Updated News From Kaup
ಜಾನಪದ ವಿಭೂಷಣ ಪ್ರಶಸ್ತಿಗೆ ಕರುಣಾಕರ ಕೆ. ಕಾಪು ಆಯ್ಕೆ
Posted On: 21 Mar 2024, 10:35 AM
ಕಾಪು : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮಹಾರಾಷ್ಟ್ರ ಘಟಕದ ವಾರ್ಷಿಕ ಜಾನಪದ ವಿಭೂಷಣ ಪ್ರಶಸ್ತಿಗೆ ಮೂಲತಃ ಕಾಪುವಿನ ಪ್ರಸ್ತುತ ಉದ್ಯೋಗ ನಿಮಿತ್ತ ಮುಂಬಯಿಯಲ್ಲಿ ವಾಸ್ತವ್ಯವಿರುವ ನಾಟಕಕಾರ, ಜಾನಪದ ರಂಗ ನಿರ್ದೇಶಕ ಕರುಣಾಕರ ಕೆ. ಕಾಪು ಆಯ್ಕೆಯಾಗಿದ್ದಾರೆ. ಮಾ. 24ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಲಿರುವ ಸಂಸ್ಥೆಯ 'ಸಾಂಸ್ಕೃತಿಕ ಜಾನಪದ ಸಿರಿ ಸಿಂಚನ' ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವರು ಕಾಪುವಿನ ಕೃಷ್ಣಪ್ಪ ಸಾಲ್ಯಾನ್ ಮತ್ತು ಗಿರಿಜಾ ಸಾಲ್ಯಾನ್ ದಂಪತಿ ಪುತ್ರರಾಗಿದ್ದು, ಹುಟ್ಟೂರಿ ನಲ್ಲಿಪ್ರಾಥಮಿಕ ಶಿಕ್ಷಣ ಪೂರೈಸಿ, ಮುಂಬಯಿಗೆ ಬಂದು ಹಗಲಿನಲ್ಲಿ ದುಡಿದು ಮದರ್ ಇಂಡಿಯಾ ಧರ್ಮಾರ್ಥ ರಾತ್ರಿ ಶಾಲೆಯಲ್ಲಿ ಮುಂದಿನ ಶಿಕ್ಷಣ ಪಡೆದರು. ಶಾಲಾ ಜೀವನದಲ್ಲೇ ರಂಗಕಲೆಯ ವೈವಿಧ್ಯತೆಗೆ ಮಾರು ಹೋಗಿ ಕಲೆಯನ್ನು ಮೈಗೂಡಿಸಿಕೊಂಡು ಮುಂಬಯಿಯಲ್ಲಿ ಸಮಾನ ಮನಸ್ಕರೊಂದಿಗೆ ಅಭಿನಯ ಮಂಟಪ ಸಂಸ್ಥೆ ಸ್ಥಾಪಿಸಿದ ಶ್ರೇಯಸ್ಸು ಇವರದ್ದಾಗಿದೆ. ಉತ್ತಮ ಲೇಖಕ, ರಂಗನಿರ್ದೇಶಕರಾಗಿ ಮುಂಬಯಿ ರಂಗಭೂಮಿಯಲ್ಲಿ ತನ್ನದೇ ಆದ ಸ್ಥಾನ ಪಡೆದುಕೊಂಡಿದ್ದಾರೆ. ಸಮರ್ಥ ಸಂಘಟಕರೂ ಆದ ಅವರು ಜನತಾ ಎಜುಕೇಶನ್ ಸೊಸೈಟಿ ಮುಂಬಯಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಂಗಭೂಮಿಗೆ ಕಲಾ ಕಾಣಿಕೆಯಾಗಿ ಹಲವಾರು ನಾಟಕಗಳನ್ನು ಬರೆದು, ನಿರ್ದೇಶಿಸಿದ್ದಾರೆ. ಇವರ ಸಾಧನೆಯನ್ನು ಹಲವಾರು ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದೆ.
