Updated News From Kaup

ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ

Thumbnail
Posted On: 11 Apr 2024, 12:59 PM

ಉದ್ಯಾವರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉದ್ಯಾವರದಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಮೂವರು ಕಾಂಗ್ರೆಸ್ ಸೇರ್ಪಡೆಗೊoಡರು. ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಫ್ರೀಡಾ ಡಿಸೋಜಾ ಸಹಿತ ಐವನ್ ಡಿಸೋಜಾ, ರಿಚರ್ಡ್ ಡಿಸೋಜಾ ರವರನ್ನು ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಕಾರ್ಯಾಧ್ಯಕ್ಷ ಚರಣ್ ವಿಠ್ಠಲ್ ಪಕ್ಷದ ಶಾಲು ಹೊಂದಿಸಿ ಸೇರ್ಪಡೆಗೊಳಿಸಿದರು. ಈ ಸಂದರ್ಭದಲ್ಲಿ ಸೋಶಿಯಲ್ ಮಾಧ್ಯಮ ಉಸ್ತುವಾರಿ ನವೀನ್ ಶೆಟ್ಟಿ, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಯ್ಸ್ ಫೆರ್ನಾಂಡಿಸ್, ಮುಖಂಡರಾದ ನಾಗೇಶ್ ಕುಮಾರ್ ಉದ್ಯಾವರ, ಶೇಖರ್ ಕೋಟ್ಯಾನ್, ಗಿರೀಶ್ ಕುಮಾರ್, ಹೆಲನ್ ಫೆರ್ನಾಂಡಿಸ್, ಗ್ರಾಮ ಪಂಚಾಯತ್ ಸದಸ್ಯರಾದ ಲಾರೆನ್ಸ್ ಡೆಸಾ, ನಿತಿನ್ ಸಾಲ್ಯಾನ್, ದಿವಾಕರ ಬೊಳ್ಜೆ, ಮಧುಲತಾ, ಆಶಾ ಸುರೇಶ್, ಆಶಾ ವಾಸು, ಪೂರ್ಣಿಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು - ಶೇ. 100 ಫಲಿತಾಂಶದೊಂದಿಗೆ 9 ರ‍್ಯಾಂಕ್ ಗಳು

Thumbnail
Posted On: 10 Apr 2024, 03:38 PM

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಫಲಿತಾಂಶ ವನ್ನು ನೀಡುತ್ತಾ ಬಂದಿರುವ ಕ್ರಿಯೇಟಿವ್ ಸಂಸ್ಥೆ ರಾಜ್ಯಮಟ್ಟದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 9 ರ‍್ಯಾಂಕ್ ಗಳನ್ನು ಪಡೆಯುವ ಮೂಲಕ ಇಲ್ಲಿನ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸಾನ್ವಿರಾವ್ 3ನೇ ಸ್ಥಾನ, ಭಕ್ತಿ ಕಾಮತ್ ಮತ್ತು ಎಎಸ್ ಚಿನ್ಮಯ 6ನೇ ಸ್ಥಾನ, ಎ ಅನನ್ಯ ಜೈನ್ 9ನೇ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಿಂಚನ ಆರ್ ಎಚ್ 7ನೇ ಸ್ಥಾನ, ಸುಜಿತ್ ಡಿಕೆ ಮತ್ತು ಹಂಸಿನಿ ವಿ 8ನೇ ಸ್ಥಾನ, ಪ್ರೇಮ್ ಸಾಗರ್ ಪಾಟೀಲ್ ಮತ್ತು ವರ್ಷ ಎಚ್ ವಿ 10ನೇ ಸ್ಥಾನ ಪಡೆದಿರುತ್ತಾರೆ. ಇವರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದ.ಕ. ಪ್ರಥಮ ; ಉಡುಪಿ ದ್ವಿತೀಯ ಸ್ಥಾನ

Thumbnail
Posted On: 10 Apr 2024, 11:13 AM

ಉಡುಪಿ : ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂದು ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ - 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ. ಮಾಚ್೯ 1ರಿಂದ 22 ರವರೆಗೆ ಪರೀಕ್ಷೆಗಳು ನಡೆದಿದ್ದು, ಮಂಡಳಿಯು ಮಾರ್ಚ್ 25 ರಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಪ್ರಾರಂಭಿಸಿತ್ತು. ಈ ಬಾರಿಯೂ ಬಾಲಕಿಯರದ್ದೇ ಮೇಲುಗೈಯಾಗಿದ್ದು ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ.

