Updated News From Kaup
ಉಡುಪಿ : ಪುರುಷೋತ್ತಮ ಪುರಸ್ಕಾರಕ್ಕೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ
Posted On: 04-02-2024 06:33PM
ಉಡುಪಿ : ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ಫೆಬ್ರವರಿ 29 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣ ನಡೆಯುವ ಕಾರ್ಯಕ್ರಮದಲ್ಲಿ ಕೊಡ ಮಾಡುವ ಪುರುಷೋತ್ತಮ ಪುರಸ್ಕಾರಕ್ಕೆ ಉಡುಪಿಯ ಸಮಾಜಿಕ ಕಾರ್ಯಕರ್ತ, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆಯಾಗಿದ್ದಾರೆ.
ಕಾಪು : ಗ್ರಾಮ ಚಲೋ ಕಾರ್ಯಕ್ರಮ - ಪೂರ್ವಭಾವಿ ಸಭೆ
Posted On: 04-02-2024 06:27PM
ಕಾಪು : ಫೆಬ್ರವರಿ 9,10 ಮತ್ತು 11 ರಂದು ನಡೆಯಲಿರುವ ಕಾಪು ಗ್ರಾಮ ಚಲೋ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಕಾಪು : ಇನ್ನಂಜೆ ಯುವಕ ಮಂಡಲದ ಸುವರ್ಣ ಮಹೋತ್ಸವ - ಸುವರ್ಣ ಸಭಾಭವನದ ಉದ್ಘಾಟನೆ
Posted On: 03-02-2024 11:52AM
ಕಾಪು : ಇನ್ನಂಜೆ ಯುವಕ ಮಂಡಲದ ಸದಸ್ಯರು ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭ ರಾತ್ರಿ ಹಗಲು ಕರಸೇವೆ ಮಾಡಿದ ಫಲವಾಗಿ ಇಂದು ಸುಸಜ್ಜಿತ ಸಭಾಭವನ ನಿರ್ಮಾಣ ಮಾಡುವಂತಾಗಿದೆ ಎಂದು ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು. ಅವರು ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಇನ್ನಂಜೆಯಲ್ಲಿ ನಿರ್ಮಾಣವಾದ ಸುವರ್ಣ ಸಭಾಭವನ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಉಡುಪಿ : ಕಾಡಬೆಟ್ಟು ಹುಲಿವೇಷ ತಂಡದ ಮುಖ್ಯಸ್ಥ ಅಶೋಕ್ರಾಜ್ ಇನ್ನಿಲ್ಲ
Posted On: 01-02-2024 09:48PM
ಉಡುಪಿ : ಇಲ್ಲಿಯ ಪ್ರಸಿದ್ಧ ಕಾಡಬೆಟ್ಟು ಹುಲಿವೇಷ ತಂಡದ ಮುಖ್ಯಸ್ಥ ಅಶೋಕ್ರಾಜ್ ಕಾಡಬೆಟ್ಟು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ಮಡಿವಾಳ ಮಾಚಿದೇವರಂತೆ ವೃತ್ತಿ ಗೌರವ ಬೆಳೆಸಿಕೊಳ್ಳಿ : ತಹಶೀಲ್ದಾರ್ ಡಾ.ಪ್ರತಿಭಾ ಆರ್.
Posted On: 01-02-2024 07:51PM
ಕಾಪು : ಅರಸುತನ ಮೇಲಲ್ಲ ಅಗಸುತನ ಕೀಳಲ್ಲ ಎಂದು ವೃತ್ತಿ ಗೌರವ ಸಾರಿದ ಮಡಿವಾಳ ಮಾಚಿದೇವರು 12 ಶತಮಾನದವರು, ಬಸವಣ್ಣನವರ ಸಮಕಾಲೀನರು. ವೃತ್ತಿಯಿಂದ ಮಡಿವಾಳರಾದರೂ ಹಲವು ವಚನಗಳನ್ನು ಬರೆದ ಅನುಭಾವಿ ವಚನಕಾರ. ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಜಾತಿ ವ್ಯವಸ್ಥೆಯ ವಿಜೃಂಭಣೆಯನ್ನು ಪ್ರತಿಭಟಿಸಿ ನಿಂತ ಸಮಾಜ ಸುಧಾರಕರು ಎಂದು ಕಾಪು ತಾಲ್ಲೂಕು ತಹಶೀಲ್ದಾರ್ ಡಾ.ಪ್ರತಿಭಾ ಆರ್. ಹೇಳಿದರು. ಅವರು ಕಾಪು ತಹಶೀಲ್ದಾರ್ ಕಚೇರಿಯಲ್ಲಿ ಜರಗಿದ ಮಡಿವಾಳ ಮಾಚಿದೇವ ಜಯಂತಿ ಆಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಪಡುಬಿದ್ರಿ : ಆನ್ಲೈನ್ ಜಾಬ್ ವಂಚನೆ
Posted On: 31-01-2024 10:11PM
ಪಡುಬಿದ್ರಿ : ಫೇಸ್ಬುಕ್ ನಲ್ಲಿ ಕಂಡ ಆನ್ಲೈನ್ ಜಾಬ್ ಜಾಹೀರಾತಿಗೆ ಮರುಳಾಗಿ ಮಹಿಳೆಯೋರ್ವರು 3 ಲಕ್ಷ 83 ಸಾವಿರ ರೂ. ಹಣ ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಪು ಮಂಡಲ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಿಗೆ ಅಭಿನಂದನೆ
Posted On: 31-01-2024 09:41PM
ಕಾಪು : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ಅವರಿಗೆ ಬುಧವಾರ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ನಡೆಯಿತು.