ಪಡುಬಿದ್ರಿ ಕಡಲ ಕಿನಾರೆಯಲ್ಲಿ ತಿಮಿಂಗಲದ ಪಳೆಯುಳಿಕೆ ಪತ್ತೆ
Posted On: 20 Mar 2024, 10:05 PM
ಪಡುಬಿದ್ರಿ : ಇಲ್ಲಿನ ಮುಖ್ಯ ಬೀಚ್ನ ಮುಂಭಾಗ 100 ವರ್ಷಕ್ಕಿಂತಲೂ ಹಳೆಯದಾದ400 ಕೆ.ಜಿ. ತೂಕದ ತಿಮಿಂಗಲದ ಮುಖಭಾಗದ ಎಲುಬಿನ ಪಳೆಯುಳಿಕೆ ಕಂಡುಬಂದಿದೆ. ಅದನ್ನು ಮುಖ್ಯ ಬೀಚ್ನ ಸಿಬಂದಿ, ಬ್ಲೂ ಫ್ಲ್ಯಾಗ್ ಬೀಚ್ನ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿ ಮೇಲಕ್ಕೆತ್ತಿ ತಂದು ಸ್ವಚ್ಛಗೊಳಿಸಿ ಬ್ಲೂಪ್ಲಾಗ್ ಬೀಚಿನಲ್ಲಿ ಪ್ರವಾಸಿಗರ ಶಾಶ್ವತ ವೀಕ್ಷಣೆಗಾಗಿ ಇಟ್ಟಿದ್ದಾರೆ. ಈ ಬಗ್ಗೆ ಬ್ಲೂ ಫ್ಲ್ಯಾಗ್ ಬೀಚ್ನ ಪ್ರಬಂಧಕ ವಿಜಯ್ ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.
ಉಡುಪಿ : ಹೋಳಿ ಆಚರಣೆಯಲ್ಲಿ ಹಿಂದೂ ಸಂಸ್ಕೃತಿಗೆ ಧಕ್ಕೆ ವಿರೋಧಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಮನವಿ
Posted On: 19 Mar 2024, 02:35 PM
ಉಡುಪಿ : ಹೋಳಿ ಹಬ್ಬದ ಆಚರಣೆಯ ಹೆಸರಿನಲ್ಲಿ ಹಿಂದೂ ಸಂಸ್ಕೃತಿಗೆ ಧಕ್ಕೆ ತರುವುದನ್ನು ವಿರೋಧಿಸಿ ಉಡುಪಿಯಲ್ಲಿ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಯವರಿಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದು ಪರಿಷದ್ ಪ್ರಾಂತೀಯ ಪ್ರಮುಖ್ ಸುನಿಲ್ ಕೆ. ಆರ್, ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಉಡುಪಿ ಜಿಲ್ಲಾ ಸಂಯೋಜಕ್ ಚೇತನ್ ಪೇರಲ್ಕೆ, ಬಜರಂಗದಳ ಉಡುಪಿ ಜಿಲ್ಲಾ ಸಹ ಸಂಯೋಜಕ್ ಮನೋಜ್ ಮಲ್ಪೆ, ಬಜರಂಗದಳ ಉಡುಪಿ ಜಿಲ್ಲಾ ಸುರಕ್ಷಾ ಪ್ರಮುಖ ರಾಜೇಶ್ ಕೋಟ್ಯಾನ್, ಜಿಲ್ಲಾ ಸೇವಾ ಪ್ರಮುಖ್ ವಿಖ್ಯಾತ್ ಭಟ್, ವಿಶ್ವ ಹಿಂದು ಪರಿಷದ್ ವಿದ್ಯಾರ್ಥಿ ಪ್ರಮುಖ್ ಕಿರಣ್ ಮಲ್ಪೆ ಮತ್ತಿತರರು ಉಪಸ್ಥಿತರಿದ್ದರು.