ಗುಣಮಟ್ಟದ ಶಿಕ್ಷಣಕ್ಕೆ ಅತ್ಯುತ್ತಮ ಆಯ್ಕೆ - ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು

Thumbnail
Posted On: 10 Apr 2024, 10:37 AM

ಉಡುಪಿ : ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶವನ್ನು ನೀಡುತ್ತಾ ಬಂದಿರುವ ಕ್ರಿಯೇಟಿವ್ ಕಾಲೇಜು ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರ‍್ಯಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಬಂದಿದೆ. ದ್ವಿತೀಯ ಪಿಯುಸಿಯಲ್ಲಿ ರಾಜ್ಯದ ಹತ್ತು ರ‍್ಯಾಂಕ್ ಗಳಲ್ಲಿ ವಾಣಿಜ್ಯ ವಿಭಾಗಕ್ಕೆ 3 ರ‍್ಯಾಂಕ್ 2022-23 ನೆ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಪ್ರತಿ ವರ್ಷವ ಶೇ.100 ರಷ್ಟು ಫಲಿತಾಂಶದ ಜೊತೆ ಅನಘ (ಮೂರನೇ ರ‍್ಯಾಂಕ್) ದಿವಿತ್ ಗೌಡ(ಏಳನೇ ರ‍್ಯಾಂಕ್) ಹಾಗೂ ಅಕ್ಷತಾ ಪೈ(ಹತ್ತನೇ ರ‍್ಯಾಂಕ್) ನ್ನು ಪಡೆದಿರುತ್ತಾರೆ. CA ಫೌಂಡೇಷನ್ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಮೋಘ ಸಾಧನೆ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ CA ಫೌಂಡೇಶನ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜ್ ನ 20 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ ಪ್ರಥಮ ಪಿಯುಸಿಯಿಂದಲೇ ವಿಶೇಷ ತರಬೇತಿ ನೀಡುತ್ತಿದ್ದು ಅತ್ಯುತ್ತಮ ಹಾಗೂ ಕಡಿಮೆ ಶುಲ್ಕದೊಂದಿಗೆ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತದೆ. CSEET ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ಪ್ರತಿ ವರ್ಷ ದಾಖಲೆಯ ಫಲಿತಾಂಶ : ICSI ನಡೆಸುವ ಕಂಪನಿ ಸೆಕ್ರೆಟರಿಯ ಅರ್ಹತಾ ಪರೀಕ್ಷೆಯಲ್ಲಿ ಈ ಶೈಕ್ಷಣಿಕ ವರ್ಷದ 23 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಿರಂತರ ನುರಿತ ಉಪನ್ಯಾಸಕ ರಿಂದ ತರಬೇತಿ ನೀಡಲಾಗುತ್ತಿದೆ. ಇದಲ್ಲದೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಟ್ಯಾಲಿ ಪ್ರೈಮ್, ಪೈತಾನ್, ಕಮ್ಯುನಿಕೇಶನ್ ಸ್ಕಿಲ್ಸ್ ಬಗ್ಗೆ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ , ಸಾಹಿತ್ಯ, ರಾಷ್ಟ್ರೀಯ ಸೇವಾ ಯೋಜನೆ, ಕೆಸರಾಟ ಪಾಠ, ಯಕ್ಷಗಾನ, ಕೈಗಾರಿಕೆ ಭೇಟಿ ಸಂಗೀತ ತರಬೇತಿ ಗಳು ಹಾಗೂ ವ್ಯಕ್ತಿತ್ವ ವಿಕಸನ ಶಿಬಿರಗಳನ್ನುನೀಡಲಾಗುತ್ತಿದೆ. ವಿಶೇಷವಾಗಿ ರಾಷ್ಟ್ರೀಯ ಹಾಗೂ ಅಂತರಾಷ್ಟಮಟ್ಟದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಸಜ್ಜುಗೊಳಿಸಲಾಗುತ್ತಿದೆ.

