Updated News From Kaup

ಮಾಚ್೯ 2 - 12 : ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ ಉಚಿತ ಥೆರಪಿ

Thumbnail
Posted On: 01 Mar 2024, 04:38 PM

ಕಟಪಾಡಿ : ಸಿ. ಎಸ್. ಐ ಕ್ರೈಸ್ತ ದೇವಾಲಯ ಅಂಬಾಡಿ ಮತ್ತು ಜೇಸಿಐ ಕಟಪಾಡಿ ಹಾಗೂ ಕೋಟೆ ಗ್ರಾಮ ಪಂಚಾಯತ್, ಸಿ ಎಸ್ ಐ ಲಂಬಾರ್ಡ್ ಸ್ಮಾರಕ (ಮಿಷನ್ ) ಆಸ್ಪತ್ರೆ ಉಡುಪಿ ಹಾಗೂ ಕಂಪಾನಿಯೋ ಇವರ ಸಹಯೋಗದೊಂದಿಗೆ ಮಾರ್ಚ್ 02 ರಿಂದ ಮಾರ್ಚ್ 12ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಜೇ ಸಿ ಐ ಭವನ ಕಟಪಾಡಿ ಹಾಗೂ ಸಿ ಎಸ್ ಐ ದೇವಾಲಯದ ಚರ್ಚ್ ಹಾಲ್ ನಲ್ಲಿ ಯಾವುದೇ ಔಷಧವಿಲ್ಲದೆ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗೆ ಉಚಿತ ಥೆರಪಿ ಸಿಗಲಿದೆ. ಪ್ರತಿದಿನ ಕೇವಲ 30 ನಿಮಿಷಗಳ ಕಾಲ ಈ ಥೆರಪಿ ಉಪಯೋಗಿಸುವುದರಿಂದ ಪಾದದಲ್ಲಿ ಇರುವ ಎಲ್ಲಾ ಎಕ್ಯೂಪ್ರಷರ್ ಪಾಯಿಂಟನ್ನು ಸಕ್ರಿಯ ಗೊಳಿಸುವುದರ ಮೂಲಕ 120 ಕ್ಕೂ ಹೆಚ್ಚು ಕಾಯಿಲೆಗೆ ಉಪಯುಕ್ತವಾಗಿದೆ. ಮುಖ್ಯವಾಗಿ ಶುಗರ್, ನಿದ್ರಾಹೀನತೆ, ಥೈರೋಡ್ , ಪಾದದ ಉರಿ , ಬೆನ್ನು ನೋವು, ಮಂಡಿ ನೋವು, ವೆರಿಕೊಸ್ ಸಮಸ್ಯೆ ಇತ್ಯಾದಿಗಳಿಗೆ ಅನುಕೂಲವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಚ್೯ 3 : ಉಚ್ಚಿಲದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

Thumbnail
Posted On: 01 Mar 2024, 02:56 PM

ಉಚ್ಚಿಲ : ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಮಾಚ್೯ 3, ಆದಿತ್ಯವಾರ ಬೆಳಿಗ್ಗೆ ಘಂಟೆ 9ರಿಂದ ಮಧ್ಯಾಹ್ನ 1ರ ವರೆಗೆ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಲಿದೆ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಕಿಲ್ಲದ ಕಾಪು ಫ್ಲೈ ಓವರ್ ಅಂಡರ್ ಪಾಸ್ : ಅಧಿಕಾರಿಗಳ ನಿರ್ಲಕ್ಷ್ಯತನ

