Updated News From Kaup

ಕಾರ್ಕಳ : ಕ್ರಿಯೇಟಿವ್‌ ಕಾಲೇಜಿನಲ್ಲಿ ರಾಷ್ಟ್ರ ಚೇತನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

Posted On: 14-01-2024 12:29PM

ಕಾರ್ಕಳ‌ : ಸ್ವಾಮಿ ವಿವೇಕಾನಂದರ ಚಿಂತನೆಗಳು ಭಾರತ ಮಾತ್ರವಲ್ಲ ವಿಶ್ವವ್ಯಾಪಿಯಾದುದು. ಯುವಕರು ದೇಶದ ಭವಿಷ್ಯ ಉಜ್ವಲಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಆತ್ಮೋದ್ಧಾರ ಮಾರ್ಗವೇ ಜಗವನ್ನು ಹಾಗೂ ಮನುಷ್ಯರನ್ನು ಅರಿಯಲು ಇರುವ ದಾರಿ. ಯುವಕರ ಕಣ್ಮಣಿಯಾಗಿ, ಸಿಡಿಲ ಸಂತನಾಗಿ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಮಹಾತ್ಮ ಸ್ವಾಮಿ ವಿವೇಕಾನಂದರು. ಎಲ್ಲರಿಗೂ ಸ್ಪೂರ್ತಿಯ ಚಿಲುಮೆ ಎಂದು ಗಣಿತ ಉಪನ್ಯಾಸಕ ಪ್ರದೀಪ್‌ ಅಂಚನ್‌ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ʼಯುವ ಸಪ್ತಾಹʼದ ಅಂಗವಾಗಿ ನಡೆದ ವಿವೇಕಾನಂದರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಪು : ಪರ್ಯಾಯೋತ್ಸವ ಪ್ರಯುಕ್ತ ಕಾಪು ವಲಯ ವತಿಯಿಂದ ಹೊರೆಕಾಣಿಕೆ ಸಮರ್ಪಣೆ

Posted On: 14-01-2024 12:24PM

ಕಾಪು : ಪುತ್ತಿಗೆ ವಿಶ್ವಗೀತಾ ಪರ್ಯಾಯೋತ್ಸವ ಪ್ರಯುಕ್ತ ಕಾಪು ವಲಯ ವತಿಯಿಂದ ಹೊರೆಕಾಣಿಕೆ ಸಮರ್ಪಣೆ ಜರುಗಿತು.

ಇಂದು : ಲೇಖಕಿ ಅನಿತಾ ಪಿ. ತಾಕೊಡೆ ಯವರ 'ಸುವರ್ಣ ಯುಗ' ಕೃತಿ ಬಿಡುಗಡೆ ಸಮಾರಂಭ

Posted On: 14-01-2024 08:52AM

ಮಂಗಳೂರು : ಜನಸೇವಕ, ಶಿಕ್ಷಣಪ್ರೇಮಿ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ ಅನಿತಾ ಪಿ. ತಾಕೊಡೆ ಬರೆದಿರುವ 'ಸುವರ್ಣ ಯುಗ' ಕೃತಿ ಬಿಡುಗಡೆ ಸಮಾರಂಭ ಜನವರಿ 14, ಆದಿತ್ಯವಾರದಂದು (ಇಂದು) ಸಂಜೆ 4 ಗಂಟೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿವೃತ್ತ ಪ್ರಾಧ್ಯಾಪಕ ಅಡ್ವೆ ರವೀಂದ್ರ ಪೂಜಾರಿ ಹೇಳಿದರು.

ಕಾಪು : ತಾಲೂಕು ಮಟ್ಟದ ಕೊರಗ ಸಮುದಾಯದ ಕುಂದು ಕೊರತೆ ಸಭೆ

Posted On: 14-01-2024 08:32AM

ಕಾಪು : ತಾಲೂಕು ಮಟ್ಟದ ಕೊರಗ ಸಮುದಾಯದ ಕುಂದು ಕೊರತೆ ಸಭೆ ಕಾಪು ತಾಲೂಕಿನ ಆಡಳಿತ ಸೌಧದಲ್ಲಿ ಜರಗಿತು.

ಪಡುಬಿದ್ರಿ : ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ

Posted On: 10-01-2024 03:55PM

ಪಡುಬಿದ್ರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಇಂದು ಪಡುಬಿದ್ರಿ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಮನೆ ಪುನರ್ ನಿಮಾ೯ಣ ಕಾಯ೯

Posted On: 08-01-2024 12:47PM

ಉಡುಪಿ : ದಶಮಾನೋತ್ಸವದ ಸಂಭ್ರಮದಲ್ಲಿರುವ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಕಳೆದ 10 ವಷ೯ಗಳ ಹಿಂದೆ ಕಟ್ಟಿದ ಮನೆ ಆಥಿ೯ಕ ಸಮಸ್ಯೆಯಿಂದ ಪೂತಿ೯ಗೊಳಿಸಲಾಗದೆ ತೊಂದರೆಗೆ ಸಿಲುಕಿದ್ದ ಹಾವಂಜೆ ಸಮೀಪದ ನೆರೆ ಕಾಲನಿ ಸುಕೇಶ ನಾಯ್ಕ್ ರವರ ಮನೆ ಪುನರ್ ನಿಮಾ೯ಣ ಕಾಯ೯ ಜನವರಿ 7ರಂದು ನಡೆಯಿತು.