ಮಣಿಪಾಲ : ಪ್ರಾಧ್ಯಾಪಕ ರಾಮಕೃಷ್ಣ ನಾಯಕ್ ಮಂಡಿಸಿದ ಮಹಾಪ್ರಬಂಧಕ್ಕೆ ಪಿ ಎಚ್ ಡಿ
Posted On: 18 Mar 2024, 02:17 PM
ಮಣಿಪಾಲ : ಇಲ್ಲಿನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾ ಹುಮಾನಿಟೀಸ್ ಅಂಡ್ ಮ್ಯಾನೇಜ್ಮೆಂಟ್ ವಿಭಾಗದ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್ ಅವರು ಮಂಡಿಸಿದ "ಫ್ಯಾಬ್ರಿಕೇಷನ್ ಅಂಡ್ ಕಾರಾಕ್ಟ್ ರೈಸೇಷನ್ ಆಫ್ ಪ್ರಿಂಟೆಡ್ ಫ್ಲೆಕ್ಸಿಬಲ್ ಥೆರ್ಮೋಎಲೆಕ್ಟ್ರಿಕ್ ಜೆನೆರೇಟರ್ಸ್ ಬೇಸ್ಡ್ ಆನ್ ನಾವೆಲ್ ಇಂಕ್ ಫಾರ್ಮುಲೇಶನ್ಸ್" ಎನ್ನುವ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ಪಿ ಎಚ್ ಡಿ ನೀಡಿದೆ. ಇದರ ಒಂದು ಲೇಖನವು ೨೦೨೨ ನೇ ಸಾಲಿನ ಡಾI. ಟಿ ಎಂ ಎ ಪೈ ಚಿನ್ನದ ಪದಕವನ್ನು ಪಡೆದಿದೆ. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಾ ಪ್ರೊಫೆಸರ್ ಡಾI ಪ್ರಕಾಶ ಶೆಟ್ಟಿ ಹಾಗು ಎಂ ಐ ಟಿ ಯಾ ಅಸೋಸಿಯೇಟ್ ಪ್ರೊಫೆಸರ್ ಡಾI ಸೆಲ್ವಕುಮಾರ್ ಇವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದ ರಾಮಕೃಷ್ಣ ನಾಯಕ್ ಇವರು ಹಿರಿಯಡ್ಕ -ಗುಡ್ಡೆಅಂಗಡಿಯಾ ದಿ. ಎ. ರಂಗಪ್ಪ ನಾಯಕ್ ಮತ್ತು ಶಾರದಾ ನಾಯಕ್ ದಂಪತಿಯ ಪುತ್ರ.
ನಿಟ್ಟೆ ಬಿಲ್ಲವ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ; ಸನ್ಮಾನ
Posted On: 17 Mar 2024, 04:50 PM
ಕಾರ್ಕಳ : ಬಿಲ್ಲವ ಸಂಘ (ರಿ.) ನಿಟ್ಟೆ ಇದರ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಿಟ್ಟೆಯ ಅವಳಿ ಸಾಧಕರಾದ ಆಯುಷ್ ಅರುಣ್ ಕೆ. ಹಾಗೂ ಅನುಷ್ ಅರುಣ್ ಕೆ.ರವರನ್ನು ಸನ್ಮಾನಿಸಲಾಯಿತು. ಆನುಷ್ ಅರುಣ್ ಕೆ 9ನೇ ತರಗತಿಯಲ್ಲಿ 97.4% ಪಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದು, ವಿವೊ ಇಗ್ನೈಟ್ ಟೆಕ್ನಲಾಜಿ ಮತ್ತು ಇನ್ನೊವೇಟ್ ಅವಾರ್ಡ್ ಇಂಡಿಯಾದ ಟಾಪ್ 10ರಲ್ಲಿ ಆಯ್ಕೆಯಾಗಿದ್ದಾರೆ. ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ಕರಾಟೆ ಕಾರ್ನಿವಲ್ ನಲ್ಲಿ 1000ಮೀಟರ್ ಡಿಸ್ಟೆನ್ಸ್ ಸೆಡ್ ಕಿಕ್ ಇನ್ ಶಾರ್ಟಸ್ಟ್ ಡ್ಯುರೇಷನ್ ವಿಭಾಗದಲ್ಲಿ ನೊಬೆಲ್ ವಿಶ್ವದಾಖಲೆ ಮಾಡಿದ್ದಾರೆ.