Thumbnail
Posted On: 01 Mar 2024, 01:48 PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮುಂಭಾಗದ ಎನ್‌ಎಚ್ 66, ಅಂಡರ್‌ಪಾಸ್ನಲ್ಲಿ ಅಳವಡಿಸಲಾಗಿರುವ ದೀಪವು ಕಳೆದ 18 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿಲ್ಲ, ಇದು ಕಾಪು ನಗರ ಪ್ರದೇಶಕ್ಕೆ ಪ್ರವೇಶಿಸುವ ಮುಖ್ಯ ರಸ್ತೆಯಾಗಿದ್ದು ಈ ಸಮಸ್ಯೆಯನ್ನು ಮನಗಂಡು ಸ್ಥಳೀಯರಾದ ಜಯರಾಮ್ ಆಚಾರ್ಯ ಇವರು ರಾಷ್ಟ್ರೀಯ ಹೆದ್ದಾರಿ, ಜಿಲ್ಲಾಧಿಕಾರಿ, ತಹಶೀಲ್ದಾರ್, ಕಾಪು ಪುರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಿದರೂ ಕೂಡಾ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಅಂಡರ್ ಪಾಸ್ ಮೂಲಕ ಬಹಳಷ್ಟು ವಾಹನಗಳು ಮತ್ತು ಜನರು ಚಲಿಸುತ್ತಾರೆ. ಬೆಳಕಿಲ್ಲದೆ ಅಕ್ಕಪಕ್ಕದಲ್ಲಿ ನಿಂತಿರುವ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಮಾರ್ಚ್ 26 ಮತ್ತು 27 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಪೂಜೆಯನ್ನು ಆಚರಿಸಲಾಗುತ್ತದೆ ಆದ್ದರಿಂದ ಇಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ ಎಂಬುದನ್ನು ಗಮನಿಸಿ ಬೆಳಕಿನ ವ್ಯವಸ್ಥೆ ಮಾಡಬೇಕೆಂದು ನಮ್ಮ ಕಾಪು ವಾಹಿನಿಯ ಮೂಲಕ ಆಗ್ರಹಿಸಿದ್ದಾರೆ.

ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ

Thumbnail
Posted On: 01 Mar 2024, 01:44 PM

ಶಂಕರಪುರ : ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02, 03 ಶನಿವಾರದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.

ಹೆಜಮಾಡಿಯಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ

Thumbnail
Posted On: 29 Feb 2024, 07:39 PM

ಪಡುಬಿದ್ರಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಸಂಭ್ರಮ ಅಂಗವಾಗಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಾರ್ಚ್ 5, ಮಂಗಳವಾರ ಹೆಜಮಾಡಿಯ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಅಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಪತ್ರಕರ್ತರ ಸಂಘಗಳ ತಂಡಗಳು ಪಂದ್ಯಾಟದಲ್ಲಿ ರಜತ ಸಂಭ್ರಮ ಟ್ರೋಫಿಗಾಗಿ ಸೆಣಸಾಡಲಿದೆ. ಮಾಚ್೯ 5, ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಪಂದ್ಯಾಟ ಆರಂಭಗೊಳ್ಳಲಿದೆ. 11 ಗಂಟೆಗೆ ಕಾಪು ಸಂಘದ ಅಧ್ಯಕ್ಷ ಹರೀಶ್ ಹೆಜ್ಮಾಡಿ ಅಧ್ಯಕ್ಷತೆಯಲ್ಲಿ ಉಡುಪಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಉಪಸ್ಥಿತಿಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಂದ್ಯಾಟ ಉದ್ಘಾಟಿಸುವರು. ಪಡುಬಿದ್ರಿ ಆಸ್ಪಿನ್ ಇನ್ಫ್ರಾ ಲಿ.ನ ಜಿ.ಎಮ್. ಅಶೋಕ್ ಶೆಟ್ಟಿ, ಕಾಪು ತಹಸೀಲ್ದಾರ್ ಡಾ.ಪ್ರತಿಭಾ ಆರ್., ಪಡುಪಣಂಬೂರು ಗ್ರಾ.ಪಂ. ಮಾಜಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಉಡುಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ತಾ.ಪಂ.ಮಾಜಿ ಸದಸ್ಯ ಸಚಿನ್ ನಾಯಕ್, ತಾಲೂಕು ಯುವಜನ ಮತ್ತು ಕ್ರೀಡಾ ಅಧಿಕಾರಿ ರಿತೇಶ್ ಕುಮಾರ್ ಶೆಟ್ಟಿ, ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜ್ಮಾಡಿ, ರಜತ ಸಂಭ್ರಮ ಸಮಿತಿಯ ಸಂಚಾಲಕ ಮೊಹಮ್ಮದ್ ಶರೀಫ್ ಮುಖ್ಯ ಅತಿಥಿಗಳಾಗಿರುವರು. ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಪ್ರಶಸ್ತಿ ವಿತರಿಸುವರು. ಅದಾನಿ ಪವರ್ ಲಿ. ಅಧ್ಯಕ್ಷ ಕಿಶೋರ್ ಆಳ್ವ, ಪಡುಬಿದ್ರಿ ಬೀಡು ರತ್ನಾಕರರಾಜ್ ಅರಸು ಕಿನ್ಯಕ್ಕ ಬಲ್ಲಾಳರು, ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ.ಸುಧೀರ್ ಕುಮಾರ್, ಕಾಪು ಗಾರ್ಡನ್ ಪ್ಯಾಲೇಸ್ ಎಮ್.ಡಿ. ಗೌರವ್ ಶೇಣವ, ಪಡುಬಿದ್ರಿ ಅಮರ್ ಕಂಫರ್ಟ್ಸ್ನ ಮಿಥುನ್ ಆರ್.ಹೆಗ್ಡೆ, ಕೆಪಿಸಿಸಿ ಕೋರ್ಡಿನೇಟರ್ ನವೀನ್‌ಚಂದ್ರ ಜೆ.ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು ಎಂದು ಕ್ರೀಡಾ ಸಮಿತಿಯ ಸಂಚಾಲಕ ರಾಕೇಶ್ ಕುಂಜೂರು ತಿಳಿಸಿದ್ದಾರೆ.

