Updated News From Kaup

ಕುತ್ಯಾರು : ಸೂರ್ಯ ಚೈತನ್ಯ ಹೈಸ್ಕೂಲ್ - ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Thumbnail
Posted On: 15 Feb 2024, 07:15 PM

ಕುತ್ಯಾರು : ಇತ್ತೀಚಿಗೆ ಬೆಳ್ಮಣ್ ವಿಠೋಭಾ ಭಜನಾ ಮಂದಿರದಲ್ಲಿ ನಡೆದ ಬುಡೋಕಾನ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಡೋ ಇದರ ಅಂಗವಾಗಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸೂರ್ಯ ಚೈತನ್ಯ ಶಾಲೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಕೃಷ್ಣ ಆಚಾರ್, ಕುಮಿಟೆ ವಿಭಾಗದಲ್ಲಿ ಕುಮಾರಿ ಧನ್ವಿ ಪ್ರಥಮಸ್ಥಾನ , ಧನಂಜಯ ದ್ವಿತೀಯ ಸ್ಥಾನ ಹಾಗು ಶ್ರೀ ವರ್ಧನ , ಧೃತೇಶ್ , ರನ್ವಿತ್ , ಕುಮಾರಿ ಪ್ರಾಪ್ತಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವರ್ಗದವರು ಹಾಗೂ ಕರಾಟೆ ತರಬೇತುದಾರರಾದ ಸತೀಶರವರು ಅಭಿನಂದಿಸಿದ್ದಾರೆ.

