Updated News From Kaup

ಪಡುಬಿದ್ರಿ : ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

Posted On: 10-01-2024 03:55PM

ಪಡುಬಿದ್ರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಇಂದು ಪಡುಬಿದ್ರಿ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.

ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿಗಳಾದ ಅಜಿತ್, ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಕರುಣಾಕರ್, ಉಡುಪಿ ಅಂಚೆ ಇಲಾಖೆಯ ಕೃಷ್ಣರಾಜ ಭಟ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್, ಗ್ರಾಮ ಆಡಳಿತಾಧಿಕಾರಿಗಳಾದ ಮಥಾಯಿಸ್ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಮನೆ ಪುನರ್ ನಿಮಾ೯ಣ ಕಾಯ೯

Posted On: 08-01-2024 12:47PM

ಉಡುಪಿ : ದಶಮಾನೋತ್ಸವದ ಸಂಭ್ರಮದಲ್ಲಿರುವ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಕಳೆದ 10 ವಷ೯ಗಳ ಹಿಂದೆ ಕಟ್ಟಿದ ಮನೆ ಆಥಿ೯ಕ ಸಮಸ್ಯೆಯಿಂದ ಪೂತಿ೯ಗೊಳಿಸಲಾಗದೆ ತೊಂದರೆಗೆ ಸಿಲುಕಿದ್ದ ಹಾವಂಜೆ ಸಮೀಪದ ನೆರೆ ಕಾಲನಿ ಸುಕೇಶ ನಾಯ್ಕ್ ರವರ ಮನೆ ಪುನರ್ ನಿಮಾ೯ಣ ಕಾಯ೯ ಜನವರಿ 7ರಂದು ನಡೆಯಿತು.

ಈ ಸಂದಭ೯ದಲ್ಲಿ ಪೆಡೂ೯ರು ಶೌರ್ಯ ತಂಡದ ಸದಸ್ಯರು ಹೋಂ ಡಾಕ್ಟರ್ ಫೌಂಡೇಶನ್ ನ ಪ್ರಮುಖರಾದ ಡಾI ಶಶಿಕಿರಣ್ ಶೆಟ್ಟಿ, ಡಾI ಸುಮಾ ಶೆಟ್ಟಿ, ರಾಘವೇಂದ್ರ ಪೂಜಾರಿ, ಉದಯ್ ನಾಯ್ಕ್ , ರವಿ , ರಾಘವೇಂದ್ರ ಪ್ರಭು, ಕವಾ೯ಲು ಮುಂತಾದವರಿದ್ದರು

ಜನವರಿ 11-21: ಪಾಂಬೂರಿನ ಪರಿಚಯ ಪ್ರತಿಷ್ಠಾನದಿಂದ ಚಿತ್ರ ಪರಿಚಯ - ನಿಸರ್ಗ ಚಿತ್ರಣ ಶೈಕ್ಷಣಿಕ ವಸತಿ ಶಿಬಿರ

Posted On: 08-01-2024 11:59AM

ಕಾಪು : ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವ ಪಾಂಬೂರಿನ ಪರಿಚಯ ಪ್ರತಿಷ್ಠಾನವು 'ಚಿತ್ರ ಪರಿಚಯ - ನಿಸರ್ಗ ಚಿತ್ರಣ ಶೈಕ್ಷಣಿಕ ವಸತಿ ಶಿಬಿರವನ್ನು ಜನವರಿ11 ರಿಂದ ಜನವರಿ 21ರವರೆಗೆ ಪಾಂಬೂರು ರಂಗಪರಿಚಯದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ್ ನೊರೋನ್ನಾ ಅವರು ಕಾಪು ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜನವರಿ 11ರಂದು ಸಾಯಂಕಾಲ 6 ಗಂಟೆಗೆ ಚಿತ್ರಕಲಾವಿದ ಹಾಗೂ ಶಿಕ್ಷಕ ಮಾನ್ಯ ರಮೇಶ್ ಬಂಟಕಲ್ಲು ಇವರಿಂದ ಉದ್ಘಾಟನೆಗೊಳ್ಳುವ ಈ ಶಿಬಿರದಲ್ಲಿ ಮಂಗಳೂರು ಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದ ಸುಮಾರು 30 ವಿದ್ಯಾರ್ಥಿಗಳು ರಂಗಪರಿಚಯದಲ್ಲಿ ಇದ್ದು ಹಗಲುಹೊತ್ತು ವಿವಿಧ ಸ್ಥಳಗಳಲ್ಲಿ ಪ್ರಕೃತಿ ಚಿತ್ರಣ ನಿರತರಾಗಿದ್ದು ಸಾಯಂಕಾಲ 6:30ರಿಂದ ರಂಗಪರಿಚಯದಲ್ಲಿ ಸಾಂಸ್ಕೃತಿಕ ಕಾರ‍್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ.

