Updated News From Kaup
ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ : ನೂತನ ಮನೆ ಹಸ್ತಾಂತರ
Posted On: 13 May 2024, 11:04 AM
ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ಬಿದ್ಕಲ್ ಕಟ್ಟೆಯಲ್ಲಿ ಕಳೆದ 8 ವಷ೯ ಗಳಿಂದ ಮನೆಯಿಲ್ಲದೆ ಸಣ್ಣ ಜೋಪಡಿಯಲ್ಲಿ ವಾಸವಾಗಿದ್ದ ರಾಮ ಮತ್ತು ಮಗಳಾದ ಸುಮತಿಯವರಿಗೆ ಫೌಂಡೇಶನ್ ವತಿಯಿಂದ ನಿಮಿ೯ಸಲಾದ ರಾಮ ನಿಲಯ ನೂತನ ಮನೆಯ ಉದ್ಘಾಟನೆ ಮೇ.12 ರಂದು ನಡೆಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥರಾದ ಅಜು೯ನ್ ಭoಡಾರ್ಕಾರ್, ಈ ರೀತಿಯ ಸಮಾಜದಲ್ಲಿ ಯಾವುದೇ ಮೂಲಭೂತ ಸೌಕಯ೯ ವಿಲ್ಲದೆ ಸಮಾಜದ ಮುಖ್ಯವಾಹಿನಿ ಬರಲಾಗದೆ ಕಷ್ಟ ಪಡುವವರನ್ನು ಗುರುತಿಸಿ ಸೇವೆ ಮಾಡುವುದು ಇoದಿನ ಅಗತ್ಯವಾಗಿದೆ. ಎಂದರು. ಮುಂದಿನ ದಿನಗಳಲ್ಲಿ 200 ಕುಟುಂಬಗಳಿಗೆ ಸಹಾಯಧನ ನೀಡುವ ಕಾಯ೯ಕ್ರಮ ನಡೆಯಲಿದೆ ಎಂದರು. ಹೋಂ ಡಾಕ್ಟರ್ ಫೌಂಡೇಶನ್ ನ ಮುಖ್ಯಸ್ಥರಾದ ಡಾ.ಶಶಿಕಿರಣ್ ಶೆಟ್ಟಿ ಸಂಸ್ಥೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದಭ೯ ಬಡ ಪ್ರತಿಭಾನ್ವಿತ ವಿದ್ಯಾಥಿ೯ನಿಯ ಶಾಲಾ ಶುಲ್ಕ ಸೇರಿದಂತೆ ವಿವಿಧ ಸಹಾಯಧನ ನೀಡಲಾಯಿತು. ಈ ಸಂದಭ೯ದಲ್ಲಿ ಡಾ. ಸುಮಾ ಎಸ್ ಶೆಟ್ಟಿ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಭಾಗ್ಯಶ್ರೀ ಭಂಡಾರ್ಕರ್, ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಉದಯ ನಾಯ್ಕ್, ರಾಘವೇಂದ್ರ ಪ್ರಭು ಕವಾ೯ಲು, ಸುಜಯ ಶೆಟ್ಟಿ, ಸ್ವರೂಪ ಹೆಗ್ಡೆ ಕಿಶೋರ್ ಶೆಟ್ಟಿ, ರಾಮು ಸುಮತಿ ಹಾಗೂ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.
