Updated News From Kaup
ಫೆಬ್ರವರಿ 26 : ಶ್ರೀ ಹಳೆ ಮಾರಿಯಮ್ಮ ಸಭಾಗೃಹದಲ್ಲಿ ಗ್ಯಾರಂಟಿ ಸಮಾವೇಶ

Posted On: 23-02-2024 02:55PM
ಕಾಪು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿರುವ ಹಿನ್ನೆಲೆಯಲ್ಲಿ ಫೆಬ್ರವರಿ 26 ರಂದು ಪೂರ್ವಾಹ್ನ 10.30ಕ್ಕೆ ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಗೃಹ ಇಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿರುತ್ತದೆ.
ಗ್ಯಾರಂಟಿ ಸಮಾವೇಶಕ್ಕೆ ಜನಪ್ರತಿನಿಧಿಗಳು ಹಾಗೂ ಫಲಾನುಭವಿಗಳು, ಸಾರ್ವಜನಿಕರು ಭಾಗಿಯಾಗಿ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯುವ ಕುರಿತಾದ ಮಾಹಿತಿಯನ್ನು ಸಹ ಸಮಾವೇಶದ ಮೂಲಕ ಪಡೆಯಬಹುದೆಂದು ಕಾಪು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 23 : ಬ್ರಹ್ಮರಪಾಡಿ, ಪಾಂಗಾಳದ ಆದಿ ಆಲಡೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಆಯನೋತ್ಸವ

Posted On: 22-02-2024 08:56PM
ಪಾಂಗಾಳ : ಕಟಪಾಡಿ ಪೇಟೆ ಶ್ರೀ ವೆಂಕಟರಮಣ ದೇವಳದ ಆಡಳಿತಕ್ಕೆ ಒಳಪಟ್ಟ ಬ್ರಹ್ಮರಪಾಡಿ ಪಾಂಗಾಳದ ಆದಿ ಆಲಡೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಆಯನೋತ್ಸವ ಫೆಬ್ರವರಿ 23, ಶುಕ್ರವಾರ ಧ್ವಜಾರೋಹಣದಿಂದ ಮೊದಲ್ಗೊಂಡು ಫೆಬ್ರವರಿ 26, ಸೋಮವಾರ ಸಂಪ್ರೋಕ್ಷಣೆಯವರೆಗೆ ಜರಗಲಿದೆ.
ಫೆಬ್ರವರಿ 23 ರಂದು ಮಧ್ಯಾಹ್ನ ಗಂಟೆ 12.05ಕ್ಕೆ ನಡೆಯುವ ಧ್ವಜಾರೋಹಣ, ಪಲ್ಲಪೂಜೆ, ಬ್ರಾಹ್ಮಣ ಸಂತರ್ಪಣೆ ಮತ್ತು ಮಹಾಭೂರಿ ಅನ್ನಸಂಪರ್ಪಣೆ ಹಾಗೂ ಸಾಯಂಕಾಲ ಆಯನೋತ್ಸವ, ರಂಗ ಪೂಜೆ, ಢಕ್ಕೆ ಬಲಿ, ಬ್ರಹ್ಮಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ ಎಂದು ಕ್ಷೇತ್ರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಯನೋತ್ಸವದ ನೇರಪ್ರಸಾರ ನಮ್ಮ ಕಾಪು ವಾಹಿನಿಯಲ್ಲಿ ವೀಕ್ಷಿಸಬಹುದು.
ಫೆಬ್ರವರಿ 23 : ಪಾಂಗಾಳದಲ್ಲಿ ನಡೆಯಲಿದೆ ವೈಭವದ ಸಿರಿಜಾತ್ರೆ