ಶಿಬಿರದ ಎಲ್ಲಾ ದಿನಗಳಲ್ಲಿ ರಂಗಪರಿಚಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ‍್ಯಕ್ರಮಗಳು, ಉಪನ್ಯಾಸಗಳು ಹಾಗೂ ಸಿನೆಮಾ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಜನವರಿ 12, ಶುಕ್ರವಾರದಂದು 'ಕತ್ತಲೆ ಹಾಡು ನಾದ ಮಣಿನಾಲ್ಕೂರು ಇವರಿಂದ; ಜನವರಿ 13, ಶನಿವಾರದಂದು 'ಕಲಾಸಕ್ತಿಯ ಜೀವನಶೈಲಿ ಆರೋಗ್ಯಕ್ಕೆ ಪೂರಕ ನಾಡಿನ ಖ್ಯಾತ ವೈದ್ಯ ಹಾಗೂ ಸಂಗೀತ ಕಲಾವಿದ ಡಾ| ಆರ್. ಎನ್. ಭಟ್‌ರವರಿಂದ ಉಪನ್ಯಾಸ, ಸಂವಾದ ಹಾಗೂ ಸಂಗೀತ ಪ್ರಸ್ತುತಿ; ಜನವರಿ 14, ಭಾನುವಾರದಂದು 'ಹಾಸ್ಯದೊಂದಿಗೆ ಜೀವನಮೌಲ್ಯಗಳು ಖ್ಯಾತ ವಿನೋದ ಭಾಷಣಗಾರ್ತಿ ಸಂಧ್ಯಾ ಶೆಣೈ, ಉಡುಪಿ ಇವರಿಂದ; ಜನವರಿ 15, ಸೋಮವಾರದಂದು 'ಹಕ್ಕಿ ಪರಿಚಯ ಹವ್ಯಾಸಿ ಪಕ್ಷಿ ವೀಕ್ಷಕ ಮತ್ತು ವನ್ಯಜೀವಿ ಅಧ್ಯಯನಕಾರ ಅರವಿಂದ ಕುಡ್ಲ ಇವರಿಂದ ಪಕ್ಷಿಲೋಕದ ಸಾಕ್ಷ್ಯಚಿತ್ರ ಮತ್ತು ಸಂವಾದ; ಜನವರಿ 16, ಮಂಗಳವಾರದಂದು ಖ್ಯಾತ ಕಲಾವಿದರಿಂದ ತಾಳಮದ್ದಲೆ, ಪ್ರಸಂಗ : ಪಾದುಕಾ ಪ್ರದಾನ; ಜನವರಿ 17, ಬುಧವಾರದಂದು ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವಿದ್ಯಾರ್ಥಿಗಳಿಂದ ಕನ್ನಡ ನಾಟಕ 'ಹ್ಯಾಂಗ್ ಆನ್; ರಾಷ್ಟೀಯ ಹಾಗೂ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪುರಸ್ಕೃತ ಕನ್ನಡ ಸಿನೆಮಾಗಳ ಪ್ರದರ್ಶನ, ಜನವರಿ 18, ಗುರುವಾರದಂದು ಚಂಪಾ ಪಿ. ಶೆಟ್ಟಿ ನಿರ್ದೇಶನ 'ಕೋಳಿ ಎಸ್ರು; ಜನವರಿ 19, ಶುಕ್ರವಾರದಂದು ಉತ್ಸವ್ ಗೋನವಾರ ನಿರ್ದೇಶನದ 'ಫೋಟೋ; ಜನವರಿ 20, ಶನಿವಾರದಂದು ಉಮೇಶ್ ಬಡಿಗೇರ್ ನಿರ್ದೇಶನದ 'ದಿ ಗಾರ್ಡ್ ಪ್ರದರ್ಶನಗೊಳ್ಳಲಿದೆ. ಜನವರಿ 21, ಭಾನುವಾರದಂದು ಅಪರಾಹ್ನ 3ರಿಂದ ಚಿತ್ರಕಲಾ ಪ್ರದರ್ಶನ ಆಯೋಜಿಸಲಾದ್ದು, ಸಾಯಂಕಾಲ 6:30ರಿಂದ ಶಿಬಿರ ಸಮಾರೋಪಗೊಳ್ಳಲಿದ್ದು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾನ್ಯ ಪ್ರಸನ್ನ ಹೆಚ್. ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಈ ಸಮಾರಂಭದಲ್ಲಿ ಖ್ಯಾತ ಚಿತ್ರ ಹಾಗೂ ಶಿಲ್ಪ ಕಲಾವಿದ ಬೆಂಗಳೂರಿನ ಮಾನ್ಯ ಸುದೇಶ್ ಮಹಾನ್ ಸಮಾರೋಪ ಸಂದೇಶ ನೀಡಲಿದ್ದಾರೆ.

