Updated News From Kaup

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ - 'ಚೆಂಡು'ಗೆ ಚಾಲನೆ

Thumbnail
Posted On: 22 Mar 2024, 05:05 PM

ಪಡುಬಿದ್ರಿ : ಇತಿಹಾಸ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾಚ್೯ 22ರಂದು ಚೆಂಡುಗೆ ಚಾಲನೆ ನೀಡಲಾಯಿತು. ದೇವಳದ ತಂತ್ರಿವರ್ಯರ ಪ್ರಾರ್ಥನೆಯೊಂದಿಗೆ ಚೆಂಡಿನ ಸೇವಾಕರ್ತರಾದ ಶರತ್ ಪೂಜಾರಿಯವರು ಬಗ್ಗೆಡಿ ಗುತ್ತಿನಾರ್ ಮತ್ತು ನಡ್ಸಾಲು ಗುತ್ತಿನಾರುಗಳಿಗೆ ಹಸ್ತಾಂತರಿಸಿ ಅವರು ಚೆಂಡನ್ನು ದೇವಳದ ಮುಂಭಾಗದ ವಠಾರಕ್ಕೆ ಎಸೆಯುವ ಮೂಲಕ ಚಾಲನೆ ನೀಡಲಾಯಿತು. ಪಾದೆಬೆಟ್ಟುವಿನ ಮಾಗಂದಡಿ ಯುವಕರು ಮತ್ತು ನಡ್ಸಾಲು ಗ್ರಾಮದ ಯುವಕರು ರಥೋತ್ಸವದ ಮರುದಿನ ಚೆಂಡಾಟ ಆಡುವ ಪ್ರತೀತಿ ಇತ್ತು. ಪ್ರತಿ ವರ್ಷದಂತೆ ಈ ಬಾರಿಯೂ ಊರಿನ ಹಿರಿಯರು, ಕಿರಿಯರು ಚೆಂಡು ಆಡುವ ಮೂಲಕ ಸಂಭ್ರಮಿಸಿದರು. ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರರಾಜ ಅರಸು ಕಿನ್ಯಕ್ಕ ಬಲ್ಲಾಳ್ ಮತ್ತು ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ, ಬಗ್ಗೆಡಿ ಗುತ್ತಿನಾರ್ ಶೇಖರ ಶೆಟ್ಟಿ, ನಡ್ಸಾಲು ಗುತ್ತಿನಾರ್ ಶ್ರೀನಾಥ ಹೆಗ್ಗಡೆ, ಅನಿಲ್ ಶೆಟ್ಟಿ, ದೇವಾಲಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕೋಟೆಕಾರ್, ಭಕ್ತರು ಉಪಸ್ಥಿತರಿದ್ದರು.

ಮಾಚ್೯ 26-27 : ಕಾಪು ಸುಗ್ಗಿ ಮಾರಿಪೂಜೆ

Thumbnail
Posted On: 21 Mar 2024, 03:39 PM

ಕಾಪು : ಶ್ರೀಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಏಕಕಾಲದಲ್ಲಿ ಜರಗುವ ಇತಿಹಾಸ ಪ್ರಸಿದ್ದ ಕಾಲಾವಧಿ ಸುಗ್ಗಿ ಮಾರಿಪೂಜೆಯು ಮಾಚ್೯ 26 ಮತ್ತು 27ರಂದು ಜರಗಲಿದೆ. 2 ದಿನಗಳ ಕಾಲ ನಡೆಯುವ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ವಿವಿಧ ಕಡೆಗಳಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಹರಕೆ, ಸೇವೆಗಳನ್ನು ಸಲ್ಲಿಸುತ್ತಾರೆ. ಮಾಚ್೯ 26ರಂದು ರಾತ್ರಿ ಹಳೇ ಮಾರಿಗುಡಿಗೆ ವೆಂಕಟರಮಣ ದೇವಸ್ಥಾನದಿಂದ ಹಾಗೂ ಹೊಸ ಮಾರಿಗುಡಿ ಮತ್ತು 3ಮೂರನೇ ಮಾರಿಗುಡಿಗೆ ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಬಿಂಬ ಮತ್ತು ಚಿನ್ನಾಭರಣಗಳನ್ನು ಮೆರವಣಿಗೆ ಮೂಲಕ ತಂದು ಗದ್ದೆಗೆಯೇರಿಸಿ ಮಾರಿಪೂಜೆಯ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಮಾಚ್೯ 27ರಂದು ಸಂಜೆ ದರ್ಶನ ಸೇವೆ ನಡೆದು ಬಳಿಕ ಮಾರಿಯಮ್ಮ ದೇವಿಯ ಬಿಂಬ ವಿಸರ್ಜಿಸಲಾಗುತ್ತದೆ.

