Updated News From Kaup

ಮುಲ್ಕಿ : ಶಿವಾಯ ಫೌಂಡೇಶನ್ ಮುಂಬೈ ವತಿಯಿಂದ ದಿನಸಿ ಸಾಮಾಗ್ರಿ, ವಿಧವಾ ವೇತನದ ಚೆಕ್ ಹಸ್ತಾಂತರ

Thumbnail
Posted On: 28 Feb 2024, 07:42 PM

ಮುಲ್ಕಿ : ಶಿವಾಯ ಫೌಂಡೇಶನ್ (ರಿ.) ಮುಂಬೈ ಸಂಸ್ಥೆಯ ವತಿಯಿಂದ ಫೆ.28ರಂದು ಮುಲ್ಕಿ ಕಾರ್ನಾಡು ಅಮೃತಮಯಿ ನಗರ ನಿವಾಸಿ ಗೀತಾ ರವರ ಕುಟುಂಬಕ್ಕೆ 4ನೇ ತಿಂಗಳಿನ ದಿನಬಳಕೆಯ ದಿನಸಿ ಸಾಮಾಗ್ರಿ ಹಾಗೂ ವಿಧವಾ ವೇತನದ ಚೆಕ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶಿವಾಯ ಫೌಂಡೇಶನ್ ಸಂಸ್ಥೆಯ ಸದಸ್ಯರಾದ ರವಿ ಶೆಟ್ಟಿ ಶಾರದೆ, ಪಡುಬಿದ್ರಿ ರಮಣಿ ಐಸ್ ಕ್ರೀಮ್ ಪಾರ್ಲರ್ ಮಾಲಿಕರಾದ ಜಗನ್ನಾಥ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ನವೀನ್, ಸದಸ್ಯರಾದ ಮಹೇಶ್ ದೇವಾಡಿಗ ಹಳೆಯಂಗಡಿ, ಸಂಸ್ಥೆಯ ಹಿತೈಷಿ ಸುಧಾಕರ್ ಕೆ ಪಡುಬಿದ್ರಿ ಉಪಸ್ಥಿತರಿದ್ದರು.

ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿಗೆ “Incridea - 24” ರನ್ನರ್ ಆಫ್ ಟ್ರೋಫಿ

Thumbnail
Posted On: 28 Feb 2024, 07:04 PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್ಲುವಿನ ಒಟ್ಟು 60 ವಿದ್ಯಾರ್ಥಿಗಳು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ(ಎಮ್.ಎ.ಎಮ್.ಐ.ಟಿ)ದಲ್ಲಿ ದಿನಾಂಕ 22 ರಿಂದ 24 ಫೆಬ್ರವರಿ 2024 ರಂದು ನಡೆದ "Incridea-24" ರಲ್ಲಿ ಭಾಗವಹಿಸಿ ರನ್ನರ್ ಆಫ್ ಟ್ರೋಫಿ ಹಾಗೂ ರೂ. 20,000 ನಗದು ಬಹುಮಾನವನ್ನು ಪಡೆದಿರುತ್ತಾರೆ. "Incridea-24" ಇದರ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಾದ ಕೋಡ್ 45, ವೆಬೆಡ್, ಮೂವಿಡಿಯಾ- ಫೋಟೋಗ್ರಫಿ ಮತ್ತು ಲೈನ್ ಫಾಲೋವರ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದರೆ, ಶೆರ್ಲಾಕ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಮೆಮೆ ವಾರ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನಗಳಿಸಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಪತ್ಯೇತರ ಚಟುವಟಿಕೆಯ ಸಂಯೋಜಕರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.

ಮಾಚ್೯ 2 : ಸಾಂತೂರು ದೊಡ್ಡಮಠ ಕುಟುಂಬಸ್ಥರ ಮೂಲ ನಾಗಬನದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ, ದೈವದ ನೇಮೋತ್ಸವ

