Updated News From Kaup

ಉಡುಪಿ : ಜನತಾದಳ ಪಕ್ಷ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆ

Thumbnail
Posted On: 20 May 2024, 01:29 PM

ಉಡುಪಿ : ಜನತಾದಳ ಜಾತ್ಯಾತೀತ ಪಕ್ಷ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ವರಿಷ್ಠರಾದ ಹೆಚ್. ಡಿ.ದೇವೇಗೌಡರ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ದೇವೇಗೌಡರ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ಮಾಡುವ ಮೂಲಕ ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿ ಯವರು ಹುಟ್ಟುಹಬ್ಬ ಆಚರಿಸಿದರು. ಈ ಸಂದರ್ಭ ಅವರು ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ, ಕಾಂಗ್ರೆಸ್ ಪಕ್ಷ ಷಡ್ಯಂತರವನ್ನು ಮಾಡುವ ಮುಖಾಂತರ ಅನೇಕ ಬೆಳವಣಿಗೆಯನ್ನು ಕರ್ನಾಟಕದಲ್ಲಿ ಮಾಡುತ್ತಿದೆ. ತನ್ನ ಕಾರ್ಯಕರ್ತರ ಮುಖಾಂತರ ದೇವೇಗೌಡರ ಭಾವಚಿತ್ರಕ್ಕೆ ಮಸಿಯನ್ನು ಬಳಿದಿದ್ದಾರೆ ಇದು ಅತ್ಯಂತ ಕ್ರೂರವಾದ ಕೃತ್ಯ, ಮಾಜಿ ಪ್ರಧಾನಿ ಆದಂತಹ ದೇವೇಗೌಡರು ನಮ್ಮ ರಾಜ್ಯಕ್ಕೆ ದೇಶಕ್ಕೆ ಯಾವ ಕೊಡುಗೆಯನ್ನು ಕೊಟ್ಟಿದ್ದಾರೆ ಎಂಬುದು ನಾಡಿನ ಜನತೆಗೆ ಗೊತ್ತಿದೆ. ಅದಕ್ಕೋಸ್ಕರವಾಗಿ ನಾವಿವತ್ತು ಅವರ ಹುಟ್ಟುಹಬ್ಬವನ್ನು ಆಚರಿಸಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕವನ್ನು ಮಾಡಿದ್ದೇವೆ. ಏನು ಇವರು ಮಸಿ ಬಳಿದಿದ್ದಾರೆ ಇದೆಲ್ಲವೂ ಪರಿಶುದ್ಧವಾಗಲಿ, ದೇವೇಗೌಡರು ಇನ್ನಷ್ಟು ವರ್ಷ ಬಾಳಲಿ, ಅವರಿಗೆ ಒಳ್ಳೆಯಆಯುಷ್ಯ, ಆರೋಗ್ಯವನ್ನು ಭಗವಂತ ಕರುಣಿಸಲಿ ಇನ್ನಷ್ಟು ರಾಜ್ಯಕ್ಕೆ ದೇಶಕ್ಕೆ ಅವರ ಸೇವೆ ದೊರಕಲಿ ಅದರೊಂದಿಗೆ ನಮ್ಮ ಪಕ್ಷ ವನ್ನೂ ಕಟ್ಟಿ ಬೆಳೆಸುವಂತಹ ಹುಮ್ಮಸ್ಸು ಅವರಲ್ಲಿ ಇದೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ನೈರುತ್ಯ ಶಿಕ್ಷಣ ಕ್ಷೇತ್ರ ಮತ್ತು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ/ಜೆಡಿಎಸ್ ಜಂಟಿ ಅಭ್ಯರ್ಥಿಗಳಾದ ಎಸ್. ಎಲ್ ಭೋಜೇಗೌಡ ಮತ್ತು ಡಾ. ಧನಂಜಯ್ ಸರ್ಜೆ ಇವರ ಗೆಲುವಿಗೆ ಯಾವ ರೀತಿಯಾಗಿ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು. ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ಜಯಕುಮಾರ್ ಪರ್ಕಳ, ರಮೇಶ್ ಕುಂದಾಪುರ, ಗಂಗಾಧರ್ ಭಿರ್ತಿ, ರಾಮರಾವ್, ರಶೀದ್, ಕೀರ್ತಿರಾಜ್, ಶ್ರೀಕಾಂತ್ ಕಾರ್ಕಳ, ಎಂ.ಡಿ ರಫೀಕ್, ವೆಂಕಟೇಶ್ ಎಂ.ಟಿ, ದೇವರಾಜ ತೊಟ್ಟಂ, ಪದ್ಮನಾಭ. ಆರ್. ಕೋಟ್ಯಾನ್, ರಂಗ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಕಟಪಾಡಿ : ಕೋಟೆ ನಾಗರಿಕ ಸೇವಾ ಸಮಿತಿ ವತಿಯಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ; ಸನ್ಮಾನ

