Updated News From Kaup

ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡ - ಉದ್ಘಾಟನೆ

Posted On: 28-02-2024 08:22PM

ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 55.65 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡದ ಉದ್ಘಾಟನೆಯನ್ನು ಫೆ.28ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಮುಲ್ಕಿ : ಶಿವಾಯ ಫೌಂಡೇಶನ್ ಮುಂಬೈ ವತಿಯಿಂದ ದಿನಸಿ ಸಾಮಾಗ್ರಿ, ವಿಧವಾ ವೇತನದ ಚೆಕ್ ಹಸ್ತಾಂತರ

Posted On: 28-02-2024 07:42PM

ಮುಲ್ಕಿ : ಶಿವಾಯ ಫೌಂಡೇಶನ್ (ರಿ.) ಮುಂಬೈ ಸಂಸ್ಥೆಯ ವತಿಯಿಂದ ಫೆ.28ರಂದು ಮುಲ್ಕಿ ಕಾರ್ನಾಡು ಅಮೃತಮಯಿ ನಗರ ನಿವಾಸಿ ಗೀತಾ ರವರ ಕುಟುಂಬಕ್ಕೆ 4ನೇ ತಿಂಗಳಿನ ದಿನಬಳಕೆಯ ದಿನಸಿ ಸಾಮಾಗ್ರಿ ಹಾಗೂ ವಿಧವಾ ವೇತನದ ಚೆಕ್ ನ್ನು ಹಸ್ತಾಂತರಿಸಲಾಯಿತು.

ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿಗೆ “Incridea - 24” ರನ್ನರ್ ಆಫ್ ಟ್ರೋಫಿ

Posted On: 28-02-2024 07:04PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್ಲುವಿನ ಒಟ್ಟು 60 ವಿದ್ಯಾರ್ಥಿಗಳು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ(ಎಮ್.ಎ.ಎಮ್.ಐ.ಟಿ)ದಲ್ಲಿ ದಿನಾಂಕ 22 ರಿಂದ 24 ಫೆಬ್ರವರಿ 2024 ರಂದು ನಡೆದ "Incridea-24" ರಲ್ಲಿ ಭಾಗವಹಿಸಿ ರನ್ನರ್ ಆಫ್ ಟ್ರೋಫಿ ಹಾಗೂ ರೂ. 20,000 ನಗದು ಬಹುಮಾನವನ್ನು ಪಡೆದಿರುತ್ತಾರೆ.

ಮಾಚ್೯ 2 : ಸಾಂತೂರು ದೊಡ್ಡಮಠ ಕುಟುಂಬಸ್ಥರ ಮೂಲ ನಾಗಬನದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ, ದೈವದ ನೇಮೋತ್ಸವ

Posted On: 28-02-2024 11:48AM

ಕುತ್ಯಾರು : ಸಾಂತೂರು ದೊಡ್ಡಮಠ ಕುಟುಂಬಸ್ಥರ ಮೂಲ ನಾಗಬನದಲ್ಲಿ ಮಾಚ್೯ 02, ಶನಿವಾರ ಶ್ರೀ ಸೋದೆ ವಾದಿರಾಜ ಮಠದ ಯತಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಏಕ ಪವಿತ್ರ ನಾಗಮಂಡಲೋತ್ಸವ ಮತ್ತು ದೈವದ ನೇಮೋತ್ಸವವು ಜರಗಲಿದೆ.

ಉಡುಪಿ : ಜೆಸಿಐ ಉಡುಪಿ ಇಂದ್ರಾಳಿ ಘಟಕ - ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ

Posted On: 27-02-2024 02:50PM

ಉಡುಪಿ : ಜೆಸಿಐ ವಲಯ 15ರ ಜೆಸಿಐ ಉಡುಪಿ ಇಂದ್ರಾಳಿ ಘಟಕದ ವತಿಯಿಂದ ನಿಟ್ಟೂರು ಪ್ರಾಥಮಿಕ ಶಾಲಾ ಸಭಾಂಗಣ ಉಡುಪಿಯಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ ಜರಗಿತು.

ಮಸ್ಕತ್ : ‘ಬಿರುವ ಜವನೆರ್ ‘ ಸಂಘಟನೆ - ‘ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ’ ಯಕ್ಷಗಾನ ತಾಳಮದ್ದಳೆ

Posted On: 26-02-2024 05:57PM

ಮಸ್ಕತ್ : ‘ಬಿರುವ ಜವನೆರ್ ‘ ಸಂಘಟನೆ ಯು ಮಸ್ಕತ್ ನ ದಾರಸೈಟ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪೂಜಾ ಸಹಿತ ‘ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ’ ಕಥೆಯನ್ನು ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರಸ್ತುತಿಗೊಳಿಸಲಿದೆ.

