Updated News From Kaup
ಮಂಗಳೂರು - ಉಡುಪಿ ನಡುವೆ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ಸು ಸಂಚಾರ ಪ್ರಾರಂಭಕ್ಕೆ ಜಯರಾಮ ಆಚಾರ್ಯ ಕಾಪು ಆಗ್ರಹ
Posted On: 29-07-2025 09:20AM
ಕಾಪು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮಂಗಳೂರು ಮತ್ತು ಉಡುಪಿ ನಡುವೆ (ಪರಿಸರ ಸ್ನೇಹಿ)ಎಲೆಕ್ಟ್ರಿಕ್ ಬಸ್ಸು ಸಂಚಾರ ಪ್ರಾರಂಭಿಸಲು ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ ಕಾಪು ಆಗ್ರಹಿಸಿದ್ದಾರೆ.
ಉದ್ಯಮಿ ನಿಶಾಂತ್ ವಿ. ಅಂಚನ್ ಅವರಿಗೆ ಸಾಧನಾಶ್ರೀ ಪುರಸ್ಕಾರ
Posted On: 29-07-2025 08:59AM
ಕಾಪು : ಜೇಸಿಐ ಮಡಂತ್ಯಾರು ಘಟಕದ ಆಶ್ರಯದಲ್ಲಿ ರವಿವಾರ ನಡೆದ ವಲಯ 15ರ "ಮೃದಂಗ" ವ್ಯವಹಾರ ಸಮ್ಮೇಳನದಲ್ಲಿ ಜೇಸಿಐ ಮುಂಡ್ಕೂರು ಭಾರ್ಗವ ಘಟಕದ ಉಪಾಧ್ಯಕ್ಷ, ಉದ್ಯಮಿ ನಿಶಾಂತ್ ವಿ. ಅಂಚನ್ ಅವರನ್ನು ಜೇಸಿಐ ಸಾಧನಾಶ್ರೀ ಪುರಸ್ಕಾರದೊಂದಿಗೆ ಗೌರವಿಸಲಾಯಿತು.
ಕಾಪು : ಹೇರೂರು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ರಾಜೇಶ್ ಐ ದೇವಾಡಿಗ ಹೇರೂರು ಆಯ್ಕೆ
Posted On: 29-07-2025 08:57AM
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ಗ್ರಾಮದ ಹೇರೂರು ಫ್ರೆಂಡ್ಸ್ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ತುಳು ನಾಟಕ ಬರಹಗಾರ ರಾಜೇಶ್ ಐ ದೇವಾಡಿಗ ಇವರು ಅವಿರೋಧವಾಗಿ ಆಯ್ಕೆಯಾಗಿದ್ಧಾರೆ. ಕಾರ್ಯದರ್ಶಿಯಾಗಿ ಸುಮಿತ್ ಶೆಟ್ಟಿ, ಕೋಶಾಧಿಕಾರಿಯಾಗಿ ಸುಧೀರ್ ಆಯ್ಕೆಯಾಗಿರುತ್ತಾರೆ.
ಕಾಲಾವಧಿ ಆಟಿ ಮಾರಿಪೂಜೆ : ಹರಕೆ ಕೋಳಿ ಸಮರ್ಪಣೆ ಕುರಿತು ಸ್ಪಷ್ಟೀಕರಣ
Posted On: 28-07-2025 07:30PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 2025ರ ಜುಲೈ 29 ಮತ್ತು 30ರಂದು ನಡೆಯಲಿರುವ ಕಾಲಾವಧಿ ಆಟಿ ಮಾರಿಪೂಜೆಯಲ್ಲಿ ಹರಕೆ ಕೋಳಿ ಸಮರ್ಪಿಸುವ ಬಗ್ಗೆ ಭಕ್ತರಿಗೆ ಸಾಮಾಜಿಕ ಜಾಲತಾಣದಲ್ಲಿ ಗೊಂದಲ ಏರ್ಪಟ್ಟಿದ್ದು, ಈ ಹಿಂದೆ ತಾಯಿ ಮಾರಿಯಮ್ಮನಿಂದ ಊರಿನ ಕೋಳಿ ಹರಕೆಯಾಗಿ ಸಮರ್ಪಿಸುವ ಬಗ್ಗೆ ವಾಕ್ಷ್ಯ ಆಗಿದ್ದರೂ ಸಹ ಆಟಿ ಮಾರಿಪೂಜೆಯಲ್ಲಿ ಈ ಹಿಂದಿನಂತೆಯೇ ಹರಕೆಯ ಕೋಳಿಯನ್ನು ಸಮರ್ಪಿಸಬಹುದಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇವರು ಸ್ಪಷ್ಟೀಕರಣ ನೀಡಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ
Posted On: 26-07-2025 08:11PM
ಕಾಪು : ಅಮೆರಿಕಾದ ಬೋಸ್ಟನ್ ನಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಭಾರತೀಯ ಕ್ರಿಕೆಟ್ ಆಟಗಾರ ತನುಷ್ ಕೋಟ್ಯಾನ್ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ
Posted On: 26-07-2025 08:05PM
ಕಾಪು : ಭಾರತೀಯ ಕ್ರಿಕೆಟ್ ಆಟಗಾರ, ಮುಂಬೈ ತಂಡದಲ್ಲಿ ಮತ್ತು ಐಪಿಎಲ್ ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಟಗಾರನಾಗಿ ಗುರುತಿಸಿಕೊಂಡಿದ್ದ ಕಾಪುವಿನ ಪಾಂಗಾಳ ಮೂಲದ ತನುಷ್ ಕೋಟ್ಯಾನ್ ಇಂದು ಕಾಪು ಮಾರಿಯಮ್ಮನ ದರುಶನ ಪಡೆದರು.