Posted On: 22-02-2024 07:07AM
ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಫೆಬ್ರವರಿ 23, ಶುಕ್ರವಾರದಂದು ಜರಗಲಿದೆ. ಫೆ.23, ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.
ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09-30 ಕ್ಕೆ ವೈಭವ್ ಬೈಗಿನ ಬಲಿ ನಡೆಯಲಿರುವುದು ರಾತ್ರಿ 11 ಕ್ಕೆ ಕುಮಾರ ದರ್ಶನ , ರಾತ್ರಿ 1 ಕ್ಕೆ ರಂಗಪೂಜೆ , ರಾತ್ರಿ 2:30 ಕ್ಕೆ ಬ್ರಹ್ಮಮಂಡಲ ,ರಾತ್ರಿ 3:30 ಕ್ಕೆ ಭೂತಬಲಿ , ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ.
ಫೆ. 24, ಶನಿವಾರ ಬೆಳಿಗ್ಗೆ 11 ಕ್ಕೆ ಮಹಾಪೂಜೆ ,ಸಂಜೆ 7 ಕ್ಕೆ ತಪ್ಪಂಗಾಯಿ ಬಲಿ , ರಾತ್ರಿ 8:30 ಕ್ಕೆ ದೂಳು ಮಂಡಲ ,ನಂತರ ಭೂತಬಲಿ , ಕವಾಟಬಂಧನ ,ಶಯನೋತ್ಸವ ಫೆ. 25, ಗುರುವಾರ ಬೆಳಿಗ್ಗೆ 07 ಕ್ಕೆ ಕವಾಟೋದ್ಘಾಟನೆ , ನಂತರ ಮಹಾಪೂಜೆ ,ಸಾಯಂಕಾಲ 05 ಕ್ಕೆ ಬಲಿ ಹೊರಟು ಕಟ್ಟೆಪೂಜೆ , ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗುತ್ತದೆ.
ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ , ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ , ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕೆಂದು ದೇವಸ್ಥಾನದ ಪ್ರಕಟಣೆಯು ತಿಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ

Posted On: 20-02-2024 09:09PM
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಹಾಗೂ ಸೈoಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ ಮಂಗಳವಾರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅವರು ಚೆಂಡೆವಾದನದ ಮೂಲಕ ಉದ್ಘಾಟಿಸಿ ಮಾತನಾಡಿ, ಜನಪದ ಕಲೆಯನ್ನು ದಾಖಲೀಕರಣ ಮಾಡಬೇಕಾದ ತುರ್ತು ಅವಶ್ಯಕತೆ ಇದೆ ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇದೆ. ನಮ್ಮಕನ್ನಡ ಜನಪದ ಪರಿಷತ್ತಿನಿಂದ ಇದಕ್ಕೆ ಪೂರಕವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಕ ಮಾತ ಚರ್ಚಿನ ಸಹಾಯಕ ಧರ್ಮಗುರು ಮೇಲ್ವಿನ್ ರೋಯ್ ಲೋಬೋ ವಹಿಸಿದ್ದರು. ಮೂಡು ಸಗ್ರಿ ಕ್ಷೇತ್ರದ ಧರ್ಮದರ್ಶಿ ಭಾಸ್ಕರ ಗುಂಡಿಬೈಲು ಶುಭ ಹಾರೈಸಿದರು. ವೇದಿಕೆಯಲ್ಲಿ ಸೈಂಟ್ ಮೇರಿಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ವಿಜಯ್,ಉಡುಪಿ ಜಿಲ್ಲಾ ವರ್ತಕರ ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ ಮುಂತಾದವರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು,ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಕಲಾವಿದ ಗಂಗಾಧರ ಕಿದಿಯೂರು, ಸುರಭಿ ಮಹಿಳಾ ಚೆಂಡೆ ವಾದನ ಬಳಗದ ಸುನಂದ ಗೋಪಾಲ ಗಾಣಿಗ ಬೈoದೂರು ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ ರಾಜ್ಯ ಅಧ್ಯಕ್ಷ ಡಾ.ಎಸ್ ಬಾಲಾಜಿ ಮತ್ತು ಜಿಲ್ಲಾ ಅಧ್ಯಕ್ಷ ಡಾ.ಗಣೇಶ್ ಕುಮಾರ್ ಗಂಗೊಳ್ಳಿ ಅವರನ್ನು ಗೌರವಿಸಲಾಯಿತು.
ಈ ಸಂದಭ೯ದಲ್ಲಿ ಡಾ.ಗಣೇಶ್ ಗಂಗೊಳ್ಳಿ ನೇತೃತ್ವದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಉದಯ ಕುಮಾರ್ ಹೈಕಾಡಿ ಸ್ವಾಗತಿಸಿದರು. ಚಂದ್ರ ಹಂಗಾರಕಟ್ಟೆ, ಫಾರೂಕ್ ಚಂದ್ರನಗರ ಪರಿಚಯಿಸಿದರು. ಜಿಲ್ಲಾ ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾಯ೯ದಶಿ೯ ಪ್ರಕಾಶ ಸುವಣ೯ ಕಟಪಾಡಿ ವoದಿಸಿದರು. ಸುರಭಿ ಮಹಿಳಾ ಚೆಂಡೆ ವಾದನ ಬಳಗದಿಂದ ಚೆಂಡೆ ವಾದನ ಪ್ರದಶ೯ನ ಮತ್ತು ಜಾನಪದ ಕಲಾವಿದರಾದ ಡಾ.ಗಣೇಶ್ ಗಂಗೊಳ್ಳಿ, ಅಶ್ವಿನಿ ಸುವರ್ಣ ಪಡುಬಿದ್ರೆ, ವಸಂತಿ ಕಡಂಬಳ ಕಾರ್ಕಳ, ರಮಣಿ ರವಿ ಬೈಂದೂರು ಅವರಿಂದ ಜಾನಪದ ಗಾಯನ ನಡೆಯಿತು. ಹಿಮ್ಮೇಳದಲ್ಲಿ ರೋಹಿತ್ ಕುಮಾರ್ ಮಲ್ಪೆ, ಸುರೇಶ್ ಲಕ್ಷ್ಮೀನಗರ ಸಹಕರಿಸಿದರು.
ಕಾಪು : ಅಸಂಖ್ಯ ಭಕ್ತರ ಸಮ್ಮುಖ ನೆರವೇರಿದ ದಿವ್ಯ ಸತ್ಸಂಗ