ರತ್ನಾವತಿ ಕಲ್ಯಾಣ - ಕುಮಾರ ವಿಜಯ ; ಪ್ರಸಂಗನಡೆ - ರಂಗತಂತ್ರ

Thumbnail
Posted On: 15 Feb 2024, 07:05 PM

ನಂದಳಿಕೆಯ ಲಕ್ಷ್ಮೀನಾರಾಯಣಯ್ಯ ಅಂದರೆ ಮಹಾಕವಿ ಮುದ್ದಣನೆಂದೇ ಪ್ರಸಿದ್ದರು.ತನ್ನ‌ ಕಾವ್ಯ‌ ರಚನೆಯ ಪೂರ್ವಭಾವೀಯಾಗಿ ರತ್ನಾವತಿ ಕಲ್ಯಾಣ ಮತ್ತು ಕುಮಾರವಿಜಯ ಪ್ರಸಂಗಗಳನ್ನು‌‌ ಬರೆಯುವುದರ ಮೂಲಕ ಯಕ್ಷಗಾನ ಪದ್ಯರಚನೆಯಲ್ಲಿ ಒಂದು ಹೊಸಯುಗವನ್ನೇ ತೆರೆದವರು.ಪದ ಪ್ರಯೋಗ ಮತ್ತು ಹೊಸ ಛಂದಸ್ಸುಗಳ ರೀತಿ ತುಂಬಾ ಪ್ರಭಾವಿಯಾಗಿವೆ.ಈ ಎರಡು ಪ್ರಸಂಗಗಳು ಕಳೆದ ಶತಮಾನದ ಪೂರ್ವಾರ್ಧದಲ್ಲಿ ತೆಂಕು ಮತ್ತು‌ ಬಡಗು ಎರಡೂ ತಿಟ್ಟುಗಳಲ್ಲಿ ಬಹಳಷ್ಟು ಪ್ರದರ್ಶನಗೊಂಡು ತಿರಿಗಾಟದ ಮುಖ್ಯ ಪ್ರಸಂಗಗಳಾಗಿ ಪ್ರಸಿದ್ಧವಾಗಿದ್ದುವು. ಇನ್ನೊಂದು ವಿಶೇಷ ; ರತ್ನಾವತಿ ಕಲ್ಯಾಣ ಮತ್ತು ಕುಮಾರ ವಿಜಯಗಳು ಪ್ರಚಾರಕ್ಕೆ ಬಂದ ಮೇಲೆ ಭಾಗವತಿಕೆ ಪಾಠಗಳಲ್ಲಿ ಕಲಿಸುವಿಕೆಯಲ್ಲಿ ಮುಖ್ಯವಾದ ಎರಡು ಪಠ್ಯಗಳಾಗಿಯೂ ಪ್ರಸಿದ್ಧವಾಗಿದ್ದುವು. "ರತ್ನಾವತಿ ಕಲ್ಯಾಣ"ವು ಬಡಗುತಿಟ್ಟಿನವರಿಗೆ ಹಾಗೂ "ಕುಮಾರ ವಿಜಯ"ವು ತೆಂಕು‌ತಿಟ್ಟಿನವರಿಗೆ ಅನುಕೂಲ ಎಂದು ಪರಿಗಣಿತವಾಗಿ ಪ್ರದರ್ಶನಗಳಾಗುತ್ತಿದ್ದುವು, ಇವತ್ತಿಗೂ‌ ಪ್ರಶಂಸೆಗೆ ಪಾತ್ರವಾಗುತ್ತಿವೆ. ಈ ಪ್ರಸಂಗಗಳ ಯಾವ ಪದ್ಯವನ್ನೂ ಬಿಡದೆ ಹಾಡಿಸಿ ದಾಖಲಿಸಿದ ಕೆಲಸ ಎಂಟು ವರ್ಷಗಳ ಹಿಂದೆಯೇ ನಡೆದಿತ್ತು. ಕುಮಾರ ವಿಜಯದ ಏಳು ನೂರು ಪದ್ಯಗಳನ್ನು ದಿ.ಬಲಿಪ‌ನಾರಾಯಣ ಭಾಗವತರು, ತನ್ನ ಪುತ್ರ ಪ್ರಸಾದ ಬಲಿಪ ಹಾಗೂ ಶಿವಶಂಕರ ಬಲಿಪ ಮತ್ತು ಬಲಿಪರ ಸೋದರಳಿಯ ಗೋಪಾಲಕೃಷ್ಣ ಭಾಗವತರೊಂದಿಗೆ ಹಾಡಿದ್ದಾರೆ. ಪ್ರಾರಂಭದಿಂದ ಅಂತ್ಯದವರೆಗೆ ರಂಗನಡೆ ಹಾಗೂ‌‌ ರಂಗ ತಂತ್ರಕ್ಕನುಗುಣವಾಗಿ ನುಡಿತಗಳಿವೆ. ಪ್ರಸಂಗ ಪ್ರದರ್ಶನವನ್ನು ನೋಡಿದ ಅನುಭವವು‌ ಕೇಳುಗನಿಗೆ ಆಗುವಂತಿದೆ.ಇದಕ್ಕೆ ದಿ.ಬಲಿಪರು ಸ್ವತಃ‌ಬರೆದ ರಂಗ ಟಿಪ್ಪಣೆ ಇರುವ ಪುಸ್ತಕ "ರತ್ನಾವತಿಕಲ್ಯಾಣ - ಕುಮಾರವಿಜಯ ; ಪ್ರಸಂಗನಡೆ - ರಂಗತಂತ್ರ" ಗಮನಿಸಬಹುದು. ಬಡಗುತಿಟ್ಟಿನ ಭಾಗವತರಾದ ವಿದ್ವಾನ್ ಗಣಪತಿ ಭಟ್ ಹಾಗೂ ಹೆರಂಜಾಲು ಗೋಪಾಲ ಗಾಣಿಗ ಅವರು ಜೊತೆಯಾಗಿರತ್ನಾವತಿ ಕಲ್ಯಾಣ ಪ್ರಸಂಗಕ್ಜಾಗಿ ಹಾಡಿದ್ದಾರೆ.ಗೋಪಾಲ ಗಾಣಿಗ ಹಾಗೂ ನಿತ್ಯಾನಂದ ಹೆಬ್ಬಾರ್ ಅವರು ಬರೆದಿರು ರಂಗಟಿಪ್ಪಣಿಯು ಈಪುಸ್ತಕದಲ್ಲಿ ದಾಖಲಾಗಿದೆ.ಕುಮಾರವಿಜಯದಂತೆಯೇ ಈ‌ ಪ್ರಸಂಗದ ಧ್ವನಿ ಮುದ್ರಣ ನಡೆದಿದೆ. ಲಕವಿ ಮುದ್ದಣನ ಬಗ್ಗೆ, ಬಲಿಪ ಭಾಗವತರ ಬಗ್ಗೆ ಯಕ್ಷಗಾನ ವಿದ್ವಾಂಸರು ಬರೆದ ಪ್ರತಿಕ್ರಿಯೆಗಳೂ ಸಂದೇಶದ ರೂಪದಲ್ಲಿ ಈ ಪುಸ್ತಕ‌ ಒಳಗೊಂಡಿದೆ. ಅಭ್ಯಾಸ ಮಾಡುವ ಭಾಗವತರಿಗೆ,ಈ ಎರಡು ಪ್ರಸಂಗಗಳ ಪ್ರಯೋಗ ವಿಧಾನವನ್ನು ತಿಳಿಯಬೇಕೆಂಬ ಆಸಕ್ತರಿಗೆ ಈ ಪುಸ್ತಕ ಹಾಗೂ ಧ್ವನಿ ಮುದ್ರಣ ಮಾರ್ಗದಶಿಯಾಗಲಿದೆ. ಬಲಿಪರ ಪರಂಪರೆ ಹಾಗೂ ಬಡಗುತಿಟ್ಟಿನ ಒಂದುಕಾಲದ ಸಂಪ್ರದಾಯವು ದ್ವನಿಮುದ್ರಣದಲ್ಲ ಅಡಕವಾಗಿದೆ. ಸುಶ್ರಾವ್ಯವಾದ ಯಕ್ಷಗಾನ ಹಾಡುಗಾರಿಕೆ ಪರಂಪರೆಯ ಚೌಕಟ್ಟಿನೊಳಗೆ ಮೂಡಿಬಂದಿದೆ. ಫೆ.17 ರಂದು ಮೂಡುಬಿದ್ರಿಯ ಅಲಂಗಾರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧ್ವನಿ‌ಮುದ್ರಣ ಹಾಗೂ ಪುಸ್ತಕ ಲೋಕಾರ್ಪಣೆಯಾಗಲಿದೆ ಎಂದು ನಂದಳಿಕೆಯ ಮುದ್ದಣ ಪ್ರಕಾಶನ‌ದ ಅಧ್ಯಕ್ಷ ನಂದಳಿಕೆ ಬಾಲಚಂದ್ರರಾವ್ ಹಾಗೂ‌ ಬಲಿಪಗಾನಯಾನದ ಚಂದ್ರಶೇಖರ ಭಟ್ ಕೊಂಕಣಾಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.17 : ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ

Thumbnail
Posted On: 15 Feb 2024, 06:05 PM

ಕಾಪು : ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮುಂಭಾಗದ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯಕುಮಾರ್ ಸೊರಕೆ ತಿಳಿಸಿದರು ಕಾಪು ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಭಾಗಿತ್ವದಲ್ಲಿ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಹಕಾರದಿಂದ ಈ ಕಾರ್ಯಕ್ರಮ ನಡೆಯಲಿದೆ. ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲಾ ಹಂತದ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಶನಿವಾರ ಅಪರಾಹ್ನ 2ಗಂಟೆಯಿಂದ ಪ್ರಾರಂಭಗೊಳ್ಳುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯ ಕ್ರಮದಲ್ಲಿ ಎಐಸಿಸಿ ಪ್ರ. ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜವಾಲ, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ಮುಖಂಡರಾದ ರೋಜಿ ಜೋನ್, ಸಲೀಂ ಅಹ್ಮದ್, ಸಚಿವರು, ಪಕ್ಷದ ಶಾಸಕರು, ಮುಖಂಡರೆಲ್ಲರೂ ಭಾಗವಹಿಸಲಿದ್ದಾರೆ ಎಂದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ತೆಕ್ಕೆಗೆ ಮರಳಿ ಪಡೆಯುವ ಗುರಿಯೊಂದಿಗೆ ರಾಜ್ಯ ಮಟ್ಟದ ಸಮಾವೇಶವನ್ನು ಮಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಬೂತ್ ಮಟ್ಟದಿಂದಲೇ ಸಮಿತಿಗಳನ್ನು ರಚಿಸಲಾಗುವುದು ಎಂದು ಸೊರಕೆ ವಿವರಿಸಿದರು. ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾಪುವಿನಿಂದ ಹೊರಟು, 11 ಗಂಟೆಗೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಹೆಜಮಾಡಿ ಟೋಲ್‌ನಲ್ಲಿ ಜತೆ ಸೇರಲಿದ್ದಾರೆ. ಅಲ್ಲಿಂದ 300ಕ್ಕೂ ಅಧಿಕ ಬಸ್‌ಗಳ ಮೂಲಕವಾಗಿ ಕಾರ್ಯಕರ್ತರು ಸಮಾವೇಶದ ಮೈದಾನದವರೆಗೆ ತೆರಳಲಿದ್ದಾರೆ. ರಾಜ್ಯದಾದ್ಯಂತ ಒಂದು ಲಕ್ಷಕ್ಕೂ ಅಧಿಕ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಮಾವೇಶದಲ್ಲಿ ಪಾಲ್ಗೊ ಳ್ಳುವ ನಿರೀಕ್ಷೆ ಇದೆ ಎಂದ ಸೊರಕೆ, ಪಕ್ಷದ ಸಾಧನೆ ಹಾಗೂ ಮುಂದಿನ ಯೋಜನೆಗಳನ್ನು ಈ ಸಮಯದಲ್ಲಿ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು. ಉಡುಪಿ ಜಿಲ್ಲೆಯ ಪ್ರತಿ ಬೂತ್ ಮಟ್ಟದಿಂದ ಕನಿಷ್ಠ ತಲಾ 20 ಮಂದಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಈ ಮೂಲಕ ಜಿಲ್ಲೆಯಿಂದ ಒಟ್ಟು ಕನಿಷ್ಠ 15,000 ಮಂದಿ ಕಾಂಗ್ರೆಸಿಗರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯನ್ನು ಹೊಂದಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಉತ್ತರ ಬ್ಲಾಕ್ ಅಧ್ಯಕ್ಷ ಸಂತೋಷ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಬಂಗೇರ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪುರ್ಟಾಡೋ ಉಪಸ್ಥಿತರಿದ್ದರು.

