Updated News From Kaup
ಕಾಪು : 92 ಹೇರೂರು ಫ್ರೆಂಡ್ಸ್ ಕ್ಲಬ್ ಪ್ರಥಮ ವಾರ್ಷಿಕೋತ್ಸವ ; ಸನ್ಮಾನ
Posted On: 03-01-2024 08:50PM
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ಫ್ರೆಂಡ್ಸ್ ಕ್ಲಬ್ ಇದರ ಪ್ರಥಮ ವಾರ್ಷಿಕೋತ್ಸವ ಸೋಮವಾರ ಹೇರೂರು ಭಜನಾ ಮಂದಿರದ ಸಾರ್ವಜನಿಕ ರಂಗ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಮಾತನಾಡಿ ಸ್ಥಳೀಯ ಸಂಘಟಿತ ಯುವಶಕ್ತಿಯನ್ನು ಧನಾತ್ಮಕವಾಗಿ ಬಳಸಿಕೊಂಡಾಗ ಸಾಂಘಿಕಶಕ್ತಿ ಜಾಗೃತವಾಗಿ ಸ್ಥಳೀಯ ಅನೇಕ ಸಮಸ್ಯೆಗಳಿಗೆ ಪರಿಹಾರ, ಊರಿನ ಅಭಿವೃದ್ಧಿ, ಪ್ರತಿಭಾ ವಿಕಸನ, ಸಮರ್ಥ ನಾಯಕತ್ವ ಬೆಳೆಯುತ್ತದೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ರಕ್ತದಾನ, ಬಡ ಕುಟುಂಬಕ್ಕೆ ಸೂರು ಒದಗಿಸಿರುವುದು ಈ ಸಂಘಟನೆಯ ಸೇವಾ ಮನೋಭಾವನೆಗೆ ಉತ್ತಮ ನಿರ್ದಶನವಾಗಿದೆ ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಪಡುಬಿದ್ರಿ : ಭೀಮಾ ಕೊರೆಗಾಂವ್ ವಿಜಯೋತ್ಸವದ ಪ್ರಯುಕ್ತ ಶೌರ್ಯ ದಿನಾಚರಣೆ
Posted On: 03-01-2024 08:31PM
ಪಡುಬಿದ್ರಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಪಡುಬಿದ್ರಿ ಇದರ ನೇತೃತ್ವದಲ್ಲಿ ಸೋಮವಾರ ಭೀಮಾ ಕೊರೆಗಾಂವ್ ವಿಜಯೋತ್ಸವದ ಪ್ರಯುಕ್ತ ಶೌರ್ಯ ದಿನಾಚರಣೆ ಪಡುಬಿದ್ರಿಯಲ್ಲಿ ನಡೆಯಿತು.
ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ಗೆ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಹಲವು ಪ್ರಶಸ್ತಿ ಪುರಸ್ಕಾರಗಳ ಗರಿ
Posted On: 03-01-2024 12:03PM
ಕಾಪು : ಬೆಳ್ಳಿ ಹಬ್ಬದ ಅದ್ಭುತ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಜೆಸಿಐ ಶಂಕರಪುರ ಜಾಸ್ಮಿನ್ ಗೆ ಬೆಂಗಳೂರಿನ ಹಿಲ್ ಟನ್ ಹೋಟೆಲ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿದೆ.
ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ ಸದಸ್ಯರಿಂದ ರಸ್ತೆ ದುರಸ್ತಿ ಕಾರ್ಯ
Posted On: 03-01-2024 11:47AM
ಪಡುಬಿದ್ರಿ : ಸದಾ ಜನಪರ ಕಾಳಜಿಯ ಕಾರ್ಯಗಳನ್ನು ಮಾಡುತ್ತಿರುವ ಪಡುಬಿದ್ರಿಯ ಕರಾವಳಿ ಸ್ಟಾರ್ಸ್ ನಡಿಪಟ್ನ ತಂಡವು ಎರಡು ಸ್ಥಳಗಳಲ್ಲಿ ರಸ್ತೆಯಲ್ಲಿದ್ದ ಗುಂಡಿಯನ್ನು ಮುಚ್ಚುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.
