Updated News From Kaup

ಫೆ.25 (ನಾಳೆ) : ಕುಕ್ಕುಂಜದಲ್ಲಿ ಕೆಪಿಎಲ್ ಟ್ರೋಫಿ - 2024

Posted On: 24-02-2024 09:18PM

ಕಾಪು : ಕುತ್ಯಾರು ಗ್ರಾಮದ ಕುಕ್ಕುಂಜದಲ್ಲಿ ಗ್ರಾಮೀಣ ಭಾಗದ ವಿವಿಧ ತಂಡದೊಂದಿಗೆ ವಾಲಿಬಾಲ್ ಪಂದ್ಯಾಟ ನಾಳೆ ಬೆಳಿಗ್ಗೆ 9 ರಿಂದ ಕಳತ್ತೂರು ಕುಕ್ಕುಂಜದಲ್ಲಿ ನಡೆಯಲಿದೆ.

ಪಲಿಮಾರು : ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು - 25ನೇ ವರ್ಷದ ವಾರ್ಷಿಕೋತ್ಸವ

Posted On: 23-02-2024 07:29PM

ಪಲಿಮಾರು : ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಇದರ 25ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾಚ್೯ 2, ಶನಿವಾರ ಸಂಜೆ ಗಂಟೆ 6ರಿಂದ ಶ್ರೀ ಮೂಕಾಂಬಿಕಾ ದೇವಸ್ಥಾನ ಅವರಾಲು ಮಟ್ಟು ಬಳಿ ಜರಗಲಿದೆ.

ಶ್ರೀ ಬ್ರಹ್ಮಲಿಂಗೇಶ್ವರ ಆಲಡೆ ಪಾಂಗಾಳ - ಮಂಡೇಡಿ : ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Posted On: 23-02-2024 03:20PM

ಪಾಂಗಾಳ : ವೇದಮೂರ್ತಿ ಪಾಂಗಾಳ ವಿಷ್ಣು ಭಟ್ಟರ ನೇತೃತ್ವದಲ್ಲಿ ಪಾಂಗಾಳ-ಮಂಡೇಡಿ ಶ್ರೀ ಬ್ರಹ್ಮಲಿಂಗೇಶ್ವರ ಆಲಡೆ ಪುನರ್ ನಿರ್ಮಿತ ಶ್ರೀ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ, ಶ್ರೀ ನಾಗಬ್ರಹ್ಮ ದೇವರು, ಶ್ರೀ ವೀರಭದ್ರ ಹಾಗೂ ಪರಿವಾರ ದೈವಗಳ ವಾರ್ಷಿಕ ಜಾತ್ರಾ ಮಹೋತ್ಸವದ ಗುರುವಾರ ಸಂಪನ್ನಗೊಂಡಿತು.

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Posted On: 23-02-2024 03:01PM

ಕಾಪು: ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ನಟ ರಕ್ಷಿತ್ ಶೆಟ್ಟಿಯವರು ಫೆಬ್ರವರಿ 22ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದರು, ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

ಫೆಬ್ರವರಿ 26 : ಶ್ರೀ ಹಳೆ ಮಾರಿಯಮ್ಮ ಸಭಾಗೃಹದಲ್ಲಿ ಗ್ಯಾರಂಟಿ ಸಮಾವೇಶ

Posted On: 23-02-2024 02:55PM

ಕಾಪು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿರುವ ಹಿನ್ನೆಲೆಯಲ್ಲಿ ಫೆಬ್ರವರಿ 26 ರಂದು ಪೂರ್ವಾಹ್ನ 10.30ಕ್ಕೆ ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಗೃಹ ಇಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿರುತ್ತದೆ.

ಫೆ. 23 : ಬ್ರಹ್ಮರಪಾಡಿ, ಪಾಂಗಾಳದ ಆದಿ ಆಲಡೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಆಯನೋತ್ಸವ

Posted On: 22-02-2024 08:56PM

ಪಾಂಗಾಳ : ಕಟಪಾಡಿ ಪೇಟೆ ಶ್ರೀ ವೆಂಕಟರಮಣ ದೇವಳದ ಆಡಳಿತಕ್ಕೆ ಒಳಪಟ್ಟ ಬ್ರಹ್ಮರಪಾಡಿ ಪಾಂಗಾಳದ ಆದಿ ಆಲಡೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಆಯನೋತ್ಸವ ಫೆಬ್ರವರಿ 23, ಶುಕ್ರವಾರ ಧ್ವಜಾರೋಹಣದಿಂದ ಮೊದಲ್ಗೊಂಡು ಫೆಬ್ರವರಿ 26, ಸೋಮವಾರ ಸಂಪ್ರೋಕ್ಷಣೆಯವರೆಗೆ ಜರಗಲಿದೆ.