Thumbnail
Posted On: 19 May 2024, 03:49 PM

ಕಟಪಾಡಿ : ಸಾಧಿಸುವ ಮನಸ್ಸುಗಳಿಗೆ ಹುಟ್ಟೂರ ಸನ್ಮಾನ ಅತಿ ಮುಖ್ಯವಾಗಿರೋದು. ನಮ್ಮೂರಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ನಾವು ಗುರುತಿಸಿರುವುದು ಹೆಮ್ಮೆಯ ಸಂಗತಿ ಇದು ವಿದ್ಯಾರ್ಥಿಗಳಿಗೆ ಇನ್ನೊಂದಷ್ಟು ಸ್ಪೂರ್ತಿಯ ಜೊತೆಗೆ ಜವಾಬ್ದಾರಿಯನ್ನು ನೀಡುತ್ತದೆ ಎಂದು ಕಟಪಾಡಿಯ ಸೃಷ್ಟಿ ಫೌಂಡೇಶನ್ ಅಧ್ಯಕ್ಷರಾದ ಪ್ರಕಾಶ್ ಸುವರ್ಣ ಕಟಪಾಡಿ ಹೇಳಿದರು. ಅವರು ಕೋಟೆ ನಾಗರಿಕ ಸೇವಾ ಸಮಿತಿ ವತಿಯಿಂದ ಕೋಟೆ ಸೌಜನ್ಯ ನಿಲಯದಲ್ಲಿ ಭಾನುವಾರ ನಡೆದ ಅತ್ಯಧಿಕ ಅಂಕ ಗಳಿಸಿದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ - ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಯೋಗೀಶ್ ವಿ.ಕೋಟ್ಯಾನ್ ಮಾತನಾಡಿ, ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹ ನೀಡಿದ್ದಲ್ಲಿ ಮುಂದಿನ ಶೈಕ್ಷಣಿಕ ವ್ಯಾಸಂಗಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದರು. 10ನೇ ತರಗತಿಯ ಪರೀಕ್ಷೆಯಲ್ಲಿ 90 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ ಮುನಿಶಾ ಆರ್ ಕೋಟ್ಯಾನ್, ಪೂರ್ವಿ ಜೆ ಸಾಲಿಯಾನ್, ಧನ್ಯಶ್ರೀ, ನವ್ಯ ಡಿ.ಜತ್ತನ್, ಧನುಷ್ ,ಲಿಖಿತ್ ಆರ್. ಜೆ ಜತ್ತನ್ ಇವರನ್ನು ಸನ್ಮಾನಿಸಲಾಯಿತು. ಕೋಟೆ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷರಾದ ಕೃಷ್ಣ ಅಮೀನ್ ಕೋಟೆ, ಬೆಂಗಳೂರಿನ ಮೋರ್ಗೆನ್ ಸ್ಟಾನ್ಲಿ ಸಂಸ್ಥೆಯ ಉಪಾಧ್ಯಕ್ಷ ರೋಷನ್ ಪೂಜಾರಿ, ಪ್ರಸನ್ನ ಕೋಟೆ, ಸ್ಥಳೀಯರಾದ ಗೀತಾ ಬಿ ಶೆಟ್ಟಿ, ಸಂಜೀವ್ ಮೆಂಡನ್ ಉಪಸ್ಥಿತರಿದ್ದರು. ಕಟಪಾಡಿ ಸ್ವಸ್ತಿಕ್ ಕಲಾಸಂಘದ ಅಧ್ಯಕ್ಷರಾದ ರಮೇಶ್ ಕೋಟ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಧೀರಜ್ ಬೆಳ್ಳಾರೆ ನಿರೂಪಿಸಿದರು. ಕಾರ್ತಿಕ್ ವಂದಿಸಿದರು.