ಮುಲ್ಕಿ : ಶಿವಾಯ ಫೌಂಡೇಶನ್ ಮುಂಬೈ - ಕುಟುಂಬವೊಂದಕ್ಕೆ ದಿನಸಿ ಸಾಮಾಗ್ರಿ, ವಿಧವಾ ವೇತನದ ಚೆಕ್ ಹಸ್ತಾಂತರ
Posted On: 31-01-2024 07:20PM
ಮುಲ್ಕಿ : ಶಿವಾಯ ಫೌಂಡೇಶನ್ (ರಿ.) ಮುಂಬೈ ಸಂಸ್ಥೆಯ ವತಿಯಿಂದ ಬುಧವಾರ ಮುಲ್ಕಿ ಕಾರ್ನಾಡು ಅಮೃತಮಾಯಿ ನಗರ ನಿವಾಸಿ ಗೀತಾರವರ ಕುಟುಂಬಕ್ಕೆ 3ನೇ ತಿಂಗಳಿನ ದಿನಬಳಕೆಯ ದಿನಸಿ ಸಾಮಾಗ್ರಿ ಹಾಗೂ ವಿಧವಾ ವೇತನದ ಚೆಕ್ ನ್ನು ಶಿವಾಯ ಸಂಸ್ಥೆಯ ನೂತನ ಗೌರವಾಧ್ಯಕ್ಷರಾದ ನವೀನ್ ಚಂದ್ರ ಜೆ ಶೆಟ್ಟಿ ಪಡುಬಿದ್ರಿ ಹಸ್ತಾಂತರಿಸಿದರು.
ಫೆಬ್ರವರಿ 1- 4 : ಉದ್ಯಾವರದಲ್ಲಿ ಬಹುಭಾಷಾ ನಾಟಕೋತ್ಸವ
Posted On: 31-01-2024 11:18AM
ಉದ್ಯಾವರ : ನಿರಂತರ್ ಉದ್ಯಾವರ ನೇತೃತ್ವದಲ್ಲಿ 6ನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವವು ಇದೇ ಫೆಬ್ರವರಿ ಒಂದರಿಂದ ನಾಲ್ಕನೇ ತಾರೀಖಿನವರೆಗೆ ಸಂಜೆ ಗಂಟೆ 6:30ಕ್ಕೆ ಸರಿಯಾಗಿ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸ್ಮಾರಕ ವೇದಿಕೆಯಲ್ಲಿ (ಚರ್ಚ್ ವಠಾರ) ನಡೆಯಲಿದೆ.
ಫೆಬ್ರವರಿ 3 : ಡಾನ್ಸ್ ಪಡುಬಿದ್ರಿ ಡಾನ್ಸ್-2024
Posted On: 30-01-2024 06:48PM
ಪಡುಬಿದ್ರಿ : ಇಲ್ಲಿನ ರೋಟರಿ ಕ್ಲಬ್ ಮತ್ತು ಓಂಕಾರ ಕಾಸ್ಟ್ಯೂಮ್ ಮತ್ತು ಕಲಾಸಂಗಮದ ವತಿಯಿಂದ ಕಲಾ ಪ್ರತಿಭೆಗಳಿಗೆ ವೇದಿಕೆ ರೂಪಿಸುವ ಸಲುವಾಗಿ ಡಾನ್ಸ್ ಪಡುಬಿದ್ರಿ ಡಾನ್ಸ್-2024 ರಾಜ್ಯ ಮಟ್ಟದ ಸಮೂಹ ಫಿಲ್ಮಿ ನೃತ್ಯ ಸ್ಪರ್ಧೆಯನ್ನು ಫೆಬ್ರವರಿ 3 ಶನಿವಾರದಂದು ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಅಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಪಡುಬಿದ್ರಿ ಸ್ಥಾಪಕ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಹೇಳಿದರು. ಅವರು ಕಾಪು ಪತ್ರಕರ್ತರ ಸಂಘದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