Thumbnail
Posted On: 28 Feb 2024, 11:48 AM

ಕುತ್ಯಾರು : ಸಾಂತೂರು ದೊಡ್ಡಮಠ ಕುಟುಂಬಸ್ಥರ ಮೂಲ ನಾಗಬನದಲ್ಲಿ ಮಾಚ್೯ 02, ಶನಿವಾರ ಶ್ರೀ ಸೋದೆ ವಾದಿರಾಜ ಮಠದ ಯತಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಏಕ ಪವಿತ್ರ ನಾಗಮಂಡಲೋತ್ಸವ ಮತ್ತು ದೈವದ ನೇಮೋತ್ಸವವು ಜರಗಲಿದೆ. ಸಾಂತೂರು ವೇ|ಮೂ| ಶ್ರೀ ರಘುಪತಿ ಜೋಯಿಸರ ನೇತೃತ್ವದಲ್ಲಿ ಹಾಗೂ ಕಲ್ಲಂಗಳ ವೇ। ಮೂ| ಶ್ರೀ ಬಿ. ಎನ್ ರಾಮಚಂದ್ರ ಕುಂಜಿತ್ತಾಯ ಇವರ ಸಹಕಾರದೊಂದಿಗೆ ಮತ್ತು ಕೃಷ್ಣಪ್ರಸಾದ ವೈದ್ಯ, ಬಾಲಕೃಷ್ಣ ವೈದ್ಯ, ನಟರಾಜ ವೈದ್ಯ ಮತ್ತು ಬಳಗದ ಸಹಯೋಗದೊಂದಿಗೆ ನೆರವೇರಲಿದೆ. ಮಾಚ್೯ 2 ರಂದು ಬೆಳಿಗ್ಗೆ 7:30ರಿಂದ ಪುಣ್ಯಾಹವಾಚನೆ, ಮಧ್ಯಾಹ್ನ 12 :30ಕ್ಕೆ ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಸಂಜೆ 5 ಗಂಟೆಗೆ ನಾಗಬನದಲ್ಲಿ ಹಾಲಿಟ್ಟು ಸೇವೆ, ನಾಗಮಂಟಪದಲ್ಲಿ ಕಲ್ಪೋಕ್ತ ಪೂಜೆ, ಸಂಜೆ 6 ಗಂಟೆಗೆ ನಾಗಮಂಡಲ ಸೇವೆ, ರಾತ್ರಿ 8 ಗಂಟೆಗೆ ಪ್ರಸಾದ ವಿತರಣೆ, 8:30 ರಿಂದ ಮಹಾ ಅನ್ನಸಂತರ್ಪಣೆ, ರಾತ್ರಿ 9ಗಂಟೆಗೆ ಪಂಜುರ್ಲಿ ನೇಮೋತ್ಸವ ಜರಗಲಿದೆ ಎಂದು ಸಾಂತೂರು ದೊಡ್ಡಮಠ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಜೆಸಿಐ ಉಡುಪಿ ಇಂದ್ರಾಳಿ ಘಟಕ - ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ

Thumbnail
Posted On: 27 Feb 2024, 02:50 PM

ಉಡುಪಿ : ಜೆಸಿಐ ವಲಯ 15ರ ಜೆಸಿಐ ಉಡುಪಿ ಇಂದ್ರಾಳಿ ಘಟಕದ ವತಿಯಿಂದ ನಿಟ್ಟೂರು ಪ್ರಾಥಮಿಕ ಶಾಲಾ ಸಭಾಂಗಣ ಉಡುಪಿಯಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಕಾರ್ಯಕ್ರಮ ಜರಗಿತು. ವೃತ್ತಿಯಲ್ಲಿ ಔಷಧಿ ಕಂಪೆನಿಯಲ್ಲಿ ಏರಿಯಾ ಮೆನೇಜರ್ ಆಗಿರುವ, ಪ್ರವೃತ್ತಿಯಲ್ಲಿ 'ಸಮಾಜ ಸೇವಕರು, ರಕ್ತದಾನ ವಿಭಾಗದಲ್ಲಿ ಈವರೆಗೆ 70 ಬಾರಿ ರಕ್ತದಾನ ಮಾಡಿದ್ದು, 5 ಶಿಬಿರಗಳನ್ನು ಆಯೋಜನೆ ಮಾಡಿ ಇದಕ್ಕಾಗಿ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ರಾಜ್ಯ ಪ್ರಶಸ್ತಿ ಪಡೆದಿರುವ ಜೆಸಿಯಲ್ಲಿ Past Zvp ವಲಯ ತರಬೇತಿದಾರರಾಗಿ ಸುಮಾರು 500 ಕ್ಕೂ ತರಬೇತಿ ನೀಡಿರುವ ಜೆಸಿ ರಾಘವೇಂದ್ರ ಪ್ರಭು, ಕವಾ೯ಲುರವರಿಗೆ "ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್" ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ಡಾ ಚಿತ್ರಾ ವಿಜಯ್ ನೆಗಳೂರ್, ವಲಯ ಉಪಾಧ್ಯಕ್ಷರಾದ JFD ಜೆಸಿ ವಿಗ್ನೇಶ್ ಪ್ರಸಾದ, IPP JFM ರಿಟಾ ಪಿರೇರಾ, ಲೇಡಿ ಜೆಸಿ ಸಂಯೋಜಕಿ ಜೆಸಿ ವಂದನಾ ಕೃಷ್ಣ, ಜಂಟಿ ಕಾರ್ಯದರ್ಶಿ ಜೆಸಿ ಹರಿಪ್ರಸಾದ್, JJC ರಕ್ಷಿತಾ ಸ್ಥಾಪಕ ಅಧ್ಯಕ್ಷರಾದ ಜೆಸಿ ಶರ್ಲಿ ಮನೋಜ್, ಪೂರ್ವ ಅಧ್ಯಕ್ಷರುಗಳಾದ ಜೆಸಿ ಅಶೋಕ್ ಪೂಜಾರಿ, ಪದಾಧಿಕಾರಿಗಳಾದ ಜೆಸಿ ವಿಜಯ್ ನೆಗಳೂರ್, ಜೆಸಿ ರಾಧಾಕೃಷ್ಣ, ಜೆಸಿ ಮಮತಾ, ಜೆಸಿ ಪದ್ಮಸಿನಿ, ಜೆಸಿ ಡಾ. ಮುರಳೀಧರ ರಾವ್ ಉಪಸ್ಥಿತರಿದ್ದರು.

ಮಸ್ಕತ್ : ‘ಬಿರುವ ಜವನೆರ್ ‘ ಸಂಘಟನೆ - ‘ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ’ ಯಕ್ಷಗಾನ ತಾಳಮದ್ದಳೆ

Thumbnail
Posted On: 26 Feb 2024, 05:57 PM

ಮಸ್ಕತ್ : ‘ಬಿರುವ ಜವನೆರ್ ‘ ಸಂಘಟನೆ ಯು ಮಸ್ಕತ್ ನ ದಾರಸೈಟ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪೂಜಾ ಸಹಿತ ‘ಶ್ರೀ ಸತ್ಯ ನಾರಾಯಣ ವೃತ ಮಹಾತ್ಮೆ’ ಕಥೆಯನ್ನು ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರಸ್ತುತಿಗೊಳಿಸಲಿದೆ. ಹೊರರಾಷ್ಟ್ರದಲ್ಲಿ ಮೊದಲ ಬಾರಿ ಶನೀಶ್ವರ ಯಕ್ಷಗಾನ ಪ್ರದರ್ಶನ ಮಾಡಿದ ಕೀರ್ತಿ ಪಡೆದ ತಂಡದಿಂದ ಸತ್ಯನಾರಾಯಣ ಪೂಜಾ ಸಹಿತ ತಾಳಮದ್ದಳೆ ಸಂಪನ್ನಗೊಳ್ಳಲಿದೆ. ಮಾ.1ರಂದು ಶುಕ್ರವಾರ ಪೂರ್ವಾಹ್ನ 8.30 ರಿಂದ ಅಪರಾಹ್ನ 1.30 ರ ತನಕ ಶನೀಶ್ವರ ಪೂಜೆ ಖ್ಯಾತಿಯ ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ, ಮಂಗಳೂರು ತಂಡವು ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಇವರ ಸಂಯೋಜನೆ ಯಲ್ಲಿ ಪ್ರದರ್ಶನ ನೀಡಲಿದೆ. ಕಳೆದ ಮೂರು ದಶಕಗಳಿಂದ ತಾಳಮದ್ದಳೆ ಕಾರ್ಯಕ್ರಮಗಳನ್ನು ದೇಶ ವಿದೇಶಗಳಲ್ಲಿ ನೀಡಿರುವ ತುಳುನಾಡಿನ ಈ ಖ್ಯಾತ ತಂಡವು ಕರ್ನಾಟಕ, ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾಗೂ ದುಬೈ, ಅಬುದಾಬಿ, ಮಸ್ಕತ್ ರಾಷ್ಟ್ರಗಳಲ್ಲಿ ಪೂಜಾ ಸಹಿತ ಶನೀಶ್ವರ ತಾಳಮದ್ದಳೆ ನಡೆಸಿ ಜನಪ್ರಿಯತೆ ಗಳಿಸಿವೆ. ಈ ಪೂರ್ವದಲ್ಲಿ ‘ಬಿರುವ ಜವನೆರ್’ ಇದೇ ತಂಡದಿಂದ ಎರಡು ಬಾರಿ ಶನಿಪೂಜೆಯನ್ನು ಮಸ್ಕತ್ ನಲ್ಲಿ ಆಯೋಜಿಸಿ ಯಶಸ್ವಿಯಾಗಿದ್ದಾರೆ. ಈ ಸಂಘಟನೆಯು ಧಾರ್ಮಿಕ ಮತ್ತು ಸಮಾಜ ಸೇವಾ ಚಟುವಟಿಕೆಯನ್ನು ಕಳೆದ ಒಂದು ದಶಕದಿಂದ ನಡೆಸುತ್ತಿದೆ. ಹಿಮ್ಮೇಳದಲ್ಲಿ ಡಾ. ಪ್ರಖ್ಯಾತ್ ಶೆಟ್ಟಿ, ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ, ದಯಾನಂದ ಕೋಡಿಕಲ್ ಹಾಗೂ ಅರ್ಥಧಾರಿಗಳಾಗಿ ಕದ್ರಿ ನವನೀತ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ ಮೊಯ್ಲೊಟ್ಟು, ಸದಾಶಿವ ಆಳ್ವ ತಲಪಾಡಿ, ಶಶಿಕಾಂತ್ ಶೆಟ್ಟಿ ಕಾರ್ಲ, ಪ್ರಸನ್ನ ಶೆಟ್ಟಿ ಅತ್ತೂರ್ ಗುತ್ತು, ಮನೋಹರ ಕುಂದರ್ ಎರ್ಮಾಳ್, ಪ್ರಜ್ವಲ್ ಶೆಟ್ಟಿ ಗುರುವಾಯನಕೆರೆ, ನಿತಿನ್ ಹುಣಸೆಕಟ್ಟೆ ಭಾಗವಹಿಸಲಿದ್ದಾರೆ. ರವಿ ಭಟ್ ಪಡುಬಿದ್ರಿ ಅವರು ಪೂಜಾ ವ್ಯವಸ್ಥೆಯಲ್ಲಿ ಸಹಕರಿಸಲಿದ್ದಾರೆ. ಪೂಜೆಯ ನಂತರ ಪ್ರಸಾದ ಭೋಜನ ಹಾಗೂ ಸಂಜೆ 5.30 ರ ತನಕ ಕಲ್ಲಡ್ಕ ವಿಠ್ಠಲ ನಾಯ್ಕ್ ಅವರ ತಂಡ ದಿಂದ ‘ಗೀತಾ ಸಾಹಿತ್ಯ ಸಂಭ್ರಮ’ ಜರಗಲಿದೆ. ಮಸ್ಕತ್ ನಲ್ಲಿ ನೆಲೆಸಿರುವ ಎಲ್ಲಾ ಸಮುದಾಯದ ಭಕ್ತ ಭಾಂದವರು ಆಗಮಿಸಿ ಸಹಕರಿಸಬೇಕೆಂದು ಬಿರುವ ಜವನೆರ್ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡುಬೆಳ್ಳೆ: ಶಿಕ್ಷಣತಜ್ಞ ಆರ್.ಎಸ್. ಬೆಳ್ಳೆ ಸಂಸ್ಮರಣೆ

