ ಪಡುಕರೆ 9611289824, ಪ್ರಶಾಂತ್ ಮಲ್ಪೆ 8296365853, ಸತೀಶ್ ಜಿ. 9844464170

ಪಡುಬಿದ್ರಿ ಪುರದೊಡೆಯ ಹಾಗೂ ಪಡ್ಡೆದ್ರ ಉಲ್ಲಾಯೆ ವೀಡಿಯೋ ಆಲ್ಬಮ್ ಸಾಂಗ್ಸ್ ಪೋಸ್ಟರ್ ಬಿಡುಗಡೆ

Thumbnail
Posted On: 15 Apr 2026, 10:22 PM

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಗೊಳ್ಳಲಿರುವ ಪಡುಬಿದ್ರಿ ಪುರಾದೊಡೆಯ ಕನ್ನಡ ಹಾಗೂ ಪಡ್ಡೆದ್ರ ಉಲ್ಲಾಯೆ ತುಳು ವೀಡಿಯೋ ಆಲ್ಬಮ್  ಸಾಂಗ್ಸ್ ನ ಪೋಸ್ಟರನ್ನು ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ  ಬಿಡುಗಡೆಗೊಳಿಸಿದರು.

    ಈ ಸಂದರ್ಭದಲ್ಲಿ ಸಾಹಿತಿ ಸುರೇಶ್ ಪಡುಬಿದ್ರಿ, ನಿರ್ಮಾಪಕಿ ಶಾಲಿನಿ ಸುರೇಶ್, ನಿರ್ದೇಶಕರಾದ ಸಂತೋಷ್ ಪಡುಬಿದ್ರಿ, ದಿನೇಶ್ ಪಡುಬಿದ್ರಿ, ಯಶೋಧ ಪಡುಬಿದ್ರಿ, ರಚನ್ ಸಾಲ್ಯಾನ್, ಸಾಹಿಲ್ ಪಡುಬಿದ್ರಿ, ಅಶ್ವಥ್ ಅಚಾರ್ಯ ಪಾದೆಬೆಟ್ಟು, ರಮೇಶ್ ಸಾಲ್ಯಾನ್ ಉಪಸ್ಥಿತರಿದ್ದರು.

ಶಿರ್ವ : ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ - ಕಾವ್ಯಾಗೆ 99.16% ಅಂಕ

Thumbnail
Posted On: 15 Apr 2026, 07:18 PM

ಶಿರ್ವ : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಅವರು ವಾಣಿಜ್ಯ ವಿಭಾಗದಲ್ಲಿ 99.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.  

ಇವರು ಕಾಪು ಕಳತ್ತೂರು ಚಂದ್ರನಗರ ನಿವಾಸಿ ಸತೀಶ ಮೂಲ್ಯ ಹಾಗೂ ರತ್ನಾ ದಂಪತಿಯ ಸುಪುತ್ರಿ.

ಉಡುಪಿ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ & ಆರ್ಕಿಟೆಕ್ಟ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಭಗವಾನ್‌ ದಾಸ್ ಕೆ ಆಯ್ಕೆ

Thumbnail
Posted On: 15 Apr 2026, 07:15 PM

ಕಾಪು : ಉಡುಪಿ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ
ಭಗವಾನ್‌ ದಾಸ್ ಕೆ ಅವರು ಆಯ್ಕೆಯಾಗಿದ್ದಾರೆ. 

ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಪು : ವಿವಿಧ ಇಲಾಖೆಗಳ‌ ಆಶ್ರಯದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

Thumbnail
Posted On: 14 Apr 2026, 08:01 PM

ಕಾಪು : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಕಾಪು ತಾಲೂಕು ಇವರ ಸಂಯುಕ್ತ ಆಶ್ರಯದೊಂದಿಗೆ ಮಂಗಳವಾರ ಕಾಪು ಪ್ರಜಾಸೌಧದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿರ್ವ : ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಹಿ.ಪ್ರಾ. ಶಾಲೆ ಶತಸಂಭ್ರಮೋತ್ಸವದಲ್ಲಿ ಶಿಕ್ಷಕಿಯರಿಗೆ ಸನ್ಮಾನ

Thumbnail
Posted On: 14 Apr 2026, 08:00 PM

ಶಿರ್ವ :  ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಹಿ.ಪ್ರಾ. ಶಾಲೆ ಶತಸಂಭ್ರಮೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಕಳೆದ 4 ವರ್ಷಗಳಿಂದ ಸರಕಾರದ ವತಿಯಿಂದ ಯಾವುದೇ ಶಿಕ್ಷಕರಿಲ್ಲದೆ ಶಾಲಾ ಮುಖ್ಯ ಶಿಕ್ಷಕಿ ಸಹಿತ ಆರು ಶಿಕ್ಷಕಿಯರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಮುಖ್ಯ ಶಿಕ್ಷಕಿ ಸಂಗೀತಾ ಪಾಟ್ಕರ್ ಸಹಿತ ಸಹಶಿಕ್ಷಕಿಯರಾದ ಶಾಲಿನಿ ಆಚಾರ್ಯ, ವಿನುತಾ ಆಚಾರ್ಯ, ಸುಮತಿ, ರೇಶ್ಮಾ, ಶ್ವೇತಾ ಇವರನ್ನು ಸನ್ಮಾನಿಸಲಾಯಿತು.