ಮೇ 19 - 20 : ಪರಿಚಯ ಪ್ರತಿಷ್ಠಾನ ಪಾಂಬೂರು - ಬಹುಮುಖಿ 2024 ಸಾಂಸ್ಕೃತಿಕ ಉತ್ಸವ

Thumbnail
Posted On: 19 May 2024, 10:35 AM

ಕಾಪು : ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವ ಪಾಂಬೂರಿನ ಪರಿಚಯ ಪ್ರತಿಷ್ಠಾನವು ಬಹುಮುಖಿ 2024 ಸಾಂಸ್ಕೃತಿಕ ಉತ್ಸವವನ್ನು ಇದೇ ಮೇ 19 ಮತ್ತು ಮೇ 20ರಂದು ಪಾಂಬೂರು ರಂಗಪರಿಚಯದಲ್ಲಿ ಆಯೋಜಿಸಿದೆ. ಮೇ 19ರಂದು ಕೊಂಕಣಿಯ ಖ್ಯಾತ ನಾಟಕಕಾರ ಡೊ. ಫಾದರ್ ಆಲ್ವಿನ್ ಸೆರಾವೊರವರೊಂದಿಗೆ ಮುಖಾಮುಖಿ, ಸಂವಾದ ಹಾಗೂ ಗೌರವಾರ್ಪಣೆಯ ರಂಗ್‌ತರoಗ್ ಕಾರ‍್ಯಕ್ರಮ ಜರಗಲಿದೆ. ಸಂವಾದದ ಬಳಿಕ ಅಸ್ತಿತ್ವ (ರಿ), ಮಂಗಳೂರು ತಂಡದಿOದ ಕ್ರಿಸ್ಟೋಫರ್ ನೀನಾಸಮ್ ನಿರ್ದೇಶನದ ಪ್ರಸಿದ್ದ ಕೊಂಕಣಿ ನಾಟಕ ‘ಸಳ್ಗಿ’ ಪ್ರದರ್ಶನಗೊಳ್ಳಲಿದೆ. ಮೇ 20ರಂದು ದೇಶವಿದೇಶಗಳಲ್ಲಿ ಖ್ಯಾತಿ ಗಳಿಸಿರುವ ಯುವಸಂಗೀತಗಾರ ಈಶಾನ್ ಫೆರ್ನಾಂಡಿಸ್ ಮತ್ತು ತಂಡದಿOದ “Transcending Boundaries-II” ಜಾಗತಿಕ ವಿವಿಧ ಭಾಷೆಗಳ ಸಂಗೀತ ರಸಮಂಜರಿ ಕಾರ‍್ಯಕ್ರಮ ಪ್ರಸ್ತುತಗೊಳ್ಳಲಿದೆ. ಅಂತರಾಷ್ಟ್ರೀಯ ಖ್ಯಾತಿಯ ಕುಂಚ ಕಲಾವಿದ ವಿಲ್ಸನ್ ಕಯ್ಯಾರ್‌ರವರು ಎಲ್ಲಾ ಹಾಡುಗಳನ್ನು ತನ್ನ ಕುಂಚ ಕೈಚಳಕದಿಂದ ವಿವಿಧ ವರ್ಣಗಳಲ್ಲಿ ಚಿತ್ರಿಸಲಿದ್ದಾರೆ. ಕಾರ‍್ಯಕ್ರಮಗಳಿಗೆ ಉಚಿತ ಪ್ರವೇಶವಿದ್ದು ಕಲಾಸಕ್ತರಿಗೆ ಹಾರ್ದಿಕ ಸ್ವಾಗತ. ಎಲ್ಲಾ ಕಾರ‍್ಯಕ್ರಮಗಳು ಸಾಯಂಕಾಲ ಗಂಟೆ 6.30ಕ್ಕೆ ಸರಿಯಾಗಿ ಆರಂಭಗೊಳ್ಳಲಿವೆ ಎಂದು ಪರಿಚಯ ಪ್ರಕಟಣೆ ತಿಳಿಸಿದೆ.