Thumbnail
Posted On: 26 Feb 2024, 05:37 PM

ಪಡುಬೆಳ್ಳೆ : ಸಮಾಜಮುಖಿ ವ್ಯಕ್ತಿತ್ವವನ್ನು ರೂಢಿಸಿಕೊಂಡಾಗ ಮಾತ್ರ ಅಭಿವೃದ್ಧಿ ಹಾಗೂ ಯಶಸ್ಸು ಸಂಪೂರ್ಣ ಸಾಧ್ಯವಾಗುತ್ತದೆ ಎಂಬುದಕ್ಕೆ ಶಿಕ್ಷಣ ತಜ್ಞ ಮತ್ತು ಸಮಾಜಸೇವಕ ಆರ್.ಎಸ್. ಬೆಳ್ಳೆ ಅವರ ಬದುಕೇ ಉದಾಹರಣೆಯಾಗಿದೆ ಎಂದು ಕಟ್ಟಿಂಗೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ದೇವದಾಸ್ ಹೆಬ್ಬಾರ್ ಹೇಳಿದರು. ಅವರು ಪಡುಬೆಳ್ಳೆ ಪಾಂಬೂರಿನಲ್ಲಿ ಫೆ. 25ರಂದು ಜರಗಿದ ಆರ್.ಎಸ್. ಬೆಳ್ಳೆ ಸಂಸ್ಮರಣೆಯ ಹೊನಲು ಬೆಳಕಿನ ಮಿತ್ರಗೋಷ್ಠಿಯಲ್ಲಿ ಮಾತನಾಡಿದರು. ಆರ್.ಎಸ್. ಬೆಳ್ಳೆ ಅವರು ಶಿಕ್ಷಣ ಇಲಾಖೆಯಲ್ಲಿ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯಾಗಿದ್ದರು. ನಿವೃತ್ತಿ ಬಳಿಕ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರದ್ದು ತ್ಯಾಗಪೂರ್ಣ ಬದುಕಾಗಿದ್ದು, ತನ್ನ ಶಕ್ತಿಗೂ ಮೀರಿ ಜನರಿಗೆ ನೆರವು ನೀಡುತ್ತಿದ್ದರು ಎಂದು ಅವರು ನೆನಪಿಸಿಕೊಂಡರು. ಕವಿ, ಸಾಹಿತಿ‌ ರಿಚ್ಚಾರ್ಡ್ ದಾಂತಿ ಪಾಂಬೂರು ಅವರು ಸಂಸ್ಮರಣಾ ಭಾಷಣ ಮಾಡಿದರು. ಉಡುಪಿಯ ಹಿರಿಯ ನ್ಯಾಯವಾದಿ ಜಯಶಂಕರ ಕುತ್ಪಾಡಿ ಅವರಿಗೆ ಆರ್.ಎಸ್. ಬೆಳ್ಳೆ ಸ್ಮರಣಾರ್ಥ ಮೊದಲ ವರ್ಷದ ಪುರಸ್ಕಾರವನ್ನು ಪ್ರದಾನಿಸಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯ ವಾಸು ಆಚಾರ್, ಪಡುಬೆಳ್ಳೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ದೇವಾಡಿಗ, ಕಸಾಪ ಕಾಪು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ, ಬೆಳ್ಳೆ ಪರಿಚಯ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಕಾಶ್ ನೊರೋನ್ನಾ ಪಾಂಬೂರು, ಸ್ಯಾಮ್‌ಸನ್ ನೊರೋನ್ನಾ ದಿಂದೊಟ್ಟು, ಮುರಳೀಧರ ಆರ್. ಸಾಮಗ ಬೆಳ್ಳೆ ಮಾತನಾಡಿದರು. ಬೆಳ್ಳೆ ಗ್ರಾಪಂ ಮಾಜಿ ಅಧ್ಯಕ್ಷ ಸುಧಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದು, ಅವರ ಅವಧಿಗೆ ಗ್ರಾಮ ಪಂಚಾಯಿತಿಯು ಗಾಂಧಿ ಗ್ರಾಮ ಪುರಸ್ಕಾರ ಪಡೆದುದಕ್ಕಾಗಿ ಅವರನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಯಿತು. ಕಾಪು‌ ತಾಪಂ ಮಾಜಿ ಸದಸ್ಯೆ ಸುಜಾತಾ ಎಸ್. ಸುವರ್ಣ, ನಿವೃತ್ತ ಕಚೇರಿ ಸಿಬಂದಿ ಕ್ರಿಸ್ತಿನ್ ಫೆರ್ನಾಂಡಿಸ್, ನಿವೃತ್ತ ಹಿರಿಯ ಶುಶ್ರೂಶಕಿ ಉಷಾ ಮರಾಠೆ, ಪತ್ರಕರ್ತ ಶ್ರೀರಾಮ ದಿವಾಣ, ಪೆಲ್ವಿನ್ ಫ್ರಾನ್ಸಿಸ್ ಕ್ವಾಡ್ರಸ್, ಅರುಣ್ ನೊರೋನ್ನಾ, ಪೀಟರ್ ಮಿನೇಜಸ್ ಉಪಸ್ಥಿತರಿದ್ದರು. ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ನಿರೂಪಿಸಿದರು.