ಕರಾವಳಿಯಾದ್ಯಂತ ಸಂಭ್ರಮದ ಈದುಲ್ ಫಿತರ್ ಆಚರಣೆ

Thumbnail
Posted On: 10 Apr 2024, 10:03 AM

ಕಾಪು : ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ಪ್ರದೇಶಗಳಾದ ದ.ಕ. ಉ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಈದುಲ್ ಫಿತರ್ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಸ್ಲಿಮರು ಒಂದು ತಿಂಗಳ ಪವಿತ್ರ ಉಪವಾಸ ವ್ರತವನ್ನು ಮುಕ್ತಾಯಗೊಳಿಸಲಿದ್ದಾರೆ. ಈದ್ ನಮಾಝಿನ ನಂತರ ಮಸೀದಿ/ಈದ್ಗಾಗಳಲ್ಲಿ ಖುತ್ಬಾ (ಪ್ರಭಾಷಣ) ನೆರವೇರಿತು. ನಂತರ ಹಿರಿಯರು, ಕಿರಿಯರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ದೃಶ್ಯಗಳು ಕಂಡು ಬಂತು. ಈ ಸಂಬಂಧ ಉಡುಪಿ ಹಾಗೂ ದ.ಕ ಜಿಲ್ಲಾಧಿಕಾರಿಗಳು ಏಪ್ರಿಲ್ 10 (ಇಂದು) ಸರಕಾರಿ ಕಚೇರಿಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದೆಲ್ಲೆಡೆ ಏಪ್ರಿಲ್ 11, ಗುರುವಾರದಂದು ಈದ್ ಉಲ್ ಫಿತರ್ ಹಬ್ಬದ ಆಚರಣೆ ನಡೆಯಲಿದೆ.

ಉಡುಪಿ : ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ - 200ನೇ‌ ಸ್ವಯಂಪ್ರೇರಿತ ‌ರಕ್ತದಾನ ಶಿಬಿರ