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ - ರಥಾರೋಹಣ ಸಂಪನ್ನ

Thumbnail
Posted On: 21 Mar 2024, 03:31 PM

ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಇಂದು ಮಧ್ಯಾಹ್ನ ರಥಾರೋಹಣ ಜರಗಿತು. ರಥಾರೋಹಣದ ಬಳಿಕ ಮಹಾ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಳದ ಅನುವಂಶಿಕ ಮೊಕ್ತೇಸರರುಗಳು, ದೇವಳದ ಆಡಳಿತಾಧಿಕಾರಿ, ದೇವಳದ ತಂತ್ರಿವರ್ಯರು, ಅರ್ಚಕರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.

ಉಡುಪಿ : ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಶರ್ಫುದ್ದೀನ್ ಶೇಖ್ ನೇಮಕ

Thumbnail
Posted On: 21 Mar 2024, 10:50 AM

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನೂತನ ಅಧ್ಯಕ್ಷರಾಗಿ ಕಾಪುವಿನ ಶರ್ಫುದ್ದೀನ್ ಶೇಖ್ ಅವರನ್ನು ನೇಮಕಗೊಳಿಸಲಾಗಿದೆ. ಎಐಸಿಸಿ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪಗಢಿ ಅವರು ರಾಜ್ಯದ ವಿವಿಧ ಜಿಲ್ಲೆಗಳ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರ ನೇಮಕವನ್ನು ಮಾಡಿದ್ದು ಉಡುಪಿ ಜಿಲ್ಲೆಗೆ ಶರ್ಫುದ್ದೀನ್ ಶೇಖ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಆತ್ರಾಡಿ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯ ಸಂಯೋಜಕರಾದ ಝೀನಲ್ ಗಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನಪದ ವಿಭೂಷಣ ಪ್ರಶಸ್ತಿಗೆ ಕರುಣಾಕರ ಕೆ. ಕಾಪು ಆಯ್ಕೆ

