Updated News From Kaup

ಈದು : ಸಾಮೂಹಿಕ ಶನೈಶ್ಚರ ಪೂಜೆ, ಕುಣಿತ ಭಜನಾ ಕಾರ್ಯಕ್ರಮ, ಹಿಂದೂ ಧರ್ಮ ಜಾಗೃತಿ ಸಭೆ

Posted On: 12-03-2024 09:53PM

ಕಾರ್ಕಳ : ಶ್ರೀ ರಾಮಾಂಜನೇಯ ಚಾರಿಟೇಬಲ್ ಟ್ರಸ್ಟ್ ಈದು, ಹಿಂದೂ ಜಾಗರಣ ವೇದಿಕೆ, ಹಿಂದೂ ಮಹಿಳಾ ಜಾಗರಣ, ಭಗತ್ ಸಿಂಗ್ ಘಟಕ ಈದು ಇದರ ಆಶ್ರಯದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ, ಕುಣಿತ ಭಜನಾ ಕಾರ್ಯಕ್ರಮ ಮತ್ತು ಹಿಂದೂ ಧರ್ಮ ಜಾಗೃತಿ ಸಭೆ ನಡೆಯಿತು.

ಕಾಪು : ಎ.ಆರ್.ಕೆ ಡೆವಲಪರ್ಸ್ ವತಿಯಿಂದ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ರಂಜಾನ್ ಕಿಟ್ ವಿತರಣೆ

Posted On: 12-03-2024 10:03AM

ಕಾಪು : ಎ.ಆರ್.ಕೆ ಡೆವಲಪರ್ಸ್ ಮತ್ತು ಕನ್ಸ್ಟ್ರಕ್ಷನ್ ಕಂಪನಿ ಕಾಪು ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ರಂಜಾನ್ ಕಿಟ್ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ರಂಜಾನ್ ಉಪವಾಸದಲ್ಲಿರುವ ಅತೀ ಬಡತನದ 100 ಮನೆಯನ್ನು ಗುರುತಿಸಿ ಅವರ ಮನೆಗೆ ಸುಮಾರು ಒಂದು ತಿಂಗಳಿಗೆ ಆಗುವಷ್ಟು ಅಕ್ಕಿ ಮತ್ತು ಪಡಿತರ ಕಿಟ್ ನ್ನು ಕಾಪುವಿನ ಆಸು ಪಾಸಿನ ಕುಟುಂಬದ ಮನೆಗಳಿಗೆ ಒದಗಿಸಲಾಯಿತು. ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು ಮಲ್ಲಾರು ಗುರುಗಳಾದ ಅಶ್ರಫ್ ಮದನಿ ಮಜೂರು ದುವಾವನ್ನು ನೆರವೇರಿಸಿದರು.

ಉಡುಪಿ : ಸಾರ್ವಜನಿಕ ಪ್ರದೇಶ, ವಾಣಿಜ್ಯ ಮಳಿಗೆಗಳಲ್ಲಿ ತುಳು ಭಾಷೆಯ ನಾಮಫಲಕ ಅಳವಡಿಸಲು ಮನವಿ

Posted On: 11-03-2024 02:41PM

ಉಡುಪಿ : ತುಳು ಭಾಷೆ ಲಿಪಿಯ ಅಕ್ಷರಗಳನ್ನು ಸಹ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಅಳವಡಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಆದೇಶ ಹೊರಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಮೊಯಿದೀನ್ ಬಾವ ಹಾಗೂ ಎಲ್ಲಾ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ತುಳುನಾಡಿನ ಜನರ ಪರವಾಗಿ ಇಂದು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡಲಾಯಿತು.

ಮಾಚ್೯ 11 : ಕಾಪು ಪುರಸಭಾ ವ್ಯಾಪ್ತಿಯಲ್ಲಿ ನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ

Posted On: 10-03-2024 08:39PM

ಕಾಪು : ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾಪು, ಕಾಪು ಪುರಸಭೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಾಪು, ಜೆಸಿಐ ಕಾಪು ಮತ್ತು ಯಾರ್ಡ್ ಫ್ರೆಂಡ್ಸ್ ಉಳಿಯಾರಗೋಳಿ ಇವರ ಜಂಟಿ ಆಶ್ರಯದಲ್ಲಿ ಕಾಪು ಪುರಸಭೆ ವ್ಯಾಪ್ತಿಯ ಗ್ರಾಮಗಳಲ್ಲಿ ಮಾ. 11 ರಂದು ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ

ಅಯೋಧ್ಯೆಯಲ್ಲಿ ಶ್ರೀರಾಮ ದರ್ಶನ ಮಾಡಿ ಇಹಲೋಕ ತ್ಯಜಿಸಿದ ಆರ್‌ಎಸ್‌ಎಸ್‌ ಮುಖಂಡ ಪಾಂಡುರಂಗ ಶಾನುಭಾಗ್  

Posted On: 10-03-2024 08:34PM

ಅಯೋಧ್ಯೆ: ಆರ್‌ಎಸ್‌ಎಸ್‌ನ ಉಡುಪಿಯ ‌ ಹಿರಿಯ ಸಕ್ರಿಯ ಸದಸ್ಯ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪಡುಬಿದ್ರಿ : ಶಿವಾಯ ಫೌಂಡೇಶನ್ ವತಿಯಿಂದ ಚಿಕಿತ್ಸೆಗೆ ನೆರವು