Posted On: 20-02-2024 09:03PM
ಕಾಪು : ಕರಾವಳಿಯ ಸೊಬಗಿಗೆ ಮನಸೋತವರಿಲ್ಲ. ಕಾಪು ಬೀಚ್ ಅತ್ಯಂತ ಸುಂದರವಾಗಿದೆ. ಭಾರತದ ಆಧ್ಯಾತ್ಮ, ವಸುದೈವ ಕುಟುಂಬಕಂ ಎಂಬ ನುಡಿ, ಭಾರತದ ಐಟಿ ವಲಯ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ನಮಗೆ ಹೆಮ್ಮೆ. ಸತ್ಸಂಗದೊಂದಿಗೆ ಸತ್ ಚಿಂತನೆ, ಆತ್ಮ ಚಿಂತನೆಯಾಗಲಿ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲೀವಿಂಗ್ನ ಸಂಸ್ಥಾಪಕ, ಪದ್ಮವಿಭೂಷಣ ಗುರುದೇವ್ ಶ್ರೀ ರವಿಶಂಕರ್ ಗುರೂಜಿ ಹೇಳಿದರು. ಅವರು ಮಂಗಳವಾರ ಕಾಪು ಬೀಚ್ ನ ಮಂಥನ್ ರೆಸಾಟ್೯ ಬಳಿ ಕಡಲ ಕಿನಾರೆಯಲ್ಲಿ ನಡೆದ ಸತ್ಸಂಗದಲ್ಲಿ ಜ್ಞಾನ, ಧ್ಯಾನ ಹಾಗೂ ಭಜನೆಯನ್ನೊಳಗೊಂಡ ದಿವ್ಯ ಸತ್ಸಂಗ ಆನಂದ ಲಹರಿಯನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಆಯೋಜಕರಾಗಿರುವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸನ್ಯಾಸ ಪ್ರದರ್ಶನವಾಗಬಾರದು, ನಿದರ್ಶನವಾಗಬೇಕು ಎನ್ನುವಂತಿರುವ ಮಹನೀಯ ಸಂತ ಶ್ರೀ ರವಿಶಂಕರ್ ಗುರೂಜಿ. ವಿವಿಧ ದೇಶಗಳ ಜನರು ಅನುಯಾಯಿಯಾಗಿರುವ ಅಂತರಾಷ್ಟ್ರೀಯ ಖ್ಯಾತಿಯ ಗುರೂಜಿ ಕಾಪುವಿಗೆ ಆಗಮಿಸಿರುವುದು ಬದುಕಿನ ಅವಿಸ್ಮರಣೀಯ ಘಳಿಗೆ ಎಂದರು.

ಕಿರಿಯರಿಂದ ಹಿರಿಯರಾದಿಯಾಗಿ ಇಳಿ ಸಂಜೆಯಲಿ ಕಡಲ ಕಿನಾರೆಯ ಸೊಬಗಿನ ಜೊತೆಗೆ ಸತ್ಸಂಗ, ಧ್ಯಾನ, ಭಜನೆಯಲಿ ಸಮಯ ಕಳೆದರು.