ಕರಾವಳಿ ಸೊಗಡಿನ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಒಲವು ತೋರಬೇಕಿದೆ : ಬಿ.ಜಯಕರ್ ಶೆಟ್ಟಿ ಇಂದ್ರಾಳಿ

Thumbnail
Posted On: 19 May 2024, 10:19 AM

ಉಡುಪಿ : ಸಿನೆಮಾಗಳಲ್ಲಿ ಕರಾವಳಿಯ ಕಲಾವಿದರು, ತಂತ್ರಜ್ಞರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ಮಾಡುತ್ತಿದ್ದು, ನಮ್ಮ ಕರಾವಳಿಯ ಸೊಗಡನ್ನು ಪ್ರತಿಬಿಂಬಿಸುವ ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಒಲವು ತೋರಬೇಕಿದೆ ಎಂದು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಅಮ್ಚೆ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣಗೊಳ್ಳುತ್ತಿರುವ ಪ್ರೊಡಕ್ಷನ್ ನಂ.1 ಮಕ್ಕಳ ಕನ್ನಡ ಚಲನಚಿತ್ರದ ಕಲಾವಿದರ ಆಯ್ಕೆ ಶಿಬಿರವನ್ನು ಜಗನ್ನಾಥ ಸಭಾ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಶಿರ್ವ ಮಾತನಾಡಿ, ಕರಾವಳಿಯಲ್ಲಿ ಕೊಂಕಣಿ, ಕನ್ನಡ, ತುಳು ಭಾಷೆಯ ಚಿತ್ರಗಳಿಗೆ ಉತ್ತಮ ಪ್ರೇಕ್ಷಕರಿದ್ದಾರೆ. ಮೂರು ಭಾಷೆಗಳ ಸಿನೆಮಾಗಳ ನಿರ್ಮಾಣಕ್ಕೆ ವಿಫುಲ ಅವಕಾಶಗಳಿವೆ ಎಂದರು. ಚಲನಚಿತ್ರ ಕಲಾವಿದರಾದ ಶೋಭರಾಜ್ ಪಾವೂರು, ರಾಹುಲ್ ಅಮೀನ್, ವಿನೀತ್ ಕುಮಾರ್, ಶೈಲಶ್ರೀ ಮುಲ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ನಿರ್ಮಾಪಕರಾದ ದತ್ತಾತ್ರೇಯ ಪಾಟ್ಕರ್, ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ, ಚಂದ್ರಕಲಾ ರಾವ್, ಕ್ಲಿಂಗ್ ಜಾನ್ಸನ್ ಉಪಸ್ಥಿತರಿದ್ದರು. ಚಿತ್ರ ನಿರ್ದೇಶಕ ಸಂದೀಪ್ ಕಾಮತ್ ಸ್ವಾಗತಿದರು. ಛಾಯಾಗ್ರಾಹಕ ಭುವನೇಶ್ ಪ್ರಭು ವಂದಿಸಿದರು.

ಟೋಲ್ ನಲ್ಲಿ ಸ್ಥಳೀಯ ವಾಹನಗಳಿಗೆ ನೀಡಿದ ವಿನಾಯಿತಿ ರದ್ದು ಪಡಿಸಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ : ಶೇಖರ್ ಹೆಜ್ಮಾಡಿ