ನಂತರ ಶಿಬಿರಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ‍್ಯಕ್ರಮಗಳು ಪ್ರಸ್ತುತಿಗೊಳ್ಳಲಿವೆ. ಎಲ್ಲಾ ಕಾರ‍್ಯಕ್ರಮಗಳಿಗೆ ಕಲಾಸಕ್ತರಿಗೆ ಉಚಿತ ಪ್ರವೇಶವಿರುತ್ತದೆ ಎಂದು ತಿಳಿಸಿದರು. ಈ ಸಂದರ್ಭ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪುಂಡಲೀಕ ಮರಾಠೆ, ಟ್ರಸ್ಟಿಗಳಾದ ವಿಲ್ಸನ್ ಡಿಸೋಜ, ಅರುಳ್ ಡಿಸೋಜ, ಪೀಠರ್ ಓಸ್ತಾ ಉಪಸ್ಥಿತರಿದ್ದರು.

ಕಾಪು : ದಂಡತೀರ್ಥ ಮಠದಲ್ಲಿ ಹೊಸತನದೆಡೆಗೆ ಮೊದಲ ಹೆಜ್ಜೆ - ಚಿಂತನ-ಮಂಥನ

Posted On: 07-01-2024 05:30PM

ಕಾಪು : ಉಡುಪಿ ತಾಲೂಕು ಬ್ರಾಹ್ಮಣ ಮಹಾ ಸಭಾ ಇದರ ರಜತ ಮಹೋತ್ಸವದ ಸಂಭ್ರಮದಲ್ಲಿ ಕಾಪು ವಲಯ ಬ್ರಾಹ್ಮಣ ಸಂಘ ಕಾಪು ಇದರ ವತಿಯಿಂದ ರವಿವಾರ ಕಾಪು ದಂಡತೀರ್ಥ ಮಠದಲ್ಲಿ ಹೊಸತನದೆಡೆಗೆ ಮೊದಲ ಹೆಜ್ಜೆ -ಚಿಂತನ-ಮಂಥನ ಕಾರ್ಯಕ್ರಮ ಸಂಪನ್ನಗೊಂಡಿತು. ಶ್ರೀ ಮಠದ ದೇವರ ಸಾನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಚಿಂತನ ಮಂಥನ ಕಾರ್ಯಕ್ರಮದ ಸಮನ್ವಯಕಾರರಾಗಿ ಹಿರಿಯ ಪತ್ರಕರ್ತರು, ಜಾನಪದ ವಿದ್ವಾಂಸರಾದ ಕೆ.ಎಲ್.ಕುಂಡಂತಾಯ ವಹಿಸಿದ್ದರು. ಸಮಾಜದ ಹಿರಿಯ ವಿದ್ವಾಂಸರು, ಧಾರ್ಮಿಕ,ಸಾಮಾಜಿಕ ಮುಖಂಡರ ಉಪಸ್ಥಿತಿಯಲ್ಲಿ ವಿಷಯಗಳ ಮಂಡನೆ, ಚರ್ಚೆ, ಸಂವಾದಗಳು ನಡೆದವು. ಅಶೌಚ ವಿಷಯದಲ್ಲಿ ಸುದರ್ಶನ ಆಚಾರ್ಯ ಕಲ್ಯಾ, ಸಂಪ್ರದಾಯ-ಪೂಜೆ, -ಪುನಸ್ಕಾರಗಳಲ್ಲಿ ಕಾಲಕ್ಕೆ ತಕ್ಕ ಬದಲಾವಣೆಗಳು ವಿಷಯದಲ್ಲಿ ಪ್ರೊ.ಹೆರ್ಗ ಹರಿಪ್ರಸಾದ ಭಟ್, ಬ್ರಾಹ್ಮಣರಲ್ಲಿ ವಿವಾಹ ಸಮಸ್ಯೆಗಳು -ಪರಿಹಾರ ಈ ಬಗ್ಗೆ ಸುಬ್ರಹ್ಮಣ್ಯ ತಂತ್ರಿ ಪಾದೂರು, ಮಹಿಳೆಯರಿಗೆ ಪೂಜಾ ಅರ್ಹತೆ ಬಗ್ಗೆ ವಸುಧಾ ಮುರಳೀಧರ ತಂತ್ರಿ ಕಲ್ಯಾ, ಬ್ರಾಹ್ಮಣ ಸಂಘಟನೆ, ಸವಾಲುಗಳು ಮತ್ತು ಪರಿಹಾರ ವಿಷಯದಲ್ಲಿ ರಜತೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ಬಲ್ಲಾಳ್, ಕರ್ಮದಿಂದ ಬ್ರಾಹ್ಮಣತ್ವ ಈ ಬಗ್ಗೆ ವಿದ್ಯಾಧರ ಪುರಾಣಿಕ್ ವಿಷಯ ಮಂಡಿಸಿದರು.