ಕಾಪು : ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ವತಿಯಿಂದ ಶ್ರದ್ಧಾಂಜಲಿ ಸಭೆ
Posted On: 02-01-2024 06:30PM
ಕಾಪು : ಎಲ್ಲಾ ಕ್ಷೇತ್ರದಲ್ಲಿ ಛಾಪನ್ನು ಒತ್ತಿದ ಮಹನೀಯ ವ್ಯಕ್ತಿ ಲೀಲಾಧರ ಶೆಟ್ಟಿ. ಯಾವುದೇ ಅಹಂ ಭಾವವಿರದೆ ಎಲ್ಲರಲ್ಲೂ ಒಂದಾಗುವ ವ್ಯಕ್ತಿ. ಸಮಾಜಸೇವೆ ಎಲ್ಲರೂ ಮಾಡುತ್ತಾರೆ ನನ್ನ ಬಗ್ಗೆ ಯೋಚಿಸದೆ ಗಂಧದ ಕೊರಡಿನಂತೆ ತನ್ನನ್ನು ತಾನು ತೀಡಿ ಸರ್ವರಿಗೂ ಒಳಿತಾಗಲಿ ಎಂಬ ಮನಸ್ಥಿತಿಯ ವ್ಯಕ್ತಿ. ಲೀಲಾಧರ ಶೆಟ್ಟಿ ಮತ್ತು ವಸುಂಧರ ದಂಪತಿಗಳಿಗೆ ಚಿರಶಾಂತಿ ಸಿಗಲಿ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಹೇಳಿದರು. ಅವರು ಕಾಪು ತಾಲೂಕಿನ ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ವತಿಯಿಂದ ಲೀಲಾಧರ ಶೆಟ್ಟಿ ದಂಪತಿಯ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮುಲ್ಕಿ : ಶಿವಾಯ ಫೌಂಡೇಶನ್ ಮುಂಬೈ ವತಿಯಿಂದ ಕುಟುಂಬವೊಂದಕ್ಕೆ ದಿನಸಿ ಸಾಮಾಗ್ರಿ, ವಿಧವಾ ವೇತನದ ಚೆಕ್ ಹಸ್ತಾಂತರ
Posted On: 02-01-2024 02:38PM
ಮುಲ್ಕಿ : ಶಿವಾಯ ಫೌಂಡೇಶನ್ (ರಿ) ಮುಂಬೈ ಇವರ ವತಿಯಿಂದ ಇಂದು ಮುಲ್ಕಿ ಕಾರ್ನಾಡು ಅಮೃತಮಾಯಿ ನಗರ ನಿವಾಸಿ ಗೀತಾರವರ ಕುಟುಂಬಕ್ಕೆ ದಿನಬಳಕೆಯ ದಿನಸಿ ಸಾಮಾಗ್ರಿ ಹಾಗೂ ವಿಧವಾ ವೇತನದ ಚೆಕ್ ನ್ನು ಹಸ್ತಾಂತರಿಸಲಾಯಿತು.
ಆರೋಗ್ಯಯುತ ಜೀವನಕ್ಕೆ ಹೊಸ ವರುಷ ದಾರಿಯಾಗಲಿ
Posted On: 02-01-2024 11:21AM
ನೂತನ ವಷ೯ 2024 ಬಂದಿದೆ. ಈ ವಷ೯ ನಮ್ಮ ಬದುಕಿನಲ್ಲಿ ಮತ್ತಷ್ಟು ಭರವಸೆಯ ಸಾಧನೆಗಳು ಹೊರಬರಲಿ ಎಂಬ ಆಶಯದೊಂದಿಗೆ ಈ ವಷ೯ ನಮ್ಮ ಆರೋಗ್ಯ ದ ವಷ೯ವಾಗಲಿ ಆರೋಗ್ಯವಿದ್ದರೆ ವರ್ಷವೆಲ್ಲ ಹೊಸತನದಿಂದಲೇ ಕೂಡಿರುತ್ತದೆ. ಆರೋಗ್ಯ ಪಾಲನೆಗೆ ಕೆಲವು ಸೂತ್ರಗಳನ್ನಾದರೂ ಕಟ್ಟುನಿಟ್ಟಾಗಿ ಪಾಲಿಸಲು ಈ ಹೊಸವರ್ಷ ನಮಗೆ ನೆಪವಾಗಲಿ. ಒಂದೆಡೆ ಈ ವರ್ಷ ಸುಸೂತ್ರವಾಗಿ ಉರುಳಿದ ಸಂತಸವಿದ್ದರೆ ಮತ್ತೊಂದೆಡೆ ಮುಂದಿನ 20 24 ನೇ ವರ್ಷದ ಬಗ್ಗೆ ಕಾತರ, ಕನಸುಗಳ ನಿರೀಕ್ಷೆಯಿದೆ. ಈ ಹಿಂದಿನ ಎರಡು ವರ್ಷಗಳು