Updated News From Kaup
ಕಾಪು : ಬಿಜೆಪಿಯ ನೂತನ ಕ್ಷೇತ್ರಾಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ
Posted On: 18-02-2024 04:38PM
ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ನೂತನ ಕ್ಷೇತ್ರಾಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆಯಾಗಿದ್ದಾರೆ.
ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಪದ ಪ್ರಧಾನ ಸಮಾರಂಭ
Posted On: 18-02-2024 03:04PM
ಬ್ರಹ್ಮಾವರ : ನಮ್ಮ ಆದಾಯದ ಒಂದಂಶವನ್ನು ಸಮಾಜಕ್ಕೆ ನೀಡಿದಾಗ ನಮ್ಮ ಜೀವನದಲ್ಲಿ ಸಾಥ೯ಕತೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಜಯಂಟ್ಸ್ ಸಂಸ್ಥೆಯ ಸೇವೆ ಅನುಪಮ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹೇಳಿದರು. ಅವರು ಶನಿವಾರ ಸಿಟಿ ಸೆಂಟರ್ ನಲ್ಲಿ ನಡೆದ ಬ್ರಹ್ಮಾವರ ಜಯಂಟ್ಸ್ ಗ್ರೂಪ್ ನ ಪದಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪಡುಬಿದ್ರಿ ಸಿ.ಎ. ಸೊಸೈಟಿಯ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಲೋಕಾರ್ಪಣೆ
Posted On: 18-02-2024 02:48PM
ಹೆಜಮಾಡಿ : ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಬ್ಯಾಂಕಿಂಗ್ ಸೊಸೈಟಿಯಾಗಿ ಹೆಗ್ಗಳಿಕೆ ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನವೀಕರಣಗೊಂಡ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಬ್ಯಾಂಕಿಂಗ್ ಕಟ್ಟಡದ ಉದ್ಘಾಟನೆಯನ್ನು ಭಾನುವಾರ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಗಮದ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ದೀಪ ಪ್ರಜ್ವಲನೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಮಂಗಳೂರು ಇದರ ಅಧ್ಯಕ್ಷರಾದ ನವೀನ್ ಚಂದ್ರ ಡಿ. ಸುವರ್ಣ ಮಾಡಿದರು. ನಾಮ ಫಲಕದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಪಡಿತರ ವ್ಯವಸ್ಥೆಯ ಗೋದಾಮನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಭದ್ರತಾ ಕೊಠಡಿಯನ್ನು ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಶ್ಮ ಎ. ಮೆಂಡನ್ ಉದ್ಘಾಟಿಸಿದರು.
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ - ಶಿಕ್ಷಕ ರಕ್ಷಕ ಸಭೆ
Posted On: 18-02-2024 09:49AM
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ಶನಿವಾರ ಶಿಕ್ಷಕ ರಕ್ಷಕ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಿರ್ವ ಪೋಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಕೃಷ್ಣ ಆಚಾರ್ಯ ಹಾಗೂ ಹೆಡ್ ಕಾನ್ ಸ್ಟೇಬಲ್ ಮಂಜುನಾಥ ಅಡಿಗ ಇವರು ಪೋಷಕರಿಗೆ ಮತ್ತು ಮಕ್ಕಳಿಗೆ ರಸ್ತೆ ಸುರಕ್ಷತೆ, ಸೈಬರ್ ಕ್ರೈಮ್ ಮತ್ತು ಮಾದಕ ವ್ಯಸನಗಳ ಬಗ್ಗೆ ಮಾಹಿತಿ ನೀಡಿದರು.
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅನುದಾನ ಮತ್ತೆ ನೆನೆಗುದಿಗೆ : ಪ್ರವೀಣ್ ಎಮ್. ಪೂಜಾರಿ
Posted On: 18-02-2024 09:34AM
ಉಡುಪಿ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರವು ತನ್ನ ಪಕ್ಷದ ಚುನಾವಣಾ ಪ್ರಣಾವಳಿಕೆಯಲ್ಲಿ ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಅನುದಾನವನ್ನು ತಮ್ಮ ಸರಕಾರ ಆಡಳಿತಕ್ಕೆ ಬಂದರೆ ನೀಡುವುದಾಗಿ ಭರವಸೆಯನ್ನು ನೀಡಿದ್ದು ಸರಕಾರ ಆಡಳಿತಕ್ಕೆ ಬಂದು 2 ಬಜೆಟನ್ನು ಮಂಡಿಸಿದಾಗ್ಯೂ ಯಾವುದೇ ಅನುದಾನವನ್ನು ನೀಡದೆ ಸಮಸ್ತ ಬಿಲ್ಲವ/ಈಡಿಗ ಸಮಾಜಕ್ಕೆ ವಂಚಿಸಿದೆ.