ಕೇವಲ ಗೌರವ ಧನದಲ್ಲಿಯೇ ಸಂತೃಪ್ತಿಪಟ್ಟು,  ಯಾವುದೇ ಸರಕಾರಿ ಶಾಲೆಗೆ ಸರಿಸಾಟಿಯಾಗಿ ಅತ್ಯುತ್ತಮ ರೀತಿಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ನೆರವೇರಿಸಿದ್ದರು.

‌ಈ‌ ಸಂದರ್ಭ ಮುಖ್ಯ ಅತಿಥಿಗಳಾದ ದಾಮೋದರ ಶರ್ಮಾ ಬಾರ್ಕೂರು, ರೆ.ಫಾ. ರೋಶನ್ ಡಿಸೋಜ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಮಾಧವ ಕಾಮತ್, ಕೆ.ಆರ್.ಪಾಟ್ಕರ್, ಜಯರಾಮ ಪ್ರಭು, ಶಶಿಧರ ವಾಗ್ಲೆ, ರಾಮದಾಸ್ ಪ್ರಭು,ಉಮೇಶ ಪ್ರಭು ಪಾಲಮೆ, ಶಂಕರ ಶೆಟ್ಟಿ ಮಾನಿಪಾಡಿ, ದಿನೇಶ್ ದೇವಾಡಿಗ, ಅನಂತರಾಮ ವಾಗ್ಲೆ ಮತ್ತಿತರರು ‌ಉಪಸ್ಥಿತರಿದ್ದರು.

ಕಾಪು : ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Thumbnail
Posted On: 14 Apr 2026, 07:49 PM

ಕಾಪು : ಇಲ್ಲಿನ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನವನ್ನು ಮಂಗಳವಾರ   ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಎಂ.ನೀಲಾನಂದ ನಾಯ್ಕ್ ಇವರು ದೀಪ ಬೆಳಗಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ  ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಕೃಪ ಅಮ್ಮನ್ನ , ಜಾನೆಟ್, ಕಾಲೇಜು ಉಪನ್ಯಾಸಕರಾದ ಸೂರಥ್ ಕುಮಾರ್ ಹಾಗೂ ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿರ್ವ : ಕೊರಗರ ಕಟ್ಟುಕಟ್ಲೆಗಳು - ಆರಾಧನೆ ಮತ್ತು ಆಚರಣೆ ಪುಸ್ತಕ ಬಿಡುಗಡೆ

Thumbnail
Posted On: 08 Apr 2026, 09:53 AM

ಶಿರ್ವ : ಪಾಂಗಾಳ ಕೊರಗರ ಕೂಡು ಕುಟುಂಬದ ಕಟ್ಟುಕಟ್ಲೆಗಳು-ಆರಾಧನೆ ಮತ್ತು ಆಚರಣೆ" ಎಂಬ ಮಾರ್ಗದರ್ಶಕ ಪುಸ್ತಕವನ್ನು ಸೋಮವಾರ ಪಾಂಗಾಳ ಕೊರಗರ ದೈವ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು.

 ಕೂಡು ಕುಟುಂಬದ ಹಿರಿಯ ಮಹಿಳೆಯರಾದ ಗುರ್ಬಿ ಮತ್ತು ಅಮಣಿಯವರು ಜಂಟಿಯಾಗಿ ಪುಸ್ತಕ ಬಿಡುಗಡೆಗೊಳಿಸಿದರು. 

ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕೊರಗರ ಬಲೆಪಿನ ಗುರಿಕಾರ ಕುಡುಪ ಕೊರಗ ಅವರು ಕೊರಗ ಸಮುದಾಯದಲ್ಲಿ ಇದೊಂದು ಹೊಸ ಪ್ರಯತ್ನವಾಗಿದ್ದು, ಇತರರಿಗೂ ಮಾದರಿಯಾಗಿದೆ ಎಂದರು. ಸಭೆಯಲ್ಲಿ ಪಾದೆಬೆಟ್ಟು ಬಲೆಪಿನ ಪ್ರತಿನಿಧಿ ಸೋಮಶೇಖರ್, ಮುಂಡ್ಕೂರು ಬಲೆಪಿನ ಗುರಿಕಾರ ಅಣ್ಣು ಸಾಲಿಯಾನ್, ಕುರ್ಕಾಲು ಬಲೆಪಿನ ಗುರಿಕಾರ ಸುರೇಶ್ ಕುಂದರ್ ಸಕಾಲಿಕವಾಗಿ ಮಾತನಾಡಿದರು.