ಶಿರ್ವ : ಹಿಂದು ಪ್ರೌಢಶಾಲೆ ಮತ್ತು ಸ.ಹಿ.ಪ್ರಾ.ಶಾಲೆ ಕೈರಬೆಟ್ಟುಗೆ ವಾಟರ್ ಕೂಲರ್‌ ಕೊಡುಗೆ

Thumbnail
Posted On: 15 Feb 2024, 05:56 PM

ಶಿರ್ವ : ಇಲ್ಲಿನ ಹಿಂದು ಪ್ರೌಢಶಾಲೆ ಹಾಗೂ ಸ.ಹಿ.ಪ್ರಾ.ಶಾಲೆ ಕೈರಬೆಟ್ಟುವಿನ ಹಳೆ ವಿದ್ಯಾರ್ಥಿ ದಿವಂಗತ ಕುಮಾರ್ ಟಿ. ಸುವರ್ಣ ಮತ್ತು ಅವರ ಪತ್ನಿ ದಿವಂಗತ ಹೇಮಾವತಿ ಕೆ. ಸುವರ್ಣ ಸ್ಮರಣಾರ್ಥ ಅವರ ಮಕ್ಕಳು ವಿದ್ಯಾರ್ಥಿಗಳ ಉಪಯೋಗಕ್ಕಾಗಿ 45 ಸಾವಿರ ರೂ. ಮೌಲ್ಯದ ವಾಟರ್ ಕೂಲರನ್ನು ಸೋಮವಾರ ಹಸ್ತಾಂತರಿಸಿದರು. ಈ ಸಂಧರ್ಭ ಅವರ ಮಕ್ಕಳಾದ ಸುನಿಲ್ ಕೆ.ಸುವರ್ಣ, ಸುಧೀರ್ ಕೆ. ಸುವರ್ಣ, ಸುಜಿತ್ ಸುವರ್ಣ, ಮಗಳು ಸುನಿತಾ ಕೆ. ಕೋಟ್ಯಾನ್, ಮತ್ತು ಅಳಿಯ ಶೇಖರ್ ಕೋಟ್ಯಾನ್, ಕುಟುಂಬಿಕರಾದ ಲಕ್ಷ್ಮಣ ಸುವರ್ಣ, ಶೇಖರ್ ಕೋಟ್ಯಾನ್, ಸುಜನ್.ಎಲ್.ಸುವರ್ಣ, ಶಾಲೆಯ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಹರೀಶ್ ಕೋಟ್ಯಾನ್, ಉಪಾಧ್ಯಕ್ಷೆಯಾದ ಸರಿತಾ ನಾಯ್ಕ್, ಸದಸ್ಯರಾದ ನಾಗೇಶ್ ಆಚಾರ್ಯ, ಶಕುಂತಳಾ, ಮಮತಾ ನಾಯ್ಕ್, ಹಿರಿಯ ಸಹಶಿಕ್ಷಕಿಯಾದ ಶಶಿಕಲಾ.ಹೆಚ್, ಅತಿಥಿ ಶಿಕ್ಷಕರಾದ ಸ್ವಾತಿ ಆಚಾರ್ಯ, ಅಡುಗೆ ಸಿಬ್ಬಂದಿಗಳಾದ ಪ್ರೇಮ ಮತ್ತು ಲಲಿತಾ, ಕಾಲೇಜಿನ ಪ್ರಿನ್ಸಿಪಾಲ್ ಭಾಸ್ಕರ ಎ. ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಬಾಯಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದ ಶಶಿಕಲಾ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕಿಯಾದ ಕುಮುದಾ ವಂದಿಸಿದರು. ಗೌರವ ಶಿಕ್ಷಕಿಯಾದ ಸವಿತಾ ಕಾರ್ಯಕ್ರಮ ನಿರೂಪಿಸಿದರು.