ಕಾಪು : ತಹಶಿಲ್ದಾರ್ ಕಚೇರಿಯಲ್ಲಿ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ
Posted On: 18-02-2024 09:29AM
ಕಾಪು : ತಾಲೂಕು ತಹಶಿಲ್ದಾರ್ ಕಚೇರಿಯಲ್ಲಿ ವಿಶ್ವಗುರು ಸಾಂಸ್ಕೃತಿಕ ನಾಯಕ ಭಾವಚಿತ್ರವನ್ನು ಕಾಪು ತಾಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಅನಾವರಣಗೊಳಿಸಿದರು.
ಗ್ಯಾರಂಟಿ ನಷ್ಟ ಸರಿದೂಗಿಸಲು ರಾಜ್ಯದ ಜನರ ಮೇಲೆ ತೆರಿಗೆಯ ಬರೆ : ಗುರ್ಮೆ ಸುರೇಶ್ ಶೆಟ್ಟಿ
Posted On: 16-02-2024 05:36PM
ಕಾಪು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ. ಸಂಪತ್ತಿನ ಸಮಾನ ಹಂಚಿಕೆ ಎಂಬುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ.
ಉಡುಪಿ ಜಿಲ್ಲೆಯ ಮಟ್ಟಿಗೆ ನಿರಾಶದಾಯಕ ಬಜೆಟ್ : ಯೋಗೀಶ್ ಶೆಟ್ಟಿ ಬಾಲಾಜಿ
Posted On: 16-02-2024 05:24PM
ಉಡುಪಿ : ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ಇದ್ದ ಬಜೆಟ್ ಅನ್ನೇ ಅಲ್ಪ ಸ್ವಲ್ಪ ಬದಲಾಯಿಸಿ ಮಾಡಿದ ಬಜೆಟ್ ಆಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಿರಸ್ಕರಿಸಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಕೊಡುತ್ತೇವೆ ಅಂತ ಎಲ್ಲೂ ಹೇಳಿಲ್ಲ. ಅಬಕಾರಿ, ನೋಂದಣಿ ಶುಲ್ಕವನ್ನು ಹೆಚ್ಚಿಸಿ ಗ್ಯಾರಂಟಿಗೆ ಹಣ ಕ್ರೋಢೀಕರಿಸಿದ್ದಾರೆ. ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನ . ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಹಾಗು ಇನ್ನಿತರ ಆರೋಗ್ಯ ಕ್ಷೇತ್ರಗಳ ನಿರೀಕ್ಷೆ ಹುಸಿಯಾಗಿದೆ. ಉಡುಪಿ ಜಿಲ್ಲೆಯ ಮಟ್ಟಿಗೆ ನಿರಾಶದಾಯಕ ಬಜೆಟ್ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ ಲಯನ್ಸ್ ಕ್ಲಬ್ : ಮನೆ ಹಸ್ತಾಂತರ
Posted On: 16-02-2024 05:21PM
ಪಡುಬಿದ್ರಿ : ಆರ್ಥಿಕವಾಗಿ ಹಿಂದುಳಿದ ಕುಟುಂಬವೊಂದರ ವಾಸ ಯೋಗ್ಯವಲ್ಲದ ಮನೆಯನ್ನು ಪಡುಬಿದ್ರಿ ಲಯನ್ಸ್ ಕ್ಲಬ್ ವತಿಯಿಂದ ನವೀಕರಿಸಿ ಗುರುವಾರ ದಾಯ್ಜಿ ವರ್ಲ್ಡ್ ಮುಖ್ಯಸ್ಥ ವಾಲ್ಟರ್ ನಂದಳಿಕೆ ಹಸ್ತಾಂತರಿಸಿದರು.
ಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ
Posted On: 16-02-2024 04:40PM
ಕಾಪು : ತಾಲೂಕಿನ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಇದಕ್ಕೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.