ಕಾಪು ವಲಯ ಬ್ರಾಹ್ಮಣ ಸಂಘದ ಅಧ್ಯಕ್ಷ ರಾಮಕೃಷ್ಣ ತಂತ್ರಿ ಅಧ್ಯಕ್ಷತೆ ವಹಿಸಿದ್ದರು. ಚಿಂತನ ಮಂಥನದಲ್ಲಿ ವಿದ್ವಾಂಸರಾದ ಕಲ್ಯ ಅಶೋಕ ಆಚಾರ್ಯ, ಖ್ಯಾತ ಜ್ಯೋತಿಷ್ಯ ವಿದ್ವಾಂಸರಾದ ಪ್ರಕಾಶ್ ಅಮ್ಮಣ್ಣಾಯ, ವೇದವ್ಯಾಸ ಐತಾಳ್ ಉಡುಪಿ, ಡಾ.ಸೀತಾರಾಮ ಭಟ್ ದಂಡತೀರ್ಥ, ಎಂ.ಬಿ.ಪುರಾಣಿಕ್ ಮಂಗಳೂರು, ಮಂಜುನಾಥ ಉಪಾಧ್ಯಾಯ ಪರ್ಕಳ, ಶ್ರೀರಾಮ್ ಭಟ್ ಸಾಣೂರು, ವಿದ್ಯಾ ಅಮ್ಮಣ್ಣಾಯ, ಗಣೇಶ್ ಐತಾಳ್ ಉಡುಪಿ, ಲಕ್ಷ್ಮೀನಾರಾಯಣ ತಂತ್ರಿ, ಲಕ್ಷೀಶ ತಂತ್ರಿ, ರವಿಪ್ರಕಾಶ್, ಹರಿಕೃಷ್ಣ ಭಟ್, ಸದಾಶಿವ ಭಟ್ ಕೆ, ಪುರಂದರ ಭಟ್, ಗಣೇಶ್ ರಾವ್, ಕಾಪು ವಲಯ ಮತ್ತು ಉಡುಪಿ ತಾಲೂಕು ವ್ಯಾಪ್ತಿಯ ವಿಪ್ರರು ಉಪಸ್ಥಿತರಿದ್ದರು.

ಕಾಪು ವಲಯ ಬ್ರಾಹ್ಮಣ ಸಂಘದ ಕಾರ್ಯದರ್ಶಿ ವಿದ್ಯಾಧರ ಪುರಾಣಿಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ವಿದ್ವಾಂಸರುಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕೋಶಾಧಿಕಾರಿ ಮನೋಹರ ರಾವ್ ವಂದಿಸಿದರು.

ಬಂಟಕಲ್ಲು : ಬಸ್ಸು ನಿಲ್ದಾಣ ಗ್ರಂಥಾಲಯಕ್ಕೆ ಬನ್ನಂಜೆ ಬಾಬು ಅಮೀನ್ ರವರ ಅಕ್ಷರ ತುಲಾಭಾರದ ಪುಸ್ತಕಗಳ ಕೊಡುಗೆ

Posted On: 07-01-2024 03:12PM

ಬಂಟಕಲ್ಲು : ಇಲ್ಲಿನ ನಾಗರಿಕ ಸೇವಾ ಸಮಿತಿ (ರಿ.) ಇವರು ಜಿಲ್ಲೆಯಲ್ಲೇ ಪ್ರಥಮವಾಗಿ ಬಂಟಕಲ್ಲು ಬಸ್ಸು ನಿಲ್ದಾಣದಲ್ಲಿ ಪ್ರಾಯೋಜಿಸಿರುವ ಬಸ್ಸು ನಿಲ್ದಾಣ ಗ್ರಂಥಾಲಯಕ್ಕೆ ಬನ್ನಂಜೆ ಬಾಬು ಅಮೀನ್ ರವರ ಅಕ್ಷರ ತುಲಾಭಾರದ ಆಯ್ದ ಸುಮಾರು ರೂ. 2,500 ಬೆಲೆಯ ಕೆಲವು ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.