Thumbnail
Posted On: 18 May 2024, 09:58 PM

ಹೆಜಮಾಡಿ : ಹೆಜಮಾಡಿ, ಸಾಸ್ತಾನ ಹಾಗು ತೊಕ್ಕೊಟ್ಟು ಟೋಲ್ ಪ್ಲಾಜಾಗಳನ್ನು ಹೊಸ ಕಂಪನಿಯು ಟೋಲ್ ಸಂಗ್ರಹಕ್ಕೆ ಗುತ್ತಿಗೆ ಪಡೆದಿದ್ದು, ಈ ಹಿಂದೆ 2016 ರಿಂದ ನಿರಂತರವಾಗಿ ಹೋರಾಟ ಮಾಡುವುದರ ಮೂಲಕ ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿಯನ್ನು ಪಡೆದಿರುತ್ತೇವೆ. ಸದ್ಯ ಟೋಲ್ ಪ್ಲಾಜಾದ‌ ಅಧಿಕಾರಿಗಳು ಸ್ಥಳೀಯ ವಾಹನಗಳು ಟೋಲ್ ನಲ್ಲಿ ಸಂಚಾರಿಸಿದಾಗ ಅವರ ಪಾಸ್ಟ್ ಟಾಗ್ ನಿಂದ ಹಣ ಕಡಿತಗೊಳಿಸುವ ಪ್ರಕ್ರಿಯೆ ಬಗ್ಗೆ ಸ್ಥಳೀಯ ವಾಹನ ಮಾಲೀಕರಿಂದ ದೂರುಗಳು ಬಂದಿರುತ್ತದೆ. ಸ್ಥಳೀಯರಿಗೆ ನೀಡಿದ ಟೋಲ್ ವಿನಾಯಿತಿಯನ್ನು ಸಂಪೂರ್ಣ ಕಿತ್ತು ಹಾಕುವ ಹುನ್ನಾರವಿದು. ಟೋಲ್ ಪ್ಲಾಜಾದಲ್ಲಿ ಕಂಪನಿಯು ಕೋಟ್ಯಾಂತರ ರೂಪಾಯಿಯನ್ನು ಸಾರ್ವಜನಿಕರಿಂದ ಟೋಲ್ ನೆಪದಲ್ಲಿ ‌ಸಂಗ್ರಹಿಸಿ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ನೀಡುವಲ್ಲಿ ವಿಫಲ‌ಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ದುರವಸ್ಥೆಯನ್ನು ಹೇಳತಿರದು. ದಿನನಿತ್ಯ, ಪ್ರತಿ ಕ್ಷಣ ರಾಷ್ಟ್ರೀಯ ಹೆದ್ದಾರಿಯ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕರ ಅಮೂಲ್ಯ ಜೀವಗಳು ಬಲಿಯಾಗುತ್ತಿರುವುದು ರೂಢಿಯಾಗಿದೆ. ಈ ಬಗ್ಗೆ ‌ಕಂಪನಿಯು ಯಾವುದೇ ಪರಿಹಾರವನ್ನು ನೀಡುವುದಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಜಮಾಡಿ ಟೋಲ್ ನಲ್ಲಿ ‌ಸ್ಥಳೀಯ ಲೋಕೋಪಯೋಗಿ ‌ರಸ್ತೆಗೆ ಟೋಲ್ ‌ನಿಗದಿಪಡಿಸಿದ್ದು ಕಂಪನಿಯ ಕಾನೂನು ಬಾಹಿರ ಕ್ರಮವಾಗಿರುತ್ತದೆ. ಅನೇಕ ಹೋರಾಟಗಳ ಮೂಲಕ ‌ಸ್ಥಳೀಯ ಯುವ ಜನರಿಗೆ ಉದ್ಯೋಗವನ್ನು ನೀಡಿದ್ದು, ಸದ್ಯ ಸ್ಥಳೀಯ ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯು ಕಂಪನಿಯಿಂದ ನಡೆಯುತ್ತಿರುವುದು ಕಂಡು ಬಂದಿದೆ. ಸ್ಥಳೀಯ ವಾಹನಗಳಿಗೆ ಈ ಹಿಂದೆ ನೀಡಿದ ವಿನಾಯಿತಿಯನ್ನು ವಜಾಗೊಳಿಸಿದರೆ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಖಾಸಗಿ ಜಾಗದಲ್ಲಿ ‌ರಸ್ತೆ ನಿರ್ಮಾಣ ಮಾಡುವುದರ ಮೂಲಕ ‌ಉಗ್ರ ಹೋರಾಟ‌ವನ್ನು ಹಮ್ಮಿಕೊಳ್ಳಲಾಗುವುದು. ಈ ಬಗ್ಗೆ ‌ಜನಪ್ರತಿನಿಧಿಗಳ‌, ವಾಹನ ಮಾಲಿಕರ ಹಾಗು ಸಾರ್ವಜನಿಕರ ಸಭೆಯನ್ನು ಕರೆದು ಚರ್ಚಿಸಿ ಮುಂದಿನ ‌ಹೋರಾಟಗಳ ರೊಪರೇಷೆಗಳನ್ನು ಸಿದ್ದ ಪಡಿಸಲಾಗುವುದು ಎಂದು ಟೋಲ್ ವಿರೋಧಿ ಹೋರಾಟ ‌ಸಮಿತಿ ಅಧ್ಯಕ್ಷರಾದ ಶೇಖರ ಹೆಜ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

Thumbnail
Posted On: 16 May 2024, 09:13 PM

ಕಾರ್ಕಳ : Institute of Company Secretary of India ರವರು ಮೇ 4, 2024 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,ಎ.ಎಸ್. ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, ಶ್ರೀ ಹರಿ ಹಾಗೂ ಸುವಿಕ್ಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಪಿ ಯು ಸಿ ಯಲ್ಲೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌, ಆಡಳಿತ ಮಂಡಳಿಯವರು, CSEET ಸಂಯೋಜಕರಾದ ಜ್ಞಾನೇಶ್ ಕೋಟ್ಯಾನ್, ಉಪನ್ಯಾಸಕ ವರ್ಗದವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