ಫೆಬ್ರವರಿ 18 : ಕುತ್ಯಾರು ಕುಲಾಲ ಸಂಘದ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ

Thumbnail
Posted On: 15 Feb 2024, 09:43 AM

ಕಾಪು : ತಾಲೂಕಿನ ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಆಯೋಜನೆಯಲ್ಲಿ ಫೆಬ್ರವರಿ 18 ರಂದು ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ, ಅನ್ನ ಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಸಭೆಯು ಕುತ್ಯಾರು ರಾಮೊಟ್ಟು ಬನತೊಡಿ ಗದ್ದೆಯಲ್ಲಿ ನಡೆಯಲಿದೆ ಎಂದು ಕುತ್ಯಾರು ಕುಲಾಲ ಸಂಘದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.

ಉಡುಪಿ : ಶ್ರೀ ಸಾಯಿ ಮುಖ್ಯ ಪ್ರಾಣ ದೇವಸ್ಥಾನ ದ್ವಾರಕಾಮಾಯಿ ಮಠ ಶ್ರೀ ಕ್ಷೇತ್ರ ಶಂಕರಪುರ - ಪುಲ್ವಾಮಾ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ

Thumbnail
Posted On: 14 Feb 2024, 05:10 PM

ಉಡುಪಿ : ಶ್ರೀ ಸಾಯಿ ಮುಖ್ಯ ಪ್ರಾಣ ದೇವಸ್ಥಾನ ದ್ವಾರಕಾಮಾಯಿ ಮಠ ಶ್ರೀ ಕ್ಷೇತ್ರ ಶಂಕರಪುರ ವತಿಯಿಂದ ಪುಲ್ವಾಮಾ ದಾಳಿಯ 5ನೇ ವರ್ಷಾಚರಣೆ ಅಂಗವಾಗಿ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಅಜ್ಜರಕಾಡು ಯುದ್ಧ ಸ್ಮಾರಕ ಬಳಿ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಶಂಕರಪುರ ಸಾಯಿ ಮುಖ್ಯಪ್ರಾಣ ದೇವಾಲಯದ ಶ್ರೀ ಸಾಯಿ ಈಶ್ವರ ಗುರೂಜಿ ಮಾತನಾಡಿ ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆ ಮಾಡುವುದು ಸರಿಯಲ್ಲ. ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನು ಅಪ್ಪಿದ 40 ಜನ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್ ಹವಾಲ್ದಾರ್ ಮುರಳಿದರ್ .ಕೆ, ಸಿ.ಆರ್.ಪಿ.ಎಫ್ ಎ.ಎಸ್.ಐ ಕೇಶವ ಆಚಾರ್ಯ, ಉಡುಪಿ ಜಿಲ್ಲಾ ಹಿಂದೂ ಮಹಾಸಭಾ ಅಧ್ಯಕ್ಷರು ಸಂತೋಷ್ ಉದ್ಯಾವರ, ರಾಘವೇಂದ್ರ ಭಕ್ತ, ಸುಧಾಕರ್ ಶೆಟ್ಟಿ, ರಾಘವೇಂದ್ರ ಪ್ರಭು ಕವಾ೯ಲು, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ.ಎಸ್. ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಜಗದೀಶ್ ಶೆಟ್ಟಿ, ಉದಯ ನಾಯ್ಕ್, ವಿಜಯ ಕುಂದರ್, ವಾರಿಜ ಕಲ್ಮಾಡಿ, ಸತೀಶ್, ವಿಘ್ನೇಶ್, ಪ್ರದೀಪ್, ನೀಲೇಶ್, ಅಜಯ್, ಸುದರ್ಶನ್, ಸುಪ್ರೀತಾ, ಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸಿ.ಆರ್.ಪಿ.ಎಫ್ ಹವಾಲ್ದಾರ್ ಮುರಳಿದರ್ .ಕೆ, ಸಿ.ಆರ್.ಪಿ.ಎಫ್ ಎ.ಎಸ್.ಐ ಕೇಶವ ಆಚಾರ್ಯ, ಉಡುಪಿ ಜಿಲ್ಲಾ ಹಿಂದೂ ಮಹಾಸಭಾ ಅಧ್ಯಕ್ಷರು ಸಂತೋಷ್ ಉದ್ಯಾವರ, ರಾಘವೇಂದ್ರ ಭಕ್ತ, ಸುಧಾಕರ್ ಶೆಟ್ಟಿ, ರಾಘವೇಂದ್ರ ಪ್ರಭು ಕವಾ೯ಲು, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ.ಎಸ್. ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಜಗದೀಶ್ ಶೆಟ್ಟಿ, ಉದಯ ನಾಯ್ಕ್, ವಿಜಯ ಕುಂದರ್, ವಾರಿಜ ಕಲ್ಮಾಡಿ, ಸತೀಶ್, ವಿಘ್ನೇಶ್, ಪ್ರದೀಪ್, ನೀಲೇಶ್, ಅಜಯ್, ಸುದರ್ಶನ್, ಸುಪ್ರೀತಾ, ಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