ಈ ಸಂದರ್ಭ ಗುರ್ಮೆ ಸುರೇಶ್ ಶೆಟ್ಟಿ ಕುಟುಂಬ ವರ್ಗ, ಎಂ. ಆರ್. ಜಿ ಗ್ರೂಪ್ ಮುಖ್ಯಸ್ಥ ಪ್ರಕಾಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು - ಜೀರ್ಣೋದ್ಧಾರದ ಹೊರೆ ಕಾಣಿಕೆಯ ಪೂರ್ವಭಾವಿ ಸಭೆ

Posted On: 19-02-2024 01:25PM
ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಮಟ್ಟಾರು ಬಯಲು ರಂಗಮಂದಿರದಲ್ಲಿ ಹೊರೆ ಕಾಣಿಕೆಯ ಪೂರ್ವಭಾವಿ ಸಭೆ ನಡೆಯಿತು. ಶಂಕರ್ ಶೆಟ್ಟಿ ದರ್ಮೆಟ್ಟು ದೀಪ ಬೆಳಗಿಸುವ ಮುಖಾಂತರ ಜೀರ್ಣೋದ್ದಾರದ ಹೊರೆ ಕಾಣಿಕೆಯ ಪೂರ್ವಭಾವಿ ಸಭೆಗೆ ಚಾಲನೆ ನೀಡಿದರು.
ಹೊರೆ ಕಾಣಿಕೆಯ ಉಸ್ತುವಾರಿ ಸಂದೀಪ್ ಪೂಜಾರಿ ಹೊರೆಕಾಣಿಕೆಯ ರೂಪುರೇಷೆಗಳು, ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಹಲವಾರು ವಲಯದಲ್ಲಿ ಹೊರೆಕಾಣಿಕೆಯ ಕೇಂದ್ರಗಳನ್ನು ಮಾಡಿ ಆದರ ಜವಾಬ್ದಾರಿಗಳನ್ನು ನೀಡಿದರು.
ಈ ಸಂದರ್ಭ ಶ್ರೀ ಬಬ್ಬರ್ಯ ಆಡಳಿತ ಸಮಿತಿಯ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ಚಂದ್ರ ಶೆಟ್ಟಿ, ದಿನರಾಜ್ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ದೇವಸ್ಥಾನಗಳ ಆಡಳಿತ ಮೊಕ್ತೇಸರರು, ಅಧ್ಯಕ್ಷರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು ಪ್ರಿತೇಶ್ ಶೆಟ್ಟಿ ಸ್ವಾಗತಿಸಿದರು. ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.
ಕಾಪು : ಬಿಜೆಪಿಯ ನೂತನ ಕ್ಷೇತ್ರಾಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ

Posted On: 18-02-2024 04:38PM
ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ನೂತನ ಕ್ಷೇತ್ರಾಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆಯಾಗಿದ್ದಾರೆ.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ಅವರು ನೇಮಕ ಮಾಡಿದ್ದಾರೆ.
ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಪದ ಪ್ರಧಾನ ಸಮಾರಂಭ

