Updated News From Kaup
ಉಚ್ಚಿಲ : ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಚ್ಚಿಲ ಶಾಖೆಗೆ ಅಮೇರಿಕಾದ ಅಧ್ಯಯನ ತಂಡದ ನಿಯೋಗ ಭೇಟಿ
Posted On: 06-01-2024 08:29PM
ಉಚ್ಚಿಲ : ಅಮೇರಿಕಾದ ಗ್ರಾಮೀಣ ಭಾಗದ ಮಹಿಳಾ ಸಬಲೀಕರಣದ ಉದ್ದೇಶದಿಂದ ಕಳೆದ 11 ವರ್ಷಗಳಿಂದ ಅಲ್ಲಿನ ಅಧ್ಯಯನಶೀಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತಂದು ಇಲ್ಲಿನ ಮಹಿಳಾ ಸಬಲೀಕರಣದ ಚಿತ್ರಣವನ್ನು ಅವರಿಗೆ ಮನದಟ್ಟು ಮಾಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹೆಚ್ಚು ಪ್ರಭಾವಿತರಾಗಿದ್ದಾರೆ ಎಂದು ಅಮೇರಿಕಾದ ಪೆನೊಸೋಲೋನಿಯಾ ವಿಶ್ವವಿದ್ಯಾನಿಲಯದ ಪ್ರೊ. ಡಾ. ಫಮೀದಾ ಹ್ಯಾಂಡಿ ಹೇಳಿದ್ದಾರೆ. ಅವರು ಅಮೇರಿಕಾದ ವಿದ್ಯಾರ್ಥಿಗಳ ನಿಯೋಗದೊಂದಿಗೆ ಇಲ್ಲಿನ ಸಹಕಾರಿ ಸೊಸೈಟಿಗಳ ಸ್ವಸಹಾಯ ಸಂಘಗಳ ಅಧ್ಯಯನಕ್ಕಾಗಿ ಶನಿವಾರ ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಚ್ಚಿಲ ಶಾಖೆಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮ ಜತೆ ಮಾತನಾಡಿದರು.
ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ - ನಮಾಮಿ ರಾಮ ಭಜಕಮ್ ; ಕರಸೇವಕರಿಗೆ ಗೌರವಾರ್ಪಣೆ
Posted On: 06-01-2024 07:32PM
ಕಟಪಾಡಿ : ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ, ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ವತಿಯಿಂದ ಕಾಪು ತಾಲೂಕಿನ ಅಯೋಧ್ಯೆ ರಾಮ ಮಂದಿರದ ಕರಸೇವೆಯಲ್ಲಿ ಭಾಗಿಯಾದ ಕರಸೇವಕರನ್ನು ಗೌರವಿಸಿದರು.
ಪಲಿಮಾರು : ಪ್ರೌಢ ಶಾಲೆ, ಕಾಲೇಜು ವಿಭಾಗದ ವಾರ್ಷಿಕೋತ್ಸವ ; ಪ್ರತಿಭಾ ಪುರಸ್ಕಾರ
Posted On: 06-01-2024 05:16PM
ಪಲಿಮಾರು : ಮಕ್ಕಳಲ್ಲಿರುವ ಅದ್ಭುತ ಶಕ್ತಿಯನ್ನು ಹೊರತರುವ ಕಾರ್ಯವನ್ನು ಶಿಕ್ಷಕರು ಮಾಡುತ್ತಾರೆ. ಶಿಕ್ಷಣದ ಮೂಲಕ ಸಂಸ್ಕೃತಿಯ ಅರಿವು ಮೂಡುತ್ತದೆ. ಸಂಸ್ಕಾರದ ಕೊರತೆಯಿಂದ ಕ್ರೌರ್ಯ ಬೆಳೆಯುತ್ತದೆ. ಈಗ ಮಾರ್ಕ್ ಮತ್ತು ರ್ಯಾಂಕ್ನ ಕಡೆಗೆ ಹೋಗುತ್ತಿದ್ದೇವೆ. ವಿದ್ಯಾರ್ಥಿಗಳನ್ನು ಸದಾ ಜಾಗೃತ ಮನಸ್ಸಿನಲ್ಲಿಡುವ ಕಾರ್ಯ ನಡೆಯಬೇಕು. ಶಿಕ್ಷಣ ಮತ್ತು ಪರಿಸರ ದಿಂದ ಬದುಕುವ ಕಲೆಯ ಜಾಗೃತಿಯಾಗುತ್ತದೆ ಎಂದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನುಡಿದರು. ಅವರು ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲೆ ಹಾಗೂ ಕಾಲೇಜು ವಿಭಾಗದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿರ್ವ : ಪಾಂಬೂರಿನ ಮಾನಸ ವಸತಿ ಶಾಲೆಯಲ್ಲಿ 69ನೇ ಹುಟ್ಟು ಹಬ್ಬ ಆಚರಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ
Posted On: 05-01-2024 07:46PM
ಶಿರ್ವ : ಪ್ರೀತಿ ನೀಡುವ ಮೂಲಕ ವಿಶೇಷ ಮಕ್ಕಳನ್ನು ಸಮಾಜದ ಇತರರಂತೆ ಕಾಣಲು ಸಾಧ್ಯ. ಇಂತಹ ಮಕ್ಕಳೊಂದಿಗೆ ಹುಟ್ಟು ಹಬ್ಬದ ಆಚರಣೆ ಅವಿಸ್ಮರಣೀಯ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಕಾಪು ಬ್ಲಾಕ್ ಕಾಂಗ್ರೆಸ್ ಮಾನಸ ವಸತಿ ಶಾಲೆ ಪಾಂಬೂರಿನಲ್ಲಿ ಆಯೋಜಿಸಿದ್ದ ತಮ್ಮ 69ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಚ್ಚಿಲ : ವೇ.ಮೂ. ರಾಘವೇಂದ್ರ ಉಪಾಧ್ಯಾಯ ದಂಪತಿಗಳ ಷಷ್ಠ್ಯಬ್ಧಪೂರ್ತಿ ಸಮಾರಂಭ
Posted On: 05-01-2024 06:29PM
ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಮತ್ತು ಸುಗುಣ ಉಪಾಧ್ಯಾಯರ ಷಷ್ಠ್ಯಬ್ಧ ಪೂರ್ತಿ ಮತ್ತು ಮೊಗವೀರ ಮುಂದಾಳು ನಾಡೋಜ ಜಿ ಶಂಕರ್ ಸೇರಿದಂತೆ ವಿವಿಧ ಸಾಧಕರಿಗೆ ಸಹಕಾರ ರತ್ನ ಬಿರುದನ್ನು ನೀಡುವ ಕಾರ್ಯಕ್ರಮ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದಲ್ಲಿ ಜರಗಿತು.