Posted On: 09-03-2024 02:09PM

ಪಡುಬಿದ್ರಿ : ಪದವಿ ಶಿಕ್ಷಣ ಪಡೆಯುತ್ತಿರುವ ಶಿರ್ವದ ಜಿಗಿಷಾ ದೇವಾಡಿಗ ಎಂಬ ಹೆಣ್ಣು ಮಗಳ ಬೋನ್ ಟ್ಯೂಮರ್ ಚಿಕಿತ್ಸೆಗಾಗಿ ಶಿವಾಯ ಫೌಂಡೇಶನ್ ವತಿಯಿಂದ, ಗಣಪತಿ ದೇವಸ್ಥಾನ ಪಡುಬಿದ್ರಿ ಇಲ್ಲಿ 45,000 ರೂಪಾಯಿಗಳ ಧನಸಹಾಯದ ಚೆಕ್ ಹಸ್ತಾಂತರಿಸಿ ಜಿಗಿಷಾ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಉಚ್ಚಿಲ : ನಟೇಶ ನೃತ್ಯ ನಿಕೇತನ - ವಿಂಶತಿ ಸಂಭ್ರಮ ; ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Posted On: 09-03-2024 07:44AM

ಉಚ್ಚಿಲ : ಭಾರತವು ಹಲವು ಸಂಸ್ಕೃತಿಗಳ ತವರು. ಬಹು ಬದುಕುಗಳ ಕಥನ ಎಂಬ ಮಾತಿನಂತೆ ವಿವಿಧ ಅಭಿವೃದ್ಧಿಯ ಜೊತೆಗೆ ಸಂಸ್ಕಾರಯುತ ಮಾನವ ಸಂಪನ್ಮೂಲ ದೇಶದ ಆಸ್ತಿ. ಪಾಶ್ಚಿಮಾತ್ಯದೆಡೆಗೆ ಮಕ್ಕಳು ವಾಲುತ್ತಿರುವ ಸಂದರ್ಭ ನಮ್ಮ ನೆಲದ ಸಂಸ್ಕೃತಿ, ಸಂಗೀತದ ಅಭಿರುಚಿ ಬೆಳೆಸುವುದು ಅನಿವಾರ್ಯ. ಐತಿಹಾಸಿಕ ಸಾಂಸ್ಕೃತಿಕ ನೃತ್ಯ ಪ್ರಾಕಾರವಾದ ಭರತನಾಟ್ಯವನ್ನು ನೂರಾರು ಮಕ್ಕಳಿಗೆ ಕಲಿಸಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದ ಕೀರ್ತಿ ನಟೇಶ ನೃತ್ಯ ನಿಕೇತನ ಸಂಸ್ಥೆಗಿದೆ. ವೃತ್ತಿ ಮತ್ತು ಲೌಕಿಕ ಬದುಕಿನಲ್ಲಿ ಲಯ ಕಂಡುಕೊಂಡ ಮಂಗಳ ಕಿಶೋರ್ ದೇವಾಡಿಗ ಅವರ ನಾಟ್ಯ ಕೇಂದ್ರದಿಂದ ಭರತನಾಟ್ಯದ ಕಲಿಕೆಯ ಜೊತೆಗೆ ಸಾಧಕರನ್ನು ಗುರುತಿಸುವ ಕಾಯಕ‌ ಮುಂದೆಯೂ ನಡೆಯಲಿ ಎಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಉಚ್ಚಿಲದಲ್ಲಿ ನಟೇಶ ನೃತ್ಯ ನಿಕೇತನ ಉಚ್ಚಿಲದ ವಿಂಶತಿ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಉಚ್ಚಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಅರ್ಚಕರಾದ ಗೋವಿಂದ ರಾಜ್ ಭಟ್ ಉದ್ಘಾಟಿಸಿ, ಶುಭಹಾರೈಸಿದರು.

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಸುಜಲ ಎಸ್ ಸುವರ್ಣ ಆಯ್ಕೆ

Posted On: 09-03-2024 07:31AM

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಸುಜಲ ಎಸ್ ಸುವರ್ಣ ಇವರು ಆಯ್ಕೆಯಾಗಿರುತ್ತಾರೆ.

ಬಂಗಾರದ ಕನಸು ನನಸು ಮಾಡಲಿದೆ ಸಾಯಿ ಗೋಲ್ಡ್ ಸ್ಕೀಮ್

Posted On: 09-03-2024 07:01AM

ಕಟಪಾಡಿ : ಇಲ್ಲಿನ ಸಾಯಿ ಗೋಲ್ಡ್ ‌ಸಂಸ್ಥೆಯು ಕಂತಿನ ಮೂಲಕ ಹಣ ಪಾವತಿಸುವ ಜೊತೆಗೆ ಒಂದಷ್ಟು ‌ಹೊಸ ಯೋಜನೆಗಳನ್ನು ಚಿನ್ನ ಪ್ರಿಯರಿಗಾಗಿ‌ ತಂದಿದ್ದಾರೆ.

ಮುಲ್ಕಿ : ಸಿ.ಎಸ್.ಐ. ಬಾಲಿಕಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ

Posted On: 08-03-2024 10:18PM

ಮುಲ್ಕಿ: ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಮುಲ್ಕಿ ಸಿ.ಎಸ್.ಐ. ಬಾಲಿಕಾಶ್ರಮದ ಮಕ್ಕಳೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.