ಕಾಪು ತಾಲೂಕು ಭೂನ್ಯಾಯ ಮಂಡಳಿಗೆ ನೇಮಕ

Thumbnail
Posted On: 29 Feb 2024, 04:15 PM

ಕಾಪು : ತಾಲೂಕು ಭೂನ್ಯಾಯ ಮಂಡಳಿಗೆ ಸರಕಾರ ನಾಲ್ವರನ್ನು ಸದಸ್ಯರನ್ನಾಗಿ ನೇಮಿಸಿ ನಾಮ ನಿರ್ದೇಶನ ಮಾಡಿದೆ. ರೋಹನ್ ಕುಮಾರ್ ಕುತ್ಯಾರು, ಶ ಮೆಲ್ವಿನ್ ಡಿ'ಸೋಜಾ, ರಮೀಜ್ ಹುಸೈನ್ ಪಡುಬಿದ್ರಿ ಮತ್ತು ರಾಘವ ಕೋಟ್ಯಾನ್ ಬೆಳ್ಳೆ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರನ್ನು ಮಂಡಳಿಯ ಅಧ್ಯಕ್ಷರನ್ನಾಗಿ, ಕಾಪು ತಾಲೂಕು ತಹಶೀಲ್ದಾರ್‌ರವರನ್ನು ಸದಸ್ಯ ಕಾರ್ಯದರ್ಶಿಯಾಗಿ ರಾಜ್ಯಪಾಲರ ಆಜ್ಞಾನುಸಾರ ಮುಂದಿನ ಆದೇಶದವರೆಗೆ ನೇಮಿಸಿ ನಾಮನಿರ್ದೇಶನ ಗೊಳಿಸಲಾಗಿದೆ ಎಂದು ಕಂದಾಯ ಇಲಾಖೆಯ ಸರಕಾರದ ಆಧೀನ ಕಾರ್ಯದರ್ಶಿ ಗೌರಮ್ಮ ಆರ್‌. ಆದೇಶದಲ್ಲಿ ತಿಳಿಸಿದ್ದಾರೆ.

ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗ ಶಿರ್ವ - ಏಕಾದಶ ವರ್ಷದ ವಾರ್ಷಿಕೋತ್ಸವ