Thumbnail
Posted On: 16 May 2024, 09:12 PM

ಕಾರ್ಕಳ : Institute of Company Secretary of India ರವರು ಮೇ 4, 2024 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ, ಆಶೆಲ್,ಕೀರ್ತಿ ಪಾಟ್ಕರ್, ಅನ್ವಿತ, ಭವಿಷ್ಯ ಶೆಟ್ಟಿ, ರಾಹುಲ್, ಅನನ್ಯ ಜೈನ್, ಪ್ರತ್ವೀಕ್, ಪ್ರಥಮ್,ಎ.ಎಸ್. ಚಿನ್ಮಯ, ಪ್ರಜ್ವಲ್ ರಾವ್, ಸುಖಿ ಸುಭಾಶ್, ಶ್ರೇಯಾ, ವಿನಯ್ ಪ್ರಶಾಂತ್, ಸುಪ್ರೀತ್ ಹೆಗ್ಡೆ, ಶ್ರೀ ಹರಿ ಹಾಗೂ ಸುವಿಕ್ಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಪಿ ಯು ಸಿ ಯಲ್ಲೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್‌ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌, ಆಡಳಿತ ಮಂಡಳಿಯವರು, CSEET ಸಂಯೋಜಕರಾದ ಜ್ಞಾನೇಶ್ ಕೋಟ್ಯಾನ್,ಉಪನ್ಯಾಸಕ ವರ್ಗದವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

ನೈರುತ್ಯ ಪದವೀಧರರ ಕ್ಷೇತ್ರ : ರಘುಪತಿ ಭಟ್ ನಾಮಪತ್ರ ಸಲ್ಲಿಕೆ

Thumbnail
Posted On: 16 May 2024, 08:54 PM

ಉಡುಪಿ : ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ. ಶಿವಚರಣ್ ಶೆಟ್ಟಿ, ವಿಶ್ವನಾಥ್ ಭಟ್, ಚೇತನ್ ಮಂದಣ್ಣ, ಎಂ. ಶಂಕರ್ ಉಪಸ್ಥಿತರಿದ್ದರು.