ಖಾರ್ಲಾಂಡ್ ಯೋಜನೆಯಡಿಯಲ್ಲಿ ಅನುದಾನ ಮಂಜೂರು ಮಾಡಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರಸ್ತಾವನೆ

Thumbnail
Posted On: 14 Feb 2024, 12:43 PM

ಕಾಪು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾಪು ತಾಲೂಕು ಕೈಪುಂಜಾಲು, ಉಳಿಯಾರಗೋಳಿ, ಮಟ್ಟು ಆಳಿಂಜೆ, ತೆಂಕು ಕೊಪ್ಪಳ, ಬಡಗು ಕೊಪ್ಪಳ, ಕಲ್ತಟ್ಟ ಹಾಗೂ ದಡ್ಡಿ ಎಂಬಲ್ಲಿ ಪಾಂಗಾಳ ನದಿದಂಡೆಯ ಕೊರೆತಕ್ಕೊಳಗಾದ ಆಯ್ದ ಭಾಗಗಳಲ್ಲಿ ಖಾರ್ಲಾಂಡ್ ನಿರ್ಮಾಣ ಕಾಮಗಾರಿಯು ತೀರಾ ಅತ್ಯವಶ್ಯಕವಿರುತ್ತದೆ. ಈ ಭಾಗದಲ್ಲಿ ಜಿ.ಐ ಟ್ಯಾಗ್ ಮಾನ್ಯತೆ ಹೊಂದಿದ ಮಟ್ಟುಗುಳ್ಳ ವಿಭಿನ್ನ ತರಕಾರಿ ಬೆಳೆಯಾಗಿದ್ದು, ಬಹು ಬೇಡಿಕೆಯದ್ದಾಗಿರುತ್ತದೆ. ಅಷ್ಟ ಮಠದ ಪ್ರಮುಖ ಯತಿಗಳಾದ ವಾದಿರಾಜ ಸ್ವಾಮೀಗಳು ಪ್ರಸಾದ ರೂಪದಲ್ಲಿ ನೀಡಿದ ದಿವ್ಯ ಸ್ವರೂಪದ ಬೀಜವನ್ನು ಬಿತ್ತಿದ ಪ್ರದೇಶವಾಗಿರುತ್ತದೆ ಎಂಬ ಐತಿಹ್ಯವಿದೆ. ಮಟ್ಟುಗುಳ್ಳ ಬೆಳೆಗಾರರು ಇಂದಿಗೂ ಉಡುಪಿಯ ಪರ್ಯಾಯ ಮಹೋತ್ಸವಕ್ಕೆ ಮಟ್ಟುಗುಳ್ಳ ತರಕಾರಿಯನ್ನು ಹೊರೆಕಾಣಿಕೆಯ ರೂಪದಲ್ಲಿ ನೀಡುತ್ತಾ ಬಂದಿರುತ್ತಾರೆ. ಅಲ್ಲದೇ ಸದ್ರಿ ಪ್ರದೇಶದಲ್ಲಿನ ತೆಂಗು ಬೆಳೆಯು ಹಾನಿಯಾಗಿರುತ್ತದೆ. ಆದ್ದರಿಂದ ಕೆಳಗಿನ ಪ್ರದೇಶಗಳಲ್ಲಿ ಪಾಂಗಾಳ ನದಿಗೆ ಖಾರ್ಲಾಂಡ್ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅನುದಾನ ಮಂಜೂರು ಮಾಡುವಂತೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸದನದ ಗಮನ ಸೆಳೆದರು.