ಮಂಗಳೂರು : ಎನ್ ಎಸ್ ಸಿ ಡಿ‌ ಎಫ್ -12 ಗಂಟೆಗಳ ಕನ್ನಡ ಗೀತೆಗಳ ಗಾಯನ ವಿಶ್ವ ದಾಖಲೆ ; ಅಭಿನಂದನಾ ಸಮಾರಂಭ

Thumbnail
Posted On: 25 Feb 2024, 11:05 AM

ಮಂಗಳೂರು : ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ದಿ ಪ್ರತಿಷ್ಠಾನ (NSCDF) ನವೆಂಬರ್ 5ರಂದು ಆಯೋಜಿಸಿದ್ದ ನಿರಂತರ 12 ಗಂಟೆಗಳ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮವು ವಿಶ್ವ ದಾಖಲೆಯನ್ನು ನಿರ್ಮಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವು ಫೆಬ್ರವರಿ 23ರಂದು ಮಂಗಳೂರು ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ಚಲನಚಿತ್ರ ಖ್ಯಾತ ಹಾಸ್ಯ ನಟ ಅರವಿಂದ ಬೋಳಾರ್ ಮಾತನಾಡಿ ಮನಃಶಾಂತಿಗಾಗಿ ಹಾಡು ವಿಶ್ವದಾಖಲೆ ನಿರ್ಮಿಸಿದ್ದು ಸಂತಸದ ವಿಚಾರ. ಇವರ ಈ ಸಾಧನೆಯನ್ನು ಮೆಚ್ಚಲೇಬೇಕು. ಇಂತಹ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಬೇಕು ಮತ್ತು ಇವರ ತಂಡಕ್ಕೆ ಎಲ್ಲರೂ ಸಹಕರಿಸಬೇಕು ಎಂದರು. ವಿಶ್ವ ದಾಖಲೆ ನಿರ್ಮಿಸಿದ ಗಾಯಕರಾದ ಗಂಗಾಧರ್ ಗಾಂಧಿ, ವರ್ಷ ಕರ್ಕೇರ, ಶ್ರೀರಕ್ಷಾ ಸರ್ಪಂಗಳ, ನೇತ್ರ ಖುಷಿ, ರಾಣಿ ಪುಷ್ಪಲತಾ ದೇವಿ ಇವರಿಗೆ ವಿಶ್ವದಾಖಲೆಯ ಪ್ರಮಾಣ ಪತ್ರ ನೀಡಿ ಶಾಲು, ಹಾರ, ತುರಾಯಿ, ಫಲತಾಂಬೂಲದೊಂದಿಗೆ ಸನ್ಮಾನಿಸಲಾಯಿತು. ಅಂದಿನ ಕಾರ್ಯಕ್ರಮದಲ್ಲಿ ಸಹಕರಿಸಿದ ರವೀಂದ್ರ ಮುನ್ನಿಪಾಡಿ, ಡಾ. ಸುರೇಶ್ ನೆಗಳಗುಳಿ, ಡಾ. ವಾಣಿಶ್ರೀ ಕಾಸರಗೋಡು, ಯು ಆರ್ ಶೆಟ್ಟಿ, ಶಿವಪ್ರಸಾದ್ ಕೊಕ್ಕಡ, ರೇಷ್ಮಾ ಶೆಟ್ಟಿ ಗೋರೂರು, ಆರ್ವಿ ವಿ.ಕೆ, ಗುರುರಾಜ್ ಎಂ.ಆರ್, ರೇಖಾ ಸುದೇಶ್ ರಾವ್, ಮಮ್ತಾ ರಾವ್ ಮುಂತಾದವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು NSCDF ಅಧ್ಯಕ್ಷ ಗಂಗಾಧರ ಗಾಂಧಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತುಳು ಹಾಸ್ಯ ಚಿತ್ರನಟ ಸತೀಶ್ ಬಂದಲೆ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, NSCDF ಅಂತರಾಷ್ಟ್ರೀಯ ವಕ್ತಾರೆ ಮಮತಾ ರಾವ್, ಪ್ರಧಾನ ಕಾರ್ಯದರ್ಶಿ ದಿನಕರ ಡಿ. ಬಂಗೇರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಶ್ಮಿ ಸನಿಲ್ ಮತ್ತು ರೇಷ್ಮಾ ಶೆಟ್ಟಿ ಗೋರೂರು ನಿರೂಪಿಸಿದರು.

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಲಬಾರ್ ಚಾರಿಟೇಬಲ್ ಟ್ರಸ್ಟ್ - 15 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

Thumbnail
Posted On: 25 Feb 2024, 10:27 AM

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸುಮಾರು 40 ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಇಂದು ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ವಿತರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿವೇತನ ವಿತರಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಮಾತನಾಡಿ, ಮಲಬಾರ್ ಗೊಲ್ಡ್ ಅರ್ಹರಿಗೆ ಎಲ್ಲ ರೀತಿಯಲ್ಲೂ ಸಹಾಯ ನೀಡುತ್ತಿದೆ. ಮನೆ ನಿರ್ಮಾಣ, ರೋಗಿಗಳಿಗೆ ಧನಸಹಾಯ, ಕೋವಿಡ್ ಸಂದರ್ಭದಲ್ಲಿ ಕಿಟ್ ವಿತರಿಸುವ ಮೂಲಕ ಸಮಾಜಕ್ಕೆ ಮಾನವೀಯ ನೆಲೆಯಲ್ಲಿ ಸ್ಪಂದಿಸಿದೆ ಎಂದು ಹೇಳಿದರು. ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯ ಬಗ್ಗೆಯೂ ನಾವು ಯೋಚನೆ ಮಾಡಬೇಕು. ಮಲಬಾರ್ ಗೋಲ್ಡ್ ನೀಡಿದ ವಿದ್ಯಾರ್ಥಿವೇತನದಿಂದ ಭವಿಷ್ಯದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಪಡೆಯುವ ವಿದ್ಯಾರ್ಥಿಗಳು ಮುಂದೆ ಸಮಾಜದ ಬಗ್ಗೆಯೂ ಚಿಂತನೆ ಮಾಡಬೇಕು. ಆಗ ಇದೇ ರೀತಿಯ ನೆರವಿನ ನಿರೀಕ್ಷೆಯನ್ನು ಸಮಾಜ ಕೂಡ ನಿಮ್ಮಿಂದ ಮಾಡುತ್ತಿರುತ್ತದೆ ಎಂದರು. ಮಕ್ಕಳಲ್ಲಿರುವ ಶಕ್ತಿ, ಕೌಶಲ್ಯಗಳು ಸಮಾನತೆಯನ್ನು ಮೂಡಿಸಲ್ಲ. ನಾವೆಲ್ಲ ಒಂದಾಗಿರಬೇಕೆಂಬ ಬದ್ಧತೆಯೇ ಮಕ್ಕಳಲ್ಲಿರುವ ನಿಜವಾದ ಸಮಾನತೆ ಆಗಿದೆ. ಜಾತಿ ಧರ್ಮ ಮೀರಿದ ಸಂಬಂಧವೇ ಮಕ್ಕಳಲ್ಲಿ ಶಾಶ್ವತವಾಗಿರುತ್ತದೆ. ಆ ಸಂಬಂಧ ಸಮಾಜದ ಮುಂದಿನ ಪೀಳಿಗೆಗೂ ಉಳಿಯಲಿ ಎಂದು ಅವರು ಹಾರೈಸಿದರು. ಈ ಸಂದರ್ಭದಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಹಸಿವು ಮುಕ್ತ ಜಗತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಮಾತನಾಡಿ, ಹಸಿವು ಮುಕ್ತ ಜಗತ್ತು ಬಹಳ ಉತ್ತಮ ಕಾರ್ಯಕ್ರಮ ವಾಗಿದ್ದು, ಇದೇ ರೀತಿಯ ಕಾರ್ಯಕ್ರಮ ಇನ್ನಷ್ಟು ಸಂಸ್ಥೆಗಳು ಮಾಡಿದರೆ ಇಡೀ ಜಗತ್ತನ್ನು ಹಸಿವು ಮುಕ್ತ ಮಾಡಬಹುದಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ನಿವೃತ್ತ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೋ, ಸಮಾಜ ಸೇವಕರಾದ ಫಾರೂಕ್ ಚಂದ್ರನಗರ, ನಿತ್ಯಾನಂದ ಒಳಕಾಡು, ಹಾಸ್ಯ ಭಾಷಣಗಾರ್ತಿ ಸಂಧ್ಯಾ ಶೆಣೈ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪ್ರಾದೇಶಿಕ ಸಿಎಸ್‌ಆರ್ ಉಸ್ತುವಾರಿ ಹೈದರ್ ಕೆ.ಎ., ಪ್ರಮುಖ ರಾದ ಪುರಂದರ ತಿಂಗಳಾಯ, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಘವೇಂದ್ರ ಕರ್ವಾಲು ಸ್ವಾಗತಿಸಿ, ವಿಘ್ನೇಶ್ ನಿರೂಪಿಸಿ ವಂದಿಸಿದರು.