Thumbnail
Posted On: 21 Mar 2024, 10:35 AM

ಕಾಪು : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮಹಾರಾಷ್ಟ್ರ ಘಟಕದ ವಾರ್ಷಿಕ ಜಾನಪದ ವಿಭೂಷಣ ಪ್ರಶಸ್ತಿಗೆ ಮೂಲತಃ ಕಾಪುವಿನ ಪ್ರಸ್ತುತ ಉದ್ಯೋಗ ನಿಮಿತ್ತ ಮುಂಬಯಿಯಲ್ಲಿ ವಾಸ್ತವ್ಯವಿರುವ ನಾಟಕಕಾರ, ಜಾನಪದ ರಂಗ ನಿರ್ದೇಶಕ ಕರುಣಾಕರ ಕೆ. ಕಾಪು ಆಯ್ಕೆಯಾಗಿದ್ದಾರೆ. ಮಾ. 24ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಲಿರುವ ಸಂಸ್ಥೆಯ 'ಸಾಂಸ್ಕೃತಿಕ ಜಾನಪದ ಸಿರಿ ಸಿಂಚನ' ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವರು ಕಾಪುವಿನ ಕೃಷ್ಣಪ್ಪ ಸಾಲ್ಯಾನ್ ಮತ್ತು ಗಿರಿಜಾ ಸಾಲ್ಯಾನ್ ದಂಪತಿ ಪುತ್ರರಾಗಿದ್ದು, ಹುಟ್ಟೂರಿ ನಲ್ಲಿಪ್ರಾಥಮಿಕ ಶಿಕ್ಷಣ ಪೂರೈಸಿ, ಮುಂಬಯಿಗೆ ಬಂದು ಹಗಲಿನಲ್ಲಿ ದುಡಿದು ಮದರ್ ಇಂಡಿಯಾ ಧರ್ಮಾರ್ಥ ರಾತ್ರಿ ಶಾಲೆಯಲ್ಲಿ ಮುಂದಿನ ಶಿಕ್ಷಣ ಪಡೆದರು. ಶಾಲಾ ಜೀವನದಲ್ಲೇ ರಂಗಕಲೆಯ ವೈವಿಧ್ಯತೆಗೆ ಮಾರು ಹೋಗಿ ಕಲೆಯನ್ನು ಮೈಗೂಡಿಸಿಕೊಂಡು ಮುಂಬಯಿಯಲ್ಲಿ ಸಮಾನ ಮನಸ್ಕರೊಂದಿಗೆ ಅಭಿನಯ ಮಂಟಪ ಸಂಸ್ಥೆ ಸ್ಥಾಪಿಸಿದ ಶ್ರೇಯಸ್ಸು ಇವರದ್ದಾಗಿದೆ. ಉತ್ತಮ ಲೇಖಕ, ರಂಗನಿರ್ದೇಶಕರಾಗಿ ಮುಂಬಯಿ ರಂಗಭೂಮಿಯಲ್ಲಿ ತನ್ನದೇ ಆದ ಸ್ಥಾನ ಪಡೆದುಕೊಂಡಿದ್ದಾರೆ. ಸಮರ್ಥ ಸಂಘಟಕರೂ ಆದ ಅವರು ಜನತಾ ಎಜುಕೇಶನ್ ಸೊಸೈಟಿ ಮುಂಬಯಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಂಗಭೂಮಿಗೆ ಕಲಾ ಕಾಣಿಕೆಯಾಗಿ ಹಲವಾರು ನಾಟಕಗಳನ್ನು ಬರೆದು, ನಿರ್ದೇಶಿಸಿದ್ದಾರೆ. ಇವರ ಸಾಧನೆಯನ್ನು ಹಲವಾರು ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದೆ.

ಪಡುಬಿದ್ರಿ ಕಡಲ ಕಿನಾರೆಯಲ್ಲಿ ತಿಮಿಂಗಲದ ಪಳೆಯುಳಿಕೆ ಪತ್ತೆ

Thumbnail
Posted On: 20 Mar 2024, 10:05 PM

ಪಡುಬಿದ್ರಿ : ಇಲ್ಲಿನ ಮುಖ್ಯ ಬೀಚ್‌ನ ಮುಂಭಾಗ 100 ವರ್ಷಕ್ಕಿಂತಲೂ ಹಳೆಯದಾದ400 ಕೆ.ಜಿ. ತೂಕದ ತಿಮಿಂಗಲದ ಮುಖಭಾಗದ ಎಲುಬಿನ ಪಳೆಯುಳಿಕೆ ಕಂಡುಬಂದಿದೆ. ಅದನ್ನು ಮುಖ್ಯ ಬೀಚ್‌ನ ಸಿಬಂದಿ, ಬ್ಲೂ ಫ್ಲ್ಯಾಗ್ ಬೀಚ್‌ನ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿ ಮೇಲಕ್ಕೆತ್ತಿ ತಂದು ಸ್ವಚ್ಛಗೊಳಿಸಿ ಬ್ಲೂಪ್ಲಾಗ್ ಬೀಚಿನಲ್ಲಿ ಪ್ರವಾಸಿಗರ ಶಾಶ್ವತ ವೀಕ್ಷಣೆಗಾಗಿ ಇಟ್ಟಿದ್ದಾರೆ. ಈ ಬಗ್ಗೆ ಬ್ಲೂ ಫ್ಲ್ಯಾಗ್ ಬೀಚ್‌ನ ಪ್ರಬಂಧಕ ವಿಜಯ್ ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.