ವಿಶ್ವ ತಾಯಂದಿರ ದಿನ : ಕಾಪು ಶ್ರೀ ಮಾರಿಯಮ್ಮನ ಸ್ವರ್ಣ ಗದ್ದುಗೆಯ ಕಚೇರಿ ಉದ್ಘಾಟನೆ
Posted On: 12 May 2024, 03:01 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿಯನ್ನು ನವ ದೀಪಗಳನ್ನು ಬೆಳಗಿಸುವ ಮೂಲಕ ಆದಿತ್ಯವಾರ ಉದ್ಘಾಟಿಸಲಾಯಿತು. ಈ ಸಂದರ್ಭ ಮುಂಬೈನ ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಆಡಳಿತ ನಿರ್ದೇಶಕರು, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ ಮಾತನಾಡಿ ಕಾಪು ಮಾರಿಗುಡಿಯಲ್ಲಿ ಗದ್ದುಗೆ ಪೂಜೆ ವಿಶೇಷವಾಗಿದ್ದು ಅದರಂತೆ ಸ್ವರ್ಣ ಗದ್ದುಗೆಗೆ ಪ್ರಾಮುಖ್ಯತೆ ನೀಡಲಾಗಿದೆ. ಭಕ್ತಾದಿಗಳು ಈ ಕಾರ್ಯಕ್ಕೆ ಕೈಜೋಡಿಸಬೇಕೆಂದು ವಿನಂತಿಸಿದರು. ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪ್ರಧಾನ ಕಾರ್ಯಾಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಮಾರಿಯಮ್ಮನ ಗದ್ದುಗೆಯನ್ನು ಸ್ವರ್ಣದಿಂದಲೇ ಮಾಡಬೇಕೆನ್ನುವುದು ದೇವಳದ ಅಭಿವೃದ್ಧಿ ಸಮಿತಿಯ ಆಶಯ. ಈಗಾಗಲೇ ಗದ್ದುಗೆ ನಿರ್ಮಾಣಕ್ಕಾಗಿ ಭಕ್ತರು ಚಿನ್ನವನ್ನು ನೀಡುತ್ತಿದ್ದಾರೆ. ಸ್ವರ್ಣ ಸಮರ್ಪಣೆಯ ಮಾಹಿತಿಯನ್ನು ಭಕ್ತಾದಿಗಳಿಗೆ ತಲುಪಿಸಬೇಕೆನ್ನುವ ದೃಷ್ಟಿಯಿಂದ ಕಚೇರಿಯನ್ನು ಆರಂಭಿಸಲಾಗಿದೆ ಎಂದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ ಇಂದು ವಿಶ್ವ ತಾಯಂದಿರ ದಿನದಂದು ಕಾಪು ಅಮ್ಮನ ಸ್ವರ್ಣ ಗದ್ದುಗೆ ಕಚೇರಿ ಉದ್ಘಾಟನೆ ನಡೆದಿದೆ. ಶೀಘ್ರದಲ್ಲಿ ಅಮ್ಮನ ಸ್ವರ್ಣ ಗದ್ದುಗೆ ಕಾರ್ಯದ ಚಾಲನೆ ಭಕ್ತ ಜನರ ಕೊಡುಗೆಯಿಂದ ಆಗಲಿ ಎಂದು ಶುಭ ಹಾರೈಸಿದರು. ಸಾಯಿರಾಧ ಗ್ರೂಪ್ಸ್ ಪ್ರಮುಖರಾದ ಮನೋಹರ್ ಎಸ್. ಶೆಟ್ಟಿ ಕುಟುಂಬ ವರ್ಗದ ಪರವಾಗಿ ಸ್ವರ್ಣ ಗದ್ದುಗೆಗೆ ಚಿನ್ನವನ್ನು ಅರ್ಪಿಸಿದರು. ಕಚೇರಿ ಆರಂಭಕ್ಕೂ ಮುನ್ನ ಕಾಪು ಶ್ರೀ ಲಕ್ಷ್ಮಿಜನಾರ್ಧನ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು ಮತ್ತು ಮುಂಬೈ ಸಮಿತಿಯ ಅಧ್ಯಕ್ಷರಾದ ಸುಧಾಕರ ಹೆಗ್ಡೆ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಹರಿಯಪ್ಪ ಕೋಟ್ಯಾನ್, ಬಿ ಎನ್ ಶಂಕರ್ ಪೂಜಾರಿ, ರತ್ನಾಕರ ಶೆಟ್ಟಿ ನಡಿಕೆರೆ, ಪ್ರಸನ್ನ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ ಕೊತ್ವಾಲಗುತ್ತು, ಕಾರ್ಯದರ್ಶಿ ರವಿ ಭಟ್ ಮಂದಾರ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮುಂಬೈ ಸಮಿತಿಯ ಗೌರವ ಸಲಹೆಗಾರರಾದ ಸಿಎ ಎನ್. ಬಿ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು, ಚಂದ್ರಹಾಸ್ ಶೆಟ್ಟಿ ಮುಂಬೈ, ರಂಜನಿ ಸುಧಾಕರ ಹೆಗ್ಡೆ, ಉಪಾಧ್ಯಕ್ಷರುಗಳಾದ ಮಾಧವ ಆರ್ ಪಾಲನ್, ಮನೋಹರ್ ಎಸ್. ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ ಶೆಟ್ಟಿ ಬಾಲಾಜಿ, ಮುಂಬೈ ಸಮಿತಿಯ ವಸಾಯಿ - ಡಹಾನು ವಲಯದ ಮುಖ್ಯ ಸಂಚಾಲಕರಾದ ರಮೇಶ್ ವಿ ಶೆಟ್ಟಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರುಗಳಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೊಲ್ಯ, ಸಂಚಾಲಕರುಗಳಾದ ಸಂದೀಪ್ ಶೆಟ್ಟಿ ಶಿರ್ವ ಮುಂಬೈ, ಮೋಹನ್ ವಿ. ಶೆಟ್ಟಿ ಮುಂಬೈ, ಸುನಿಲ್ ಎಸ್.