ಇತ್ತೀಚೆಗೆ ಬನ್ನಂಜೆ ನಾರಾಯಣಗುರು ಸಭಾಗೃಹದಲ್ಲಿ ನಡೆದ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ರವರ 80 ರ ಸಂಭ್ರಮದ ಸಿರಿತುಪ್ಪೆ ಕಾರ್ಯಕ್ರಮ ನಡೆದಿತ್ತು. ಈ ಸಂಧರ್ಭದಲ್ಲಿ ಅವರನ್ನು ಪುಸ್ತಕಳಿಂದ ತುಲಾಭಾರ ನಡೆಸಲಾಗಿತ್ತು. ಈ ಅಕ್ಷರ ತುಲಾಭಾರದ ಬಾಬು ಅಮೀನ್ ರವರೇ ಬರೆದ ಪುಸ್ತಕಗಳ ಸಹಿತ ಕೆಲವು ಪುಸ್ತಕಗಳನ್ನು ಅಭಿನಂದನಾ ಸಮಿತಿಯ ಅರವಿಂದ ಕಲ್ಲುಗುಡ್ಡೆಯವರು ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಶಿರ್ವ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಬಂಟಕಲ್ಲು, ನಾಗರಿಕ ಸೇವಾ ಸಮಿತಿಯ ಅನಂತರಾಮ ವಾಗ್ಲೆ, ವಿನ್ಸಂಟ್ ಕಸ್ತಲಿನೊ, ವಿರೇಂದ್ರ ಪಾಟ್ಕರ್, ಉದ್ಯಮಿ ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.

ಪಲಿಮಾರು : ಸರಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

Posted On: 07-01-2024 03:07PM

ಪಲಿಮಾರು : ವಿದ್ಯಾರ್ಥಿಗಳು ಕನಿಷ್ಠ 2 ದಿನಪತ್ರಿಕೆಗಳನ್ನು ಪ್ರತಿನಿತ್ಯ ಓದಬೇಕು. ಕೇವಲ ಪಠ್ಯ ಪುಸ್ತಕಗಳಿಂದ ಮಾತ್ರವಲ್ಲ, ಹೊರಗಿನ ಪ್ರಪಂಚದ ಜ್ಞಾನವನ್ನು ಎಲ್ಲಾ ಮೂಲಗಳಿಂದ ಗಳಿಸಿ ಜೀವನದಲ್ಲಿ ಯಶಸ್ವಿಗಳಾಗಬೇಕು. ಉತ್ತಮ ವಿದ್ಯಾರ್ಥಿಗಳಾಗಿ, ನೀವು ಕಲಿತ ಶಾಲೆಗೆ, ಕಲಿಸಿದ ಶಿಕ್ಷಕರಿಗೆ ಕೀರ್ತಿ ಗೌರವವನ್ನು ತರಬೇಕು ಎಂದು ಪಲಿಮಾರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರಾದ ಗಾಯತ್ರಿ ಡಿ. ಪ್ರಭು ಹೇಳಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು, ಇಲ್ಲಿ ಪಲಿಮಾರು ಸುತ್ತಮುತ್ತಲಿನ ಸರಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಂಸ್ಥೆಯ ಕನ್ನಡ ಶಿಕ್ಷಕರಾದ ಪಿಲಾರು ಸುಧಾಕರ್ ಶೆಣೈಯವರ ನೇತೃತ್ವದಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಸ್ಥಳೀಯ ಐದು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ವೆ ಚಾಂಪಿಯನ್‌ಶಿಪ್ ಪಡೆದು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನಿರೆ ದ್ವಿತೀಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಂತೂರು ಕೊಪ್ಪಲ ತೃತೀಯ ಸ್ಥಾನ ಪಡೆದರು.

ಕಾರ್ಯಕ್ರಮದಲ್ಲಿ ಪಲಿಮಾರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ರಾಯೇಶ್ವರ್ ಪೈ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ, ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತ, ಸ್ಥಳೀಯ ಉದ್ಯಮಿಗಳಾದ ದಿನೇಶ್ ಪ್ರಭು, ಸಂಸ್ಥೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಯೋಗೀಶ್ ಸುವರ್ಣ, ಹಳೆ ವಿದ್ಯಾರ್ಥಿಗಳಾದ ಪ್ರವೀಣ್, ಪ್ರಸಾದ್, ರಾಯೇಶ್ವರ್ ಪೈ ಹಾಗೂ ಪ್ರಾಂಶುಪಾಲರು ಕಾರ್ಯಕ್ರಮದ ಪ್ರಾಯೋಜಕರಾಗಿ ಸಹಕರಿಸಿದರು. ಹಿರಿಯ ಸಹಶಿಕ್ಷಕರಾದ ಸುನೀತಾ ಸ್ವಾಗತಿಸಿ, ಪಿಲಾರು ಸುಧಾಕರ್ ಶೆಣೈ ರಸಪ್ರಶ್ನೆ ಹಾಗೂ ಸಭಾ ಕಾರ್ಯಕ್ರಮವನ್ನು ನಿರೂಪಿಸಿದರು. ಆಂಗ್ಲಭಾಷಾ ಶಿಕ್ಷಕರಾದ ಕೆ. ಶಿವಾನಂದ ವಂದಿಸಿದರು.

