Updated News From Kaup
ಕುತ್ಯಾರು : ಕಲ್ಯಾಣಿ ನಿಲಯ ಪಡುಮನೆಯಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ; ಧಾರ್ಮಿಕ ಕಾರ್ಯಕ್ರಮ ; ಸನ್ಮಾನ
Posted On: 11 May 2024, 10:08 PM
ಕಾಪು : ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಮನೆ ಕಲ್ಯಾಣಿ ನಿಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಈ ಸಂದರ್ಭ ಅವರನ್ನು ಕುತ್ಯಾರು ಪಡುಮನೆ ಪರವಾಗಿ ಸನ್ಮಾನಿಸಲಾಯಿತು. ಕುತ್ಯಾರು ಪಡುಮನೆಯ ಅಶೋಕ್ ಮೂಲ್ಯ, ಕಾಪು ಕುಲಾಲ ಯುವ ವೇದಿಕೆಯ ಮುಖಂಡ ಉದಯ ಕುಲಾಲ್, ಕುತ್ಯಾರು ಪಡುಮನೆ ಕುಟುಂಬದ ಪ್ರಮುಖರು ಉಪಸ್ಥಿತರಿದ್ದರು.
ನಮ್ಮನೆ ಪಿಲಾರು ಸಾಂತೂರು ಜವನೆರ್ :ರಕ್ತದಾನ ಶಿಬಿರ
Posted On: 11 May 2024, 12:40 PM
ಕಾಪು : ತಾಲೂಕಿನ ಮುದರಂಗಡಿಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆಸ್ಪತ್ರೆ ಹಾಗೂ ನಮ್ಮನೆ ಪಿಲಾರು ಸಾಂತೂರು ಜವನೆರ್ ಇವರ ಸಹಯೋಗದಲ್ಲಿ ಆಟೋ ಚಾಲಕ ದಿ. ಸಂದೀಪ್ ಶೆಟ್ಟಿ (ಪುಂತು )ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಸತತವಾಗಿ 50 ನೇ ಬಾರಿ ರಕ್ತದಾನ ಮಾಡಿದ ಶಿಕ್ಷಕ ಶ್ರೀ ಚಂದ್ರಹಾಸ ಪ್ರಭು ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಲಾಯಿತು. ಉಡುಪಿ ಜಿಲ್ಲಾ ಆಸ್ಪತ್ರೆಯ ಡಾ.ವೀಣಾ ಹಾಗೂ ಕಾರ್ಯಕ್ರಮ ಆಯೋಜಕರು ಉಪಸ್ಥಿತರಿದ್ದರು.
ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ
Posted On: 11 May 2024, 09:23 AM
ಕಾರ್ಕಳ : ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿಗಳು ತೆರ್ಗಡೆ ಹೊಂದಿರುವುದು ವಿಶೇಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ ಪ್ರಾಶುಂಪಾಲರಾದ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, ಎನ್.ಡಿ.ಎ/ಎನ್.ಎ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ರಾಹುಲ್ ಗಾಂಧಿ ಹೆಸರಿನಲ್ಲಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ಸಹಾಯ ಧನ ಹಸ್ತಾಂತರ
Posted On: 10 May 2024, 06:17 PM
ಕಾಪು : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ಮುಂಬೈ ಅಂದೇರಿ ಭಾಗದ ಕಾಂಗ್ರೆಸ್ ಪದಾಧಿಕಾರಿಯಾದ ಮಹೇಶ್ ಶೆಟ್ಟಿ ಉದ್ಯಮಿ ಮುಂಬೈ ಬರಬೆಟ್ಟು ಗುತ್ತು ಕಳತ್ತೂರು ಹಾಗೂ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿ ರೂ. 10,000 ವನ್ನು ದೇವಾಲಯಕ್ಕೆ ನೀಡಿದರು. ಈ ಸಂದರ್ಭದಲ್ಲಿ ಇವರನ್ನು ದೇವಾಲಯದ ಆಡಳಿತ ಮೊಕ್ತೇಸರ ಕೇಂಜ ಶ್ರೀಧರ ತಂತ್ರಿ ಯವರು ಶಾಲು ಹೊದಿಸಿ ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ಕರುಣಾಕರ ತಂತ್ರಿ, ಶ್ರೀಧರ ತಂತ್ರಿ ಕಳತ್ತೂರು ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ
Posted On: 10 May 2024, 09:45 AM
