Updated News From Kaup

ಕಡಲ್ ಫಿಶ್ ಸ್ಪೋರ್ಟ್ಸ್ ಅಕಾಡೆಮಿ & ಚಾರಿಟೇಬಲ್ ಟ್ರಸ್ಟ್ ಪಡುಬಿದ್ರಿ : ವೈದ್ಯಕೀಯ ಚಿಕಿತ್ಸೆಗೆ ನೆರವು

Posted On: 01-08-2025 07:19PM

ಪಡುಬಿದ್ರಿ : ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಪಲಿಮಾರು ಪಟ್ಟಿಗೇರಿ ನಿವಾಸಿ ಗಣೇಶ್ ಪೂಜಾರಿಯವರ ವೃೆದ್ಯಕೀಯ ಚಿಕಿತ್ಸೆಗಾಗಿ ಕಡಲ್ ಫಿಶ್ ಸ್ಪೋರ್ಟ್ಸ್ & ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು.

ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ

Posted On: 31-07-2025 07:51PM

ಕಾಪು : ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ತುಳು ಚಿತ್ರನಟಿ ಶ್ರೀಮತಿ ಸ್ಮಿತಾ ಸುಧೀರ್ ಸುವರ್ಣ ಇವರು ನಿಯುಕ್ತಿಗೊಂಡಿದ್ದಾರೆ.

ಕಾಪು : ಕಳತ್ತೂರು ಅಯ್ಯಣ್ಣ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

Posted On: 31-07-2025 07:47PM

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಪಡು ಕಳತ್ತೂರು ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನೆರವೇರಿತು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್.

Posted On: 31-07-2025 06:36PM

ಪಡುಬಿದ್ರಿ : ಮನುಷ್ಯ ತನ್ನ ಸ್ವಾರ್ಥಕ್ಕಾಗಿ ರಸ್ತೆ, ಕಾಂಕ್ರೀಟ್ ಕಟ್ಟಡ ನಿರ್ಮಾಣ ಮಾಡಿ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗಿ ಗುಡ್ಡ ಕುಸಿತ ಮತ್ತು ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ. ಇದರಿಂದ ಆತಂಕದ ವಾತವರಣ ಸೃಷ್ಟಿಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಒಂದು ದಿನ ಗಿಡ ನೆಟ್ಟು ವರ್ಷಪೂರ್ತಿ ಸಂರಕ್ಷಿಸಿಕೊಂಡು ಬರುವುದು. ನಾವು ನೆಟ್ಟ ಗಿಡ ಭವಿಷ್ಯತ್ತಿನಲ್ಲಿ ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಗಾಳಿ ,ಅಹಾರ ಪೂರೃೆಸುವಂತಿರ ಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಹಸಿರು ಸೇನೆ ಹೆಜಮಾಡಿ ಹಾಗೂ ಪಡುಬಿದ್ರಿ ಪೋಲಿಸ್ ಠಾಣೆ ವತಿಯಿಂದ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಹಾಗೂ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಾಪು : ಘಂಟಾನಾದ ಸೇವೆಯಲ್ಲಿ ಇಷ್ಟಾರ್ಥ ಸಿದ್ಧಿ - ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

Posted On: 31-07-2025 04:31PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕುಟುಂಬದ ಎಲ್ಲಾ ಸದಸ್ಯರು ನವದುರ್ಗಾ ಲೇಖನ ಯಜ್ಞದ ಸಂಕಲ್ಪವನ್ನು ಮಾಡಿದರು. ಪತ್ನಿ ರಂಜಿತಾ ರಾಧಾ ದೇವಿಗೆ ಸೀರೆ ಮತ್ತು ಬಾಗಿನ ನೀಡಿದರು. ಪುತ್ರ ವಿಹಾನ್ ಕಾರ್ಣಿಕ್ ಜೊತೆಗಿದ್ದರು.

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : 'ಕೋಟಿ ಚೆನ್ನಯೆರ್' ನಾಟಕ ಯಶಸ್ವಿ ಪ್ರದರ್ಶನ

Posted On: 30-07-2025 11:13AM

ಉದ್ಯಾವರ : ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ, ಇವರು ಸಾದರಪಡಿಸಿದ ರಂಗ ಕೇಸರಿ ರಮೇಶ್ ರೈ ಕುಕ್ಕುವಳ್ಳಿ ಸಾರಥ್ಯದಲ್ಲಿ ಪ್ರಕೃತಿ ಕಲಾವಿದರು ಕುಡ್ಲ ಅಭಿನಯಿಸಿದ, ಭಕ್ತಿ ಪ್ರಧಾನ ತುಳು ನಾಟಕ ಬಿರ್ದ್'ದ ಬೀರೆರ್ 'ಕೋಟಿ ಚೆನ್ನಯೆರ್' ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು. ಸಾವಿರಕ್ಕೂ ಅಧಿಕ ಕಲಾಭಿಮಾನಿಗಳಿಂದ ಉದ್ಯಾವರದ ಕ್ಸೇವಿಯರ್ ಸಭಾಭವನವು ತುಂಬಿತ್ತು.

ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆ

Posted On: 30-07-2025 11:09AM

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025 -26ನೇ ವರ್ಷದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆಯಾಗಿದ್ದಾರೆ.

ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Posted On: 29-07-2025 09:13PM

ಎರ್ಮಾಳು : ಜನ ಕಲ್ಯಾಣಕ್ಕೆ ಪೂರಕವಾದ ಸೇವೆಯನ್ನು ಜನಾರ್ಧನ ಜನ ಕಲ್ಯಾಣ ಸಮಿತಿ ಮಾಡುತ್ತಿದೆ. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕವಾಗಿ ಸಮಾಜದ ಋಣ ತೀರಿಸುವ ಕಾರ್ಯ ಸಮಿತಿ ಮಾಡುತ್ತಿದೆ ಎಂದು ಎರ್ಮಾಳು ಜನಾರ್ಧನ ದೇವಳದ ಅರ್ಚಕರಾದ ವಿಷ್ಣುಮೂರ್ತಿ ಭಟ್ ಹೇಳಿದರು. ಅವರು ಮಂಗಳವಾರ ಜನಾರ್ಧನ ಜನಕಲ್ಯಾಣ ಸೇವಾ ಸಭಾಂಗಣದಲ್ಲಿ ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ (ರಿ.) ಎರ್ಮಾಳು ವತಿಯಿಂದ 2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಪು ತಾಲೂಕಿನಾದ್ಯಂತ ಸಂಭ್ರಮದ ನಾಗರಪಂಚಮಿ ಆಚರಣೆ

Posted On: 29-07-2025 03:29PM

ಕಾಪು : ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ಕಾಪು ತಾಲೂಕಿನಾದ್ಯಂತ ಭಕ್ತರು ತಮ್ಮ ಮೂಲ ನಾಗಬನಗಳಿಗೆ ಭೇಟಿಯಿತ್ತು, ತನು ತಂಬಿಲಾದಿ ಸೇವೆ ನೀಡಿ ಸಂಭ್ರಮದಿಂದ ಆಚರಿಸಿದರು.

ಕಾಪು ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಲಿ : ವಿನಯ ಕುಮಾರ್ ಸೊರಕೆ

Posted On: 29-07-2025 09:28AM

ಕಾಪು : ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಕಾಪು ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.