ಉಡುಪಿ : ಹೋಳಿ ಆಚರಣೆಯಲ್ಲಿ ಹಿಂದೂ ಸಂಸ್ಕೃತಿಗೆ ಧಕ್ಕೆ ವಿರೋಧಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಮನವಿ

Thumbnail
Posted On: 19 Mar 2024, 02:35 PM

ಉಡುಪಿ : ಹೋಳಿ ಹಬ್ಬದ ಆಚರಣೆಯ ಹೆಸರಿನಲ್ಲಿ ಹಿಂದೂ ಸಂಸ್ಕೃತಿಗೆ ಧಕ್ಕೆ ತರುವುದನ್ನು ವಿರೋಧಿಸಿ ಉಡುಪಿಯಲ್ಲಿ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಯವರಿಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದು ಪರಿಷದ್ ಪ್ರಾಂತೀಯ ಪ್ರಮುಖ್ ಸುನಿಲ್ ಕೆ. ಆರ್, ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಉಡುಪಿ ಜಿಲ್ಲಾ ಸಂಯೋಜಕ್ ಚೇತನ್ ಪೇರಲ್ಕೆ, ಬಜರಂಗದಳ ಉಡುಪಿ ಜಿಲ್ಲಾ ಸಹ ಸಂಯೋಜಕ್ ಮನೋಜ್ ಮಲ್ಪೆ, ಬಜರಂಗದಳ ಉಡುಪಿ ಜಿಲ್ಲಾ ಸುರಕ್ಷಾ ಪ್ರಮುಖ ರಾಜೇಶ್ ಕೋಟ್ಯಾನ್, ಜಿಲ್ಲಾ ಸೇವಾ ಪ್ರಮುಖ್ ವಿಖ್ಯಾತ್ ಭಟ್, ವಿಶ್ವ ಹಿಂದು ಪರಿಷದ್ ವಿದ್ಯಾರ್ಥಿ ಪ್ರಮುಖ್ ಕಿರಣ್ ಮಲ್ಪೆ ಮತ್ತಿತರರು ಉಪಸ್ಥಿತರಿದ್ದರು.

ಮಣಿಪಾಲ : ಪ್ರಾಧ್ಯಾಪಕ ರಾಮಕೃಷ್ಣ ನಾಯಕ್ ಮಂಡಿಸಿದ ಮಹಾಪ್ರಬಂಧಕ್ಕೆ ಪಿ ಎಚ್ ಡಿ

Thumbnail
Posted On: 18 Mar 2024, 02:17 PM

ಮಣಿಪಾಲ : ಇಲ್ಲಿನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಾ ಹುಮಾನಿಟೀಸ್ ಅಂಡ್ ಮ್ಯಾನೇಜ್ಮೆಂಟ್ ವಿಭಾಗದ ಸಹ ಪ್ರಾಧ್ಯಾಪಕ ರಾಮಕೃಷ್ಣ ನಾಯಕ್ ಅವರು ಮಂಡಿಸಿದ "ಫ್ಯಾಬ್ರಿಕೇಷನ್ ಅಂಡ್ ಕಾರಾಕ್ಟ್ ರೈಸೇಷನ್ ಆಫ್ ಪ್ರಿಂಟೆಡ್ ಫ್ಲೆಕ್ಸಿಬಲ್ ಥೆರ್ಮೋಎಲೆಕ್ಟ್ರಿಕ್ ಜೆನೆರೇಟರ್ಸ್ ಬೇಸ್ಡ್ ಆನ್ ನಾವೆಲ್ ಇಂಕ್ ಫಾರ್ಮುಲೇಶನ್ಸ್" ಎನ್ನುವ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ಪಿ ಎಚ್ ಡಿ ನೀಡಿದೆ. ಇದರ ಒಂದು ಲೇಖನವು ೨೦೨೨ ನೇ ಸಾಲಿನ ಡಾI. ಟಿ ಎಂ ಎ ಪೈ ಚಿನ್ನದ ಪದಕವನ್ನು ಪಡೆದಿದೆ. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಾ ಪ್ರೊಫೆಸರ್ ಡಾI ಪ್ರಕಾಶ ಶೆಟ್ಟಿ ಹಾಗು ಎಂ ಐ ಟಿ ಯಾ ಅಸೋಸಿಯೇಟ್ ಪ್ರೊಫೆಸರ್ ಡಾI ಸೆಲ್ವಕುಮಾರ್ ಇವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದ ರಾಮಕೃಷ್ಣ ನಾಯಕ್ ಇವರು ಹಿರಿಯಡ್ಕ -ಗುಡ್ಡೆಅಂಗಡಿಯಾ ದಿ. ಎ. ರಂಗಪ್ಪ ನಾಯಕ್ ಮತ್ತು ಶಾರದಾ ನಾಯಕ್ ದಂಪತಿಯ ಪುತ್ರ.