Posted On: 18-02-2024 03:04PM
ಬ್ರಹ್ಮಾವರ : ನಮ್ಮ ಆದಾಯದ ಒಂದಂಶವನ್ನು ಸಮಾಜಕ್ಕೆ ನೀಡಿದಾಗ ನಮ್ಮ ಜೀವನದಲ್ಲಿ ಸಾಥ೯ಕತೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಜಯಂಟ್ಸ್ ಸಂಸ್ಥೆಯ ಸೇವೆ ಅನುಪಮ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹೇಳಿದರು. ಅವರು ಶನಿವಾರ ಸಿಟಿ ಸೆಂಟರ್ ನಲ್ಲಿ ನಡೆದ ಬ್ರಹ್ಮಾವರ ಜಯಂಟ್ಸ್ ಗ್ರೂಪ್ ನ ಪದಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಯಂಟ್ಸ್ ಫೆಡರೇಶನ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್ ಮಾತನಾಡಿ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದಿದೆ. ಜನ ಔಷಧಿ ಸಂಸ್ಥೆ ಪ್ರಾರಂಭ ಮಾಡಿ ಸಾವಿರಾರು ಜನರಿಗೆ ಸಹಾಯ ಮಾಡಿದೆ ಎಂದರು. ಜಯಂಟ್ಸ್ ಫೆಡರೇಶನ್ ಉಪಾಧ್ಯಕ್ಷ ತೇಜೇಶ್ವರ ರಾವ್, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು ಶುಭ ಹಾರೈಸಿದರು.
ಈ ಸಂದಭ೯ದಲ್ಲಿ ನೂತನ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ಮತ್ತು ಅವರ ತಂಡದ ಪದ ಪ್ರಧಾನ ನಡೆಯಿತು. ಕಾಯ೯ಕ್ರಮದಲ್ಲಿ ಪೋಲಿಸ್ ಉಪ ನಿರೀಕ್ಷಕ ಕೃಷ್ಣಪ್ಪ ಮತ್ತು ಹಿರಿಯ ವಿಭಾಗದ ಕ್ರೀಡಾಪಟು ಗೀತಾ ಎ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸ್ಪಂದನ ವಿಶೇಷ ಚೇತನ ಶಾಲೆಗೆ 2.5 ಲಕ್ಷ ವೆಚ್ಚದ ಸೋಲಾರ್, ಟಿವಿ, ವಿವಿಧ ಪರಿಕರಗಳನ್ನು ನೀಡಲಾಯಿತು. ಬಡ ರೋಗಿಗೆ ಸಹಾಯಧನ ವಿತರಿಸಲಾಯಿತು. ಸಮಾರಂಭದಲ್ಲಿ ನೂತನ ಯೂನಿಟ್ ಡೈರೆಕ್ಟರ್ ವಿವೇಕಾನಂದ ಕಾಮತ್ ಮತ್ತು ನೂತನ 4 ಜನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು.
ವಿವೇಕ್ ಕಾಮತ್ ಸ್ವಾಗತಿಸಿದರು. ಕಾಯ೯ದಶಿ೯ ಮಿಲ್ಟನ್ ಒಲಿವರ್ ವರದಿ ವಾಚಿಸಿದರು. ರಾಘವೇಂದ್ರ ಕವಾ೯ಲು ನಿರೂಪಿಸಿದರು.
ಪಡುಬಿದ್ರಿ ಸಿ.ಎ. ಸೊಸೈಟಿಯ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಲೋಕಾರ್ಪಣೆ

Posted On: 18-02-2024 02:48PM
ಹೆಜಮಾಡಿ : ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಬ್ಯಾಂಕಿಂಗ್ ಸೊಸೈಟಿಯಾಗಿ ಹೆಗ್ಗಳಿಕೆ ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನವೀಕರಣಗೊಂಡ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಬ್ಯಾಂಕಿಂಗ್ ಕಟ್ಟಡದ ಉದ್ಘಾಟನೆಯನ್ನು ಭಾನುವಾರ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಗಮದ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ದೀಪ ಪ್ರಜ್ವಲನೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಮಂಗಳೂರು ಇದರ ಅಧ್ಯಕ್ಷರಾದ ನವೀನ್ ಚಂದ್ರ ಡಿ. ಸುವರ್ಣ ಮಾಡಿದರು. ನಾಮ ಫಲಕದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಪಡಿತರ ವ್ಯವಸ್ಥೆಯ ಗೋದಾಮನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಭದ್ರತಾ ಕೊಠಡಿಯನ್ನು ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಶ್ಮ ಎ. ಮೆಂಡನ್ ಉದ್ಘಾಟಿಸಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಬಂದರಿನ ಮೂಲಕ ಪ್ರಸಿದ್ಧಿ ಪಡೆದ ಹೆಜಮಾಡಿಯಲ್ಲಿ ಪ್ರಥಮ ಹವಾನಿಯಂತ್ರಿತ ಕಟ್ಟಡವಾಗಿ ಪಡುಬಿದ್ರಿ ಸಿ.ಎ ಸೊಸೈಟಿಯ ಹೆಜಮಾಡಿ ಶಾಖೆ ಉದ್ಘಾಟನೆಯಾಗಿದೆ. ಸಹಕಾರಿ ಸೊಸೈಟಿಗಳು ಕಲ್ಪವೃಕ್ಷದಂತೆ ಬಹಳಷ್ಟು ಕೊಡುಗೆ ನೀಡಿದೆ. ಸಾಮಾಜಿಕವಾಗಿ, ಕೃಷಿಕರ, ಊರಿನ ಅಭಿವೃದ್ಧಿ ಬಗ್ಗೆ ಪಡುಬಿದ್ರಿ ಸಿ.ಎ ಸೊಸೈಟಿ ಕೆಲಸ ಮಾಡುತ್ತಿದೆ. ಶೇ.25 ಡಿವಿಡೆಂಟ್ ನೀಡಿ, 125 ಕೋಟಿ ಲಾಭದಾಯಕವಾಗಿದೆ. ಗ್ರಾಹಕರು ನಮ್ಮ ದೇವರು ಎಂಬ ಸೇವಾ ಭಾವನೆಯಿಂದ ದುಡಿಯುವ ಸಂಸ್ಥೆಯ ಉದ್ಯೋಗಿಗಳ ಮೂಲಕ ಈ ಸಾಧನೆ ಸಾಧ್ಯವಾಗಿದೆ ಎಂದರು.