ಪೂಜಾರಿ ಕಾಪು, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್., ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಎಮ್.ಸುವರ್ಣ, ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕರಾದ ಬೀನಾ ವಿ.ಶೆಟ್ಟಿ, ಶೈಲಪುತ್ರಿ ತಂಡದ ಮುಖ್ಯ ಸಂಚಾಲಕರಾದ ವಿದ್ಯಾಧರ ಪುರಾಣಿಕ್, ಸಂಚಾಲಕರಾದ ರಾಧಾರಮಣ ಶಾಸ್ತ್ರಿ, ಸಂಚಾಲಕರಾದ ಅನುರಾಧ ಮನೋಹರ್ ಶೆಟ್ಟಿ, ಪ್ರಚಾರ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ್ ಆಚಾರ್ಯ, ಕೂಷ್ಮಾಂಡಾ ತಂಡದ ಸಂಚಾಲಕರಾದ ಕೆ. ಕೊರಗ ಬೆಳಪು, ಚಂದ್ರಘಂಟಾ ತಂಡದ ಮುಖ್ಯ ಸಂಚಾಲಕರಾದ ಪಿ ಕೆ ಶ್ರೀನಿವಾಸ, ಕಾಲ ರಾತ್ರಿ ತಂಡದ ಮುಖ್ಯ ಸಂಚಾಲಕರಾದ ಶೇಖರ ಆಚಾರ್ಯ, ವಿಜಯಲಕ್ಷ್ಮಿ ಆಚಾರ್ಯ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಹಣೆಯ ಅರ್ಚನಾ ಶೆಟ್ಟಿ, ಸಂದೀಪ್ ಕುಮಾರ್ ಉಪಸ್ಥಿತರಿದ್ದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು, ಕಾಪು ದಿವಾಕರ ಶೆಟ್ಟಿ ವಂದಿಸಿದರು.
ಕಾಪು : ಬೆಳಪು ಸುತ್ತ ಮುತ್ತ ಮೇ 14ರಂದು ವಿದ್ಯುತ್ ನಿಲುಗಡೆ
Posted On: 12 May 2024, 12:39 PM
ಕಾಪು : ತಾಲೂಕಿನ ಬೆಳಪು ವಿದ್ಯುತ್ ಉಪ ಕೇಂದ್ರದಿಂದ ಹೊರ ಡುವ ಮಲ್ಲಾರು ಫೀಡರ್ ಮಾರ್ಗದಲ್ಲಿ ಮೇ 14ರಂದು ಹೊಸದಾಗಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9ರಿಂದ ಸಂಜೆ 5:30ರವರೆಗೆ ಮಲ್ಲಾರು, ಪಕೀರ್ಣಕಟ್ಟೆ, ಬೆಳಪು, ಮಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
ಕುತ್ಯಾರು : ಕಲ್ಯಾಣಿ ನಿಲಯ ಪಡುಮನೆಯಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ; ಧಾರ್ಮಿಕ ಕಾರ್ಯಕ್ರಮ ; ಸನ್ಮಾನ
Posted On: 11 May 2024, 10:08 PM
ಕಾಪು : ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಮನೆ ಕಲ್ಯಾಣಿ ನಿಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಈ ಸಂದರ್ಭ ಅವರನ್ನು ಕುತ್ಯಾರು ಪಡುಮನೆ ಪರವಾಗಿ ಸನ್ಮಾನಿಸಲಾಯಿತು. ಕುತ್ಯಾರು ಪಡುಮನೆಯ ಅಶೋಕ್ ಮೂಲ್ಯ, ಕಾಪು ಕುಲಾಲ ಯುವ ವೇದಿಕೆಯ ಮುಖಂಡ ಉದಯ ಕುಲಾಲ್, ಕುತ್ಯಾರು ಪಡುಮನೆ ಕುಟುಂಬದ ಪ್ರಮುಖರು ಉಪಸ್ಥಿತರಿದ್ದರು.
ನಮ್ಮನೆ ಪಿಲಾರು ಸಾಂತೂರು ಜವನೆರ್ :ರಕ್ತದಾನ ಶಿಬಿರ
Posted On: 11 May 2024, 12:40 PM
ಕಾಪು : ತಾಲೂಕಿನ ಮುದರಂಗಡಿಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆಸ್ಪತ್ರೆ ಹಾಗೂ ನಮ್ಮನೆ ಪಿಲಾರು ಸಾಂತೂರು ಜವನೆರ್ ಇವರ ಸಹಯೋಗದಲ್ಲಿ ಆಟೋ ಚಾಲಕ ದಿ. ಸಂದೀಪ್ ಶೆಟ್ಟಿ (ಪುಂತು )ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಸತತವಾಗಿ 50 ನೇ ಬಾರಿ ರಕ್ತದಾನ ಮಾಡಿದ ಶಿಕ್ಷಕ ಶ್ರೀ ಚಂದ್ರಹಾಸ ಪ್ರಭು ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಲಾಯಿತು. ಉಡುಪಿ ಜಿಲ್ಲಾ ಆಸ್ಪತ್ರೆಯ ಡಾ.ವೀಣಾ ಹಾಗೂ ಕಾರ್ಯಕ್ರಮ ಆಯೋಜಕರು ಉಪಸ್ಥಿತರಿದ್ದರು.
ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ
Posted On: 11 May 2024, 09:23 AM
ಕಾರ್ಕಳ : ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿಗಳು ತೆರ್ಗಡೆ ಹೊಂದಿರುವುದು ವಿಶೇಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ ಪ್ರಾಶುಂಪಾಲರಾದ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, ಎನ್.ಡಿ.ಎ/ಎನ್.ಎ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ರಾಹುಲ್ ಗಾಂಧಿ ಹೆಸರಿನಲ್ಲಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ಸಹಾಯ ಧನ ಹಸ್ತಾಂತರ
Posted On: 10 May 2024, 06:17 PM
ಕಾಪು : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ಮುಂಬೈ ಅಂದೇರಿ ಭಾಗದ ಕಾಂಗ್ರೆಸ್ ಪದಾಧಿಕಾರಿಯಾದ ಮಹೇಶ್ ಶೆಟ್ಟಿ ಉದ್ಯಮಿ ಮುಂಬೈ ಬರಬೆಟ್ಟು ಗುತ್ತು ಕಳತ್ತೂರು ಹಾಗೂ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿ ರೂ. 10,000 ವನ್ನು ದೇವಾಲಯಕ್ಕೆ ನೀಡಿದರು. ಈ ಸಂದರ್ಭದಲ್ಲಿ ಇವರನ್ನು ದೇವಾಲಯದ ಆಡಳಿತ ಮೊಕ್ತೇಸರ ಕೇಂಜ ಶ್ರೀಧರ ತಂತ್ರಿ ಯವರು ಶಾಲು ಹೊದಿಸಿ ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ಕರುಣಾಕರ ತಂತ್ರಿ, ಶ್ರೀಧರ ತಂತ್ರಿ ಕಳತ್ತೂರು ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ
Posted On: 10 May 2024, 09:45 AM
ಕಾಪು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ 25 ವಿದ್ಯಾರ್ಥಿಗಳು ಹಾಜರಾಗಿದ್ದು. ವಿಶಿಷ್ಠ ಶ್ರೇಣಿಯಲ್ಲಿ 4, ಪ್ರಥಮ ಶ್ರೇಣಿಯಲ್ಲಿ 10, ದ್ವಿತೀಯ ಶ್ರೇಣಿಯಲ್ಲಿ 3, ತೃತೀಯ ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕಾಪು : ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಶೇ.100 ಫಲಿತಾಂಶ
Posted On: 09 May 2024, 09:31 PM
ಕಾಪು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕಾಪು ತಾಲೂಕಿನ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಶೇ 100. ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ 26 ವಿದ್ಯಾರ್ಥಿಗಳು ಹಾಜರಾಗಿದ್ದು. ವಿಶಿಷ್ಠ ಶ್ರೇಣಿಯಲ್ಲಿ 5 ಮಂದಿ, ಪ್ರಥಮ ಶ್ರೇಣಿಯಲ್ಲಿ 12 ಮಂದಿ, ದ್ವಿತೀಯ ಶ್ರೇಣಿಯಲ್ಲಿ 9 ಮಂದಿ ಉತ್ತೀರ್ಣರಾಗಿದ್ದಾರೆ. ಶಾಲಾ ನಾಯಕಿ ಕುಮಾರಿ ಕಾವ್ಯ 606 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿ ಆಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಉದ್ಯಾವರ : ಎಸ್.ಎಫ್.ಎಕ್ಸ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ
Posted On: 09 May 2024, 12:53 PM
ಉದ್ಯಾವರ : ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ ವಿಶೇಷ ಸಾಧನೆ ಮಾಡಿದೆ. 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಸತತ 100 ಪ್ರತಿಶತ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯು, ಕಳೆದ 15 ವರ್ಷಗಳಲ್ಲಿ 13 ಬಾರಿ ಈ ಸಾಧನೆ ಮಾಡಿದೆ. ಈ ವಿದ್ಯಾ ಸಂಸ್ಥೆಯು ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಆಡಳಿತಕ್ಕೆ ಒಳಪಟ್ಟಿದೆ.