ಕರಾಟೆಯಲ್ಲಿ ಫರ್ಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ ಪಡೆದಿದ್ದು ಶೊರೀನ್ ರಿಯೋ ಕರಾಟೆ ಅಸೋಸಿಯೇಷನ್ ನಲ್ಲಿ ರೆಫೆರೀ ತರಭೇತಿ ಪಡೆದು ಕರಾಟೆ ರೇಫರೀ ಆಂಡ್ ಜಡ್ಜ್ ಫಾರ್ ಕುಮಿಟೆ ಯಾಗಿ ಉತ್ತೀರ್ಣರಾಗಿದ್ದಾರೆ. 2023 ರಲ್ಲಿ ಉಡುಪಿಯಲ್ಲಿ ನಡೆದ ರಾಶ್ರಿತ ಮಟ್ಟದ ಹೈಫೈವ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಎರಡು ಚಿನ್ನದ ಪದಕ,2022ರಲ್ಲಿ ನಡೆದ COMPETE 3.0 ಕರಾಟೆ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ, 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಕ್ವಾಂಡೊ ವೆಸ್ಟರ್ಸ್ ಕಪ್ ನ್ಯಾಷನಲ್ ಲೆವೆಲ್ ನಲ್ಲಿ ಎರಡು ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆಯಲ್ಲಿ ದ್ವಿತೀಯ ಸ್ಥಾನ,2022-23ರಲ್ಲಿ ರೈನ್ ಬೊ ಕಪ್ ನಲ್ಲಿ ಕಂಚಿನ ಪದಕ,ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಟೆಕ್ವಾಂಡೊದಲ್ಲಿ ಚಿನ್ನದ ಪದಕ,ಮಂಗಳೂರಿನಲ್ಲಿ ನಡೆದ ತುಳುನಾಡು ಕಪ್ ನಲ್ಲಿ ಒಂದು ಚಿನ್ನದ ಪದಕ ಹಾಗೂ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಆಯುಷ್ ಅರುಣ್ ಕೆ. 9ನೇ ತರಗತಿಯಲ್ಲಿ 89% ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದು ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ಕರಾಟೆ ಕಾರ್ನಿವಲ್ ನಲ್ಲಿ ಒಂದು ನಿಮಿಷದಲ್ಲಿ 213ಕಿಕ್ಸ್ ಮಾಡಿ ನೊಬೆಲ್ ವಿಶ್ವದಾಖಲೆ ಮಾಡಿದ್ದಾರೆ.ಕರಾಟೆಯಲ್ಲಿ ಫರ್ಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ ಪಡೆದಿದ್ದಾರೆ. ಶೊರೀನ್ ರಿಯೋ ಕರಾಟೆ ಅಸೋಸಿಯೇಷನ್ ನಲ್ಲಿ ರೆಫೆರೀ ತರಬೇತಿ ಪಡೆದು 'ಕರಾಟೆ ಅಂಡ್ ಜಡ್ಜ್ ಫಾರ್ ಕುಮಿಟೆ' ಯಾಗಿ ಉತ್ತೀರ್ಣರಾಗಿದ್ದಾರೆ. 2023ರಲ್ಲಿ ಉಡುಪಿಯಲ್ಲಿ ನಡೆದ ರಾಷ್ಟ್ರೀಯಮಟ್ಟದ ಹೈಫೈವ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ಬೆಳ್ಳಿಯ ಪದಕ ಒಂದು ಕಂಚಿನ ಪದಕ, 2022ರಲ್ಲಿ ನಡೆದ ಕರಾಟೆ COMPETE-3.0 ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ, 2022 ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಕ್ವಾಂಡೊ ವೆಸ್ಟಾರ್ಟ್ಸ್ ಕಪ್ ನ್ಯಾಷನಲ್ ಲೆವೆಲ್ ನಲ್ಲಿ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆಯಲ್ಲಿ ಪ್ರಥಮ ಸ್ಥಾನ, 2022 -23 ರೈನ್ ಬೊ ಕಪ್ ನಲ್ಲಿ ಕಂಚಿನ ಪದಕ, ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಟೆಕ್ವಾಂಡೊದಲ್ಲಿ ಚಿನ್ನದ ಪದಕ, ಮಂಗಳೂರಿನಲ್ಲಿ ನಡೆದ ತುಳುನಾಡು ಕಪ್ ನಲ್ಲಿ ಒಂದು ಬೆಳ್ಳಿಯ ಪದಕ ಹಾಗೂ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಉಪನ್ಯಾಸಕ ಕೇಶವ ಬಂಗೇರ ಗೇರುಕಟ್ಟೆ, ಅಸಿಸ್ಟೆಂಟ್ ಕಮಿಷನರ್ ಆಫ್ ಜಿಎಸ್ಟಿ ಮುಂಬೈ ಪ್ರಕಾಶ್ ಪೂಜಾರಿ, ಅಶೋಕ್ ಸಾಲಿಯಾನ್ ರಿತ್ವಿ ನಿವಾಸ ಪರಪ್ಪಾಡಿ ನಿಟ್ಟೆ ಉದ್ಯಮಿ ಮುಂಬೈ, ಚೇತನ್ ಕೋಟ್ಯಾನ್ ಉದ್ಯಮಿ ಅತ್ತೂರು, ಉದ್ಯಮಿ ಅರುಣ್ ಕುಮಾರ್ ನಿಟ್ಟೆ, ನಿಟ್ಟೆ ಬಿಲ್ಲವ ಸಂಘದ ಅಧ್ಯಕ್ಷ ಪ್ರವೀಣ್ ಸಾಲ್ಯಾನ್ ನಿಟ್ಟೆ, ಮಹಾಬಲ ಸುವರ್ಣ, ಉದಯ್ ಕುಮಾರ್, ಸುಷ್ಮಾ ವಿನಯ ಕುಮಾರ್, ಸುರೇಶ್ ಪೂಜಾರಿ,ಶ್ರೀಮತಿ ರೇಖಾ, ಲತೇಶ್ ಸಂದೀಪ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಹೆಚ್ ಅಧಿಕಾರ ಸ್ವೀಕಾರ
Posted On: 17 Mar 2024, 02:22 PM
ಉಡುಪಿ : ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಡಾ. ಅಶೋಕ್ ಹೆಚ್ ಅಧಿಕಾರ ಸ್ವೀಕರಿಸಿದ್ದಾರೆ. ಅನುಭವಿ ವೈದ್ಯರಾಗಿ, 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಂಚಲನ ಮೂಡಿಸಿ, ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಆ ಹುದ್ದೆಗಳಿಗೆ ನಿಷ್ಠೆಯಿಂದ ಸೇವೆ ಸಲ್ಲಿಸಿ ವೈದ್ಯಕೀಯ ಕ್ಷೇತ್ರಕ್ಕೆ ಗೌರವ ತಂದಿರುವ ಅಶೋಕ್ ರವರು ವಿಶೇಷ ಅನುಭವ ಹೊಂದಿದ್ದು, ಇದೀಗ ಉಡುಪಿ ಜಿಲ್ಲಾ ಸರ್ಜನ್ ಆಗಿ ನೇಮಕಗೊಂಡ ಡಾ. ಎಚ್. ಅಶೋಕ್ ಅವರನ್ನು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಲಯನ್ಸ್ ಉಡುಪಿ ಚೇತನಾ ಇದರ ಪದಾಧಿಕಾರಿಗಳು ಭೇಟಿಯಾಗಿ ಶುಭಕೋರಿದರು. ಈ ಸಂದರ್ಭದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷರಾದ ಸತೀಶ್ ಸಾಲ್ಯಾನ್ ಮಣಿಪಾಲ್, ಕಾರ್ಯದರ್ಶಿ ದಿನೇಶ್ ಹೆಗ್ಡೆ ಆತ್ರಾಡಿ, ಡಾ. ಬಳ್ಕೂರು ಗೋಪಾಲ ಆಚಾರ್ಯ, ರತ್ನಾಕರ್ ಶೆಟ್ಟಿ ಮಾಜಿ ಅಧ್ಯಕ್ಷರು ಆತ್ರಾಡಿ ಗ್ರಾಮ ಪಂಚಾಯತ್, ಲಯನ್ಸ್ ಪುಷ್ಪಾರಾಜ್ ಆಚಾರ್ಯ, ಲಯನ್ಸ್ ಅಭಿಜಿತ್ ಸುವರ್ಣ, ಅಶೋಕ್ ಕುಮಾರ್ , ಪಚ್ವಿ ಮಣಿಪಾಲ್ ಉಪಸ್ಥಿತರಿದ್ದರು.