Thumbnail
Posted On: 10 Apr 2024, 09:32 AM

ಉಡುಪಿ : ಖ್ಯಾತ ರಕ್ತದಾನ ಸಂಸ್ಥೆ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ರಕ್ತ ಕೇಂದ್ರ ಕೆಎಂಸಿ ಮಣಿಪಾಲ‌ ಇದರ‌‌ ಸಹಕಾರದಲ್ಲಿ ರಕ್ತ ಕೇಂದ್ರ‌ ಕೆಎಂಸಿ ಮಣಿಪಾಲದಲ್ಲಿ ನಡೆದ 200ನೇ‌ ಸ್ವಯಂಪ್ರೇರಿತ ‌ರಕ್ತದಾನ ಶಿಬಿರವನ್ನು ಉಡುಪಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಎಚ್ ಅಶೋಕ್ ಉದ್ಘಾಟಿಸಿದರು. ನಂತರದಲ್ಲಿ ಮಾತನಾಡಿದ ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಕೇವಲ‌‌ 4 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 200ನೇ ರಕ್ತದಾನ ಶಿಬಿರ ಆಯೋಜಿಸಿ ಉಡುಪಿ ಜಿಲ್ಲೆಯ ಹಿರಿಮೆ‌ ಹೆಚ್ಚಿಸಿದೆ. ಪ್ರತಿ ವರ್ಷವು ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್,‌ ಮೇ ತಿಂಗಳಲ್ಲಿ ಕೃತಕ‌ ರಕ್ತದ ‌ಕೊರತೆ ತಲೆದೋರುತ್ತಿದ್ದು, ಇದರ ಶಾಶ್ವತ ಪರಿಹಾರಕ್ಕೆ ಏಪ್ರಿಲ್, ಮೇ‌ ತಿಂಗಳಲ್ಲಿ ಕಾಲೇಜ್ ಗಳಲ್ಲಿ ಹೆಚ್ಚು ಹೆಚ್ಚು ರಕ್ತದಾನ ಶಿಬಿರ ನಡೆಯುವಂತೆ ಪ್ರೇರೇಪಿಸಿದರೆ ಈ ಕೃತಕ ರಕ್ತದ ಅಭಾವದಿಂದ ಹೊರಬರಲು ಸಾಧ್ಯ ಎಂದರು. ಡಾ. ಶಮಿ ಶಾಸ್ತ್ರೀ ಸಭೆಯ ಅಧ್ಯಕ್ಷತೆ ವಹಿಸಿದರು. ಡಾ. ಟೋಮ್ ದೇವಸ್ಯ ಹೃದ್ರೋಗ ತಜ್ಞರು ಕೆಎಂಸಿ ‌ಮಣಿಪಾಲ, ಡಾ. ವಿಜಯ ಕುಮಾರ್,‌ ಮಕ್ಕಳ ಶಸ್ತ್ರಚಿಕಿತ್ಸೆ ತಜ್ಞ ವೈದ್ಯರು ಕೆಎಂಸಿ ಮಣಿಪಾಲ, ಡಾ. ದೇವಿಪ್ರಸಾದ್ ಹೆಜಮಾಡಿ ಪ್ರೊ. ಕೆಎಂಸಿ ಮಂಗಳೂರು, ಡಾ.ಆದರ್ಶ್ ಹೆಬ್ಬಾರ್, ವೈದ್ಯಕೀಯ ನಿರ್ದೇಶಕರು ಆದರ್ಶ ಆಸ್ಪತ್ರೆ ಕುಂದಾಪುರ, ರಕ್ತದ ಆಪತ್ಬಾಂದವ‌ ಸತೀಶ್ ಸಾಲ್ಯಾನ್ ಮಣಿಪಾಲ್,‌ ಅಧ್ಯಕ್ಷರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಡಾ. ಹರಿಣಾಕ್ಷಿ ಕರ್ಕೇರಾ ಅಧ್ಯಕ್ಷರು, ಜೆಸಿಐ ಉಡುಪಿ ಸಿಟಿ, ದೇವದಾಸ್ ಪಾಟ್ಕರ್, ರಾಘವೇಂದ್ರ ಪ್ರಭು ಕರ್ವಾಲು, ಶರತ್ ಕಾಂಚನ್ ಆನಗಳ್ಳಿ, ಉದಯ ನಾಯ್ಕ್ ಉಪಸ್ಥಿತರಿದ್ದರು. ಡಾ. ಬಾಲಕೃಷ್ಣ ಮದ್ದೋಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಡಾ ದಿನೇಶ್ ಹೆಗ್ಡೆ ಆತ್ರಾಡಿ ಧನ್ಯವಾದ ಅರ್ಪಿಸಿದರು. ಈ ಯಶಸ್ವಿ ರಕ್ತದಾನ ಶಿಬಿರಕ್ಕೆ ರೋಟರಿ ಪರ್ಕಳ, ಜಿಸಿಐ ಉಡುಪಿ ಸಿಟಿ ಹಾಗೂ ಎನ್ ಎಸ್ ಎಸ್ ಘಟಕ ಎಂಐಟಿ ಮಣಿಪಾಲ ಸಹಕಾರ‌ ನೀಡಿದ್ದು, ಒಟ್ಟು 56 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಕಾಪು ಹೊಸ ಮಾರಿಗುಡಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಆಯ್ಕೆ

Thumbnail
Posted On: 10 Apr 2024, 09:23 AM

ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬೆಂಗಳೂರಿನ ಎಂ ಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುತ್ತಾರೆ.

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನ ಘೋಷಣೆ

Thumbnail
Posted On: 09 Apr 2024, 05:21 PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಕಾರದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ವಿದ್ವಾನ್ ಕೆ.ಜಿ. ರಾಘವೇಂದ್ರ ತಂತ್ರಿವರ್ಯರು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯಲ್ಲಿ  ಪ್ರಾರ್ಥಿಸುವ ಮೂಲಕ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಿದರು. ಅಮ್ಮನ ಭವ್ಯ ಗರ್ಭಗುಡಿಯ ದಿವ್ಯ ಸಾನಿಧ್ಯದಲ್ಲಿ ಕೋಣಗಳಿಂದ ಉಳುಮೆ ಮಾಡುವ ಮೂಲಕ ನವ ಧಾನ್ಯಗಳ ಬಿತ್ತನೆ ಮಾಡಲಾಯಿತು. ಗಣ್ಯರು, ದಾನಿಗಳು, ಭಕ್ತರ ಸಮ್ಮುಖದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರ, ಭೋಜನ ಶಾಲೆ ಹಾಗೂ ಸುಸಜ್ಜಿತ ಶೌಚಾಲಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಶಂಕು ಸ್ಥಾಪನೆ ಮಾಡಲಾಯಿತು. ಬಳಿಕ‌ ನಡೆದ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯನ್ನು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭ ವಾಸ್ತು ತಜ್ಞ ವಿದ್ವಾನ್ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಮಾತನಾಡಿ ದೇವಸ್ಥಾನ ನಿರ್ಮಾಣ ಕಷ್ಟಕರ ಆದರೆ ಕಷ್ಟದಲ್ಲಿ ಸುಖ, ಸಾರ್ಥಕ್ಯ ಇದೆ. ಶಾಸ್ತ್ರದ ಪ್ರಕಾರ ಊರು ದೇವಸ್ಥಾನ ಕಟ್ಟಬೇಕು. ಅದರ ಫಲ ದೇವಸ್ಥಾನ ಊರನ್ನು ಕಟ್ಟುತ್ತದೆ ಎಂದಿದೆ. ಹಣವಿದ್ದರೆ ದೇವಸ್ಥಾನವಾಗದು, ಇಚ್ಚಾ ಶಕ್ತಿಯು ಅಗತ್ಯ. ಕಾಪುವಿನ ಶ್ರೀ ಮಾರಿಯಮ್ಮ ಯುದ್ಧ ದೇವತೆ, ಕರಾವಳಿಯಲ್ಲಿ ರಕ್ಷಣೆಗಾಗಿ ಸೈನ್ಯದ ನೆಲೆಯ ಭಾಗವಾದ ದೇವತೆ ಶ್ರೀ ಮಾರಿಯಮ್ಮ. ಕಾಪು ಸುತ್ತಮುತ್ತಲ ಸುಮಾರು ಐದು-ಆರು ಕಿಲೋ ಮೀಟರ್ ಕುಂಕುಮ ವರ್ಣ ಅಥವಾ ರಕ್ತವರ್ಣದ ಮಣ್ಣನ್ನು ಕಾಣಬಹುದು. ಇದು ಮಾರಿಯಮ್ಮ ಇರುವ ಸಂಕೇತ ಎಂದು ಹೇಳಿದರು. ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಮಾತನಾಡಿ ಕಾಪು ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ಸಿಕ್ಕಿರುವುದು ಸೌಭಾಗ್ಯ. ವಿವಿಧ ಧಾರ್ಮಿಕ ಕಾರ್ಯಗಳು ನಡೆದಿದೆ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುತ್ತೇನೆ ಎಂದರು. ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕುಮಾರಗುರು ಕ್ಷೇತ್ರದಲ್ಲಿ ನಡೆದ ಧಾರ್ಮಿಕ ವಿಧಿ ವಿಧಾನಗಳಾದ ಭೂಕರ್ಷಣ ಖನನ, ಹರಣ, ದಾಹ, ಪೂರಣ, ಬೀಜ ವಪನಗಳ ಜೊತೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು 2025 ರ ಮಾಚ್೯ 2ರಂದು ನಡೆಸಲಾಗುವುದು ಎಂದು ಘೋಷಿಸಿದರು. ಈ ಸಂದರ್ಭ ಶಂಖನಾದ ಮೊಳಗಿಸಲಾಯಿತು. ಇದೇ ಸಂದರ್ಭ ಕ್ಷೇತ್ರದ ಬಗೆಗಿನ ಆಲ್ಬಂ ಗೀತೆಯನ್ನು ಲೋಕಾರ್ಪಣೆ ಮಾಡಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ವೀರಶೈವ ಸಮುದಾಯದ ಸ್ವಾಮಿಗಳಾದ ಶ್ರೀ ರುದ್ರಮುನಿ ಸ್ವಾಮಿಗಳು ಜಂಗಮ ಸಂಸ್ಥಾನ ಮಠ ಗುರುಪುರ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಅದಾನಿ ಮತ್ತು ಯುಪಿಸಿಎಲ್ ನಂದಿಕೂರು ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ನವೀನ್ ಚಂದ್ರ ಶೆಟ್ಟಿ, ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೇಖರ್ ಆಚಾರ್ಯ, ಕಾಪು ಶ್ರೀ ವೀರಭದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಯಕರ ಶೆಟ್ಟಿಗಾರ್, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ, ಕಟ್ಟಡ ಸಮಿತಿಯ ಪ್ರಧಾನ ಸಂಚಾಲಕರಾದ ಭಗವಾನ್ ದಾಸ್ ಶೆಟ್ಟಿಗಾರ್, ಶ್ರೀಕರ ಶೆಟ್ಟಿ ಕಲ್ಯ, ಗಣೇಶ್ ಪೂಜಾರಿ ಮೂಡುಬೆಳ್ಳೆ, ಉದ್ಯಮಿಗಳಾದ ಆನಂದ್ ಎಂ ಶೆಟ್ಟಿ, ರವಿ ಸುಂದರ ಶೆಟ್ಟಿ, ರಂಜನಿ ಸುಧಾಕರ್ ಹೆಗ್ಡೆ, ಸುಜಾತ್ ಶೆಟ್ಟಿ, ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಸಿ ಕೋಟ್ಯಾನ್, ವಿದ್ವಾನ್ ಕೆ.ಜಿ. ರಾಘವೇಂದ್ರ ತಂತ್ರಿ, ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ. ಶ್ರೀನಿವಾಸ ತಂತ್ರಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ್ ಶೆಟ್ಟಿ, ಮುಂಬೈ ಉಚ್ಛ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕೋಟ್ಯಾನ್, ಅಭಿವೃದ್ಧಿ ಸಮಿತಿಯ ಆಫ್ರಿಕಾ ಘಟಕದ ಅಧ್ಯಕ್ಷ ಮಹೇಶ್ ಕುಮಾರ್,ಯೋಗೀಶ್‌ ಶೆಟ್ಟಿ ಬಾಲಾಜಿ, ರಮೇಶ್ ಹೆಗ್ಡೆ, ಕಾಪು ದಿವಾಕರ್ ಶೆಟ್ಟಿ, ಮಾಧವ ಪಾಲನ್, ಡಾ. ದೇವಿ ಪ್ರಸಾದ್ ಶೆಟ್ಟಿ, ಮನೋಹರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು. ರೇಣುಕಾ ಜೋಗಿ ಪ್ರಾರ್ಥಿಸಿದರು. ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಸಮಿತಿ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ ವಂದಿಸಿದರು.