ಸನ್ಮಾನ/ಸ್ವಚ್ಛತಾ ಪರಿಕರ ವಿತರಣೆ : ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಾಪು ದಿವಾಕರ ಶೆಟ್ಟಿ, ಶೈಕ್ಷಣಿಕ ಸಾಧಕಿ ಡಾ. ಹರ್ಷಿತ ಎನ್. ಅಂಚನ್, ಕ್ರೀಡಾ ಸಾಧಕ ಧನುಷ್ ಎಸ್. ಸಾಲ್ಯಾನ್ರನ್ನು ಸನ್ಮಾನಿಸಲಾಯಿತು. ಸೊಸೈಟಿ ವ್ಯಾಪ್ತಿಯ ಕರಾವಳಿಯನ್ನು ನಿರಂತರವಾಗಿ ಸ್ವಚ್ಛಗೊಳಿಸಿ ಉತ್ತಮ ಸಮಾಜ ಸೇವೆಗೈಯ್ಯುತ್ತಿರುವ ಹೆಜಮಾಡಿ ಕರಾವಳಿ ಯುವಕ ಯುವತಿ ವೃಂದ ಮತ್ತು ಪಡುಬಿದ್ರಿ ನಡಿಪಟ್ನ ಕರಾವಳಿ ಸ್ಟಾರ್ ಸಂಸ್ಥೆಗಳಿಗೆ ಸ್ವಚ್ಚತಾ ಪರಿಕರಗಳನ್ನು ವಿತರಿಸಲಾಗುವುದು. ಈ ಸಂದರ್ಭ ಫೆ. 5 ರಿಂದ ಮಾರ್ಚ್ ಅಂತ್ಯದವರೆಗೆ ಸೊಸೈಟಿಯಲ್ಲಿ ಠೇವಣಿ ವಿನಿಯೋಗಿಸಿದ ಠೇವಣಿದಾರರಿಗೆ, ಚಿನ್ನಾಭರಣ ಸಾಲ ಪಡೆದ 10 ವಿಜೇತರನ್ನು ಗಣ್ಯರು ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಿ ಚಿನ್ನದ ನಾಣ್ಯ, ಆಕರ್ಷಕ ಬಹುಮಾನ ವಿತರಿಸಿದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಈ ಸಂದರ್ಭ ನವೀನಚಂದ್ರ ಡಿ ಸುವರ್ಣ, ಬಿ ಜಯಕರ ಶೆಟ್ಟಿ ಇಂದ್ರಾಳಿ, ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಮೋಹನ್ ಸುವರ್ಣ, ಪಾಂಡುರಂಗ ಸಿ ಕರ್ಕೇರ, ಪ್ರಾಣೇಶ್ ಹೆಜಮಾಡಿ, ಸುಧಾಕರ ಕರ್ಕೇರ, ವಾಮನ ಕೋಟ್ಯಾನ್, ದಯಾನಂದ ಹೆಜಮಾಡಿ, ಸತೀಶ್ ನಾಯ್ಕ್, ಸುರೇಶ್ ಶೆಟ್ಟಿ, ಲೋಕೇಶ್ ಕೆ. ಅಮೀನ್, ರಾಜು ಹೆಜಮಾಡಿ, ಮೊಹಮ್ಮದ್ ಇಸ್ಮಾಯಿಲ್, ಎಚ್ ಶೇಷಗಿರಿ, ವಾದಿರಾಜ ಆಚಾರ್ಯ, ಹೆಚ್. ರವಿ ಕುಂದರ್ ಹೆಜಮಾಡಿ, ರಾಲ್ಫಿ ಡಿ'ಕೋಸ್ತ, ಹರೀಶ್ ದೇವಾಡಿಗ, ಜಯಂತ್ ಪುತ್ರನ್, ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಕಾರ್ಯನಿರ್ವಹಣಾಧಿಕಾರಿ ನಿಶ್ಮಿತ ಪಿ.ಎಚ್, ಶಾಖಾ ವ್ಯವಸ್ಥಾಪಕಿ ಶಕುಂತಳ, ನಿರ್ದೇಶಕರುಗಳಾದ ರಸೂಲ್ ವೈ.ಜಿ, ಗಿರೀಶ್ ಪಲಿಮಾರು, ಶಿವರಾಮ ಎನ್. ಶೆಟ್ಟಿ, ರಾಜಾರಾಮ್ ರಾವ್, ವಾಸುದೇವ ದೇವಾಡಿಗ, ಯಶವಂತ್ ಪಿ.ಬಿ, ಮಾಧವ ಆಚಾರ್ಯ, ಸ್ಟ್ಯಾನಿ ಕ್ವಾಡ್ರಸ್, ಸುಚರಿತ ಎಲ್ ಅಮೀನ್, ಕುಸುಮಾ ಎಮ್. ಕರ್ಕೇರ, ಕಾಂಚನ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಬಾಲ ಗೋಪಾಲ್ ಬಲ್ಲಾಳ್ ಕೆ. ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಹೆಜಮಾಡಿ ಪೇಟೆಯಿಂದ ಹೆಜಮಾಡಿ ಶಾಖೆಯವರೆಗೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು. ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಸತೀಶ್ಚಂದ್ರ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷ ಗುರುರಾಜ್ ಪೂಜಾರಿ ವಂದಿಸಿದರು.
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ - ಶಿಕ್ಷಕ ರಕ್ಷಕ ಸಭೆ