ಕಾಪು ದಂಡತೀರ್ಥ ಪ.ಪೂ. ಕಾಲೇಜು : ಪ್ರತಿಭಾನ್ವೇಷಣ ಕಾರ್ಯಕ್ರಮ
Posted On: 26-07-2025 04:45PM
ಕಾಪು : ಇಲ್ಲಿನ ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮವು ಶನಿವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಮಾರಂಭವನ್ನು ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಿ ತಮ್ಮ ಕಲಾ ಪ್ರೌಢಿಮೆಯನ್ನು ಅನಾವರಣಗೊಳಿಸಬೇಕು. ಪ್ರಸ್ತುತ ವಿದ್ಯಾರ್ಥಿ ಸಮೂಹ ದುಶ್ಚಟಗಳಲ್ಲಿ ತೊಡಗಿ ತಮ್ಮ ಸುಂದರ ಭವಿಷ್ಯವನ್ನು ನಾಶಪಡಿಸುತ್ತಿರುವುದು ದುಃಖಕರ. ಹಾಗಾಗಿ ವಿದ್ಯಾರ್ಥಿಗಳು ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೀವನದ ಪರಿಪೂರ್ಣತೆಯ ಕಡೆಗೆ ಸಾಗಬೇಕೆಂಬ ಸಂದೇಶವನ್ನು ನೀಡಿದರು.
ಇನ್ನಂಜೆ ಎಸ್ ವಿ ಎಚ್ ಪ.ಪೂ.ಕಾಲೇಜಿನ ನವೀಕೃತ ಭೌತಶಾಸ್ತ್ರ ಪ್ರಯೋಗಾಲಯ ಉದ್ಘಾಟನೆ
Posted On: 26-07-2025 01:51PM
ಕಾಪು : ಎಸ್.ವಿ.ಹೆಚ್ ಪದವಿ ಪೂರ್ವ ಕಾಲೇಜು ಇನ್ನಂಜೆಯ ನವೀಕೃತ ಭೌತಶಾಸ್ತ್ರ ಪ್ರಯೋಗಾಲಯವನ್ನು ಸಂಸ್ಥೆಯ ಹಳೆ ವಿದ್ಯಾರ್ಥಿ ಡಾ||ಲಕ್ಷೀಕಾಂತ್ ಭಟ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಭಾರತ ಎಲ್ಲಾ ಕ್ಷೇತ್ರಗಳಲ್ಲೂ ವೇಗವಾಗಿ ಬೆಳೆಯುತ್ತಿದ್ದು ಇದಕ್ಕೆ ಪೂರಕವಾಗಿ ಕೌಶಲ್ಯಗಳನ್ನು ವಿದ್ಯಾರ್ಥಿಗಳು ವಿದ್ಯಾಬ್ಯಾಸದ ಜೊತೆಗೆ ರೂಢಿಸಿಕೊಳ್ಳಬೇಕು, ಅಂಕಗಳ ಜೊತೆಗೆ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಕೌಶಲ್ಯಗಳನ್ನು ಬಳಸಿದಾಗ ಮಾತ್ರ ಅತ್ಯುತ್ತಮ ಅವಕಾಶಗಳನ್ನು ಪಡೆದುಕೊಳ್ಳಬಹುದು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜೀವನದಲ್ಲಿ ಸ್ವಷ್ಟವಾದ ಗುರಿಯನ್ನು ಇಟ್ಟು ಕಠಿಣ ಪರಿಶ್ರಮದಿಂದ ಮುನ್ನಡೆಯಬೇಕು ಎಂದರು.
ಜುಲೈ 27ರಂದು ಅಯೋಜಿಸಿರುವ ಗಾನ ಕೋಗಿಲೆ - 2025 ಮುಂದೂಡಿಕೆ
Posted On: 25-07-2025 05:42PM
ಕಾಪು : ಸುಶ್ಮಿ ಮೆಲೋಡಿಯಸ್ ಪಡುಬಿದ್ರಿ ವತಿಯಿಂದ ಜುಲೈ 27ರಂದು ಅಯೋಜಿಸಿರುವ "ಗಾನ ಕೋಗಿಲೆ - 2025" ದ.ಕ.ಮತ್ತು ಉಡುಪಿ ಜಿಲ್ಲಾ ಮಟ್ಟದ ಕರೋಕೆ ಗಾಯನ ಸ್ಪರ್ಧೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವಾಗಿ ಪ್ರಕಟಿಸಲಾಗುವುದು ಎಂದು ಸುಶ್ಮಿ ಮೆಲೋಡಿಯಸ್ ಪಡುಬಿದ್ರಿ ಆಡಳಿತ ನಿರ್ದೇಶಕರಾದ ಸುಶ್ಮಿತಾ ಎರ್ಮಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ಹಲಸು ಮೇಳಕ್ಕೆ ಚಾಲನೆ
Posted On: 25-07-2025 05:32PM
ಕಾಪು : ಸಂಸ್ಕೃತಿ ಈವೆಂಟ್ಸ್ ಪಸ್ತುತಿಯಲ್ಲಿ ಅನಿಲ್ ಕುಮಾರ್ ಸಾರಥ್ಯದಲ್ಲಿ ಶುಕ್ರವಾರ ಕಾಪು ಹಳೆ ಮಾರಿಗುಡಿ ಸಭಾಂಗಣದಲ್ಲಿ ಜರಗಿದ ಬೃಹತ್ ಹಲಸು ಮೇಳವನ್ನು ಕಾಪು ತಾಲ್ಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಉದ್ಘಾಟಿಸಿದರು.