ಪಡುಬಿದ್ರಿ : ಬಂಜೆತನ ನಿವಾರಣೆ ಸಾಧ್ಯ - ಡಾ. ಪಯಸ್ವಿನಿ ಶೆಟ್ಟಿಗಾರ್

Thumbnail
Posted On: 08 Apr 2024, 02:58 PM

ಪಡುಬಿದ್ರಿ : ಆಧುನಿಕ ಯುಗದಲ್ಲಿ ಪ್ರತಿಯೊಂದಕ್ಕೂ ಚಿಕಿತ್ಸೆ ಇರುವ ಕಾರಣ ಬಂಜೆತನವನ್ನು ಕೂಡಾ ನಿವಾರಣೆ ಮಾಡಬಹುದು.‌ ಇಂದಿನ ಜೀವನ ಶೈಲಿ ಹಾಗು ಆಹಾರ ಪದ್ದತಿಯೇ ಬಂಜೆತನಕ್ಕೆ ಮುಖ್ಯ ಕಾರಣ. ಬಂಜೆತನದಿಂದ ಮಾನಸಿಕ ಒತ್ತಡಕ್ಕೆ ಒಳಾಗಾಗುವವರ ಸಂಖ್ಯೆ ಜಾಸ್ತಿ ಆಗುತ್ತಿದೆ ಎಂದು ವ್ಯೆದಾಧಿಕಾರಿ ಡಾ. ಪಯಸ್ವಿನಿ ಶೆಟ್ಟಿಗಾರ್ ಹೇಳಿದರು. ಅವರು ಪಡುಬಿದ್ರಿ ರೋಟರಿ ‌ಕ್ಲಬ್, ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ, ರೋಟರಾಕ್ಟ್ ಕ್ಲಬ್ ಮತ್ತು ನೋವಾ ಐ ವಿ.ಎಫ್ ಮಂಗಳೂರು ಇದರ‌ ಜಂಟಿ ಆಶ್ರಯದಲ್ಲಿ ಪಡುಬಿದ್ರಿ‌ ಓಂಕಾರ್ ಕಲಾ ಸಂಗಮದಲ್ಲಿ ನಡೆದ ಬಂಜೆತನ ತಪಾಸಣಾ ‌ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಶಿಬಿರದ ಐ.ವಿ.ಎಫ್ ಮಂಗಳೂರು ಕ್ಲಿನಿಕ್ ನ ವ್ಯೆದ್ಯಾಧಿಕಾರಿ ಡಾ. ಶಮೀಝ್ ಫೈಝಿ ಮಾತನಾಡಿ ಆಧುನಿಕ ಜಗತ್ತಿನಲ್ಲಿ ಬಂಜೆತನ ಸಾಮಾನ್ಯವಾಗಿದೆ. ಶೇ.50 ರಷ್ಟು ದಂಪತಿಗಳಲ್ಲಿ ಈ ಸಮಸ್ಯೆ ಇದೆ. ಪುರುಷರು ಹಾಗೂ ಮಹಿಳೆಯರು ಬಂಜೆತನಕ್ಕೆ ಸಮಾನ ಕಾರಣರಾಗಿರುತ್ತಾರೆ. ಇದನ್ನು ನಿವಾರಣೆ ಮಾಡಲು ಹಲವಾರು ಬಗೆಯ ಔಷಧಗಳು ಹಾಗು ಚಿಕಿತ್ಸೆಗೆ ಅವರು ಒಳಾಗಾಗಬೇಕಾಗುತ್ತದೆ. ಇದರ ಬಗ್ಗೆ ಮಾತನಾಡಲು ಹಿಂಜರಿಯ ಬಾರದು ಎಂದರು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ‌ತೆಂಕ‌ ಗ್ರಾ.ಪಂ ಉಪಾಧ್ಯಕ್ಷೆ ಕಸ್ತೂರಿ ಪ್ರವೀಣ್, ರೋಟರಿ ನಿಯೋಜಿತ ಅಧ್ಯಕ್ಷೆ ತಸ್ನೀನ್ ಅರಾ, ರೋಟರಿ ಸಮುದಾಯದಳ ಅಧ್ಯಕ್ಷ ರಚನ್ ಸಾಲ್ಯಾನ್, ರೋಟರಾಕ್ಟ್ ಕ್ಲಬ್ ಕಾರ್ಯದರ್ಶಿ ಪ್ರತೀಕ್ ಆಚಾರ್ಯ, ನೋವಾ ಐ.ವಿ.ಎಫ್ ಸೇಲ್ಸ್ ಮೆನೇಜರ್ ಹರ್ಷ ಮಂಗಳೂರು ಉಪಸ್ಥಿತರಿದ್ದರು. ಸಂತೋಷ್ ‌ಪಡುಬಿದ್ರಿ ಸ್ವಾಗತಿಸಿದರು. ಅನಿತಾ ಬಿ.ಎಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 46 ಮಂದಿ ಈ ಶಿಬಿರದ‌ ಪ್ರಯೋಜನವನ್ನು ಪಡೆದುಕೊಂಡರು.

ಏಪ್ರಿಲ್ 7 (ನಾಳೆ) : ಪಡುಬಿದ್ರಿಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ

Thumbnail
Posted On: 06 Apr 2024, 05:21 PM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಇನ್ನರ್ ವ್ಹೀಲ್ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ ಮತ್ತು ರೋಟರಾಕ್ಟ್ ಕ್ಲಬ್ ಪಡುಬಿದ್ರಿ ಸಂಯುಕ್ತ ಆಶ್ರಯದಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ ಓಂಕಾರ ಕಲಾ ಸಂಗಮ ಪಡುಬಿದ್ರಿ ಇಲ್ಲಿ ಏಪ್ರಿಲ್ 7, ಆದಿತ್ಯವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಜರಗಲಿದೆ ಎಂದು ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8105093102 | 8792144608