ಫೆ. 18 : ಪಡುಬಿದ್ರಿ ಸಿ.ಎ.ಸೊಸೈಟಿ - ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನೆ

Thumbnail
Posted On: 14 Feb 2024, 11:23 AM

ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಬ್ಯಾಂಕಿಂಗ್ ಸೊಸೈಟಿಯಾಗಿ ಹೆಗ್ಗಳಿಕೆ ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನವೀಕರಣಗೊಂಡ ಹವಾನಿಯಂತ್ರಿತ ಹೆಜಮಾಡಿ ಶಾಖೆಯು ಫೆಬ್ರವರಿ 18, ಭಾನುವಾರ ಉದ್ಘಾಟನೆಗೊಳ್ಳಲಿದೆ ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಬುಧವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಕೇಂದ್ರ ಕಚೇರಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬೆಳಿಗ್ಗೆ 10 ಗಂಟೆಗೆ ಬ್ಯಾಂಕಿಂಗ್ ಕಟ್ಟಡವನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು. ಟಿ. ಖಾದರ್ ಉದ್ಘಾಟಿಸಲಿದ್ದು, ಪಡುಬಿದ್ರಿ ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಬಲೀಕರಣ ಇಲಾಖಾ ಸಚಿವರಾದ ಲಕ್ಷ್ಮೀ ಹೆಬ್ಬಾಳ್ವರ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸುವರು. ಸ್ಥಳೀಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ, ಬೆಂಗಳೂರು ಇದರ ನಿರ್ದೇಶಕ ಬಿ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು, ನಿರ್ದೇಶಕ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದರು. ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಾಪು ದಿವಾಕರ ಶೆಟ್ಟಿ, ಶೈಕ್ಷಣಿಕ ಸಾಧಕಿ ಡಾ. ಹರ್ಷಿತ ಎನ್. ಅಂಚನ್, ಕ್ರೀಡಾ ಸಾಧಕ ಧನುಷ್ ಎಸ್. ಸಾಲ್ಯಾನ್‌ರನ್ನು ಸನ್ಮಾನಿಸಲಾಗುವುದು. ಸೊಸೈಟಿ ವ್ಯಾಪ್ತಿಯ ಕರಾವಳಿಯನ್ನು ನಿರಂತರವಾಗಿ ಸ್ವಚ್ಛಗೊಳಿಸಿ ಉತ್ತಮ ಸಮಾಜ ಸೇವೆಗೈಯ್ಯುತ್ತಿರುವ ಹೆಜಮಾಡಿ ಕರಾವಳಿ ಯುವಕ ಯುವತಿ ವೃಂದ ಮತ್ತು ಪಡುಬಿದ್ರಿ ನಡಿಪಟ್ನ ಕರಾವಳಿ ಸ್ಟಾರ್ ಸಂಸ್ಥೆಗಳಿಗೆ ಸ್ವಚ್ಚತಾ ಪರಿಕರಗಳನ್ನು ವಿತರಿಸಲಾಗುವುದು. ಫೆ. 5 ರಿಂದ ಮಾರ್ಚ್ ಅಂತ್ಯದವರೆಗೆ ಸೊಸೈಟಿಯಲ್ಲಿ ಠೇವಣಿ ವಿನಿಯೋಗಿಸುವ ಠೇವಣಿದಾರರಿಗೆ ಹಾಗೂ ಚಿನ್ನಾಭರಣ ಸಾಲ ಪಡೆಯುವ ಸಾಲಗಾರರಿಗೆ ಲಕ್ಕಿ ಕೂಪನ್ ವಿತರಿಸಲಾಗುತ್ತಿದ್ದು, ಉದ್ಘಾಟನಾ ಸಮಾರಂಭದಂದು ಲಕ್ಕಿ ಕೂಪನ್‌ಗಳ ಡ್ರಾ ಮೂಲಕ 10 ವಿಜೇತರನ್ನು ಗಣ್ಯರು ಆಯ್ಕೆ ಮಾಡಲಿದ್ದಾರೆ. ಮಾರ್ಚ್ 31 ರವರೆಗೆ ಈ ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 3 ರಂದು ವಿಜೇತರನ್ನು ಆಯ್ಕೆಮಾಡಿ ಬಹುಮಾನ ನೀಡಲಾಗುವುದು. ಅತ್ಯಾಧುನಿಕ ಭದ್ರತಾ ಕೊಠಡಿ, ನವೀಕೃತ ಹೆಜಮಾಡಿ ಶಾಖೆಯಲ್ಲಿ ಅತ್ಯಾಧುನಿಕ ಹಾಗೂ ಬೃಹತ್ ಗಾತ್ರದ ಭದ್ರತಾ ಕೊಠಡಿ ಅಳವಡಿಸಲಾಗಿದ್ದು, ಭದ್ರತಾ ಕೊಠಡಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಕಾರ್ಯನಿರ್ವಹಣಾಧಿಕಾರಿ ನಿಶ್ಮಿತ ಪಿ.ಎಚ್, ನಿರ್ದೇಶಕರುಗಳು ಉಪಸ್ಥಿತರಿದ್ದರು.