ಜನವರಿ 11-21: ಪಾಂಬೂರಿನ ಪರಿಚಯ ಪ್ರತಿಷ್ಠಾನದಿಂದ ಚಿತ್ರ ಪರಿಚಯ - ನಿಸರ್ಗ ಚಿತ್ರಣ ಶೈಕ್ಷಣಿಕ ವಸತಿ ಶಿಬಿರ

Posted On: 08-01-2024 11:59AM

ಕಾಪು : ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವ ಪಾಂಬೂರಿನ ಪರಿಚಯ ಪ್ರತಿಷ್ಠಾನವು 'ಚಿತ್ರ ಪರಿಚಯ - ನಿಸರ್ಗ ಚಿತ್ರಣ ಶೈಕ್ಷಣಿಕ ವಸತಿ ಶಿಬಿರವನ್ನು ಜನವರಿ11 ರಿಂದ ಜನವರಿ 21ರವರೆಗೆ ಪಾಂಬೂರು ರಂಗಪರಿಚಯದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ್ ನೊರೋನ್ನಾ ಅವರು ಕಾಪು ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾಪು : ದಂಡತೀರ್ಥ ಮಠದಲ್ಲಿ ಹೊಸತನದೆಡೆಗೆ ಮೊದಲ ಹೆಜ್ಜೆ - ಚಿಂತನ-ಮಂಥನ

Posted On: 07-01-2024 05:30PM

ಕಾಪು : ಉಡುಪಿ ತಾಲೂಕು ಬ್ರಾಹ್ಮಣ ಮಹಾ ಸಭಾ ಇದರ ರಜತ ಮಹೋತ್ಸವದ ಸಂಭ್ರಮದಲ್ಲಿ ಕಾಪು ವಲಯ ಬ್ರಾಹ್ಮಣ ಸಂಘ ಕಾಪು ಇದರ ವತಿಯಿಂದ ರವಿವಾರ ಕಾಪು ದಂಡತೀರ್ಥ ಮಠದಲ್ಲಿ ಹೊಸತನದೆಡೆಗೆ ಮೊದಲ ಹೆಜ್ಜೆ -ಚಿಂತನ-ಮಂಥನ ಕಾರ್ಯಕ್ರಮ ಸಂಪನ್ನಗೊಂಡಿತು. ಶ್ರೀ ಮಠದ ದೇವರ ಸಾನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಂಟಕಲ್ಲು : ಬಸ್ಸು ನಿಲ್ದಾಣ ಗ್ರಂಥಾಲಯಕ್ಕೆ ಬನ್ನಂಜೆ ಬಾಬು ಅಮೀನ್ ರವರ ಅಕ್ಷರ ತುಲಾಭಾರದ ಪುಸ್ತಕಗಳ ಕೊಡುಗೆ

Posted On: 07-01-2024 03:12PM

ಬಂಟಕಲ್ಲು : ಇಲ್ಲಿನ ನಾಗರಿಕ ಸೇವಾ ಸಮಿತಿ (ರಿ.) ಇವರು ಜಿಲ್ಲೆಯಲ್ಲೇ ಪ್ರಥಮವಾಗಿ ಬಂಟಕಲ್ಲು ಬಸ್ಸು ನಿಲ್ದಾಣದಲ್ಲಿ ಪ್ರಾಯೋಜಿಸಿರುವ ಬಸ್ಸು ನಿಲ್ದಾಣ ಗ್ರಂಥಾಲಯಕ್ಕೆ ಬನ್ನಂಜೆ ಬಾಬು ಅಮೀನ್ ರವರ ಅಕ್ಷರ ತುಲಾಭಾರದ ಆಯ್ದ ಸುಮಾರು ರೂ. 2,500 ಬೆಲೆಯ ಕೆಲವು ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.

ಪಲಿಮಾರು : ಸರಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

Posted On: 07-01-2024 03:07PM

ಪಲಿಮಾರು : ವಿದ್ಯಾರ್ಥಿಗಳು ಕನಿಷ್ಠ 2 ದಿನಪತ್ರಿಕೆಗಳನ್ನು ಪ್ರತಿನಿತ್ಯ ಓದಬೇಕು. ಕೇವಲ ಪಠ್ಯ ಪುಸ್ತಕಗಳಿಂದ ಮಾತ್ರವಲ್ಲ, ಹೊರಗಿನ ಪ್ರಪಂಚದ ಜ್ಞಾನವನ್ನು ಎಲ್ಲಾ ಮೂಲಗಳಿಂದ ಗಳಿಸಿ ಜೀವನದಲ್ಲಿ ಯಶಸ್ವಿಗಳಾಗಬೇಕು. ಉತ್ತಮ ವಿದ್ಯಾರ್ಥಿಗಳಾಗಿ, ನೀವು ಕಲಿತ ಶಾಲೆಗೆ, ಕಲಿಸಿದ ಶಿಕ್ಷಕರಿಗೆ ಕೀರ್ತಿ ಗೌರವವನ್ನು ತರಬೇಕು ಎಂದು ಪಲಿಮಾರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರಾದ ಗಾಯತ್ರಿ ಡಿ. ಪ್ರಭು ಹೇಳಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು, ಇಲ್ಲಿ ಪಲಿಮಾರು ಸುತ್ತಮುತ್ತಲಿನ ಸರಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.