Posted On: 18-02-2024 09:49AM
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ಶನಿವಾರ ಶಿಕ್ಷಕ ರಕ್ಷಕ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಿರ್ವ ಪೋಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಕೃಷ್ಣ ಆಚಾರ್ಯ ಹಾಗೂ ಹೆಡ್ ಕಾನ್ ಸ್ಟೇಬಲ್ ಮಂಜುನಾಥ ಅಡಿಗ ಇವರು ಪೋಷಕರಿಗೆ ಮತ್ತು ಮಕ್ಕಳಿಗೆ ರಸ್ತೆ ಸುರಕ್ಷತೆ, ಸೈಬರ್ ಕ್ರೈಮ್ ಮತ್ತು ಮಾದಕ ವ್ಯಸನಗಳ ಬಗ್ಗೆ ಮಾಹಿತಿ ನೀಡಿದರು.

ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚೈತನ್ಯವಾಣಿ ಸಂಚಿಕೆಯ ದ್ವಿತೀಯ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಬುಡೋಕಾನ್ ಕರಾಟೆ ಸ್ಪರ್ಧೆ, ಚಿಂತನ ಗಣಿತ, ಇಂಗ್ಲೀಷ್, ಸಾಮಾನ್ಯ ಜ್ಞಾನ ಪರೀಕ್ಷೆಗಳಲ್ಲಿ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ರಾಂಕ್ ವಿಜೇತರಾದವರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯದರ್ಶಿ ಗುರುರಾಜ ಆಚಾರ್ಯ ಮತ್ತು ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ, ಮಾತೃ ಮಂಡಳಿಯ ಅಧ್ಯಕ್ಷರಾದ ಲತಾ ಸಂತೋಷ್, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಿಕ್ಷಕಿ ವಾಣಿ ಸ್ವಾಗತಿಸಿದರು. ಶಿಕ್ಷಕಿ ಅಮಿತಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಾಲಾ ಪ್ರಾಂಶುಪಾಲರಾದ ಸಂಗೀತಾ ರಾವ್ ಶಾಲಾ ಶೈಕ್ಷಣಿಕ ವರದಿಯ ಜೊತೆಗೆ ಪರೀಕ್ಷೆಗಳ ಮಾಹಿತಿಯನ್ನು ನೀಡಿದರು. ಉಪ ಪ್ರಾಂಶುಪಾಲರಾದ ಸೌಮ್ಯ ಮತ್ತು ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಶ್ರುತಿ ವಂದಿಸಿದರು.