ಕಾಪು ಹೊಸ ಮಾರಿಗುಡಿ ದೇವಳದಲ್ಲಿ ನವ ಜ್ಯೋತಿ ಬೆಳಗಿದ ಪೇಜಾವರ ಶ್ರೀಗಳು
Posted On: 17 Mar 2024, 02:14 PM
ಕಾಪು : ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಯೋಧ್ಯೆ ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆ ಮತ್ತು 48 ದಿನಗಳ ಮಂಡಲೋತ್ಸವವನ್ನು ಮುಗಿಸಿ ಭಾನುವಾರ ಇಳಕಲ್ಲ್ ಶಿಲೆಯಿಂದ ಶಿಲಾಮಯವಾಗಿ ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಮಾರಿಯಮ್ಮನ ಸನ್ನಿಧಾನಕ್ಕೆ ಆಗಮಿಸಿ ಶ್ರೀದೇವಿಯ ದರುಶನ ಪಡೆದರು. ಈ ಸಂದರ್ಭ ಮಾರಿಯಮ್ಮನ ಸನ್ನಿದಾನದಲ್ಲಿ ನವ ದೀಪಗಳನ್ನು ಬೆಳಗಿಸಿ ನಂತರ ದೇವಳದ ನವದುರ್ಗಾ ಮಂಟಪದಲ್ಲಿ ಭಕ್ತಾದಿಗಳನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು. ಉಡುಪಿಗೆ ತೆರಳುತ್ತಿರುವ ಸಂದರ್ಭ ಕಾಪು ಮಾರಿಯಮ್ಮನ ದರುಶನ ಮಾಡಿದೆವು, ಜೀರ್ಣೋದ್ಧಾರ ಕೆಲಸಗಳು ಕಾಲಕ್ಕೆ ಅನುಗುಣವಾಗಿ ಆ ಮಹಾತಾಯಿ ಮತ್ತು ಪ್ರಭು ಶ್ರೀ ರಾಮಚಂದ್ರ ಹಾಗೂ ಉಡುಪಿ ಶ್ರೀ ಕೃಷ್ಣನ ದಯೆಯಿಂದ ನಿರ್ವಿಘ್ನವಾಗಿ ಮತ್ತು ಸಾಂಗವಾಗಿ ನೆರವೇರಬೇಕು, ತಾಯಿಯ ಅನುಗ್ರಹ ಲೋಕದ ಸಮಸ್ತ ಜನರ ಮೇಲಿರಲಿ ಎಂದು ಹೇಳಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿ, ಕಾರ್ಯಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯ, ಗೌರವಾದ್ಯಕ್ಷರಾದ ಲಾಲಾಜಿ ಆರ್. ಮೆಂಡನ್, ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಮುಂಬೈ ಸಮಿತಿಯ ಉಪಾಧ್ಯಕ್ಷರಾದ ಕೃಷ್ಣ ಶೆಟ್ಟಿ "ಕೃಷ್ಣ ಪ್ಯಾಲೇಸ್", ಕಟ್ಟಡ ಸಮಿತಿಯ ಪ್ರಧಾನ ಸಂಚಾಲಕರಾದ ಭಗವಾನ್ ದಾಸ್ ಶೆಟ್ಟಿಗಾರ್, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರಾದ ರಮೇಶ್ ಶೆಟ್ಟಿ ಕಾಪು ಕೊಲ್ಯ, ದಾನಿಗಳಾದ ಉದ್ಯಮಿ ಪುರುಷೋತ್ತಮ್ ಶೆಟ್ಟಿ, ಉಮಾ ಕೃಷ್ಣ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಸಂಚಾಲಕರುಗಳಾದ ಚಂದ್ರಶೇಖರ್ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಮ್, ಬಾಬು ಮಲ್ಲಾರ್, ಕಾಪು ಜಿ. ಎಸ್. ಬಿ ಸಮಾಜ ಭಾಂದವರು, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಶಿಲ್ಪಾ ಜಿ. ಸುವರ್ಣ,ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್, ಆರ್ಥಿಕ ಸಮಿತಿಯ ಶೈಲಪುತ್ರಿ ತಂಡದ ಮುಖ್ಯ ಸಂಚಾಲಕರಾದ ವಿದ್ಯಾಧರ ಪುರಾಣಿಕ್, ಮನೋಹರ್ ರಾವ್ ಕಲ್ಯಾ, ಲಕ್ಷ್ಮೀಶ ತಂತ್ರಿ, ರವಿ ಭಟ್ ಮಂದಾರ, ಲಕ್ಷ್ಮೀ ನಾರಾಯಣ ತಂತ್ರಿ, ಸಿದ್ದಿಧಾತ್ರಿ ತಂಡದ ಸಂಚಾಲಕರುಗಳಾದ ಶ್ರೀಧರ ಕಾಂಚನ್, ಸುಲೋಚನ ಕೆ. ಸುವರ್ಣ, ಜಗದೀಶ್ ಮೆಂಡನ್, ಮಮತಾ ಕುಶ ಸಾಲ್ಯಾನ್, ಕಲಾವತಿ ಪುತ್ರನ್,ಗೀತಾರಾಜ್, ಉಷಾ ಕೆ. ಪುತ್ರನ್,ದಿವಾಕರ ಶೆಟ್ಟಿ ಮಲ್ಲಾರ್, ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್, ಸಿಬ್ಬಂದಿಗಳು ಮತ್ತು ವಿವಿಧ ಸಂಘ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.
ಹೆಜಮಾಡಿ : ಅಯೋಧ್ಯೆಯಿಂದ ಆಗಮಿಸಿದ ಪೇಜಾವರ ಶ್ರೀಗಳಿಗೆ ಭವ್ಯ ಸ್ವಾಗತ
Posted On: 17 Mar 2024, 11:08 AM
ಹೆಜಮಾಡಿ : ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣಪ್ರತಿಷ್ಠಾಪನೆ ಮತ್ತು 48 ದಿನಗಳ ಮಂಡಲೋತ್ಸವವನ್ನು ವೈಭವದಿಂದ ನೆರವೇರಿಸಿ ಉಡುಪಿಗೆ ಮರಳುತ್ತಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಹೆಜಮಾಡಿ ಟೋಲ್ ಬಳಿ ಸ್ವಾಗತಿಸಲಾಯಿತು. ಈ ಸಂದರ್ಭ ಹೆಜಮಾಡಿ ಟೋಲ್ ಗೇಟ್ ಬಳಿಯಿಂದ ಶ್ರೀಗಳು ಕಾಪು ಹೊಸ ಮಾರಿಗುಡಿಗೆ ತೆರಳಿದರು. ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಪಕ್ಷದ ಪ್ರಮುಖರು, ಶ್ರೀಗಳ ಅನುಯಾಯಿಗಳು ಮತ್ತಿತರರು ಉಪಸ್ಥಿತರಿದ್ದರು.