 ಸಚ್ಚೇರಿಪೇಟೆಯ ಕರ್ಣಾ ಸಾಲಿಯಾನ್, ಕಬ್ಯಾಡಿ ಬಲೆಪಿನ ಶಂಭು, ಪಾಂಗಾಳ ಕುಟುಂಬದ ಹಿರಿಯರಾದ ಕುಡ್ಡು ಕೊರಗ, ಗುರುವ ಮೂಡುಬೆಳ್ಳೆ, ಅಣ್ಣು ಕಡಂದಲೆ, ಉಪಸ್ಥಿತರಿದ್ದರು. ಕುಟುಂಬದ ಗುರಿಕಾರ ವಸಂತ ಪಾಂಬೂರು ಅಧ್ಯಕ್ಷತೆ ವಹಿಸಿದ್ದರು.

 ಸೌಮ್ಯಾ ಮತ್ತು ತಂಡದವರು ಪ್ರಾರ್ಥನಾ ಗೀತೆ ಹಾಡಿದರು. ಅಣ್ಣು ಪಿಲಾರು ವಂದಿಸಿದರು. ಜ್ಯೋತಿ ಪಾಂಬೂರು ಕಾರ್ಯಕ್ರಮ ನಿರೂಪಿಸಿದರು.

ಉಡುಪಿ : ಸರಕಾರಿ ಜಾಗ ಅಕ್ರಮ ಒತ್ತುವರಿ - ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ

Thumbnail
Posted On: 08 Apr 2026, 09:49 AM

ಉಡುಪಿ : ಹೊಸುರು ಗ್ರಾಮದ ಸರ್ವೆ ನಂ. 141ರಲ್ಲಿ ಸರಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡುತ್ತಿರುವ ಪ್ರಕರಣದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ಬಳಕೆ ಆರೋಪಗಳು ಕೇಳಿಬಂದಿವೆ.
ಈ ಬಗ್ಗೆ ಹೊಸಕಿರಣ ನ್ಯೂಸ್ ಸಂಪಾದಕರಾದ ಕಿರಣ್ ಪೂಜಾರಿ ಅವರು ಉಪಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

 ಗಣಪು ಶೇಡ್ತಿ ಎಂಬವರು ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಮಾಡುತ್ತಿದ್ದರೂ ಸಂಬಂಧಿತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ದೂರು ಪ್ರಕಾರ, ಈ ಅಕ್ರಮ ನಿರ್ಮಾಣವನ್ನು ನಿಲ್ಲಿಸುವಂತೆ ಹಲವು ಬಾರಿ ಲಿಖಿತ ಹಾಗೂ ದೂರವಾಣಿ ಮೂಲಕ ಮನವಿ ಸಲ್ಲಿಸಿದರೂ ಅಧಿಕಾರಿಗಳು ಕೇವಲ ನೋಟಿಸ್ ನೀಡುವುದರಲ್ಲೇ ಸೀಮಿತಗೊಂಡಿದ್ದು, ಕಾನೂನು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಅಲ್ಲದೆ, ಕಂದಾಯ ಕಾಯ್ದೆ 192(A) ಅಡಿಯಲ್ಲಿ ಯಾವುದೇ ಪ್ರಕರಣ ದಾಖಲಿಸದಿರುವುದು ಪ್ರಶ್ನೆಗೆ ಗ್ರಾಸವಾಗಿದೆ.
ಇದೇ ವೇಳೆ, ಮಾನ್ಯ ಉಚ್ಚ ನ್ಯಾಯಾಲಯದಿಂದ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿದ್ದರೂ, ಅಧಿಕಾರಿಗಳು ನ್ಯಾಯಾಲಯಕ್ಕೆ ಅಗತ್ಯ ವರದಿ ಸಲ್ಲಿಸದಿರುವುದು ಗಂಭೀರ ವಿಷಯವಾಗಿದೆ. ಇದರಿಂದ ಅಕ್ರಮ ನಿರ್ಮಾಣ ಕಾರ್ಯ ಈಗ ಮುಕ್ತಾಯ ಹಂತಕ್ಕೆ ತಲುಪಿದೆ ಎಂದು ದೂರುದಾರರು ತಿಳಿಸಿದ್ದಾರೆ.
ಮತ್ತೊಂದು ಅಂಶವಾಗಿ, ಮಾರ್ಚ್ 31, 2026ರಂದು ಸರಕಾರಿ ಜಾಗದಿಂದ ಕೆಂಪು ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಲಾಗಿದೆ.

ಸ್ಥಳೀಯ ಅಧಿಕಾರಿಗಳಾದ ಗ್ರಾಮ ಲೆಕ್ಕಿಗ (V.A), ರಾಜಸ್ವ ನಿರೀಕ್ಷಕ (R.I) ಹಾಗೂ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಆಗ್ರಹಿಸಿದ್ದಾರೆ. ಅಲ್ಲದೆ, ರಾಜಕೀಯ ಒತ್ತಡದ ಕಾರಣದಿಂದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬುದೂ ದೂರುದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪಲೋಕಾಯುಕ್ತರನ್ನು ಮನವಿ ಮಾಡಲಾಗಿದೆ.