ಉಚ್ಚಿಲ : ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಚ್ಚಿಲ ಶಾಖೆಗೆ ಅಮೇರಿಕಾದ ಅಧ್ಯಯನ ತಂಡದ ನಿಯೋಗ ಭೇಟಿ

Posted On: 06-01-2024 08:29PM

ಉಚ್ಚಿಲ : ಅಮೇರಿಕಾದ ಗ್ರಾಮೀಣ ಭಾಗದ ಮಹಿಳಾ ಸಬಲೀಕರಣದ ಉದ್ದೇಶದಿಂದ ಕಳೆದ 11 ವರ್ಷಗಳಿಂದ ಅಲ್ಲಿನ ಅಧ್ಯಯನಶೀಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತಂದು ಇಲ್ಲಿನ ಮಹಿಳಾ ಸಬಲೀಕರಣದ ಚಿತ್ರಣವನ್ನು ಅವರಿಗೆ ಮನದಟ್ಟು ಮಾಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹೆಚ್ಚು ಪ್ರಭಾವಿತರಾಗಿದ್ದಾರೆ ಎಂದು ಅಮೇರಿಕಾದ ಪೆನೊಸೋಲೋನಿಯಾ ವಿಶ್ವವಿದ್ಯಾನಿಲಯದ ಪ್ರೊ. ಡಾ. ಫಮೀದಾ ಹ್ಯಾಂಡಿ ಹೇಳಿದ್ದಾರೆ. ಅವರು ಅಮೇರಿಕಾದ ವಿದ್ಯಾರ್ಥಿಗಳ ನಿಯೋಗದೊಂದಿಗೆ ಇಲ್ಲಿನ ಸಹಕಾರಿ ಸೊಸೈಟಿಗಳ ಸ್ವಸಹಾಯ ಸಂಘಗಳ ಅಧ್ಯಯನಕ್ಕಾಗಿ ಶನಿವಾರ ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಚ್ಚಿಲ ಶಾಖೆಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮ ಜತೆ ಮಾತನಾಡಿದರು.

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಅತಿಥಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ, ಪ್ರೊ.ಫಮೀದಾ ಹ್ಯಾಂಡಿಯವರನ್ನು ಸನ್ಮಾನಿಸಿ ಗೌರವಿಸಿದರು. ತದನಂತರ ಅಮೆರಿಕಾ ತಂಡದ ಸದಸ್ಯರು ವಿಚಾರ ವಿನಿಮಯ ನಡೆಸಿದರು.

ಈ ಸಂದರ್ಭ ನವೋದಯ ಸ್ವಸಹಾಯ ಸಂಘಗಳ ಅಧಿಕಾರಿ ಹರಿನಾಥ್, ಬೆಳಪು ಸಂಘದ ನಿರ್ದೇಶಕರಾದ ದ್ಯುಮಣಿ ಭಟ್, ಪಾಂಡು ಶೆಟ್ಟಿ, ಪಾಂಡು ಶೇರಿಗಾರ್, ಮೀನಾ ಪೂಜಾರ್ತಿ, ಶೋಭಾ ಭಟ್, ಸುಗುಣಾ ಅಂಚನ್, ಸಂಘದ ಕಾರ್ಯನಿರ್ವಹಣಾಧಿಕಾರಿ ಸುಲೋಚನಾ ದೇವಾಡಿಗ, ವಿವಿಧ ಶಾಖಾ ಪ್ರಬಂಧಕರು ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ - ನಮಾಮಿ ರಾಮ ಭಜಕಮ್ ; ಕರಸೇವಕರಿಗೆ ಗೌರವಾರ್ಪಣೆ

Posted On: 06-01-2024 07:32PM

ಕಟಪಾಡಿ : ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ, ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ವತಿಯಿಂದ ಕಾಪು ತಾಲೂಕಿನ ಅಯೋಧ್ಯೆ ರಾಮ ಮಂದಿರದ ಕರಸೇವೆಯಲ್ಲಿ ಭಾಗಿಯಾದ ಕರಸೇವಕರನ್ನು ಗೌರವಿಸಿದರು.