ನಿಟ್ಟೆ ಬಿಲ್ಲವ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ; ಸನ್ಮಾನ

Thumbnail
Posted On: 17 Mar 2024, 04:50 PM

ಕಾರ್ಕಳ : ಬಿಲ್ಲವ ಸಂಘ (ರಿ.) ನಿಟ್ಟೆ ಇದರ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಿಟ್ಟೆಯ ಅವಳಿ ಸಾಧಕರಾದ ಆಯುಷ್ ಅರುಣ್ ಕೆ. ಹಾಗೂ ಅನುಷ್ ಅರುಣ್ ಕೆ.ರವರನ್ನು ಸನ್ಮಾನಿಸಲಾಯಿತು. ಆನುಷ್ ಅರುಣ್ ಕೆ 9ನೇ ತರಗತಿಯಲ್ಲಿ 97.4% ಪಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದು, ವಿವೊ ಇಗ್ನೈಟ್ ಟೆಕ್ನಲಾಜಿ ಮತ್ತು ಇನ್ನೊವೇಟ್ ಅವಾರ್ಡ್ ಇಂಡಿಯಾದ ಟಾಪ್ 10ರಲ್ಲಿ ಆಯ್ಕೆಯಾಗಿದ್ದಾರೆ. ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ಕರಾಟೆ ಕಾರ್ನಿವಲ್ ನಲ್ಲಿ 1000ಮೀಟರ್ ಡಿಸ್ಟೆನ್ಸ್ ಸೆಡ್ ಕಿಕ್ ಇನ್ ಶಾರ್ಟಸ್ಟ್ ಡ್ಯುರೇಷನ್ ವಿಭಾಗದಲ್ಲಿ ನೊಬೆಲ್ ವಿಶ್ವದಾಖಲೆ ಮಾಡಿದ್ದಾರೆ.ಕರಾಟೆಯಲ್ಲಿ ಫರ್ಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ ಪಡೆದಿದ್ದು ಶೊರೀನ್ ರಿಯೋ ಕರಾಟೆ ಅಸೋಸಿಯೇಷನ್ ನಲ್ಲಿ ರೆಫೆರೀ ತರಭೇತಿ ಪಡೆದು ಕರಾಟೆ ರೇಫರೀ ಆಂಡ್ ಜಡ್ಜ್ ಫಾರ್ ಕುಮಿಟೆ ಯಾಗಿ ಉತ್ತೀರ್ಣರಾಗಿದ್ದಾರೆ. 2023 ರಲ್ಲಿ ಉಡುಪಿಯಲ್ಲಿ ನಡೆದ ರಾಶ್ರಿತ ಮಟ್ಟದ ಹೈಫೈವ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಎರಡು ಚಿನ್ನದ ಪದಕ,2022ರಲ್ಲಿ ನಡೆದ COMPETE 3.0 ಕರಾಟೆ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ, 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಕ್ವಾಂಡೊ ವೆಸ್ಟರ್ಸ್ ಕಪ್ ನ್ಯಾಷನಲ್ ಲೆವೆಲ್ ನಲ್ಲಿ ಎರಡು ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆಯಲ್ಲಿ ದ್ವಿತೀಯ ಸ್ಥಾನ,2022-23ರಲ್ಲಿ ರೈನ್ ಬೊ ಕಪ್ ನಲ್ಲಿ ಕಂಚಿನ ಪದಕ,ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಟೆಕ್ವಾಂಡೊದಲ್ಲಿ ಚಿನ್ನದ ಪದಕ,ಮಂಗಳೂರಿನಲ್ಲಿ ನಡೆದ ತುಳುನಾಡು ಕಪ್ ನಲ್ಲಿ ಒಂದು ಚಿನ್ನದ ಪದಕ ಹಾಗೂ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಆಯುಷ್ ಅರುಣ್ ಕೆ. 