Updated News From Kaup

ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ : ಉಡುಪಿ ತಂಡ ವಿನ್ನರ್ಸ್, ಕುಂದಾಪುರ ತಂಡ ರನ್ನರ್ಸ್

Posted On: 06-03-2024 04:48PM

ಹೆಜಮಾಡಿ : ಲೀಗ್ ಮಾದರಿಯಲ್ಲಿ ಹೆಜಮಾಡಿಯ ರಾಜೀವ್ ಗಾಂಧಿ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಕಾಪು ತಾ. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ರಜತ ಸಂಭ್ರಮದ ಕ್ರಿಕೆಟ್ ಪಂದ್ಯಾಕೂಟದಲ್ಲಿ ಭಾಗವಹಿಸಿದ್ದ ಆರು ತಂಡಗಳ ಕ್ರಿಕೆಟ್ ಹಣಾಹಣಿಯಲ್ಲಿ ರೋಚಕವಾಗಿದ್ದ ಅಂತಿಮ ಪಂದ್ಯದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡವು, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವನ್ನು 4ರನ್ನುಗಳಿಂದ ಸೋಲಿಸಿ ಜಿಲ್ಲಾ ಮಟ್ಟದ ಕ್ರಿಕೆಟ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ವಿಜಯೀ ಜಿಲ್ಲಾ ತಂಡವು ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

ಕಾಪು ಫ್ಲೈ ಓವರ್ ಅಂಡರ್ ಪಾಸ್ನಲ್ಲಿ ಕೊನೆಗೂ ಬೆಳಕು ಕಂಡ ಕಾಪು ಜನತೆ : ನಮ್ಮ ಕಾಪು ವರದಿ ಫಲಶ್ರುತಿ

Posted On: 05-03-2024 08:07PM

ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನ ಮುಂಭಾಗದ ಫ್ಲೈ ಓವರ್ ಅಂಡರ್ ಪಾಸ್ ನಲ್ಲಿ ಬೆಳಕು ಕಾಣದೇ ಒಂದುವರೆ ವರುಷ ಕಳೆದಿರುವ ಕಾಪು ಜನತೆ ಇದೀಗ ನಮ್ಮ ಕಾಪು ನ್ಯೂಸ್ ವರದಿ ಬಿತ್ತರಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಬೆಳಕಿನ ವ್ಯವಸ್ಥೆಯನ್ನು ಮಾಡಿರುತ್ತಾರೆ. ಸಾಮಾಜಿಕ ಕಾರ್ಯಕರ್ತ ಜಯರಾಮ್ ಆಚಾರ್ಯ ಈ ಬಗ್ಗೆ ಮಾಧ್ಯಮದ ಗಮನಕ್ಕೆ ತಂದಿದ್ದು, ಅಧಿಕಾರಿಗಳಿಗೆ ನಿರಂತರವಾಗಿ ಮೇಲ್ ಮೂಲಕ ಮನವಿಯನ್ನು ಸಲ್ಲಿಸುತ್ತಿದ್ದರು. ನಮ್ಮ ಕಾಪು ವರದಿಯ ನಂತರ ಟೋಲ್ ಮ್ಯಾನೇಜರ್ ತಿಮ್ಮಯ್ಯ ಎ. ಎಸ್ ಅವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಹಲೋಜೇನ್ ಲೈಟ್ ಅಳವಡಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಉಡುಪಿ : ಅಧಿಕಾರಿಗಳ ವೈಫಲ್ಯದಿಂದ ಕಾಪುವಿನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಆಸಾಮಿ

Posted On: 04-03-2024 08:09PM

ಉಡುಪಿ : ಕಾಪು ಹೊಸ ಮಾರಿಗುಡಿ ಮುಂಭಾಗದ ಫ್ಲೈ ಓವರ್ ಅಂಡರ್ ಪಾಸ್ ನಲ್ಲಿ 3 ಹಲೊಜೆನ್ ಲೈಟ್ಗಳನ್ನು ಅಳವಡಿಸಿದ್ದರೂ, ಕಳೆದ 18 ತಿಂಗಳಿನಿಂದ ಬೆಳಕಿಲ್ಲದೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರಾದ ಸ್ಥಳೀಯ ನಿವಾಸಿ ಜಯರಾಮ್ ಆಚಾರ್ಯ ಅವರು ಅಧಿಕಾರಿಗಳಿಗೆ Email ಮೂಲಕ ಮನವಿ ಕಳುಹಿಸಿದ್ದರೂ ಕೂಡಾ ಯಾವುದೇ ಪ್ರತಿಕ್ರಿಯೆ ದೊರೆತಿರಲಿಲ್ಲ, ನಮ್ಮ ಕಾಪು ನ್ಯೂಸ್ ಮೂಲಕ ಈ ವರದಿಯನ್ನು ಮಾಚ್೯ 1, ಶುಕ್ರವಾರದಂದು ಬಿತ್ತರಿಸಿದ್ದು, ಮರುದಿನ ಜಯರಾಮ್ ಆಚಾರ್ಯ ಅವರು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರನ್ನು ಮುಖತಃ ಭೇಟಿ ಮಾಡಿ ಮನವಿ ನೀಡಿದ್ದರು.

ಮಾರ್ಚ್ 10 : ಸಮಾಜರತ್ನ. ಕೆ. ಲೀಲಾಧರ ಶೆಟ್ಟಿ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Posted On: 04-03-2024 04:42PM

ಕಾಪು : ಸಮಾಜರತ್ನ ಕೆ ಲೀಲಾಧರ ಶೆಟ್ಟಿ ಸ್ಮರಣಾರ್ಥ ಅವರ ಅಭಿಮಾನಿ ಬಳಗದ ವತಿಯಿಂದ, ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಇವರ ನೇತೃತ್ವದಲ್ಲಿ, ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಮಾರ್ಚ್ 10, ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2.30 ರವರೆಗೆ ಶಿರ್ವ ಕೊಲ್ಲಬೆಟ್ಟು ಸಂಘ ಮಿತ್ರ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು,ಕವಾ೯ಲು ಆಯ್ಕೆ

Posted On: 03-03-2024 03:24PM

ಉಡುಪಿ : ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಬಾಗಲಕೋಟೆ ಇದರ ವತಿಯಿಂದ ಮಾರ್ಚ್ 17ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು ನುಡಿ ಅದೇ ರೀತಿ ಸಮಾಜ ಸೇವಾ ವಿಭಾಗದಲ್ಲಿ ಕೊಡ ಮಾಡುವ ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು,ಕವಾ೯ಲು ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ರಮೇಶ್ ಕಮತಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಪು : ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ - ಬೋಳ ಸದಾಶಿವ ಶೆಟ್ಟಿ

Posted On: 03-03-2024 02:28PM

ಕಾಪು : ಕಳೆದ 45 ವರ್ಷಗಳಿಂದ ಸಹಕಾರ ಭಾರತಿ ದೇಶಾದ್ಯಂತ ಸಂಘಟನಾತ್ಮಕವಾಗಿ 28 ರಾಜ್ಯಗಳ 650 ಕ್ಕಿಂತಲೂ ಹೆಚ್ಚಿನ ಜಿಲ್ಲೆಗಳಲ್ಲಿ ನಿರಂತರ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ಉಡುಪಿ ಜಿಲ್ಲೆಯ ಏಳು ತಾಲೂಕುಗಳಲ್ಲಿ ಸಕ್ರಿಯವಾದ ತಾಲೂಕು ಘಟಕಗಳ ಮೂಲಕ ಗ್ರಾಮೀಣ ಭಾಗದ ಎಲ್ಲಾ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ನಿರಂತರ ಸಂಪರ್ಕದ ಮೂಲಕ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಕಾಯೋನ್ಮುಖವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿ ತಿಳಿಸಿದರು. ಅವರು ಕಾಪು ಕೆವನ್ ಹೋಟೆಲ್ ಸಭಾಂಗಣದಲ್ಲಿ ಜರುಗಿದ ತಾಲೂಕು ಅಭ್ಯಾಸ ವರ್ಗದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಉಚ್ಚಿಲ : ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟನೆ

Posted On: 03-03-2024 02:06PM

ಉಚ್ಚಿಲ : ನಮ್ಮ ದೇಶ, ರಾಜ್ಯಕ್ಕೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಸಹಕಾರಿ ಚಳುವಳಿ ಯಶಸ್ವಿಯಾಗಿ ಮನ್ನಡೆಯುತ್ತಿದೆ. ಖಾಸಗಿ, ವಾಣಿಜ್ಯ ಬ್ಯಾಂಕುಗಳಲ್ಲಿ ವ್ಯವಹಾರ ತಪ್ಪಲ್ಲ. ನಮ್ಮ ಸಮಾಜ, ಗ್ರಾಹಕರ ಆರೋಗ್ಯದ ಬಗ್ಗೆ ಇವರು ಚಿಂತಿಸಿಲ್ಲ. ಇದು ಸಹಕಾರಿ ಕ್ಷೇತ್ರದ ಮೂಲಕ ಮಾತ್ರ ಸಾಧ್ಯವಾಗಿದೆ. ಸಹಕಾರಿ ಕ್ಷೇತ್ರ ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕಾರ್ಯಗಳ ಜೊತೆಗೆ ಉಳಿತಾಯದ ಬಗ್ಗೆಯೂ ಜಾಗೃತಿ ಮೂಡಿಸುತ್ತಿದೆ. ಈ ನಿಟ್ಟಿನಲ್ಲಿ ಬೆಳಪು ವ್ಯವಸಾಯ ಸಹಕಾರಿ ಸಂಘದ ಕಾರ್ಯ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್‌ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ರವಿವಾರ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಿದ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮಾರ್ಚ್ 3: ಎಲ್ಲೂರು ಶ್ರೀ ವಿಶ್ವೇಶ್ವರ ಸನ್ನಿಧಿಯಲ್ಲಿ ಭಾಗೀರಥಿ ದೇವರ ಗುಡಿಯ ಶಂಕು ಸ್ಥಾಪನೆ

Posted On: 02-03-2024 08:41AM

ಕಾಪು : ಇತಿಹಾಸ ಪ್ರಸಿದ್ಧ ಎಲ್ಲೂರು ಶ್ರೀ ವಿಶ್ವೇಶ್ವರ ಸನ್ನಿಧಿಯಲ್ಲಿ ಕ್ಷೇತ್ರದ ಉಪ ಸಾನಿಧ್ಯವಾದ ಶ್ರೀ ಭಾಗೀರಥಿ ದೇವರ ಗುಡಿಯ ಶಂಕು ಸ್ಥಾಪನೆ ಮಾರ್ಚ್ 3, ಭಾನುವರ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿಕೊಂಡು ಮೃತ್ಯು

Posted On: 01-03-2024 06:59PM

ಕಾಪು : ಇಲ್ಲಿನ ಪೊಲಿಪುವಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಸಾವನ್ನಪಿದ ಘಟನೆ ಇಂದು ಸಂಭವಿಸಿದೆ.

ಮಾಚ್೯ 3 : ಯುವವಾಹಿನಿ ಉಡುಪಿ ಘಟಕ - ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

Posted On: 01-03-2024 06:46PM

ಉಡುಪಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ಮಾಚ್೯ 03, ರವಿವಾರ ಬೆಳಿಗ್ಗೆ 10 ಗಂಟೆ ಲಕ್ಷ್ಮೀ ಸಭಾಭವನ ಲಕ್ಷ್ಮೀ ಟ್ರೇಡ್ ಸೆಂಟರ್ ಚಿಟ್ಪಾಡಿ, ಉಡುಪಿ ಇಲ್ಲಿ ಜರಗಲಿದೆ.