ಫೆಬ್ರವರಿ 23 : ಪಾಂಗಾಳದಲ್ಲಿ ನಡೆಯಲಿದೆ ವೈಭವದ ಸಿರಿಜಾತ್ರೆ

Posted On: 22-02-2024 07:07AM

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಫೆಬ್ರವರಿ 23, ಶುಕ್ರವಾರದಂದು ಜರಗಲಿದೆ. ಫೆ.23, ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ

Posted On: 20-02-2024 09:09PM

ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಹಾಗೂ ಸೈoಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದ ಪ್ರಧಾನ ಸಮಾರಂಭ ಮಂಗಳವಾರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅವರು ಚೆಂಡೆವಾದನದ ಮೂಲಕ ಉದ್ಘಾಟಿಸಿ ಮಾತನಾಡಿ, ಜನಪದ ಕಲೆಯನ್ನು ದಾಖಲೀಕರಣ ಮಾಡಬೇಕಾದ ತುರ್ತು ಅವಶ್ಯಕತೆ ಇದೆ ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇದೆ. ನಮ್ಮಕನ್ನಡ ಜನಪದ ಪರಿಷತ್ತಿನಿಂದ ಇದಕ್ಕೆ ಪೂರಕವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು.

ಕಾಪು : ಅಸಂಖ್ಯ ಭಕ್ತರ ಸಮ್ಮುಖ ನೆರವೇರಿದ ದಿವ್ಯ ಸತ್ಸಂಗ

Posted On: 20-02-2024 09:03PM

ಕಾಪು : ಕರಾವಳಿಯ ಸೊಬಗಿಗೆ ಮನಸೋತವರಿಲ್ಲ. ಕಾಪು ಬೀಚ್ ಅತ್ಯಂತ ಸುಂದರವಾಗಿದೆ. ಭಾರತದ ಆಧ್ಯಾತ್ಮ, ವಸುದೈವ ಕುಟುಂಬಕಂ ಎಂಬ ನುಡಿ, ಭಾರತದ ಐಟಿ ವಲಯ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ನಮಗೆ ಹೆಮ್ಮೆ. ಸತ್ಸಂಗದೊಂದಿಗೆ ಸತ್ ಚಿಂತನೆ, ಆತ್ಮ ಚಿಂತನೆಯಾಗಲಿ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲೀವಿಂಗ್‌ನ ಸಂಸ್ಥಾಪಕ, ಪದ್ಮವಿಭೂಷಣ ಗುರುದೇವ್ ಶ್ರೀ ರವಿಶಂಕ‌ರ್ ಗುರೂಜಿ ಹೇಳಿದರು. ಅವರು ಮಂಗಳವಾರ ಕಾಪು ಬೀಚ್ ನ ಮಂಥನ್ ರೆಸಾಟ್೯ ಬಳಿ ಕಡಲ ಕಿನಾರೆಯಲ್ಲಿ ನಡೆದ ಸತ್ಸಂಗದಲ್ಲಿ ಜ್ಞಾನ, ಧ್ಯಾನ ಹಾಗೂ ಭಜನೆಯನ್ನೊಳಗೊಂಡ ದಿವ್ಯ ಸತ್ಸಂಗ ಆನಂದ ಲಹರಿಯನ್ನು ಉದ್ದೇಶಿಸಿ ಮಾತನಾಡಿದರು.

ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು - ಜೀರ್ಣೋದ್ಧಾರದ ಹೊರೆ ಕಾಣಿಕೆಯ ಪೂರ್ವಭಾವಿ ಸಭೆ

Posted On: 19-02-2024 01:25PM

ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಮಟ್ಟಾರು ಬಯಲು ರಂಗಮಂದಿರದಲ್ಲಿ ಹೊರೆ ಕಾಣಿಕೆಯ ಪೂರ್ವಭಾವಿ ಸಭೆ ನಡೆಯಿತು. ಶಂಕರ್ ಶೆಟ್ಟಿ ದರ್ಮೆಟ್ಟು ದೀಪ ಬೆಳಗಿಸುವ ಮುಖಾಂತರ ಜೀರ್ಣೋದ್ದಾರದ ಹೊರೆ ಕಾಣಿಕೆಯ ಪೂರ್ವಭಾವಿ ಸಭೆಗೆ ಚಾಲನೆ ನೀಡಿದರು.