Updated News From Kaup
ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹ್ಯಾಕ್-ಟೆಕ್ 2.0 ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
Posted On: 01-03-2024 06:09PM
ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳು ಹ್ಯಾಕ್-ಟೆಕ್ 2.0 ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಮಾಚ್೯ 2 - 12 : ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ ಉಚಿತ ಥೆರಪಿ
Posted On: 01-03-2024 04:38PM
ಕಟಪಾಡಿ : ಸಿ. ಎಸ್. ಐ ಕ್ರೈಸ್ತ ದೇವಾಲಯ ಅಂಬಾಡಿ ಮತ್ತು ಜೇಸಿಐ ಕಟಪಾಡಿ ಹಾಗೂ ಕೋಟೆ ಗ್ರಾಮ ಪಂಚಾಯತ್, ಸಿ ಎಸ್ ಐ ಲಂಬಾರ್ಡ್ ಸ್ಮಾರಕ (ಮಿಷನ್ ) ಆಸ್ಪತ್ರೆ ಉಡುಪಿ ಹಾಗೂ ಕಂಪಾನಿಯೋ ಇವರ ಸಹಯೋಗದೊಂದಿಗೆ ಮಾರ್ಚ್ 02 ರಿಂದ ಮಾರ್ಚ್ 12ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಜೇ ಸಿ ಐ ಭವನ ಕಟಪಾಡಿ ಹಾಗೂ ಸಿ ಎಸ್ ಐ ದೇವಾಲಯದ ಚರ್ಚ್ ಹಾಲ್ ನಲ್ಲಿ ಯಾವುದೇ ಔಷಧವಿಲ್ಲದೆ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ ಉಚಿತ ಥೆರಪಿ ಸಿಗಲಿದೆ.
ಮಾಚ್೯ 3 : ಉಚ್ಚಿಲದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
Posted On: 01-03-2024 02:56PM
ಉಚ್ಚಿಲ : ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಮಾಚ್೯ 3, ಆದಿತ್ಯವಾರ ಬೆಳಿಗ್ಗೆ ಘಂಟೆ 9ರಿಂದ ಮಧ್ಯಾಹ್ನ 1ರ ವರೆಗೆ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಲಿದೆ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಕಿಲ್ಲದ ಕಾಪು ಫ್ಲೈ ಓವರ್ ಅಂಡರ್ ಪಾಸ್ : ಅಧಿಕಾರಿಗಳ ನಿರ್ಲಕ್ಷ್ಯತನ
Posted On: 01-03-2024 01:48PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮುಂಭಾಗದ ಎನ್ಎಚ್ 66, ಅಂಡರ್ಪಾಸ್ನಲ್ಲಿ ಅಳವಡಿಸಲಾಗಿರುವ ದೀಪವು ಕಳೆದ 18 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿಲ್ಲ, ಇದು ಕಾಪು ನಗರ ಪ್ರದೇಶಕ್ಕೆ ಪ್ರವೇಶಿಸುವ ಮುಖ್ಯ ರಸ್ತೆಯಾಗಿದ್ದು ಈ ಸಮಸ್ಯೆಯನ್ನು ಮನಗಂಡು ಸ್ಥಳೀಯರಾದ ಜಯರಾಮ್ ಆಚಾರ್ಯ ಇವರು ರಾಷ್ಟ್ರೀಯ ಹೆದ್ದಾರಿ, ಜಿಲ್ಲಾಧಿಕಾರಿ, ತಹಶೀಲ್ದಾರ್, ಕಾಪು ಪುರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಿದರೂ ಕೂಡಾ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ
Posted On: 01-03-2024 01:44PM
ಶಂಕರಪುರ : ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02, 03 ಶನಿವಾರದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.
ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ
Posted On: 29-02-2024 07:39PM
ಪಡುಬಿದ್ರಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಸಂಭ್ರಮ ಅಂಗವಾಗಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಾರ್ಚ್ 5, ಮಂಗಳವಾರ ಹೆಜಮಾಡಿಯ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಅಯೋಜಿಸಲಾಗಿದೆ.
ಕಾಪು ತಾಲೂಕು ಭೂನ್ಯಾಯ ಮಂಡಳಿಗೆ ನೇಮಕ
Posted On: 29-02-2024 04:15PM
ಕಾಪು : ತಾಲೂಕು ಭೂನ್ಯಾಯ ಮಂಡಳಿಗೆ ಸರಕಾರ ನಾಲ್ವರನ್ನು ಸದಸ್ಯರನ್ನಾಗಿ ನೇಮಿಸಿ ನಾಮ ನಿರ್ದೇಶನ ಮಾಡಿದೆ.
ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗ ಶಿರ್ವ - ಏಕಾದಶ ವರ್ಷದ ವಾರ್ಷಿಕೋತ್ಸವ
Posted On: 29-02-2024 10:29AM
ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗ ಶಿರ್ವ ಇದರ ಏಕಾದಶ ವರ್ಷದ ವಾರ್ಷಿಕೋತ್ಸವ ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಉಚ್ಚಿಲ ಸರಸ್ವತಿ ಮಂದಿರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ ಮತ್ತು ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯ ವಿ. ಆಚಾರ್ಯ ಭಾಗವಹಿಸಿದ್ದರು.
ಪತಂಜಲಿ ಕಟಪಾಡಿ ಕಕ್ಷೆಯ ವತಿಯಿಂದ ಮನೋಹರ್ ಕಾಮತ್ ಮುಂಬೈ ಇವರಿಗೆ ಸನ್ಮಾನ
Posted On: 29-02-2024 10:23AM
ಕಟಪಾಡಿ : ಮೂಲದ ಪ್ರಸ್ತುತ ಮುಂಬೈ ಯಲ್ಲಿ ನೆಲೆಸಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮನೋಹರ್ ಕಾಮತ್ ಇವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ 30 ವರ್ಷಗಳಿಂದ ಯೋಗ ಸಾಧನೆಯನ್ನು ಮಾಡುತ್ತಿದ್ದು, ಇವರ ಯೋಗ ಶ್ರದ್ಧೆ, ಜೀವನೋತ್ಸಾಹ ಹಾಗೂ ಶ್ವಾನ ಪ್ರಿಯತೆಯನ್ನು ಮನಗಂಡು ಕಟಪಾಡಿ ಪತಂಜಲಿ ಯೋಗ ಕಕ್ಷೆಯ ವತಿಯಿಂದ ಸನ್ಮಾನಿಸಲಾಯಿತು.
ಪಾಂಗಾಳ : ಹಾಳಾಗಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಚಾಲಕ ಮೃತ್ಯು
Posted On: 28-02-2024 09:53PM
ಪಾಂಗಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ
