Updated News From Kaup

ಮಾರ್ಚ್ 7: ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ - ಭಗ್ವ ಟ್ರೋಫಿ 2024

Posted On: 15-02-2024 09:18PM

ಉಡುಪಿ : ಜಿಲ್ಲೆಯಲ್ಲಿ ರೂಪುಗೊಂಡ ಸಮಾನ ಮನಸ್ಕರ ತಂಡ ಟೀಮ್ ಭಗ್ವ ಈ ಬಾರಿ ಅಶಕ್ತ ಬಡ ಕುಟುಂಬಗಳಿಗೆ ನೆರವು ನೀಡುವ ಸಲುವಾಗಿ 65 ಕೆಜಿ ವಿಭಾಗದ ಮತ್ತು 23 ವರ್ಷ ವಯೋಮಿತಿಯ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವನ್ನು ಮಾರ್ಚ್ 7 ರಂದು ಮಧ್ಯಾಹ್ನ 2 ಗಂಟೆಗೆ ಮೂಳೂರು ಕೊಡಮಣಿತ್ತಾಯ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ನಡೆಯಲಿದೆ.

ಕುತ್ಯಾರು : ಸೂರ್ಯ ಚೈತನ್ಯ ಹೈಸ್ಕೂಲ್ - ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Posted On: 15-02-2024 07:15PM

ಕುತ್ಯಾರು : ಇತ್ತೀಚಿಗೆ ಬೆಳ್ಮಣ್ ವಿಠೋಭಾ ಭಜನಾ ಮಂದಿರದಲ್ಲಿ ನಡೆದ ಬುಡೋಕಾನ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಡೋ ಇದರ ಅಂಗವಾಗಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸೂರ್ಯ ಚೈತನ್ಯ ಶಾಲೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.

ರತ್ನಾವತಿ ಕಲ್ಯಾಣ - ಕುಮಾರ ವಿಜಯ ; ಪ್ರಸಂಗನಡೆ - ರಂಗತಂತ್ರ

Posted On: 15-02-2024 07:05PM

ನಂದಳಿಕೆಯ ಲಕ್ಷ್ಮೀನಾರಾಯಣಯ್ಯ ಅಂದರೆ ಮಹಾಕವಿ ಮುದ್ದಣನೆಂದೇ ಪ್ರಸಿದ್ದರು.ತನ್ನ‌ ಕಾವ್ಯ‌ ರಚನೆಯ ಪೂರ್ವಭಾವೀಯಾಗಿ ರತ್ನಾವತಿ ಕಲ್ಯಾಣ ಮತ್ತು ಕುಮಾರವಿಜಯ ಪ್ರಸಂಗಗಳನ್ನು‌‌ ಬರೆಯುವುದರ ಮೂಲಕ ಯಕ್ಷಗಾನ ಪದ್ಯರಚನೆಯಲ್ಲಿ ಒಂದು ಹೊಸಯುಗವನ್ನೇ ತೆರೆದವರು.ಪದ ಪ್ರಯೋಗ ಮತ್ತು ಹೊಸ ಛಂದಸ್ಸುಗಳ ರೀತಿ ತುಂಬಾ ಪ್ರಭಾವಿಯಾಗಿವೆ.ಈ ಎರಡು ಪ್ರಸಂಗಗಳು ಕಳೆದ ಶತಮಾನದ ಪೂರ್ವಾರ್ಧದಲ್ಲಿ ತೆಂಕು ಮತ್ತು‌ ಬಡಗು ಎರಡೂ ತಿಟ್ಟುಗಳಲ್ಲಿ ಬಹಳಷ್ಟು ಪ್ರದರ್ಶನಗೊಂಡು ತಿರಿಗಾಟದ ಮುಖ್ಯ ಪ್ರಸಂಗಗಳಾಗಿ ಪ್ರಸಿದ್ಧವಾಗಿದ್ದುವು. ಇನ್ನೊಂದು ವಿಶೇಷ ; ರತ್ನಾವತಿ ಕಲ್ಯಾಣ ಮತ್ತು ಕುಮಾರ ವಿಜಯಗಳು ಪ್ರಚಾರಕ್ಕೆ ಬಂದ ಮೇಲೆ ಭಾಗವತಿಕೆ ಪಾಠಗಳಲ್ಲಿ ಕಲಿಸುವಿಕೆಯಲ್ಲಿ ಮುಖ್ಯವಾದ ಎರಡು ಪಠ್ಯಗಳಾಗಿಯೂ ಪ್ರಸಿದ್ಧವಾಗಿದ್ದುವು.

ಫೆ.17 : ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ

Posted On: 15-02-2024 06:05PM

ಕಾಪು : ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮುಂಭಾಗದ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯಕುಮಾರ್ ಸೊರಕೆ ತಿಳಿಸಿದರು ಕಾಪು ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಭಾಗಿತ್ವದಲ್ಲಿ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಹಕಾರದಿಂದ ಈ ಕಾರ್ಯಕ್ರಮ ನಡೆಯಲಿದೆ. ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲಾ ಹಂತದ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಶನಿವಾರ ಅಪರಾಹ್ನ 2ಗಂಟೆಯಿಂದ ಪ್ರಾರಂಭಗೊಳ್ಳುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯ ಕ್ರಮದಲ್ಲಿ ಎಐಸಿಸಿ ಪ್ರ. ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜವಾಲ, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ಮುಖಂಡರಾದ ರೋಜಿ ಜೋನ್, ಸಲೀಂ ಅಹ್ಮದ್, ಸಚಿವರು, ಪಕ್ಷದ ಶಾಸಕರು, ಮುಖಂಡರೆಲ್ಲರೂ ಭಾಗವಹಿಸಲಿದ್ದಾರೆ ಎಂದರು.

ಶಿರ್ವ : ಹಿಂದು ಪ್ರೌಢಶಾಲೆ ಮತ್ತು ಸ.ಹಿ.ಪ್ರಾ.ಶಾಲೆ ಕೈರಬೆಟ್ಟುಗೆ ವಾಟರ್ ಕೂಲರ್‌ ಕೊಡುಗೆ

Posted On: 15-02-2024 05:56PM

ಶಿರ್ವ : ಇಲ್ಲಿನ ಹಿಂದು ಪ್ರೌಢಶಾಲೆ ಹಾಗೂ ಸ.ಹಿ.ಪ್ರಾ.ಶಾಲೆ ಕೈರಬೆಟ್ಟುವಿನ ಹಳೆ ವಿದ್ಯಾರ್ಥಿ ದಿವಂಗತ ಕುಮಾರ್ ಟಿ. ಸುವರ್ಣ ಮತ್ತು ಅವರ ಪತ್ನಿ ದಿವಂಗತ ಹೇಮಾವತಿ ಕೆ. ಸುವರ್ಣ ಸ್ಮರಣಾರ್ಥ ಅವರ ಮಕ್ಕಳು ವಿದ್ಯಾರ್ಥಿಗಳ ಉಪಯೋಗಕ್ಕಾಗಿ 45 ಸಾವಿರ ರೂ. ಮೌಲ್ಯದ ವಾಟರ್ ಕೂಲರನ್ನು ಸೋಮವಾರ ಹಸ್ತಾಂತರಿಸಿದರು.

ಫೆಬ್ರವರಿ 18 : ಕುತ್ಯಾರು ಕುಲಾಲ ಸಂಘದ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ

Posted On: 15-02-2024 09:43AM

ಕಾಪು : ತಾಲೂಕಿನ ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಆಯೋಜನೆಯಲ್ಲಿ ಫೆಬ್ರವರಿ 18 ರಂದು ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ, ಅನ್ನ ಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಸಭೆಯು ಕುತ್ಯಾರು ರಾಮೊಟ್ಟು ಬನತೊಡಿ ಗದ್ದೆಯಲ್ಲಿ ನಡೆಯಲಿದೆ ಎಂದು ಕುತ್ಯಾರು ಕುಲಾಲ ಸಂಘದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.

ಉಡುಪಿ : ಶ್ರೀ ಸಾಯಿ ಮುಖ್ಯ ಪ್ರಾಣ ದೇವಸ್ಥಾನ ದ್ವಾರಕಾಮಾಯಿ ಮಠ ಶ್ರೀ ಕ್ಷೇತ್ರ ಶಂಕರಪುರ - ಪುಲ್ವಾಮಾ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ

Posted On: 14-02-2024 05:10PM

ಉಡುಪಿ : ಶ್ರೀ ಸಾಯಿ ಮುಖ್ಯ ಪ್ರಾಣ ದೇವಸ್ಥಾನ ದ್ವಾರಕಾಮಾಯಿ ಮಠ ಶ್ರೀ ಕ್ಷೇತ್ರ ಶಂಕರಪುರ ವತಿಯಿಂದ ಪುಲ್ವಾಮಾ ದಾಳಿಯ 5ನೇ ವರ್ಷಾಚರಣೆ ಅಂಗವಾಗಿ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಅಜ್ಜರಕಾಡು ಯುದ್ಧ ಸ್ಮಾರಕ ಬಳಿ ಬುಧವಾರ ನಡೆಯಿತು.

ಖಾರ್ಲಾಂಡ್ ಯೋಜನೆಯಡಿಯಲ್ಲಿ ಅನುದಾನ ಮಂಜೂರು ಮಾಡಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರಸ್ತಾವನೆ

Posted On: 14-02-2024 12:43PM

ಕಾಪು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾಪು ತಾಲೂಕು ಕೈಪುಂಜಾಲು, ಉಳಿಯಾರಗೋಳಿ, ಮಟ್ಟು ಆಳಿಂಜೆ, ತೆಂಕು ಕೊಪ್ಪಳ, ಬಡಗು ಕೊಪ್ಪಳ, ಕಲ್ತಟ್ಟ ಹಾಗೂ ದಡ್ಡಿ ಎಂಬಲ್ಲಿ ಪಾಂಗಾಳ ನದಿದಂಡೆಯ ಕೊರೆತಕ್ಕೊಳಗಾದ ಆಯ್ದ ಭಾಗಗಳಲ್ಲಿ ಖಾರ್ಲಾಂಡ್ ನಿರ್ಮಾಣ ಕಾಮಗಾರಿಯು ತೀರಾ ಅತ್ಯವಶ್ಯಕವಿರುತ್ತದೆ. ಈ ಭಾಗದಲ್ಲಿ ಜಿ.ಐ ಟ್ಯಾಗ್ ಮಾನ್ಯತೆ ಹೊಂದಿದ ಮಟ್ಟುಗುಳ್ಳ ವಿಭಿನ್ನ ತರಕಾರಿ ಬೆಳೆಯಾಗಿದ್ದು, ಬಹು ಬೇಡಿಕೆಯದ್ದಾಗಿರುತ್ತದೆ. ಅಷ್ಟ ಮಠದ ಪ್ರಮುಖ ಯತಿಗಳಾದ ವಾದಿರಾಜ ಸ್ವಾಮೀಗಳು ಪ್ರಸಾದ ರೂಪದಲ್ಲಿ ನೀಡಿದ ದಿವ್ಯ ಸ್ವರೂಪದ ಬೀಜವನ್ನು ಬಿತ್ತಿದ ಪ್ರದೇಶವಾಗಿರುತ್ತದೆ ಎಂಬ ಐತಿಹ್ಯವಿದೆ. ಮಟ್ಟುಗುಳ್ಳ ಬೆಳೆಗಾರರು ಇಂದಿಗೂ ಉಡುಪಿಯ ಪರ್ಯಾಯ ಮಹೋತ್ಸವಕ್ಕೆ ಮಟ್ಟುಗುಳ್ಳ ತರಕಾರಿಯನ್ನು ಹೊರೆಕಾಣಿಕೆಯ ರೂಪದಲ್ಲಿ ನೀಡುತ್ತಾ ಬಂದಿರುತ್ತಾರೆ. ಅಲ್ಲದೇ ಸದ್ರಿ ಪ್ರದೇಶದಲ್ಲಿನ ತೆಂಗು ಬೆಳೆಯು ಹಾನಿಯಾಗಿರುತ್ತದೆ.

ಫೆ. 18 : ಪಡುಬಿದ್ರಿ ಸಿ.ಎ.ಸೊಸೈಟಿ - ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನೆ

Posted On: 14-02-2024 11:23AM

ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಬ್ಯಾಂಕಿಂಗ್ ಸೊಸೈಟಿಯಾಗಿ ಹೆಗ್ಗಳಿಕೆ ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನವೀಕರಣಗೊಂಡ ಹವಾನಿಯಂತ್ರಿತ ಹೆಜಮಾಡಿ ಶಾಖೆಯು ಫೆಬ್ರವರಿ 18, ಭಾನುವಾರ ಉದ್ಘಾಟನೆಗೊಳ್ಳಲಿದೆ ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಬುಧವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಕೇಂದ್ರ ಕಚೇರಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬೆಳಿಗ್ಗೆ 10 ಗಂಟೆಗೆ ಬ್ಯಾಂಕಿಂಗ್ ಕಟ್ಟಡವನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು. ಟಿ. ಖಾದರ್ ಉದ್ಘಾಟಿಸಲಿದ್ದು, ಪಡುಬಿದ್ರಿ ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಬಲೀಕರಣ ಇಲಾಖಾ ಸಚಿವರಾದ ಲಕ್ಷ್ಮೀ ಹೆಬ್ಬಾಳ್ವರ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸುವರು.

ಕಾಪು : ನಿದ್ದೆಯಲ್ಲಿದ್ದ ವ್ಯಕ್ತಿಯನ್ನು ಸ್ಕೂಟರಿನಿಂದ ಕೆಳಗಿಳಿಸಿ ಸ್ಕೂಟರ್ ಸಮೇತ ದಾಖಲೆಗಳ ಕಳವು

Posted On: 13-02-2024 11:20PM

ಕಾಪು : ಸ್ಕೂಟರ್ ನಲ್ಲಿ ಸಂಚರಿಸುತ್ತಿರುವ ಸಂದರ್ಭ ನಿದ್ರೆ ಬಂದ ಕಾರಣ ಸ್ಕೂಟರ್ ನಿಲ್ಲಿಸಿ ಮಲಗಿದ್ದ ವ್ಯಕ್ತಿ ಎಚ್ಚರವಾದಾಗ ಸ್ಕೂಟರ್ ಸಮೇತ ತನ್ನೆಲ್ಲಾ ಸೊತ್ತುಗಳನ್ನು ಕಳೆದುಕೊಂಡು ರಸ್ತೆ ಬದಿಯಲ್ಲಿ ಮಲಗಿದ್ದ ಘಟನೆ ಭಾನುವಾರ ತಡರಾತ್ರಿ ಕಾಪು ಸಮೀಪದ ಕೊಪ್ಪಲಂಗಡಿ ಬಳಿ ನಡೆದಿದೆ.