ಹೇಗಿದ್ದವು ಎಂಬುದು ಜಗತ್ತಿಗೇ ಗೊತ್ತಿದೆ. ಕೊರೊನಾ ಈ ಅಮೂಲ್ಯ ವರ್ಷಗಳನ್ನು ಬಹುಮಟ್ಟಿಗೆ ತನ್ನ ಮುಷ್ಟಿಯಲ್ಲಿ ಇಟ್ಟುಕೊಂಡಿತ್ತು. ಆರಂಭದಲ್ಲಿ ಕೊರೊನಾ ತನ್ನ ಗತ್ತು ತೋರಿಸಿದರೂ ಹೆಚ್ಚು ಕಾಡಲಿಲ್ಲವೆನ್ನಬಹುದು. ಏಕೆಂದರೆ ಪ್ರಾರಂಭದಲ್ಲಿ ಕೊರೊನಾ ಪ್ರಕರಣ ಕಂಡರೂ ಅವೆಲ್ಲ ಸೌಮ್ಯ ಸ್ವರೂಪದ್ದಾಗಿತ್ತು. ಲಸಿಕಾ ಅಭಿಯಾನ, ದೇಹದಲ್ಲಿ ಪ್ರತಿರೋಧಕ ಕಾಯಗಳ ಉತ್ಪತ್ತಿಯಿಂದಾಗಿ ರೋಗ ಬಹುತೇಕ ಅಳಿವಿನ ಅಂಚಿಗೆ ಬಂದು ನಿಂತಿದೆ.
ಮಾತೃಜ ಸೇವಾ ಸಿಂಧು ನಿಟ್ಟೆ : 17 ಹಾಗೂ 18 ನೇ ಸೇವಾ ಯೋಜನೆ ಹಸ್ತಾಂತರ
Posted On: 01-01-2024 06:14PM
ಕಾರ್ಕಳ : ಇಲ್ಲಿಯ ನಿಟ್ಟೆಯ ಮಾತೃಜ ಸೇವಾ ಸಿಂಧು ವತಿಯಿಂದ ಮೂಡಬಿದ್ರೆಯ 4 ವರ್ಷದ ಮಗು ಹಾಗೂ ಕಿನ್ನಿಗೋಳಿಯ 6 ತಿಂಗಳ ಮಗುವಿಗೆ ಆರ್ಥಿಕ ಸಹಾಯವನ್ನು ಹಸ್ತಾಂತರಿಸಲಾಯಿತು.
ಪಲಿಮಾರು : ಅವಿರತ ಪ್ರಯತ್ನದಿಂದ ಮಾತ್ರ ಸಾಧನೆಯ ಮೆಟ್ಟಿಲನ್ನು ಹತ್ತಲು ಸಾಧ್ಯ - ಪ್ರಸಾದ್ ಪಲಿಮಾರು
Posted On: 29-12-2023 09:39PM
ಪಲಿಮಾರು : ಸೂರ್ಯನಂತೆ ನಿನ್ನನ್ನು ನೀನು ಸುಟ್ಟರೆ ಮಾತ್ರ ಪ್ರಕಾಶಮಾನವಾಗಿ ಜಗತ್ತಿಗೆ ಬೆಳಕನ್ನು ನೀಡಲು ಸಾಧ್ಯ. ಜಗತ್ತಿನ ಯಾವುದೇ ಕ್ರೀಡಾಪಟುಗಳು ಒಂದು ದಿನದಲ್ಲಿ ಯಶಸ್ವಿ ಆಗಲಿಲ್ಲ. ಅವಿರತ ಪ್ರಯತ್ನದಿಂದ ಮಾತ್ರ ಸಾಧನೆಯ ಮೆಟ್ಟಿಲನ್ನು ಹತ್ತಲು ಸಾಧ್ಯ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು ಹೇಳಿದರು. ಅವರು ಸಂಸ್ಥೆಯ ವಾರ್ಷಿಕ ಕ್ರೀಡಾಕೂಟದ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಸ್ಲಿಂ ಮಹಿಳೆಯರ ಅವಹೇಳನ - ಡಾ| ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು : ರಮೀಜ್ ಹುಸೇನ್
Posted On: 29-12-2023 09:24PM
ಪಡುಬಿದ್ರಿ : ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಳಿಕೆ ನೀಡಿ, ಮಹಿಳೆಯರ ಮನಸ್ಸಿಗೆ ನೋವು ಉಂಟು ಮಾಡಿದ ವಿಕೃತ ಮನಸ್ಸಿನ ಡಾ| ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಸರಕಾರಕ್ಕೆ ಮನವಿ ಮಾಡಿರುತ್ತಾರೆ.