ಮೇ 18 : ಶ್ರೀ ಪಲಿಮಾರು ಮೂಲ ಮಠದಲ್ಲಿ ವಿಹಿತಮ್ ಕಾರ್ಯಕ್ರಮ

Thumbnail
Posted On: 16 May 2024, 09:54 AM

ಪಲಿಮಾರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 ರಿಂದ 40 ರ ವಯೋಮಿತಿಯ ತ್ರಿಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮತ್ತು ಪೇಜಾವರ ಶ್ರೀಗಳ ಅಭಿನಂದನ ಸಮಾರಂಭವು ಮೇ 18, ಶನಿವಾರ ಪಲಿಮಾರು ಮೂಲ ಮಠದಲ್ಲಿ ನಡೆಯಲಿದೆ ಎಂದು ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹೇಳಿದರು. ಅವರು ಬುಧವಾರ ಪಲಿಮಾರು ಮೂಲ ಮಠದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ವಿಹಿತಮ್ ಸಮಾವೇಶವು ಹಿಂದೂ ಸಮಾಜದ ಭಾಗವಾದ ಬ್ರಾಹ್ಮಣ ಸಮಾಜದಲ್ಲಿಯ ಯುವಕರನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅತಿಥಿಗಳಾಗಿದ್ದು, ವಿಚಾರಗೋಷ್ಠಿಗಳ ಮೂಲಕ ಚಿಂತನ ಮಂಥನ ನಡೆಯಲಿದೆ ಎಂದರು. ಪಲಿಮಾರು ಮಠದ ದಿವಾನರಾದ ಜಿ.ವಾಸುದೇವ ಭಟ್ ಪೆರಂಪಳ್ಳಿ ಮಾತನಾಡಿ ಬ್ರಾಹ್ಮಣ ಸಮಾಜದ ಜೀವನಕ್ರಮ, ಅದರ ಸಂರಕ್ಷಣೆ, ವರ್ತಮಾನದ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜ ಆಂತರಿಕ ಮತ್ತು ಬಾಹ್ಯವಾಗಿ ಎದುರಿಸುತ್ತಿರುವ ಗಂಭೀರ ಸವಾಲುಗಳ ಬಗ್ಗೆ ಯುವ ಮನಸ್ಸುಗಳ ನಡುವೆ ಚಿಂತನ ಮಂಥನ ಹಾಗೂ ಬ್ರಾಹ್ಮಣರ ಸಂಘಟನಾತ್ಮಕ ಪ್ರಕ್ರಿಯೆಗಳಿಗೆ ಒಂದು ಶಕ್ತಿ ಮತ್ತು ಪ್ರೇರಣೆಯನ್ನು ನೀಡಬೇಕೆಂಬ ಉದ್ದೇಶದಿಂದ ವಿಹಿತಮ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಉಭಯ ಜಿಲ್ಲೆಗಳ 18-40 ವಯಸ್ಸಿನ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾಭ್ಯಾಸ ಮತ್ತುಉದ್ಯೋಗ ವ್ಯವಹಾರಗಳನ್ನು ನಡೆಸುತ್ತಿರುವ ಯುವಕರನ್ನು ಹಾಗೂ ಬೆಂಗಳೂರು, ಮೈಸೂರು ಹಾಗೂ ಇತರೆಡೆ ನೆಲೆಸಿರು ಕರಾವಳಿ ಮೂಲದ ತ್ರಿಮತಸ್ಥ ಯುವಕರನ್ನು ಆಹ್ವಾನಿಸಲಾಗಿದೆ. ಸುಮಾರು 600 ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ಜೊತೆಗೆ ಅವರನ್ನು ಅಭಿನಂದಿಸಲಾಗುವುದು. ವಿವಿಧ ಮಠಗಳ ಮಠಾಧಿಪತಿಗಳಿಂದ ಮಾರ್ಗದರ್ಶನ, ವಿವಿಧ ಕ್ಷೇತ್ರದ ಸಾಧಕರು ಉಪಸ್ಥಿತರಿರುವರು. ಬ್ರಾಹ್ಮಣರ ಅನನ್ಯ ಜೀವನ ಕ್ರಮ ಮತ್ತು ಸಂರಕ್ಷಣೆಯ ಅಗತ್ಯತೆ, ಬ್ರಾಹ್ಮಣ ಸಮಾಜದ ಆಂತರಿಕ ಮತ್ತು ಬಾಹ್ಯ ಸವಾಲುಗಳು ಮತ್ತು ಪರಿಹಾರೋಪಾಯಗಳ ವಿಚಾರದಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ವಿಷ್ಣು ಆಚಾರ್ಯ, ಪ್ರಣವ್ ಆಚಾರ್ಯ, ರಾಹುಲ್ ಬಾರಿತ್ತಾಯ, ಶಶಾಂಕ್ ಶಿವತ್ತಾಯ ಮತ್ತಿತರರು ಉಪಸ್ಥಿತರಿದ್ದರು.

ನೈಋತ್ಯ ಶಿಕ್ಷಕರ ಕ್ಷೇತ್ರ - ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

Thumbnail
Posted On: 15 May 2024, 10:37 PM

ಮಂಗಳೂರು : ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಬುಧವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಾ.ಎಸ್.ಆರ್.ಹರೀಶ್ ಆಚಾರ್ಯ, ರಾಜಕೀಯ ಪಕ್ಷಗಳು ಕರಾವಳಿ ಜಿಲ್ಲೆಗಳ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದಲ್ಲಿ ಯಾವುದೇ ಪ್ರಾತಿನಿಧ್ಯ ನೀಡದೇ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದರಿಂದ ಕರಾವಳಿ ಭಾಗದ ಇರುವಿಕೆಯ ಅಸ್ತಿತ್ವವನ್ನೇ ನಿರಾಕರಿಸಿದಂತಾಗಿದೆ. ಆದುದರಿಂದ ಶಿಕ್ಷಕರ ಮತ್ತು ಪದವೀಧರರ ಸ್ವಾಭಿಮಾನದ ಪ್ರತೀಕವಾಗಿ ಈ ಬಾರಿಯ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು. ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಪ್ಪ ಕಲ್ಮನಿ, ಪ್ರಮುಖರಾದ ಮನಮೋಹನ್ ಬಳ್ಳಡ್ಕ, ರಂಜಿತ್ ಪಿ.ಜೆ., ಡಾ.ಅರುಣ್ ಕುಮಾರ್ ಮತ್ತು ನಿತೇಶ್ ಸಾಲಿಯಾನ್ ಈ ಸಂದರ್ಭ ಉಪಸ್ಥಿತರಿದ್ದರು.