ಶಂಕರಪುರ : ಶ್ರೀ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ - ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ ಸಂಪನ್ನ
Posted On: 16 Mar 2024, 06:09 PM
ಕಟಪಾಡಿ : ಶ್ರೀ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶ್ರೀ ಕ್ಷೇತ್ರ ಶಂಕರಪುರ ಇದರ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ ಕಾರ್ಯಕ್ರಮ ಮಾರ್ಚ್ 16ರಂದು ದೇವಾಲಯದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೋಕ್ಷಕಟ್ಟೆಯಲ್ಲಿ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿದ ಶ್ರೀ ಸಾಯಿ ಈಶ್ವರ ಗುರೂಜಿ ಮುಂದಿನ ದಿನಗಳಲ್ಲಿ ಪ್ರಾಣಿ-ಪಕ್ಷಿಗಳ ಮೋಕ್ಷ ದಿನಾಚರಣೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಈ ದಿನಕ್ಕೆ ಮಾನ್ಯತೆ ದೊರೆಯುವಂತೆ ಸಂತ ಸಮಿತಿಯ ವತಿಯಿಂದ ಲೋಕಸಭಾ ಸದಸ್ಯರ ನೆರವಿನೊಂದಿಗೆ ಪ್ರಧಾನಿಗಳೊಂದಿಗೆ ಈ ಕುರಿತು ಚರ್ಚಿಸುವ ಉದ್ದೇಶವಿದೆ ಎಂದು ತಿಳಿಸಿದರು. ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಕೂಡ ಆತ್ಮವಿದೆ ಈ ಆತ್ಮಕ್ಕೆ ಅವುಗಳು ಸತ್ತ ಬಳಿಕ ಮೋಕ್ಷ ದೊರಕುವ ನಿಟ್ಟಿನಲ್ಲಿ ಈ ರೀತಿಯ ವಿಭಿನ್ನವಾದ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ರಸ್ತೆ ಬದಿಯಲ್ಲಿ ಸತ್ತ ಪ್ರಾಣಿ ಪಕ್ಷಿಗಳನ್ನು ಮಣ್ಣು ಮಾಡುವ ಕಾಯಕವನ್ನು ಮಾಡುತ್ತಿರುವ ಅಜಯ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಸಾಮಾಜಿಕ ಮುಂದಾಳು ಸತೀಶ್ ವೇಣೂರು, ಮಹಿಳಾ ಸಂಚಾಲಕಿ ವಾರಿಜಾ ಕಲ್ಮಾಡಿ, ವಿಜಯ್ ಕುಂದರ್, ಸತೀಶ್ ದೇವಾಡಿಗ,ವಿಘ್ನೇಶ್, ಸುಪ್ರೀತಾ, ಲಕ್ಷ್ಮಿ, ನೀಲೇಶ್ ಪ್ರದೀಪ್ ಮುಂತಾದವರಿದ್ದರು. ರಾಘವೇಂದ್ರ ಕರ್ವಾಲು ನಿರೂಪಿಸಿದರು. ಈ ಸಂದರ್ಭದಲ್ಲಿ ಮೋಕ್ಷ ಕಟ್ಟೆಯಲ್ಲಿ ಅಭಿಷೇಕ ನೆರವೇರಿಸಲಾಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರನಾಥ್ ಗಟ್ಟಿ ಕಾಪಿಕಾಡ್ ಆಯ್ಕೆ
Posted On: 16 Mar 2024, 05:55 PM
ಮಂಗಳೂರು :ತುಳು ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ತಾರನಾಥ್ ಗಟ್ಟಿ ಕಾಪಿಕಾಡ್ ಅವರನ್ನು ನೇಮಕ ಮಾಡಲಾಗಿದೆ. ತುಳು ಅಕಾಡೆಮಿಯ ಸದಸ್ಯರಾಗಿ ಪೃಥ್ವಿರಾಜ್, ಕುಂಬ್ರ ದುರ್ಗಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್. ಶೆಟ್ಟಿ, ಶೈಲೇಶ್ ಬಿನ್ ಭೋಜ ಸುವರ್ಣ, ಕಿಶೋರ್ ಬಿನ್ ಗುಡ್ಡಪ್ಪ ಗೌಡ, ಬೂಬ ಪೂಜಾರಿ, ರೋಹಿತಾಶ್ವ ಯು. ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ, ಸಂತೋಷ್ ಶೆಟ್ಟಿ ನೇಮಕಗೊಂಡಿದ್ದಾರೆ.