ಕಾಪು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ 25 ವಿದ್ಯಾರ್ಥಿಗಳು ಹಾಜರಾಗಿದ್ದು. ವಿಶಿಷ್ಠ ಶ್ರೇಣಿಯಲ್ಲಿ 4, ಪ್ರಥಮ ಶ್ರೇಣಿಯಲ್ಲಿ 10, ದ್ವಿತೀಯ ಶ್ರೇಣಿಯಲ್ಲಿ 3, ತೃತೀಯ ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕಾಪು : ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಶೇ.100 ಫಲಿತಾಂಶ
Posted On: 09 May 2024, 09:31 PM
ಕಾಪು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕಾಪು ತಾಲೂಕಿನ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಶೇ 100. ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ 26 ವಿದ್ಯಾರ್ಥಿಗಳು ಹಾಜರಾಗಿದ್ದು. ವಿಶಿಷ್ಠ ಶ್ರೇಣಿಯಲ್ಲಿ 5 ಮಂದಿ, ಪ್ರಥಮ ಶ್ರೇಣಿಯಲ್ಲಿ 12 ಮಂದಿ, ದ್ವಿತೀಯ ಶ್ರೇಣಿಯಲ್ಲಿ 9 ಮಂದಿ ಉತ್ತೀರ್ಣರಾಗಿದ್ದಾರೆ. ಶಾಲಾ ನಾಯಕಿ ಕುಮಾರಿ ಕಾವ್ಯ 606 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿ ಆಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಉದ್ಯಾವರ : ಎಸ್.ಎಫ್.ಎಕ್ಸ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ
Posted On: 09 May 2024, 12:53 PM
ಉದ್ಯಾವರ : ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ ವಿಶೇಷ ಸಾಧನೆ ಮಾಡಿದೆ. 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಸತತ 100 ಪ್ರತಿಶತ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯು, ಕಳೆದ 15 ವರ್ಷಗಳಲ್ಲಿ 13 ಬಾರಿ ಈ ಸಾಧನೆ ಮಾಡಿದೆ. ಈ ವಿದ್ಯಾ ಸಂಸ್ಥೆಯು ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಆಡಳಿತಕ್ಕೆ ಒಳಪಟ್ಟಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ
Posted On: 09 May 2024, 11:16 AM
ಉಡುಪಿ : 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ, ದ.ಕ. ಜಿಲ್ಲೆ (92.12%) ದ್ವಿತೀಯ ಸ್ಥಾನಿಯಾಗಿದ್ದು ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಇದ್ದರು. ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.
ಉಡುಪಿ ತಾಲೂಕು ಕಸಾಪದಿಂದ ಸಂಸ್ಥಾಪನ ದಿನಾಚರಣೆ ; ಉಪನ್ಯಾಸ
Posted On: 08 May 2024, 07:24 PM
ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು. ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ನೀಡಿದ ಸಾಹಿತಿ ಡಾ. ನಿಕೇತನ, ಕಾರಂತರ ಕೃತಿಗಳು ಓದುಗರನ್ನು ಸಹೃದಯಿಗಳನ್ನಾಗಿ ಮಾಡುತ್ತದೆ. ವೈಚಾರಿಕ ದೃಷ್ಟಿಕೋನ ಬೆಳೆಸುತ್ತದೆ. ಪದವೀಧರರು ವಿದ್ಯಾವಂತರೆನಿಸಿಕೊಳ್ಳುವುದಿಲ್ಲ. ವಿದ್ಯೆಯ ಜೊತೆಗೆ ವಿವೇಕ ಮೂಡಲು ಸಾಹಿತ್ಯ ಓದಬೇಕು. ಬದುಕನ್ನು ಸಂಭ್ರಮಿಸಬೇಕಾದರೆ ವರ್ತಮಾನದಲ್ಲಿ ಜೀವಿಸಬೇಕು. ಇದರಿಂದ ವ್ಯಕ್ತಿ ಶಕ್ತಿಯಾಗಲು ಸಾಧ್ಯ. ಸಣ್ಣ ವಿಷಯಗಳಿಗೆ ಆತ್ಮಹತ್ಯೆಗೆ ಮುಂದಾಗುವ ಎಳೆ ಮನಸ್ಸುಗಳು ಕಾರಂತರ ಕೃತಿಗಳನ್ನು ಓದಿದರೆ ಅಂಥ ಆಲೋಚನೆಗಳೇ ಹುಟ್ಟುಕೊಳ್ಳುವುದಿಲ್ಲ. ಬದುಕಿನ ಅನನ್ಯತೆ ಅರಿವಾಗುತ್ತದೆ ಎಂದು ಹೇಳಿದರು. ಜೀವನಕ್ಕಾಗಿ ಆಯುರ್ವೇದ ಈ ವಿಷಯವಾಗಿ ಜಿಲ್ಲಾ ಆಯುಷ್ ಆಸ್ಪತ್ರೆಯ ತಜ್ಞ ವೈದ್ಯೆಯಾದ ಡಾ. ಸ್ವಾತಿ ಶೇಟ್ ಮಾತನಾಡುತ್ತಾ ಉತ್ತಮ ಆರೋಗ್ಯಕರ ಜೀವನಕ್ಕೆ ಆಯುರ್ವೇದ ಪದ್ಧತಿ ಅತಿ ಅಗತ್ಯ. ದಿನನಿತ್ಯ ಜೀವನದಲ್ಲಿ ಪೌಷ್ಟಿಕವಾದ ಆಹಾರವನ್ನು ಹಿತಮಿತದಲ್ಲಿ ಸೇವಿಸುವುದರೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆಶಾ ಕುಮಾರಿ ವಹಿಸಿದ್ದರು. ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್. ಪಿ. ಆಶಯ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಕಸಾಪ ಬೈಂದೂರು ತಾಲೂಕು ಅಧ್ಯಕ್ಷ ಡಾ. ರಘು ನಾಯ್ಕ, ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ಜಿಲ್ಲಾ ಘಟಕದ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ಧನ್ ವಂದಿಸಿದರು.
ಬೆಳ್ತಂಗಡಿ : ಮಾಜಿ ಶಾಸಕ ವಸಂತ್ ಬಂಗೇರ ನಿಧನ
Posted On: 08 May 2024, 06:53 PM
ಬೆಳ್ತಂಗಡಿ : ಕಾಂಗ್ರೆಸ್ ಮುಖಂಡ, ಬಿಲ್ಲವ ಸಮಾಜದ ನಾಯಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ್ ಬಂಗೇರ ಇಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಗೇರ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆಗೆ ಒಳಗಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ 1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದರು. ಬೆಳ್ತಂಗಡಿಯಲ್ಲಿ ಐದು ಬಾರಿಯ ಶಾಸಕರಾಗಿದ್ದರು. 1985ರಲ್ಲಿ ಮತ್ತೆ ಭಾಜಪ ಬೆಂಬಲದಿಂದ ಸ್ಪರ್ಧಿಸಿ ಶಾಸಕರಾದರು. 1989ರಲ್ಲಿ ಬಿಜೆಪಿಯನ್ನು ತೊರೆದು ಜಾತ್ಯಾತೀತ ಜನತಾದಳಕ್ಕೆ ಸೇರ್ಪಡೆಗೊಂಡು ಸ್ಪರ್ಧಿಸಿ, ಸೋತಿದ್ದರು.1994ರಲ್ಲಿ ಜಾತ್ಯಾತೀತ ಜನತಾದಳದಿಂದ ಸ್ಪರ್ಧಿಸಿದ್ದ ಕೆ. ವಸಂತ ಬಂಗೇರ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಬಂಗೇರರು ವಿಧಾನ ಸಭೆಯ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದರು. 1999ರಲ್ಲಿ ಮತ್ತು 2004ರಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಬಂಗೇರರು ಸೋಲು ಅನುಭವಿಸಿದ್ದರು. 2008ರ ವಿಧಾನ ಸಭಾ ಚುನಾವಣೆಯಲ್ಲಿ ಬಂಗೇರರು ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕಾಂಗ್ರೆಸ್ ಬೆಂಬಲದಲ್ಲಿ ಸ್ಪರ್ಧಿಸಿ ನಾಲ್ಕನೇ ಅವಧಿಗೆ ಶಾಸಕರಾಗಿ ಚುನಾಯಿತರಾಗುವಲ್ಲಿ ಯಶಸ್ವಿಯಾದರು. 2013ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಮತ್ತೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಂಗೇರ ಅವರ ಪಾರ್ಥಿವ ಶರೀರ ಮೇ 9ರಂದು ಮುಂಜಾನೆ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು.