Thumbnail
Posted On: 29 Feb 2024, 10:29 AM

ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗ ಶಿರ್ವ ಇದರ ಏಕಾದಶ ವರ್ಷದ ವಾರ್ಷಿಕೋತ್ಸವ ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಉಚ್ಚಿಲ ಸರಸ್ವತಿ ಮಂದಿರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ ಮತ್ತು ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯ ವಿ. ಆಚಾರ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿರ್ವ ಆರಕ್ಷಕ ಠಾಣೆಯ ಉಪ ನಿರೀಕ್ಷಕರಾದ ಶ್ರೀಧರ ಕೆ. ಜಿ., ಹಿರಿಯ ಭಜನಾ ತರಬೇತುದಾರರಾದ ಗಂಗಾಧರ ಆಚಾರ್ಯ ಕುತ್ಯಾರು, ನಾಟಕ ಕಲಾವಿದರಾದ ಪಡುಕುತ್ಯಾರು ಶಶಿರಾಜ್ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಮೂರು ಜನ ಅಶಕ್ತರಿಗೆ ಧನ ಸಹಾಯ ನೀಡಲಾಯಿತು ಮತ್ತು 27 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಯುವ ಸಂಗಮದ ಅಧ್ಯಕ್ಷ ಉಮೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಬಳಗದ ಅಧ್ಯಕ್ಷೆ ಸಹನಾ ಗಣೇಶ್ ಆಚಾರ್ಯ, ಕಾರ್ಯದರ್ಶಿ ಮಂಜುಳಾ ಉಮೇಶ್ ಆಚಾರ್ಯ, ಗೌರವಾಧ್ಯಕ್ಷ ಸುರೇಶ ಆಚಾರ್ಯ, ಸ್ಥಾಪಕರಾದ ಕಾಪು ಶ್ರೀಕಾಂತ ಆಚಾರ್ಯ, ಗಣೇಶ್ ಆಚಾರ್ಯ, ಸದಾಶಿವ ಆಚಾರ್ಯ ಉಪಸ್ಥಿತರಿದ್ದರು. ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿ, ಕಾರ್ಯದರ್ಶಿ ಮಾದವ ಆಚಾರ್ಯ ಪ್ರಾಸ್ತಾವನೆಗೈದರು. ಪುರೋಹಿತ್ ರವಿ ಆಚಾರ್ಯ ವಿಶ್ವಕರ್ಮ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಕೋಶಾಧಿಕಾರಿ ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಶರ್ಮಿಳ ಸದಾಶಿವ ಆಚಾರ್ಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರ್ದೇಶಿಸಿದ್ದರು.

ಪತಂಜಲಿ ಕಟಪಾಡಿ ಕಕ್ಷೆಯ ವತಿಯಿಂದ ಮನೋಹರ್ ಕಾಮತ್ ಮುಂಬೈ ಇವರಿಗೆ ಸನ್ಮಾನ

Thumbnail
Posted On: 29 Feb 2024, 10:23 AM

ಕಟಪಾಡಿ : ಮೂಲದ ಪ್ರಸ್ತುತ ಮುಂಬೈ ಯಲ್ಲಿ ನೆಲೆಸಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮನೋಹರ್ ಕಾಮತ್ ಇವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ 30 ವರ್ಷಗಳಿಂದ ಯೋಗ ಸಾಧನೆಯನ್ನು ಮಾಡುತ್ತಿದ್ದು, ಇವರ ಯೋಗ ಶ್ರದ್ಧೆ, ಜೀವನೋತ್ಸಾಹ ಹಾಗೂ ಶ್ವಾನ ಪ್ರಿಯತೆಯನ್ನು ಮನಗಂಡು ಕಟಪಾಡಿ ಪತಂಜಲಿ ಯೋಗ ಕಕ್ಷೆಯ ವತಿಯಿಂದ ಸನ್ಮಾನಿಸಲಾಯಿತು.

ಪಾಂಗಾಳ : ಹಾಳಾಗಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಚಾಲಕ ಮೃತ್ಯು

Thumbnail
Posted On: 28 Feb 2024, 09:53 PM

ಪಾಂಗಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ನಾಗೇಶ್ ಮೃತ ದುರ್ದೈವಿ. ಇವರು ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಕಾರು ಹಾಗು ಲಾರಿಯನ್ನು ತೆರವುಗೊಳಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡ - ಉದ್ಘಾಟನೆ

Thumbnail
Posted On: 28 Feb 2024, 08:22 PM

ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 55.65 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡದ ಉದ್ಘಾಟನೆಯನ್ನು ಫೆ.28ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಅಂಚೆ ಇಲಾಖೆ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುತ್ತಾ ಬಂದಿದೆ. ಪಡುಬಿದ್ರಿ ಉಪ ಅಂಚೆ ಕಚೇರಿ ಜನಸಾಮಾನ್ಯರ ಕಚೇರಿಯಾಗಲಿ ಎಂದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ದಕ್ಷಿಣ ಕರ್ನಾಟಕ ವಲಯ ಅಂಚೆ ಸೇವೆಗಳ ಟಿ.ಎಸ್ ಅಶ್ವತ್ಥನಾರಾಯಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.