ಕಾರ್ಕಳ : ಕುಲಾಲ ಚಾವಡಿಯಿಂದ ನೆರವಿನ ಹಸ್ತ

Thumbnail
Posted On: 25 Feb 2024, 10:17 AM

ಕಾರ್ಕಳ : ತಾಲೂಕಿನ ಅಂಡಾರು ಗ್ರಾಮದ ಮಹಿಳೆಯೋರ್ವರ ಶಸ್ತ್ರಚಿಕಿತ್ಸೆಗೆ ಕುಲಾಲ ಚಾವಡಿಯಿಂದ ರೂ.35,000 ಸಂಗ್ರಹಿಸಿ ಫೆಬ್ರವರಿ 18 ರಂದು ಹಸ್ತಾಂತರಿಸಲಾಯಿತು. ಅಂಡಾರುವಿನ ಶಾಲಿನಿಯವರು ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವಿಗಾಗಿ ನೀಡಿದ ಮನವಿಯ ಮಾಹಿತಿ ತಿಳಿದ ಕೃಷ್ಣ ಕುಲಾಲ್ ಅಜೆಕಾರ್ ಇವರು ಕುಲಾಲ ಚಾವಡಿಯ ಸಹೃದಯರ ಗಮನಕ್ಕೆ ತಂದು ದೇಶ ವಿದೇಶದ ಚಾವಡಿ ಸದಸ್ಯರು ಧನ ಸಹಾಯ ನೀಡಿದ್ದಾರೆ. ಈ ಸಂಧರ್ಭದಲ್ಲಿ‌ ಕುಲಾಲ ಚಾವಡಿ ನಿರ್ವಾಹಕ ಸಂತೋಷ್ ಕುಲಾಲ್ ಪದವು, ಹೃದಯ್ ಕುಲಾಲ್ ಹೀರ್ಗಾನ , ವಿಶ್ವನಾಥ್ ಕುಲಾಲ್, ಕೃಷ್ಣ ಕುಲಾಲ್ ಅಜೆಕಾರು, ಜಯಾನಂದ ಕುಲಾಲ್ ಅಂಡಾರು, ಸುರೇಂದ್ರ ಕುಲಾಲ್ ಅಂಡಾರು ಉಪಸ್ಥಿತರಿದ್ದರು.

ಫೆ.25 (ನಾಳೆ) : ಕುಕ್ಕುಂಜದಲ್ಲಿ ಕೆಪಿಎಲ್ ಟ್ರೋಫಿ - 2024

Thumbnail
Posted On: 24 Feb 2024, 09:18 PM

ಕಾಪು : ಕುತ್ಯಾರು ಗ್ರಾಮದ ಕುಕ್ಕುಂಜದಲ್ಲಿ ಗ್ರಾಮೀಣ ಭಾಗದ ವಿವಿಧ ತಂಡದೊಂದಿಗೆ ವಾಲಿಬಾಲ್ ಪಂದ್ಯಾಟ ನಾಳೆ ಬೆಳಿಗ್ಗೆ 9 ರಿಂದ ಕಳತ್ತೂರು ಕುಕ್ಕುಂಜದಲ್ಲಿ ನಡೆಯಲಿದೆ. ವಿಜೇತ ತಂಡಗಳಿಗೆ ನಗದು ಬಹುಮಾನ ಹಾಗೂ ಕೆಪಿಎಲ್ ಟ್ರೋಫಿ ನೀಡಲಾಗುವುದು. ಎಂದು ಕ್ರೀಡಾ ಕೂಟದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.