ಜ. 6,8,10 : ನಮಾಮಿ ರಾಮ ಭಜಕಮ್ - ಕರಸೇವಕರ ಮನೆಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮ
Posted On: 05-01-2024 06:13PM
ಶಂಕರಪುರ : ನಮಾಮಿ ರಾಮ ಭಜಕಮ್ ಕಾರ್ಯಕ್ರಮದಡಿ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲೇಬೇಕು ಎಂಬ ಸಂಕಲ್ಪವನ್ನು ಮಾಡಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಉಡುಪಿ ಜಿಲ್ಲೆಯ ಕರಸೇವಕರ ಮನೆ-ಮನೆಗೆ ಜನವರಿ 6,8,10 ರಂದು ಭೇಟಿ ನೀಡಿ ಅಭಿನಂದನೆ ನೀಡಲಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲಕ್ಕೆ ಬಾಲಿವುಡ್ ಚಿತ್ರನಟಿ ಪೂಜಾ ಹೆಗ್ಡೆ ಭೇಟಿ
Posted On: 05-01-2024 11:39AM
ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇಗುಲಕ್ಕೆ ಬಾಲಿವುಡ್ ಚಲನಚಿತ್ರ ನಟಿ ಪೂಜಾ ಹೆಗ್ಡೆ ಭೇಟಿ ನೀಡಿದರು.
ಕಾಪು : ಎ.ಐ.ಸಿ.ಸಿ ದೆಹಲಿ ಅಲ್ಪಸಂಖ್ಯಾತ ಘಟಕದಿಂದ ಫಾರೂಕ್ ಚಂದ್ರನಗರರಿಗೆ ಸನ್ಮಾನ
Posted On: 04-01-2024 06:29PM
ಕಾಪು : ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಸ್ತುವಾರಿಯವರಾದ ಜೀನಲ್ ಗಾಲರಿಂದ ಯೂತ್ ಐಕಾನ್ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಫಾರೂಕ್ ಚಂದ್ರನಗರರನ್ನು ಸನ್ಮಾನಿಸಿದರು.
ಕಾರ್ಕಳ : ಬ್ರೈಟ್ ಗ್ರೂಪ್ ಫ್ರೆಂಡ್ಸ್ ಸೂಡ - ಸಾಮೂಹಿಕ ಶ್ರೀ ಶನಿಪೂಜೆ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ
Posted On: 03-01-2024 09:42PM
ಕಾರ್ಕಳ : ಬ್ರೈಟ್ ಗ್ರೂಪ್ ಫ್ರೆಂಡ್ಸ್ (ರಿ.) ಸೂಡ ಇದರ 27 ನೇ ವಾರ್ಷಿಕೋತ್ಸವ 19 ನೇವರ್ಷದ ಸಾಮೂಹಿಕ ಶ್ರೀ ಶನಿ ಪೂಜೆ, ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಜನವರಿ 6, ಶನಿವಾರದಂದು ಸೂಡ ಕುಂಬ್ಳೆ ಪರಾರಿ ಕೀರ್ತಿಶೇಷ ಹರಿಣಾಕ್ಷ ಹೆಗ್ಡೆ ಸಾಂಸ್ಕೃತಿಕ ವೇದಿಕೆಯಲ್ಲಿ ಜರಗಲಿದೆ.
ಜನವರಿ 4 : ಉಡುಪಿ ಜಿಲ್ಲಾ ಕುಲಾಲ ಸಂಘಟನೆ ರಚನೆಯ ಪೂರ್ವಭಾವಿ ಸಭೆ
Posted On: 03-01-2024 08:57PM
ಉಡುಪಿ : ಜಿಲ್ಲಾ ಕುಲಾಲ ಸಂಘಟನೆಗಳ ಒಕ್ಕೂಟ ರಚನೆಯ ಪೂರ್ವ ಸಿದ್ದತೆ ಸಭೆ ಹಾಗೂ ಉಡುಪಿ ಶ್ರೀ ಕೃಷ್ಣ ಮಠದ ಈ ಬಾರಿಯ ಪುತ್ತಿಗೆ ಪರ್ಯಾಯದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯ ಬಗ್ಗೆ ಚರ್ಚಿಸುವುದಕ್ಕೆ ಜನವರಿ 4 ರಂದು ಸಂಜೆ 4 ಗಂಟೆಗೆ ಅಂಬಲಪಾಡಿಯ ಕಾರ್ತಿಕ್ ಎಸ್ಟೇಟ್ ಹೋಟೆಲ್ನಲ್ಲಿ ಸಭೆ ಕರೆಯಲಾಗಿದೆ.