ಪಡುಬೆಳ್ಳೆ: ಶಿಕ್ಷಣತಜ್ಞ ಆರ್.ಎಸ್. ಬೆಳ್ಳೆ ಸಂಸ್ಮರಣೆ

Posted On: 26-02-2024 05:37PM

ಪಡುಬೆಳ್ಳೆ : ಸಮಾಜಮುಖಿ ವ್ಯಕ್ತಿತ್ವವನ್ನು ರೂಢಿಸಿಕೊಂಡಾಗ ಮಾತ್ರ ಅಭಿವೃದ್ಧಿ ಹಾಗೂ ಯಶಸ್ಸು ಸಂಪೂರ್ಣ ಸಾಧ್ಯವಾಗುತ್ತದೆ ಎಂಬುದಕ್ಕೆ ಶಿಕ್ಷಣ ತಜ್ಞ ಮತ್ತು ಸಮಾಜಸೇವಕ ಆರ್.ಎಸ್. ಬೆಳ್ಳೆ ಅವರ ಬದುಕೇ ಉದಾಹರಣೆಯಾಗಿದೆ ಎಂದು ಕಟ್ಟಿಂಗೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ದೇವದಾಸ್ ಹೆಬ್ಬಾರ್ ಹೇಳಿದರು. ಅವರು ಪಡುಬೆಳ್ಳೆ ಪಾಂಬೂರಿನಲ್ಲಿ ಫೆ. 25ರಂದು ಜರಗಿದ ಆರ್.ಎಸ್. ಬೆಳ್ಳೆ ಸಂಸ್ಮರಣೆಯ ಹೊನಲು ಬೆಳಕಿನ ಮಿತ್ರಗೋಷ್ಠಿಯಲ್ಲಿ ಮಾತನಾಡಿದರು.

ಮಂಗಳೂರು : ಎನ್ ಎಸ್ ಸಿ ಡಿ‌ ಎಫ್ -12 ಗಂಟೆಗಳ ಕನ್ನಡ ಗೀತೆಗಳ ಗಾಯನ ವಿಶ್ವ ದಾಖಲೆ ; ಅಭಿನಂದನಾ ಸಮಾರಂಭ

Posted On: 25-02-2024 11:05AM

ಮಂಗಳೂರು : ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ದಿ ಪ್ರತಿಷ್ಠಾನ (NSCDF) ನವೆಂಬರ್ 5ರಂದು ಆಯೋಜಿಸಿದ್ದ ನಿರಂತರ 12 ಗಂಟೆಗಳ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮವು ವಿಶ್ವ ದಾಖಲೆಯನ್ನು ನಿರ್ಮಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವು ಫೆಬ್ರವರಿ 23ರಂದು ಮಂಗಳೂರು ಪುರಭವನದಲ್ಲಿ ನಡೆಯಿತು.

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಲಬಾರ್ ಚಾರಿಟೇಬಲ್ ಟ್ರಸ್ಟ್ - 15 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

Posted On: 25-02-2024 10:27AM

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸುಮಾರು 40 ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಇಂದು ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ವಿತರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿವೇತನ ವಿತರಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಮಾತನಾಡಿ, ಮಲಬಾರ್ ಗೊಲ್ಡ್ ಅರ್ಹರಿಗೆ ಎಲ್ಲ ರೀತಿಯಲ್ಲೂ ಸಹಾಯ ನೀಡುತ್ತಿದೆ. ಮನೆ ನಿರ್ಮಾಣ, ರೋಗಿಗಳಿಗೆ ಧನಸಹಾಯ, ಕೋವಿಡ್ ಸಂದರ್ಭದಲ್ಲಿ ಕಿಟ್ ವಿತರಿಸುವ ಮೂಲಕ ಸಮಾಜಕ್ಕೆ ಮಾನವೀಯ ನೆಲೆಯಲ್ಲಿ ಸ್ಪಂದಿಸಿದೆ ಎಂದು ಹೇಳಿದರು.

ಕಾರ್ಕಳ : ಕುಲಾಲ ಚಾವಡಿಯಿಂದ ನೆರವಿನ ಹಸ್ತ

Posted On: 25-02-2024 10:17AM

ಕಾರ್ಕಳ : ತಾಲೂಕಿನ ಅಂಡಾರು ಗ್ರಾಮದ ಮಹಿಳೆಯೋರ್ವರ ಶಸ್ತ್ರಚಿಕಿತ್ಸೆಗೆ ಕುಲಾಲ ಚಾವಡಿಯಿಂದ ರೂ.35,000 ಸಂಗ್ರಹಿಸಿ ಫೆಬ್ರವರಿ 18 ರಂದು ಹಸ್ತಾಂತರಿಸಲಾಯಿತು.