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರು ನಾರಾಯಣ ಕಾಮತ್, ಕೋಡುಗುಡ್ಡೆ, ಶ್ರೀಧರ ಶೆಟ್ಟಿ ಕೋಡು, ಸುಂದರ ಪ್ರಭು ಶಿರ್ವ , ಶ್ರೀಪತಿ ಕಾಮತ್ ಶಿರ್ವ, ದಿನೇಶ್ ಪಾಟ್ಕರ್ ಮಟ್ಟಾರು, ರಮೇಶ್ ಪ್ರಭು ಬೆಳಂಜಾಲೆಗೆ ತೆರಳಿ ಕರಸೇವಕರಿಗೆ ಅಭಿವಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ ಅಧ್ಯಕ್ಷೆ ವೀಣಾ ಶೆಟ್ಟಿ, ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ಸಂಘದ ಅಧ್ಯಕ್ಷ ಜಯಪ್ರಕಾಶ್ ಪ್ರಭು, ಸಂಘದ ಸ್ವಯಂ ಸೇವಕ ಸುಬ್ರಹ್ಮಣ್ಯ ವಾಗ್ಳೆ, ಶಿರ್ವ ವ್ಯವಸಾಯಿಕ ಸೇವಾ ಸಹಕಾರಿ ನಿ. ಉಪಾಧ್ಯಕ್ಷೆ ವಾರಿಜ ಪೂಜಾರಿ, ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ, ಕಾರ್ಯದರ್ಶಿ ಶಿವಪ್ರಸಾದ್ ನಾಯ್ಕ, ಮಾತೃ ಶಕ್ತಿ ಕಾಪು ತಾಲೂಕು ಸಹ ಪ್ರಮುಖ್ ಉಷಾ ಪಾಟ್ಕರ್, ಮಾತೃ ಶಕ್ತಿ ಮಟ್ಟಾರು ಪ್ರಮುಖ್ ಸುಮತಿ ಸಾಲ್ಯಾನ್, ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ, ವಿಜಯ ಕುಂದರ್ ಕಿದಿಯೂರು, ಮಮತ ರಾವ್, ಸತೀಶ್ ದೇವಾಡಿಗ ಕಾಪು, ನಿಲೇಶ್ ಕಿದಿಯೂರು, ಗೋಪಾಲ ಆಚಾರ್ಯ ಮಟ್ಟಾರು, ಗಿರಿಧರ ಪ್ರಭು, ಶ್ರೀಕಾಂತ ಆಚಾರ್ಯ ಉಪಸ್ಥಿತರಿದ್ದರು.

ಪಲಿಮಾರು : ಪ್ರೌಢ ಶಾಲೆ, ಕಾಲೇಜು ವಿಭಾಗದ ವಾರ್ಷಿಕೋತ್ಸವ ; ಪ್ರತಿಭಾ ಪುರಸ್ಕಾರ

Posted On: 06-01-2024 05:16PM

ಪಲಿಮಾರು : ಮಕ್ಕಳಲ್ಲಿರುವ ಅದ್ಭುತ ಶಕ್ತಿಯನ್ನು ಹೊರತರುವ ಕಾರ್ಯವನ್ನು ಶಿಕ್ಷಕರು ಮಾಡುತ್ತಾರೆ. ಶಿಕ್ಷಣದ ಮೂಲಕ ಸಂಸ್ಕೃತಿಯ ಅರಿವು ಮೂಡುತ್ತದೆ. ಸಂಸ್ಕಾರದ ಕೊರತೆಯಿಂದ ಕ್ರೌರ್ಯ ಬೆಳೆಯುತ್ತದೆ. ಈಗ ಮಾರ್ಕ್ ಮತ್ತು ರ‍್ಯಾಂಕ್‌ನ ಕಡೆಗೆ ಹೋಗುತ್ತಿದ್ದೇವೆ. ವಿದ್ಯಾರ್ಥಿಗಳನ್ನು ಸದಾ ಜಾಗೃತ ಮನಸ್ಸಿನಲ್ಲಿಡುವ ಕಾರ್ಯ ನಡೆಯಬೇಕು. ಶಿಕ್ಷಣ ಮತ್ತು ಪರಿಸರ ದಿಂದ ಬದುಕುವ ಕಲೆಯ ಜಾಗೃತಿಯಾಗುತ್ತದೆ ಎಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನುಡಿದರು. ಅವರು ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲೆ ಹಾಗೂ ಕಾಲೇಜು ವಿಭಾಗದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸನ್ಮಾನ : ಈ ಸಂದರ್ಭದಲ್ಲಿ ಶಾಲಾ ಹಳೆವಿದ್ಯಾರ್ಥಿಗಳು, ದಾನಿಗಳಾದ ಎಬಿಸಿಡಿ ಮತ್ತು ಇ ಟ್ರಸ್ಟ್ ಇನ್ನಾ ಇದರ ಅಧ್ಯಕ್ಷರಾದ ಇನ್ನಾ ಚಂದ್ರಕಾಂತ್ ರಾವ್ ಮತ್ತು ಹಳೆವಿದ್ಯಾರ್ಥಿ, ಬೆಂಗಳೂರಿನ ಉದ್ಯಮಿಗಳು, ಆದಿತ್ಯ ಟ್ರಾವೆಲ್ಸ್ ಸಂಸ್ಥೆಯ ಮುಖ್ಯಸ್ಥರಾದ ಗೋಕುಲ್ ಪಲಿಮಾರು, ಬಹುಮುಖ ಪ್ರತಿಭಾ ಸಂಪನ್ನೆ ಹಳೆ ವಿದ್ಯಾರ್ಥಿನಿ ಕು.ಸಯ್ಯಮಿ ಮತ್ತು ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಹಾಗೂ ಕನ್ನಡದಲ್ಲಿ ೧೦೦ ಅಂಕ ಗಳಿಸಿದ ಕು.ಸುಮಯ್ಯ ಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಹಳೆವಿದ್ಯಾರ್ಥಿನಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಗ್ರಾ.ಪಂ. ಉಪಾಧ್ಯಕ್ಷರಾದ ರಾಯೇಶ್ವರ ಪೈ, ನಿಕಟಪೂರ್ವ ಗ್ರಾ,ಪಂ. ಅಧ್ಯಕ್ಷೆ ಗಾಯತ್ರಿ ಡಿ.ಪ್ರಭು, ಸದಸ್ಯರುಗಳಾದ ಪ್ರವೀಣ್ ಕುಮಾರ್, ರಶ್ಮಿ ಪೂಜಾರಿ, ಸುಜಾತಾ, ಹಳೆವಿದ್ಯಾರ್ಥಿ, ಉದ್ಯಮಿ ರವೀಂದ್ರ ಪ್ರಭು, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಸಾದ್ ಪಲಿಮಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶೋಭಾ, ವಿದ್ಯಾರ್ಥಿ ನಾಯಕರುಗಳಾದ ಅನನ್ಯಾ, ಯಶಸ್ ವೇದಿಕೆಯಲ್ಲಿದ್ದರು.

ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಸನ್ಮಾನಿತರನ್ನು ಪರಿಚಯಿಸಿ, ಸ್ವಾಗತಿಸಿದರು. ಪ್ರಾಢ ಶಾಲಾ ವಿಭಾಗದ ಹಿರಿಯ ಶಿಕ್ಷಕಿ ಸುನೀತಾ ವರದಿ ಓದಿದರು. ಶಿಕ್ಷಕರಾದ ಪಿ.ಸುಧಾಕರ ಶೆಣೈ, ದೈಹಿಕ ಶಿಕ್ಷಣ ಶಿಕ್ಷಕಿ ಅಮೃತಾ, ಶಿಕ್ಷಕರಾದ ಶಿವಾನಂದ್, ನಿಶಾ ಪರಿಚಯಿಸಿದರು. ಕನ್ನಡ ಉಪನ್ಯಾಸಕಿ ಜ್ಯೋತಿ ನಿರೂಪಿಸಿದರು. ಶಿಕ್ಷಕರಾದ ಪ್ರಸನ್ನ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಿರ್ವ : ಪಾಂಬೂರಿನ ಮಾನಸ ವಸತಿ ಶಾಲೆಯಲ್ಲಿ 69ನೇ ಹುಟ್ಟು ಹಬ್ಬ ಆಚರಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ

Posted On: 05-01-2024 07:46PM

ಶಿರ್ವ : ಪ್ರೀತಿ ನೀಡುವ ಮೂಲಕ ವಿಶೇಷ ಮಕ್ಕಳನ್ನು ಸಮಾಜದ ಇತರರಂತೆ ಕಾಣಲು ಸಾಧ್ಯ. ಇಂತಹ ಮಕ್ಕಳೊಂದಿಗೆ ಹುಟ್ಟು ಹಬ್ಬದ ಆಚರಣೆ ಅವಿಸ್ಮರಣೀಯ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಕಾಪು ಬ್ಲಾಕ್ ಕಾಂಗ್ರೆಸ್ ಮಾನಸ ವಸತಿ ಶಾಲೆ ಪಾಂಬೂರಿನಲ್ಲಿ ಆಯೋಜಿಸಿದ್ದ ತಮ್ಮ 69ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದೇ ಸಂದರ್ಭ ವಿಶೇಷ ಮಕ್ಕಳಿಗಾಗಿ ಆಯೋಜಿಸಿದ್ದ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಾನಸ ಸಂಸ್ಥೆಯ ಪ್ರಮುಖರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಶಿವಾಜಿ ಸುವರ್ಣ ಶಿರ್ವ, ಅಶೋಕ್ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು.