Updated News From Kaup
ಕಾಪು ಮಾರಿಯಮ್ಮ ದರುಶನ ಪಡೆದ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ
Posted On: 01 Nov 2025, 06:41 PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್. ಪಾಲನ್ ಹಾಗೂ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಉಪಸ್ಥಿತರಿದ್ದರು.
ಕನ್ನಡ ಚಿತ್ರರಂಗದ ನಿರ್ದೇಶಕಿ, ನಟಿ ರೂಪ ಐಯ್ಯರ್ ಕಾಪು ಹೊಸ ಮಾರಿಗುಡಿ ಭೇಟಿ ; ನವದುರ್ಗಾ ಲೇಖನ ಯಜ್ಞ ಸಂಕಲ್ಪ
Posted On: 01 Nov 2025, 04:26 PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರ ಸಮಕ್ಷಮದಲ್ಲಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಪರವಾಗಿ ಗೌರವಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ದೇವಳದ ಪ್ರಥಮ ಮತ್ತು ದ್ವಿತೀಯ ಹಂತದ ಕಾಮಗಾರಿಯನ್ನು ವೀಕ್ಷಿಸಿ ನಂತರ, ನವದುರ್ಗಾ ಲೇಖನ ಮಂಟಪಕ್ಕೆ ಆಗಮಿಸಿ, ಲೇಖನ ಬರೆಯುವ ಸಂಕಲ್ಪ ಮಾಡಿ, ಒಂದು ದಿನದ ಲೇಖನವನ್ನು "ಲೇಖನ ಯಜ್ಞದ ಪುಣ್ಯಭೂಮಿ" ಯಲ್ಲಿ ಬರೆದರು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಮಾರಿಯಮ್ಮ ದೇವಿಯ ದರುಶನ ಮಾಡೋಕೆ ಸಿಕ್ಕಿರೋದು ನನ್ನ ಸೌಭಾಗ್ಯ, ದೇವಿಯ ಒಂಬತ್ತು ಹೆಸರುಗಳನ್ನು ಬರೆಯುವ ಸೇವೆಯಲ್ಲಿ ನನ್ನಂತೆ ನೀವೆಲ್ಲರೂ ಭಾಗಿಯಾಗಿ, ನಾವೇಲ್ಲೆ ಇದ್ದರೂ ನಮ್ಮನ್ನು ಸೆಳೆಯುವ ಶಕ್ತಿ ಈ ದೇವಿಗಿದೆ, ದೇವಿಯ ಪ್ರೇರಣೆಯಂತೇ ನಾನಿಲ್ಲಿಗೆ ಬಂದು ಸೇವೆ ಸಲ್ಲಿಸಿ, ಪ್ರಾರ್ಥಿಸಿಕೊಂಡಿದ್ದೇನೆ, ಎಲ್ಲರಿಗೂ ಅವಳ ಅನುಗ್ರಹ ಇರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಮತ್ತು ಆರ್ಥಿಕ ಸಮಿತಿ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ.ಶೆಟ್ಟಿ ಹಾಗೂ ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.
ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಪುಸ್ತಕ ಮಳಿಗೆ, ವಸ್ತುಪ್ರದರ್ಶನಕ್ಕೆ ಅವಕಾಶ
Posted On: 31 Oct 2025, 11:16 PM
ಪಡುಬಿದ್ರಿ : ಖ್ಯಾತ ಕಥೆಗಾರ, ಹಿರಿಯ ಸಾಹಿತಿ ಮತ್ತು ಸಾಮಾಜಿಕ ಕಾರ್ಯಕರ್ತರಾದ ಫಕೀರ್ ಮುಹಮ್ಮದ್ ಕಟ್ಪಾಡಿಯವರ ಸರ್ವಾಧ್ಯಕ್ಷತೆಯಲ್ಲಿ ನ. 15ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾ ಭವನದಲ್ಲಿ ಜರಗಲಿರುವ ಕಾಪು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭ ಪುಸ್ತಕ ಮಳಿಗೆ, ಚಿತ್ರಕಲಾ ಪ್ರದರ್ಶನ, ವಸ್ತು ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕಾಪು ತಾಲ್ಲೂಕು ವ್ಯಾಪ್ತಿಯ ಲೇಖಕರು 2025ನೇ ಸಾಲಿನಲ್ಲಿ ರಚಿಸಿದ ಪುಸ್ತಕಗಳನ್ನು ಬಿಡುಗಡೆ ಮಾಡುವ ಬಗ್ಗೆಯೂ ಅವಕಾಶ ಇದೆ. ಹೆಚ್ಚಿನ ಮಾಹಿತಿಗೆ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ [9620382173] ಅವರನ್ನು ಸಂಪರ್ಕಿಸಬಹುದು.
ಡಿಸೆಂಬರ್ ನಲ್ಲಿ ಕಾಪು ಬೀಚ್ ಉತ್ಸವ : ಪೂರ್ವಭಾವಿ ಸಭೆ
Posted On: 30 Oct 2025, 07:33 PM
ಕಾಪು : ಇಲ್ಲಿನ ಮಂಡಲ ಬಿಜೆಪಿ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಸಲುವಾಗಿ "ಅಟಲೋತ್ಸವ - ಕಾಪು ಬೀಚ್ ಉತ್ಸವ" ಡಿಸೆಂಬರ್ 26-27-28 ರಂದು ಕಾಪು ಬೀಚ್ನಲ್ಲಿ ನಡೆಯಲ್ಲಿದೆ. ಇದರ ಪೂರ್ವಭಾವಿ ಸಭೆಯು ಗುರುವಾರ ಕಾಪು ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಹಾಗೂ ರಾಜ್ಯ ಮತ್ತು ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು, ಪುರಸಭೆಯ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಿಡಿಲು ಬಡಿದು ಮನೆಗೆ ಹಾನಿ : ಕಾಂತಾವರ ಕುಲಾಲ ಸಂಘ ನೆರವು
Posted On: 30 Oct 2025, 01:59 PM
ಕಾರ್ಕಳ : ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಕಂಬಳಗುಡ್ಡೆ ಜಲಜ ಮೂಲ್ಯ ಇವರ ಮನೆಗೆ ಮಂಗಳವಾರ ಸಂಜೆ 6.30 ರ ಸುಮಾರಿಗೆ ಸಿಡಿಲು ಬಡಿದು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು ವಿದ್ಯುತ್ ಸಂಪರ್ಕ ಸಂಪೂರ್ಣ ಕಳಚಿ ಹೋಗಿದ್ದು ಗೋಡೆಗಳು ಕುಸಿದಿದೆ. ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಪ್ರಭಾಕರ್ ಕುಲಾಲ್ ಮತ್ತು ಸ್ಥಳೀಯ ಪಂಚಾಯತ್ ಸದಸ್ಯರ ಸೂಚನೆ ಮೇರೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಲೆಕ್ಕಾಧಿಕಾರಿಯವರು ಭೇಟಿ ನೀಡಿ ಪರಿಹಾರಕ್ಕೆ ಕ್ರಮ ಕೈಗೊಂಡಿರುತ್ತಾರೆ. ಇದರ ಮಧ್ಯೆ ಅಸಹಾಯಕ ಸ್ಥಿತಿಯಲ್ಲಿದ್ದ ಕುಟುಂಬದ ಮನೆಗೆ ಭೇಟಿ ನೀಡಿದ ಕಾಂತಾವರ ಕುಲಾಲ ಸಂಘದ ಅಧ್ಯಕ್ಷರಾದ ವಿಠಲ್ ಮೂಲ್ಯ ಮತ್ತು ಪದಾಧಿಕಾರಿಗಳು ಶೀಘ್ರವೇ ವಿದ್ಯುತ್ ಸಂಪರ್ಕ ಶಾಶ್ವತ ಸರಿಪಡಿಸಲು ಸಹಕಾರ ನೀಡಿ ಸುಮಾರು 15000 ರುಪಾಯಿ ವೆಚ್ಚದಲ್ಲಿ ಹೊಸ ವೈರಿಂಗ್ ಹೊಸ ಮೀಟರ್ ಹಾಗೆಯೇ ಎಲ್ಲಾ ಸ್ವಿಚ್ ಬೋರ್ಡ್ ಅಳವಡಿಸಿ ಬಡ ಕುಟುಂಬಕ್ಕೆ ಆಸರೆಯಾಗಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಸಾತ್ವಿಕ್ ಕುಲಾಲ್ ಚಿಕಿತ್ಸಾ ವೆಚ್ಚಕ್ಕೆ ಬೇಕಿದೆ ಸಹಕಾರ
Posted On: 30 Oct 2025, 01:53 PM
ಮೂಡಬಿದ್ರಿ : ಪಡುಮಾರ್ನಾಡು ಗ್ರಾಮದ ಅಚ್ಚರ ಕಟ್ಟೆ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ಪುತ್ರ ಸಾತ್ವಿಕ್ ಕುಲಾಲ್ ಕಾರ್ಕಳ ಬಳಿ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಉಡುಪಿಯ ಆದರ್ಶ ಹಾಸ್ಪಿಟಲ್ನಲ್ಲಿ ಚಿಕಿತ್ಸೆ ಪಡೆಯುತಿದ್ದು ಚಿಕಿತ್ಸೆಗೆ ಬೇಕಾದ ಮೊತ್ತ ಭರಿಸಲು ಕುಟುಂಬವು ಆರ್ಥಿಕವಾಗಿ ದುರ್ಬಲವಾಗಿದ್ದು ಈಗಾಗಿ ಎಲ್ಲರೂ ಸಹಾಯ ಹಸ್ತ ನೀಡಿ ಸಾತ್ವಿಕ್ ರವರ ಚೇತರಿಕೆಗೆ ನೇರವಾಗಬೇಕಾಗಿ ಈ ಮೂಲಕ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಾತ್ವಿಕ್ ರವರ ಭಾವ ಭರತ್ ರವರ ಮೊಬೈಲ್ ಸಂಖ್ಯೆ 7760052021 ಸಾತ್ವಿಕ್ ಸಹೋದರಿ ಸ್ವಾತಿರವರ ಬ್ಯಾಂಕ್ ಖಾತೆ ಮಾಹಿತಿ BANK DETAIL .A/C..No.:11೦090923416 NAME : SWATHI BANK NAME: CANARA BANK. IFSC code:CNRB0005268.
ಕಾರ್ಕಳ : ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವ - ಸ್ವಚ್ಛತಾ ಕಾರ್ಯಕ್ರಮ
Posted On: 21 Oct 2025, 01:32 PM
ಕಾರ್ಕಳ : ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವದ ಪ್ರಯುಕ್ತ ಕಾರ್ಕಳ ಶಾಖೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಜರುಗಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಆಚಾರ್ ಮಾತನಾಡಿ, ಆರ್ಥಿಕ ಸಂಸ್ಥೆಗೆ ಸಾಮಾಜಿಕ ಜವಾಬ್ದಾರಿ ಕೂಡ ಇರುವುದರಿಂದ ಸಾಮಾಜಿಕ ಜವಾಬ್ದಾರಿಯನ್ನು ಮೂಡಿಸುವ ಉದ್ದೇಶದಿಂದ ಸ್ವಚ್ಛ ಭಾರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಮಾಜಿ ಪುರಸಭಾಧ್ಯಕ್ಷ, ಕೆಎಂಪಿಯ ಜಿಲ್ಲಾಧ್ಯಕ್ಷರಾದ ಪ್ರಕಾಶ್ ರಾವ್ ಮಾತನಾಡಿ, ಬ್ಯಾಂಕ್ ಕೇವಲ ಠೇವಣಿ ಸಂಗ್ರಹಣೆಯ ಜೊತೆಗೆ ಸ್ವಚ್ಛತೆಯ ಕಾರ್ಯಕ್ರಮ ಹಮ್ಮಿಕೊಂಡು, ಮುಂದಿನ 10 ತಿಂಗಳು ನಿರಂತರ ಕಾರ್ಯಕ್ರಮ ಹಮ್ಮಿಕೊಂಡ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ರೋಟರಿ ಕ್ಲಬ್ ಅಧ್ಯಕ್ಷರಾದ ಸುರೇಂದ್ರ ನಾಯಕ್, ಚಿನ್ನದ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಎಂ ರಮೇಶ್ ಆಚಾರ್ಯ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಇದರ ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ರಮೇಶ್, ಕಾಳಿಕಾಂಬಾ ದೇವಸ್ಥಾನದ 1 ನೇ ಜೊತೆ ಮುಕೇಸ್ತರರಾದ ಪಿ ರವಿ ಆಚಾರ್ಯ, ಸ್ವಚ್ಚ ಬ್ರಿಗೇಡ್ ನ ಪಿಲಿಕ್ಸ್ ವಸ್, ವಕೀಲರ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಹಾಗೂ ಭುವನೇಂದ್ರ ಕಾಲೇಜಿನ ಶಂಕರ್ ಕುಡ್ವ ಹಾಗೂ ಎನ್ ಎಸ್ ಎಸ್ ನ ವಿದ್ಯಾರ್ಥಿಗಳು, ಸ್ವಚ್ಛ ಕಾರ್ಕಳ ಬ್ರಿಗೇಡ್ ಇದರ ಸದಸ್ಯರು, ಜ್ಯೋತಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಶಾಂತ್ ಹಾಗೂ ಎಲ್ಲಾ ಸಂಘ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.
ಐಎಂಎ ಇದರ ರಾಜ್ಯ ಉಪಾಧ್ಯಕ್ಷರಾಗಿ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವಿರೋಧ ಆಯ್ಕೆ
Posted On: 21 Oct 2025, 10:58 AM
ಉಡುಪಿ : ನೂರು ವರ್ಷಗಳ ಸಂಭ್ರಮದಲ್ಲಿ ಇರುವ ಭಾರತೀಯ ವೈದ್ಯಕೀಯ ಸಂಘ ಇದರ ಕರ್ನಾಟಕ ರಾಜ್ಯ ಶಾಖೆಗೆ ನಡೆದ ಚುನಾವಣೆಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಮಂಗಳೂರು ಭಾರತೀಯ ಸಂಘದ ಮಾಜಿ ಅಧ್ಯಕ್ಷ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ. ವಿಶ್ವದಲ್ಲಿಯೇ ಅತಿ ದೊಡ್ಡ ಹಾಗು ಅತೀ ಪ್ರಭಾವಶಾಲಿ ಸರಕಾರೇತರ ಸಂಸ್ಥೆಯಾಗಿರುವ ಐಎಂಎ ಭಾರತದ ಪ್ರತೀ ರಾಜ್ಯ, ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಶಾಖೆಗಳನ್ನ ಹೊಂದಿರುವುದಲ್ಲದೇ ವಿಶ್ವದ ಹಲವು ರಾಷ್ಟ್ರಗಳಲ್ಲಿ ತನ್ನ ಸುಮಾರು 2500 ರಷ್ಟು ಶಾಖೆಯನ್ನ ಹೊಂದಿದೆ. ಕಳೆದ 2 ಎರಡು ದಶಕಗಳಿಂದ ಐಎಂಎ ಯ ಜೊತೆ ಸಂಘಟನಾತ್ಮಕವಾಗಿ ಜೋಡಿಸಿಕೊಂಡು ದುಡಿಯುತ್ತಿರುವ ಡಾ ಕುಲಾಲ್ ದ.ಕ ಜಿಲ್ಲೆ, ಕರಾವಳಿ, ಮಲೆನಾಡು ಹಾಗು ಮೈಸೂರು ವಿಭಾಗಗಳಲ್ಲಿ ಪರಿಣಾಮಕಾರಿ ನಾಯಕತ್ವ ನೀಡಿ, ಸ್ಥಳೀಯ ಶಾಖಾ ಅಧ್ಯಕ್ಷ, ಪ್ರಾದೇಶಿಕ ಅಧ್ಯಕ್ಷ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಸಂಚಾಲಕ, ಸಂಯೋಜಕ , ರಾಜ್ಯ ಕೇಂದ್ರ ಹಾಗೂ ರಾಷ್ಟ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ದುಡಿದು ಸಾಕಷ್ಟು ಜನಾನುರಾಗಿ ಆಗಿರುವ ಇವರು ರಾಜ್ಯದ ಕನ್ನಡ ವೈದ್ಯ ಬರಹಗಾರರ ಬಳಗವನ್ನ ಹುಟ್ಟು ಹಾಕಿ, ವೈದ್ಯ ಸಾಹಿತಿಗಳನ್ನ ಸಂಘಟಿಸಿ 2020 ರಲ್ಲಿ ಮಂಗಳೂರಲ್ಲಿ ಪ್ರಥಮ ವೈದ್ಯರ ಸಾಹಿತ್ಯ ಸಮ್ಮೇಳನ ಆಯೋಜಿಸಿ ಚಾಲನೆ ಕೊಟ್ಟಿದ್ದರು. ಹಲವಾರು ವೈದ್ಯ ಹಾಗು ಕುಟುಂಬ ವೈದ್ಯರ ಸಮ್ಮೇಳನ ನಡೆಯಿಸಿದವರು. ಸಂಘಟನೆ, ವೈದ್ಯಕೀಯ ಸೇವೆ, ಬರಹ, ಭಾಷಣ ,ಸಾಮಾಜಿಕ ಹೋರಾಟಗಳಿಂದ ಚಿರಪರಿಚಿತರಾಗಿರುವ ಇವರಿಗೆ ಐಎಂಎ ಜೀವಮಾನದ ಸಾಧನೆಗೆ ಕೊಡುವ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಡಾ. ಬಿ. ಸಿ. ರಾಯ್ ಗೌರವ ಪುರಸ್ಕಾರ ಪಡೆದ ಅತಿ ಕಿರಿಯ ವಯಸ್ಸಿನ ವೈದ್ಯರು ಎಂಬ ಖ್ಯಾತಿ ಇದೆ. ಕೆಎಂಸಿ ಯ ಹಳೆ ವಿದ್ಯಾರ್ಥಿ ಆಗಿರುವ ಶ್ರೀಯುತರು ಶ್ರೀನಿವಾಸ್ ಸಂಸ್ಥೆಯಲ್ಲಿ ದುಡಿದು ಈಗ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಕ್ಟೋಬರ್ 25 ರಂದು ಗಂಗಾವತಿಯಲ್ಲಿ ಜರುಗುವ 81 ನೇ ಐಎಂಎ ರಾಜ್ಯ ಸಮ್ಮೇಳನದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದು, ಹಿರಿಯ ನಾಯಕರಾದ ಅವರಿಗೆ ಬೆಳಗಾವಿ ವಿಭಾಗದ ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ವೈದ್ಯರನ್ನ ಸಂಘಟಿಸಿ ಸಂಘಟನೆಯನ್ನ ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಹಾಗೂ ಉಸ್ತುವಾರಿಗಳನ್ನ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾಪು ಬ್ಲಾಕ್ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಮೀಜ್ ಹುಸೇನ್ ಬಿಹಾರ ಚುನಾವಣಾ ವೀಕ್ಷಕರಾಗಿ ನೇಮಕ
Posted On: 21 Oct 2025, 10:45 AM
ಕಾಪು : ಕಾಪು ಬ್ಲಾಕ್ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ, ಪ್ರಸ್ತುತ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರಾದ ರಮೀಜ್ ಹುಸೇನ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ನ ಪದಾಧಿಕಾರಿಯಾದ ಜ್ಯೋತಿಷ್ ಎಚ್.ಎಮ್. ಅವರ ಶಿಫಾರಸಿನ ಮೇರೆಗೆ, ನವೆಂಬರ್ ತಿಂಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾಗಲ್ಪುರ್ ಜಿಲ್ಲೆಯ ಅಮರಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ರಮೀಜ್ ಹುಸೇನ್ ಅವರು ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾಗಪುರ್ ಸೆಂಟ್ರಲ್ ಕ್ಷೇತ್ರದಲ್ಲಿ ವೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಅನುಭವ ಹೊಂದಿದ್ದಾರೆ. ರಮೀಜ್ ಹುಸೇನ್ ಅವರು ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾಗಪುರ್ ಸೆಂಟ್ರಲ್ ಕ್ಷೇತ್ರದಲ್ಲಿ ವೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಅನುಭವ ಹೊಂದಿದ್ದಾರೆ. ಇವರ ನೇಮಕಕ್ಕೆ ಪಕ್ಷದ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು : ಗ್ರಾಮೀಣ ಕ್ರೀಡಾಕೂಟ
Posted On: 21 Oct 2025, 09:48 AM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ನಡೆಯುವ 13 ನೇ ವರ್ಷದ ಸಾರ್ವಜನಿಕ ಗೋಪೂಜಾ ಉತ್ಸವದ ಪ್ರಯುಕ್ತ ನಡೆದ ಗ್ರಾಮೀಣ ಕ್ರೀಡಾಕೂಟವನ್ನು ಶಿರ್ವ ನಡಿಬೆಟ್ಟು ಬಳಿಯ ಕೃಷಿಕರಾದ ಶ್ರೀನಿವಾಸ ಆಚಾರ್ಯ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ವಿಶ್ವ ಹಿಂದೂ ಪರಿಷದ್ ಮಟ್ಟಾರು ಘಟಕದ ಅಧ್ಯಕ್ಷರಾದ ಜಗದೀಶ ಆಚಾರ್ಯ ವಹಿಸಿದ್ದರು. ಶಿರ್ವ ಮೂಡುಮಟ್ಟಾರು ಅಂಗನವಾಡಿ ಶಿಕ್ಷಕಿ ಸೌಮ್ಯಾ ಪ್ರಶಾಂತ ಆಚಾರ್ಯ, ಹಿರಿಯರಾದ ಕೃಷ್ಣ ನಾಯಕ್ ಪಾಂಜಗುಡ್ಡೆ, ಅಯ್ಯಪ್ಪ ಭಕ್ತವೃಂದ ಮಾಣಿಬೆಟ್ಟು ಮಟ್ಟಾರು ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಜಯಪ್ರಕಾಶ್ ಪ್ರಭು, ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಬಾಲಸಂಸ್ಕಾರ ಪ್ರಮುಖ್ ಉಷಾ ಪಾಟ್ಕರ್, ಮಾತೃಶಕ್ತಿ ಮಟ್ಟಾರು ಘಟಕ ಪ್ರಮುಖ್ ಸುಮತಿ ಸಾಲ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಂಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ನಂತರ ವಿವಿಧ ವಿಭಾಗಗಳಲ್ಲಿ ಕ್ರೀಡಾಕೂಟ ಜರಗಿತು.