9ನೇ ತರಗತಿಯಲ್ಲಿ 89% ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದು ಶೊರೀನ್ ರಿಯೋ ಕರಾಟೆ ಅಸೋಷಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ಕರಾಟೆ ಕಾರ್ನಿವಲ್ ನಲ್ಲಿ ಒಂದು ನಿಮಿಷದಲ್ಲಿ 213ಕಿಕ್ಸ್ ಮಾಡಿ ನೊಬೆಲ್ ವಿಶ್ವದಾಖಲೆ ಮಾಡಿದ್ದಾರೆ.ಕರಾಟೆಯಲ್ಲಿ ಫರ್ಸ್ಟ್ ಡಿಗ್ರಿ ಬ್ಲಾಕ್ ಬೆಲ್ಟ್ ಪಡೆದಿದ್ದಾರೆ. ಶೊರೀನ್ ರಿಯೋ ಕರಾಟೆ ಅಸೋಸಿಯೇಷನ್ ನಲ್ಲಿ ರೆಫೆರೀ ತರಬೇತಿ ಪಡೆದು 'ಕರಾಟೆ ಅಂಡ್ ಜಡ್ಜ್ ಫಾರ್ ಕುಮಿಟೆ' ಯಾಗಿ ಉತ್ತೀರ್ಣರಾಗಿದ್ದಾರೆ. 2023ರಲ್ಲಿ ಉಡುಪಿಯಲ್ಲಿ ನಡೆದ ರಾಷ್ಟ್ರೀಯಮಟ್ಟದ ಹೈಫೈವ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ಬೆಳ್ಳಿಯ ಪದಕ ಒಂದು ಕಂಚಿನ ಪದಕ, 2022ರಲ್ಲಿ ನಡೆದ ಕರಾಟೆ COMPETE-3.0 ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ, 2022 ರಲ್ಲಿ ಬೆಂಗಳೂರಿನಲ್ಲಿ ನಡೆದ ಟೆಕ್ವಾಂಡೊ ವೆಸ್ಟಾರ್ಟ್ಸ್ ಕಪ್ ನ್ಯಾಷನಲ್ ಲೆವೆಲ್ ನಲ್ಲಿ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆಯಲ್ಲಿ ಪ್ರಥಮ ಸ್ಥಾನ, 2022 -23 ರೈನ್ ಬೊ ಕಪ್ ನಲ್ಲಿ ಕಂಚಿನ ಪದಕ, ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಟೆಕ್ವಾಂಡೊದಲ್ಲಿ ಚಿನ್ನದ ಪದಕ, ಮಂಗಳೂರಿನಲ್ಲಿ ನಡೆದ ತುಳುನಾಡು ಕಪ್ ನಲ್ಲಿ ಒಂದು ಬೆಳ್ಳಿಯ ಪದಕ ಹಾಗೂ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಉಪನ್ಯಾಸಕ ಕೇಶವ ಬಂಗೇರ ಗೇರುಕಟ್ಟೆ, ಅಸಿಸ್ಟೆಂಟ್ ಕಮಿಷನರ್ ಆಫ್ ಜಿಎಸ್ಟಿ ಮುಂಬೈ ಪ್ರಕಾಶ್ ಪೂಜಾರಿ, ಅಶೋಕ್ ಸಾಲಿಯಾನ್ ರಿತ್ವಿ ನಿವಾಸ ಪರಪ್ಪಾಡಿ ನಿಟ್ಟೆ ಉದ್ಯಮಿ ಮುಂಬೈ, ಚೇತನ್ ಕೋಟ್ಯಾನ್ ಉದ್ಯಮಿ ಅತ್ತೂರು, ಉದ್ಯಮಿ ಅರುಣ್ ಕುಮಾರ್ ನಿಟ್ಟೆ, ನಿಟ್ಟೆ ಬಿಲ್ಲವ ಸಂಘದ ಅಧ್ಯಕ್ಷ ಪ್ರವೀಣ್ ಸಾಲ್ಯಾನ್ ನಿಟ್ಟೆ, ಮಹಾಬಲ ಸುವರ್ಣ, ಉದಯ್ ಕುಮಾರ್, ಸುಷ್ಮಾ ವಿನಯ ಕುಮಾರ್, ಸುರೇಶ್ ಪೂಜಾರಿ,ಶ್ರೀಮತಿ ರೇಖಾ, ಲತೇಶ್ ಸಂದೀಪ್ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಹೆಚ್ ಅಧಿಕಾರ ಸ್ವೀಕಾರ

Thumbnail
Posted On: 17 Mar 2024, 02:22 PM

ಉಡುಪಿ : ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಡಾ. ಅಶೋಕ್ ಹೆಚ್ ಅಧಿಕಾರ ಸ್ವೀಕರಿಸಿದ್ದಾರೆ. ಅನುಭವಿ ವೈದ್ಯರಾಗಿ, 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಂಚಲನ ಮೂಡಿಸಿ, ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಆ ಹುದ್ದೆಗಳಿಗೆ ನಿಷ್ಠೆಯಿಂದ ಸೇವೆ ಸಲ್ಲಿಸಿ ವೈದ್ಯಕೀಯ ಕ್ಷೇತ್ರಕ್ಕೆ ಗೌರವ ತಂದಿರುವ ಅಶೋಕ್ ರವರು ವಿಶೇಷ ಅನುಭವ ಹೊಂದಿದ್ದು, ಇದೀಗ ಉಡುಪಿ ಜಿಲ್ಲಾ ಸರ್ಜನ್ ಆಗಿ ನೇಮಕಗೊಂಡ ಡಾ. ಎಚ್. ಅಶೋಕ್ ಅವರನ್ನು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಲಯನ್ಸ್ ಉಡುಪಿ ಚೇತನಾ ಇದರ ಪದಾಧಿಕಾರಿಗಳು ಭೇಟಿಯಾಗಿ ಶುಭಕೋರಿದರು. ಈ ಸಂದರ್ಭದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷರಾದ ಸತೀಶ್ ಸಾಲ್ಯಾನ್ ಮಣಿಪಾಲ್, ಕಾರ್ಯದರ್ಶಿ ದಿನೇಶ್ ಹೆಗ್ಡೆ ಆತ್ರಾಡಿ, ಡಾ‌. ಬಳ್ಕೂರು ಗೋಪಾಲ ಆಚಾರ್ಯ, ರತ್ನಾಕರ್ ಶೆಟ್ಟಿ ಮಾಜಿ ಅಧ್ಯಕ್ಷರು ಆತ್ರಾಡಿ ಗ್ರಾಮ ಪಂಚಾಯತ್, ಲಯನ್ಸ್ ಪುಷ್ಪಾರಾಜ್ ಆಚಾರ್ಯ, ಲಯನ್ಸ್ ಅಭಿಜಿತ್ ಸುವರ್ಣ, ಅಶೋಕ್ ಕುಮಾರ್ , ಪಚ್ವಿ ಮಣಿಪಾಲ್ ಉಪಸ್ಥಿತರಿದ್ದರು.