ಕಾಪು : ನಿದ್ದೆಯಲ್ಲಿದ್ದ ವ್ಯಕ್ತಿಯನ್ನು ಸ್ಕೂಟರಿನಿಂದ ಕೆಳಗಿಳಿಸಿ ಸ್ಕೂಟರ್ ಸಮೇತ ದಾಖಲೆಗಳ ಕಳವು

Thumbnail
Posted On: 13 Feb 2024, 11:20 PM

ಕಾಪು : ಸ್ಕೂಟರ್ ನಲ್ಲಿ ಸಂಚರಿಸುತ್ತಿರುವ ಸಂದರ್ಭ ನಿದ್ರೆ ಬಂದ ಕಾರಣ ಸ್ಕೂಟರ್ ನಿಲ್ಲಿಸಿ ಮಲಗಿದ್ದ ವ್ಯಕ್ತಿ ಎಚ್ಚರವಾದಾಗ ಸ್ಕೂಟರ್ ಸಮೇತ ತನ್ನೆಲ್ಲಾ ಸೊತ್ತುಗಳನ್ನು ಕಳೆದುಕೊಂಡು ರಸ್ತೆ ಬದಿಯಲ್ಲಿ ಮಲಗಿದ್ದ ಘಟನೆ ಭಾನುವಾರ ತಡರಾತ್ರಿ ಕಾಪು ಸಮೀಪದ ಕೊಪ್ಪಲಂಗಡಿ ಬಳಿ ನಡೆದಿದೆ. ಕಾರ್ಕಳ ಮುಡಾರು ನಿವಾಸಿ ಚೇತನ್‌ ಎಂಬುವವರು ರಾತ್ರಿ ಸುರತ್ಕಲ್‌ ಕಡೆ ತೆರಳುವ ಸಂದರ್ಭ ರಾತ್ರಿ 12 ಗಂಟೆ ಸಮಯಕ್ಕೆ ಕೊಪ್ಪಲಂಗಡಿ ಬಳಿ ತಲುಪುತ್ತಿದ್ದಂತೆ ಸ್ಕೂಟರ್‌ ಸವಾರಿ ಮಾಡಲು ಕಷ್ಟವಾಗಿದ್ದುದರಿಂದ ತನ್ನ ಸ್ಕೂಟರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಸ್ಕೂಟರಿನಲ್ಲಿ ತಲೆ ಇಟ್ಟು ಮಲಗಿದ್ದು ನಂತರ ಬೆಳಿಗ್ಗೆ 02:30 ಗಂಟೆಗೆ ಎಚ್ಚರವಾದಾಗ ಹೆಲ್ಮೆಟ್‌ ಸಮೇತ ರಸ್ತೆ ಬದಿ ಮಲಗಿದ್ದು ಅವರ ಸ್ಕೂಟರ್‌, ಮೊಬೈಲ್‌, ಪರ್ಸ್‌ ಎಲ್ಲವೂ ಕಳವಾಗಿತ್ತು. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ - ಜಿಲ್ಲಾಧಿಕಾರಿಗೆ ಮನವಿ

Thumbnail
Posted On: 13 Feb 2024, 06:53 PM

ಉಡುಪಿ : ಪರಿಸ್ಥಿತಿಯ ಒತ್ತಡಕ್ಕೆ ಅಥವಾ ವಿವಿಧ ಕಾರಣಗಳಿಗಾಗಿ ತಪ್ಪು ಮಾಡಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಸಕಾ೯ರಿ ಜುಲ್ಮಾನೆ ಕಟ್ಟಲು ಸಾಧ್ಯವಿಲ್ಲದೆ ಜೀವನ ಪೂತಿ೯ ಜೈಲಿನಲ್ಲಿ ಯಾತನೆ ಅನುಭವಿಸುವವರು ಬಹಳಷ್ಟು ಮಂದಿ ಇದ್ದು ಇವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅನುವು ಮಾಡಬೇಕೆಂದು ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಜಿಲ್ಲಾಧಿಕಾರಿ ಡಾI ವಿದ್ಯಾ ಕುಮಾರಿಯವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಈ ಸಂದಭ೯ದಲ್ಲಿ ಡಾ.ಶಶಿಕಿರಣ್ ಶೆಟ್ಟಿ, ಉದಯ್ ನಾಯ್ಕ್, ಸುಜಯ ಶೆಟ್ಟಿ, ಸುಂದರ್ ಪೂಜಾರಿ, ರಾಘವೇಂದ್ರ ಪ್ರಭು ಕವಾ೯ಲು, ರಮೇಶ ಮುಂತಾದವರಿದ್ದರು.